Subscribe to Updates
Get the latest creative news from FooBar about art, design and business.
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
Author: admin
ಪ್ರತಿದಿನ ಬೆಳಗ್ಗೆ ಮೆಂತ್ಯೆ ನೀರನ್ನು ಕುಡಿದರೆ ಇಷ್ಟೆಲ್ಲಾ ಸಮಸ್ಯೆ ದೂರವಿಡಬಹುದು: ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಗಂಟೆಗಟ್ಟಲೆ ಕುಳಿತು ಕೆಲಸ ಮಾಡುವುದರಿಂದ ಅಧಿಕ ತೂಕ ಮತ್ತು ಬೊಜ್ಜು ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹಾಗಾಗಿ ಮ್ಯಾಜಿಕ್ ಡ್ರಿಂಕ್ ಎಂದು ಕರೆಯಲ್ಪಡುವ ಮೆಂತ್ಯೆ ನೀರನ್ನು ಬೆಳಿಗ್ಗೆ ಕುಡಿಯುವುದರಿಂದ ಬೊಜ್ಜು ತ್ವರಿತವಾಗಿ ಕಡಿಮೆಯಾಗುತ್ತದೆ. ಇಂಗು ಫೈಬರ್, ಕಾರ್ಬೋಹೈಡ್ರೆಟ್, ಪ್ರೋಟೀನ್, ಕಬ್ಬಿಣ & ಕ್ಯಾಲ್ಸಿಯಂ ಅಂಶ ಒಳಗೊಂಡಿದ್ದು ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ & ತೂಕ ಇಳಿಸಲು ಈ ನೀರು ಸಹಕಾರಿ. ಕೊಲೆಸ್ಟ್ರಾಲ್ ಕಡಿಮೆ ಮಾಡಲು ಬಾರ್ಲಿ ನೀರು: ರಾತ್ರಿ ನೀರಿಗೆ ಹಾಕಿದ ಬಾರ್ಲಿಯನ್ನು ಸೋಸಿ, ನೀರನ್ನು ಬೆಳಗಿನ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಆರೋಗ್ಯಕ್ಕೆ ಹಲವು ರೀತಿಯ ಲಾಭಗಳುಂಟು. ಬಾರ್ಲಿ ನೀರು ದೇಹದಲ್ಲಿ ಜಮೆಯಾಗಿರುವ ಕೊಲೆಸ್ಟ್ರಾಲ್ ಕಡಿಮೆ ಮಾಡುವುದಕ್ಕೆ ಮಾತ್ರವಲ್ಲ, ಇನ್ನೂ ಹಲವು ಅನುಕೂಲಗಳನ್ನು ಕಲ್ಪಿಸಿಕೊಡುತ್ತದೆ. ಬಾರ್ಲಿ ನೀರಲ್ಲಿರುವುದು ಹೇರಳವಾದ ಕರಗಬಲ್ಲ ನಾರಿನಂಶ. ಹಾಗಾಗಿ ಬೆಳಗಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರನ್ನು ಸೇವಿಸುವುದರಿಂದ ಬೇಡದ್ದನ್ನು…
ಸಿಂಹಗಳಿಗೆ ನಾಮಕರಣ ಮಾಡಿ ವಿವಾದಕ್ಕೆ ಕಾರಣವಾದ ಘಟನೆ ಪಶ್ಚಿಮ ಬಂಗಾಳದ ಸಿಲಿಗುರಿಯ ಸಫಾರಿ ಪಾರ್ಕ್ ನಲ್ಲಿ ನಡೆದಿದೆ. ಇತ್ತೀಚೆಗೆ ಸಫಾರಿ ಪಾರ್ಕ್ ಗೆ ಒಡಿಶಾದಿಂದ ಒಂದು ಗಂಡು ಹಾಗೂ ಮತ್ತೊಂದು ಹೆಣ್ಣು ಸಿಂಹಗಳನ್ನು ತರಲಾಗಿತ್ತು. ಅವುಗಳಲ್ಲಿ ಹೆಣ್ಣು ಸಿಂಹಕ್ಕೆ ʼಸೀತಾʼ ಮತ್ತು ಗಂಡು ಸಿಂಹಕ್ಕೆ ʼಅಕ್ಬರ್ʼ ಎಂದು ನಾಮಕರಣ ಮಾಡಿರುವುದು ಬಯಲಾಗಿದೆ. ಈ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ವಿಶ್ವ ಹಿಂದೂ ಪರಿಷದ್ (VHP) ಮುಖಂಡರು ಭಾರಿ ವಿರೊಧ ವ್ಯಕ್ತಪಡಿಸಿದ್ದಾರೆ. ಅರಣ್ಯಾಧಿಕಾರಿಗಳು ಹೆಣ್ಣು ಸಿಂಹಕ್ಕೆ ‘ಸೀತಾ’ ಹಾಗೂ ಗಂಡು ಸಿಂಹಕ್ಕೆ ‘ಅಕ್ಬರ್’ ಎಂದು ನಾಮಕರಣ ಮಾಡಿದ್ದಾರೆ. ಜೊತೆಗೆ ಅದನ್ನು ಸಫಾರಿ ವಲಯದಲ್ಲಿ ಒಂದೇ ಪ್ರದೇಶದೊಳಗೆ ಇರಿಸಿದ್ದಾರೆ. ಇದರಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಕೂಡಲೇ ಪ್ರಾಣಿಗಳ ಹೆಸರು ಬದಲಿಸಬೇಕು. ಸಿಂಹಗಳನ್ನು ಬೇರೆ ಬೇರೆ ಕಡೆ ಇಡಬೇಕು ಎಂದು ಆಗ್ರಹಿಸಿ ವಿಹೆಚ್ ಪಿ ನಾಯಕರು ಕೋಲ್ಕತ್ತಾ ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಅರ್ಜಿ ಫೆ.20ರಂದು ವಿಚಾರಣೆಗೆ ಬರಲಿದೆ. ಸಿಂಹಗಳನ್ನು ಇತ್ತೀಚೆಗೆ ತ್ರಿಪುರಾದ ಸೆಪಹಿಜಾಲಾ ಝೂಲಾಜಿಕಲ್ ಪಾರ್ಕ್ನಿಂದ ಸ್ಥಳಾಂತರಿಸಲಾಗಿದೆ…
ರೈತರ ಆಂದೋಲನದ ನಂತರ ಹರಿಯಾಣ ಸರ್ಕಾರ ಇಂಟರ್ನೆಟ್ ನಿಷೇಧವನ್ನು ವಿಸ್ತರಿಸಿತು. ಫೆಬ್ರವರಿ 19 ರವರೆಗೆ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ SMS ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಅವಲೋಕಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹರಿಯಾಣ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿವಿಎಸ್ಎನ್ ಪ್ರಸಾದ್ ಹೇಳಿದ್ದಾರೆ. ಅಂತರ್ಜಾಲ ಸೇವೆಗಳ ದುರ್ಬಳಕೆಯಾಗುವ ಸಾಧ್ಯತೆ ಹೆಚ್ಚಿದ್ದು, ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯಾಗುವ ಅಪಾಯವಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಮಧ್ಯೆ, ಪಂಜಾಬ್-ಹರಿಯಾಣ ಗಡಿಯಲ್ಲಿ ರೈತರ ಮುಷ್ಕರ ಆರನೇ ದಿನಕ್ಕೆ ಕಾಲಿಟ್ಟಿದೆ. ಇಂದು ರೈತಸಂಘದ ಮುಖಂಡರೊಂದಿಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಿ ಧರಣಿ ಅಂತ್ಯಗೊಳಿಸಲಿದೆ. ಚಂಡೀಗಢದಲ್ಲಿ ಸಂಜೆ 6 ಗಂಟೆಗೆ ಚರ್ಚೆ ನಿಗದಿಯಾಗಿದೆ. ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಷ್ ಗೋಯಲ್ ಮತ್ತು ನಿತ್ಯಾನಂದ ರೈ ಅವರು ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಚರ್ಚೆಯಲ್ಲಿ…
ಮಣಿಪುರದಲ್ಲಿ ಮತ್ತೆ ಸಂಘರ್ಷ. ಕಾಕ್ಚಿಂಗ್ ಜಿಲ್ಲೆಯಲ್ಲಿ ಬಿಎಸ್ ಎಫ್ ಯೋಧರ ಮೇಲೆ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿಕೋರರು ಅನಿರೀಕ್ಷಿತವಾಗಿ ಬಿಎಸ್ ಎಫ್ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಮೂರು ದಿನಗಳಿಂದ ಈ ಪ್ರದೇಶದಲ್ಲಿ ದಾಳಿ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚುರಾಚಂದ್ ಪುರ ಮತ್ತು ಚಂದೇಲ್ ನ ಗಡಿಭಾಗದಲ್ಲಿರುವ ಪ್ರಕ್ಷುಬ್ಧ ಪ್ರದೇಶವಾದ ಸುಗ್ನು ಎಂಬಲ್ಲಿ ಶನಿವಾರ ಈ ಘಟನೆ ನಡೆದಿದೆ. ಹಿಮಾಚಲ ಮೂಲದ ಹೆಡ್ ಕಾನ್ ಸ್ಟೆಬಲ್ ಸೋಮ್ ದತ್ (45) ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ. ದತ್ ಅವರ ಎಡ ಭುಜಕ್ಕೆ ಗುಂಡು ತಗುಲಿದ್ದು, ಇಂಫಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾಯದಿಂದ ಪಾರಾಗುವ ಸೂಚನೆ ಸಿಕ್ಕಿದೆ.
ಪ್ರಾಣಾಪಾಯದಿಂದ ಸ್ಪಲ್ಪದರಲ್ಲಿ ಪಾರಾದ ನಟಿ ರಶ್ಮಿಕಾ ಮಂದಣ್ಣ. ರಶ್ಮಿಕಾ ಮಂದಣ್ಣ ಹಾಗೂ ಶ್ರದ್ಧಾದಾಸ್ ಅವರುಗಳು ಮುಂಬೈ ವಿಮಾನ ನಿಲ್ದಾಣದಿಂದ ಹೈದರಾಬಾದ್ ಗೆ ಪ್ರಯಾಣ ಬೆಳೆಸಿದ್ದರು. ವಿಮಾನ ಟೇಕ್ ಆಫ್ ಆದ ಬಳಿಕ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ವಿಮಾನ ನಿಲ್ದಾಣವನ್ನು ತುರ್ತು ಭೂಸ್ಪರ್ಷ ಮಾಡಲಾಗಿದೆ. ತಮ್ಮ ಹಾಗೂ ಶ್ರದ್ಧಾದಾಸ್ ರ ಕೆಲವು ಚಿತ್ರಗಳನ್ನು ರಶ್ಮಿಕಾ ಮಂದಣ್ಣ ಹಂಚಿಕೊಂಡಿದ್ದು, ‘ಇಂದು ಹೀಗೆ ಮಾಡಿ ನಾವು ಪ್ರಾಣಾಪಾಯದಿಂದ ಪಾರಾದೆವು’ ಎಂದಿದ್ದಾರೆ ರಶ್ಮಿಕಾ. ತುರ್ತು ಭೂಸ್ಪರ್ಷದ ವೇಳೆ ವಿಮಾನ ಸಿಬ್ಬಂದಿ ನೀಡಿದ ಸೂಚನೆಯಂತೆ, ರಶ್ಮಿಕಾ ಹಾಗೂ ಶ್ರದ್ಧಾ ತಮ್ಮ ಕಾಲುಗಳಿಂದ ಎದುರಿನ ಸೀಟ್ ನ ಹಿಂಬದಿಯನ್ನು ಜೋರಾಗಿ ಒತ್ತಿ ಹಿಡಿದುಕೊಂಡಿದ್ದಾರೆ. ಈ ಚಿತ್ರವನ್ನು ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಫ್ರೀಕ್ವೆಂಟ್ ಟ್ರಾವೆಲರ್ ಆಗಿದ್ದಾರೆ. ಹೈದರಾಬಾದ್, ಮುಂಬೈ, ಚೆನ್ನೈ ಹಾಗೂ ಬೆಂಗಳೂರಿಗೆ ಪದೇ ಪದೇ ಓಡಾಡುತ್ತಲೇ ಇರುತ್ತಾರೆ. ಹೈದರಾಬಾದ್ನಲ್ಲಿ ಮನೆ ಹೊಂದಿರುವ ರಶ್ಮಿಕಾ, ಬಾಲಿವುಡ್, ಕಾಲಿವುಡ್ಗಳಲ್ಲಿಯೂ ಕೆಲಸ ಮಾಡುತ್ತಿರುವ ಕಾರಣ ಮುಂಬೈ, ಚೆನ್ನೈಗಳಿಗೆ…
ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಹ್ರೈಚ್ ನಲ್ಲಿ 50 ವರ್ಷದ ವ್ಯಕ್ತಿಯೊಬ್ಬ ಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಮಗುವನ್ನು ಮೊದಲು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಅದರ ಸ್ಥಿತಿ ಸ್ಥಿರವಾಗಿದ್ದರೂ, ಮಕ್ಕಳ ವೈದ್ಯರಿಂದ ಸಂಪೂರ್ಣ ಪರೀಕ್ಷೆಗಾಗಿ ಲಕ್ನೋಗೆ ಕಳುಹಿಸಲಾಗಿದೆ ಎಂದು ಶುಕ್ಲಾ ಹೇಳಿದರು. ಘಟನೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಅನೇಕ ಜನರಿಗೆ ಮಾಂಸ ಅಂದ್ರೆ ಬಹಳ ಇಷ್ಟ. ಇದರಲ್ಲಿ ಪ್ರೊಟೀನ್, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಸತುವಿನಂತಹ ಅನೇಕ ಪೋಷಕಾಂಶಗಳು ಹೇರಳವಾಗಿರುತ್ತದೆ. ಇದೀಗ ವಿಜ್ಞಾನಿಗಳು ಪೂರ್ತಿಯಾಗಿ ಮಾಂಸದ್ದೇ ರುಚಿಯನ್ನು ಹೊಂದಿರುವ ಅಕ್ಕಿಯನ್ನು ತಯಾರಿಸಿದ್ದಾರೆ. ನೀವು ಇದನ್ನು ಬಿರಿಯಾನಿಯಂತೆ ತಿನ್ನಬಹುದು. ಇದು ಇದ್ದರೆ ಮಟನ್, ಚಿಕನ್ ನ ಅಗತ್ಯನೇ ಇಲ್ಲ. ಇದರ ರುಚಿಯೂ ಅದ್ಭುತವಾಗಿದೆ. ಇದರಲ್ಲಿ ಪ್ರೋಟಿನ್ ಮತ್ತು ಕೊಬ್ಬು ಕೂಡ ಅಧಿಕವಾಗಿದೆ ಎಂದು ಹೇಳಲಾಗಿದೆ. ದಕ್ಷಿಣ ಕೊರಿಯಾದ ಯೋನ್ಸೆ ವಿಶ್ವವಿದ್ಯಾಲಯದ ವಿಜ್ಞಾನಿಗಳು ಈ ಹೈಬ್ರಿಡ್ ಅಕ್ಕಿಯನ್ನು ಪ್ರಯೋಗಾಲಯದಲ್ಲಿ ಸಿದ್ಧಪಡಿಸಿದ್ದಾರೆ. ಇದಕ್ಕೆ ಅನೇಕ ರೀತಿಯ ಮಾಂಸವನ್ನು ಸೇರಿಸಲಾಗಿದೆ. ಇದು ನೋಡಲು ಸಾಮಾನ್ಯ ಅಕ್ಕಿಯಂತೆ ಇದ್ದರೂ ರುಚಿ ಮಾತ್ರ ಸಾಮಾನ್ಯ ಮಾಂಸಕ್ಕಿಂತಲು ಹೆಚ್ಚಾಗಿರುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಇದು 11 ದಿನಗಳ ದಿನಗಳವರೆಗೆ ಸಂಗ್ರಹಿಸಲು ಯೋಗ್ಯವಾಗಿದ್ದು, ಮಾಂಸದ ಅಕ್ಕಿಯ ಉತ್ಪಾದನಾ ವಿಧಾನವು ಸರಳವಾಗಿದೆ ಎಂದು ತಿಳಿಸಿದ್ದಾರೆ. ಆದಷ್ಟು ಬೇಗ ಮಾಂಸದ ಅಕ್ಕಿ ಮಾರುಕಟ್ಟೆಗೆ ಬರಲೆಂದು ಮಾಂಸಪ್ರಿಯರು ಆಶಿಸುತ್ತಿದ್ದಾರೆ.
ಭೋಪಾಲ್: ಗರ್ಭಿಣಿ ಮಹಿಳೆಯನ್ನೂ ಬಿಡದ ಕಾಮುಕರು. ಗರ್ಭಿಣಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈಯಲು ಯತ್ನಿಸಿದ ಭೀಕರ ಘಟನೆ ಮಧ್ಯಪ್ರದೇಶದ ಮೊರೇನಾ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತೆಯ ಪತಿ ಸುರೇಶ್ ಸಂಖ್ವಾರ್ ಮೊರೆನಾ ಜಿಲ್ಲೆಯ ಅಂಬಾಹ್ ಪಟ್ಟಣದ ಚಾಂದ್ಪುರದ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ. ಆಕೆ ಮದುವೆ ವಿಷಯ ಪ್ರಸ್ತಾಪಿಸಿದಾಗ ಸುರೇಶ್ ಅದನ್ನು ನಿರಾಕರಿಸಿದ್ದ. ಹಾಗಾಗಿ ಮಹಿಳೆ ಪತಿ ಮೇಲೆ ಅತ್ಯಾಚಾರ ಆರೋಪ ಹೊರಿಸಿದ್ದಳು. ತನ್ನ ಪತಿ ಮಾಡಿದ ಅತ್ಯಾಚಾರಕ್ಕೆ ಮಾತನಾಡಿ ಸಂಧಾನ ನಡೆಸಲು ಆರೋಪಿಗಳ ಮನೆಗೆ ತೆರಳಿದ್ದರು. ಈ ವೇಳೆ 38 ವರ್ಷದ ಸಂತ್ರಸ್ಥೆಯ ಮೇಲೆ ಅಲ್ಲಿನ ಮೂವರು ಆರೋಪಿಗಳು ಅತ್ಯಾಚಾರ ಮಾಡಿದ್ದಾರೆ. ಮಹಿಳೆಗೆ ಶೇ.80 ರಷ್ಟು ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯ ಪತಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಸ್ಥಳೀಯ ಮ್ಯಾಜಿಸ್ಟ್ರೇಟ್ ಬಳಿ ಸಂಸ್ತ್ರಸ್ತೆ ಹೇಳಿಕೆ ದಾಖಲಿಸಿದ್ದಾರೆ. ಪೊಲೀಸರು ಈವರೆಗೆ ಹೇಳಿಕೆ ದಾಖಲಿಸಿಲ್ಲ. ಆದ್ರೆ ತನಿಖೆ ಮುಂದುವರಿಸುತ್ತಿದ್ಧಾರೆ…
ಶಾಲೆಯ ಮೆಟ್ಟಿಲು ಹತ್ತಿ ಆಟ-ಪಾಠಗಳನ್ನು ಕಲಿಯಬೇಕಾದ ಪ್ರಾಯದಲ್ಲಿಯೇ ಹಿಂದಿನ ಕಾಲದಲ್ಲಿ ಹುಡುಗ – ಹುಡುಗಿಗೆ ಮದುವೆ ಮಾಡಿಸಲಾಗುತ್ತಿತ್ತು.ಆದರೆ ಅಂತಹ ಅನಿಷ್ಟ ಪದ್ಧತಿಗೆ ಬ್ರೇಕ್ ಹಾಕಲಾಗಿದೆ. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಇದು ಸಂಪೂರ್ಣ ನಿಯಂತ್ರಣ ಬಂದಿಲ್ಲ ಅನ್ನೋದಕ್ಕೆ ಈ ಘಟನೆಯೇ ಇದೀಗ ಸಾಕ್ಷಿಯಾಗಿದೆ. ಹೌದು, ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ. ಇಂತಹದ್ದೆ ಒಂದು ಘಟನೆ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ತಂದೆ ತಾಯಿಗೆ ಮಾಹಿತಿಯನ್ನು ನೀಡದ ಅಪ್ರಾಪ್ತ ಬಾಲಕಿಯನ್ನು ಆಕೆಯ ದೊಡ್ಡಪ್ಪ ದೊಡ್ಡಮ್ಮ ಯುವಕನೊಂದಿಗೆ ಮದುವೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ ಯುವತಿ ಎಂಟನೇ ತರಗತಿಯಲ್ಲಿ ಓದುತ್ತಿದ್ದು, ಈಗ ಆಕೆಗೆ ಕೇವಲ 14 ವರ್ಷವಾಗಿದೆಯಷ್ಟೆ. ಯುವಕನಿಗೆ 24 ವರ್ಷವಾಗಿದೆ. ದೂರುದಾರ ಮಹಿಳೆಯ ಅತ್ತೆ, ಭಾವ, ಭಾವನ ಪತ್ನಿ ವಿರುದ್ದ ದೂರು ದಾಖಲು ಮಾಡಲಾಗಿದೆ. ಇದೇ ತಿಂಗಳು 15 ರಂದು ಯುವತಿಯ ಅಜ್ಜಿ, ದೊಡ್ಡಪ್ಪ-ದೊಡ್ಡಮ್ಮ…
ಇಂಡೋ -ಗಲ್ಫ್ ಇಂಟರ್ ನ್ಯಾಷನಲ್ ಥ್ರೋಬಾಲ್ ಕೂಟದಲ್ಲಿ ಪಾಲ್ಗೊಳ್ಳಲು ಭಾರತ ಮಹಿಳಾ ತಂಡ ಸಿದ್ಧವಾಗಿದೆ. ಫೆ.23 ರಿಂದ 25ರ ತನಕ ಬಹರೇನ್ ನಲ್ಲಿ ಕೂಟ ನಡೆಯಲಿದೆ. ಅನುಭವಿ ಆಟಗಾರ್ತಿ ಸಂಪೂರ್ಣ ಹೆಗಡೆ ನೇತೃತ್ವದಲ್ಲಿ ಭಾರತ ತಂಡ ಕಣಕ್ಕೆ ಇಳಿಯಲಿದೆ. ಫೆ.21 ರಂದು ಬೆಂಗಳೂರು ವಿಮಾನ ನಿಲ್ದಾಣದಿಂದ ಭಾರತೀಯ ತಂಡ ಬಹರೇನ್ ಗೆ ಪ್ರಯಾಣ ಬೆಳೆಸಲಿದೆ. ಭಾರತ ತಂಡ ಹೀಗಿದೆ ಸಂಪೂರ್ಣ ಹೆಗಡೆ(ನಾಯಕಿ), ಕೀರ್ತನಾ ಪರಮೇಶ್ವರನ್ , ತನಿಶಾ ಜೈನ್, ಆಯ್ಲಾ ರಚಿತಾ ವಿಜಯ್ , ಕಲ್ಪನಾ ಚಲ್ಲಾ, ಪಾವನಿ ಚೋಡಿಸೆಟ್ಟಿ, ಅನಿತಾ ವೀಣಾ, ದೀಪಾ ಹೆಬ್ಬಾರ್, ಪೃಶಾ ಉತ್ಪಲಾಕ್ಷಿ ಶ್ರೀನಿವಾಸನ್ ಎನ್.ಎಸ್. ಸುಬ್ರಮಣ್ಯ(ತರಬೇತುದಾರರು), ಡಿ.ಸಂತೋಷ್( ತೀರ್ಪುಗಾರರು), ವಿವೇಕ್ ಹೆಗಡೆ(ಮಾಧ್ಯಮ).