Subscribe to Updates
Get the latest creative news from FooBar about art, design and business.
- ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
- ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
- ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
- ಡಿಪ್ಲೋಮಾ ಸಿಇಟಿ, ಪಿಜಿಸಿಇಟಿ ಪರೀಕ್ಷೆ: ನಿಷೇಧಾಜ್ಞೆ ಜಾರಿ
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
Author: admin
ಮದುವೆ ಭರವಸೆ ನೀಡಿ 27 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ತೆಲುಗು ನಟ ಸಂತೋಷ್ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಂಗಳೂರು ಜ್ಞಾನಭಾರತಿ ಪೊಲೀಸರು ನಟನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ದೂರುದಾರರು ಉಳ್ಳಾಲ ಮುಖ್ಯರಸ್ತೆಯ ಬ್ಯೂಟಿಷಿಯನ್. ದೂರುದಾರರು ಬಸವೇಶ್ವರನಗರದ ಸಲೂನ್ ನಲ್ಲಿ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ದೂರುದಾರರು 2019 ರಲ್ಲಿ ಸಂತೋಷ್ ಅವರನ್ನು ಭೇಟಿಯಾಗಿದ್ದರು. ಹುಡುಗಿಯನ್ನು ಚಿತ್ರದಲ್ಲಿ ನಾಯಕಿ ಮಾಡುವುದಾಗಿ ಹೇಳಿ ಸಂತೋಷ್ ಗೆಳೆತನ ಬೆಳೆಸಿದ್ದ. ಸ್ನೇಹ ನಿಧಾನವಾಗಿ ಪ್ರೀತಿಗೆ ತಿರುಗಿತು. ನಂತರ ಸಂತೋಷ್ ಯುವತಿಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಚಿತ್ರಹಿಂಸೆ ನೀಡಿದ್ದಾನೆ. ಯುವತಿಯನ್ನು ನಗರದ ವಿವಿಧ ಲಾಡ್ಜ್ ಗಳಿಗೆ ಕರೆದೊಯ್ದು ಚಿತ್ರಹಿಂಸೆ ನೀಡುತ್ತಿದ್ದು, ಈ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದೆ ಎಂಬುದು ದೂರು. ಸಂತೋಷ್ ನೀಡಿದ ಭರವಸೆಗಳೆಲ್ಲ ಸುಳ್ಳಾಗಿವೆ ಎಂದು ಅರಿತ ಯುವತಿ ಆ ನಟನಿಂದ ದೂರವಾದಳು. ಇದರಿಂದ ಕುಪಿತಗೊಂಡ ಸಂತೋಷ್ ಯುವತಿಯ ನಗ್ನ ದೃಶ್ಯಾವಳಿಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಫೆಬ್ರವರಿ 14 ರಂದು ಸಂತೋಷ್…
ಲಂಚ ಸ್ವೀಕರಿಸುವ ವೇಳೆ ಬುಡಕಟ್ಟು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ಎಸಿಬಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಹಿಳೆ ಎಸಿಬಿಗೆ ಸಿಕ್ಕಿಬಿದ್ದ ಬಳಿಕ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬುಡಕಟ್ಟು ಕಲ್ಯಾಣ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಜಗಜ್ಯೋತಿ 84,000 ರೂ. ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ವ್ಯಕ್ತಿಯೊಬ್ಬರು ಲಂಚ ಅಧಿಕಾರಿ ಕೇಳುತ್ತಿದ್ದಾರೆ ಎಂದು ಎಸಿಬಿಗೆ ದೂರು ನೀಡಿದ್ದರು. ಇದರಿಂದ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಬಂಧಿಸಿದ್ದಾರೆ. ಜಗಜ್ಯೋತಿ ಅವರನ್ನು ಫಿನಾಲ್ಫ್ಥಲೀನ್ ಪರೀಕ್ಷೆಗೆ ಎಸಿಬಿ ಅಧಿಕಾರಿಗಳು ಒಳಪಡಿಸಿದಾಗ, ಅವರು ಲಂಚ ಪಡೆದಿರುವುದು ಸಾಬೀತಾಗಿದೆ. ಅವರು ಕರ್ತವ್ಯ ನಿರ್ವಹಣೆಯಲ್ಲಿ ಅನುಚಿತವಾಗಿ ಮತ್ತು ಅಪ್ರಾಮಾಣಿಕವಾಗಿ ವರ್ತಿಸಿದ್ದಾರೆ ಎಂದು ಎಸಿಬಿ ಅಧಿಕಾರಿಗಳು ಆರೋಪಿಸಿದ್ದಾರೆ. ಅಧಿಕಾರಿಯ ಬಳಿ ಇದ್ದ 84,000 ರೂ. ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಅವರನ್ನು ಹೈದರಾಬಾದ್ ನ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಎಸಿಬಿ ಸಿದ್ಧತೆ ನಡೆಸಿದೆ.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾಗೆ ಸೇರಿದ್ದ 27 ಕೆ.ಜಿ. ಚಿನ್ನ ಮತ್ತು ವಜ್ರದ ಆಭರಣಗಳನ್ನು ಮಾರ್ಚ್ 6 ಮತ್ತು 7ರಂದು ತಮಿಳುನಾಡು ಸರ್ಕಾರದ ಗೃಹ ಕಾರ್ಯದರ್ಶಿಯವರಿಗೆ ಹಸ್ತಾಂತರಿಸುವುದಾಗಿ ಬೆಂಗಳೂರಿನ 36ನೇ ಸಿಟಿ ಸಿವಿಲ್ ನ್ಯಾಯಾಲಯ ಸೋಮವಾರ(ಫೆ.20) ಪ್ರಕಟಿಸಿದೆ. ಜಯಲಲಿತಾಗೆ ವಿಧಿಸಿದ್ದ 100 ಕೋಟಿ ರೂಪಾಯಿ ದಂಡವನ್ನು ವಸೂಲಿ ಮಾಡಿಕೊಳ್ಳುವ ಸಲುವಾಗಿ ಅವರ ಆಸ್ತಿಗಳನ್ನು ಕ್ರೋಢೀಕರಿಸುವ ಅಂತಿಮ ನ್ಯಾಯಾಂಗ ಪ್ರಕ್ರಿಯೆಯ ಆರಂಭದ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಜಯಲಲಿತಾಗೆ ನಾಲ್ಕು ವರ್ಷದ ಜೈಲು ಶಿಕ್ಷೆ ವಿಧಿಸಿದ 10 ವರ್ಷಗಳ ಬಳಿಕ ಮತ್ತು ಜಯಲಲಿತಾ ಸಾವಿನ ಏಳು ವರ್ಷಗಳ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ. ವಿಶೇಷ ನ್ಯಾಯಾಲಯದ ಪ್ರಸ್ತುತ ಕಲಾಪಗಳಡಿ ಜಯಲಲಿತಾಗೆ ಸೇರಿದ ಎಲ್ಲ ಸ್ಥಿರ ಮತ್ತು ಚರ ಆಸ್ತಿಗಳನ್ನು ಹರಾಜು ಮಾಡಲಾಗುತ್ತದೆ. ಈ ದಂಡದ ಮೊತ್ತವನ್ನು ವಸೂಲಿ ಮಾಡಿಕೊಳ್ಳುವ ಸಲುವಾಗಿ 20 ಕೆ.ಜಿ. ಚಿನ್ನಾಭರಣಗಳನ್ನು ಮಾರಾಟ ಮಾಡಲಾಗುತ್ತದೆ ಹಾಗೂ ತಾಯಿಯಿಂದ ಬಂದದ್ದು ಎನ್ನಲಾದ ಏಳು ಕೆ.ಜಿ.…
ಬೆಂಗಳೂರು: ನಮ್ಮ ಮೆಟ್ರೋ ಯೆಲ್ಲೋ ಮಾರ್ಗದ ಮೊದಲ ಡ್ರೈವರ್ ಲೆಸ್ ಮೆಟ್ರೋದ ಮೊದಲ ಫೋಟೋ ರಿವೀಲ್ ಆಗಿದೆ. ಚೀನಾ ತಯಾರಿಸಿರುವ ಈ ಮೆಟ್ರೋದ ಬೋಗಿಗಳನ್ನು ಫೆಬ್ರವರಿ 6 ರಂದು ಸಮುದ್ರ ಮಾರ್ಗವಾಗಿ ಚೆನ್ನೈಗೆ, ಬಂದರು ಮೂಲಕ ಲಾರಿಗಳಲ್ಲಿ ಬೆಂಗಳೂರಿಗೆ ತರಲಾಗಿತ್ತು. ಸದ್ಯ ರಾಜ್ಯದ ಮೊದಲ ಡ್ರೈವರ್ ಲೆಸ್ ಮೆಟ್ರೋ ರೈಲು ಸಂಚಾರಕ್ಕೆ ಸಜ್ಜಾಗಿದೆ. ಆರ್ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಈ ಚಾಲಕ ರಹಿತ ಮೆಟ್ರೋ ಓಡಾಡಲಿದ್ದು, ಚೀನಾದಿಂದ ಕೋಚ್ ತರಿಸಲಾಗಿದೆ. ಇನ್ನು ಮೂರು- ನಾಲ್ಕು ತಿಂಗಳ ಕಾಲ ಟೆಸ್ಟಿಂಗ್ ಪ್ರಕ್ರಿಯೆ ನಡೆಯಬೇಕಾಗಿದೆ. ಟ್ರ್ಯಾಕ್ ನಲ್ಲಿ ಸುಮಾರು 15 ಮಾದರಿ ಪರೀಕ್ಷೆಗಳು ನಡೆಯಬೇಕಿದೆ.
ಉತ್ತರಪ್ರದೇಶ: 2018ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಸುಲ್ತಾನ್ಪುರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ, 2018ರ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಸುಲ್ತಾನ್ಪುರ ನ್ಯಾಯಾಲಯಕ್ಕೆ ಹಾಜರಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯು ಮಾರ್ಚ್ 2 ರಂದು ನಡೆಯಲಿದೆ. ರಾಹುಲ್ ಗಾಂಧಿಯವರು ತಮ್ಮ ಮಾಜಿ ಲೋಕಸಭಾ ಕ್ಷೇತ್ರವಾದ ಅಮೇಠಿಗೆ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಪ್ರವೇಶಿಸುವ ಮೊದಲು ನ್ಯಾಯಾಲಯವು ಅವರಿಗೆ ಸಮನ್ಸ್ ನೀಡಿದೆ. ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದಾರೆ. 2018 ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಗಾಂಧಿಯವರ ಟೀಕೆಗಳಿಗಾಗಿ. ಜಾಮೀನು ಬಾಂಡ್ ಗಳನ್ನು ಭರ್ತಿ ಮಾಡಿದ ನಂತರ ನ್ಯಾಯಾಧೀಶ ಯೋಗೇಶ್ ಯಾದವ್ ಅವರಿಗೆ ಜಾಮೀನು ನೀಡಲಾಯಿತು ಎಂದು ಅವರ ವಕೀಲ ಕಾಶಿ ಪ್ರಸಾದ್ ಶುಕ್ಲಾ ಸುದ್ದಿಗಾರರಿಗೆ ತಿಳಿಸಿದರು. ಮೇ 8, 2018 ರಂದು ಕರ್ನಾಟಕ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾ…
ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ (2nd PUC Exam) ಹಾಗೂ ಎಸ್ ಎಸ್ಎಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ವಿಕಾಸಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಪರೀಕ್ಷಾ ದಿನಾಂಕ ಹಾಗೂ ಪರೀಕ್ಷೆಗಳಿಗೆ ಸಂಬಂಧಪಟ್ಟ ಇತರ ಮಾಹಿತಿಗಳನ್ನು ನೀಡಿದರು. ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 01 ರಿಂದ 22ರ ವರೆಗೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಏಪ್ರಿಲ್ 06ರವರೆಗೆ ನಡೆಯಲಿವೆ ಎಂದು ತಿಳಿಸಿದರು. ಈ ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್ಎಸ್ಎಲ್ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಕಳೆದ ವರ್ಷದಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ದ್ವಿತೀಯ…
ಚಿಕ್ಕಬಳ್ಳಾಪುರ: ಒಂಬತ್ತನೇ ತರಗತಿ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದಕ್ಕೆ ವಿದ್ಯಾರ್ಥಿಯೊಬ್ಬನಿಗೆ ಸಾರ್ವಜನಿಕರಿಂದ ಧರ್ಮದೇಟು ಬಿದ್ದ ಘಟನೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯು ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಗೆ ಚುಡಾಯಿಸಿದ ಆರೋಪ ಕೇಳಿ ಬಂದಿದ್ದು, ಇದರಿಂದ ಕೆರಳಿದ ಸಾರ್ವಜನಿಕರು ಆತನನ್ನು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿರುವ ಗೋಡೌನ್ ನಲ್ಲಿ ಹಾಕಿ ಹಿಗ್ಗಾಮುಗ್ಗವಾಗಿ ಥಳಿಸಿದ್ದಾರೆ. ಸಾರ್ವಜನಿಕರೊಂದಿಗೆ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಶಿಕ್ಷಕ ಮಹಂತೇಶ್ ಕೂಡ ವಿದ್ಯಾರ್ಥಿಗೆ ಥಳಿಸಿದ್ದಾರೆ.
ಕಲಬುರಗಿ: 2017ರ ಅಟ್ರಾಸಿಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಕಲಬುರಗಿಯ ಎರಡನೇ ಹೆಚ್ಚುವರಿ ನ್ಯಾಯಲಯದಿಂದ ವಾರೆಂಟ್ ಜಾರಿಗೊಳಿಸಿತ್ತು. ಕೋರ್ಟ್ನಿಂದ ವಾರೆಂಟ್ ಜಾರಿಯಾದರೂ ಸಹ ನ್ಯಾಯಾಲಯಕ್ಕೆ ಹಾಜರಾಗದ ಆರೋಪದ ಮೇಲೆ ಜೈ ಭಾರತ್ ಮಾತಾ ಸೇವಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ, ನಿರಗುಡಿ ಹವಾ ಮಲ್ಲಿನಾಥ್ ಮುತ್ಯಾನನ್ನು, ಕೋರ್ಟ್ಗೆ ಹಾಜರಾದ ಸಂದರ್ಭದಲ್ಲಿ ಎಂ.ಬಿ ನಗರ ಪೊಲೀಸರು ಬಂಧಿಸಿದ್ದಾರೆ. ದಲಿತ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಸಹಕರಿಸಿದ ಆರೋಪ ಮಲ್ಲಿನಾಥ ಮುತ್ಯಾ ಮೇಲೆ ಇದೆ. 2017ರಲ್ಲಿ ಯುವತಿಗೆ ವಂಚನೆ ಮಾಡಿದ ಆರೋಪದಲ್ಲಿ ಪ್ರಕಾಶ್ ಸ್ವಾಮೀಜಿ ಹಾಗೂ ಹವಾ ಮಲ್ಲಿನಾಥ್ ಮುತ್ಯಾನ ಮೇಲೆ ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧ ಮಲ್ಲಿನಾಥ್ ಮುತ್ಯಾನಿಗೆ ನ್ಯಾಯಲಯ ನೋಟಿಸ್ ನೀಡಿತು. ಆದರೂ ಮುತ್ಯಾ ನ್ಯಾಯಾಲಯದ ಮುಂದೆ ಹಾಜರಾಗಿರಲಿಲ್ಲ. ವಾರೆಂಟ್ ಜಾರಿಗೊಂಡ ಹಿನ್ನೆಲೆ ಸೋಮವಾರ ಕೋರ್ಟ್ ಮುಂದೆ ಹವಾ ಮಲ್ಲಿನಾಥ್ ಮುತ್ಯಾ ಹಾಜರಾಗಿದ್ದರು. ಆಗ ಮಲ್ಲಿನಾಥ್ ಮುತ್ಯಾನನ್ನು ವಶಕ್ಕೆ ಪಡೆದ ನ್ಯಾಯಾಲಯ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ತಿಳಿದು ಬಂದಿದೆ.…
ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಾಲಕತ್ವದ ರಾಕ್ ಲೈನ್ ಮಾಲ್ ಬೀಗಮುದ್ರೆ ಹಾಕಿದ್ದನ್ನು ತೆರವಿಗೆ ಹೈಕೋರ್ಟ್ ಸೂಚನೆ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇತ್ತೀಚೆಗೆ ರಾಕ್ ಲೈನ್ ಮಾಲ್ ಗೆ ಬೀಗ ಹಾಕಿದ್ದರು. ಇದನ್ನು ಪ್ರಶ್ನಿಸಿ ರಾಕ್ ಲೈನ್ ವೆಂಕಟೇಶ್ ಅವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಬಿಬಿಎಂಪಿ ಆದೇಶ ಪ್ರಶ್ನಿಸಲು ಪ್ರತ್ಯೇಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಹೀಗಾಗಿ ಅರ್ಜಿದಾರರಿಗೆ ಅವಕಾಶ ನೀಡಿ ರಿಟ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಕಾರಣಕ್ಕೆ ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ಮಾಲ್ ಗೆ ಅಧಿಕಾರಿಗಳು ಬೀಗ ಹಾಕಿದ್ದರು. 2011 ರಿಂದ 2023ರವರೆಗೆ 11.51 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ನೋಟಿಸ್ ನೀಡಲಾಗಿತ್ತು.
ರಾಯಚೂರು: ರಾಯಚೂರು ನಗರದ ಹರ್ಷಿತಾ ಗಾರ್ಡನ್ ಹೆಸರಿನ ಫಂಕ್ಷನ್ ಹಾಲ್ ನಲ್ಲಿರುವ ಲೇಬರ್ ರೂಂನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ತೀವ್ರತೆಗೆ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಒಂದು ಹಸು ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಲೇಬರ್ ರೂಂನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಸ್ಟೋರ್ ರೂಂನಲ್ಲಿ ಮೂರು ಸಿಲಿಂಡರ್ ಪೈಕಿ ಒಂದು ಸಿಲಿಂಡರ್ ಬ್ಲಾಸ್ಟ್ ಆಗಿದೆ. ಬಳಿಕ ತೀವ್ರತೆ ಪಡೆದುಕೊಂಡು ಕೊಠಡಿ ಹೊತ್ತಿ ಉರಿದಿದೆ. ಘಟನೆಯಲ್ಲಿ ಲೇಬರ್ ರೂಂ ಬಳಿ ಸಾಕಲಾಗಿದ್ದ ಒಂದು ಹಸು ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.