Subscribe to Updates
Get the latest creative news from FooBar about art, design and business.
- ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
- ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
- ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
- ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
- ಡಿಪ್ಲೋಮಾ ಸಿಇಟಿ, ಪಿಜಿಸಿಇಟಿ ಪರೀಕ್ಷೆ: ನಿಷೇಧಾಜ್ಞೆ ಜಾರಿ
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
Author: admin
ಚುನಾವಣೆ ಹತ್ತಿರ ಬಂತು ಎಂದರೆ ಮಾತ್ರ ಬಿಜೆಪಿಗೆ ಹಿಂದೂಗಳ ಬಗ್ಗೆ ಎಲ್ಲಿಲ್ಲದ ಪ್ರೇಮ ಉಕ್ಕಿ ಬರುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವ್ಯಂಗ್ಯವಾಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿವಾದ ಮಾಡೋದೆ ಬಿಜೆಪಿಯವರ ಹುಟ್ಟುಗುಣ ಎಂದರು. ಅವರಿಗೆ ಕಾನೂನಿನ ಅರಿವಿಲ್ಲ ಎಂಬುದು ಅವರು ಮಾತನಾಡುವ ರೀತಿಯಲ್ಲೇ ತಿಳಿಯುತ್ತದೆ ಎಂದು ಕಿಡಿಕಾರಿದರು. ರಾಜ್ಯದ ಹಿಂದೂ ದೇವಸ್ಥಾನಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿಂದೂ ದೇವಸ್ಥಾನಗಳ ಅಭಿವೃದ್ಧಿ, ಅರ್ಚಕರು ಹಾಗೂ ಅವರ ಮಕ್ಕಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಅನುಷ್ಠಾನಗೊಳಿಸಲು ಬದ್ಧವಾಗಿದೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದರು. 2024ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ವಿಧೇಯಕದಲ್ಲಿ ಧಾರ್ಮಿಕ ಪರಿಷತ್ ಗೆ ಕೆಲವು ತಿದ್ದುಪಡಿ ತಂದಿದ್ದೇವೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ವಿಶ್ವಕರ್ಮ ಸಮುದಾಯಕ್ಕೆ ಅವರ…
ಮುಂಬೈ: ಪಿಕ್ ನಿಕ್ ವೇಳೆ 8ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರಿಗೆ ಬಸ್ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮುಂಬೈನ ಥಾಣೆಯಲ್ಲಿ ನಡೆದಿದೆ. ಖಾಸಗಿ ಶಾಲೆ ಮಕ್ಕಳ ಪಿಕ್ ನಿಕ್ ಆಯೋಜಿಸಿತ್ತು. 8ನೇ ತರಗತಿ ವಿದ್ಯಾರ್ಥಿಗಳು ಈ ಸಂಭ್ರಮದಲ್ಲಿ ಬಸ್ ಹತ್ತಿದ್ದಾರೆ. ಮುಂಬೈ ಹೊರವಲಯ ಅಮ್ಯೂಸ್ ಮೆಂಟ್ ಪಾರ್ಕ್ಗೆ ಪಿಕ್ ನಿಕ್ ತೆರಳಲಾಗಿದೆ. ಇದಕ್ಕಾಗಿ ಖಾಸಗಿ ಬಸ್ ಬುಕ್ ಮಾಡಲಾಗಿದೆ. ಆದರೆ ವಿದ್ಯಾರ್ಥಿನಿಯರು ಬಸ್ ಹತ್ತುವ ವೇಳೆ, ಪ್ರಯಾಣದ ವೇಳೆ ಸೇರಿದಂತೆ ಹಲವು ಸಮಯದಲ್ಲಿ ವಿದ್ಯಾರ್ಥಿನಿಯರನ್ನು ಅಸಭ್ಯವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ. ವಿದ್ಯಾರ್ಥಿನಿಯರ ತೊಡೆ, ಎದೆ, ದೇಹದ ಹಲವು ಭಾಗಗಳನ್ನು ಅಚಾನಕ್ಕಾಗಿ ಸ್ಪರ್ಶಿಸಿದಂತೆ ನಟಿಸಿದ್ದಾನೆ. ಈ ಕುರಿತು ಪಿಕ್ ನಿಕ್ ನಿಂದ ಮರಳಿದ ವಿದ್ಯಾರ್ಥಿನಿಯರು ಪೋಷಕರಲ್ಲಿ ದೂರಿದ್ದಾರೆ. ಲೈಂಗಿಕ ಕಿರುಕುಳ ಕುರಿತು ಹಲವು ವಿದ್ಯಾರ್ಥಿನಿಯರು ಪೋಷಕರಲ್ಲಿ ಹೇಳಿಕೊಂಡಿದ್ದಾರೆ. ಹೀಗಾಗಿ ಶಾಲೆಗೆ ಆಗಮಿಸಿದ ಪೋಷಕರು ಈ ಮಾಹಿತಿ ತಿಳಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ವೇಳೆ ಬಸ್ ನಲ್ಲಿ ಈ ರೀತಿಯ ಘಟನೆ ನಡೆದಿರುವ…
ಮತದಾರರನ್ನು ಸೆಳೆಯಲು ಮದ್ಯ ಹಂಚೋದನ್ನು ,ಹಣ ಹಂಚೋದನ್ನು ಕೇಳಿದ್ದೇವೆ. ಆದರೆ ಇದೇನಿದು ಹೊಸ ವಿಧಾನ..? ಸದ್ಯ ಈ ಸುದ್ದಿ ಎಲ್ಲೆಡೆ ವೈರಲ್ ಆಗುತ್ತಿದೆ. ಮಾತ್ರವಲ್ಲ ಈ ಕುರಿತಾದ ವಿಡಿಯೋ ತುಣುಕೊಂದು ಹರಿದಾಡುತ್ತಿದ್ದು, ನೆಟ್ಟಿಗರು ಗರಂ ಆಗಿದ್ದಾರೆ. ಆಡಳಿತಾರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ವಿರೋಧ ಪಕ್ಷ ತೆಲುಗು ದೇಶಂ ಪಕ್ಷದ ನಾಯಕರು ತಮ್ಮ ಪಕ್ಷದ ಚಿಹ್ನೆಗಳನ್ನು ಒಳಗೊಂಡ ಕಾಂಡೋಮ್ ಪ್ಯಾಕೆಟ್ ಗಳನ್ನು ಹಂಚಿದ್ದಾರೆ ಎಂದು ಹೇಳಲಾಗಿದೆ. ಲೋಕಸಭಾ ಚುನಾವಣೆಯ ಹೊತ್ತಲ್ಲೇ ಕಾಂಡೋಮ್ ಇದೀಗ ಸದ್ದು ಮಾಡುತ್ತಿದ್ದು, ಆಂಧ್ರಪ್ರದೇಶದಲ್ಲಿ ಇವುಗಳು ಚುನಾವಣಾ ಪ್ರಚಾರದ ಸಾಧನವಾಗಿ ಮಾರ್ಪಟ್ಟಿವೆ ಎಂದರೆ ಖೇದಕರ ಸಂಗತಿ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಕಾಂಡೋಮ್ ಪ್ಯಾಕ್ ಗಳನ್ನು ಎರಡೂ ಪಕ್ಷಗಳ ಚಿಹ್ನೆಗಳೊಂದಿಗೆ ಗುರುತಿಸಲಾಗಿದ್ದು, ಆಡಳಿತ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಮತ್ತು ಪ್ರಮುಖ ವಿರೋಧ ಪಕ್ಷವಾದ ತೆಲುಗು ದೇಶಂ ಪಾರ್ಟಿ(ಟಿಡಿಪಿ), ಪಕ್ಷದ ಕಾರ್ಯಕರ್ತರು ಮತದಾರರಿಗೆ ಹಂಚುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಈ…
ಕಡಿಮೆ ಬೆಲೆಯ ಉತ್ಪನ್ನಗಳನ್ನು ಖರೀದಿಸುವ ಜನರನ್ನು ಗುರಿಯಾಗಿಸಿ, ಕಡಿಮೆ ಬೆಲೆಯ, ಬ್ರ್ಯಾಂಡ್ ಹೊರತಾದ ಉಡುಪುಗಳು ಹಾಗೂ ಲೈಫ್ ಸ್ಟೈಲ್ ಉತ್ಪನ್ನಗಳಿಗಾಗಿ ಅಮೆಜಾನ್ ಹೊಸ ತಾಣ ‘ಅಮೆಜಾನ್ ಬಜಾರ್’ನ್ನು ಆರಂಭಿಸುತ್ತಿದೆ ಎಂದು ತಿಳಿದು ಬಂದಿದೆ. ಅಮೆಜಾನ್ ಬಜಾರ್ ಪ್ರಸ್ತುತ ಮಾರಾಟಗಾರರನ್ನು ಆನ್ ಬೋರ್ಡಿಂಗ್ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದೆ. ಇವರಿಗೆ ಉಡುಪುಗಳು, ಕೈಗಡಿಯಾರಗಳು, ಚಪ್ಪಲಿ, ಆಭರಣಗಳು ಸೇರಿದಂತೆ 600 ರೂ.ಗಿಂತ ಕಡಿಮೆ ಬೆಲೆಯ ಬ್ರ್ಯಾಂಡ್ ಅಲ್ಲದ ಉತ್ಪನ್ನಗಳನ್ನು ಪಟ್ಟಿ ಮಾಡುವಂತೆ ತಿಳಿಸಿದೆ ಎಂದು ವರದಿ ಮಾಡಿದೆ. ಈ ಮೂಲಕ ಕಡಿಮೆ ಬೆಲೆಯ ಉತ್ಪನ್ನಗಳನ್ನು ಖರೀದಿಸುವ ಭಾರತೀಯ ಗ್ರಾಹಕರ ವಿಭಾಗವನ್ನು ಕೈವಶ ಮಾಡಿಕೊಳ್ಳಲು ಅಮೆಜಾನ್ ಹೊರಟಿದೆ. ಈಗಾಗಲೇ ಸಾಮೂಹಿಕ-ಮಾರುಕಟ್ಟೆ ಉತ್ಪನ್ನಗಳಿಗೆ ಬೇಡಿಕೆ ನಿಧಾನವಾಗಿದ್ದು, ಇದೀಗ ಬೇರೆ ದಾರಿಯಲ್ಲಿ ಆದಾಯ ಗಳಿಸಲು ಅಮೆಜಾನ್ ಹೊರಟಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಸ್ಕ್ಯಾಪ್ ಆದ ಬಿಎಂಟಿಸಿ ಬಸ್ ಕ್ಯಾಂಟೀನ್ ಆಗಿ ಪರಿವರ್ತನೆಯಾಗಿದೆ. 1064298 ಕಿ.ಮೀ. ಓಡಾಟ ನಡೆಸಿದ್ದ ಬಿಎಂಟಿಸಿ ಲೇಲ್ಯಾಂಡ್ ಉಗ್ರಾಣದಲ್ಲಿ ಕ್ಯಾಂಟೀನ್ ವ್ಯವಸ್ಥೆ ಮಾಡಲಾಗಿದೆ. ಬಿಎಂಟಿಸಿ ನೌಕರರ ಅನುಕೂಲಕ್ಕಾಗಿ ಬಸ್ ಕ್ಯಾಂಟೀನ್ ವ್ಯವಸ್ಥೆ ಮಾಡಿದ್ದು, ಊಟದ ಹಾಲ್ ನಿರ್ಮಿಸಿ, ಕ್ಯಾಂಟೀನ್ ಇಲ್ಲದಂತಹ ಘಟಕ, ಬಸ್ ನಿಲ್ದಾಣಗಳಲ್ಲಿ ತಿಂಡಿ, ಊಟ ಮಾಡಲು ಈ ಬಸ್ ಉಪಯೋಗವಾಗಿದೆ. ಭೋಜನ ಬಂಡಿ ಹೆಸರಿನಲ್ಲಿ ಕ್ಯಾಂಟೀನ್ ಬಸ್ ನಿರ್ಮಾಣ ಮಾಡಲಾಗಿದೆ. ಪೀಣ್ಯ ಮತ್ತು ಯಶವಂತಪುರ ಬಸ್ ಡಿಪೋಗಳಲ್ಲಿ ಈ ಬಸ್ ಕ್ಯಾಂಟೀನ್ ಸದ್ಯ ಚಾಲ್ತಿಯಲ್ಲಿ ಎನ್ನಲಾಗುತ್ತಿದೆ. ಬಸ್ ನಿಲ್ದಾಣಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಬಿಎಂಟಿಸಿ ನೌಕರರಿಗೆ ಉಪಹಾರ ಮತ್ತು ಮಧ್ಯಾಹ್ನದ ಊಟ ಮಾಡುವುದಕ್ಕೆ ಈ ಕ್ಯಾಂಟೀನ್ ಸಹಕಾರಿಯಾಗಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರೈತರ ಮುಷ್ಕರಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳಲು ಹರಿಯಾಣ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ರೈತ ಮುಖಂಡರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಜಾರಿ ಮಾಡಲಾಗುವುದು. ಸಾರ್ವಜನಿಕ ಆಸ್ತಿ ನಾಶಕ್ಕೆ ರೈತ ಮುಖಂಡರಿಂದ ಪರಿಹಾರ ವಸೂಲಿ ಮಾಡಲಾಗುವುದು. ಪ್ರತಿಭಟನಾಕಾರರು ಶಾಂತಿಯುತ ವಾತಾವರಣಕ್ಕೆ ಭಂಗ ತಂದಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ರೈತ ಮುಖಂಡರು ಪ್ರಚೋದನಕಾರಿ ವಿಷಯಗಳನ್ನು ಹರಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರೈತರ ಮುಷ್ಕರಕ್ಕೆ ಸಂಬಂಧಿಸಿದ ಖಾತೆಗಳು ಮತ್ತು ಪೋಸ್ಟ್ ಗಳನ್ನು ಎಕ್ಸ್ ತೆಗೆದು ಹಾಕಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದೆ ಎಕ್ಸ್. ರೈತರ ಪ್ರತಿಭಟನೆ ವರದಿ ಮಾಡುತ್ತಿದ್ದ ಪತ್ರಕರ್ತರು ಹಾಗೂ ರೈತಸಂಘದ ಮುಖಂಡರ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ದಂಡ ಸೇರಿದಂತೆ ಶಿಕ್ಷೆ ವಿಧಿಸುವುದಾಗಿ ಕೇಂದ್ರ ಬೆದರಿಕೆ ಹಾಕಿದೆ. ಪೊಲೀಸ್ ಫೈರಿಂಗ್ ನಲ್ಲಿ ಯುವ ರೈತ ಸಾವನ್ನಪ್ಪಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಬಹಿರಂಗಪಡಿಸಿದರು. ಪ್ರತ್ಯಕ್ಷದರ್ಶಿ ಕಲ್ದೀಪ್ ಸಿಂಗ್ 24 ಕ್ಕೆ ಪ್ರತಿಕ್ರಿಯಿಸಿದ್ದು, ಹರಿಯಾಣ ಪೊಲೀಸರು…
ರಷ್ಯಾದಲ್ಲಿ ಉದ್ಯೋಗ ವಂಚನೆಗೆ ಹಲವು ಭಾರತೀಯರು ಬಲಿಯಾಗಿದ್ದಾರೆ ಎಂಬ ದೂರು. ಸೆಕ್ಯುರಿಟಿ ಕೆಲಸ ಕೊಡಿಸುವುದಾಗಿ ಯುವಕರನ್ನು ವಂಚಿಸಲಾಗಿದೆ. ತೆಲಂಗಾಣ, ಕರ್ನಾಟಕ, ಗುಜರಾತ್ ಮತ್ತು ಉತ್ತರ ಪ್ರದೇಶದ 12 ಭಾರತೀಯ ಯುವಕರು ಯುದ್ಧ ವಲಯದಲ್ಲಿ ಸಿಕ್ಕಿಬಿದ್ದಿದ್ದಾರೆ. ವ್ಯಾಗ್ನರ್ ಅವರನ್ನು ಸೇನೆಗೆ ಸೇರಿ ಉಕ್ರೇನ್ ಸೇನೆಯ ವಿರುದ್ಧ ಹೋರಾಡುವಂತೆ ಕೇಳಿದಾಗ ಉದ್ಯೋಗ ವಂಚನೆ ಬೆಳಕಿಗೆ ಬಂದಿದೆ. ಯುವಕರನ್ನು ರಕ್ಷಿಸುವಂತೆ ಒತ್ತಾಯಿಸಿರುವ ವಿಡಿಯೋ ಸಂದೇಶ ಹೊರಬಿದ್ದಿದ್ದು, ಅವರನ್ನು ಯುದ್ಧ ವಲಯದಿಂದ ವಾಪಸ್ ಕರೆತರಲು ಕ್ರಮಕೈಗೊಳ್ಳುವಂತೆ ಅವರ ಸಂಬಂಧಿಕರು ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿರುವ ಯುವಕನ ಸಂಬಂಧಿಕರು, ಯುವಕ ಫೈಸಲ್ ಖಾನ್ ಎಂಬ ವ್ಲಾಗರ್ ವೀಡಿಯೊವನ್ನು ನೋಡಿದ ನಂತರ, ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಮತ್ತು ಅವರು ಹಗರಣದಲ್ಲಿ ಮಧ್ಯವರ್ತಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತೆಲಂಗಾಣ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಇಂತಹ ದುಸ್ಸಾಹಸಕ್ಕೆ ಕೈ ಹಾಕಿದವರು. ನಲ್ಲಗೊಂಡ ಜಿಲ್ಲೆಯ ನಾರ್ಕೆಟ್ ಪಲ್ಲಿ ಮಂಡಲದಲ್ಲಿ ವಾರ್ಷಿಕ ಚೆರುವುಗುತ್ತು ಜಾತ್ರೆಯ ಅಂಗವಾಗಿ ಸಮವಸ್ತ್ರ ಧರಿಸಿದ ಪೊಲೀಸರು ಈ ಕಾರ್ಯದಲ್ಲಿ ಭಾಗವಹಿಸಿದ್ದರು. ಗಮನಾರ್ಹವೆಂದರೆ ಈ ಘಟನೆಗೂ ತನ್ನ ಇಲಾಖೆಗೂ ಯಾವುದೇ ಸಂಬಂಧವಿಲ್ಲ ಎಂದು ತೆಲಂಗಾಣ ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ. ನಲ್ಲಗೊಂಡ ಜಿಲ್ಲೆಯ ಪಾರ್ವತಿ ಜಡೆ ರಾಮಲಿಂಗೇಶ್ವರ ಸ್ವಾಮಿ ಜಾತ್ರೆ ಉತ್ಸವಗಳಲ್ಲಿ ಭಕ್ತರು ಅಗ್ನಿಗುಂಡದ ಮೇಲೆ ನಡೆದುಕೊಂಡು ಹೋಗುವ ಸಂಪ್ರದಾಯವಿದೆ. ಹಲವು ವರ್ಷಗಳಿಂದ ಈ ಕಾರ್ಯಕ್ರಮ ನಡೆಯುತ್ತಿದೆ. ಆದರೆ ಮೌಢ್ಯಾಚರಣೆ ನಿಲ್ಲಿಸಬೇಕಾದ ಪೊಲೀಸರೇ ಸಾಮಾನ್ಯ ಭಕ್ತರ ಜತೆಗೆ ಅಗ್ನಿಕುಂಡದಲ್ಲಿ ಹೆಜ್ಜೆ ಹಾಕುವ ಮೂಲಕ ಚರ್ಚೆಗೆ ಆಸ್ಪದ ನೀಡಿದ್ದಾರೆ. ಈ ಬಗ್ಗೆ ಭಾರಿ ಚರ್ಚೆಗಳು ನಡಿಯುತಿದ್ದು, ಸಮವಸ್ತ್ರ ಧರಿಸಿ ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳೋದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
11 ವರ್ಷದ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ಭೀಕರವಾಗಿ ಅತ್ಯಾಚಾರಗೊಳಗಾಗಿ ಹತ್ಯೆಗೊಳಗಾಗಿದ್ದ ಸೌಜನ್ಯ ಎಂಬ ವಿದ್ಯಾರ್ಥಿನಿಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರು ತನಿಖೆ ಕೋರಿ ಆಕೆಯ ತಂದೆ ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನು ಆಧರಿಸಿ ರಾಜ್ಯ ಸರ್ಕಾರ ಮತ್ತು ಸಿಬಿಐ ಕೋರ್ಟ್ ಗೆ ನೋಟಿಸ್ ಜಾರಿ ಮಾಡಲಾಗಿದೆ. 2012ರ ಅಕ್ಟೋಬರ್ 9ರಂದು ನಡೆದ ಈ ಘಟನೆಯಲ್ಲಿ ಆರೋಪಿ ಎಂದು ಬಂಧಿತನಾದ ಸಂತೋಷ್ ರಾವ್ ಗೆ ಸಿಬಿಐ ಕ್ಲೀನ್ ಚೀಟ್ ನೀಡಲಾಗಿತ್ತು. ಹಾಗಿದ್ದರೆ ಕೊಲೆಗಾರ ಯಾರು ಎನ್ನುವ ಪ್ರಶ್ನೆ ಗಾಢವಾಗಿ ಕಾಡುತ್ತಿದ್ದು, ಅದನ್ನು ಪತ್ತೆ ಹಚ್ಚಲು ಮರು ತನಿಖೆಯಾಗಲಿ ಎಂಬ ಬೇಡಿಕೆ ಜೋರಾಗಿ ಕೇಳಿಬಂದಿತ್ತು. ಅದರಂತೆ ಯುವತಿ ತಂದೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸೌಜನ್ಯ ಅವರ ತಂದೆ ಚಂದಪ್ಪ ಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ…
ಬೆಂಗಳೂರು: ಅರಣ್ಯದಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಮಾರಕವಾಗಿರುವ ಲಾಂಟನಾ ಕಳೆಯಿಂದ ಆನೆ, ಕಾಡೆಮ್ಮೆ, ಪೀಠೋಪಕರಣ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಆದಿವಾಸಿ ಸಮುದಾಯದವರಿಗೆ ತರಬೇತಿ ಮತ್ತು ಪೋತ್ಸಾಹ ನೀಡಲು 1 ಕೋಟಿ ರೂ. ನೆರವು ನೀಡುವ ಬಗ್ಗೆ ಪರಿಶೀಲಿಸುವುದಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನ ಲಾಲ್ ಬಾಗ್ ನಲ್ಲಿಂದು ಲಾಂಟನಾ ಕಡ್ಡಿಗಳಿಂದ ತಯಾರಿಸಿದ ಕಾಡೆಮ್ಮೆ ಮತ್ತು ಆನೆಯ ಆಕೃತಿಗಳನ್ನು ಅನಾವರಣ ಮಾಡಿ ಅವರು ಮಾತನಾಡುತ್ತಿದ್ದರು. ಮುಳ್ಳಿನಿಂದ ಕೂಡಿದ ಲಾಂಟನಾ ರಾಜ್ಯದ ಬಂಡೀಪುರ, ನಾಗರಹೊಳೆ, ಬಿಳಿಗಿರಿ ರಂಗನ ಬೆಟ್ಟ ಮೊದಲಾದ ಅರಣ್ಯ ಪ್ರದೇಶಗಳಲ್ಲಿ ವ್ಯಾಪಕವಾಗಿ ವ್ಯಾಪಿಸಿದ್ದು, ಇದರಿಂದ ಆನೆ, ಜಿಂಕೆ ಇತ್ಯಾದಿ ಸಸ್ಯಹಾರಿ ಪ್ರಾಣಿಗಳಿಗೆ ಹುಲ್ಲೂ ಸಿಗದಂತಾಗಿದೆ. ಹೀಗಾಗಿ ಈ ಕಳೆಯನ್ನು ತೆಗೆಯುವುದು ಅನಿವಾರ್ಯವಾಗಿದೆ ಎಂದರು. ಆದಿವಾಸಿಗಳ ನೆರವಿನಿಂದ ಈ ಕಳೆ ತೆಗೆಸಿ, ಅಲಂಕಾರಿಕ ವಸ್ತು ತಯಾರಿಸಿದರೆ ಅದರಿಂದ ಜೀವನೋಪಾಯವೂ ಆಗುತ್ತದೆ, ಕಾಡಿನ ಕಳೆಯ ಸಮಸ್ಯೆಗೂ ಪರಿಹಾರ ಲಭಿಸುತ್ತದೆ ಎಂದು ಅಭಿಪ್ರಾಯಪಟ್ಟರು.