Subscribe to Updates
Get the latest creative news from FooBar about art, design and business.
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
Author: admin
ಕಲಬುರಗಿ: ಒಂದೇ ಸೀರೆ ಸುತ್ತಿಕೊಂಡು ತಾಯಿ, ಮಗಳು ನದಿಗೆ ಹಾರಿ ಪ್ರಾಣ ಕಳೆದುಕೊಂಡ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನಲ್ಲಿ ನಡೆದಿದೆ. ಅಫಜಲಪುರ ತಾಲೂಕಿನ ನಿಲೂರ ಗ್ರಾಮದ ನಿವಾಸಿಗಳಾದ ಸುಮಲತಾ(41) ಮತ್ತು ಮಗಳು ವರ್ಷಾ(17) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಮೇಲ್ನೋಟಕ್ಕೆ ಉತ್ತಮ ಕುಟುಂಬ ಮತ್ತು ಮಧ್ಯಮ ವರ್ಗಕ್ಕೆ ಸೇರಿದಂತೆ ಕಾಣುವ ಈ ತಾಯಿ ಮಗಳು ಯಾವುದೇ ಮಾನಸಿಕ ವೇದನೆಯಿಂದ ಈ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ತಾಯಿ ಮತ್ತು ಮಗಳು ಒಂದೇ ಸೀರೆಯನ್ನು ಕಟ್ಟಿಕೊಂಡು ಕಾಗಿಣ ನದಿಗೆ ಹಾರಿದ್ದಾರೆ. ನೀರಿಗೆ ಹಾರಿದ ಸಂದರ್ಭದಲ್ಲಿ ಯಾರಾದರೂ ಕೊನೆಯ ಹಂತದಲ್ಲಿ ಬದುಕಿಕೊಳ್ಳಲು ಪ್ರಯತ್ನ ನಡೆಸಬಾರದು ಎಂಬ ಕಾರಣಕ್ಕೆ ಈ ರೀತಿ ಕಟ್ಟಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಶಹಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು: ಇನ್ಮುಂದೆ ರೈಲುಗಳ ವಿಳಂಬ ಸಂಚಾರಕ್ಕೆ ಬ್ರೇಕ್ ಬೀಳಲಿದೆ. ಬೆಂಗಳೂರು–ಮೈಸೂರು ವಿಭಾಗ ವ್ಯಾಪ್ತಿಯಲ್ಲಿ ಆರು ಯೋಜನೆಗಳಿಗೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, 874.13 ಕೋಟಿ ರುಪಾಯಿ ವೆಚ್ಚದಲ್ಲಿ ಒಟ್ಟು 639.05 ಕಿ.ಮೀ. ರೈಲ್ವೆ ಮಾರ್ಗದಲ್ಲಿ ಆಟೋಮ್ಯಾಟಿಕ್ ಸಿಗ್ನಲಿಂಗ್ ಸಿಸ್ಟಂ ಜಾರಿಯಾಗಲಿದೆ. ರೈಲುಗಳ ವಿಳಂಬ ಸಂಚಾರದಿಂದಾಗಿ, ರೈಲಿನ ಮೂಲಕ ಬೆಂಗಳೂರಿಗೆ ಬರುವ ಪ್ರಯಾಣಿಕರು ಹೆಚ್ಚಾಗುತ್ತಿದ್ದು, ಆದರೆ ಬೆಂಗಳೂರಿನಿಂದ ಸರಿಯಾದ ಸಮಯಕ್ಕೆ ತಮ್ಮ ಊರು ತಲುಪಲು ಆಗ್ತಿಲ್ಲ. ತಮ್ಮ ಊರುಗಳಿಂದ ರಾಜಧಾನಿಗೆ ಬರಬೇಕೆಂದರು ಸರಿಯಾದ ಸಮಯಕ್ಕೆ ತಲುಪಲು ಆಗ್ತಿಲ್ಲ. ಎಎ ಎಲ್ಲಾ ಸಮಸ್ಯೆಗಳಿಗೆ ಕಾರಣ ಸರಿಯಾಗಿ ಸಿಗ್ನಲ್ ಸಿಗಲ್ಲ ಈ ಕಾರಣಕ್ಕಾಗಿ ಸೌತ್ ವೆಸ್ಟರ್ನ್ ರೈಲ್ವೆ ಆಟೋಮ್ಯಾಟಿಕ್ ಸಿಗ್ನಲಿಂಗ್ ಸಿಸ್ಟಮ್ ಅನ್ನು ಅಳವಡಿಸಲು ಪ್ಲಾನ್ ಮಾಡಿಕೊಂಡಿದ್ದು, ಇದಕ್ಕೆ ಕೇಂದ್ರ ರೈಲ್ವೆ ಬೋರ್ಡ್ ಈಗಾಗಲೇ ಗ್ರೀನ್ ಸಿಗ್ನಲ್ ನೀಡಿದ್ದು ಆಟೋಮ್ಯಾಟಿಕ್ ಸಿಗ್ನಲಿಂಗ್ ಸಿಸ್ಟಂನಿಂದ ರೈಲ್ವೆ ನಿಲ್ದಾಣದ ಟ್ರ್ಯಾಕ್ ಗಳಲ್ಲಿ ರೈಲುಗಳು ನಿಂತಿರುವ, ತೆರಳಿರುವ ರೈಲಿನ ಬಗ್ಗೆ ಪಕ್ಕಾ ಮಾಹಿತಿ ರೈಲ್ವೆ ಕಮಾಂಡ್ ಸೆಂಟರ್ ಸಿಗಲಿದೆ. ರೈಲುಗಳ ವಿಳಂಬ ಸಂಚಾರ…
ಆನಂದ ವಿ.ಕೆ. ಗಂಡ ತನ್ನ ದೇಹ ಬಯಕೆಯನ್ನು ಈಡೇರಿಸಿಕೊಳ್ಳಲು ಮಾತ್ರವೇ ತನ್ನನ್ನು ಬಳಕೆ ಮಾಡಿಕೊಳ್ಳುತ್ತಿದ್ದಾನೆ, ಆತನಿಗೆ ತನ್ನ ಮೇಲೆ ನಿಜವಾದ ಪ್ರೀತಿ ಇಲ್ಲ ಎನ್ನುವುದು ಸಾಕಷ್ಟು ಮಹಿಳೆಯರ ಮೂಕರೋದನೆಯಾಗಿರುತ್ತದೆ. ಈ ರೀತಿಯ ಮನೋಭಾವನೆಗಳು ಸಂಗಾತಿಗಳ ನಡುವೆ ಅಂತರವನ್ನು ಸೃಷ್ಟಿಸಲು, ಪರಸ್ಪರ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಲು ಕಾರಣವಾಗಬಹುದು. ದಾಂಪತ್ಯ ಜೀವನದಲ್ಲಿ ಲೈಂಗಿಕ ಕ್ರಿಯೆ ಎನ್ನುವುದು ಪ್ರಕೃತಿಯ ನಿಯಮದಂತೆ ನಡೆಯಬೇಕು. ಗಂಡು ಹೆಣ್ಣಿನ ಮಿಲನ ಪರಸ್ಪರ ದೈಹಿಕ ಸುಖದ ಕಾಮನೆಗಳನ್ನು ಈಡೇರಿಸಿಕೊಳ್ಳುವ ಕ್ರಿಯೆ ಆಗಿದ್ದರೂ, ಆ ವಿಚಾರದಲ್ಲಿ ಹೆಣ್ಣಿಗಾಗಲಿ ಗಂಡಿಗಾಗಲಿ ವಿರಸ ಮೂಡುವಂತಿರಬಾರದು. ಈ ವಿಚಾರದಲ್ಲಿ ಗಂಡಸರು ಹೆಚ್ಚು ಕಾಳಜಿ ವಹಿಸಬೇಕು. ಸಾಮಾನ್ಯವಾಗಿ ಎಲ್ಲ ವಿಚಾರಗಳಲ್ಲೂ ಗಂಡಿಗಿಂತ ಹೆಣ್ಣಿಗೆ ಹೊತ್ತು ಗೊತ್ತಿನ ಕಲ್ಪನೆ ಇರುತ್ತದೆ. ಹೆಣ್ಣು ರತಿಕ್ರಿಯೆ ಬೇಡ ಎಂದು ಹೇಳಲು ನಾನಾ ಕಾರಣಗಳಿರುತ್ತವೆ. ಆದರೆ ಆಕೆಗೂ ರತಿಕ್ರಿಯೆಯ ಆಕಾಂಕ್ಷೆಗಳು ಇರುತ್ತವೆ. ಆದರೆ, ಆಕೆ ಕೆಲವೊಂದು ಸಮಯದಲ್ಲಿ ವಿವೇಚನೆಯಿಂದ ರತಿಕ್ರಿಯೆಯನ್ನು ನಿರಾಕರಿಸಬಹುದು. ಆ ಸಂದರ್ಭದಲ್ಲಿ ಗಂಡು ಆಕೆಯ ಭಾವನೆಗಳನ್ನು ಅರ್ಥ ಮಾಡಿಕೊಳ್ಳಬೇಕಿದೆ. ಮನೆ ಕೆಲಸಗಳ ಒತ್ತಡ…
ಗದಗ: ಕಾಂಗ್ರೆಸ್ ಮುಖಂಡರಾಗಿರುವ ಜನಪ್ರಿಯ ವೈದ್ಯ ಶಶಿಧರ್ ಹಟ್ಟಿ ಮನೆಯಲ್ಲಿ ಲುಂಗಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು, ಅವರು ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಕಾಂಗ್ರೆಸ್ ನಾಯಕರೊಬ್ಬರ ಹೆಸರು ಇರುವುದು ವಿಶೇಷವಾಗಿದೆ. ತನ್ನ ಆತ್ಮಹತ್ಯೆಗೆ ಮರಳು ದಂಧೆಕೋರ, ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಕಾರಣ ಎಂದು ಶಶಿಧರ ಹಟ್ಟಿ ಬರೆದಿಟ್ಟಿದ್ದಾರೆ. “ನಿಜವೆಂದರೆ ಶಶಿಧರ ಹಟ್ಟಿ, ಶರಣಗೌಡ ಪಾಟೀಲ್ ಸೇರಿದಂತೆ ಮೂವರು ಮರಳು ದಂಧೆಯಲ್ಲಿ ಭಾಗಿದಾರರು. ಆದರೆ, ಶಶಿಧರ ಹಟ್ಟಿ ಅವರು ಎಲ್ಲಾ ಲೆಕ್ಕವನ್ನು ಸರಿಯಾಗಿ ಕೊಟ್ಟರೂ ಪದೇಪದೆ ಶರಣಗೌಡ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ” ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ. ತನ್ನ ಆತ್ಮಹತ್ಯೆಗೆ ಕಾರಣವಾಗಿರುವ ಶರಣ ಗೌಡ ಅವರಿಗೆ ಶಿಕ್ಷೆ ಕೊಡಿಸಬೇಕು, ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ರಿಗೆ ಈ ವಿಷಯ ತಿಳಿಸಿ ಎಂದು ಮನವಿ ಮಾಡಲಾಗಿದೆ. ಸೋಮವಾರ ರಾತ್ರಿ ಆತ್ಮಹತ್ಯೆ ಘಟನೆ ನಡೆದಿದೆ. ಸ್ಥಳಕ್ಕೆ ರೋಣ ಪೊಲೀಸರು ಭೇಟಿ…
ಬೆಂಗಳೂರು: ಮಾಗಡಿ ಮುಖ್ಯರಸ್ತೆಯ ಕಡಬಗೆರೆ ಕ್ರಾಸ್ ಬಸ್ ನಿಲ್ದಾಣ ಬಳಿ ಯುವಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತ ಯುವಕ ಉತ್ತರ ಭಾರತ ಮೂಲದ ಯುವಕನೆಂದು ತಿಳಿದು ಬಂದಿದ್ದು, ಮೃತನ ಗುರುತು ಪತ್ತೆಯಾಗಿಲ್ಲ. ಕುಡಿದ ಅಮಲಿನಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಲಗಿದ್ದರಲ್ಲೆ ಯುವಕ ಮೃತಪಟ್ಟಿದ್ದಾನೆ. ಯುವಕನ ಶವ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ನ ಅರಣ್ಯದಂಚಿನಲ್ಲಿರುವ ಶಿವಪುರ ಹೊರವಲಯದಲ್ಲಿ ಹುಲಿ ದಾಳಿಗೆ ಇಬ್ಬರು ಕುರಿಗಾಹಿಗಳಿಗೆ ಗಾಯವಾಗಿರುವಂತಹ ಘಟನೆ ನಡೆದಿದೆ. ಶಿವಶೆಟ್ಟಿ(55), ಜವರಯ್ಯ(65) ಗಾಯಗೊಂಡವರು. ಮೊದಲಿಗೆ ಕುರಿಗಳ ಮೇಲೆ ಹುಲಿ ದಾಳಿ ನಡೆಸಿದ್ದು, ಕುರಿಯನ್ನು ರಕ್ಷಿಸಲು ಕುರಿಗಾಹಿಗಳು ಯತ್ನಿಸಿದಾಗ ಕುರಿಗಾಹಿಗಳ ಮೇಲೆ ದಾಳಿ ಮಾಡಿದೆ. ಗಾಯಾಳುಗಳಿಗೆ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿಯಲ್ಲಿ ಇತ್ತೀಚೆಗೆ ಹಸುವಿನ ಮೇಲೆ ಹುಲಿ ದಾಳಿ ಮಾಡಿತ್ತು. ಕಲ್ಲಹಳ್ಳಿ-ಸಂಪಿಗೆಪುರ ಮಾರ್ಗದಲ್ಲಿ ಹುಲಿ ಸಂಚರಿಸುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪದೇ ಪದೆ ಹುಲಿ ಕಾಣಿಸಿರುವ ಕಾರಣ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದರು.
ಸಂಘಪರಿವಾರದ ಹೋರಾಟಗಾರ, ಬಿಜೆಪಿ ಕಟ್ಟಾಳು ನಾರಾಯಣಸಾ ಭಾಂಡಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿದೆ ಎಂದು ವರದಿ ತಿಳಿಸಿದೆ. ಬಿಜೆಪಿ ಘೋಷಣೆ ಬೆನ್ನಲ್ಲೇ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ರಾಜ್ಯಸಭಾ ಸ್ಥಾನಕ್ಕೆ ನನ್ನ ಹೆಸರು ಘೋಷಣೆಯಾಗುತ್ತೆ ಎಂದು ನಾನು ಭಾವಿಸಿರಲಿಲ್ಲ. ನನ್ನ ಹೋರಾಟ ಹಾಗೂ ಹಿರಿತನ ಮನಗಂಡು ಪಕ್ಷದ ಹಿರಿಯರು ನನಗೆ ರಾಜ್ಯಸಭಾ ಸ್ಥಾನ ನೀಡಿದ್ದಾರೆ. ಸಾಮಾನ್ಯ ಕಾರ್ಯಕರ್ತನನ್ನ ಬೆಳೆಸಿ, ಗುರುತಿಸುವುದು ಬಿಜೆಪಿಯಲ್ಲಿ ಮಾತ್ರ ಎಂದು ನಾರಾಯಣಸಾ ಹೇಳಿದ್ದಾರೆ. ನಾರಾಯಣಸಾ ಭಾಂಡಗೆ ಸಂಘದಲ್ಲಿ 40 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ತಮ್ಮ 17 ನೇ ವಯಸ್ಸಿಗೆ ಆರ್ಎಸ್ಎಸ್ ಸೇರ್ಪಡೆಯಾಗಿದ್ದರು. ಬಾಗಲಕೋಟೆಯಲ್ಲಿ ಎಬಿವಿಪಿ ಸಂಸ್ಥಾಪಕ ಸದಸ್ಯರೂ ಆಗಿದ್ದರು. ವಿಶ್ವ ಹಿಂದೂ ಪರಿಷತ್ ನಲ್ಲೂ ಸೇವೆ ಸಲ್ಲಿಸಿದ್ದಾರೆ. 1973 ರಲ್ಲಿ ಅಂದಿನ ಜನಸಂಘ ಸೇರ್ಪಡೆ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. ಇಂದಿರಾ ಗಾಂಧಿ ಅವರು ಆಲಮಟ್ಟಿ ಜಲಾಶಯಕ್ಕೆ ಭೇಟಿ ಕೊಟ್ಟಾಗ ಕಪ್ಪು ಬಾವುಟ ತೋರಿಸಿ ವಿರೋಧ ವ್ಯಕ್ತಪಡಿಸಿ ಬಂಧನಕ್ಕೆ ಒಳಗಾಗಿದ್ದರು. ತುರ್ತು ಪರಿಸ್ಥಿತಿ…
ಕತಾರ್ ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಎಂಟು ಮಂದಿ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ. ಭಾರತ ಸರ್ಕಾರದ ಮಧ್ಯಪ್ರವೇಶದ ಬಳಿಕ ಈ ಎಂಟು ಮಂದಿಯ ಮರಣ ದಂಡನೆಯನ್ನು ಸುಧೀರ್ಘ ಅವಧಿಯ ಕಾರಾಗೃಹ ಶಿಕ್ಷೆಯಾಗಿ ಪರಿವರ್ತಿಸಲಾಗಿತ್ತು ಎಂದು ವರದಿ ತಿಳಿಸಿದೆ. ಕತಾರ್ ನಲ್ಲಿ ದಹ್ರಾ ಗ್ಲೋಬಲ್ ಪರವಾಗಿ ಗೂಢಚಾರಿಕೆ ಕಾರ್ಯ ನಿರ್ವಹಿಸುತ್ತಿದ್ದ ಈ ಎಂಟು ಮಂದಿಯನ್ನು ಬಿಡುಗಡೆ ಮಾಡಿದ ಅಲ್ಲಿನ ಸರ್ಕಾರಕ್ಕೆ ಭಾರತ ಕೃತಜ್ಞತೆ ಸಲ್ಲಿಸಿದೆ. ಈ ಪೈಕಿ ಏಳು ಮಂದಿ ಈಗಾಗಲೇ ಭಾರತಕ್ಕೆ ಮರಳಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಈ ವ್ಯಕ್ತಿಗಳು ಭಾರತಕ್ಕೆ ಮರಳಲು ಅನುವಾಗುವಂತೆ ಕತಾರ್ ನ ಅಮೀರ್ ಕೈಗೊಂಡ ನಿರ್ಧಾರವನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶ್ಲಾಘಿಸಿದೆ. ದೇಶದ ಸಬ್ಮೆರಿನ್ ಯೋಜನೆಯ ಬಗ್ಗೆ ಗೂಢಚರ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಈ ಎಂಟು ಮಂದಿಯನ್ನು 2022ರ ಅಕ್ಟೋಬರ್ ನಲ್ಲಿ ಕತಾರ್ ನಲ್ಲಿ ಬಂಧಿಸಲಾಗಿತ್ತು. ಕತಾರ್ ನ್ಯಾಯಾಲಯ ಇವರಿಗೆ ಗಲ್ಲು ಶಿಕ್ಷೆ…
ಕಲಬುರಗಿ ಜಿಲ್ಲೆಯ ಮಾದನ ಹಿಪ್ಪರಗಿಯಲ್ಲಿ ಮುಸ್ಲಿಂ ಕುಟುಂಬವೊಂದು ಮಗನ ಮದುವೆಯನ್ನು ದೇವಾಲಯದ ಎದುರು ಮಾಡಿಸಿದ ಘಟನೆ ನಡೆದಿದೆ. ಮಹಿಬೂಬ್ ಅಹ್ಮದ್ ಹಾರಕೂಡ ಎಂಬುವರ ಪುತ್ರ ಸಿಕಂದರ್ ಮದುವೆ ಗ್ರಾಮದ ಖಂಡೇಶ್ವರ ಪಾದಗಟ್ಟೆ ಎದುರು ವಿಜೃಂಭಣೆಯಿಂದ ನಡೆದಿದೆ. ಮದುವೆ ಶಾಸ್ತ್ರ ಮುಸ್ಲಿಂ ಧರ್ಮದ ಪ್ರಕಾರ ನಡೆದಿದ್ದು ಬಿಟ್ಟರೆ ಉಳಿದೆಲ್ಲವೂ ಲಿಂಗಾಯತ ಸಂಪ್ರದಾಯದ ಪ್ರಕಾರ ನಡೆಯಿತು ಎಂದು ವರದಿ ತಿಳಿಸಿದೆ. ಈ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ನೂರಾರು ಮನೆಗಳಿವೆ. ಇಲ್ಲಿಯವರೆಗೆ ಅವರೆಲ್ಲರೂ ಗ್ರಾಮದಲ್ಲಿರುವ ಎರಡೂ ದರ್ಗಾಗಳ ಎದುರು ವೇದಿಕೆ ಹಾಕಿ ಮದುವೆ ಮಾಡಿಸುತ್ತಿದ್ದರು. ಆದರೆ ಮಹಿಬೂಬ್ ಹಿಂದೂ ಸಮಾಜದವರೊಂದಿಗೆ ಕೂಡಿ ಖಂಡೇಶ್ವರನ ಪಾದುಕೆ ದೇಗುಲದ ಎದುರು ಮದುವೆ ಮಾಡಿಸಿ ಸುದ್ದಿಯಾಗಿದ್ದಾರೆ.
ಯುವಕನೋರ್ವ ನಡು ರಸ್ತೆಯಲ್ಲಿಯೇ ಗನ್ ಹಿಡಿದು ಹುಚ್ಚಾಟ ಮೆರೆದ ಘಟನೆ ಶಿವಮೊಗ್ಗದ ಸಾಗರ ಮಾರ್ಕೆಟ್ ರಸ್ತೆ ಹಿಂಭಾಗದಲ್ಲಿ ನಡೆದಿದೆ. ಈತ ಪಾನಮತ್ತನಾಗಿದ್ದ ಎಂದು ತಿಳಿದು ಬಂದಿದೆ. ಜನರೆದುರು ಬಂದು ನಡುರಸ್ತೆಯಲ್ಲಿಯೇ ಶೂಟ್ ಮಾಡುತ್ತೇನೆ ಎಂದು ಅಲ್ಲಿನ ಸ್ಥಳೀಯರಿಗೆ ಧಮ್ಕಿ ಹಾಕಿದ್ದಾನೆ. ಗನ್ ನೋಡಿ ಕೆಲಕಾಲ ಜನರು ಭಯಭೀತರಾಗಿದ್ದಾರೆ. ಅವಾಜ್ ಹಾಕಿದ ಯುವಕನಿಗೆ ಸ್ಥಳೀಯ ಯುವಕರು ಥಳಿಸಿದ್ದಾರೆ. ಪ್ರಕರಣ ಸಂಬಂಧ ಸಾಗರ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.