Subscribe to Updates
Get the latest creative news from FooBar about art, design and business.
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
Author: admin
ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಯುವರಾಜ್ ಸಿಂಗ್ ಅವರ ತಾಯಿ ತಮ್ಮ ಮನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೇ ಕಳ್ಳತನ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಸುಮಾರು 70,000 ರೂ. ನಗದು ಮತ್ತು ಚಿನ್ನಾಭರಣ ಕಾಣೆಯಾಗಿದೆ ಎನ್ನಲಾಗಿದೆ. ಯುವ ರಾಜ್ ಸಿಂಗ್ ತಾಯಿ ಶಬ್ನಮ್ ಸಿಂಗ್ ಅವರು ತಮ್ಮ ಮನೆಯಲ್ಲಿದ್ದ 70,000 ಸಾವಿರ ನಗದು ಮತ್ತು ಚಿನ್ನಾಭರಣ ಕಾಣೆಯಾಗಿದೆ ಎಂದು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಬ್ಬಂದಿಯೇ ಕಳ್ಳತನ ಮಾಡಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಸಿಬ್ಬಂದಿ ಸಾಕೇತ್ರಿಯ ಲಲಿತಾ ದೇವಿ, ಮನೆಕೆಲಸಕ್ಕಾಗಿ ಮತ್ತು ಅಡುಗೆ ಕೆಲಸಕ್ಕಾಗಿ ನೇಮಕಗೊಂಡ ಬಿಹಾರ ಮೂಲದ ವ್ಯಕ್ತಿ ಸಲೀಂದರ್ ದಾಸ್ ಕಳ್ಳತನ ಮಾಡಿರಬಹುದು ಎಂದು ಶಂಕಿಸಿದ್ದಾರೆ. 2023ರಲ್ಲಿ ಗುರುಗಾಂವ್ ನಲ್ಲಿದ್ದಾಗ ಒಂದು ತಿಂಗಳು ತಾನು ಮನೆಯಲ್ಲಿ ಇರಲಿಲ್ಲ. ಹಾಗಾಗಿ ನಮ್ಮ ಮನೆಯ ಜವಾಬ್ದಾರಿಯನ್ನು ಆರೋಪಿಗಳಾಗಿರುವ ಮನೆಗೆಲಸದವರು ನೋಡಿಕೊಳ್ಳುತ್ತಿದ್ದರು. ನಂತರ ಇಬ್ಬರು ಆರೋಪಿಗಳು ಕೆಲಸವನ್ನು…
ಪರೀಕ್ಷಾ ಭೀತಿಯಿಂದ ವಿದ್ಯಾರ್ಥಿಯೋರ್ವ ಕಟ್ಟಡದ 6ನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದ ಮಾಹೆ ವಿವಿಯಲ್ಲಿ ಫೆ.17 ರಂದು ವರದಿಯಾಗಿದೆ. ಬಿಹಾರ ಮೂಲದ ಸತ್ಯಂ ಸುಮನ್(19) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಎಂಸಿಎಚ್ ಪಿ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಎನ್ನಲಾಗಿದೆ. ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ಕಟ್ಟಡದ ಜಿಗಿದು ಸಾವಿಗೆ ಶರಣಾಗಿದ್ದಾನೆ. ಸತ್ಯಂ ಸುಮನ್ ಕಟ್ಟಡದಿಂದ ಜಿಗಿಯುತ್ತಿದ್ದಂತೆ ಇತರ ವಿದ್ಯಾರ್ಥಿಗಳು ಭಯಗೊಂಡಿದ್ದು, ವಿದ್ಯಾರ್ಥಿಗಳು ಆತಂಕದಿಂದ ಅತ್ತಿತ್ತ ಓಡಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸತ್ಯಂ ಸುಮನ್ ಎಂಸಿಎಚ್ ಪಿ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದು, ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೊಬೈಲ್ ಮೂಲಕ ಕಾಪಿ ಮಾಡುವ ವೇಳೆ ಸತ್ಯಂ ಸುಮನ್ ಸಿಕ್ಕಿಬಿದ್ದಿದ್ದಾನೆ. ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಪರೀಕ್ಷಾ ಕೊಠಡಿಯಿಂದ ಆತನನ್ನು ಪರೀಕ್ಷಾ ಉಸ್ತುವಾರಿ ಹೊರದಬ್ಬಿದ್ದಾರೆ. ಇದರಿಂದ ಮನನೊಂದು ಆತ ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಆರೋಪಗಳು ಕೇಳಿಬಂದಿವೆ. ಮಣಿಪಾಲ…
ಬೆಂಗಳೂರು: ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ ತತ್ವಗಳೇ ಸಂವಿಧಾನದ ತಳಹದಿ. ಇಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಬಾರತ ಸಂವಿಧಾನ ಹಾಗೂ ರಾಷ್ಟ್ರೀಯ ಐಕ್ಯತಾ ಸಮಾವೇಶಕ್ಕೆ ಸಂಬಂಧಿಸಿದಂತೆ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಭಾರತದ ಸಂವಿಧಾನ ಜಾರಿಗೆ ಬಂದು 75 ನೇ ವರ್ಷಕ್ಕೆ ಕಾಲಿಟ್ಟಿದೆ. 75 ನೇ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಕರ್ನಾಟಕದಾದ್ಯಂತ 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಜನವರಿ 26 ರಿಂದ ಫೆ. 23ರವರೆಗೆ ಹಮ್ಮಿಕೊಳ್ಳಲಾಗಿದೆ. ಫೆ. 24-25 ಎರಡು ದಿಗಳು ರಾಷ್ಟ್ರೀಯ ಏಕತಾ ಸಮಾವೇಶ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಸರಾಂತ ಭಾಷಣಕಾರರು, ಖ್ಯಾತ ಚಿಂತಕರಾದ ಪ್ರೊ: ಅಸುತೋಶ್ ವರ್ಶನಿ ಹಾಗೂ ಡಾ: ಗಣೇಶ್ ದೇವಿ, ಪ್ರೊ. ಜಯಂತಿ ಘೋಷ್, ಪ್ರೊ. ಸುಖದೇವ್ ಥೋರಟ್, ಪ್ರೊ, ಕಾಂಚಾ, ಪ್ರಶಾಂತ್ ಭೂಷಣ್,…
ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಸಸ್ಯಕಾಶಿ ಸಿದ್ದರ ತಪೋ ಭೂಮಿ ಆಯುರ್ವೇದಿಕ್ ದಿವ್ಯ ಔಷಧಿಗಳ ತಾಣವೆಂದು ಹೆಸರುವಾಸಿಯಾದ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ದೇವಾಲಯದ ಆವರಣದಲ್ಲಿ ಮತ್ತು ಬೆಟ್ಟದ ಮೇಲಿನ ಸಿದ್ದೇಶ್ವರ ಸ್ವಾಮಿಯ ಗುಹಾಲಯಗಳಲ್ಲಿ ಕಸದ ಬುಟ್ಟಿಗಳನ್ನು ಸ್ಪಿರೀಟ್ ಆಫ್ ಗಿವಿಂಗ್ ತಂಡದವರು ಅಳವಡಿಸಿದ್ದಾರೆ. ದೇವಾಲಯದ ಆವರಣದಲ್ಲಿ ಬಿದ್ದಿದಂತಹ ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ಬಾಟಲ್, ಕಸ ಕಡ್ಡಿ ಇತ್ಯಾದಿಗಳನ್ನು ಸ್ವಚ್ಛಪಡಿಸಿ ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ಪ್ಲಾಸ್ಟಿಕ್ ಮುಕ್ತ ಪುಣ್ಯಕ್ಷೇತ್ರ ವಾಗುವಂತೆ ಜಾಗೃತಿ ಮೂಡಿಸಿದರು. ಸ್ಪಿರೀಟ್ ಆಫ್ ಗಿವಿಂಗ್ ತಂಡ ವತಿಯಿಂದ ಮಾತನಾಡಿದ ಭವ್ಯ ಪುಣ್ಯಕ್ಷೇತ್ರಗಳು ಮತ್ತು ಪ್ರವಾಸಿ ತಾಣಗಳಲ್ಲಿ ಪರಿಸರವನ್ನು ಅತ್ಯಂತ ಸ್ವಚ್ಛವಾಗಿ ಇಡಬೇಕಾಗಿರೋದು ಎಲ್ಲರ ಕರ್ತವ್ಯವಾಗಿರುತ್ತದೆ. ಪ್ಲಾಸ್ಟಿಕ್ ಕವರ್ ಮತ್ತು ಪ್ಲಾಸ್ಟಿಕ್ ಬಾಟಲ್ ಗಳು ಮಣ್ಣಿನಲ್ಲಿ ಕೊಳೆಯುವ ವಸ್ತುಗಳಲ್ಲಿ ಅದರಿಂದ ಪಶು ಪ್ರಾಣಿ ಪಕ್ಷಿಗಳ ಜೀವ ಹಾನಿ ಆಗುವುದು ಹೆಚ್ಚಾಗುತ್ತಿದ್ದು ಬುದ್ದುವಂತರಾದ ನಾವುಗಳು ತುಂಬಾ ಎಚ್ಚರವಹಿಸಬೇಕಿದೆ ಎಂದರು. ವರದಿ: ಮಂಜುಸ್ವಾಮಿ…
ತುಮಕೂರು: ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ಮಲಗೋನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೋಂದಣಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಹಕಾರಿ ತತ್ವಗಳಿಗೆ ವಿರುದ್ಧವಾಗಿ ಗ್ರಾಮ ಸಭೆ ನಡೆಸಲಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದ್ದು, ಅಧಿಕಾರಿಗಳ ಏಕಪಕ್ಷೀಯ ನಿರ್ಧಾರದಿಂದಾಗಿ ಎರಡು ಮೂರು ತಂಡಗಳಾಗಿ ವಿಂಗಡನೆಯಾಗಿರುವ ಸದಸ್ಯರ ನಡುವೆ ಜಟಾಪಟಿ ನಡೆದ ಘಟನೆ ನಡೆದಿದೆ. ನರಸಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಉಪ ಕೇಂದ್ರ ಮಲಗೋನಹಳ್ಳಿ ಗ್ರಾಮದಲ್ಲಿ ಕಾನೂನು ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ ಇಲ್ಲಿ ಒಂದು ಹಾಲು ಉತ್ಪಾದಕರ ಸಹಕಾರಿ ಸಂಘವನ್ನು ನೋಂದಣಿ ಮಾಡಿಸಲು ಒಂದು ತಂಡ ಪ್ರಯತ್ನಿಸುತ್ತಿದ್ದು, ರಾಜಕೀಯ ಕಾರಣಗಳಿಂದ ಈಗಾಗಲೇ ಎರಡು ಮೂರು ತಂಡಗಳಾಗಿ ವಿಂಗಡನೆಯಾಗಿರುವ ಗ್ರಾಮಸ್ಥರ ನಡುವೆ ಇದು ಅಶಾಂತಿ ಸೃಷ್ಟಿಗೆ ಕಾರಣವಾಗಿದೆ. ಕಾನೂನು ಬಾಹಿರವಾಗಿ ಹಾಲು ಉತ್ಪಾದಕರ ಸಹಕಾರಿ ಸಂಘದ ನೋಂದಣಿ ಮಾಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ವಿಚಾರ ತಿಳಿದು ಗ್ರಾಮಸ್ಥರು ಸಂಬಂಧಪಟ್ಟ ಕೆಎಂಎಫ್ ತುಮುಲ್ ಅಧಿಕಾರಿಗಳಿಗೆ ಹಾಗೂ ಸಹಕಾರಿ ಸಂಘಗಳ ನೋಂದಣಿ ಅಧಿಕಾರಿಗಳಿಗೆ ಈ ವಿಚಾರವಾಗಿ ಹಲವು…
ನವದೆಹಲಿ: ದೆಹಲಿಯಲ್ಲಿ ಶನಿವಾರ ನಡೆಯುತ್ತಿರುವ ಬಿಜೆಪಿಯ ರಾಷ್ಟ್ರೀಯ ಸಮಾವೇಶದ ನಡೆದಿದ್ದು ಪ್ರಧಾನಿ ನರೇಂದ್ರ ಮೋದಿ ಜನರಿಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಬಿಜೆಪಿಗೆ 370 ಕೇವಲ ಒಂದು ಅಂಕಿ ಅಂಶವಲ್ಲ, ಮುಂಬರುವ ಲೋಕಸಭೆ ಚುನಾವಣೆಯಲ್ಲಿಜಯ ಸಾಧಿಸುವ ಗುರಿಯನ್ನು ಇಡಬೇಕು ಆದರೆ ಇದು ಕೇಸರಿ ಸಿದ್ಧಾಂತಕ್ಕೆ ಗೌರವ ಸಲ್ಲಿಸುವ ಮಾರ್ಗವಾಗಿದೆ ಎಂದರು. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವು ಕಳೆದುಕೊಂಡ 161 ಸ್ಥಾನಗಳನ್ನು ಪರಿಗಣಿಸಿ, ನಾಯಕರು ಖುದ್ದಾಗಿ ಭೇಟಿ ನೀಡಿ ಸಾರ್ವತ್ರಿಕ ಚುನಾವಣೆಗೆ ಮುನ್ನ ಸುಮಾರು 430 ಸ್ಥಾನಗಳಲ್ಲಿ ಆಸರೆಯಾಗಿದ್ದಾರೆ ಎಂದು ನಡ್ಡಾ ಸಮಾವೇಶದಲ್ಲಿ ಹೇಳಿದರು. ಈ ಬಾರಿ ಈ ಎಲ್ಲಾ ಸ್ಥಾನಗಳಲ್ಲಿ ತಮ್ಮ ಪಕ್ಷ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಹಿಳೆಯರು ಬಿಜೆಪಿಗೆ ಕೇವಲ ಮತದಾರರಲ್ಲ, ಆದರೆ ಎನ್ಡಿಎ ಸರ್ಕಾರವು ಅವರಿಗೆ ಮಾಡಿದ ಕೆಲಸವನ್ನು ಬೆಂಬಲಿಸುವ ಮತ್ತು ಅಂಗೀಕರಿಸುವ ಮೂಲಕ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಮೇಲೆ ಚುನಾವಣಾ ಆಶೀರ್ವಾದವನ್ನು ನೀಡುವ ‘ತಾಯಿ ಮತ್ತು ಸಹೋದರಿಯರು’ ಎಂದು ಪ್ರಧಾನಿ…
ಬೆಂಗಳೂರು: ಸಂವಿಧಾನವೇ ನಮ್ಮ ಧರ್ಮ ಗ್ರಂಥ, ಬಿಜೆಪಿಯವರು ಹಾಗೂ ಹಿಂದುತ್ವವಾದಿಗಳು ಹೇಳುವ ಗ್ರಂಥ ನಮ್ಮದಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಭಾರತ ಸಂವಿಧಾನ ಹಾಗೂ ಐಕ್ಯತಾ ಸಮಾವೇಶಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ ಅವರು, ಸಂವಿಧಾನದಲ್ಲಿ ಕೆಲವರಿಗೆ ನಂಬಿಕೆ, ಗೌರವ ಇಲ್ಲ. ಅವರಿಗೆ ಸಂವಿಧಾನದ ಬಗ್ಗೆ ಗೊತ್ತಿಲ್ಲ ಅಂತೇನಿಲ್ಲ, ಗೊತ್ತಿದ್ದೂ ದಾರಿ ತಪ್ಪಿಸುತ್ತಿದ್ದಾರೆ. ಯಾರು ದಾರಿ ತಪ್ಪಿಸುತ್ತಿದ್ದಾರೆ ಎಂದು ನನ್ನ ಬಾಯಿಯಿಂದ ಹೇಳಿಸಬೇಡಿ ಎಂದಿದ್ದಾರೆ. ಶುಕ್ರವಾರ ಮಂಡನೆಯಾದ ಬಜೆಟ್ನ ಮೊದಲ ಪುಟದಲ್ಲೇ ಸಂವಿಧಾನದ ಪೀಠಿಕೆಯಲ್ಲಿ ಹಾಕಿಸಲಾಗಿದೆ. ಇದು ಇತಿಹಾಸಲ್ಲೇ ಮೊದಲ ಬಾರಿಗೆ ಬಜೆಟ್ನಲ್ಲಿ ಸಂವಿಧಾನದ ಪೀಠಿಕೆ ಉಲ್ಲೇಖ ಆಗಿರುವುದು. ಜನರಿಗೆ ಸಂವಿಧಾನದ ಮಹತ್ವ ಅರ್ಥ ಆಗಬೇಕು. 75 ವರ್ಷ ಆದರೂ ಇನ್ನೂ ಕೂಡ ಎಲ್ಲರಿಗೂ ಸಂವಿಧಾನದ ಹಕ್ಕುಗಳು ಸಿಕ್ಕಿಲ್ಲ. ಸಂವಿಧಾನಕ್ಕೆ ಯಾರೇ ಧಕ್ಕೆ ತರುವ ಪ್ರಯತ್ನ ಮಾಡಿದ್ರೂ ಜನರು ಅದನ್ನು ವಿಫಲಗೊಳಿಸಬೇಕು ಎಂದಿದ್ದಾರೆ. ರಾಜಕೀಯ, ಸಾಮಾಜಿಕ ಅಸಮಾನತೆ ಇನ್ನೂ ಹೋಗಿಲ್ಲ, ಎಲ್ಲರೂ ಎಚ್ಚೆತ್ತುಕೊಳ್ಳಬೇಕು. ಜಾಗೃತಿ ಎಲ್ಲರಲ್ಲೂ ಬರಬೇಕು. ಸಂವಿಧಾನ ಏನ್ ಹೇಳುತ್ತೆ ಎಂದು ಎಲ್ಲರಿಗೂ…
ಇರಾನ್: ಕೌಟುಂಬಿಕ ಕಲಹದಿಂದಾಗಿ ಸಂಬಂಧಿಕರ ಮೇಲೆಯೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಘಟನೆ ಆಗ್ನೇಯ ಇರಾನ್ ನ ದೂರದ ಗ್ರಾಮೀಣ ಪ್ರದೇಶದಲ್ಲಿ ನಡೆದಿದೆ. 30 ವರ್ಷದ ವ್ಯಕ್ತಿಯೊಬ್ಬ ತನ್ನ 12 ಸಂಬಂಧಿಕರ ಮೇಲೆ ಗುಂಡು ಹಾರಿಸಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬಂದೂಕುಧಾರಿಯಾದವ ತನ್ನ ತಂದೆ, ಸಹೋದರ ಮತ್ತು ಇತರ ಸಂಬಂಧಿಕರ ಮೇಲೆ ಮುಂಜಾನೆ ಗುಂಡು ಹಾರಿಸಿದ್ದಾನೆ ಎಂದು ಕೆರ್ಮನ್ ಪ್ರಾಂತ್ಯದ ನ್ಯಾಯಾಂಗ ವಿಭಾಗದ ಮುಖ್ಯಸ್ಥ ಇಬ್ರಾಹಿಂ ಹಮೀದಿ ಅರೆ ತಿಳಿಸಿದ್ದಾರೆ.
ತಮಿಳುನಾಡು: ಪಟಾಕಿ ಘಟಕದ ವಿನ್ನರ್ ನಲ್ಲಿ ಇಂದು ಹಠಾತ್ ಸ್ಫೋಟ ಸಂಭವಿಸಿದ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮುತೇವನ ಪಟ್ಟಿಯಲ್ಲಿ ನಡೆದಿದೆ. ಈ ಘಟಕವನ್ನು ವಿಜಯ್ ಒಡೆತನದ ಖಾಸಗಿ ಪಟಾಕಿ ಕಾರ್ಖಾನೆ ಎಂದು ಹೇಳಲಾಗಿದೆ. ಈ ಸ್ಫೋಟದಿಂದ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿದ್ದ ಕಾರ್ಮಿಕರನ್ನು ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಫೋಟದ ಬಳಿಕ ಹೊತ್ತಿ ಉರಿಯುತ್ತಿರುವ ಪಟಾಕಿ ತಯಾರಿಕಾ ಕಾರ್ಖಾನೆ ಬೆಂಕಿ ನಂದಿಸಲು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದಾರೆ. ಇದರ ಒಳಗೆ ಸಿಕ್ಕಿಕೊಂಡಿರುವ ಕಾರ್ಮಿಕರನ್ನು ರಕ್ಷಣೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಉತ್ತರ ಕನ್ನಡ: ಟೋಲ್ ಸಿಬ್ಬಂದಿಯಿಂದ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹೊಳೆಗದ್ದೆ ಟೋಲ್ ನಲ್ಲಿ ನಡೆದಿದೆ. ಟೋಲ್ ನಲ್ಲಿ ಫಾಸ್ಟ್ ಟ್ಯಾಗ್ ತಾಂತ್ರಿಕ ಸಮಸ್ಯೆಯಿಂದ ಪ್ರಯಾಣಿಕರು ಮತ್ತು ಟೋಲ್ ಸಿಬ್ಬಂದಿಗಳ ನಡುವೆ ಜಗಳವಾಗಿದ್ದು, ಈ ವೇಳೆ ರೊಚ್ಚಿಗೆದ್ದ ಟೋಲ್ ಸಿಬ್ಬಂದಿ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿ ವಾಹನದ ಗ್ಲಾಸ್ ಪುಡಿ ಮಾಡಿದ್ದಾನೆ. ಮಹಿಳೆ ಹಾಗೂ ಓರ್ವ ಪುರುಷನಿಗೆ ಗಾಯವಾಗಿದ್ದು, ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ. ಮಂಗಳೂರು ನಗರದ ಪಲ್ನೀರಿನ ಮುಜೀಜ್ ಎಂಬಾತನ ಕುಟುಂಬ, ಮಂಗಳೂರಿನಿಂದ ಕುಮಟಾ ಮಾರ್ಗವಾಗಿ ಗದಗದ ಲಕ್ಷ್ಮೀಶ್ವರಕ್ಕೆ ಹೋಗುತಿದ್ದರು. ಈ ವೇಳೆ ಕುಮಟಾ ಟೋಲ್ ಗೇಟ್ ನಲ್ಲಿ ಫಾಸ್ಟ್ ಟ್ಯಾಗ್ ನಿಂದ ಹಣ ಕಡಿತವಾಗದೇ ಸಮಸ್ಯೆಯಾದಾಗ, ಗಲಾಟೆಯಾಗಿದ್ದು, ಮಾತಿಗೆ ಮಾತು ಬೆಳೆದು ಸಹ ಸಿಬ್ಬಂದಿ ಮಜೀಜ್ ಸೈಯದ್ ರವರ ಕಾರಿನ ಗಾಜು ಪುಡಿ ಮಾಡಿದ್ದಲ್ಲದೆ, ಮಹಿಳೆಯರ ಮೇಲೆ ಸಹ ಹಲ್ಲೆ ಮಾಡಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.