Subscribe to Updates
Get the latest creative news from FooBar about art, design and business.
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
Author: admin
ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ತಟ್ಟಲಿದ್ದು ಬಿಯರ್ ಸೇರಿ ಎಲ್ಲಾ ಬ್ರಾಂಡ್ ಗಳ ಬೆಲೆ ಏರಿಸುವುದಾಗಿ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಮದ್ಯದ ಘೋಷಿತ ಸ್ಲಾಬ್ ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡುವುದಾಗಿ ಘೋಷಿಸಿದ್ದಾರೆ. ಬಿಯರ್ ಸೇರಿ ಎಲ್ಲಾ ಬ್ರಾಂಡ್ ಗಳ ಬೆಲೆ ಹೆಚ್ಚಳ ಮಾಡಲಾಗುವುದು. ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ, ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿರುವುದನ್ನು ಕೆಯುಡಬ್ಲ್ಯುಜೆ ಸ್ಮರಿಸಿದ್ದು, ಅಭಿನಂದನೆ ಸಲ್ಲಿಸಿದೆ. ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ವಿಶೇಷವಾಗಿ ಸ್ಮರಿಸಿ ಅಭಿನಂದಿಸಿದೆ. ಬಜೆಟ್ ನಲ್ಲಿ ಘೋಷಣೆ ಮಾಡಿರುವ ಬಸ್ ಪಾಸ್ ಯೋಜನೆಯನ್ನು ಕ್ರಮಬದ್ದವಾಗಿ ಕೂಡಲೇ ಜಾರಿಗೆ ತರಲು, ವಾರ್ತಾ ಇಲಾಖೆ…
ಲೋಕಾಯುಕ್ತ ಅಧಿಕಾರಿಗಳೆಂದು ಕರೆ ಮಾಡಿ, ಸದ್ಯದಲ್ಲೇ ತಮ್ಮ ವಿರುದ್ಧ ಎಫ್ ಐಆರ್ ದಾಖಲಾಗಲಿದೆ ಎಂದು ಮಹಿಳಾ ಅಧಿಕಾರಿಗೆ ಬೆದರಿಕೆಯೊಡ್ಡಲಾಗಿದೆ. ಅವರಿಂದ 1 ಲಕ್ಷ ರೂ. ಹಣ ಪಡೆದು ವಂಚಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ವೇಳೆ ಮಹಿಳೆಗೆ ಕರೆ ಮಾಡಿ ಬೆದರಿಸಲಾಗಿದೆ. ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಗೆ ಆಗಮಿಸಿದ್ದರು. ಈ ಸಂದರ್ಭ ವಾಟ್ಸಪ್ ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದ. ‘ತಮ್ಮ ವಿರುದ್ಧ ದೂರು ಬಂದಿದೆ. ಇನ್ನು ಕೆಲವೇ ನಿಮಿಷದಲ್ಲಿ ಎಫ್ ಐಆರ್ ದಾಖಲು ಮಾಡಲಾಗುತ್ತದೆ. ಇದನ್ನು ತಪ್ಪಿಸಬೇಕಿದ್ದರೆ ಒಂದೂವರೆ ಲಕ್ಷ ರೂ. ನೀಡಬೇಕುʼ ಎಂದು ಬೆದರಿಸಿದ್ದ. ಯಾವ ದೂರು ಎಂದು ಕೇಳಿದರೂ ವಿವರಣೆ ನೀಡಿರಲಿಲ್ಲ. ಹೆದರಿದ ಮಹಿಳಾ ಅಧಿಕಾರಿ ಲೋಕಾಯುಕ್ತ ಎಂದು ಕರೆ ಮಾಡಿದ್ದ ವ್ಯಕ್ತಿ ಸೂಚಿಸಿದ್ದ ಅಕೌಂಟ್ ನಂಬರ್ ಗಳಿಗೆ ಒಂದು ಲಕ್ಷ ರೂ. ಹಣ ವರ್ಗಾಯಿಸಿದ್ದರು. ಬಳಿಕ ಪರಿಶೀಲಿಸಿದಾಗ ವಂಚನೆಗೊಳಗಾಗಿರುವುದು ಗೊತ್ತಾಗಿದೆ. ಈ ಹಿನ್ನೆಲೆ…
ಮುಸ್ಲಿಂ ರಾಷ್ಟ್ರದಲ್ಲಿ ನಿರ್ಮಿಸಲಾಗಿರುವ ಮೊದಲ ಹಿಂದೂ ದೇವಾಲಯವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಕನ್ನಡದ ಹೆಸರಾಂತ ನಟಿ, ಸಂಸದೆ ಸುಮಲತಾ ಅಂಬರೀಶ್ ಅವರು ಪಾಲ್ಗೊಂಡಿದ್ದರು. ಅರಬ್ ಸಂಯುಕ್ತ ಸಂಸ್ಥಾನದ(ಯುಎಇ) ಬೋಚಸನವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ ಹಿಂದೂ ದೇವಾಲಯವನ್ನು ನಿರ್ಮಾಣ ಮಾಡಿದೆ.ಈ ವೇಳೆ ಇದರ ಉದ್ಘಾಟನೆ ಕಾರ್ಯಕ್ರಮವನ್ನು ಮೋದಿಯವರು ಮಾಡಿದರು. ಈ ಅದ್ದೂರಿ ಕಾರ್ಯಕ್ರಮದಲ್ಲಿ ನೂರಾರು ಗಣ್ಯರು ಪಾಲ್ಗೊಂಡರು. ದೇವಾಲಯ ಉದ್ಘಾಟನೆಗೂ ಮುನ್ನ ಮಂದಿರದ ಹೊರಗಡೆ ಕಲ್ಯಾಣಿಗೆ ಗಂಗಾ ಪೂಜೆ ಕಾರ್ಯವನ್ನು ಮೋದಿ ನೆರವೇರಿಸಿದರು. ನಂತರ ಪ್ರವೇಶದ್ವಾರದಲ್ಲಿ ಟೇಪ್ ಕತ್ತರಿಸುವ ಮೂಲಕ ದೇವಾಲಯವನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸುಮಲತಾ ಅಂಬರೀಶ್ ಅವರು ಆ ಕ್ಷಣವನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಸಂಕೇತವಾಗಿರುವ ಅಬುಧಾಬಿಯ ಬೋಚಸನ್ ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯು ನಿರ್ಮಿಸಿರುವ ಬೃಹತ್ ಹಿಂದೂ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲು ಅವಕಾಶ ಸಿಕ್ಕಿದ್ದು…
ಬೆಂಗಳೂರು-ಮಂಗಳೂರು ಮಾರ್ಗವಾಗಿ ಚಲಿಸುತ್ತಿದ್ದ ರೈಲಿನಿಂದ ಮಹಿಳೆಯೊಬ್ಬರು ನೇತ್ರಾವತಿ ನದಿಗೆ ಹಾರಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಳಿ ಫೆ.15ರಂದು ವರದಿಯಾಗಿದೆ. ಆಕೆಯನ್ನು ನಯನಾ ಎಂ.ಜಿ(27 ) ಎಂದು ಗುರುತಿಸಲಾಗಿದ್ದು, ತುಮಕೂರಿನ ಮಧುಗಿರಿ ನಿವಾಸಿ ನಯನಾ ಎಂ.ಜಿ. ಬೆಂಗಳೂರಿನಿಂದ ಮಂಗಳೂರಿಗೆ ಹೊರಟ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಯಾವುದೋ ವಿಚಾರಕ್ಕೆ ಮನನೊಂದಿದ್ದ ನಯನಾ ಬಂಟ್ವಾಳ ಸಮೀಪ ಹಾದು ಹೋಗುವ ನೇತ್ರಾವತಿ ಸೇತುವೆ ಬರುತ್ತಿದ್ದಂತೆ ಚಲಿಸುತ್ತಿದ್ದ ರೈಲಿನಿಂದ ನೇರವಾಗಿ ನೇತ್ರಾವತಿ ನದಿಗೆ ಹಾರಿದ್ದಾರೆ. ಕೂಡಲೇ ಸಹಪ್ರಯಾಣಿಕರು ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಘಟನೆ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ನಗರ ಪೊಲೀಸರು ನೇತ್ರಾವತಿ ನದಿಯಲ್ಲಿ ರೈಲಿನಿಂದ ಜಿಗಿದ ಮಹಿಳೆಗಾಗಿ ಹುಡುಕಾಟ ನಡೆಸಿದ್ದಾರೆ. ಗಂಟೆಗಳ ಕಾರ್ಯಾಚರಣೆ ಬಳಿಕ ಮುಳುಗುತಜ್ಞ ಮಹಮ್ಮದ್ ತಂಡ ನದಿಯಿಂದ ನಯನಾ ಎಂ.ಜಿ ಅವರ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಈವರೆಗೂ ತಿಳಿದು ಬಂದಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ…
ಶಿಕ್ಷಕಿಯಾಗಿ ವೃತ್ತಿ ಆರಂಭಿಸಿದ ಬಳಿಕ 200ಕ್ಕೂ ಹೆಚ್ಚು ವಸತಿ ರಹಿತ ಕುಟುಂಬಗಳಿಗೆ ಮನೆ ಒದಗಿಸಿದ ಸಂತೃಪ್ತಿ ಇವರಿಗಿದೆ. ಇದೀಗ ತಮ್ಮ ಅಧಿಕೃತ ವೃತ್ತಿ ಜೀವನಕ್ಕೆ ವಿದಾಯ ಹೇಳುತ್ತಿದ್ದಾರೆ. ಹಾಗಾದರೆ ಆ ಶಿಕ್ಷಕಿ ಯಾರು ಎಂಬುದಕ್ಕೆ ಈ ವರದಿ ನೋಡಿ.. ಕೊಚ್ಚಿಯ ತೋಪ್ಪುಂಪಾಡಿಯಲ್ಲಿರುವ ‘ಅವರ್ ಲೇಡಿಸ್ ಕಾನ್ವೆಂಟ್’ ಬಾಲಕಿಯರ ಶಾಲೆಯ ಪ್ರಾಂಶುಪಾಲರಾದ ಲಿಜ್ಜಿ ಚಕ್ಕಲಕ್ಕಲ್ ಇದೀಗ ನಿವೃತ್ತಿಯಾಗುತ್ತಿರುವ ಶಿಕ್ಷಕಿ. ಅವರು ಆರಂಭಿಸಿದ ‘ಹೋಮ್ ಚಾಲೆಂಜ್ ಮಿಷನ್’ನಿಂದಾಗಿ 200ಕ್ಕೂ ಹೆಚ್ಚು ವಸತಿಹೀನ ಕುಟುಂಬಗಳಿಗೆ ಮನೆ ದೊರೆತಂತಾಗಿದೆ. ಇದರಿಂದ ಬಡ ಜನರು, ಸ್ವಂತ ಸೂರಿಲ್ಲದೇ ಕೊರಗುತ್ತಿದ್ದವರು ಇದೀಗ ಸ್ವಂತ ಸೂರಿಗೆ ಬಂದು ನಿಟ್ಟುಸಿರು ಬಿಟ್ಟಿದ್ದಾರೆ. ಇದೊಂದು ‘ಕ್ರೌಡ್ ಫಂಡಿಂಗ್’ ಕಾರ್ಯಕ್ರಮ. ‘ನಮ್ಮ ಈ ಕಾರ್ಯಕ್ರಮದಿಂದ ಪ್ರೇರಿತವಾಗಿ ದೇಶ, ವಿದೇಶಗಳಲ್ಲಿನ ಕೆಲ ವೇದಿಕೆಗಳು ಈ ರೀತಿಯ ಮಾದರಿಯನ್ನು ಅಳವಡಿಸಿಕೊಂಡಿವೆ’ ಎಂದು ಚಕ್ಕಲಕ್ಕಲ್ ಹೆಮ್ಮೆಯಿಂದ ಪ್ರತಿಕ್ರಿಯಿಸಿದ್ದಾರೆ. ಇವರ ಈ ಕೆಲಸ ನೂರಾರು ಮಂದಿಗೆ ಸ್ಪೂರ್ತಿ ಅಂದರೂ ತಪ್ಪಾಗಲ್ಲ. ಪ್ರತಿಯೊಂದು ಕೆಲಸಕ್ಕೂ ಒಂದು ಪ್ರೇರಣೆ ಅಂತ ಇರುತ್ತೆ. ಒಂದು ದಿನ…
ಚಿತ್ರ ವಿಚಿತ್ರ ಜೀವಿಗಳನ್ನು ಅನ್ವೇಷಿಸಿ ಸಂಶೋಧಕರು ಪ್ರಪಂಚಕ್ಕೆ ಪರಿಚಯಿಸುತ್ತಲೇ ಇರುತ್ತಾರೆ. ಅನೇಕ ಬಾರಿ ನಾವು ಇಂತಹ ಸಂಶೋಧನೆಗಳಿಂದ ಅಚ್ಚರಿಪಟ್ಟಿದ್ದೂ ಇದೆ.ಇದೀಗ ಅಂತಹದ್ದೇ ಒಂದು ವಿಚಿತ್ರ ಘಟನೆ ನಮ್ಮ ಕರಾವಳಿಯಲ್ಲಿ ನಡೆದಿದೆ. ಅದೇನು ಗೊತ್ತಾ ಈ ರಿಪೋರ್ಟ್ ಓದಿ… ಸಾಮಾನ್ಯವಾಗಿ ನೀವು ಹೆಚ್ಚಾಗಿ ಮಳೆಗಾಲದಲ್ಲಿ ಅಣಬೆಗಳನ್ನು ಕೊಳೆತ ವಸ್ತುಗಳ ಮೇಲೆ, ಮರ ಗಿಡಗಳ ಮೇಲೆ ಅಥವಾ ಮಳೆಗಾಲದಲ್ಲಿ ಹೆಚ್ಚಾಗಿ ನೋಡಿತ್ತೀರಿ. ಇದರಲ್ಲಿ ಒಂದೆರಡು ಅಣಬೆಗಳು ನಮಗೆ ತಿನ್ನಲು ಯೋಗ್ಯವಾಗಿರುತ್ತೆ. ಉಳಿದವುಗಳು ವಿಷಕಾರಿಯಾಗಿರುತ್ತೆ. ಸದ್ಯ ವಿಶ್ವ ವನ್ಯಜೀವಿ ನಿಧಿಯ ಸಂಶೋಧಕರು ಹಾಗೂ ಸ್ಥಳೀಯ ಯುವಕರ ತಂಡವೊಂದು ಪಕ್ಷಿಗಳನ್ನು ಅರಸಿ ಹೊರಟಿದ್ದ ವೇಳೆ ಆಕಸ್ಮಿಕವಾಗಿ ಈ ಹೊಸ ಕಪ್ಪೆಯ ಪ್ರಭೇದವೊಂದು ಕರ್ನಾಟಕದ ಉಡುಪಿ ಜಿಲ್ಲೆ ಕಾರ್ಕಳ ಸಮೀಪದ ಕೆರೆಯೊಂದರಲ್ಲಿ ಪತ್ತೆಯಾಗಿದೆ. ವಿಚಿತ್ರವೆಂದರೆ ಜೀವಂತ ಉಭಯಚರಗಳ ಮೈಮೇಲೆ ಅಣಬೆ ಬೆಳೆದ ಪ್ರಸಂಗವೊಂದು ಎಲ್ಲೂ ದಾಖಲಾದ ಉದಾಹರಣೆ ಇಲ್ಲ ಎಂದು ವಿಜ್ಞಾನಿಗಳ ಮಾತುಗಳನ್ನು ಉಲ್ಲೇಖಿಸಿದ ವರದಿಯೊಂದು ಪ್ರಕಟಗೊಂಡಿದೆ. ‘ರೆಪ್ಟೈಲ್ಸ್ ಆ್ಯಂಡ್ ಆ್ಯಂಫಿಬಿಯನ್ಸ್’ ಎಂಬ ವಿಜ್ಞಾನ ಪತ್ರಿಕೆಯಲ್ಲಿ ಇದು ಪ್ರಕಟವಾಗಿದ್ದು…
ಮರು ಮತ ಎಣಿಕೆ ಸಂದರ್ಭದಲ್ಲಿ ಎರಡು ರಾಜಕೀಯ ಪಕ್ಷಗಳ ಬೆಂಬಲಿಗರ ನಡುವೆ ಶಸ್ತ್ರಸಜ್ಜಿತ ದಾಳಿ ನಡೆದಿದ್ದು, ದಾಳಿಯಲ್ಲಿ ಇಬ್ಬರು ಮೃತಪಟ್ಟ ಘಟನೆ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಕ್ಷೇತ್ರವೊಂದರಲ್ಲಿ ಎಂದು ಪೊಲೀಸರು ತಿಳಿಸಿದ್ದಾರೆ. ‘ಬಲೂಚಿಸ್ತಾನ್ ಅವಾಮಿ ಪಾರ್ಟಿ (ಬಿಎಪಿ) ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಬೆಂಬಲಿಗರ ನಡುವೆ ಕರಾಚಿ ಗಡಿ ಭಾಗದ ಕೈಗಾರಿಕಾ ಪ್ರದೇಶದಲ್ಲಿರುವ ಚುನಾವಣಾಧಿಕಾರಿ ಕಚೇರಿ ಹೊರಭಾಗದಲ್ಲಿ ಉಭಯ ಪಕ್ಷಗಳ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಘರ್ಷಣೆಯಲ್ಲಿ ಸುಮಾರು 14 ಮಂದಿ ಗಾಯಗೊಂಡಿದ್ದಾರೆ’ ಎಂದು ವರದಿ ತಿಳಿಸಿದೆ. ಫೆಬ್ರವರಿ 8ರಂದು ನಡೆದ ಚುನಾವಣೆಯಲ್ಲಿ ಬಿಎಪಿಯ ಮೊಹಮ್ಮದ್ ಸಲೇಹ್ ಭೂತಾನಿ ರಂಬವರನ್ನು ಗೆದ್ದ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು. ಮತ ತಿರುಚಿದ ಆರೋಪ ಮಾಡಿದ ಪಿಪಿಪಿಯ ಅಲಿ ಹಸನ್ ಝೆಹ್ರಿ, ಫಲಿತಾಂಶ ರದ್ದುಗೊಳಿಸಿ ಮರು ಮತ ಎಣಿಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದರಂತೆ ಮರು ಮತ ಎಣಿಕೆ ನಡೆದಿದೆ. ‘39 ಮತಗಟ್ಟೆಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದ ವೇಳೆ ಘರ್ಷಣೆ ನಡೆದಿದೆ.…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. • ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಅವರು ಘೋಷಣೆ ಮಾಡಿದ್ದಾರೆ. ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ. ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು. • ಬೆಂಗಳೂರು ಉಪ ರೈಲು ಯೋಜನೆ ಚುರುಕುಗೊಳಿಸಲು ಬಜೆಟ್ ನಲ್ಲಿ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರದವರೆಗಿನ ಕಾರಿಡಾರ್-2 ವೇಗವಾಗಿ ಅನುಷ್ಠಾನ ಮಾಡಲಾಗುವುದು ಎಂದು ಘೋಷಣೆ ಮಾಡಿದರು. ಬಿಎಂಟಿಸಿಗೆ ಹೊಸದಾಗಿ 1334 ಹೊಸ ಇವಿ ಬಸ್ ಖರೀದಿಗೆ ನಿರ್ಧಾರ, ಜೊತೆಗೆ ಬಿಎಂಟಿಸಿಗೆ 820 ಬಿಎಸ್6 ಡೀಸೆಲ್ ಬಸ್ ಸೇರ್ಪಡೆ, ಮಹಿಳೆಯರ ಸುರಕ್ಷತೆಗಾಗಿ ಬಿಎಂಟಿಸಿ ಬಸ್ ಗಳಲ್ಲಿ ಆ್ಯಪ್ ಅನುಷ್ಠಾನ, ವೆಹಿಕಲ್…
ಭಾರತದಿಂದ ಚೀನಾಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 28 ಲಕ್ಷ ನವಿಲು ಗರಿಗಳನ್ನು ಮುಂಬೈ ವಲಯದ ಕಳ್ಳಸಾಗಣೆ ನಿಗ್ರಹ ದಳವಾದ ಡೈರೆಕ್ಟೋರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಮುಂಬೈನ ಜವಾಹರಲಾಲ್ ನೆಹರು ಬಂದರು ಅಥಾರಿಟಿ ಮೂಲಕ “ಡೋರ್ ಮ್ಯಾಟ್ ತೆಂಗಿನ ನಾರು” ಎಂದು ಸುಳ್ಳು ಹೇಳಿ ನವಿಲುಗರಿಯನ್ನು ರಫ್ತು ಮಾಡಲು ಬಂಡಲ್ ಮಾಡಿ ಇಡಲಾಗಿತ್ತು ಎನ್ನಲಾಗಿದೆ. ಆದರೆ ಡಿಆರ್ ಐಗೆ ಲಭಿಸಿದ ಮಾಹಿತಿ ಮೇರೆಗೆ ಸರಕು ರವಾನೆಯನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಅಂದಾಜು 28 ಲಕ್ಷ ನವಿಲು ಗರಿ ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. 1962ರ ಕಸ್ಟಮ್ಸ್ ಕಾಯ್ದೆಯ ಸೆಕ್ಷನ್ 110ರ ಅನ್ವಯ ಸುಮಾರು 2.10 ಕೋಟಿ ರೂಪಾಯಿ ಮೌಲ್ಯದ ನವಿಲುಗರಿಯನ್ನು ವಶಪಡಿಸಿಕೊಳ್ಳಲಾಗಿದೆ. 1972ರ ವನ್ಯಜೀವಿ ರಕ್ಷಣಾ ಕಾಯ್ದೆಯ ಶೆಡ್ಯೂಲ್ 2ರ ಪ್ರಕಾರ ನವಿಲುಗರಿ ರಫ್ತು ನಿಷೇಧಿಸಲಾಗಿತ್ತು. ನವಿಲು ಗರಿ ಕಳ್ಳಸಾಗಣೆ ಮಾಡುತ್ತಿರುವುದನ್ನು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟಿಯನ್ ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿರುವುದಾಗಿ…