Author: admin

ನಟ ಜಗ್ಗೇಶ್​  ತಮ್ಮ ಸೇಟ್ಮೆಂಟ್​​ ನಿಂದಲೇ ಆಗಾಗ ಸುದ್ದಿ ಆಗುತ್ತಾರೆ. ಹುಲಿ ಉಗುರು ಲಾಕೆಟ್​​ ಕೇಸ್ ​ಗೆ ಸಂಬಂಧಿಸಿದಂತೆ ವರ್ತೂರ್ ಸಂತೋಷ್ ಬಗ್ಗೆ ನಟ ​ ಜಗ್ಗೇಶ್ ಮಾತಾಡಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಿರಿಯ ನಟರಾಗಿ ಜಗ್ಗೇಶ್ ಈ ರೀತಿ ಮಾತಾಡಿದ್ದು ಸರಿಯಲ್ಲ ಎಂದು ಹಲವರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಹಲವರು ತಿರುಗಿ ಬಿದ್ದಿದ್ದಾರೆ. ವರ್ತೂರು ಸಂತೋಷ್  ಕೂಡ ಸೈಲೆಂಟ್ ಆಗಿಯೇ ತಿರುಗೇಟು ಕೊಟ್ಟಿದ್ದಾರೆ. ಇದೀಗ ವಹ್ನಿಕುಲ ಕ್ಷತ್ರಿಯ ಸಮುದಾಯದ ಕೆಲವು ಮುಖಂಡರು ಜಗ್ಗೇಶ್​ ಹೇಳಿಕೆಗೆ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ವಹ್ಮಿಕುಲ ಕ್ಷತ್ರಿಯ ಸಮುದಾಯದ ಮುಖಂಡರು ಜಗ್ಗೇಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ತಮ್ಮ ಸಮುದಾಯದ ಯುವಕನ ಬಗ್ಗೆ ಜಗ್ಗೇಶ್ ಕೀಳಾಗಿ ಮಾತಾಡಿದ್ದು ಸರಿಯಲ್ಲ ಎನ್ನಲಾಗಿದೆ. ವರ್ತೂರು ಸಂತೋಷ್ ಬಳಿ ನಟ ಜಗ್ಗೇಶ್ ಕ್ಷಮೆ ಕೇಳಲೇಬೇಕು ಇಲ್ಲವಾದ್ರೆ. ಅವರ ಮನೆಯ ಮುಂದೆ ಪ್ರತಿಭಟನೆ ಮಾಡಿ ಬಳಿಕ ಮನೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸಂತೋಷ್ ಒಳ್ಳೆಯ ಮನುಷ್ಯ. ಸಣ್ಣ ಹುಡುಗನನ್ನು…

Read More

ಬಸ್ ಚಕ್ರಕ್ಕೆ ಸಿಲುಕಿ ಕಂಡಕ್ಟರ್‌ ವೊಬ್ಬರ ಕಾಲಿನ ಪಾದವೇ ಕಟ್ ಆದ ಘಟನೆ ಬೆಂಗಳೂರಿನ ಜಯನಗರ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಸರ್ಕಾರಿ ಕಂಡಕ್ಟರ್‌ ಕೆಲಸಕ್ಕೆಂದು ಬಿಎಂಟಿಸಿ ಬಸ್‌ ನಲ್ಲಿ ಬರುತ್ತಿದ್ದರು. ಡ್ಯುಟಿಗೆ ಟೈಮ್ ಆಯಿತೆಂದು ಆತುರದಲ್ಲಿ ಜಯನಗರದ ಬಿಎಂಟಿಸಿ ಬಸ್ ಸ್ಟ್ಯಾಂಡ್ ಸಮೀಪಿಸುತ್ತಿದ್ದಂತೆ ಇಳಿಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಬಸ್ ಸ್ಟ್ಯಾಂಡ್ ಸಮೀಪ ರಸ್ತೆ ತಡೆ ಇದ್ದ ಕಾರಣಕ್ಕೆ ಚಾಲಕ ಬಸ್ ನಿಧಾನ ಮಾಡಿದ್ದರು. ಡಿಪೊ ಎಂಟ್ರಿ ಪಡೆಯುತ್ತಿದ್ದಂತೆ ಕೆಲಸದ ಅವಸರದಲ್ಲಿ ಇಳಿಯಲು ಹೋದಾಗ ಕಾಲು ಜಾರಿದೆ. ಈ ವೇಳೆ ಬಸ್ ಚಕ್ರಕ್ಕೆ ಸಿಲುಕಿದ ಸಿಬ್ಬಂದಿಯ ಕಾಲಿನ ಪಾದವೇ ಕಟ್ ಆಗಿದೆ. ಕಂಡಕ್ಟರ್‌ ಚೀರಾಟವನ್ನು ಗಮನಿಸಿದ ಸ್ಥಳೀಯರು ಕೂಡಲೇ ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಗಾಯಾಳುವನ್ನು ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Read More

ಬೀದರ್:‌ ಜಿಲ್ಲೆಯ ವಿವಿಧೆಡೆಗಳಲ್ಲಿ  ಛತ್ರಪತಿ ಶಿವಾಜಿ ಮಹಾರಾಜರ ಜನ್ಮ ದಿನಾಚರಣೆಯಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೀದರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬೀದರ ಉತ್ತರ ಶಾಸಕ ಕರ್ನಾಟಕ ಪೌರಾಡಳಿತ ಸಚಿವರಾದ ರಹೀಮ್ ಖಾನ್, ಮಾಜಿ ಸಚಿವ ಬಂಡೇಪ್ಪ ಕಾಶಂಪುರ್, ಕೇಂದ್ರ ಸಚಿವರು ಭಗವಂತ್ ಖೂಬಾ ಭಾಗಿಯಾಗಿದ್ದರು. ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ದಿಲೀಪ್ ಬಡೋಲೆ,  ಪೊಲೀಸ್ ಅಧೀಕ್ಷಕರಾದ ಚನ್ನಬಸವಣ್ಣ ಹಾಗೂ ಬೀದರ ಜಿಲ್ಲಾ ಮರಾಠಿ ಸಮುದಾಯ ಮುಖಂಡರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ

Read More

ಬೆಂಗಳೂರು: ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ, ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮಕಿ ಹಾಕುತ್ತಿದ್ದಾರೆ, ಎಲ್ಲವೂ ನಮಗೆ ತಿಳಿಯುತ್ತಿದೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ. ಈಗ ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು. ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್‌ ಐದನೇ ಅಭ್ಯರ್ಥಿಯಾಗಿ ಉದ್ಯಮಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದೆ. ಅವರು ಗೆಲ್ಲಬೇಕು ಎಂದರೆ ಸುಮಾರು ಆರೇಳು ಹೆಚ್ಚುವರಿ ಮತಗಳ‌ ಅಗತ್ಯವಿದೆ. ಇದನ್ನು ಪಡೆಯಲು ಕಾಂಗ್ರೆಸ್‌ ಶಾಸಕರಿಗೆ ಗಾಳ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Read More

ಹಾಸನ:  ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಬೈಕ್ ‌ನಲ್ಲಿ ಬರುತ್ತಿದ್ದ ದಂಪತಿಗೆ ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ನಡೆದಿದೆ. ಚಂದ್ರೇಗೌಡ(52) ಹೇಮಲತಾ (45) ಮೃತ ದುರ್ದೈವಿಗಳು. ಮದುವೆ ಮುಗಿಸಿ ಬೈಕ್ ‌ನಲ್ಲಿ ಬರುತ್ತಿದ್ದ ದಂಪತಿಗೆ ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಹಾರಿ ಬಿದ್ದ ದಂಪತಿ ದಾರುಣವಾಗಿ ಮೃತಪಟ್ಟಿದ್ದಾರೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ದಂಪತಿ ತಲೆಗೆ ತೀವ್ರ ಪೆಟ್ಟಾಗಿತ್ತು. ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಚನ್ನರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಕೃಷ್ಣಗಿರಿ ಚಿನ್ನಾರ್ ಬಳಿ ಸೀಮಂತ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಆಗುತ್ತಿದ್ದಾಗ ಮಿನಿ ಬಸ್‌ ವೊಂದು ಪಲ್ಟಿ ಹೊಡೆದಿದ್ದು, ಹದಿನೈದು ಮಂದಿ ಗಾಯಗೊಂಡಿದ್ದಾರೆ. ಹೆದ್ದಾರಿಯಲ್ಲಿ ರಸ್ತೆಗೆ ಪೈಂಟ್ ಕೆಲಸ ಮಾಡಲಾಗುತ್ತಿತ್ತು. ಇದನ್ನು ಗಮನಿಸದೆ ಮಿನಿ ಬಸ್‌ ಚಾಲಕ ಅತಿವೇಗವಾಗಿ ಬಂದಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್‌ ಪಲ್ಟಿ ಹೊಡೆದಿದೆ. ಬಸ್‌ ಪಲ್ಟಿ ಹೊಡೆದ ರಭಸಕ್ಕೆ ಬ್ರಿಡ್ಜ್‌ ಕೆಳಗೆ ಬಿದ್ದಿದೆ. ಮಿನಿ ಬಸ್‌ ನಲ್ಲಿದ್ದ 12 ಮಂದಿ ಹಾಗೂ ಹೆದ್ದಾರಿ ಕೆಲಸ ಮಾಡುತ್ತಿದ್ದ ಮೂವರು ಗಾಯಗೊಂಡಿದ್ದಾರೆ. ಬಸ್‌ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಿಸಿ, ಕೂಡಲೇ ಕೃಷ್ಣಗಿರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬ್ರಿಡ್ಜ್‌ ಕೆಳಗೆ ಬಿದ್ದ ಬಸ್ಸನ್ನು ಮೇಲಕ್ಕೆತ್ತಿದ್ದಾರೆ. ಸ್ಥಳಕ್ಕೆ ಕೃಷ್ಣಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಉತ್ತರಪ್ರದೇಶ: ವರನೋರ್ವ ಸೂಟು ಬೂಟು ಧರಿಸಿ ಪೊಲೀಸ್ ನೇಮಕಾತಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿಡಿಯೋವೊಂದು ವೈರಲ್ ಆಗಿದೆ. ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಮದುವೆ ಮಂಟಪದಿಂದ ನೇರವಾಗಿ ಪರೀಕ್ಷೆ ಬರೆಯಲು ವರ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾನೆ. ಪ್ರಶಾಂತ್ ನಾಮದೇವ್ ಎಂಬಾತನ ಮದುವೆಯ ದಿನಾಂಕ ಹಾಗೂ ಪರೀಕ್ಷಾ ದಿನಾಂಕ ಒಂದೇ ದಿನವಾಗಿತ್ತು. ಹೀಗಾಗಿ ಮೊದಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಪರೀಕ್ಷೆ ಬರೆದಿದ್ದಾನೆ. ಇನ್ನೂ ಪರೀಕ್ಷೆ ಬರೆದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪ್ರಶಾಂತ್, ನನಗೆ ಮದುವೆಗಿಂತಲೂ ವೃತ್ತಿ ಹೆಚ್ಚು ಮುಖ್ಯ ಎಂದು ಹೇಳಿಕೊಂಡಿದ್ದಾನೆ. ದೇಶ ಸೇವೆ ಮಾಡಬೇಕು ಎಂಬ ಆಸೆ ಇದೆ. ಹೀಗಾಗಿ ಮದುವೆಗಿಂತ ವೃತ್ತಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದೇನೆ ಎಂದು ಆತ ಹೇಳಿಕೊಂಡಿದ್ದಾನೆ.

Read More

ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ  ದಿನಾಂಕ ಫಿಕ್ಸ್ ಆಗಿದ್ದು,  ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ಕರಗ ಮಹೋತ್ಸವ ನಡೆಯಲಿದೆ. ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ  ಅವರು ಕರಗ ಹೊರಲಿದ್ದಾರೆ. ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ.ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ. ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕರಗದ ಪೂಜಾರಿ ಎ. ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿ ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು. ಆದರೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಅವರು ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿ ಉತ್ಸವ ಮುಗಿಸಿ ಧರ್ಮರಾಯ ಸ್ವಾಮಿ ದೇವಾಲಯ ತಲುಪಿಸಿದ್ದರು.

Read More

ವಸತಿ ಶಾಲೆಗಳಲ್ಲಿ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬನ್ನಿ ಎಂಬ ಘೋಷವಾಕ್ಯವನ್ನ ‘ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿರುವ ಬಗ್ಗೆ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ,  ಸಮಾಜದಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬದಲಾವಣೆಗಳು ಆಗಬೇಕು.  ಪ್ರಶ್ನಿಸಿ ಅಂದ್ರೆ ಇದರಲ್ಲಿ ತಪ್ಪೇನಿದೆ…? ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು. ಧೈರ್ಯವಾಗಿ ಪ್ರಶ್ನಿಸುವುದನ್ನ ಮಕ್ಕಳು ಕಲಿತುಕೊಳ್ಳಬೇಕು.  ಇದು ಕಲಿಕೆಗೆ ಅಗತ್ಯ ಎಂದು ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದಲ್ಲಿ ಹಾಗೂ ಇತರ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ದ್ವಾರದಲ್ಲಿ ಬರಹ ಬದಲಾಯಿಸಲಾಗಿದೆ. ಇದೀಗ ಈ ನಡೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Read More

ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿಲ್ಲ. ಎಎಪಿ ಸಮನ್ಸ್ ಕಾನೂನುಬಾಹಿರ ಎಂದು ಹೇಳುತ್ತದೆ ಮತ್ತು ವಿಷಯವು ನ್ಯಾಯಾಲಯದ ಮುಂದೆ ಬಾಕಿ ಇದೆ. ಇಡಿ ಸಮನ್ಸ್‌ ಗಳನ್ನು ಕೇಜ್ರಿವಾಲ್ ನಿರ್ಲಕ್ಷಿಸಿರುವುದು ಇದು ಆರನೇ ಬಾರಿ. ಕಳೆದ ಐದು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಕೇಜ್ರಿವಾಲ್ ಹಾಜರಾಗಿರಲಿಲ್ಲ. ಇದರ ಬೆನ್ನಲ್ಲೇ ಇಡಿ ಇಂದು ಆರನೇ ಬಾರಿಗೆ ಸಮನ್ಸ್ ಜಾರಿ ಮಾಡಿದ್ದು, ಹಾಜರಾಗುವಂತೆ ಸೂಚಿಸಿದೆ. ನೊಟೀಸ್‌ಗಳನ್ನು ನಿರಂತರವಾಗಿ ಕಡೆಗಣಿಸಿರುವ ಹಿನ್ನೆಲೆಯಲ್ಲಿ ಇಡಿ ಕೇಜ್ರಿವಾಲ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದೆ. ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಆದೇಶ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

Read More