Subscribe to Updates
Get the latest creative news from FooBar about art, design and business.
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
Author: admin
ಬೆಂಗಳೂರು: ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ , ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿರುವ ಹೊತ್ತಲ್ಲಿ, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ-ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ರೂಪಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ನಲ್ಲಿ ನಡೆದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಮಾತನಾಡಿದ ಸಿಎಂ, ದೇಶದಲ್ಲಿ ಆಗಿರುವ ಅಭಿವೃದ್ಧಿಯಲ್ಲಿ, ಜಾರಿ ಆಗಿರುವ ಸಾಮಾಜಿಕ ಭದ್ರತೆ, ಆಹಾರ ಭದ್ರತೆ ಕಾರ್ಯಕ್ರಮಗಳಲ್ಲಿ ಬಹುತೇಕ ಎಲ್ಲವೂ ಕಾಂಗ್ರೆಸ್ ಅವಧಿಯವು. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು ಮತ್ತು ಮಾಹಿತಿ ಹಕ್ಕು ಕಾಯ್ದೆಗಳು ಜಾರಿ ಆದವು ಎಂದು ಮುಖ್ಯಮಂತ್ರಿಗಳು ಪಟ್ಟಿ ಮಾಡಿದರು. ದೇಶದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವಾಗ್ದಾನಗಳನ್ನು ಕೊಡಬೇಕು ಮತ್ತು ಅವುಗಳನ್ನು ಈಡೇರಿಸಬೇಕು. ಜನರ ವಿಶ್ವಾಸ ಉಳಿಸಿಕೊಳ್ಳುವಂತಹ ವಾಗ್ದಾನಗಳನ್ನು ನಾವು ನೀಡಬೇಕು ಎನ್ನುವುದು ಕಾಂಗ್ರೆಸ್ ಬದ್ಧತೆ. 2013 ರಲ್ಲಿ ನೀಡಿದ್ದ ವಾಗ್ದಾನಗಳನ್ನು ನಮ್ಮ ಸರ್ಕಾರ ಶೇ98 ರಷ್ಟು ಈಡೇರಿಸಿದೆ. 2024 ರಲ್ಲೂ ಐದಕ್ಕೆ ಐದೂ…
ಖಾಸಗಿ ಶಾಲಾ ಬಸ್ ಗೆ ಟ್ಯಾಂಕರ್ ವಾಹನವು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಮಕ್ಕಳಿದ್ದ ಬಸ್ ಉರುಳಿ ಬಿದ್ದ ಘಟನೆ ಮೈಸೂರಿನ ಸಾಲಿಗ್ರಾಮ- ಭೇರ್ಯ ಹೆದ್ದಾರಿಯಲ್ಲಿ ಬರುವ ಕುರುಬಹಳ್ಳಿ ಗೇಟ್ ಬಳಿ ನಡೆದಿದೆ. ಸಾಲಿಗ್ರಾಮ ತಾಲೂಕಿನ ಮಿರ್ಲೆ ಗ್ರಾಮದ ಸಿಇಟಿ ಖಾಸಗಿ ಶಾಲೆಗೆ ಸೇರಿ ಮಿನಿ ಬಸ್ ಇದಾಗಿದೆ. ಟ್ಯಾಂಕರ್ ವಾಹನವು ಭೇರ್ಯ ಗ್ರಾಮದ ಕಡೆಯಿಂದ ಸಾಲಿಗ್ರಾಮಕ್ಕೆ ತೆರಳುತ್ತಿತ್ತು. ಕುರುಬಹಳ್ಳಿ ಗ್ರಾಮದಿಂದ ಇದೇ ಮಾರ್ಗವಾಗಿ ಶಾಲಾ ಮಕ್ಕಳಿದ್ದ ಮಿನಿ ಬಸ್ ಮಿರ್ಲೆ ಗ್ರಾಮಕ್ಕೆ ಹೋಗುತ್ತಿತ್ತು. ಕುರುಬಹಳ್ಳಿ ಗೇಟ್ ಬಳಿ ಏಕಾಏಕಿ ಶಾಲಾ ಮಕ್ಕಳಿರುವ ಮಿನಿ ಬಸ್ಗೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಯಲ್ಲಿ ಮಿನಿ ಬಸ್ ಉರುಳಿ ಬಿದ್ದಿದೆ. ಶಾಲಾ ಬಸ್ ನಲ್ಲಿದ್ದ 15 ಮಕ್ಕಳ ಪೈಕಿ 7 ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದೆ. ಬಸ್ ನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗಾಯಗೊಂಡ ಮಕ್ಕಳನ್ನು ರವಾನಿಸಲಾಗಿದೆ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ – ಶ್ರೀನಿವಾಸಪುರ ರಸ್ತೆಯ ಹಂದಿಜೋಗಿಗಡ್ಡೆ ಗೇಟ್ ಬಳಿ ನಡೆದಿದೆ. ಊಲವಾಡಿ ಗ್ರಾಮದ ಮನೋಜ್ ಕುಮಾರ್(24) ಮೃತ ದುರ್ದೈವಿಯಾಗಿದ್ದಾರೆ. ಮತ್ತೊಬ್ಬ ಸವಾರ ನರಸಿಂಹಮೂರ್ತಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ಕೋಯಿಕ್ಕೋಡ್: ಕೇರಳದ ಕೋಝಿಕೋಡ್ ನ ವೆಸ್ಟ್ ಹಿಲ್ ನಲ್ಲಿರುವ ಕೊನ್ನಾಡ್ ಕಡಲ ಕಿನಾರೆಗೆ ಫೆಬ್ರವರಿ 8ರಂದು ಬಿಜೆಪಿ ನೇತೃತ್ವದ 30 ಮಹಿಳೆಯರ ಗುಂಪೊಂದು ಪೊರಕೆ ಹಿಡಿದುಕೊಂಡು ಬಂದು ಅಲ್ಲಿ ಕುಳಿತಿದ್ದ ಯುವ ಜೋಡಿಗಳನ್ನು ಓಡಿಸಿದ್ದಾರೆ. ಈ ರೀತಿ ಪೊರಕೆ ಹಿಡಿದು ಓಡಿಸುವುದನ್ನು ಬಿಜೆಪಿ ನಾಯಕಿ, ಡ್ರಗ್ಸ್ ಮತ್ತು ಅನೈತಿಕ ಚಟುವಟಿಕೆಗಳ ವಿರುದ್ಧ “ಜಾಗೃತಿ ಅಭಿಯಾನ” ಎಂದು ಹೇಳಿದ್ದಾರೆ. ಸಮವಸ್ತ್ರದಲ್ಲಿ ಹಲವಾರು ಶಾಲಾ ವಿದ್ಯಾರ್ಥಿಗಳು ನಿಯಮಿತವಾಗಿ ಬೀಚ್ ಗೆ ಬರುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. “ಮಹಿಳಾ ಪ್ರತಿಭಟನಾಕಾರರು ಬೀಚ್ ನಲ್ಲಿ ಕುಳಿತಿದ್ದ ಪ್ರತಿಯೊಬ್ಬ ವ್ಯಕ್ತಿಯ ಬಳಿಗೆ ಬಂದು ಯಾವುದೇ ಕೆಟ್ಟ ನಡವಳಿಕೆಯನ್ನು ಕಂಡರೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ಅಂದಹಾಗೆ, ಆ ಸಮಯದಲ್ಲಿ ಕೆಲವೇ ಜನರಿದ್ದರು ”ಎಂದು ಪೊಲೀಸರು ಹೇಳಿದ್ದಾರೆ. ಇದರ ಮಧ್ಯೆ ತಮ್ಮ ಸಮಸ್ಯೆಗಳು ಬಗೆಹರಿಯುವವರೆಗೂ ನೈತಿಕ ಪೊಲೀಸ್ ಗಿರಿ ಮುಂದುವರಿಸುವುದಾಗಿ ಮಾಲಿನಿ ಎಚ್ಚರಿಸಿದ್ದಾರೆ.
ಸರಗೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ–ವಿಭಾಗ ಮೊಳೆಯೂರು ವಲಯದಲ್ಲಿ ಗುರುವಾರ ಮೊಳೆಯೂರು ಶಾಖೆಯ ನಡಾಡಿ ಗಸ್ತಿನಲ್ಲಿ 1–2 ವರ್ಷದ ಒಂದು ಹುಲಿಯೊಂದು ಮೃತಪಟ್ಟಿರುವುದು ಕಂಡು ಬಂದಿರುವುದಾಗಿ ವಲಯ ಅರಣ್ಯಾಧಿಕಾರಿ, ಮೊಳೆಯೂರು ವಲಯ ರವರು ತಿಳಿಸಿದರು. ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಹುಲಿಯೋಜನೆ ಇಬವರು ಸ್ಧಳಕ್ಕೆ ಭೇಟಿ ನೀಡಿ, ಸ್ಧಳ ಪರಿಶೀಲನೆ ನಡೆಸಿದ್ದು, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿಯ ಅನ್ವಯ ಮೃತ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೃತ ಹುಲಿಯು ಸುಮಾರು 1ರಿಂದ 2 ವರ್ಷದಾಗಿದ್ದು, ಲಿಂಗ ಪತ್ತೆ ಆಗಿರುವುದಿಲ್ಲ, ಸದರಿ ಹುಲಿಯು ಮತ್ತೊಂದು ಹುಲಿಯ ಜೊತೆ ಕಾದಾಟ ನಡೆಸಿದ್ದು, ಕಾದಾಟದಲ್ಲಿ ಹುಲಿಯ ಕತ್ತು ಮುರಿದಿರುವುದರಿಂದ ಹುಲಿಯು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತ ದೇಹವನ್ನು ಕಾಡುನಾಯಿಗಳು ಮತ್ತು ಮಾಂಸದಕಳೇಬರಹವನ್ನು ತಿನ್ನುವ ಜೀವಿಗಳು ತಿಂದಿರುವುದಾಗಿ ದೃಢಪಡಿಸಿದ್ದಾರೆ. ಇನ್ನು ಮೃತ ಹುಲಿಯ ದೇಹಕ್ಕೆ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆನೆಯೋಜನೆ, ನಿಂಗರಾಜು , ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ…
ಚಿಕ್ಕಬಳ್ಳಾಪುರ: ಯುವಕನೊಬ್ಬ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿದ್ದು, ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ವೇಳೆ ಘಟನೆ ನಡೆದಿದೆ. ಮೃತ ಯುವಕನನ್ನು ಬೆಂಗಳೂರಿನ ಬಾಬೂಸಾಪಾಳ್ಯದ ಅಭಿ(23) ಎಂದು ಗುರುತಿಸಲಾಗಿದೆ. ಪ್ರವಾಸಕ್ಕೆ ಬಂದಿದ್ದ ವೇಳೆ ಜಲಾಶಯದಲ್ಲಿ ಈಜಲು ತೆರಳಿದ್ದಾಗ ಯುವಕ ಮುಳುಗಿ ಸಾವನ್ನಪ್ಪಿದ್ದಾನೆ. ಯುವಕನ ಮೃತದೇಹಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದು ಇದುವರೆಗೂ ಮೃತದೇಹ ಪತ್ತೆಯಾಗಿಲ್ಲ. ಇದೀಗ ಎನ್ಡಿಆರ್ಎಫ್ ತಂಡದಿಂದ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಲಾಗುತ್ತಿದೆ.
ಸರಗೂರು: ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ಸಿಬ್ಬಂದಿಯ ಮೇಲೆ ಕಾಡಾನೆ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ತಾಲ್ಲೂಕಿನ ಕೆಬ್ಬೆಪುರ ಹಾಡಿಯ ಸಮೀಪ ಇತ್ತೀಚೆಗೆ ನಡೆದಿದೆ. ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರು ವಿಭಾಗದ ಕೆಬ್ಬೆಪುರ ಹಾಡಿಯ ನಿವಾಸಿ ಹಾಗೂ ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಸೇವೆ ಸಲ್ಲಿಸುತ್ತಿದ್ದ ಬಿ.ರಾಜು (38) ಮೃತ ದುರ್ದೈವಿಯಾಗಿದ್ದಾರೆ. ರಾಜು ನಾಗರಹೊಳೆ ಅರಣ್ಯ ಪ್ರದೇಶದ ಉದ್ಬೂರು ಗೇಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ಘಟನೆ ನಡೆದ ದಿನದಂದು ಬೆಳಂಬೆಳಿಗ್ಗೆಯೇ ಕೆಲಸಕ್ಕೆ ಸಿದ್ಧರಾಗಿ ಬಸ್ ಹತ್ತಲು ಕೆಬ್ಬೆಪುರ ಹಾಡಿಯಿಂದ ಮೊಳೆಯೂರಿಗೆ ನಡೆದುಕೊಂಡು ಬರುವ ವೇಳೆ, ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ್ದು, ರಾಜುರನ್ನು ಬಲಿ ಪಡೆದಿದೆ. ರಾಜುವಿನ ಮೃತದೇಹ ರಸ್ತೆ ಪಕ್ಕದ ಹಳ್ಳವೊಂದರಲ್ಲಿ ಬಿದ್ದಿದ್ದ ಪರಿಣಾಮ ಮಧ್ಯಾಹ್ನದವರೆಗೂ ಯಾರಿಗೂ ಮೃತದೇಹವಿರುವುದು ಗೊತ್ತಾಗಿರಲಿಲ್ಲ. ಆದರೆ ಮಧ್ಯಾಹ್ನ ರಾಜುವಿನ ಮಗಳು ಬಟ್ಟೆ ಒಗೆಯಲು ಹೋಗುವ ವೇಳೆ ತಂದೆಯ ಮೃತ ದೇಹವನ್ನು ಕಂಡು ಗಾಬರಿಗೊಂಡು ಗ್ರಾಮಸ್ಥರಿಗೆ ವಿಚಾರ ಮುಟ್ಟಿಸಿದ್ದಾರೆ. ಬಳಿಕ ಸ್ಥಳಕ್ಕೆ…
ಬೀದರ್: ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಔರಾದ(ಬಿ) ತಾಲೂಕಿನ ಸಾರ್ವಜನಿಕರ ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಔರಾದ(ಬಿ) ಪಟ್ಟಣದಲ್ಲಿ ತಾಲೂಕಿನ ಸಾರ್ವಜನಿಕರ ಕುಂದು ಕೊರತೆಗಳ ಜನಸ್ಪಂದನ ಸಭೆ ಮತ್ತು ಗ್ಯಾರಂಟಿ ಯೋಜನೆಗಳ ಸಮಾವೇಶಕ್ಕೆ ಚಾಲನೆ ನೀಡಿದರು. ಸಚಿವರಾದ ಈಶ್ವರ ಖಂಡ್ರೆ ಅವರು ಸಾರ್ವಜನಿಕರ ಕುಂದು ಕೊರತೆಗಳು, ಅಹವಾಲುಗಳನ್ನು ಆಲಿಸಿ ಅವರ ನ್ಯಾಯಯುತವಾದ ಸಮಸ್ಯೆಗಳಿಗೆ ಸ್ಪಂದಿಸಿ ಸೂಕ್ತ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ. ಔರಾದ(ಬಿ) ಪಟ್ಟಣದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಸುಮಾರು 167 ಅರ್ಜಿಗಳು ಬಂದಿದ್ದು, ಹಲವು ಸಮಸ್ಯೆಗಳಿಗೆ ಸಚಿವರು ಸ್ಥಳದಲ್ಲಿಯೇ ಪರಿಹಾರ ನೀಡಿದರು. ಇನ್ನುಳಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ಬಗೆಹರಿಸುವಂತೆ ಆಯಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ವೇಳೆ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ದಿಲೀಪ್ ಬಡೋಲೆ, ಪೊಲೀಸ್ ಅಧೀಕ್ಷಕರಾದ ಚನ್ನಬಸವಣ್ಣ ಸೇರಿದಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು. ವರದಿ:…
ತುರುವೇಕೆರೆ: ತಾಲೂಕಿನ ಅಮ್ಮಸಂದ್ರ ಸಿಮೆಂಟ್ ಕಾರ್ಖಾನೆಯಲ್ಲಿ ಸ್ವೀಪರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ದಲಿತ ಕಾರ್ಮಿಕ ಹೊನ್ನಪ್ಪ ಎಂಬ ವ್ಯಕ್ತಿಗೆ, ಕಾರ್ಖಾನೆಯ ವ್ಯವಸ್ಥಾಪಕ ಮಂಜುನಾಥ್ ಎಂಬುವರು, ಬರಿಗೈನಲ್ಲೇ ಮಲದ ಗುಂಡಿ ಸ್ವಚ್ಛಗೊಳಿಸುವಂತೆ ಕಾರ್ಮಿಕನಿಗೆ ತಾಕಿತು ಮಾಡಿ, ಮಲದ ಗುಂಡಿಯನ್ನು ಸ್ವಚ್ಛ ಮಾಡಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಇದರ ವಿಚಾರವಾಗಿ ಕಾರ್ಮಿಕ ಹೊನ್ನಪ್ಪ ಅವರು ಅಧಿಕಾರಿಗಳ ಬೆದರಿಕೆಗೆ ಭಯದಿಂದ ಈ ವಿಷಯ ಯಾರಿಗೂ ತಿಳಿಸಿರಲಿಲ್ಲ ಆದರೆ, ಇವರು ಬರಿಗೈನಲ್ಲಿ ಸ್ವಚ್ಛ ಮಾಡುತ್ತಿರುವ ಫೋಟೋ ಮತ್ತು ವಿಡಿಯೋ ಒಂದನ್ನು ಅಲ್ಲೇ ಸ್ಥಳೀಯವಾಗಿ ಸಂಚರಿಸುತ್ತಿದ್ದ ಸಾರ್ವಜನಿಕರೊಬ್ಬರು ಸಾಮಾಜಿಕ ಜಾಲತಾಣಕ್ಕೆ ಫೋಟೋ ಮತ್ತು ವಿಡಿಯೋವನ್ನು ಹರಿಬಿಟ್ಟಿದ್ದರು. ಈ ವಿಚಾರ ತಿಳಿದ ಕಾರ್ಖಾನೆಯ ವ್ಯವಸ್ಥಾಪಕ ಮಂಜುನಾಥ್, ನೀನೇ ವಿಡಿಯೋ ವೈರಲ್ ಮಾಡಿಸಿದ್ದೀಯಾ ಎಂದು ಆರೋಪಿಸಿ, ಕಾರ್ಮಿಕನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ. ಕೆಲಸ ಸ್ಥಳದಲ್ಲಿ ಅಮಾನವೀಯವಾಗಿ ಮಲದ ಗುಂಡಿ ಸ್ವಚ್ಛಗೊಳಿಸಿದ್ದಲ್ಲದೇ, ಕೆಲಸದಿಂದಲೂ ತೆಗೆದು ಹಾಕಲಾಗಿದ್ದು ಇದರಿಂದ ನೊಂದ ಕಾರ್ಮಿಕ ದಂಡಿನ ಶಿವರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. ಇನ್ನೂ…
ತುರುವೇಕೆರೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನದ ರಚನಾ ಕರಡು ಸಮಿತಿಯ ಸಭೆಯ ಅಣುಕು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಪ್ರೌಢಶಾಲಾ ವಿಭಾಗದ ಮಕ್ಕಳು ಭಾಗವಹಿಸಿದ್ದರು. 1949ನೇ ನವಂಬರ್ 25ರಂದು ಕರಡು ಸಮಿತಿಯ ಸಭೆ ನಡೆದು 1949 ನವಂಬರ್ 26ರಂದು ಅಂಗೀಕರಿಸಲಾದ ಸಂವಿಧಾನದ ಅಣುಕು ಪ್ರದರ್ಶನವನ್ನು ಮಕ್ಕಳಿಂದ ಯಥಾವತ್ತಾಗಿ ಪ್ರದರ್ಶಿಸಲಾಗಿತ್ತು. ಇದೇ ಸಂದರ್ಭದಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ತಹಶೀಲ್ದಾರ್ ವೈ.ಎಂ.ರೇಣು ಕುಮಾರ್ ಮಾತನಾಡಿ, ಕರ್ನಾಟಕ ಸರ್ಕಾರ ಸಂವಿಧಾನ ಕರಡು ರಚನಾ ದಿನದ ನೆನಪಿಗಾಗಿ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ, ಸಂವಿಧಾನ ರಥಯಾತ್ರೆಯನ್ನು ಎಲ್ಲರೂ ಕೂಡ ಆದರದಿಂದ ಸ್ವಾಗತಿಸೋಣ ಎಂದರು. ಕಾರ್ಯಕ್ರಮದಲ್ಲಿ ಇದೇ ಶಾಲೆಯ ವಿದ್ಯಾರ್ಥಿಗಳಿಂದ ಸಂವಿಧಾನ ಕರಡು ಸಮಿತಿಯ ಸದಸ್ಯರ ವಿವಿಧ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಯಿತು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ