Subscribe to Updates
Get the latest creative news from FooBar about art, design and business.
- ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
- ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
- ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
- ಡಿಪ್ಲೋಮಾ ಸಿಇಟಿ, ಪಿಜಿಸಿಇಟಿ ಪರೀಕ್ಷೆ: ನಿಷೇಧಾಜ್ಞೆ ಜಾರಿ
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
Author: admin
ತುಮಕೂರು: ಮಾಜಿ ಸಂಸದ ಮುದ್ದಹನುಮೇಗೌಡ ಅವರು ಬಿಜೆಪಿ ತೊರೆದು ಬೆಂಗಳೂರಿನ ಕೆಪಿಸಿಸಿ ಭಾರತ್ ಜೋಡೋ ಭವನದಲ್ಲಿ ಅಧಿಕೃತವಾಗಿ ಸೇರ್ಪಡೆಗೊಂಡರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ, ಕೆ.ಎನ್.ರಾಜಣ್ಣ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ವೆಂಕಟರಮಣಪ್ಪ ಮತ್ತಿತರರು ಉಪಸ್ಥಿತರಿದ್ದರು.
ತುಮಕೂರು: ರಾಜಕಾರಣದಲ್ಲಿ ಸಮಾಧಾನವಾಗಿದ್ರೆ ಏನಾದ್ರು ಸಾಧಿಸಬಹುದು. ಕಳೆದ ಬಾರಿನು ನಾನು ಹೇಳಿದ್ದೆ. ಮುದ್ದಹನುಮೇಗೌಡರು ಆತುರ ಬೀಳ್ತಿದ್ದಾರೆ ಅಂತ ಇನ್ನು ಸ್ವಲ್ಪ ಕಾಯಬಹುದಿತ್ತು ಎಂದು ಮಾಜಿ ಸಚಿವ ಮಾಧುಸ್ವಾಮಿ ಹೇಳಿದರು. ನನಗೆ ಗೊತ್ತಿಲ್ಲ ಮುದ್ದಹನುಮೇಗೌಡರು ಯಾಕೆ ಈ ತೀರ್ಮಾನ ತಗೊಂಡ್ರು ಅಂತೇಳಿ, ಮುದ್ದಹನುಮೇಗೌಡರು ಎರಡು ಕಡೆ ಆ ಕಡೆ ಈ ಕಡೆ ಹಾಗಿದ್ದೋರು. ಇವತ್ತು ದಿಢೀರ್ ಅಂತ ಕಾಂಗ್ರೆಸ್ ಸೇರ್ಪಡೆ ಆಗ್ತಿದ್ದಾರೆ ಎಂಬುದನ್ನ ಮಾಧ್ಯಮದಲ್ಲಿ ನೋಡ್ದೆ. ಸ್ಪಲ್ಪ ಅವರು ತೀರ್ಮಾನ ಆತುರದ್ದು ಆಯ್ತು ಅಂತ ನನ್ನ ಭಾವನೆ ಎಂದರು. ಬಿಜೆಪಿಯಲ್ಲಿ ಇಲ್ಲಿ ಯಾರು ಏನ್ ಮಾತನಾಡ್ತಾರೆ ಅದು ಪ್ರಸ್ತುತ ಅಲ್ಲ. ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಅವರು ಏನ್ ತೀರ್ಮಾನ ತಗೊಳ್ತಾರೋ ಅದೇ ಫೈನಲ್ ಎಂದರು. ರಾಜ್ಯಸಭಾ ಅಭ್ಯರ್ಥಿಗಳನ್ನ ನಾವು ಯಾರು ನಿರೀಕ್ಷೆ ಮಾಡಿರಲಿಲ್ಲ. ಅವರು ಬೇರೆ ಬೇರೆ ಆಯಾಮದಲ್ಲಿ ಮಾಹಿತಿ ತರಿಸಿಕೊಂಡು ಅವಲೋಕನ ಮಾಡಿ, ಫೈನಲ್ ಆಗಿ ತೀರ್ಮಾನ ಮಾಡ್ತಾರೆ. ಅವರು ತೀರ್ಮಾನ ತಗೋಳೋವರೆಗೆ ನಾವು ಕಾಯಬೇಕಾಗುತ್ತೆ ಎಂದರು. ಇಡೀ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ಬಳಸಿದ ಪದಗಳ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಆಕ್ಷೇಪ ವ್ಯಕ್ತಪಡಿಸಿದರು. ಸದನದಲ್ಲಿ ಬಜೆಟ್ ಭಾಷಣದ ಮೇಲಿನ ಚರ್ಚೆ ವೇಳೆ ಮಾತನಾಡಿ, ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಬಜೆಟ್ ಆರಂಭದಲ್ಲಿ “ಸವಾಲು” ಪದ ಬಳಕೆ ಯಾಕೆ? ಮಾಡಿದರು ಎಂದು ಆಕ್ಷೇಪಣೆ ವ್ಯಕ್ತಪಡಿಸಿದರು. ಬಜೆಟ್ ಆರಂಭದಲ್ಲಿಯೇ ಕೇಂದ್ರದ ವಿರುದ್ಧ ಆರೋಪಿಸುತ್ತಾ, ಒಟ್ಟಾರೆ ಬಜೆಟ್ ಭಾಷಣದಲ್ಲಿ 41 ಬಾರಿ ಕೇಂದ್ರವನ್ನು ಬೈದರು. ಆರಂಭದಲ್ಲಿಯೇ ಮೋದಿ ಸರ್ಕಾರವನ್ನು ಟೀಕಿಸಿದ್ದರಿಂದ ವಾಕ್ ಔಟ್ ಮಾಡಿ ಹೋರಾಟ ಮಾಡಬೇಕಾಯಿತು ಎಂದು ಸ್ಪಷ್ಟನೆ ನೀಡಿದರು. ಕರ್ನಾಟಕ ಸಂಸ್ಕ್ರತಿ ಮರೆತು ಸಿದ್ದರಾಮಯ್ಯ ಮಾತನಾಡುವುದು ಸರಿಯಲ್ಲ. ನಮ್ಮತನವನ್ನು ನಾವು ಸಂಸ್ಕೃತಿಯ ಮೂಲಕ ಶ್ರೀಮಂತ ಮಾಡಿಕೊಂಡಿದ್ದೇವೆ. ಇದನ್ನು ಅನಗತ್ಯವಾಗಿ ಮಾತನಾಡಿ ನಾಡಿಗೆ ಕೆಟ್ಟ ಹೆಸರು ತರುವುದು ಬೇಡ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಗಂಡ ನನ್ನೊಂದಿಗೆ ಲೈಂಗಿಕ ಸಂಪರ್ಕ ನಡೆಸುದಿಲ್ಲ ಎಂದು ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಬಿಹಾರ ಮುಜಾಫರ್ಪುರದಲ್ಲಿ ನಡೆದಿದೆ. ಘಟನೆಯ ವಿವರ: ಕಳೆದ ಎರಡು ವರ್ಷಗಳಿಂದ ಪತ್ನಿಯೊಂದಿಗೆ ಪತ್ನಿ ಲೈಂಗಿಕ ಸಂಪರ್ಕ ನಡೆಸದೇ ದೂರ ಉಳಿದಿದ್ದಾನೆ. ಇದರಿಂದಾಗಿ ನೊಂದು ಮಹಿಳೆ ನೇರವಾಗಿ ಪೊಲೀಸ್ ಠಾಣೆಯ ಹೋಗಿ ಪತಿಯ ವಿರುದ್ಧ ಕೇಸು ದಾಖಲಿಸಿದ್ದಾಳೆ. ಈ ಕುರಿತು ಮಹಿಳೆ ಪತಿಯೊಂದಿಗೆ ಮುಕ್ತವಾಗಿ ಮಾತನಾಡಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಮಾತ್ರವಲ್ಲದೆ ಆತ ನನ್ನ ಮೇಲೆ ಹಲ್ಲೆ ನಡೆಸಿ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ” ಎಂದು ಹೇಳಲಾಗಿದೆ.. ಇದೀಗಾ ಮಹಿಳೆಯ ಹೇಳಿಕೆಗಳ ಆಧಾರದ ಮೇಲೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದು, ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಥೈರಾಯ್ಡ್ ಗ್ರಂಥಿಯು ಕುತ್ತಿಗೆಯ ಮುಂಭಾಗದಲ್ಲಿ ಇರುವ ಒಂದು ಸಣ್ಣ ಅಂಗವಾಗಿದೆ. ನಿಮ್ಮ ದೇಹವು ಹೆಚ್ಚು ಥೈರಾಯ್ಡ್ ಹಾರ್ಮೋನ್ ಅನ್ನು ಉತ್ಪಾದಿಸಿದರೆ ನೀವು ಹೈಪರ್ ಥೈರಾಯ್ಡಿಸಮ್ ಎಂಬ ಸಮಸ್ಯೆಯನ್ನು ಅನುಭವಿಸಬೇಕಾಗುತ್ತದೆ. ನಿಮ್ಮ ದೇಹವು ಥೈರಾಯ್ಡ್ ಹಾರ್ಮೋನ್ ಅನ್ನು ಕಡಿಮೆ ಮಾಡಿದರೆ, ಅದನ್ನು ಹೈಪೋಥೈರಾಯ್ಡಿಸಮ್ ಎಂದು ಕರೆಯಲಾಗುತ್ತದೆ. ಈ ಎರಡೂ ಸಮಸ್ಯೆಗಳು ಗಂಭೀರವಾಗಿರುತ್ತವೆ. ನಿಮ್ಮ ಥೈರಾಯ್ಡ್ ಸರಿಯಾಗಿ ಕೆಲಸ ಮಾಡದಿದ್ದರೆ ಅದು ನಿಮ್ಮ ಇಡೀ ದೇಹದ ಮೇಲೆ ಪರಿಣಾಮ ಬೀರಬಹುದು. ನಿಮಗೆ ಥೈರಾಯ್ಡ್ ಸಮಸ್ಯೆಯಿದ್ದರೆ ಈ 5 ಆಹಾರಗಳನ್ನು ಸೇವಿಸಬೇಡಿ. ಶೇಂಗಾ: ಶೇಂಗಾ ಬೀಜಗಳನ್ನು ತಿನ್ನುವುದರಿಂದ ಅವುಗಳಲ್ಲಿನ ಗೋಯಿಟ್ರೋಜೆನ್ಗಳ ಉಪಸ್ಥಿತಿಯಿಂದಾಗಿ ಹೈಪೋಥೈರಾಯ್ಡಿಸಮ್ ಅನ್ನು ಹದಗೆಡಿಸಬಹುದು. ಆದ್ದರಿಂದ ಹೈಪೋಥೈರಾಯ್ಡ್ ಹೊಂದಿರುವ ಜನರು ಕಡಲೆಕಾಯಿ ಅಥವಾ ಪೀನಟ್ ಬಟರ್ ಸೇವನೆಯನ್ನು ನಿಲ್ಲಿಸಬೇಕು. ರಾಗಿ: ರಾಗಿ ಆರೋಗ್ಯಕರವಾದ ಆಹಾರವೆಂಬುದರಲ್ಲಿ ಅನುಮಾನವಿಲ್ಲ. ಆದರೆ, ಕಬ್ಬಿಣ, ಕ್ಯಾಲ್ಸಿಯಂ ಮತ್ತು ನಾರಿನಂಶದಿಂದ ಸಮೃದ್ಧವಾಗಿರುವ ರಾಗಿ ಗಾಯಿಟ್ರೊಜೆನಿಕ್ ಆಹಾರವಾಗಿದೆ. ಇದನ್ನು ಚೆನ್ನಾಗಿ ನೆನೆಸಿ ಮತ್ತು ಬೇಯಿಸಿದ ನಂತರ ಆಗಾಗ ಅಪರೂಪಕ್ಕೆ ಮಾತ್ರ ಇದನ್ನು ತಿನ್ನಬೇಕು. ಬಾದಾಮಿ:…
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರು ತುಂಬಾ ಬುದ್ಧಿವಂತರು. ಅವರಷ್ಟು ಬುದ್ಧಿವಂತ ನಾನಲ್ಲ ಎಂದು ಚಲುವರಾಯಸ್ವಾಮಿ ಟಾಂಗ್ ನೀಡಿದ್ದರು. ಚಲುವಣ್ಣ ನಾಟಿಯನ್ನು ಅಡುಗೆಯಲ್ಲಿ ಇಟ್ಟುಕೊಳ್ಳಬೇಕೆಂಬ ಸುಮಲತಾ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ನಮ್ಮ ಜಿಲ್ಲೆಯ, ಮಣ್ಣಿನ ಒಬ್ಬರನ್ನು ಅಭ್ಯರ್ಥಿ ಮಾಡುತ್ತೇವೆ ಎಂದಿದ್ದೆ. ಅದಕ್ಕೆ ಸುಮಲತಾ ಅವರು ಏನು ವಿವರಣೆ ಕೊಡುತ್ತಾರೆ ಕೊಡಲಿ. ಅವರು ಸಂಸದರು, ರಾಷ್ಟ್ರೀಯ ಪಕ್ಷದಲ್ಲಿ ಟಿಕೆಟ್ ಗೆ ಫೈಟ್ ಮಾಡುತ್ತಿದ್ದಾರೆ ಒಳ್ಳೆಯದಾಗಲಿ ಎಂದರು. ಪಾರ್ಲಿಮೆಂಟ್ ಗೆ ಯಾರು ಯಾವಾಗ ಸೂಟ್ ಹಾಕುತ್ತಾರೆ ಎಂದು ನಿರ್ಧಾರ ಮಾಡೋದು ಜನ. ನಾನು, ಸುಮಲತಾ, ಕುಮಾರಸ್ವಾಮಿ ಒಬ್ಬರ ಹೆಸರನ್ನು ಬರೆದು ಘೋಷಣೆ ಮಾಡುವ ಕಾಲ ಅಲ್ಲ. ಇದು ಪ್ರಜಾಪ್ರಭುತ್ವದ ಕಾಲ. ಈ ಜಿಲ್ಲೆಯ ಜನರೇ ತೀರ್ಮಾನ ಮಾಡಬೇಕಾಗಿದೆ ಎಂದರು. ಪಾರ್ಲಿಮೆಂಟ್ ಸ್ಟ್ರಾಂಗ್ ಇದ್ದವರು ಹೋಗಬೇಕೆಂದು ಅವರು ಹೇಳಿದ್ದಾರೆ. ಯಾರು ಯಾವ ಕಾಲದಲ್ಲಿ ಪಾರ್ಲಿಮೆಂಟ್ಗೆ ಹೋಗಿ ಸ್ಟ್ರಾಂಗ್ ಆಗಿದ್ದಾರೆ ಎಂಬ ಇತಿಹಾಸ ಗೊತ್ತಿದೆ. ಜನರು ಯಾರು ಹೋಗಬೇಕೆಂದು ತೀರ್ಮಾನ ಮಾಡುತ್ತಾರೆ. ಜನರು…
ಹಾಸನ: ಉದಯಗಿರಿಯಲ್ಲಿರುವ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ವಿಕಾಸ್(18) ಮೃತ ವಿದ್ಯಾರ್ಥಿ. ಈತ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ. ವಿಕಾಸ್ ಎಂದಿನಂತೆ ಇಂದು ಕಾಲೇಜಿಗೆ ತೆರಳಿ ನಂತರ ಒಬ್ಬನೇ ಹಾಸ್ಟೆಲ್ ಗೆ ಬಂದಿದ್ದ. ಸ್ನೇಹಿತರು ಹಾಸ್ಟೆಲ್ಗೆ ಬಂದು ನೋಡಿದಾಗ ವಿಕಾಸ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಘಟನೆಯ ಹಿನ್ನೆಲೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಪೋಷಕರು ಕಿಡಿಕಾರಿದ್ದಾರೆ. ವಿದ್ಯಾರ್ಥಿ ಸಾವಿಗೆ ಹಾಸ್ಟೆಲ್ ವಾರ್ಡನ್ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರ ನಿಯೋಜನೆ ಮಾಡಿ ಪರಿಸ್ಥಿತಿ ತಿಳಿಗೊಳಿಸಲಾಗುತ್ತಿದೆ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. …
ಚಿಕ್ಕಬಳ್ಳಾಪುರ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರರದ 31 ನೇ ವಾರ್ಡ್ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಹಿಂಭಾಗದ ಇಂದಿರಾನಗರದ ಮನೆಯೊಂದರಲ್ಲಿ ಬುಧವಾರ ಸಂಜೆ ಅಪರಿಚಿತ ವ್ಯಕ್ತಿಯನ್ನ ರಾಘವೇಂದ್ರ ಎಂಬಾತ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದ. ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸರು ಭೇಟಿ ಮಾಡಿ ಕೊಲೆಯಾದವನ ಗುರುತು ಪತ್ತೆ ಹಚ್ಚಿದ್ದು ಮೃತ ವ್ಯಕ್ತಿ ಸಾದಲಿ ಗ್ರಾಮದ 40 ವರ್ಷದ ಅಂಜಿನಪ್ಪ ಪೈಂಟರ್ ಕೆಲಸ ಅಂತ ತಿಳಿದುಬಂದಿದೆ. ನಿನ್ನೆ ಸಂಜೆ ಆಶಾಳನ್ನ ಭೇಟಿ ಮಾಡಲು ಮನೆಗೆ ಹೋಗಿರೋ ಅಂಜನಪ್ಪ, ನನ್ನ ಆಶಾ ಅವೈಡ್ ಮಾಡಿದ್ದು ಬಲವಂತವಾಗಿ ಮನೆಗೆ ಬಂದ ಅಂತ ಆಶಾ ಪೊಲೀಸರ ಬಳಿ ಹೇಳಿಕೊಂಡಿದ್ದಾಳೆ. ಈ ವೇಳೆ ಆಶಾ ತನ್ನ ಗಂಡನಿಗೆ ಕರೆ ಮಾಡುವುದಾಗಿ ಹೇಳಿದಾಗ ಆಕೆಯ ಫೋನ್ ಕಸಿದುಕೊಂಡು ಒಡೆದು ಹಾಕಿದ್ದು, ತದನಂತರ ಬೇರೆಯವರ…
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಪೇಪರ್ ಬಾಕ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ಗಂಗಮ್ಮನ ಗುಡಿ ವ್ಯಾಪ್ತಿಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಪೇಪರ್ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಕಾರ್ಖಾನೆಯಲ್ಲಿದ್ದ ಬಾಕ್ಸ್ ಹಾಗೂ ವಸ್ತುಗಳು ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ವರದಿಯಾಗಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಈ ಕುರಿತು ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವೃದ್ಧ ದಂಪತಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಕೃಷ್ಣ ನಾಯ್ಡು (88) ಮತ್ತು ಸರೋಜಮ್ಮ (72) ಆತ್ಮಹತ್ಯೆ ಮಾಡಿಕೊಂಡ ವೃದ್ದ ದಂಪತಿ. ರಾತ್ರಿ ವೃದ್ಧದಂಪತಿ ಬಟ್ಟೆಗಳಿಂದ ಮನೆಯಲ್ಲಿರೋ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿ ಮಗ ಅಶೋಕ್ ಮುಂಜಾನೆ 5.30 ಸುಮಾರಿಗೆ ಹೋಗಿ ಬಾಗಿಲು ಬಡಿದಾಗ ಬಾಗಿಲು ತಂದೆ ತಾಯಿ ತೆಗೆದಿಲ್ಲ. ಅನುಮಾನ ಬಂದು ಬಾಗಿಲು ಮುರಿದು ಒಳಗಡೆ ನೋಡಿದಾಗ ತಂದೆ- ತಾಯಿ ಇಬ್ಬರೂ ನೇಣು ಹಾಕಿಕೊಂಡಿರೋ ವಿಚಾರ ಬೆಳಕಿಗೆ ಬಂದಿದೆ. ಸದ್ಯ ಘಟನೆ ಬಗ್ಗೆ ದಂಪತಿ ಮಗ ಅಶೋಕ್ ಅವರಿಂದ ಪೊಲೀಸರು ಹೇಳಿಕೆ ಪಡೆದಿದ್ದು, ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆಸ್ತಿ ವಿಚಾರಕ್ಕೆ ವೃದ್ಧದಂಪತಿ ಹಾಗೂ ಮಗನ ನಡುವೆ ಏನಾದರೂ ವೈಷಮ್ಯ ಮನಸ್ತಾಪವಿತ್ತಾ..? ಎಂಬ ಮಾಹಿತಿ ತಿಳಿದು ಬಂದಿಲ್ಲ.