Subscribe to Updates
Get the latest creative news from FooBar about art, design and business.
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
Author: admin
ಬೆಂಗಳೂರು: ಇಂದೇ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಎನ್ ಡಿಆರ್ಎಫ್ ಅಡಿ ಬರ ಪರಿಹಾರ ಘೋಷಣೆ ಮಾಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದೇ ಗೃಹ ಸಚಿವರು ಘೋಷಣೆ ಮಾಡಿದರೆ ರೈತರ ಪರ ಕಾಳಜಿ ಇದೆ ಅಂತ ಒಪ್ಪುತ್ತೇವೆ. ಇಲ್ಲದಿದ್ದರೆ ರೈತರ ಪರ ಯಾವುದೇ ಕಾಳಜಿ ಇಲ್ಲ, ಕೇವಲ ನಾಟಕ ಮಾಡುತ್ತಿದ್ದಾರೆ ಅಂತ ಅನಿಸುತ್ತದೆ ಎಂದರು. ಬರ ಪೀಡಿತ ತಾಲೂಕುಗಳನ್ನು ಸೆಪ್ಟೆಂಬರ್ 13 ರಂದು ಘೋಷಣೆ ಮಾಡಿದ್ದು, 18,172 ಕೋಟಿ ಬರ ಪರಿಹಾರಕ್ಕಾಗಿ ಸೆಪ್ಟೆಂಬರ್ 23 ರಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಕೇಂದ್ರ ಕೃಷಿ ಕಾರ್ಯದರ್ಶಿಯನ್ನೂ ಭೇಟಿ ಮಾಡಿದ್ದೇವೆ. ಡಿಸೆಂಬರ್ ನಲ್ಲಿ ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಮಾಡಿದ್ದೇವೆ. ಜನವರಿಯಲ್ಲೂ ಸಿದ್ದರಾಮಯ್ಯ ಭೇಟಿಯಾಗಿ ಮನವಿ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಸಭೆ ಮಾಡಿ ಯಾವ ತೀರ್ಮಾನವೂ ಕೈಗೊಂಡಿಲ್ಲ ಎಂದರು.
ಮಧ್ಯಪ್ರದೇಶ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಏಕಾಂಗಿಯಾಗಿ 370 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಧ್ಯಪ್ರದೇಶದಲ್ಲಿ 7550 ಕೋಟಿ ರೂ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಬಳಿಕ ಪ್ರಧಾನಿ ನರೇಂದ್ರ ಮಾತನಾಡುತ್ತಿದ್ದರು. ನಾನು ಮಧ್ಯಪ್ರದೇಶಕ್ಕೆ ಚುನಾವಣಾ ಪ್ರಚಾರಕ್ಕಾಗಿ ಬಂದಿಲ್ಲ, ಆದರೆ ಜನರ ಸೇವೆಗಾಗಿ ಬಂದಿದ್ದೇನೆ ಎಂದು ಇದೇ ವೇಳೆ ಅವರು ಹೇಳಿದರು. ಮಧ್ಯಪ್ರದೇಶವು ಬುಡಕಟ್ಟು ಜನಾಂಗದವರಿಗೆ ಮೀಸಲಾದ ಆರು ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವುದರಿಂದ ರಾಜ್ಯದಲ್ಲಿ ಪ್ರಧಾನಿ ಮೋದಿಯವರ ಪ್ರಚಾರವು ಮಹತ್ವ ಪಡೆದಿದೆ.
ಫೆಬ್ರವರಿ 13 ರಂದು ನಡೆಯಲಿರುವ ಹಿಂದೂ ದೇವಾಲಯದ ಉದ್ಘಾಟನೆಗೆ ಯುಎಇ ಸಿದ್ಧತೆ ನಡೆಸಿದೆ. ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಯುಎಇಗೆ ಆಗಮಿಸಲಿದ್ದಾರೆ. ಅವರು ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಇದು 2015 ರ ನಂತರ ಯುಎಇಗೆ ಪ್ರಧಾನಿಯವರ ಏಳನೇ ಭೇಟಿಯಾಗಿದೆ. ಪ್ರಧಾನಮಂತ್ರಿಯವರು ದುಬೈನಲ್ಲಿ 2024 ರ ವಿಶ್ವ ಸರ್ಕಾರಿ ಶೃಂಗಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಮತ್ತು ಶೃಂಗಸಭೆಯಲ್ಲಿ ವಿಶೇಷ ಮುಖ್ಯ ಭಾಷಣವನ್ನು ಮಾಡಲಿದ್ದಾರೆ. ಜಾಯೆದ್ ಸ್ಪೋರ್ಟ್ಸ್ ಸಿಟಿಯಲ್ಲಿ ನಡೆಯುವ ಸಮಾರಂಭದಲ್ಲಿ ಮೋದಿ ಅವರು ಅಬುಧಾಬಿಯ ಮೊದಲ ಹಿಂದೂ ದೇವಾಲಯವಾದ ಬಾಪ್ಸ್ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಯುಎಇಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡುವುದಾಗಿಯೂ ಸಚಿವಾಲಯ ತಿಳಿಸಿದೆ. ಭಾರತ ಮತ್ತು ಯುಎಇ ಬಲವಾದ ರಾಜಕೀಯ, ಸಾಂಸ್ಕೃತಿಕ ಮತ್ತು ಆರ್ಥಿಕ ಸಂಬಂಧಗಳೊಂದಿಗೆ ಬೆಚ್ಚಗಿನ, ನಿಕಟ ಮತ್ತು ಬಹುಪಕ್ಷೀಯ ಸಂಬಂಧಗಳನ್ನು ಹೊಂದಿವೆ.…
ತಿಪಟೂರು: ಜಲಮೂಲಗಳ ಸಂರಕ್ಷಣೆ ಅತ್ಯಂತ ಮಹತ್ವವಾದದ್ದು, ಜಲವಿಲ್ಲದಿದ್ದರೆ ಬದುಕಲು ಅಸಾಧ್ಯ ಹಾಗಾಗಿ ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಿಳಿಸಿದರು. ತಿಪಟೂರು ತಾಲೂಕಿನ ಸುಕ್ಷೇತ್ರ ಕೆರಗೋಡಿ- ರಂಗಾಪುರ ಶ್ರೀ ಮಠದ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ನಮ್ಮೂರು ನಮ್ಮ ಕೆರೆ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಮಾಡಲಾದ 610 ನೇ ಕೆರೆ ಹಸ್ತಾಂತರ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಲ ಇಲ್ಲದೆ ಯಾರೊಬ್ಬರೂ ಬದುಕಲು ಸಾಧ್ಯವಿಲ್ಲ ಅಗ್ನಿ ವಾಯು ಕೂಡ ಮುಖ್ಯ ಆದರೆ ನಾವು ಮುಖ್ಯವಾದವುಗಳನ್ನೇ ಮರೆಯುತ್ತಿದ್ದೇವೆ. 2022 ರಲ್ಲಿ ಉಂಟಾದ ಅತಿವೃಷ್ಟಿಯನ್ನು ನಾವೆಲ್ಲರೂ ನಮ್ಮ ಕಣ್ಣೆದುರೇ ನೋಡಿದ್ದೇವೆ. ಕೆರೆ ಕುಂಟೆಗಳು ಕಾಲುವೆಗಳು ಸರಿಯಾಗಿದ್ದರೆ ನೀರು ಸರಿಯಾಗಿ ಹರಿಯುತ್ತದೆ ಅದರಿಂದ ಕೆರೆಕುಂಟೆ ಗಳ ಉಳಿವಿಗೆ ಸಂಸ್ಥೆಯ ಯೋಜನೆಯ ಮೂಲಕ ಕಾರ್ಯಕ್ರಮವನ್ನು ರೂಪಿಸಿದ್ದು ಇದಕ್ಕೆ ಗ್ರಾಮಸ್ಥರ ಸಹಕಾರವು ಮುಖ್ಯ ಎಂದರು. ಗ್ರಾಮದ ಕೆರೆ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಹಲವಡೆ ಕೆರೆ ಅಭಿವೃದ್ಧಿ…
ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯಲ್ಲಿ ಅತ್ಯಂತ ಅದ್ಧೂರಿಯಿಂದ ಸಂವಿಧಾನ ಜಾಗೃತಿ ಜಾಥ ಯಶಸ್ವಿ ಕಂಡಿದೆ. ಬೂದಗವಿ(ಸಿದ್ದರಬೆಟ್ಟ) ಗ್ರಾಮ ಪಂಚಾಯತ್ ವ್ಯಾಪ್ತಿಯ ಮರೇನಾಯಕನಹಳ್ಳಿ ಗ್ರಾಮಕ್ಕೆ ಬಂದ ಸಂವಿಧಾನ ಜಾಗೃತಿ ಜಾಥಾ ರಥವನ್ನು ವಿವಿಧ ಕಲಾ ತಂಡಗಳೊಂದಿಗೆ ಕುಂಭ ಕಳಸ ಹೊತ್ತು ಮಹಿಳೆಯರು ಸ್ವಾಗತಿಸಿಕೊಂಡು ಗ್ರಾಮ ಪಂಚಾಯತ್ ಆಡಳಿತ ವರ್ಗ ಚಾಲನೆ ನೀಡಿತು. ಕೊರಟಗೆರೆ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ,ಸಮಾಜ ಕಲ್ಯಾಣ ಇಲಾಖೆ ರಾಜ್ಯ ಸರ್ಕಾರ ಆದೇಶದಂತೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳನ್ನ ತಳಿರು ತೋರಣಗಳಿಂದ ಸಿಂಗರಿಸಿ ಅತ್ಯಂತ ಆತ್ಮೀಯವಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಘು ನಂದನ್, ಸಂವಿಧಾನ ಶಿಲ್ಪಿ,ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ಭಾರತೀಯರಾದ ನಾವೆಲ್ಲರೂ ಅತ್ಯಂತ ಹೆಮ್ಮೆಯಿಂದ ಗೌರವಿಸಬೇಕು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ನಿಲುವುಗಳನ್ನ ಪಾಲಿಸಬೇಕು. ಈ ಕಾರ್ಯಕ್ರಮವು…
ಸಿಕ್ಕಿಂನಲ್ಲಿ ಹಲವು ಕಾರುಗಳಿಗೆ ಹಾಲಿನ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, 20 ಮಂದಿ ಗಾಯಗೊಂಡಿದ್ದಾರೆ. ಸಿಕ್ಕಿಂನ ಗ್ಯಾಂಗ್ಟಾಕ್ ನಲ್ಲಿ ಈ ಘಟನೆ ನಡೆದಿದೆ. ಸಿಕ್ಕಿಂನ ರಾಣಿಪೂಲ್ ನಲ್ಲಿ ಶನಿವಾರ ನಡೆದ ಜಾತ್ರೆಯಲ್ಲಿ ನಿಂತಿದ್ದ ಮೂರು ಕಾರುಗಳಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಆ ಪ್ರದೇಶದಲ್ಲಿ ನೆರೆದಿದ್ದ ಅನೇಕರು ನಜ್ಜುಗುಜ್ಜಾದರು. ಹಾಲಿನ ಟ್ಯಾಂಕರ್ ನ ಬ್ರೇಕ್ ಫೇಲ್ ಆಗಿರೋದೇ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಗಳಿಂದ ತಿಳಿದು ಬಂದಿದೆ. ಗಾಯಾಳುಗಳನ್ನು ಸೆಂಟ್ರಲ್ ರೆಫರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಪಘಾತದ ವೇಳೆ ಮೈದಾನ ಜನರಿಂದ ತುಂಬಿತ್ತು. ಹಾಲಿನ ಟ್ಯಾಂಕರ್ ಬದಿಯಲ್ಲಿ ಸಿಕ್ಕಿಂ ಹಾಲು ಒಕ್ಕೂಟದ ಲೇಬಲ್ ಇತ್ತು.
ಉತ್ತರ ಪ್ರದೇಶ ವಿಧಾನಸಭೆಯ ಎಲ್ಲಾ ಸದಸ್ಯರು ಇಂದು ಅಯೋಧ್ಯೆ ರಾಮ ಮಂದಿರದಲ್ಲಿ ದರ್ಶನ ಪಡೆಯಲಿದ್ದಾರೆ. ಫೆಬ್ರವರಿ 11 ರಂದು ರಾಮಲಲ್ಲಾನ ದರ್ಶನಕ್ಕಾಗಿ ಅಯೋಧ್ಯೆಗೆ ತೆರಳುವಂತೆ ಮುಖ್ಯಮಂತ್ರಿ ಯೋಗಿ ಬುಧವಾರ ಎಲ್ಲಾ ಸದಸ್ಯರಿಗೆ ಮನವಿ ಮಾಡಿದ್ದರು. ವಿಧಾನಸಭೆ ಸ್ಪೀಕರ್ ಸತೀಶ್ ಮಹಾನಾ ಅವರು ಅಯೋಧ್ಯೆಗೆ ಭೇಟಿ ನೀಡುವಂತೆ ಎಲ್ಲ ಸದಸ್ಯರಿಗೆ ಆಹ್ವಾನ ನೀಡಿದ್ದಾರೆ. ಇದಕ್ಕಾಗಿ ಸಾರಿಗೆ ಸಂಸ್ಥೆಯ 10 ಸೂಪರ್ ಲಕ್ಸುರಿ/ಪ್ರೀಮಿಯಂ ಬಸ್ ಗಳನ್ನು ಸ್ಥಾಪಿಸಲಾಗುವುದು. ಯೋಗಿ ಸರ್ಕಾರದ ಪರವಾಗಿ ಉತ್ತರ ಪ್ರದೇಶ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಬಸ್ಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ. ಎಲ್ಲಾ ಸದಸ್ಯರನ್ನು ಸಾಗಿಸಲು ಈ ಬಸ್ ಗಳು ಬೆಳಿಗ್ಗೆ 8:15 ಕ್ಕೆ ವಿಧಾನ ಭವನದ ಮುಂದೆ ಬರುತ್ತವೆ. ಬಸ್ ಗಳಲ್ಲಿ ಅಗ್ನಿಶಾಮಕ ಸಾಧನ ಇರಬೇಕು. ಜೊತೆಗೆ ಪ್ರಥಮ ಚಿಕಿತ್ಸಾ ಕಿಟ್ಗಳನ್ನು ಹೊಂದಿರುವುದು ಮುಂತಾದ ಸೂಚನೆಗಳನ್ನು ನೀಡಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೇರವಾಗಿ ಅಯೋಧ್ಯೆ ವಿಮಾನ ನಿಲ್ದಾಣ ತಲುಪಲಿದ್ದಾರೆ. ಇದಾದ ಬಳಿಕ ಸಚಿವರು ಸದನದ ಸದಸ್ಯರೊಂದಿಗೆ ದರ್ಶನಕ್ಕೆ…
ದೆಹಲಿ ಚಲೋ ಮಾರ್ಚ್ ಎದುರಿಸಲು ಹರಿಯಾಣ ಸಿದ್ಧತೆ ನಡೆಸಿದೆ. 13 ರಂದು ಸಂಯುಕ್ತ ಕಿಸಾನ್ ಮೋರ್ಚಾ, ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200 ಕ್ಕೂ ಹೆಚ್ಚು ರೈತ ಸಂಘಗಳಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತ್ರಿಪಡಿಸಲು ಕಾನೂನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು ಪಾದಯಾತ್ರೆಯ ಉದ್ದೇಶವಾಗಿದೆ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸರ್ಕಾರ ಫೆಬ್ರವರಿ 13 ರವರೆಗೆ ಮೊಬೈಲ್ ಇಂಟರ್ನೆಟ್, ಬಲ್ಕ್ ಎಸ್ಎಂಎಸ್ ಮತ್ತು ಎಲ್ಲಾ ಡಾಂಗಲ್ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿತು. ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಈ ಆದೇಶವು ಫೆಬ್ರವರಿ 11 ರಂದು ಬೆಳಿಗ್ಗೆ 6 ರಿಂದ ಫೆಬ್ರವರಿ 13 ರ ರಾತ್ರಿ 11:59 ರವರೆಗೆ ಜಾರಿಯಲ್ಲಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹರಿಯಾಣ ಸರ್ಕಾರ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಮೊಬೈಲ್ ನೆಟ್ವರ್ಕ್ಗಳಲ್ಲಿ ಧ್ವನಿ ಕರೆಗಳನ್ನು ಹೊರತುಪಡಿಸಿ…
ಸರಗೂರು: ಫೆ.26ರ ಸೋಮವಾರದಿಂದ ಫೆ.೨28ರವರೆಗೆ ಕಂದೇಗಾಲ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವನ್ನು ಆಚರಿಸಲು ಜಾತ್ರಾ ಕಮಿಟಿ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ತಾಲ್ಲೂಕಿನ ಸಾಗರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದೇಗಾಲ ಗ್ರಾಮದ ಮಹದೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಪೂರ್ವಭಾವಿ ಸಭೆಯಲ್ಲಿ ಕಮಿಟಿ ಅಧ್ಯಕ್ಷ ಮತ್ತು ಸರ್ವಸದಸ್ಯರು ಸುತ್ತಮುತ್ತಲಿನ ಗ್ರಾಮದ ಮುಖಂಡರೊಂದಿಗೆ ಮಂಗಳವಾರ ದಂದು ನಡೆದ ಸಭೆಯಲ್ಲಿ ಫೆ.26ರಿಂದ ಫೆ.28ರ ವರೆಗೆ ಮಹದೇಶ್ವರ ಜಾತ್ರೆಯನ್ನು ಅದ್ಧೂರಿಯಾಗಿ ಆಚರಿಸುವುದಾಗಿ ಎಂದು ಕಮಿಟಿಯವರು ತೀರ್ಮಾನಿಸಲಾಯಿತು. ಪೂರ್ವಭಾವಿ ಸಭೆ ನಡೆಸಿದ ಅವರು, ‘ಜಾತ್ರಾ ದಿನಗಳಂದು 10 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ಅವರ ಸೌಕರ್ಯಕ್ಕೆ ಕೊರತೆಯಾಗದಂತೆ ಈಗಿನಿಂದಲೇ ಅವಶ್ಯ ಸಿದ್ಧತೆಗಳನ್ನು ಪ್ರಾರಂಭಿಸಲಾಗಿದೆ’ ಎಂದರು. ಜಿಲ್ಲೆಯ ವಿವಿಧ ತಾಲ್ಲೂಕಿನ ಭಾಗಗಳಲ್ಲದೆ ಕೆಎಸ್ಆರ್ಟಿಸಿ ವತಿಯಿಂದ ಹೆಚ್ಚು ಬಸ್ಗಳನ್ನು ನಿಯೋಜಿಸಬೇಕು. ಕಳೆದ ಬಾರಿಗಿಂತ ಕನಿಷ್ಠ ಶೇ 10ರಷ್ಟು ಬಸ್ಗಳನ್ನು ಹೆಚ್ಚು ಮಾಡಬೇಕಿದೆ’ ಎಂದರು. ಜಾತ್ರಾ ಗೆ ಬರುವವರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು.…
ಬೆಂಗಳೂರು: ಮೇಕೆದಾಟು ಪಾದಯತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ರಾಮಲಿಂಗಾರೆಡ್ಡಿ ನ್ಯಾಯಾಲಯಕ್ಕೆ ಹಾಜರಾಗದೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಜೆ.ಪ್ರೀತ್ ಅವರು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.