Subscribe to Updates
Get the latest creative news from FooBar about art, design and business.
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
Author: admin
ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಖಾತ್ರಿಯಾಗಿ ಪಾವತಿಯಾಗುತ್ತಿದ್ದ ರೂ. 5,000 ಸಾವಿರದ ಬದಲು ರೂ.7,000 ನೇರ ನಗದು ವರ್ಗಾವಣೆಗೆ ಕ್ರಮ ಕೈಗೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತೆಯರ ಅಹವಾಲುಗಳನ್ನ ಆಲಿಸಿದ ಸಚಿವರು, ಆಶಾ ಕಾರ್ಯಕರ್ತೆಯರ ಪರ ಸರ್ಕಾರವಿದೆ ಎಂದರು. ಆಶಾ ಕಾರ್ಯಕರ್ತೆಯರ ಕುಂದುಕೊರತೆಗಳ ನಿವಾರಣೆಯ ನಿಟ್ಟಿನಲ್ಲಿ ಸರ್ಕಾರ ಮತ್ತು ಇಲಾಖೆಯು ಮುಕ್ತ ಮನಸ್ಸಿನಲ್ಲಿದ್ದು, ತ್ವರಿತ ಪ್ರತಿಸ್ಪಂದನೆಗೆ ಸದಾ ಸಿದ್ಧವಾಗಿದೆ. ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನದ ವಿತರಣೆಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ತಾನು ಗಳಿಸಿದ ಪ್ರೋತ್ಸಾಹಧನದ ವಿವರಗಳನ್ನು ಗಮನಿಸಲು ಆಶಾ ನಿಧಿ ತಂತ್ರಾಂಶದಲ್ಲಿ “ASHA View My Incentive” ನ್ನು ಸೃಜಿಸಲಾಗಿದ್ದು, ಆಶಾ ಕಾರ್ಯಕರ್ತೆಯರು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪಡೆದ ಪ್ರೋತ್ಸಾಹಧನದ ವಿವರಗಳನ್ನು ವೀಕ್ಷಿಸಬಹುದಾಗಿದೆ ಎಂದು ತಿಳಿಸಿದರು.
ಬೆಂಗಳೂರು: ಫೆಬ್ರವರಿ 16 ಶುಕ್ರವಾರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಮಂಡಿಸಲಿದ್ದು, ರಾಜಧಾನಿ ಬೆಂಗಳೂರಿಗೆ ಯಾವೆಲ್ಲ ಕೊಡುಗೆಗಳನ್ನು ನೀಡಬಹುದು ಎನ್ನುವ ಹಲವಾರು ನಿರೀಕ್ಷೆಗಳು ಹುಟ್ಟಿಕೊಂಡಿವೆ. ನಗರದ ಸಂಚಾರ ದಟ್ಟಣೆನ್ನು ತಗ್ಗಿಸುವ ಕ್ರಮವಾಗಿ ಸುರಂಗ ಮಾರ್ಗಗಳ ಕುರಿತು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ರಾಜ್ಯ ರಾಜಧಾನಿಯಲ್ಲಿ ಸಂಚಾರ ಸುಗಮಗೊಳಿಸಲು ಬ್ರ್ಯಾಂಡ್ ಬೆಂಗಳೂರು ಭಾಗವಾಗಿ ಸುರಂಗ ರಸ್ತೆಗಳನ್ನು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ಪ್ರಸ್ತಾಪಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭದ ದಿನವಾದ ನಿನ್ನೆ ಜಂಟಿ ಸದನ ಉದ್ದೇಶಿಸಿ ಮಾತನಾಡುವ ವೇಳೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಿತಿಯಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸುರಂಗ ರಸ್ತೆಗಳ ನಿರ್ಮಾಣವನ್ನು ಉದ್ದೇಶಿಸಲಾಗಿದೆ ಎಂದು ಹೇಳಿದ್ದರು.
ಸೌಂದರ್ಯಕ್ಕೂ ಉಪ್ಪು ಉಪಯುಕ್ತ ಎನ್ನುವುದು ಅನೇಕರಿಗೆ ಮಾತ್ರ ತಿಳಿದಿದೆ. ಉಪ್ಪು ಸೌಂದರ್ಯವರ್ಧಕ. ಸುಲಭವಾಗಿ, ಕಡಿಮೆ ದರದಲ್ಲಿ ಸಿಗುವಂತ ಉಪ್ಪಿನಿಂದ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಿಕೊಳ್ಳಬಹುದು . ಬೆಚ್ಚಗಿನ ನೀರಿಗೆ ಉಪ್ಪನ್ನು ಹಾಕಿ , ಅದರಲ್ಲಿ ಪಾದಗಳನ್ನಿಟ್ಟು ಕುಳಿತುಕೊಂಡರೆ ವಿಶ್ರಾಂತಿ ಸಿಗುವುದಲ್ಲದೇ , ಪಾದಗಳ ಉರಿಯನ್ನು ತಪ್ಪಿಸಬಹುದು . ಇದರ ಜೊತೆಗೆ ಉಪ್ಪು ಮುಖದ ಸೌಂದರ್ಯಕ್ಕೂ ಒಳ್ಳೆಯದು. ಎಣ್ಣೆಯುಕ್ತ ಚರ್ಮಕ್ಕೆ ಉಪ್ಪು ಬಹಳ ಉತ್ತಮ. ಉಗುರು ಬೆಚ್ಚಗಿನ ನೀರಿನಲ್ಲಿಒಂದು ಚಮಚ ಉಪ್ಪನ್ನು ಹಾಕಿ, ಮುಖದ ಮೇಲೆ ಚಿಮುಕಿಸಿ. ನಂತರ ಹತ್ತಿಯಿಂದ ಒರೆಸಿಕೊಂಡು, ಮುಖವನ್ನುತೊಳೆದುಕೊಳ್ಳಿ. ಬೆಚ್ಚಗಿನ ನೀರಿಗೆ ಉಪ್ಪು ಹಾಕಿ, ಅದರ ಆವಿಯನ್ನು ತೆಗೆದುಕೊಳ್ಳುವುದು ಒಳ್ಳೆಯದು. ಇದರಿಂದಲೂ ಎಣ್ಣೆಯುಕ್ತ ಚರ್ಮದವರು ಕಾಂತಿಯುತ ತ್ವಜೆ ಪಡೆಯಬಹುದು. ಕಣ್ಣಿನ ಉರಿಯೂತ ತಡೆಯಲು ಇದು ಸಹಕಾರಿ. ಆಯಾಸದ ಕಾರಣ ಹಾಗೂ ಸರಿಯಾಗಿ ನಿದ್ದೆ ಬರದಿದ್ದಲ್ಲಿ ಕಣ್ಣು ಊದಿಕೊಳ್ಳುತ್ತದೆ. ಉಪ್ಪನ್ನು ಬೆರೆಸಿರುವ ಬೆಚ್ಚಗಿನ ನೀರಿನಿಂದ ಉಬ್ಬಿದ ಜಾಗಕ್ಕೆ ಮಸಾಜ್ಮಾಡಿದರೆ, ಊತ ಕಡಿಮೆಯಾಗುತ್ತದೆ. ಉಪ್ಪೊಂದು ಉತ್ತಮ ಸ್ಕ್ರಬ್ಬರ್ ಆಗಿದೆ. ಕೈನಲ್ಲಿ ಸ್ವಲ್ಪ…
ಪ್ರತಿದಿನ ಕನಿಷ್ಠ ಒಂದು ಚಮಚ ತುಪ್ಪ ತಿನ್ನುವುದು ಆರೋಗ್ಯಕ್ಕೆ ಬಹಳ ಉತ್ತಮವಾಗಿದೆ. ಕೂದಲಿನ ಸಮಸ್ಯೆಗಳನ್ನೂ ಇದು ನಿವಾರಿಸುತ್ತದೆ. ತುಪ್ಪವು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುವ ಎಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದೆ. ಹಾಗಾಗಿ ದಟ್ಟನೆಯ ಕಪ್ಪು ಕೂದಲನ್ನು ಹೊಂದಲು ಬಯಸುವವರು ನಿಯಮಿತವಾಗಿ ತುಪ್ಪದ ಮಸಾಜ್ ಮಾಡಿಕೊಳ್ಳಬೇಕು. ನಿಯಮಿತವಾಗಿ ತುಪ್ಪವನ್ನು ಅನ್ವಯಿಸುವುದರಿಂದ ಕೂದಲಿನ ಹೊಳಪು ಹೆಚ್ಚಾಗುತ್ತದೆ. ಕೂದಲನ್ನು ಇದು ಮೃದುವಾಗಿಸುತ್ತದೆ. ದೇಸಿ ತುಪ್ಪ ತಲೆಹೊಟ್ಟನ್ನು ಕೂಡ ಹೋಗಲಾಡಿಸುತ್ತದೆ. ವಾರಕ್ಕೊಮ್ಮೆ ನೆತ್ತಿಗೆ ತುಪ್ಪದಿಂದ ಮಸಾಜ್ ಮಾಡಿಕೊಳ್ಳಬೇಕು. ಈ ರೀತಿ ಮಾಡುವುದರಿಂದ ಡೆಡ್ ಸ್ಕಿನ್ ತೆಗೆದುಹಾಕಬಹುದು. ಇದರಿಂದ ಕೂದಲಿನಲ್ಲಿ ರಕ್ತ ಪರಿಚಲನೆ ಹೆಚ್ಚಿಸುತ್ತದೆ. ತುಪ್ಪದಲ್ಲಿ ವಿಟಮಿನ್ ಎ, ಇ, ಜೊತೆಗೆ ಪ್ರೊಟೀನ್ ಮತ್ತು ಎಂಟಿ ಒಕ್ಸಿಡೆಂಟ್ ಗಳಿರುತ್ತವೆ. ಇದು ಕೂದಲಿಗೆ ಪೋಷಣೆ ನೀಡುತ್ತವೆ. ತುಪ್ಪದಲ್ಲಿರುವ ವಿಟಮಿನ್ ಇ ಕೂದಲು ಉದುರುವುದನ್ನು ತಡೆಯುತ್ತದೆ ಮತ್ತು ನೆತ್ತಿಯನ್ನು ಬಲಪಡಿಸುತ್ತದೆ.
ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ‘FIR’ ದಾಖಲು ಮಾಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು. ಇದೀಗ ಸಿಬಿಐಯಲ್ಲಿ ಇದ್ದಂತ ಪ್ರಕರಣವನ್ನು ಲೋಕಾಯುಕ್ತದಿಂದ ಮರು ತನಿಖೆ ಶುರು ಮಾಡಲಾಗಿದೆ. ಸಿಬಿಐಯಲ್ಲಿದ್ದ ಪ್ರಕರಣವನ್ನು ಮರು ತನಿಖೆಗೆ ಲೋಕಾಯುಕ್ತ ಎಫ್ ಐಆರ್ ದಾಖಲಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಪತ್ರ ಬರೆದಿದೆ. ಆದ್ರೆ, ಸಿಬಿಐ ಈವರೆಗೂ ಲೋಕಾಯುಕ್ತಕ್ಕೆ ಸಂಬಂಧಿಸಿದ ದಾಖಲೆ ಒದಗಿಸಿಲ್ಲ. 2017ರ ಆಗಸ್ಟ್ ನಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಅವರ ಕನಕಪುರ ಮನೆ, ಬೆಂಗಳೂರಿನ ನಿವಾಸ, ಕಚೇರಿ ಹಾಗೂ ಆಪ್ತರ ಮನೆಗಳು ಸೇರಿದಂತೆ 39 ಕಡೆ ದಾಳಿ ನಡೆಸಿದ್ದರು. ಕಾಂಗ್ರೆಸ್ ಎಂಎಲ್ಸಿ ಗೋವಿಂದರಾಜು ಅವರ ಡೈರಿಯಲ್ಲಿ ಹೆಸರು ಪತ್ತೆಯಾದ ನಂತರ ಶಿವಕುಮಾರ್ ಅವರನ್ನು ವಿಚಾರಣೆ ನಡೆಸಿದ್ದರು. ಡಿಕೆಶಿ ವಿರುದ್ಧದ ಸಿಬಿಐ ತನಿಖೆಯ ಆದೇಶವನ್ನು ಸರ್ಕಾರ ವಾಪಸ್ ಪಡೆದುಕೊಂಡಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ…
ನವದೆಹಲಿ: ಸೌರಶಕ್ತಿ ಮತ್ತು ಸುಸ್ಥಿರ ಪ್ರಗತಿಯನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ತಮ್ಮ ಸರ್ಕಾರವು ‘ಪಿಎಂ ಸೂರ್ಯ ಘರ್: ಮುಫ್ಟ್ ಬಿಜ್ಲಿ ಯೋಜನೆ’ ಅನ್ನು ಪ್ರಾರಂಭಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಸುಸ್ಥಿರ ಅಭಿವೃದ್ಧಿ ಮತ್ತು ಜನರ ಯೋಗಕ್ಷೇಮಕ್ಕಾಗಿ, ನಾವು ಪಿಎಂ ಸೂರ್ಯ ಘರ್: ಮುಫ್ಟ್ ಬಿಜ್ಲಿ ಯೋಜನೆಯನ್ನು ಪ್ರಾರಂಭಿಸುತ್ತಿದ್ದೇವೆ. 75,000 ಕೋಟಿ ರೂ.ಗಳ ಹೂಡಿಕೆಯ ಈ ಯೋಜನೆಯು ಪ್ರತಿ ತಿಂಗಳು 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಮೂಲಕ 1 ಕೋಟಿ ಮನೆಗಳನ್ನು ಬೆಳಗಿಸುವ ಗುರಿಯನ್ನು ಹೊಂದಿದೆ” ಎಂದು ಪ್ರಧಾನಿ ಹೇಳಿದರು. ಜನರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ನೀಡಲಾಗುವ ಗಣನೀಯ ಸಬ್ಸಿಡಿಗಳಿಂದ ಹಿಡಿದು ಭಾರಿ ರಿಯಾಯಿತಿಯ ಬ್ಯಾಂಕ್ ಸಾಲಗಳವರೆಗೆ, ಕೇಂದ್ರ ಸರ್ಕಾರವು ಜನರ ಮೇಲೆ ಯಾವುದೇ ವೆಚ್ಚದ ಹೊರೆಯಾಗದಂತೆ ನೋಡಿಕೊಳ್ಳುತ್ತದೆ ಎಂದು ಅವರು ಹೇಳಿದರು. ಈ ಯೋಜನೆಯನ್ನು ತಳಮಟ್ಟದಲ್ಲಿ ಜನಪ್ರಿಯಗೊಳಿಸುವ ಸಲುವಾಗಿ, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ಗಳು ತಮ್ಮ ವ್ಯಾಪ್ತಿಯಲ್ಲಿ ಮೇಲ್ಛಾವಣಿ ಸೌರ ವ್ಯವಸ್ಥೆಗಳನ್ನು ಉತ್ತೇಜಿಸಲು ಪ್ರೋತ್ಸಾಹಿಸಬೇಕು ಎಂದು…
ರಾಯಚೂರು: ನಾಪತ್ತೆಯಾಗಿದ್ದ ವ್ಯಕ್ತಿಯು ಅಸ್ಥಿಪಂಜರವಾಗಿ ಪತ್ತೆಯಾಗಿದ್ದಾರೆ. ಈ ಘಟನೆಯು ತಾಲೂಕಿನ ಕೊರ್ತಕುಂದಾ ಗ್ರಾಮದಲ್ಲಿ ನಡೆದಿದೆ. ರಸೂಲ್ ಸಾಬ್ (45) ಅಸ್ಥಿಪಂಜರವಾಗಿ ಪತ್ತೆಯಾದ ವ್ಯಕ್ತಿಯಾಗಿದ್ದಾರೆ. ರಸೂಲ್ ಅವರು ಜನವರಿ 4 ರಂದು ನಾಪತ್ತೆಯಾಗಿದ್ದರು. ಈ ಹಿನ್ನೆಲೆ ಅವರ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದ್ದರೂ ಅವರು ಮಾತ್ರ ಪತ್ತೆಯಾಗಿರಲಿಲ್ಲ. ಸೋಮವಾರ ಗ್ರಾಮದ ಹೊರವಲಯದಲ್ಲಿರುವ ದರ್ಗಾ ಬಳಿ ಅವರ ರುಂಡ ಪತ್ತೆಯಾಗಿದ್ದು, ಇಂದು ದರ್ಗಾದಿಂದ 1 ಕಿ.ಮೀ ದೂರದಲ್ಲಿರುವ ಬೆಟ್ಟದಲ್ಲಿ ಮುಂಡ ಪತ್ತೆಯಾಗಿದೆ. ಮೃತ ದೇಹದ ಮೇಲಿದ್ದ ಬಟ್ಟೆಗಳ ಆಧಾರದ ಮೇಲೆ ರಸೂಲ್ ಅವರು ಎಂದು ಗುರುತಿಸಿ ಪತ್ತೆಮಾಡಲಾಗಿದೆ. ಸಾಬ್ ಅವರನ್ನು ಯಾರೋ ಕೊಲೆ ಮಾಡಿ ಎಸೆದಿದ್ದಾರೆ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಯಾಪಲದಿನ್ನಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಚಂಡೀಗಢ: ಪೇಂಟ್ ನಲ್ಲಿ ಬಳಸಲಾಗುವ ಥಿನ್ನರ್ ನೀರು ಎಂದು ಭಾವಿಸಿ ಕುಡಿದು ಮಗುವೊಂದು ಮೃತಪಟ್ಟಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ಮೃತ ಮಗುವನ್ನು ಒಂದೂವರೆ ವರ್ಷದ ಹಕ್ಷನ್ ಎಂದು ಗುರುತಿಸಲಾಗಿದೆ. ಹರಿಯಾಣದ ಹಕ್ಷನ್ ಕುಟುಂಬ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿತ್ತು. ಮದುವೆ ನಡೆಯಲಿರುವ ಮನೆ ಆದ ಕಾರಣ ಮನೆಗೆ ಪೇಯಿಂಟ್ ಹಚ್ಚಲಾಗಿದೆ. ಈ ವೇಳೆ ಬಣ್ಣಕ್ಕೆ ಬಳಸಲಾದ ಥಿನ್ನರ್ ಅನ್ನು ಮೂಲೆಯೊಂದರಲ್ಲಿ ಇರಿಸಲಾಗಿತ್ತು. ಮದುವೆಗೆ ಬಂದಿದ್ದ ಹಕ್ಷನ್ ಆಟವಾಡುತ್ತ ಥಿನ್ನರ್ ಇದ್ದ ಜಾಗಕ್ಕೆ ಹೋಗಿ, ಅದನ್ನು ನೀರು ಎಂದು ಭಾವಿಸಿ ಕುಡಿದಿದ್ದಾನೆ. ಬಳಿಕ ತೀವ್ರ ಹೊಟ್ಟೆ ನೋವಿನಿಂದ ಪ್ರಜ್ಞಾಹೀನನಾಗಿ ಬಿದ್ದದ್ದ ಹಕ್ಷನ್ ನನ್ನು ಪೋಷಕರು ನೋಡಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ದಾರಿ ಮಧ್ಯೆಯೇ ಹಕ್ಷನ್ ಕೊನೆಯುಸಿರೆಳೆದಿದ್ದಾನೆ. ಸಿಆರ್ಪಿಸಿ 174 ಅಡಿಯಲ್ಲಿ ವರದಿಯನ್ನು ದಾಖಲಿಸಲಾಗುದ್ದು, ಕ್ರಮ ಕೈಗೊಂಡಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆ ನಿರ್ವಹಿಸಲು ಬಳಸಿಕೊಳ್ಳುತ್ತಿದ್ದು, ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆ ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸುವಂತೆ ಇಲ್ಲ ಎಂದು ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಮಕ್ಕಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಂತಹ ಕಾರ್ಯಗಳಿಂದ ದೂರವಿರಿಸುವುದು ಅಧಿಕಾರಿಗಳ, ಮುಖ್ಯ ಶಿಕ್ಷಕರ, ಶಿಕ್ಷಕರ, ಸಿಬ್ಬಂದಿಗಳ ಕರ್ತವ್ಯವಾಗಿದೆ. ಒಂದು ವೇಳೆ ಇದನ್ನು ಮೀರಿ ಶೌಚಾಲಯ ಸ್ವಚ್ಛತೆ ಮಾಡಿಸಿದರೆ ಅಂಥವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವುದಲ್ಲದೆ, ಎಫ್ಐಆರ್ ಅನ್ನು ಸಹ ದಾಖಲು ಮಾಡಲಾಗುತ್ತದೆ ಎಂದು ಅದರಲ್ಲಿ ತಿಳಿಸಲಾಗಿತ್ತು.
ಬೆಂಗಳೂರು: ಗಂಡನ ಅಕ್ರಮ ಸಂಬಧಕ್ಕೆ ಬೇಸತ್ತ ಪತ್ನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ರಾಜಗೋಪಾಲ ನಗರದ ಮೋಹನ್ ಥಿಯೇಟರ್ ಬಳಿಯ ಮನೆಯೊಂದರಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಯುವತಿಯ ಹೆಸರು ಕಾವ್ಯ (22). ದಾಂಪತ್ಯ ಜೀವನ ಶುರುವಾಗಿ ಇನ್ನೇನು 2 ವರ್ಷ ಮಾತ್ರ ಆಗಿದ್ದು, ಒಂದು ವರ್ಷದ ಮುದ್ದಾದ ಮಗುವೊಂದಿತ್ತು. ಮದುವೆಯಾಗುವ ಯುವಕ ಒಬ್ಬ ಸಾಫ್ಟ್ ವೇರ್ ಎಂಜಿನಿಯರ್, ಒಳ್ಳೆಯ ಕೆಲಸದಲ್ಲಿದ್ದಾನೆ ಎಂಬ ಕಾರಣಕ್ಕೆ ಐವತ್ತು ಲಕ್ಷ ರೂ. ಖರ್ಚು ಮಾಡಿ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ದುಡ್ಡಿನ ಜತೆ ಅರ್ಧ ಕೆಜಿ ಚಿನ್ನ ಕೂಡಾ ಕೊಟ್ಟಿದ್ದರು. ಆದರೆ, ಆ ಮನುಷ್ಯ ಮದುವೆಯಾದ ಕೂಡಲೇ ಕೆಲಸ ಬಿಟ್ಟಿದ್ದ. ಆಕೆಯ ಪೋಷಕರು ಕೊಟ್ಟ ವರದಕ್ಷಿಣೆಯ ಹಣದಲ್ಲೇ ದಿನದೂಡುತ್ತಿದ್ದ ಎನ್ನಲಾಗಿದೆ. ಇಷ್ಟಾದರೂ ಮುಗಿಯಲಿಲ್ಲ. ಬೇರೆ ಹೆಣ್ಣಿನ ಜೊತೆ ಅಕ್ರಮ ಸಂಬಂಧ ಹೊಂದಿದ್ದ. ಕೇಳಿದರೆ ತಂಗಿ ಅಂತಿದ್ದ! ಇಂಥ ನೀಚ ಗಂಡನ ಅಕ್ರಮ ಸಂಬಂಧದಿಂದ ಬೇಸತ್ತು ಆ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆ ಅಲ್ಲ, ಕೊಲೆ ಎಂದು ಆಕೆಯ ಹೆತ್ತವರು…