Author: admin

ಒಂದು ಲಕ್ಷ ರೂಪಾಯಿ ವಧು ದಕ್ಷಿಣೆ ಕೊಟ್ಟು ಮದುವೆಯಾದ ಈತ ಬಹಳ ಮೋಸ ಗೋಗಿದ್ದಾನೆ ಎಂದು ಮದುವೆಯ ನಂತರ ತಿಳಿದು ವರ ಶಾಕ್ ಗೆ ಒಳಗಾಗಿದ್ದಾನೆ. ಮದುವೆಯಾದ ವಧು ಮೊದಲ ರಾತ್ರಿಯೇ ಆಕೆ ಎಸ್ಕೇಪ್‌ ಆಗಿದ್ದಾಳೆ. ಭಾರತೀಯ ವಿವಾಹಗಳಲ್ಲಿ, ಪುರುಷ ಕಡೆಯವರು ಸಾಮಾನ್ಯವಾಗಿ ವರದಕ್ಷಿಣೆ ತೆಗೆದುಕೊಳ್ಳುತ್ತಾರೆ. ಮದುವೆಯಾದ ಮೇಲೆ ಹೆಣ್ಣುಮಕ್ಕಳ ಕುಟುಂಬಗಳು ಗಂಡುಮಕ್ಕಳಿಗೆ ನಗದು, ವಿವಿಧ ವಸ್ತುಗಳು, ಬೈಕ್ ‌ಗಳು, ಕಾರುಗಳು ಇತ್ಯಾದಿಗಳನ್ನು ನೀಡುತ್ತಾರೆ. ಆದರೆ ಇನ್ನೂ ಕೆಲವೆಡೆ ಹುಡುಗಿಯರನ್ನು ಮದುವೆಯಾಗಲು ಜನರು ಅಂದರೆ ವರ ಕಡೆಯವರೇ ಹಣ ಕೊಡುತ್ತಾರೆ. ಹುಡುಗಿಯ ಪೋಷಕರಿಗೆ ನಗದು ಪಾವತಿಸಿದ ನಂತರ, ಅವರ ಮಗಳನ್ನು ಮದುವೆಯಾಗುತ್ತಾರೆ. ಉತ್ತರ ಪ್ರದೇಶದ ಸುಲ್ತಾನ್‌ ಪುರದ ಹುಡುಗಿಯನ್ನು ಹುಡುಗ ಮದುವೆಯಾಗಿದ್ದ. 20 ದಿನಗಳ ಹಿಂದೆ, ಈ ಮದುವೆಯ ಮರುದಿನವೇ ದೊಡ್ಡ ಅನಾಹುತ ಸಂಭವಿಸಿದೆ ಹುಡುಗ ಮದುವೆಗೂ ಮುನ್ನ ಹುಡುಗಿಯ ಕುಟುಂಬಕ್ಕೆ 1 ಲಕ್ಷ ರೂಪಾಯಿ ನಗದನ್ನು ನೀಡಿದ್ದಾನೆ. ನಂತರ ಫೆಬ್ರವರಿ 17 ಅನ್ನು ಮದುವೆಯ ದಿನ ಎಂದು ನಿಗದಿಪಡಿಸಲಾಯಿತು. ಭರತ್‌…

Read More

ನಕ್ಸಲೀಯ ಸಂಘಟನೆಯ ಪಾಮ್ಡ್ ಏರಿಯಾ ಕಮಿಟಿ ಕೂಡ ಹತ್ಯೆಯ ಹೊಣೆ ಹೊತ್ತು ಪ್ರೆಸ್ ನೋಟ್ ಬಿಡುಗಡೆ ಮಾಡಿದ ಘಟನೆ ಛತ್ತೀಸ್‌ ಗಢದ ಹಳ್ಳಿಯೊಂದಲ್ಲಿ ನಡೆದಿದೆ. ಮೃತರಿಬ್ಬರೂ ನಕ್ಸಲ್ ಪೀಡಿತ ಗ್ರಾಮೀಣ ಪ್ರದೇಶವಾದ ದುಲ್ಲೆಡ್ ಗ್ರಾಮದ ನಿವಾಸಿಗಳು. ಮಾಹಿತಿ ಪ್ರಕಾರ ಮೃತ ಗ್ರಾಮಸ್ಥರ ಹೆಸರು ಸೋದಿ ಹಂಗ ಮತ್ತು ಮದ್ವಿ ನಂದಾ. ನಕ್ಸಲೀಯರು ಗ್ರಾಮಸ್ಥರನ್ನು ಅವರ ಮನೆಯಿಂದ ಅಪಹರಿಸಿ ಸ್ವಲ್ಪ ದೂರಕ್ಕೆ ಕರೆದೊಯ್ದು ಹರಿತವಾದ ಆಯುಧದಿಂದ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಚಿಂತಗುಫಾ ಪೊಲೀಸ್ ಠಾಣೆಯಿಂದ ಮಾಹಿತಿ ಪಡೆದ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ ಎರಡೂ ಗ್ರಾಮಸ್ಥರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಸ್ಥಳದಿಂದ ನಕ್ಸಲೀಯ ಕರಪತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಗ್ರಾಮಸ್ಥರಿಬ್ಬರೂ ಪೊಲೀಸರಿಗೆ ಮಾಹಿತಿದಾರರು ಎಂದು ನಕ್ಸಲೀಯರು ಆರೋಪಿಸಿದ್ದಾರೆ. ಇದಲ್ಲದೇ ಅದೇ ಗ್ರಾಮದ ಮತ್ತಿಬ್ಬರು ನಿವಾಸಿಗಳಾದ ಪದ್ಮಾ(ಪಾಂಗಲ್ ದೇಂಗಲ್) ಮತ್ತು ದೇವೆ ಎಂಬುವವರನ್ನು ಪೊಲೀಸ್ ಮಾಹಿತಿದಾರರೆಂದು ಆರೋಪಿಸಿ ನಕ್ಸಲೀಯರು ಈ ಕೆಲಸ ಬಿಟ್ಟು ಸಹಜ ಜೀವನ ನಡೆಸುವಂತೆ ಎಚ್ಚರಿಕೆ…

Read More

ಅನಧಿಕೃತ ಮಳಿಗೆ ಖಾಲಿ ಮಾಡಿಸಲು ಹೋದ ನಗರಸಭೆ ಸಿಬ್ಬಂದಿಗೆ ಮಚ್ಚು ತೋರಿಸಿ ಜೀವ ಬೆದರಿಕೆ ಹಾಕಿದ ಘಟನೆ ರಾಯಚೂರು ನಗರದ ಮಹಿಳಾ ಸಮಾಜದ ಬಳಿ ನಡೆದಿದೆ. ಅನಧಿಕೃತವಾಗಿ ಮಳಿಗೆಯಲ್ಲಿ ವ್ಯಾಪಾರ ನಡೆಸುತ್ತಿದ್ದು, ಯಾವುದೇ ತೆರಿಗೆ, ಬಾಡಿಗೆ ಕೊಡದೇ ವ್ಯಾಪಾರ ಮಾಡುತ್ತಿರುವ ವ್ಯಕ್ತಿಗಳ ಬಗ್ಗೆ ದೂರು ಬಂದಿತ್ತು ಎನ್ನಲಾಗಿದೆ. ಇವರಿಗೆ ಕಳೆದ ಏಪ್ರಿಲ್ ತಿಂಗಳಲ್ಲೇ ಮಳಿಗೆ ಖಾಲಿ ಮಾಡುವಂತೆ ನಗರಸಭೆ ಸಿಬ್ಬಂದಿ ನೋಟಿಸ್ ನೀಡಿದ್ದರು. ನೋಟಿಸ್ ಕೊಟ್ಟರೂ ವ್ಯಾಪಾರ ವಹಿವಾಟು ಮುಂದುವರಿಸಿದ್ದರು. ನೋಟಿಸ್ ಅವಧಿ ಮುಗಿದಿರೋದ್ರಿಂದ ನಗರಸಭೆ ಸಿಬ್ಬಂದಿ ಮಳಿಗೆ ತೆರವು ಕಾರ್ಯಾಚರಣೆಗೆ ಮುಂದಾಗಿದ್ರು. ಈ ವೇಳೆ ಮಳಿಗೆ ಖಾಲಿ ಮಾಡಿ ಎಂದಿದ್ದಕ್ಕೆ ಸಿಬ್ಬಂದಿ ಜೊತೆ ಕಿರಿಕ್ ಮಾಡಿರುವ ವ್ಯಾಪಾರಿಗಳು ಮಚ್ಚು ಹಿಡಿದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

Read More

ಬೆಲೆ ಏರಿಕೆಯಾಗುತ್ತಿರುವಂತೆಯೇ ಬೆಳ್ಳುಳ್ಳು ಬೆಳೆದ ರೈತರು ಒಂದೆಡೆ ಖುಷಿ ಪಟ್ಟರೇ ಮತ್ತೊಂದೆಡೆ ಆತಂಕ ಪಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿಯ ಬೆಲೆ ಕೆಜಿಗೆ 300, 400 ರೂಪಾಯಿಯಿಂದ 500 ರೂಪಾಯಿಗೆ ತಲುಪಿದ್ದು ರೈತರು ಉತ್ತಮ ಆದಾಯ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೆ ಬೆಳೆ ಕಳ್ಳತನವಾಗುವ ಭಯ ಕೂಡ ಅನೇಕ ರೈತರಲ್ಲಿ ಕಾಣುತ್ತಿದೆ. ಇದೇ ಕಾರಣಕ್ಕೆ ಮಧ್ಯಪ್ರದೇಶದ ರೈತರೊಬ್ಬರು ತಮ್ಮ ಹೊಲಕ್ಕೆ ಸಂಪೂರ್ಣವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. ಮಧ್ಯಪ್ರದೇಶದ ರೈತ ರಾಹುಲ್ ದೇಶಮುಖ್ ತಮ್ಮ 13 ಎಕರೆ ಹೊಲದಲ್ಲಿ ಬೆಳ್ಳುಳ್ಳಿ ಬೆಳೆಯಲು 25 ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದಾರೆ. ಮಾರುಕಟ್ಟೆಯಲ್ಲಿ ಈಗಾಗಲೇ ಬೆಳ್ಳುಳ್ಳಿ ಮಾರಾಟದಿಂದ ಸುಮಾರು 1 ಕೋಟಿ ರೂಪಾಯಿಗಳ ಗಮನಾರ್ಹ ಲಾಭವನ್ನು ಪಡೆದಿದ್ದಾರೆ. ಹೀಗಾಗಿಯೇ ತಮ್ಮ ತಮ್ಮ ಬೆಳೆಯನ್ನು ರಕ್ಷಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. ತಮ್ಮ ಹೊಲದಲ್ಲಿ ರಾಹುಲ್ ದೇಶಮುಖ್ ಸೌರಶಕ್ತಿಯನ್ನು ಬಳಸಿಕೊಳ್ಳುವುದು ಮತ್ತು ಮೊಬೈಲ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದರ ಮೂಲಕ ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಕೆ.ಜಿ.ಗೆ…

Read More

ಪಾವಗಡ: ಯಾವುದೇ ಫಲಾಪೇಕ್ಷೆ ನಿರೀಕ್ಷಿಸದೇ  ಹೆಲ್ತ್ ಸೊಸೈಟಿ ನಿಸ್ವಾರ್ಥ ಸೇವೆ  ಮಾಡುತ್ತಿದೆ ಎಂದು ಸಿದ್ದಾಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಈರಪ್ಪ ತಿಳಿಸಿದ್ದಾರೆ. ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಶಂಕರ್ ಕಣ್ಣಿನ ಆಸ್ಪತ್ರೆ ಬೆಂಗಳೂರು ಮತ್ತು ಹೆಲ್ಪ್ ಸೊಸೈಟಿ  ಪಾವಗಡ ಇವರ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ  ಅವರು ಮಾತನಾಡುತ್ತಿದ್ದರು. ಹೆಲ್ಪ್ ಸೊಸೈಟಿಯು ಸದಾ ಕ್ರಿಯಾಶೀಲವಾಗಿ ಸಮಾಜಮುಖಿ ಕೆಲಸ ಮಾಡುತ್ತಿರುತ್ತದೆ. ಈ ಬಾರಿ ಗಡಿ ಭಾಗವಾದ ವೈ ಎನ್ ಹೊಸಕೋಟೆಯಲ್ಲಿ  ನೇತ್ರ ತಪಾಸಣೆ ಶಸ್ತ್ರಚಿಕಿತ್ಸೆ ಶಿಬಿರವನ್ನು ಹಮ್ಮಿಕೊಂಡು ಜನತೆಗೆ ತುಂಬಾ ಅನುಕೂಲ ಮಾಡಿದೆ. ಇಂಥ ಶಿಬಿರಗಳಲ್ಲಿ ಜನತೆ ಭಾಗವಹಿಸಿ ಇದರ ಸದುಪಯೋಗ  ಪಡೆದುಕೊಳ್ಳಬೇಕು ಎಂದರು. ಉಪತಹಶೀಲ್ದಾರ್ ಕಿರಣ್ ಕುಮಾರ್ ಮಾತನಾಡಿ, ಸಮಾಜ ಸೇವೆಯಲ್ಲಿ ಹೆಲ್ಪ್ ಸೊಸೈಟಿ ಸದಾ ಮುಂಚೂಣಿಯಲ್ಲಿರುತ್ತದೆ. ಇಂದು ನಡೆದ ಶಿಬಿರದಲ್ಲಿ ನಿರೀಕ್ಷೆಗೂ ಮೀರಿ ಜನತೆ ಭಾಗವಹಿಸಿದ್ದಾರೆ. ಆರೋಗ್ಯದ ಪರವಾಗಿರುವ ಇನ್ನಷ್ಟು  ಶಿಬಿರಗಳನ್ನು ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನ್ಯಂ ಶಶಿಕಿರಣ್ ಹಮ್ಮಿಕೊಳ್ಳಬೇಕು ಎಂದರು.…

Read More

ಬೆಂಗಳೂರು: ಶಾಸಕ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ನಮ್ಮ 138 ಶಾಸಕರು ಒಂದಾಗಿದ್ದಾರೆ, ನಮ್ಮ ಮನೆಯನ್ನು ಭದ್ರವಾಗಿಟ್ಟುಕೊಳ್ಳುವುದು ಹೇಗೆ ಅಂತ ಗೊತ್ತು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತಾಡಿದ ಅವರು, ರಾಜ್ಯಸಭಾ ಚುನಾವಣೆಗೆ ನಮ್ಮ ಪಕ್ಷ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿರೋಧ ಪಕ್ಷದವರು ಏನೆಲ್ಲ ಕಸರತ್ತು ನಡೆಸಿದ್ದಾರೆನ್ನುವುದರ ಮೇಲೂ ನಿಗಾ ಇಡಲಾಗಿದೆ. ಜನರ್ದನ ರೆಡ್ಡಿ ಬೆಂಬಲ ನಮಗಿದೆ ಎಂದು ಹೇಳಿದರು. ಬಿಜೆಪಿಯವರು ಏನೇನು ಚರ್ಚೆ ಮಾಡಿದ್ದಾರೆ, ಯಾವ್ಯಾವ ಶಾಸಕರಿಗೆ ಕರೆಮಾಡಿದ್ದಾರೆ ಎನ್ನುವುದರ ಕುರಿತು ನಮಗೆ ಅರಿವಿದೆ. ಅವರ ಬತ್ತಳಿಕೆಯಲ್ಲಿ ಏನಿದೆ ಎನ್ನುವುದು ನಮಗೆ ಗೊತ್ತು. ಅದೇ ರೀತಿ ನಮ್ಮ ಬತ್ತಳಕೆಯಲ್ಲಿ ಏನಿದೆ ಎನ್ನುವುದು ಅವರಿಗೆ ತಿಳಿದಿದೆ ಎಂದರು. ನಾವು ನಮ್ಮ ಶಾಸಕರಿಗೆ ಶಾಸಕಾಂಗ ಸಭೆಯನ್ನು ಕರೆದಿದ್ದೇವೆ ಅಲ್ಲಿ ಮಾಕ್‌ ವೋಟಿಂಗ್‌ ಇರುತ್ತದೆ. ಬೇರೆಯವರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ನಾವು ನಮ್ಮ ಮನೆಯನ್ನು ಹೇಗೆ ಭದ್ರಪಡಿಸಿಕೊಳ್ಳಬೇಕೆನ್ನುವುದು ನಮಗೆ ತಿಳಿದಿದೆ ಎಂದು ತಿರುಗೇಟು ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಅಮ್ಮಾ.. ತಾಯಿ.. ಅಂತಾ ದಯನೀಯ ಸ್ಥಿತಿಯಲ್ಲಿ ಬೇಡುವ ಸನ್ನಿವೇಶ ಉದ್ಭವವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಗೌರವ ಎಲ್ಲಿಗೆ ತೆಗೆದುಕೊಂಡು ಹೋಗ್ತಿದ್ದಾರೆ? ಈ ರಾಜ್ಯದ ಸರ್ಕಾರವನ್ನು ಭಿಕ್ಷುಕರ ಸರ್ಕಾರವನ್ನಾಗಿ ಮಾಡಲು ಹೊರಟಿದ್ದಿರಾ? ಕೆಲವರು ಮನೆಗಳ ಮುಂದೆ ಹೋದಾಗ ರಾತ್ರಿ ಊಟ ಉಳಿದಿದ್ರೆ ಕೊಡಿ ಅಂತಾ ಭಿಕ್ಷೆ ಕೇಳ್ತಾರೆ, ಅದೇ ರೀತಿ ಸಿಎಂ ಕೇಳ್ತಿದ್ದಾರೆ ಎಂದು ಟೀಕಿಸಿದರು. ಹಸಿವನ್ನ ನೀಗಿಸಿಕೊಳ್ಳಲು ಹೋಗುವ ಜನ ಅಮ್ಮಾ.. ತಾಯಿ ಕೊಡಿ ಅಂತಾ ಕೇಳ್ತಾರೆ. ವಿಧಾನಪರಿಷತ್‌ನಲ್ಲಿ ಅಮ್ಮಾ.. ತಾಯಿ.. 6 ಸಾವಿರ ಕೋಟಿ ಕೊಡು ತಾಯಿ ಅಂತ ಬೇಡ್ತಾ ಸಿಎಂ ಪ್ರಸ್ತಾಪ ಮಾಡಿದ್ದಾರೆ ಎಂದು ಲೇವಡಿ ಮಾಡಿದರು. ಕರ್ನಾಟಕ ಸಂಪತ್ ಭರಿತ ರಾಜ್ಯ. ಹಣದ ಕೊರತೆಯಿಲ್ಲ, ರಸ್ತೆ ತೆರಿಗೆ ಆದಾಯ ವಿಚಾರದಲ್ಲಿ ಕರ್ನಾಟಕ ದೇಶದಲ್ಲೇ ನಂ.1 ಸ್ಥಾನದಲ್ಲಿದೆ. ಸ್ವಂತ ಟ್ಯಾಕ್ಸ್ ಕಲೆಕ್ಟ್ ಮಾಡೋದ್ರಲ್ಲಿ ಮೊದಲನೆ ಸ್ಥಾನದಲ್ಲಿದ್ದೇವೆ. ಆದ್ರೆ ನಿಮ್ಮ ಲೂಟಿಯ ದಾಹಕ್ಕೆ ರಾಜ್ಯದ ಖಜಾನೆ…

Read More

ಬೀದರ್: 18 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ತಂಬಾಕು ಪದಾರ್ಥ ಮತ್ತು ಮಿಕ್ಸ್ ಮಾಡುವ ಖಂಡಿ ವಸ್ತುಗಳ ಪ್ಯಾಕೇಟ್ ಹಾಗೂ ಲಾರಿ ಸಹಿತ ಆರೋಪಿಯನ್ನು ಬೀದರ್ ಜಿಲ್ಲಾ ಹಳ್ಳಿಖೇಡ್ –ಬಿ ಪೊಲೀಸರು ಬಂಧಿಸಿದ್ದಾರೆ. ಹುಮನಾಬಾದ ತಾಲೂಕಿನ ಕಬೀರಾಬಾದವಾಡಿ ಕ್ರಾಸ್ ಹತ್ತಿರ ಲಾರಿಯೊಂದರಲ್ಲಿ ಅಕ್ರಮವಾಗಿ ಜರ್ದಾ ತಂಬಾಕು ಮತ್ತು ತಂಬಾಕಿನಲ್ಲಿ ಮಿಕ್ಸ್ ಮಾಡುವ ಖಂಡಿ ಪದಾರ್ಥಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಹಳ್ಳಿಖೇಡ್–ಬಿ ಪೊಲೀಸ್ ಠಾಣೆಯ ಪಿ.ಎಸ್.ಐ ಅಯ್ಯಪ್ಪ , ಇಕೇಶ, ಕರಿಲಿಂಗಪ್ಪ ಇವರನ್ನೊಳಗೊಂದ ತಂಡ ದಾಲಿ ನಡೆಸಿ ಲಾರಿಯನ್ನು ವಶಕ್ಕೆ ಪಡೆದು, ಜರ್ದಾ ತಂಬಾಕು ಪಾಕೇಟ್ ಮತ್ತು ತಂಬಾಕುವಿನಲ್ಲಿ ಮಿಕ್ಸ್ ಮಾಡುವ ವಸ್ತು ಖಂಡಿ ಹೀಗೆ ಒಟ್ಟು 18,20,000 ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರಕಾರದಿಂದ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ತಂಬಾಕು ಪದಾರ್ಥಗಳನ್ನು ಸಾಗಿಸಲಾಗುತ್ತಿತ್ತು. ವರದಿ: ಅರವಿಂದ ಮಲ್ಲಿಗೆ, ಬೀದರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಸರಗೂರು: ಸಂವಿಧಾನದ ಮಹತ್ವ ಹಾಗೂ ಆಶಯಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾದನೂರು ಗ್ರಾಮ ಪಂಚಾಯಿತಿ ವತಿಯಿಂದ ‘ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ’ ಬುಧವಾರ ರಂದು ಸಂಜೆ ಹಮ್ಮಿಕೊಳ್ಳಲಾಗಿತ್ತು. 75 ನೇ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ, ಸಂವಿಧಾನ ಜಾಗೃತಿ ಜಾಥಾ ಸ್ತಬ್ಧ ಚಿತ್ರಕ್ಕೆ ಹೂವಿನ ಮಾಲಾರ್ಪಣೆ ಮಾಡಿ, ಸಂವಿಧಾನ ಪೀಠಿಕೆಯ ಭಿತ್ತಿಪತ್ರಗಳನ್ನು ಹಿಡಿದು, ಪೂರ್ಣಕುಂಭ ಸ್ವಾಗತ ಕೋರಲಾಯಿತು. ಇದೇ ವೇಳೆ ಒಕ್ಕೂರಲಿನಿಂದ ಸಂವಿಧಾನ ಪೀಠಿಕೆಯ ಪ್ರಮಾಣ ವಚನ ಬೋಧಿಸಿದರು.  ನಂತರ ಉಪಾಧ್ಯಕ್ಷ ಪ್ರಕಾಶ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದ ಮಹತ್ವ ಹಾಗೂ ಪ್ರತಿಯೊಬ್ಬರು ಅರಿತು ಇತರರಿಗೂ ತಿಳಿಸುವ ಮೂಲಕ ಪ್ರತಿಯೊಬ್ಬರ ಭಾರತೀಯ ಪ್ರಜೆಯಲ್ಲೂ ಸಂವಿಧಾನದ ಜಾಗೃತಿ ಮೂಡಿಸಬೇಕಿದೆ ಎಂದರು. ದೇಶದ ಸ್ವಾತಂತ್ರ್ಯ ನಂತರ ಅವಶ್ಯವಾಗಿರುವ ಎಲ್ಲ ಕಾನೂನು ಹಕ್ಕು ಮತ್ತು ಕರ್ತವ್ಯಗಳನ್ನು ಒಳಗೊಂಡ ಸಂವಿಧಾನ ಹೃದಯ ಮತ್ತು ತಾಯಿ ಇದ್ದಂತೆ ಎಂದರು. ಸಂವಿಧಾನವು ಶಿಕ್ಷಣ ಉದ್ಯೋಗ ಸಮಾನತೆ ಬದುಕು ಸಾಗಿಸಲು ಎಲ್ಲರಿಗೂ ಮುಕ್ತ ಅವಕಾಶ ನೀಡಿದೆ. ಯಾವಾಗಲಾದರೂ ನಮ್ಮ…

Read More

ತಿಪಟೂರು: ಕಲೆ ಹಾಗೂ ಶಿಕ್ಷಣಕ್ಕೆ ತವರೂರಾಗಿರುವ ತಿಪಟೂರಿನ, ಭೋವಿ ಕಾಲೋನಿ, ಗಾಂಧಿನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 1972 ರಲ್ಲಿ ಪ್ರಾರಂಭ ಗೊಂಡು ಐವತ್ತು ವಸಂತಗಳನ್ನು ಪೂರೈಸಿದ್ದು, ಫೆಬ್ರವರಿ 2024 ರಂದುಸುವರ್ಣ ಮಹೋತ್ಸವದ ಜೊತೆಗೆ ಶಾಲಾ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿತು . “ವಿಶ್ವ ಗುರು ಬಸವಣ್ಣ ಸಾಂಸ್ಕೃತಿಕ ನಾಯಕ” ಎಂಬ ಘೋಷವಾಕ್ಯ ಮೊಳಗಿಸಿ ಭಾವಚಿತ್ರಕ್ಕೆ ಮಾಲಾರ್ಪಣೆ ಪುಷ್ಪ ನಮನ ಸಲ್ಲಿಸಿ, ಜ್ಯೋತಿ ಬೆಳಗುವುದರ ಮೂಲಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ತಾಲ್ಲೂಕಿನ ಜನಪ್ರಿಯ ಶಾಸಕರಾದ ಕೆ. ಷಡಕ್ಷರಿ, ಮಕ್ಕಳ ಸರ್ವತೋಮಖ ಬೆಳವಣಿಗೆಗೆ ಸಹ ಪಠ್ಯ ಚಟುವಟಿಕೆಗಳು ಸಹಾಯಕವಾಗಿವೆ ಎಂದರು. ಶಾಲೆಯು ಸುವರ್ಣ ಮಹೋತ್ಸವ ಹಾಗೂ ಶಾಲಾ ವಾರ್ಷಿಕೋತ್ಸವದಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಹೊಸದಾಗಿ ನಮ್ಮ ತಾಲ್ಲೂಕಿಗೆ ನೇಮಕಗೊಂಡ ಶಿಕ್ಷಕರಿಗೆ ಸ್ವಾಗತ, ತಾಲ್ಲೂಕಿನ ಶಿಕ್ಷಕರಿಗೆ ಗುರುವಂದನೆಯನ್ನು ಹಮ್ಮಿಕೊoಡಿರುವುದು ಸಂತಸ ತಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸುವ ಭಾಗ್ಯವನ್ನು ನನಗೆ ನೀಡಿದ ಈ ಶಾಲೆ ಉತ್ತುಂಗ ಸ್ಥಿತಿ ತಲುಪಲಿ. ಇಲ್ಲಿನ ಕ್ರಿಯಾಶೀಲ ಶಿಕ್ಷಕರ ಶ್ರಮ…

Read More