Subscribe to Updates
Get the latest creative news from FooBar about art, design and business.
- ಡಿಪ್ಲೋಮಾ ಸಿಇಟಿ, ಪಿಜಿಸಿಇಟಿ ಪರೀಕ್ಷೆ: ನಿಷೇಧಾಜ್ಞೆ ಜಾರಿ
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
Author: admin
ಸದಾ ಕ್ರಿಯಾಶೀಲರಾಗಿರುವ ಡಾ.ಉಮ್ಮರ್ ಬೀಜದಕಟ್ಟೆಯವರ ಶ್ರಮಕ್ಕೆ ಮತ್ತೊಂದು ಗರಿ ಸೇರ್ಪಡೆಗೊಳ್ಳುತ್ತಿದೆ. ಫೆ.24ರಂದು ಬೆಂಗಳೂರಿನಲ್ಲಿ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ‘ಆಂತರಿಕ ವಿಚಾರಣೆ ಮತ್ತು ಶಿಸ್ತು ಕ್ರಮ’ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಲಿದೆ. ವೈಟ್ ಫೀಲ್ಡ್ ಕೈಗಾರಿಕಾ ವಲಯ ಮಹದೇವಪುರ ವ್ಯಾಪ್ತಿಯಲ್ಲಿ ಕಾರ್ಯಾಗಾರ ನಡೆಯಲಿದೆ. ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಸಸ್ಮೋಸ್ ಗ್ರೂಪ್ ಆಫ್ ಕಂಪನೀಸ್ ಮಾನವ ಸಂಪನ್ಮೂಲ ನಿರ್ದೇಶಕ ರಾಜಶೇಖರ ರೈ, ಬೆಂಗಳೂರಿನ ಲಗುನ ಕ್ಲೋತಿಂಗ್ ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸದಾಶಿವ, ಬೆಂಗಳೂರಿನ ಎನ್ನೋವಿ ಮೊಬಿಲಿಟಿ ಸಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ವಾಸು ಎಂ ಹಾಗೂ ಬೆಂಗಳೂರಿನ ಪೀಪಲ್ & ಕಲ್ಚರ್, ವ್ಯಪಿ ಲೆಕ್ಸ್ ಟೆಕ್ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ನ ಚೀಫ್ ಕಲಾ ಬೋಸ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಾಗಾರದಲ್ಲಿ ವಿವಿಧ ಸಂಸ್ಥೆಗಳಿಂದ 50ಕ್ಕೂ ಹೆಚ್ಚು ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಎ ಪಾರ್ಟ್ನರ್ ನ ಖ್ಯಾತ…
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ಆಗಿದೆ. ಸುಮಾರು 35 ವರ್ಷದ ಪುರುಷನ ಮೃತದೇಹ ಇದಾಗಿದೆ. ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಗುರುತು, ಪತ್ತೆಗಾಗಿ ಶವದ ಫೋಟೊವನ್ನು ಜಿಲ್ಲೆಯ ಪೊಲೀಸ್ ಠಾಣೆಗಳಿಗೆ ರವಾನೆ ಮಾಡಿದ್ದಾರೆ. ಹತ್ಯೆ ಮಾಡಲಾಗಿದೆಯಾ ಅಥವಾ ಆತ್ಮಹತ್ಯೆನಾ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನ ಹನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸಿದ್ದು ಗ್ಯಾರಂಟಿ ಯೋಜನೆಗಳನ್ನು ಮೋದಿ ನಕಲು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಕೇಂದ್ರದ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭಾನುವಾರ ಟೀಕಿಸಿದ್ದಾರೆ. ಹಲವು ರಾಜ್ಯಗಳು ಸಿಎಂ ಸಿದ್ದರಾಮಯ್ಯನವರ ಆಡಳಿತವನ್ನು ಪ್ರಶಂಸಿಸುತ್ತಿವೆ, ಸಿದ್ದರಾಮಯ್ಯ ಮೋದಿ ಸರ್ಕಾರವನ್ನು ಎದುರಿಸುವ ಏಕೈಕ ನಾಯಕರಾಗಿದ್ದಾರೆ. ಬಡವರ ಉದ್ಧಾರಕ್ಕಾಗಿ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಹಾಪುರ ತಾಲೂಕಿನ ಬೊಮ್ಮನಹಳ್ಳಿಯ ನಿವಾಸಿಗಳಾದ ಸವಾರರಾದ ಶಿವನಗೌಡ ಹೊಸಮನಿ(25), ಲಕ್ಷ್ಮಣ(24) ಸಾವನ್ನಪ್ಪಿರುವವರು. ಕೆಂಭಾವಿಯಿಂದ ಬೊಮ್ಮನಹಳ್ಳಿ ಗ್ರಾಮಕ್ಕೆ ಬೈಕ್ ಮೇಲೆ ತೆರಳುವಾಗ ಘಟನೆ ಸಂಭವಿಸಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಲು ಉತ್ಸುಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕಸಭೆ ಚುನಾವಣೆಗೆ ಒಟ್ಟಾಗಿ ಕಣಕ್ಕಿಳಿದಿರುವ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದರು. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿಗಳು ಕಿಡಿಕಾರಿದರು. ನಮ್ಮ ವಿರೋಧಿಗಳು ಐದು ಗ್ಯಾರಂಟಿ ಘೋಷಣೆ ಮಾಡಿದಾಗ ರಾಜ್ಯ ದಿವಾಳಿ ಆಗುತ್ತದೆ ಎಂದಿದ್ದರು. ಈಗ ರಾಜ್ಯ ಸುಭದ್ರವಾಗಿದೆ. ಕಳೆದ ಭಾರಿ ಬಜೆಟ್ ಗಿಂತ 46 ಸಾವಿರ ಕೋಟಿ ರೂ. ಹೆಚ್ಚಾಗಿದೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮಾನ ನೀಡಲಿದ್ದಾರೆ. 20 ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತಾರೆಂದು ಹೇಳಿದರು. ರಾಜ್ಯದಲ್ಲಿ ಈಗ ಇರುವದು ಒಂದೇ ವಿರೋಧ ಪಕ್ಷ, ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನಗೊಂಡು ಕೇಸರಿ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಮುಸ್ಲಿಮನಾಗಿ ಮರುಹುಟ್ಟು ಪಡೆಯಬೇಕೆಂದು ಹಿಂದೊಮ್ಮೆ ಹೇಳಿದ್ದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು, ಇದೀಗ ಕೋಮುವಾದಿ ಪಕ್ಷ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ. ಪಕ್ಷದ…
ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ಸ್ನೇಹಿತರ ಗಲಾಟೆ ಶುರುವಾಗಿದ್ದು, ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ನಿಂಗಪ್ಪಾ ಬುಳ್ಳಾರ (25) ಮೃತ ವ್ಯಕ್ತಿಯಾಗಿದ್ದಾರೆ. ಕುಡಿಯುವ ನೀರಿನ ಟ್ಯಾಂಕ್ ಕಟ್ಟಡ ಕಾಮಗಾರಿಗೆ ಬಂದಿದ್ದರು. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಶುರುವಾಗಿದೆ. ಹುಕ್ಕೇರಿ ತಾಲೂಕಿನ ರುಸ್ತಂಪೂರ ಗ್ರಾಮದ ನಿವಾಸಿಯಾಗಿರುವ ನಿಂಗಪ್ಪಾ ಬುಳ್ಳಾರನನ್ನು, ಆತನ ಸ್ನೇಹಿತರೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ನೋಡನೋಡುತ್ತಲೇ ಗೆಳಯನ ಕೊಂದು ಇಬ್ಬರು ಸ್ನೇಹಿತರು ಪರಾರಿ ಆಗಿದ್ದಾರೆ. ಚಿಕ್ಕೋಡಿ ಪೊಲೀಸರು ಆರೋಪಿಗಳ ಹುಡುಕಾಟದಲ್ಲಿದ್ದಾರೆ.
ವಿಜಯಪುರ: ಪತಿಯೊಬ್ಬ ಪತ್ನಿಯ ಶೀಲವನ್ನು ಶಂಕಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ತಿಕೋಟ ತಾ. ಹುಬನೂರು ತಾಂಡಾ -2ರಲ್ಲಿ ನಡೆದಿದೆ. ರೇಶ್ಮಾ ರಾಠೋಡ (25) ಮೃತ ದುರ್ದೈವಿ ಹಾಗೂ ಅಶೋಕ ರಾಠೋಡ (33) ಆರೋಪಿ ಪತಿಯಾಗಿದ್ದಾನೆ. ಪತ್ನಿಯನ್ನು ಗುದ್ದಲಿಯಿಂದ ಹೊಡೆದು ಅಶೋಕ ರಾಠೋಡ ಕೊಲೆ ಮಾಡಿದ್ದಾನೆ. ಅವರ 11 ವರ್ಷಗಳ ದಾಂಪತ್ಯ ಜೀವನದಲ್ಲಿ ಮೂವರು ಮಕ್ಕಳು ಸಹ ಇದ್ದರು. ಆದರೆ ಕೆಲ ತಿಂಗಳಿನಿಂದ ಪತ್ನಿಗೆ ಅನೈತಿಕ ಸಂಬಂಧ ಇದೆ ಎಂದು ಸಂಶಯದಿಂದ ಆಗಾಗ ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಕುಡಿದು ಬಂದು ನಿತ್ಯ ಕಿರುಕುಳ ಕೊಡುತ್ತಿದ್ದ. ಪತಿಯ ಕಿರುಕುಳ ತಾಳಲಾರದೆ ಪತ್ನಿ ರೇಶ್ಮಾ ತವರು ಮನೆಗೆ ಹೊರಟು ಹೋಗಿದ್ದಳು. ಆದರೂ ಸುಮ್ಮನಾಗದ ಪತಿ ಅಲ್ಲಿಗೂ ಹೋಗಿ ಜಗಳ ಮಾಡಿ, ಮಲಗಿದ್ದವಳ ಮೇಲೆ ಗುದ್ದಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆ…
ಈರುಳ್ಳಿಯನ್ನು ಹಸಿಯಾಗಿ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು: ತೂಕ ಇಳಿಕೆಗೆ ಸಹಕಾರಿ: ಈರುಳ್ಳಿ ಕಡಿಮೆ ಕ್ಯಾಲೋರಿ, ನಾರಿನಂಶ ಹೆಚ್ಚಿರುವ ಆಹಾರ. ಇದು ಕ್ಯಾಲೊರಿಗಳನ್ನು ಕಡಿಮೆ ಮಾಡಲು ಮತ್ತು ತೂಕವನ್ನು ಕಳೆದುಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ಚರ್ಮದ ಆರೋಗ್ಯವನ್ನು ಹೆಚ್ಚಿಸುತ್ತದೆ: ಇದು ಸ್ವತಂತ್ರ ರಾಡಿಕಲ್ಗಳಿಂದ ಉಂಟಾಗುವ ಹಾನಿಯಿಂದ ಚರ್ಮವನ್ನು ರಕ್ಷಿಸುತ್ತದೆ ಮತ್ತು ಆರೋಗ್ಯಕರ ಮೈಬಣ್ಣವನ್ನು ಉತ್ತೇಜಿಸುತ್ತದೆ. ರಕ್ತದ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ: ಮಧುಮೇಹ ರೋಗಿಗಳಿಗೆ ಈರುಳ್ಳಿ ಒಳ್ಳೆಯದು. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುವ ರಾಸಾಯನಿಕವನ್ನು ಹೊಂದಿರುತ್ತದೆ. ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ: ಈರುಳ್ಳಿಯಲ್ಲಿರುವ ಸಲ್ಫರ್-ಒಳಗೊಂಡಿರುವ ಅಂಶಗಳು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ. ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ: ಈರುಳ್ಳಿಯಲ್ಲಿರುವ ಸಲ್ಫರ್ ಹೊಂದಿರುವ ರಾಸಾಯನಿಕಗಳು ಮತ್ತು ಉತ್ಕರ್ಷಣ ನಿರೋಧಕಗಳು ಕ್ಯಾನ್ಸರ್ ಕೋಶಗಳ ರಚನೆಯನ್ನು ತಡೆಯುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ: ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಹಸಿರು ಈರುಳ್ಳಿ…
ನವದೆಹಲಿ: ಈ ದೇಶದ ಸಂಪತ್ತು ಅಲ್ಪ ಸಂಖ್ಯಾತರಿಗೆ ಮಾತ್ರ ಸೇರಿದ್ದಲ್ಲ. ದಲಿತರು, ಬಡವರು, ಆದಿವಾಸಿಗಳಿಗೂ ದೇಶದ ಸಂಪತ್ತಿನ ಮೇಲೆ ಹಕ್ಕಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ತಿರುಗೇಟು ನೀಡಿದರು. ಈ ಹಿಂದೆ ಹುಬ್ಬಳ್ಳಿಯ ಮುಸ್ಲಿಂ ಧರ್ಮಗುರುಗಳ ಸಮಾವೇಶವೊಂದರಲ್ಲಿ ಸಿಎಂ ಸಿದ್ದರಾಮಯ್ಯ, ಈ ದೇಶದ ಸಂಪತ್ತು ನಿಮಗೂ ಸೇರಿದ್ದು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಬಿಜೆಪಿ ರಾಷ್ಟ್ರೀಯ ಮಹಾ ಅಧಿವೇಶನದಲ್ಲಿ ಅಮಿತ್ ಶಾ ಪ್ರತಿಕ್ರಿಯೆ ನೀಡಿದರು. ದೇಶದ ಸಂಪತ್ತಿನ ಮೇಲೆ ದಲಿತರ, ಬಡವರ, ಆದಿವಾಸಿಗಳಿಗೆ ಹಕ್ಕಿದೆ. ಕೇವಲ ಅಲ್ಪ ಸಂಖ್ಯಾತರಿಗೆ ಇಲ್ಲ. ರಾಮಮಂದಿರದ ಪ್ರಾಣ ಪ್ರತಿಷ್ಟಾಪನೆಗೆ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಲಾಗಿತ್ತು. ತುಷ್ಟಿಕರಣ ರಾಜಕಾರಣಕ್ಕಾಗಿ ಪ್ರಾಣ ಪ್ರತಿಷ್ಠಾಪನೆಗೆ ಅವರು ಬರಲಿಲ್ಲ. ಆಹ್ವಾನವನ್ನು ತಿರಸ್ಕರಿಸಿ ದೇಶ ಮಹಾನ್ ಆಗುವ ಪ್ರಕ್ರಿಯೆಯಿಂದ ದೂರ ಉಳಿದಿದ್ದಾರೆ. ಇದನ್ನು ದೇಶದ ಜನ ನೋಡುತ್ತಿದ್ದಾರೆ. ಆದ್ರೆ ಬಿಜೆಪಿ ತುಷ್ಟಿಕರಣ ನಂಬಲ್ಲ. ರಾಮಮಂದಿರ ನಿರ್ಮಾಣದ ಸಂಪೂರ್ಣ ಯಶಸ್ಸು ಮೋದಿಯವರಿಗೆ ಸಲ್ಲುತ್ತೆ ಎಂದು ಹಾಡಿಹೊಗಳಿದರು. ಪ್ರಧಾನಿ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗುತ್ತಾರೆ ಎಂದು…
ರಾಯಚೂರು: ರಾಯಚೂರಿನ ಕಸಬೆ ಕ್ಯಾಂಪ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಇನ್ನೋವಾ ಕಾರ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಅತ್ತೆ, ಸೊಸೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಾಯಗೊಂಡ ಘಟನೆ ನಡೆದಿದೆ. ಕಾರ್ ನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಉಳಿದ ಐದು ಜನರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೀಕರ ಅಪಘಾತದ ಪರಿಣಾಮ ಇನ್ನೋವಾ ಕಾರ್ ನಲ್ಲಿದ್ದ ಮಾರಿಯಾ ಗೀತಾ (38) ಹಾಗೂ ಅಮಲ್ ಪಾಲ್ ಮೇರಿ (64) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೈದರಾಬಾದ್ ನಿಂದ ಸಿಂಧನೂರು ಮಾರ್ಗವಾಗಿ ಹೊರಟಿದ್ದ ಖಾಸಗಿ ಬಸ್, ಗದಗದಿಂದ ರಾಯಚೂರು ಮಾರ್ಗವಾಗಿ ಬರುತ್ತಿದ್ದ ಇನ್ನೋವಾ ಕಾರ್ ಗೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಈ ಕುರಿತು ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.