Author: admin

ಸರಗೂರು: ದೇಶದ ಪ್ರತಿಯೊಬ್ಬ ಪ್ರಜೆಯು ಸಂವಿಧಾನದ ಮೌಲ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಬಿರ್ವಾಳ್ ಬಸವರಾಜು ಹೇಳಿದರು. ತಾಲ್ಲೂಕಿನ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ತಾಲ್ಲೂಕು ಪಂಚಾಯಿತಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಡೆದ ಸಂವಿಧಾನ ಜಾಗೃತಿ ಜಾಥಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಸಂವಿಧಾನದ ಪಾಲನೆ ಪ್ರತಿ ನಾಗರಿಕನ ಕರ್ತವ್ಯವಾಗಿದೆ. ಸಂವಿಧಾನದ ಮೌಲ್ಯಗಳನ್ನು ಜೀವಂತವಾಗಿರಿಸಬೇಕೆಂಬ ಉದ್ದೇಶದಿಂದ ಸರ್ಕಾರ ಸಂವಿಧಾನ ಜಾಗೃತಿ ಜಾಥಾ ಹೊರಡಿಸಿದೆ. ಸಂವಿಧಾನ ಮಹಿಳೆಯರಿಗೆ ವಾಕ್ ಸ್ವಾತಂತ್ರ್ಯ ನೀಡಿ ಬದುಕು ಕಟ್ಟಿಕೊಳ್ಳುವ ಹಕ್ಕು ನೀಡಿದೆ. ಆದ್ದರಿಂದ ಮಹಿಳೆಯರು ಹಾಗೂ ನಾವೆಲ್ಲರೂ ಸಂವಿಧಾನದ ಹಕ್ಕು ಮರೆಯಬಾರದು. ಅದಕ್ಕಾಗಿ ಸರಗೂರು ತಾಲೂಕಿನ ವ್ಯಾಪ್ತಿಯ ಗ್ರಾಪಂಗಳು ಮತ್ತು ಪಟ್ಟಣಕ್ಕೆ ದಿನಾಂಕ 21ರಿಂದ 22 ರವರೆಗೆ ಸಂವಿಧಾನ ಜಾಗೃತಿ ಜಾಥಾ ಆಗಮಿಸಲಿದ್ದು, ಈ ಜಾಥಾ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ಮಕ್ಕಳು, ವಿವಿಧ ಸಂಘ ಸಂಸ್ಥೆಗಳು, ತಾಲೂಕ ಮಟ್ಟದ ಎಲ್ಲ ಅಧಿಕಾರಿಗಳು, ಮಹಿಳೆಯರು, ಎಲ್ಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ…

Read More

ಬೀದರ್: ಮೂವರು ಅಂತರ ರಾಜ್ಯ ಎಟಿಎಂ ದರೋಡೆಕೋರರನ್ನು ಮಂಗಳವಾರ ಬೀದರ್ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಎಟಿಎಂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ 7 ಆರೋಪಿಗಳ ಪೈಕಿ ಹರ್ಯಾಣ ರಾಜ್ಯದ ಶಾಹಿದ್ ಕಮಲ್ ಖಾನ್ , ರಿಹಾನ್ ಅಕ್ಷ ಖಾನ್ ಹಾಗೂ ಇಲಿಯಾಸ್ ಅಬ್ದುಲ್ ರೆಹಮಾನ್ ಎಂಬವರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡ 4 ಜನ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ . ನಗರದಲ್ಲಿ ಮಂಗಳವಾರ ಸಂಜೆ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದ 8 ಕಡೆ, ನೆರೆಯ ತೆಲಂಗಾಣದ 1 ಕಡೆ ಮತ್ತು ಮಹಾರಾಷ್ಟ್ರದ 3 ಕಡೆ ಎಟಿಎಂನಿಂದ ಹಣ ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ. ಬೀದರ್ ಜಿಲ್ಲೆಯ ಹಳ್ಳಿಖೇಡ್ -ಬಿ, ಬಸವಕಲ್ಯಾಣ, ಚಿಟಗುಪ್ಪ, ವಿಜಯಪುರ ಜಿಲ್ಲೆಯ 2 ಕಡೆ ಮತ್ತು ಬೆಳಗಾವಿಯ ಯಮಕನಮರಡಿ, ಅಂಕಲಿ, ಚಿಕ್ಕೋಡಿ ಸೇರಿದಂತೆ ಒಟ್ಟು 8 ಕಡೆ ಮತ್ತು ನೆರೆಯ ತೆಲಂಗಾಣದ ಸದಾಶಿವಪೇಟ, ಮಹಾರಾಷ್ಟ್ರದ ಉಮರ್ಗಾ ಮತ್ತು ಮುರುಮ…

Read More

ಕೊರಟಗೆರೆ: ಐತಿಹಾಸಿಕ ಕಮನಿಯ ಕ್ಷೇತ್ರ ಎಂದೇ ಪ್ರಸಿದ್ಧವಾಗಿರುವ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಫೆ.16 ರ ಶುಕ್ರವಾರ ನಡೆಯುವ ಜಾತ್ರೆಗೆ ಮುಜರಾಯಿ ಇಲಾಖೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಕೊರಟಗೆರೆ ತಹಶೀಲ್ದಾರ್ ಮಂಜುನಾಥ್ ಹಾಗೂ ತಾ.ಪಂ. ಇಒ ಅಪೂರ್ವ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತಿಹಾಸ ಪ್ರಸಿದ್ಧವುಳ್ಳ ಕ್ಯಾಮೇನಹಳ್ಳಿಯ ಜಾತ್ರೆಗೆ ರಾಜ್ಯದ ಮೂಲೆ ಮೂಲೆಗಳಿಂದ ಬರುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರವಹಿಸಿ ಅಧಿಕಾರಿಗಳಿಗೆ ತಹಸೀಲ್ದಾರ್ ಸೂಚನೆ ನೀಡಿದರು. ದೇವಸ್ಥಾನದ ಬಳಿ ಹಲವು ಸಿದ್ಧತೆಗಳ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಇಒ ಅಪೂರ್ವ, ಗ್ರಾಮ ಪಂಚಾಯಿತಿ ಪಿಡಿಒ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಮತ್ತು ಭಕ್ತಾದಿಗಳು ಹಾಜರಿದ್ದರು. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ

Read More

ಮಾರುಕಟ್ಟೆಯಲ್ಲಿ ವಿವಿಧ ಬಗೆಯ, ವಿವಿಧ ಬಣ್ಣಗಳನ್ನೊಳಗೊಂಡ  ನೈಲ್ ಪಾಲಿಷ್ ಗಳು ದೊರೆಯುತ್ತವೆ. ಅವರವರ ಅಗತ್ಯಕ್ಕೆ ತಕ್ಕಂತೆ ತಮಗೆ ಒಪ್ಪುವ ಬಣ್ಣಗಳನ್ನು ಆಯ್ಕೆ ಮಾಡಿಕೊಂಡು ಬಣ್ಣವನ್ನು ಹಚ್ಚಿಕೊಂಡರೆ, ಉಗುರಿನ ಅಂದ ದುಪ್ಪಟ್ಟಾಗುತ್ತದೆ. ಉಗುರಿನ ರಕ್ಷಣೆಗಾಗಿ ಬಳಸುವ ನೈಲ್ ಪಾಲಿಶ್ ರಕ್ಷಣೆ ನೀಡುವುದು ಮಾತ್ರವಲ್ಲ, ಉಗುರುಗಳು ಅಂದವಾಗಿ ಹಾಗೂ ಆಕರ್ಷಕ ರೀತಿಯಲ್ಲಿ ಕಾಣುವಂತೆ ಮಾಡುತ್ತವೆ. ಕೆಲವರಿಗೆ ಉದ್ದದ ಉಗುರು ಇಷ್ಟವಾದರೆ ಮತ್ತೆ ಕೆಲವರಿಗೆ ತುಂಡರಿಸಿದ ಉಗುರುಗಳು ಆಕರ್ಷಣೀಯವಾಗಿರುತ್ತದೆ. ಒಟ್ಟಿನಲ್ಲಿ ತಮಗೊಪ್ಪುವ ನೈಲ್ ಪಾಲಿಷ್ ಲೇಪಿಸಿಕೊಂಡು ನೋಡುಗರಲ್ಲಿ ಆಸಕ್ತಿ ಕೆರಳುವಂತೆ ಮಾಡುವ ಗುಣ ಇದರಲ್ಲಿದೆ ಎಂಬುದು ಹಲವರ ಅಭಿಪ್ರಾಯ. ಜೊತೆಗೆ ಒಂದೇ ಉಗುರಿಗೆ ಎರಡ್ಮೂರು ಬಣ್ಣಗಳನ್ನು ಲೇಪಿಸಿಕೊಂಡರೆ ಮತ್ತಷ್ಟು ಆಕರ್ಷಣೀಯವಾಗಿರುತ್ತದೆ.

Read More

ಸಂಗೀತ ಕೇಳುವುದು ಎಂದರೆ ಪ್ರತಿಯೊಬ್ಬರಿಗೂ ಇಷ್ಟ. ಆದರೆ ಕೆಲವರು ಿದಕ್ಕೆ ತುಂಬಾ ಅಡಿಕ್ಟ್ ಆಗಿ ಹೋಗಿರುತ್ತಾರೆ. ಜೊತೆಗೆ ಮಲಗುವಾಗಲು ಇಯರ್ ಫೋನ್ ಹಾಕಿಕೊಂಡು ಹಾಡು ಕೇಳುತ್ತಲೇ ಮಲಗುತ್ತಾರೆ. ಈ ರೀತಿ ಮಲಗುವಾಗಲೂ ಇಯರ್ ಫೋನ್ ಬಳಸುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ ಅಭ್ಯಾಸವಲ್ಲವಂತೆ. ಹೀಗೆ ಮಾಡುವುದರಿಂದ ನಮಗೆ ತುಂಬಾ ಸಮಸ್ಯೆ ಉಂಟಾಗಲಿದೆ. ಶ್ರವಣ ದೋಷಕ್ಕೆ ಕಾರಣವಾಗಬಹುದು: ನಮ್ಮ ದೇಹದ ಪ್ರತಿಯೊಂದು ಅಂಗಕ್ಕೂ ವಿಶ್ರಾಂತಿಯ ಅಗತ್ಯವಿರುತ್ತದೆ. ಅದರಂತೆ ಕಿವಿಗೂ ಸಹ ವಿಶ್ರಾಂತಿ ನೀಡಬೇಕು. ಆದರೆ ನಾವು ಹೆಚ್ಚು ಕಾಲ ಇಯರ್ ಫೋನ್ ಬಳಸಿದರೆ ಕಿವಿಯ ಮೇಲಿನ ಒತ್ತಡ ಹೆಚ್ಚಾಗುತ್ತದೆ ಇದು ಶ್ರವಣ ದೋಷಕ್ಕೆ ಕಾರಣವಾಗಬಹುದು. ಕಿವಿಯಲ್ಲಿನ ನರಗಳಿಗೆ ಹಾನಿಯುಂಟಾಗುತ್ತದೆ. ಕಿವಿಯ ವ್ಯಾಕ್ಸ್ ತಳ್ಳಲ್ಪಡುತ್ತದೆ: ಕಿವಿಯ ವ್ಯಾಕ್ಸ್ ಅನ್ನು ನಿಯಮಿತವಾಗಿ ತೆಗೆಯದೆ ಇದ್ದಾಗ ಕಿವಿ ನೋವು, ಇಲ್ಲವೆ ಸರಿಯಾಗಿ ಕೇಳಿಸದೆ ಇರಬಹುದು. ನೀವು ಸದಾ ಇಯರ್ ಫೋನ್ ಬಳಸುವುದರಿಂದ ಈ ವ್ಯಾಕ್ಸ್ ಮುಂದಕ್ಕೆ ತಳ್ಳಲ್ಪಡುತ್ತದೆ. ಹೀಗಾಗಿ ವ್ಯಾಕ್ಸ್ ಅನ್ನು ಕಿವಿಯಿಂದ ತೆಗೆಯುವುದು ಕಷ್ಟಕರವಾಗುತ್ತದೆ. ಮೆದುಳಿನ ಹಾನಿ:…

Read More

ಕನ್ನಡವೂ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ನಟಿ ಅನುಪಮಾ ಪರಮೇಶ್ವರನ್ ಇದೀಗ ಟಿಲ್ಲು ಸ್ಕ್ವೇರ್ ಸಿನಿಮಾದಲ್ಲಿ, ಸಿದ್ದು ಜೊನ್ನಲಗಡ್ಡ ಜೊತೆಯಾಗಿ ನಟಿಸಿ ಅಭಿಮಾನಿಗಳಿಗೆ ಮತ್ತೇರಿಸುವಂತ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ಅನುಪಮಾ ಪರಮೇಶ್ವರನ್ ಅವರು ತೆರೆಮೇಲೆ ಕಿಸ್ ಮಾಡುವ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆ. ಇದೇ ಮೊದಲ ಬಾರಿಗೆ ಅವರು ಆ ರೀತಿಯ ಪಾತ್ರಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರ ನಟನೆಯ ‘ಟಿಲ್ಲು ಸ್ಕ್ವೇರ್’ ಸಿನಿಮಾ ಟ್ರೇಲರ್ ಗಮನ ಸೆಳೆದಿದೆ. ಬೋಲ್ಡ್ ಪಾತ್ರಗಳಲ್ಲಿ ಮಾಡಲ್ಲ ಅಂತಿದ್ದ ಈ ನಟಿ ಟಿಲ್ಲು ಸ್ಕ್ವೇರ್ ಸಿನಿಮಾದಲ್ಲಿ ಬೋಲ್ಡ್ ಆಗಿ ನಟಿಸಿದ್ದಾರೆ. ಟಿಲ್ಲು ಸ್ಕ್ವೇರ್ ಸ್ವೀಕೆಲ್ ಸಿನಿಮಾ. ಈ ಹಿಂದೆ 2022ರಲ್ಲಿ ಬಿಡುಗಡೆಯಾಗಿದ್ದ ಡಿಜೆ ಟಿಲ್ಲು ಸಿನಿಮಾದ ಮುಂದುವರೆದ ಭಾಗ ಇದಾಗಿದೆ. ಟಿಲ್ಲು ಸ್ಕ್ವೇರ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಅನುಪಮಾ ಅಚ್ಚರಿ ಎನ್ನುವಂತೆ ಬೋಲ್ಡ್ ಸ್ಟೆಪ್ ಇಟ್ಟಿದ್ದಾರೆ. ಈ ಸಿನಿಮಾವನ್ನು ಮಲ್ಲಿಕ್ ರಾಮ್ ನಿರ್ದೇಶನ ಮಾಡಿದ್ದು, ಸೂರ್ಯದೇವರ ನಾಗ್ ವಂಶಿ ನಿರ್ಮಾಣ ಮಾಡಿದ್ದಾರೆ. ಟಿಲ್ಲು ಸ್ಕ್ವೇರ್ ಚಿತ್ರ ಬಿಡುಗಡೆಗೆ…

Read More

ಪೂರ್ವ ಮಿಡ್ನಾಪುರದಲ್ಲಿ ಪತ್ನಿಯ ಶಿರಚ್ಛೇದಮಾಡಿ ಶಿರವನ್ನು ಕೈಯಲ್ಲಿ ಹಿಡಿದುಕೊಂಡು ತಿರುಗಾಡಿದ ಘಟನೆ ಪಶ್ಚಿಮ ಬಂಗಾಳದಲ್ಲಿನಡೆದಿದೆ. ಆರೋಪಿಯನ್ನು 40 ವರ್ಷದ ವ್ಯಕ್ತಿಯನ್ನು ಗೌತಮ್ ಗುಚ್ಚೈತ್ (40) ಎಂದು ಗುರುತಿಸಲಾಗಿದೆ. ಗೌತಮ್ ತನ್ನ ಪತ್ನಿಯನ್ನು ಕೊಲೆ ಮಾಡಿದ ಬಳಿಕ ರಸ್ತಸಿಕ್ತ ಬಟ್ಟೆಯಲೇ ಚಿಸ್ತಿಪುರ ಬಸ್ ನಿಲ್ದಾಣದ ಬಳಿ ತಿರುಗಾಡಿದ್ದಾನೆ. ಜೊತೆಗೆ ಆತನ ಕೈಯಲ್ಲಿ ಪತ್ನಿಯ ರುಂಡ ಇರುವುದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯು ಮಾನಸಿಕ ಅಸ್ವಸ್ಥನಾಗಿದ್ದು ದಂಪತಿಗಳ ನಡುವೆ ಆಗಾಗ ಜಗಳ ನಡೆಯುತ್ತಿದ್ದುಈ ಹಿನ್ನೆಲೆಯಲ್ಲಿ ಆರೋಪಿಯು ಪತ್ನಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಶೋಧ ನಡೆಸಲಾಗಿದ್ದು, ಪತ್ನಿಯ ಮೃತದೇಹ ಪತ್ತೆಯಾಗಿದೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು,ಪ್ರಕರಣದ ತನಿಖೆ ನಡೆಯುತ್ತಿದೆ.

Read More

ಶಿವಮೊಗ್ಗದ ವೀರಶೈವ ಕಲ್ಯಾಣ ಮಂದಿರ ಹಿಂಬದಿಯ ವೀರಭದ್ರೇಶ್ವರ ದೇವಸ್ಥಾನ ಚೌಕಿ ಮಠದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ನೆರವೇರಿಸಲಾಯಿತು. ನಂತರ ಶಿವಪ್ಪನಾಯಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಎಎ ಸರ್ಕಲ್‌, ನೆಹರೂ ರಸ್ತೆ ಮೂಲಕ ಗೋಪಿ ಸರ್ಕಲ್ ವರೆಗೆ ಮೆರವಣಿಗೆ ನಡೆಸಲಾಯಿತು. ಗೋಪಿ ಸರ್ಕಲ್‌ ನಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು. ಪಂಚಮಸಾಲಿ ಲಿಂಗಾಯತ ಸಮುದಾಯದ ಉಳಿವಿಗಾಗಿ ಹೋರಾಟ ನಡೆಸಲಾಗುತ್ತಿದೆಯೇ ಹೊರತು ಮುಖ್ಯಮಂತ್ರಿ ಗದ್ದುಗೆ ಏರಲು ಅಲ್ಲ. ಮೀಸಲಾತಿ ಹೋರಾಟ ಕೈಬಿಡುವಂತೆ ಸಮುದಾಯದ ಶ್ರೀಗಳಿಗೆ ಒತ್ತಡ ಹೇರಲಾಗಿದೆ. ಕೆಲವರು ಹೋರಾಟವನ್ನು ಹತ್ತಿಕ್ಕಲು ಆಮಿಷ ಕೂಡ ಒಡ್ಡಿದ್ದಾರೆ. ಆದರೆ ಹೋರಾಟವನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ 2ಡಿ ಪ್ರವರ್ಗದಡಿ ಶೇ.4ರಷ್ಟು ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ವಿಧಾನಸಭಾ ಚುನಾವಣೆ ಹಿನ್ನಲೆ ಅದು ಅನುಷ್ಠಾನಕ್ಕೆ ಬಂದಿಲ್ಲ. ಶ್ರೀಗಳು ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸಲು ಕರೆ ನೀಡಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಡಿಕೆ ಈಡೇರಿಸಲು 15 ದಿನಗಳ…

Read More

ಭಾರತೀಯ ರೈಯುಯೆ ರೈಯು ಕರಾಟೆ ಡು ಕೊಬೊಡೋ ಸಂಘಟನೆಯಿಂದ ಕರಾಟೆಗೆ ಹೊಸ ಸ್ಪರ್ಷ ನೀಡುವ, ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕಾರಣವಾಗಿರುವ ಕ್ರೀಡೆಗೆ ಹೊಸ ಆಯಾಮ ನೀಡುವ ಸಲುವಾಗಿ ನಗರದ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಫೆ.16 ರಿಂದ 18ರ ವರೆಗೆ ಅಂತರರಾಷ್ಟ್ರೀಯ ಕರಾಟೆ ಕುರಿತಾದ ವಿಚಾರ ಸಂಕಿರಣ ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ರೈಯುಯೆ ರೈಯು ಕರಾಟೆ ಡು ಕೊಬೊಡೋ ಸಂಘಟನೆ ಅಧ್ಯಕ್ಷ ಹಾಗೂ ತಾಂತ್ರಿಕ ನಿರ್ದೇಶಕ ಎಸ್. ಚಂದ್ರಶೇಖರ್, 18 ದೇಶಗಳ ಕರಾಟೆ ಪಟುಗಳು, ತರಬೇತುದಾರರು, ಕ್ರೀಡಾ ಉತ್ತೇಜಕರು, ಕರಾಟೆ ಸಂಘಟನೆಗಳ ಪ್ರತಿನಿಧಿಗಳು ಒಳಗೊಂಡಂತೆ ದೇಶ, ವಿದೇಶಗಳ 50 ರಿಂದ 60 ಸಾವಿರ ಮಂದಿ ಭಾಗವಹಿಸಲಿದ್ದಾರೆ. ಜಪಾನ್‌ ನಲ್ಲಿ 1800 ರ ಮಧ್ಯ ಭಾಗದಲ್ಲಿ ನ್ರಿಸಟೋ ನಕೈಮಾ ಅವರು ರೈಯುಯೆ ರೈಯು ಡು ಕೊಬೊಡೋ ಕರಾಟೆಯನ್ನು ಅಸ್ಥಿತ್ವಕ್ಕೆ ತಂದಿದ್ದು, ಶತಮಾನಗಳಿಂದ ಈ ಕರಾಟೆ ಶಾಲೆ ತನ್ನದೇ ಆದ ಮಹತ್ವ ಕಾಯ್ದುಕೊಂಡು ಬರುತ್ತಿದೆ. ಹಲವಾರು ಮಂದಿ ವಿಶ್ವ ಚಾಂಪಿಯನ್‌ ಆಗಿ ಹೊರ…

Read More

ಉತ್ತರ ಪ್ರದೇಶದಲ್ಲಿ ಪಟಾಕಿ ಸಿಡಿಸುವ ವೇಳೆ ಭಾರೀ ಅವಘಡ. ಚಿತ್ರಕೂಟದಲ್ಲಿ ಬುಂದೇಲ್‌ ಖಂಡ್ ಗೌರವ್ ಮಹೋತ್ಸವದ ವೇಳೆ ನಡೆದ ಸ್ಫೋಟದಲ್ಲಿ 4 ಮಕ್ಕಳು ಸಾವನ್ನಪ್ಪಿದ್ದಾರೆ. ಅನೇಕ ಜನರು ಗಾಯಗೊಂಡರು. ಹಬ್ಬದ ನಿಮಿತ್ತ ಪಟಾಕಿ ಸಿಡಿಸುವ ವೇಳೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ ಈ ಘಟನೆ ನಡೆದಿದೆ. ವಿಧಿವಿಜ್ಞಾನ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ತಂಡವು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್‌ ಐಆರ್ ದಾಖಲಿಸಲಾಗಿದೆ ಎಂದು ಪ್ರಯಾಗರಾಜ್ ವಲಯದ ಹೆಚ್ಚುವರಿ ಮಹಾನಿರ್ದೇಶಕ ಭಾನು ಭಾಸ್ಕರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದ ತನಿಖೆಗಾಗಿ ಹೆಚ್ಚುವರಿ ಮಹಾನಿರ್ದೇಶಕರ ಶ್ರೇಣಿಯ ಅಧಿಕಾರಿಯ ನೇತೃತ್ವದ ಉನ್ನತ ಮಟ್ಟದ ತನಿಖಾ ಸಮಿತಿಗೆ ಆದೇಶಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ.

Read More