Subscribe to Updates
Get the latest creative news from FooBar about art, design and business.
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
Author: admin
ಬೆಂಗಳೂರು: ಮಳಿಗೆಗಳ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಬಳಸದ 18 ಉದ್ದಿಮೆಗಳನ್ನು ತಾತ್ಕಾಲಿಕವಾಗಿ ಬಿಬಿಎಂಪಿ ವತಿಯಿಂದ ಮುಚ್ಚಿಸಲಾಗಿದೆ. ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ರೆಸಿಡೆನ್ಸಿ ರಸ್ತೆಯಲ್ಲಿ ಇದುವರೆಗೆ 200ಕ್ಕೂ ಹೆಚ್ಚು ವಾಣಿಜ್ಯ ಮಳಿಗಳನ್ನು ಪರಿಶೀಲಿಸಲಾಗಿದ್ದು, ಈ ಪೈಕಿ 170ಕ್ಕೂ ಹೆಚ್ಚು ಮಳಿಗೆಗಳಲ್ಲಿ ಈಗಾಗಲೇ ಕನ್ನಡ ನಾಮಫಲಕಗಳನ್ನು ಅಳವಡಿಸಿಕೊಂಡಿರುತ್ತಾರೆ. ಇನ್ನು ಕನ್ನಡ ನಾಮಫಲಕ ಅಳವಡಿಸದೇ ಇರುವ ಮಳಿಗೆಗಳ ಮಾಲೀಕರಿಗೆ ಅಂತಿಮ ತಿಳುವಳಿಕೆ ಪತ್ರ ನೀಡಿ, ಕೂಡಲೇ ನಾಮಫಲಕ ಬದಲಾಯಿಸಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಬ್ರಿಗೇಡ್ ರಸ್ತೆ, ಎಂ.ಜಿ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್ ಗಳಲ್ಲಿ ಕನ್ನಡ ನಾಮಫಲಕ ಬಳಸದ ಅಂಗಡಿಗಳಿಗೆ ಬಿಬಿಎಂಪಿ ಪೂರ್ವ ವಲಯದ ಸಿಬ್ಬಂದಿ ಎಚ್ಚರಿಕೆ ನೀಡಿದರು. ಈಗಿರುವ ನಾಮಫಲಕಗಳಲ್ಲಿ ಇಂಗ್ಲಿಷ್ ಅಕ್ಷರಗಳನ್ನು ಮುಚ್ಚಿ, ಕನ್ನಡವನ್ನು ಚಿಕ್ಕದಾಗಿ ಕಾಣುವಂತೆ ಕೆಲವು ಮಾಡಿದ್ದಾರೆ. ಇದು ಸರಿಯಲ್ಲ. ಶೇ 60ರಷ್ಟು ಕನ್ನಡ ಇರಲೇಬೇಕು ಎಂದು ಮಳಿಗೆಯವರಿಗೆ ತಾಕೀತು ಮಾಡಿದರು.
ಕರೆಂಟ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ 7 ಕಾರುಗಳು ಸಂಪೂರ್ಣ ಭಸ್ಮವಾಗಿರುವ ಘಟನೆ ಶಿವಮೊಗ್ಗದ ಶಂಕರಮಠ ರಸ್ತೆಯಲ್ಲಿರುವ ರಾಹುಲ್ ಹ್ಯೂಂಡಾಯ್ ಕಾರ್ ಶೋ ರೂಂನಿಂದ ವರದಿಯಾಗಿದೆ. ಪರಿಣಾಮ ಲಕ್ಷಾಂತರ ರೂ. ಮೌಲ್ಯವ ಕಾರು ಮತ್ತು ಇತರೆ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಒಟ್ಟು 7 ಕಾರುಗಳು ಬೆಂಕಿಗೆ ಆಹುತಿಯಾಗಿದೆ. ರಾತ್ರಿ 10 ಗಂಟೆಗೆ ಅಗ್ನಿ ಅವಘಡ ಸಂಭವಿಸಿದ್ದು, ಶೋ ರೂಂ ನಲ್ಲಿದ್ದ ಹೊಸ ಕಾರುಗಳು ಹಾಗೂ ಸರ್ವಿಸ್ ಗೆ ಬಂದಿದ್ದ ಲಕ್ಷಾಂತರ ರೂ. ಮೌಲ್ಯದ ಕಾರುಗಳು ಪೂರ್ಣ ಬೆಂಕಿಗೆ ಆಹುತಿಯಾಗಿರುವುದಾಗಿ ತಿಳಿದು ಬಂದಿದೆ. ಶೋ ರೂಂನ ಮೇಲ್ಛಾವಣಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ, ಶೋ ರೂಂ ಸಿಬ್ಬಂದಿ, ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಬೆಂಕಿ ಜೋರಾಗಿದ್ದು, ಪಕ್ಕದ ಸೋನಾ ಹೊಂಡಾ ಶೋ ರೂಂಗೂ ಬೆಂಕಿ ತಗುಲಿದ್ದು, ಕೂಡಲೇ ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸಿದ್ದಾರೆ. ವಿಷಯ ತಿಳಿದು ದೊಡ್ಡ ಸಂಖ್ಯೆಯ ಜನರು ಶೋ ರೂಂ ಬಳಿ ಜಮಾಯಿಸಿದರು.…
ರಾಮನಗರ: ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್ಟೇಬಲ್ ಮೃತದೇಹ ಪತ್ತೆಯಾಗಿದೆ. ಬೆಂಗಳೂರು ನಗರ ವ್ಯಾಪ್ತಿಯ ಪೋಲಿಸ್ ಠಾಣೆಯಲ್ಲಿ ಕೆಲಸ ಮಾಡುತಿದ್ದ ಮಹಿಳಾ ಕಾನ್ ಸ್ಟೇಬಲ್ ಮಂಜುಶ್ರೀ(27) ಆತ್ಮಹತ್ಯೆ ಮಾಡಿಕೊಂಡವರು. ಮಂಜುಶ್ರೀ ಅವರು ಹಾರೋಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ದ್ಯಾವಸಂದ್ರ ಗ್ರಾಮದ ನಿವಾಸಿಯಾಗಿದ್ದು, ಬೆಂಗಳೂರಿನ ಮೈಕೋ ಲೇಔಟ್ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಆಗಿದ್ದಾರೆ. ಅವರು ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ. ಮಾಡಿಕೊಂಡಿದ್ದು, ಸಾವಿಗೆ ಕಾರಣವೇನು ಎಂದು ತಿಳಿದುಬಂದಿಲ್ಲ. ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ. ಪ್ರಕರಣ ದಾಖಲಾಗಿದೆ. ಮಂಜುಶ್ರೀ ಅವರದು ಬಡ ಕುಟುಂಬವಾಗಿದ್ದು, ಉತ್ತಮ ಬದುಕನ್ನು ಅರಸಿ ಪೊಲೀಸ್ ಕಾನ್ಸ್ಟೇಬಲ್ ಆಗಿದ್ದರು. ಮನೆಗೆ ಆಸರೆಯಾಗಿದ್ದರು. ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಅವರು ಊರಿನ ಮನೆಗೆ ಬಂದು ಪ್ರಾಣ ಕಳೆದುಕೊಂಡಿದ್ದಾರೆ. ಮೃದು ಸ್ವಭಾವದ ಈಕೆ ಯಾವುದೋ ಕಾರಣದಿಂದ ನೊಂದು ಈ ಕೃತ್ಯಕ್ಕೆ ಮುಂದಾಗಿರಬಹುದು ಎಂದು ಹೇಳಲಾಗಿದೆ. ಕೆಲ ದಿನಗಳಿಂದ ಕೆಲಸಕ್ಕೆ ರಜೆ ಹಾಕಿದ್ದ ಮಂಜುಶ್ರೀ ನಿನ್ನೆ ರಾತ್ರಿ…
ಪ್ರೇಮ ವಿವಾಹಗಳಿಗೆ ಹೆಸರುವಾಸಿಯಾಗಿರುವ ಮಹಾರಾಷ್ಟ್ರದ ಗ್ರಾಮವೊಂದು ಈಗ ಎಲ್ಲರಿಗೂ ಅಚ್ಚರಿಯ ತಾಣವಾಗಿದೆ. ಚಂದ್ರಾಪುರದ ಕಾರಂಜಿ ಗ್ರಾಮ ಪ್ರೇಮ ವಿವಾಹಗಳಿಗೆ ಹೆಸರುವಾಸಿಯಾಗಿದೆ. ಕಾರಂಜಿ ಗ್ರಾಮದಲ್ಲಿ ಕಳೆದ ನಾಲ್ಕು ದಶಕಗಳಲ್ಲಿ 200ಕ್ಕೂ ಹೆಚ್ಚು ಪ್ರೇಮ ವಿವಾಹಗಳು ನಡೆದಿವೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ್ ವಡೆತ್ತಿವಾರ್ ಕೂಡ ಇದೇ ಗ್ರಾಮದ ನಿವಾಸಿ. ಅವರದ್ದೂ ಕೂಡ ಪ್ರೇಮ ವಿವಾಹ ಎನ್ನುತ್ತಾರೆ ಗ್ರಾಮಸ್ಥರು. 11 ಸದಸ್ಯ ಬಲದ ಗ್ರಾ.ಪಂ.ನಲ್ಲಿ ಸರ್ಪಂಚ್, ಉಪ ಸರ್ ಪಂಚ್ ಸೇರಿದಂತೆ ಆರು ಮಂದಿ ಪ್ರೇಮ ವಿವಾಹವಾಗಿದ್ದಾರೆ. ನಾವು ಅದೆಷ್ಟೇ ಆಧುನಿಕತೆಗೆ ಒಗ್ಗಿಕೊಂಡರೂ ಕೂಡ ಹಲವೆಡೆ ಇಂದಿಗೂ ಪ್ರೇಮ ವಿವಾಹಗಳಿಗೆ ಸಾಮಾಜಿಕ ಮನ್ನಣೆ ಸಿಗುತ್ತಿಲ್ಲ. ಆದರೆ, ಚಂದ್ರಾಪುರ ಜಿಲ್ಲೆಯ ಗೊಂಡಪಿಂಪ್ರಿ ತಾಲೂಕಿನ ಕಾರಂಜಿ ಗ್ರಾಮವು ಇದಕ್ಕೆ ತದ್ವಿರುದ್ಧವಾಗಿದೆ. ಕಳೆದ 40 ವರ್ಷಗಳಲ್ಲಿ ಈ ಗ್ರಾಮದಲ್ಲಿ 200ಕ್ಕೂ ಹೆಚ್ಚು ಪ್ರೇಮ ವಿವಾಹಗಳು ನಡೆದಿವೆ. ಮೊದಲು ಈ ಗ್ರಾಮ ಅಪರಾಧ ಪ್ರಕರಣಗಳಿಂದ ಕುಖ್ಯಾತಿ ಪಡೆದುಕೊಂಡಿತ್ತು. ಇದೀಗ ಪ್ರೀತಿಗೆ ಹೆಸರುವಾಸಿಯಾಗಿದೆ. ಪ್ರೇಮವಿವಾಹದಲ್ಲಿ ಹಲವು ಸವಾಲುಗಳು ಎದುರಾಗುತ್ತವೆ. ಆದರೆ,…
ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ‘ಹಕ್ಕಿ ಜ್ವರ’ ಕಾಣಿಸಿಕೊಂಡಿದೆ. ಕೆಲ ದಿನಗಳಿಂದ ವಟಗುಟ್ಲ, ಗುಮ್ಮಲ್ಲಡಿಬ್ಬ ಪ್ರದೇಶದಲ್ಲಿ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಮಾಹಿತಿ ಸಿಕ್ಕ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದರು. ಪರೀಕ್ಷೆ ಬಳಿಕ ಜ್ವರದಿಂದ ಸಾವನ್ನಪ್ಪಿರೋದು ದೃಢಪಟ್ಟಿದೆ. ಏಕಾಏಕಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೋಳಿ ಸಾಗಾಟಕ್ಕೆ, ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.
ಡ್ರಾಪ್ ಕೊಡುತ್ತೀವಿ ಎಂದು ಕರೆದುಕೊಂಡು ಹೋಗಿ ಚಿನ್ನಾಭರಣವನ್ನು ಕಿತ್ತುಕೊಂಡು ಮಹಿಳೆಯನ್ನು ಕೊಂದು ನೀರಿನ ಟ್ಯಾಂಕಿಗೆ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉತ್ತರ ತಾಲೂಕಿನ ಲಕ್ಷ್ಮಿಪುರ ಗ್ರಾಮದ ನಿವಾಸಿ ಮಂಜುಳ ಮೃತ ರ್ದುದೈವಿ. ಮಂಜುಳ ಎಂಬ ಮಹಿಳೆ, ಊರ ಹಬ್ಬ ಎಂದು ಫೆಬ್ರವರಿ 11ರಂದು ಮಗಳ ಮನೆಗೆ ಹೊರಟ್ಟಿದ್ದರು. ಮಂಜುಳಾರನ್ನು ಬಸ್ ನಿಲ್ದಾಣದವೆರಗೂ ಡ್ರಾಪ್ ಮಾಡ್ತೀನಿ ಎಂದು ಜೀವನ್ ಎಂಬಾತ ಕರೆದಿದ್ದ. ಪರಿಚಯಸ್ಥನೇ ಕರೆದ ಕಾರಣಕ್ಕೆ ಆತನನ್ನು ನಂಬಿ ಮಂಜುಳ ಹೋಗಿದ್ದರು.
ಖ್ಯಾತ ಬಾಣಸಿಗ ಇಮ್ತಿಯಾಜ್ ಖುರೇಷಿ ನಿಧನ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಖುರೇಶಾ ಪದ್ಮಶ್ರೀ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಐಟಿಸಿ ಹೋಟೆಲ್ ನಲ್ಲಿ ಮಾಸ್ಟರ್ ಚೆಫ್ ಆಗಿ ಪಾಕಶಾಲೆಯ ಕೌಶಲ್ಯಕ್ಕೆ ಹೆಸರುವಾಸಿಯಾದ ಶೆಫ್ ಖುರೇಷಿ ಪಾಕಶಾಲೆಯ ಬ್ರ್ಯಾಂಡ್ ಬುಖಾರಾವನ್ನು ದೇಶಾದ್ಯಂತ ಪ್ರಸಿದ್ಧಗೊಳಿಸಿದ್ದಾರೆ. 1928 ರಲ್ಲಿ ಕೋಲ್ಕತ್ತಾದಲ್ಲಿ ಜನಿಸಿದ ಬಾಣಸಿಗ ಖುರೇಷಿ ಏಳನೇ ವಯಸ್ಸಿನಲ್ಲಿ ತಮ್ಮ ಮನೆಯಲ್ಲಿ ಅಡುಗೆ ಮಾಡುವವರಿಗೆ ಸಹಾಯ ಮಾಡುವ ಮೂಲಕ ಅಡುಗೆ ಮಾಡುವ ಪ್ರೀತಿಯನ್ನು ಬೆಳೆಸಿಕೊಂಡರು. ಖುರೇಷಿಯವರ ದಮ್ ಬಿರಿಯಾನಿ ಮತ್ತು ಬುಖಾರಾ ಖಾದ್ಯಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಪಡೆದಿವೆ. ಖುರೇಷಿಯವರ ಕಬಾಬ್ ಗಳು ತಮ್ಮ ರುಚಿಕರತೆಯಿಂದ ಅಂತರರಾಷ್ಟ್ರೀಯ ಗಮನವನ್ನು ಸಹ ಗಳಿಸಿವೆ. ಖುರೇಷಿಯವರ ಜೀವನದಲ್ಲಿ ಒಂದು ಪ್ರಮುಖ ಮೈಲಿಗಲ್ಲು. ಎಪಿಜೆ ಅಬ್ದುಲ್ ಕಲಾಂ ಅವರ ನೆಚ್ಚಿನ ಖಾದ್ಯವಾದ ಬೆಳ್ಳುಳ್ಳಿ ಸ್ಟ್ಯೂ ಕೂಡ ಖುರೇಷಿ ಅವರಿಂದ ಕಂಡುಹಿಡಿದಿದೆ.
ಬೆಳ್ತಂಗಡಿ : ರಾಜ್ಯ ಸರಕಾರದ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ತಲುಪಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಸ್ವಾಗತಿಸುವ ಕಾರ್ಯಕ್ರಮಕ್ಕೆ ಗ್ರಾ.ಪಂ. ಅಧ್ಯಕ್ಷ , ಉಪಾಧ್ಯಕ್ಷೆ ಸೇರಿ 20 ಸದಸ್ಯರ ಪೈಕಿ 19 ಮಂದಿ ಗೈರಾದ ಪ್ರಸಂಗ ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ಸೋಮವಾರ ನಡೆದಿದ್ದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಯಿತು. ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮಪಂಚಾಯತ್ ಗೆ ಸರಕಾರದ ಸಂವಿಧಾನ ಜಾಗೃತಿ ಜಾಥಾ ರಥವು ಸೋಮವಾರ ತಲುಪಿದ್ದು ಗ್ರಾಪಂ ಅಧ್ಯಕ್ಷ ಯಶವಂತ ಹಾಗೂ ಉಪಾಧ್ಯಕ್ಷೆ ಜಾನಕಿ ಸೇರಿದಂತೆ 20 ಸದಸ್ಯರ ಪೈಕಿ 19 ಸದಸ್ಯರು ಗೈರು ಹಾಜರಾಗುವ ಮೂಲಕ ಸಂವಿಧಾನದ ಬಗ್ಗೆ ತಾತ್ಸಾರ ಭಾವನೆ ತೋರಿದ್ದು ತೀವ್ರ ಚರ್ಚೆಗೆ ಕಾರಣವಾಗಿದೆ. ಕಾರ್ಯಕ್ರಮದಲ್ಲಿ ಹಿರಿಯ ದಲಿತ ಮುಖಂಡ ಅಣ್ಣು ಸಾಧನ, ತಾಲೂಕು ಬಿ.ಎಸ್.ಪಿ. ಅಧ್ಯಕ್ಷ ಪಿ.ಎಸ್. ಶ್ರೀನಿವಾಸ್, ದಲಿತ ಸಂಘರ್ಷ ಸಮಿತಿಯ ತಾಲೂಕು ಮುಖಂಡ ಶೇಖರ್ ಬಿಕೆ , ಲೋಕೇಶ್ ನೀರಾಡಿ ಮಾತನಾಡಿ ಅಧ್ಯಕ್ಷ, ಉಪಾಧ್ಯಕ್ಷೆ ಸೇರಿದಂತೆ 19 ಸದಸ್ಯರ ಗೈರಿನ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್ 2024 ಅನ್ನು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹಾಡಿ ಹೊಗಳಿದ್ದಾರೆ. ಆದರೆ ವಿಧಾನಸಭೆ ಚುನಾವಣೆ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಎಸ್ ಟಿ ಸೋಮಶೇಖರ್ ಅವರು ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಅನ್ನು ಸ್ವಾಗತಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸೋಮಶೇಖರ್, ಈ ಬಾರಿಯ ಬಜೆಟ್ 7 ಕೋಟಿ ಜನರ ಬಜೆಟ್ ಆಗಿದೆ. ನಾನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಬೆಂಗಳೂರಿನ ಬಗ್ಗೆ ಮಾತ್ರ ಮಾತನಾಡುತ್ತೇನೆ. ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ಅವರು ನಂಬರ್ ಒನ್ ಬಜೆಟ್ ಕೊಟ್ಟಿದ್ದಾರೆ. ಬೆಂಗಳೂರು ಬಿಟ್ಟು ಹೊರಗೆ ಏನಿದೆ ಎಂದು ನೋಡಿಲ್ಲ ಎಂದಿದ್ದಾರೆ. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ 5 ಕಸದ ಘಟಕಗಳು ಇದ್ದವು. ಅವುಗಳನ್ನು ಹೊರಗೆ ಹಾಕುವ ಬಗ್ಗೆ ಬಜೆಟ್ನಲ್ಲಿ ಉಲ್ಲೇಖಿಸಿದ್ದಾರೆ. ನನ್ನ ಕ್ಷೇತ್ರಕ್ಕೆ ಕುಡಿಯುವ ಕೊಟ್ಟಿದ್ದಾರೆ. 110 ಹಳ್ಳಿಗಳಿಗೆ ಕಾವೇರಿ ನೀರಿನ ಸೌಲಭ್ಯ ಮಾಡುವ ಭರವಸೆ ನೀಡಿದ್ದಾರೆ.…
ತುಮಕೂರು: ತುಮಕೂರಿನ ಕಾಳಜಿ ಪೌಂಡೇಶನ್ ತಂಡದ ಸದಸ್ಯರು ಇಂದು ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿಗೆ ಭೇಟಿ ನೀಡಿ, ಇಲ್ಲಿನ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳನ್ನು ಮಾತನಾಡಿಸಿ ಕಾಲೇಜಿನ ಕುಂದುಕೊರತೆಗಳ ಕುರಿತು ಮಾಹಿತಿ ಪಡೆದುಕೊಂಡರು. ತುಮಕೂರು ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು ಪ್ರಾರಂಭವಾಗಿ 30 ವರ್ಷಗಳು ಕಳೆದರೂ ಅಗತ್ಯ ಶೈಕ್ಷಣಿಕ ಸೌಕರ್ಯಗಳಿಂದ ವಂಚಿತವಾಗಿರುವುದು ತುಂಬ ನೋವಿನ ಸಂಗತಿಯಾಗಿದೆ. ಈ ಕಾಲೇಜಿನಲ್ಲಿ ಕಲಿತ ಶೇ.90ರಷ್ಟು ವಿದ್ಯಾರ್ಥಿಗಳು ಸರ್ಕಾರಿ/ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಚಿತ್ರಕಲಾ ಶಿಕ್ಷಕರಾಗಿ ಉದ್ಯೋಗ ಪಡೆದುಕೊಂಡಿದ್ದಾರೆ. ಇನ್ನುಳಿದ ವಿದ್ಯಾರ್ಥಿಗಳು ಈ ಕಾಲೇಜಿನಿಂದ ಪಡೆದ ಕಲಾ ಶಿಕ್ಷಣದ ಕೌಶಲ್ಯಗಳಿಂದ ಸ್ವತಂತ್ರ ಉದ್ಯೋಗ ಮಾಡುತ್ತಿದ್ದಾರೆ ಎಂಬುದು ಸಂತಸದ ಸಂಗತಿಯಾಗಿದೆ. ಅಂದರೆ ಶೇ.100ರಷ್ಟು ವಿದ್ಯಾರ್ಥಿಗಳು ನಿರುದ್ಯೋಗ ಭೀತಿಯಿಂದ ಹೊರಗುಳಿದಿದ್ದಾರೆ. ಈ ಕಾಲೇಜಿನಲ್ಲಿ ಕಲಿಸಲಾಗುವ ಬಿ.ವಿ.ಎ ದೃಶ್ಯಕಲಾ ಪದವಿ ಪಡೆದ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗಿರುವ ಯಾವ ಉದಾಹರಣೆಗಳಿರುವುದಿಲ್ಲ ಎಂಬುದು ಸ್ಪಷ್ಟವಾಗುತ್ತದೆ. 30 ವರ್ಷಗಳಿಂದ ಈ ಕಾಲೇಜಿಗೆ ಸ್ವಂತ ನಿವೇಶನ ಮಂಜೂರು ಮಾಡದೆ ಇರುವುದು ಮತ್ತು ಸ್ವತಂತ್ರ…