Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ತುಮಕೂರು: ನಗರದ ಪ್ರಸಿದ್ಧ ಪ್ರವಾಸಿ ತಾಣವಾದ ಅಮಾನಿಕೆರೆಯಲ್ಲಿರುವ ಗಾಜಿನಮನೆಯ ನವೀಕರಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (ಟೂಡಾ) ಮಹತ್ವದ ನಿರ್ಧಾರ ಕೈಗೊಂಡಿದೆ. ಶನಿವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಟೂಡಾ ಬಜೆಟ್ ಸಭೆಯಲ್ಲಿ ಹಲವು ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಗಾಜಿನಮನೆ ನವೀಕರಣ: ಅಮಾನಿಕೆರೆಯ ಗಾಜಿನಮನೆಯಲ್ಲಿ ಶಬ್ದ ನಿಯಂತ್ರಣ (Acoustics) ವ್ಯವಸ್ಥೆ ಮತ್ತು ಗಾಳಿ–ಮಳೆಯಿಂದ ಹಾನಿಗೊಳಗಾದ ಗಾಜುಗಳ ದುರಸ್ತಿಗಾಗಿ ಮೊದಲು ₹1.50 ಕೋಟಿ ಮೀಸಲಿಡಲಾಗಿತ್ತು. ಆದರೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರ ಸಲಹೆಯಂತೆ ಈ ಅನುದಾನವನ್ನು ₹3 ಕೋಟಿಗೆ ಹೆಚ್ಚಿಸಲಾಗಿದೆ. ಜಲಕ್ರೀಡೆ ಅಕಾಡೆಮಿ: ಸಾಹಸ ಕ್ರೀಡೆಗಳಿಗೆ ಉತ್ತೇಜನ ನೀಡಲು ಅಮಾನಿಕೆರೆಯಲ್ಲಿ ಸುಸಜ್ಜಿತ ‘ಜಲಕ್ರೀಡೆ ಅಕಾಡೆಮಿ’ (Water Sports Academy) ಸ್ಥಾಪಿಸಲು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಇಲ್ಲಿ ಕಯಾಕಿಂಗ್ ಮತ್ತು ಕೆನೋಯಿಂಗ್ ಕ್ರೀಡೆಗಳಿಗೆ ತರಬೇತಿ ನೀಡಲಾಗುವುದು. ಹೊಸ ಬಡಾವಣೆ ನಿರ್ಮಾಣ: ಊರ್ಡಿಗೆರೆ ಹೋಬಳಿಯ ಮಾಚನಹಳ್ಳಿ ಗ್ರಾಮದ ಬಳಿ ಸುಮಾರು 56 ಎಕರೆ ಪ್ರದೇಶದಲ್ಲಿ ಹೊಸದಾಗಿ ಬಡಾವಣೆ ನಿರ್ಮಿಸಲು…
ತುಮಕೂರು: ನಗರದ ವಿಶ್ವವಿದ್ಯಾಲಯದ ಮೈದಾನದಲ್ಲಿ ಶನಿವಾರದಿಂದ ಆರಂಭವಾದ ರಾಷ್ಟ್ರೀಯ ಹಿರಿಯರ ಕೊಕ್ಕೊ ಚಾಂಪಿಯನ್’ಶಿಪ್’ನಲ್ಲಿ ಆತಿಥೇಯ ಕರ್ನಾಟಕದ ಪುರುಷರ ತಂಡ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಕೊಕ್ಕೊ ಫೆಡರೇಷನ್ ಆಫ್ ಇಂಡಿಯಾ ಹಾಗೂ ರಾಜ್ಯ ಅಮೆಚೂರ್ ಕೊಕ್ಕೊ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿಸಲಾಗಿರುವ ಈ ಪ್ರತಿಷ್ಠಿತ ಪಂದ್ಯಾವಳಿಯು ಫೆಬ್ರವರಿ 3ರ ವರೆಗೆ ನಡೆಯಲಿದೆ. ಕರ್ನಾಟಕದ ಜಯಭೇರಿ: ಪುರುಷರ ವಿಭಾಗದ ಮೊದಲ ಪಂದ್ಯದಲ್ಲಿ ಕರ್ನಾಟಕ ತಂಡವು ಉತ್ತರಾಖಂಡ ವಿರುದ್ಧ 11–06 ಪಾಯಿಂಟ್ಸ್ಗಳ ಅಂತರದಿಂದ ಭರ್ಜರಿ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿತು. ಇತರ ಪಂದ್ಯಗಳ ಫಲಿತಾಂಶ: ಪುರುಷರ ವಿಭಾಗ: ಒಡಿಶಾ ತಂಡವು ಹರಿಯಾಣ ವಿರುದ್ಧ (17–14), ಚಂಡೀಗಢವು ಮಧ್ಯಪ್ರದೇಶದ ವಿರುದ್ಧ (20–12), ಉತ್ತರ ಪ್ರದೇಶವು ಹಿಮಾಚಲ ಪ್ರದೇಶದ ವಿರುದ್ಧ (17–12) ಮತ್ತು ಪಂಜಾಬ್ ತಂಡವು ಛತ್ತೀಸ್ಗಡ ವಿರುದ್ಧ (17–15) ಜಯ ದಾಖಲಿಸಿವೆ. ಮಹಿಳೆಯರ ವಿಭಾಗ: ಪಂಜಾಬ್ ತಂಡವು ನವದೆಹಲಿ ವಿರುದ್ಧ (15–02) ಸುಲಭ ಜಯ ದಾಖಲಿಸಿದರೆ, ಮಹಾರಾಷ್ಟ್ರ ತಂಡವು ತೆಲಂಗಾಣ ವಿರುದ್ಧ (11–03) ಜಯಗಳಿಸಿತು. ಹಿಮಾಚಲ…
ಶಿರಾ: ನೇಪಾಳದ ಕಠ್ಮಂಡುವಿನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ನಲ್ಲಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬಾಲಕಿ ಎಚ್.ಆರ್.ಜಾನವಿ ಚಿನ್ನದ ಪದಕ ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾರೆ. ಬಾಲಕಿಯರ 45 ಕೆ.ಜಿ. ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಜಾನವಿ, ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಸಾಧನೆಗೈದ ಬಾಲಕಿಯನ್ನು ಅವರ ಹುಟ್ಟೂರಾದ ಹೇರೂರು ಗ್ರಾಮದಲ್ಲಿ ಗ್ರಾಮಸ್ಥರು ಅತ್ಯಂತ ಪ್ರೀತಿಯಿಂದ ಸನ್ಮಾನಿಸಿ ಗೌರವಿಸಿದರು. ಸಾಧಕಿಯ ಹಿನ್ನೆಲೆ: ಜಾನವಿ ಅವರು ಶಿರಾ ತಾಲ್ಲೂಕಿನ ಹೇರೂರು ಗ್ರಾಮದ ರೈತ ಎಚ್.ಟಿ.ರಂಗನಾಥ್ ಮತ್ತು ಲಕ್ಷ್ಮಿ ದಂಪತಿಗಳ ಪುತ್ರಿ. ಪ್ರಸ್ತುತ ಇವರು ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿಯ ಶಾರದಾ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಗ್ರಾಮೀಣ ಭಾಗದ ಪ್ರತಿಭೆಯೊಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚಿರುವುದು ಗ್ರಾಮಸ್ಥರಲ್ಲಿ ಮತ್ತು ಜಿಲ್ಲೆಯಲ್ಲಿ ಹೆಮ್ಮೆಯ ಸಂಭ್ರಮ ಮೂಡಿಸಿದೆ. ಸನ್ಮಾನ ಸಮಾರಂಭ: ಸನ್ಮಾನ ಕಾರ್ಯಕ್ರಮದಲ್ಲಿ ಹುಣಸೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಅಧ್ಯಕ್ಷ ಹೇರೂರು ಲಕ್ಷ್ಮಿರಾಜು, ಮಾಜಿ ಅಧ್ಯಕ್ಷ ಎಚ್.ಪಿ.…
ಗುಬ್ಬಿ: ಫೆಬ್ರವರಿ ತಿಂಗಳಲ್ಲಿ ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಕೂಡ ಶೀಘ್ರದಲ್ಲೇ ಆಡಳಿತ ಅಧಿಕಾರಿಗಳನ್ನು ನೇಮಿಸಲಾಗುತ್ತದೆ, ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಶಾಸಕ ಶ್ರೀನಿವಾಸ್ ತಿಳಿಸಿದರು. ಗುಬ್ಬಿ ತಾಲೂಕಿನ ಮಂಚಲದೊರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ನೂತನ ಹಾಲಿನ ಡೈರಿ ಕಟ್ಟಡಕ್ಕೆ ಗುದ್ದಲಿಪೂಜೆ ಸಲ್ಲಿಸಿ ಮಾತನಾಡಿದ ಅವರು, ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಸಲ್ಲಿಸಿ ಮಾತನಾಡಿದ ಎಸ್.ಆರ್.ಶ್ರೀನಿವಾಸ್, ಸರ್ಕಾರ ಆದೇಶ ಹೊರಡಿಸಿದ ಮೇಲೆ ಯಾವುದೇ ಕಾರಣಕ್ಕೂ ಇರುವ ಆಡಳಿತ ಸಿಬ್ಬಂದಿಗಳನ್ನು ಮುಂದುವರೆಸಲಾಗುವುದಿಲ್ಲ, ಸರ್ಕಾರದ ಆದೇಶ ಮಾಡಿರುವುದರಿಂದ ಬಹುತೇಕ ಮುಂದಿನ ತಿಂಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಆಡಳಿತ ಅಧಿಕಾರಿಗಳ ನೇಮಿಸಲಾಗುತ್ತದೆ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವವರೆಗೂ ಮಾತ್ರ ಆಡಳಿತ ಅಧಿಕಾರಿಗಳು ಇರುತ್ತಾರೆ. ಈಗಾಗಲೇ ಎಲ್ಲಾ ಸ್ಥಳೀಯ ಚುನಾವಣೆಗಳನ್ನ ಮಾಡಬೇಕೆಂದು ಚುನಾವಣಾ ಆಯೋಗ ಕೂಡ ಸರ್ಕಾರ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಾ ಇದೆ, ಇನ್ನು ಮೂರು ನಾಲ್ಕು ತಿಂಗಳ ಒಳಗಾಗಿ ಗ್ರಾಮ ಪಂಚಾಯಿತಿ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಸರ್ಕಾರ …
ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಸರಣಿ ಕಳ್ಳತನಗಳಿಗೆ ಬ್ರೇಕ್ ಹಾಕಿರುವ ಪೊಲೀಸರು, ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚುತ್ತಿದ್ದ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಜನವರಿ 23, 2026 ರಂದು ತುರುವೇಕೆರೆಯ ನಿವಾಸಿ ಎಮ್.ಟಿ. ರಾಜಣ್ಣ ಎಂಬುವವರ ಮನೆಯ ಬಾಗಿಲು ಮುರಿದಿದ್ದ ಕಳ್ಳರು, ಮನೆಯಲ್ಲಿದ್ದ ಬೆಳ್ಳಿ ಮತ್ತು ಚಿನ್ನಾಭರಣಗಳನ್ನು ದೋಚಿದ್ದರು. ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್ ಕಾಯ್ದೆಯ ಕಲಂ 331(4) ಹಾಗೂ 305 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರ ಮಿಂಚಿನ ಕಾರ್ಯಾಚರಣೆ: ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. ಐಪಿಎಸ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಸಿ. ಗೋಪಾಲ್ ಮತ್ತು ಪುರುಷೋತ್ತಮ ಎಂ.ಎಲ್. ಅವರ ನೇತೃತ್ವದಲ್ಲಿ, ತುರುವೇಕೆರೆ ವೃತ್ತ ನಿರೀಕ್ಷಕ (ಸಿಪಿಐ) ಲೋಹಿತ್ ಬಿ.ಎನ್. ಮತ್ತು ಪಿಎಸ್ಐ ಮೂರ್ತಿ ಟಿ. ಅವರನ್ನೊಳಗೊಂಡ ತಂಡವು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆಹಿಡಿದಿದೆ. ಬಂಧಿತ ಆರೋಪಿಗಳ…
ತುಮಕೂರು: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸಂಬಂಧಿಸಿದಂತೆ ಹುಳು ಬಿದ್ದ ಕಳಪೆ ಗುಣಮಟ್ಟದ ಬೇಳೆಯನ್ನು ಪೂರೈಕೆ ಮಾಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿ, ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್ ಗೌಡ ಅವರು ವಿಧಾನಸಭೆಯಲ್ಲಿ ಸರ್ಕಾರದ ಗಮನ ಸೆಳೆದಿದ್ದಾರೆ. ಕಳಪೆ ಗುಣಮಟ್ಟ: ಶಾಲೆಗಳಲ್ಲಿ ಮಕ್ಕಳಿಗೆ ನೀಡುವ ಬಿಸಿಯೂಟಕ್ಕೆ ಅತ್ಯಂತ ಕಳಪೆ ಮತ್ತು ಹುಳು ಹಿಡಿದಿರುವ ತೊಗರಿ ಬೇಳೆಯನ್ನು ಪೂರೈಸಲಾಗುತ್ತಿದೆ. ಈ ಬೇಳೆಯು ಹಸು ಅಥವಾ ಹಂದಿಗಳೂ ತಿನ್ನದಷ್ಟು ಕಳಪೆಯಾಗಿದೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದರ ವ್ಯತ್ಯಾಸದ ಸಂಶಯ: ಪ್ರಸ್ತುತ ಮಾರುಕಟ್ಟೆಯಲ್ಲಿ ತೊಗರಿ ಬೇಳೆ ಕೆ.ಜಿ.ಗೆ 93 ರೂ. ಇದೆ. ಆದರೆ ಸರ್ಕಾರಕ್ಕೆ ಕೇವಲ 63 ರೂ.ಗೆ ಪೂರೈಕೆ ಮಾಡಲಾಗುತ್ತಿದೆ. ಇಷ್ಟು ಕಡಿಮೆ ದರಕ್ಕೆ ಗುಣಮಟ್ಟದ ಬೇಳೆ ನೀಡಲು ಹೇಗೆ ಸಾಧ್ಯ? ಇದು ಭ್ರಷ್ಟಾಚಾರದ ಸಂಕೇತ ಎಂದು ಅವರು ಪ್ರಶ್ನಿಸಿದ್ದಾರೆ. ಅಧಿಕಾರಿಗಳ ಹೊಣೆಗಾರಿಕೆ: ಈ ಹಗರಣದಲ್ಲಿ ಅಕ್ಷರ ದಾಸೋಹ ಸಮಿತಿಯ ಆಯುಕ್ತರು ಮತ್ತು ಪಿ.ಎಂ. ಪೋಷಣ್ ಯೋಜನೆಯ ನಿರ್ದೇಶಕರು ನೇರ ಹೊಣೆಗಾರರು. ಮಾದರಿ ತೋರಿಸುವಾಗ…
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಕಂದೀಕೆರೆ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನದ ಸಮೀಪವಿರುವ ಅಂಗನವಾಡಿಯಲ್ಲಿ ನಾಲ್ಕು ವರ್ಷದ ಬಾಲಕನಿಗೆ ಸಣ್ಣ ವಿಚಾರಕ್ಕಾಗಿ ಸಹಾಯಕಿ ಕೋಲಿನಿಂದ ಬಾಸುಂಡೆ ಬರುವಂತೆ ಹೊಡೆದಿರುವ ಘಟನೆ ಶುಕ್ರವಾರ ನಡೆದಿದೆ. ಘಟನೆಯ ವಿವರ: ಅಂಗನವಾಡಿಗೆ ತೆರಳಿದ್ದ ಮಗುವಿನ ಕೈಮೇಲೆ ಗಂಭೀರವಾದ ಪೆಟ್ಟಿನ ಗುರುತುಗಳನ್ನು ಕಂಡ ಪೋಷಕರು ಮತ್ತು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವಿಗೆ ಕ್ರೂರವಾಗಿ ಶಿಕ್ಷೆ ನೀಡಿರುವ ಸಹಾಯಕಿಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಅಧಿಕಾರಿಗಳ ಪ್ರತಿಕ್ರಿಯೆ: ಈ ಕುರಿತು ಪ್ರತಿಕ್ರಿಯಿಸಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ (CDPO) ಹೊನ್ನಪ್ಪ ಅವರು, “ಅಂಗನವಾಡಿ ಸಹಾಯಕಿಗೆ ಅನಾರೋಗ್ಯವಿದ್ದ ಕಾರಣ ಅವರ ಪರವಾಗಿ ಬೇರೊಬ್ಬರು ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಮೇಲಧಿಕಾರಿಗಳ ಅನುಮತಿ ಇಲ್ಲದೆ ಬೇರೆಯವರನ್ನು ಕೆಲಸಕ್ಕೆ ನೇಮಿಸಿಕೊಂಡಿರುವುದು ನಿಯಮಬಾಹಿರ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ. ಅಲ್ಲದೆ, ಮಗುವಿನ ಚಿಕಿತ್ಸಾ ವೆಚ್ಚವನ್ನು ಸಂಬಂಧಪಟ್ಟ ಅಂಗನವಾಡಿ ಕಾರ್ಯಕರ್ತೆಯೇ ಭರಿಸಬೇಕು ಎಂದು ಅವರು ಸೂಚಿಸಿದ್ದಾರೆ. ಶನಿವಾರ ಕಚೇರಿಯ ಮೇಲ್ವಿಚಾರಕರು…
ಪಾವಗಡ: ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳ ಅವಧಿಯಲ್ಲಿ ಎರಡು ಪ್ರತ್ಯೇಕ ಪೋಕ್ಸೋ (POCSO) ಪ್ರಕರಣಗಳು ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲ ಪ್ರಕರಣ: 3ನೇ ತರಗತಿ ಬಾಲಕಿಯ ಮೇಲೆ ದೌರ್ಜನ್ಯ ತಾಲ್ಲೂಕಿನ ಗ್ರಾಮವೊಂದರ 3ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮನು (23) ಎಂಬ ಯುವಕನನ್ನು ಅರಸೀಕೆರೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಸಿಹಿ ತಿನಿಸು ಕೊಡುವುದಾಗಿ ನಂಬಿಸಿ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯ ಕಿರುಚಾಟ ಕೇಳಿದ ನೆರೆಹೊರೆಯವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎರಡನೇ ಪ್ರಕರಣ: 8ನೇ ತರಗತಿ ವಿದ್ಯಾರ್ಥಿನಿಗೆ ಕಿರುಕುಳ ಮತ್ತೊಂದು ಪ್ರಕರಣದಲ್ಲಿ, 8ನೇ ತರಗತಿಯ ವಿದ್ಯಾರ್ಥಿನಿಗೆ ಮಾನಸಿಕ ಕಿರುಕುಳ ನೀಡಿ ತನ್ನೊಂದಿಗೆ ಮಾತನಾಡುವಂತೆ ಒತ್ತಾಯಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಈ ಹಿಂದೆ ಈ ಯುವಕನಿಗೆ ಪೋಷಕರು ಮತ್ತು ಶಿಕ್ಷಕರು ಎಚ್ಚರಿಕೆ ನೀಡಿದ್ದರೂ…
ತುಮಕೂರು: ಸೈಬರ್ ವಂಚಕರ ಜಾಲಕ್ಕೆ ಬಿದ್ದು ಜಿಲ್ಲೆಯ ನಾಗವಲ್ಲಿಯ ವ್ಯಕ್ತಿಯೊಬ್ಬರು ಬರೋಬ್ಬರಿ 7.85 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಆರ್ಟಿಒ (RTO) ಹೆಸರಿನಲ್ಲಿ ಬಂದ ನಕಲಿ ಎಪಿಕೆ (APK) ಫೈಲ್ ಕ್ಲಿಕ್ ಮಾಡಿದ್ದೇ ಇಷ್ಟೆಲ್ಲಾ ಅವಾಂತರಕ್ಕೆ ಕಾರಣವಾಗಿದೆ. ನಡೆದದ್ದೇನು? ನಾಗವಲ್ಲಿಯ ನಿವಾಸಿ ರಖೀಬ್ ಅಹ್ಮದ್ ಖಾನ್ ಎಂಬುವವರಿಗೆ ಜನವರಿ 23ರಂದು ಅಪರಿಚಿತ ಸಂಖ್ಯೆಯೊಂದರಿಂದ ‘ಆರ್ಟಿಒ ಚಲನ್’ ಹೆಸರಿನ ಲಿಂಕ್ ಇರುವ ಎಪಿಕೆ ಫೈಲ್ ಬಂದಿತ್ತು. ಆರ್ಟಿಒಗೆ ಸಂಬಂಧಿಸಿದ್ದು ಎಂದು ನಂಬಿದ ರಖೀಬ್ ಅದನ್ನು ಕ್ಲಿಕ್ ಮಾಡಿದ್ದಾರೆ. ಅಂದೇ ರಾತ್ರಿ ಅವರ ವಾಟ್ಸಾಪ್ ಅಪ್ಡೇಟ್ ಕೇಳಿದ್ದು, ಒಟಿಪಿ (OTP) ಪಡೆದು ಅಪ್ಡೇಟ್ ಮಾಡಿದ್ದಾರೆ. ಈ ವೇಳೆ 3-4 ಬಾರಿ ಒಟಿಪಿ ಬಂದಿದ್ದರೂ, ಅವರು ಯಾರೊಂದಿಗೂ ಅದನ್ನು ಹಂಚಿಕೊಂಡಿರಲಿಲ್ಲ. ಹಂತ ಹಂತವಾಗಿ ಹಣ ವರ್ಗಾವಣೆ: ಯಾರೊಂದಿಗೂ ಒಟಿಪಿ ಹಂಚಿಕೊಳ್ಳದಿದ್ದರೂ, ಸೈಬರ್ ಖದೀಮರು ರಖೀಬ್ ಅವರ ಮೊಬೈಲ್ ಅನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು. ಜನವರಿ 27ರಂದು ಅವರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು…
ಸಾಮಾನ್ಯವಾಗಿ ನಾವು ಮಾಹಿತಿ (Data) ಸ್ಟೋರೇಜ್ ಮಾಡಲು ಮತ್ತು ಮಾಹಿತಿ ತಿದ್ದುಪಡಿ, ಡಿಲೀಟ್, ವಿವಿಧ ಅಪ್ಲಿಕೇಷನ್ ಬಳಸಿ ವಿವಿಧ ಕಾರ್ಯ ನಿರ್ವಹಿಸಲು ಹಾರ್ಡ್ ಡಿಸ್ಕ್ ಬಳಸುತ್ತೇವೆ ಎಂದು ತಿಳಿದುಕೊಂಡಿದ್ದೇವೆ ಅಷ್ಟೇ ಆದರೆ ಅದು ಹೇಗೆ ನಿರ್ಮಾಣ ಆಗಿರುತ್ತದೆ ಮತ್ತು ಹೇಗೆ ಕೆಲಸ ಮಾಡುತ್ತದೆ ಎಂದು ಬಹುಶಃ (ಸಾಮಾನ್ಯ ಜನ) ಯೋಚಿಸಿರುವುದಿಲ್ಲ, ಹಾಗೆ ಯೋಚಿಸಿದ್ದರೂ ಕೆಲವು ಮಂದಿ ಇರಬಹುದು. ನಾನು ಇಲ್ಲಿ ಅದರ ನಿರ್ಮಾಣ ಮತ್ತು ಕಾರ್ಯನಿರ್ವಹಿಸುವ ವಿಧಾನವನ್ನು ಅತ್ಯಂತ ಸರಳವಾಗಿ ವಿವರಿಸಲು ಪ್ರಯತ್ನಿಸಿದ್ದೇನೆ. ಹಾರ್ಡ್ ಡಿಸ್ಕ್ ಬಹುಶಃ ಇದರ ಬಳಕೆ ಇರದ ಕ್ಷೇತ್ರವೇ ಇಲ್ಲ ಎನ್ನಬಹುದು. ಮನೆಯಲ್ಲಿ ಅಧ್ಯಯನದ ದೃಷ್ಟಿಯಿಂದ ಡೆಸ್ಕ್ ಟಾಪ್ ಅಥವಾ ಲ್ಯಾಪ್ ಟಾಪ್ ನಿಂದ ಹಿಡಿದು, ವಾಣಿಜ್ಯ, ವಿಜ್ಞಾನ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಇದರ ಬಳಕೆ ಇದೆ. ನಾವು ಸಾವಿರಾರು ವರ್ಷಗಳ ಹಿಂದೆ ನಮ್ಮ ಋಷಿ ಮುನಿಗಳು ರಾಮಾಯಣ, ಮಹಾಭಾರತ ಮತ್ತು ವೇದೋಪನಿಷತ್ತುಗಳನ್ನು ದೇವ ಭಾಷೆ ಅಥವಾ ಸಂಸ್ಕೃತ ಭಾಷೆಯ ಸಾವಿರ ಸಾವಿರ ಪುಟಗಳಷ್ಟು ಬರೆದಿಡುವ…