Subscribe to Updates
Get the latest creative news from FooBar about art, design and business.
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
Author: admin
ವಾಷಿಂಗ್ಟನ್: ಅಮೆರಿಕದ ವಾಷಿಂಗ್ಟನ್ ರೆಸ್ಟೊರೆಂಟ್ ನ ಹೊರಗೆ ನಡೆದ ದಾಳಿಯಲ್ಲಿ 41 ವರ್ಷದ ಭಾರತ ಮೂಲದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. ತನೇಜಾ ಅವರು ಡೈನಮೋ ಟೆಕ್ನಾಲಜೀಸ್ ನ ಸಹ ಸಂಸ್ಥಾಪಕ ಮತ್ತು ಅಧ್ಯಕ್ಷರಾಗಿದ್ದರು. ಪ್ರಾಥಮಿಕ ತನಿಖೆಯಲ್ಲಿ ತನೇಜಾ ಮತ್ತು ಅಪರಿಚಿತ ವ್ಯಕ್ತಿ ಜಗಳವಾಡಿದ್ದು ಅದು ಹಲ್ಲೆಗೆ ತಿರುಗಿದೆ ಎಂದು ಸಿಬಿಎಸ್ ನೊಂದಿಗೆ ಸಂಯೋಜಿತವಾಗಿರುವ ವಾಷಿಂಗ್ಟನ್, ಡಿಸಿಯಲ್ಲಿನ ದೂರದರ್ಶನ ಕೇಂದ್ರವಾದ WUSA ಹೇಳಿದೆ. ತನೇಜಾ ಕೆಳಗೆ ಬಿದ್ದಿದ್ದು ಆತನ ತಲೆ ಪಾದಚಾರಿ ಮಾರ್ಗಕ್ಕೆ ಬಡಿದು, ತೀವ್ರ ಗಾಯಗೊಂಡ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪೊಲೀಸರು ತನೇಜಾ ಅವರ ಸಾವನ್ನು ಕೊಲೆ ಎಂದು, ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ. ಸಿಸಿಟಿವಿಯಲ್ಲಿ ಹಲ್ಲೆಯ ದೃಶ್ಯ ಸೆರೆಯಾಗಿದೆ.
ಮೈಸೂರು: ಮೈಸೂರು ಶ್ರೀರಾಂಪುರದ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಉಪೇಂದ್ರ ಕುಮಾರ್ ಎಂಬುವವರಿಂದ, ಸಹ ಶಿಕ್ಷಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ದೈಹಿಕ ಶಿಕ್ಷಕ ಉಪೇಂದ್ರ, ತನ್ನ ಜೊತೆ ಕೆಲಸ ಮಾಡುತ್ತಿದ್ದ ಶಿಕ್ಷಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಶಿಕ್ಷಕಿಯರ ಪೋಷಕರು ಶಾಲೆ ಮುಂದೆ ಜಮಾಯಿಸಿ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಆಕ್ರೋಶ ಹೊರ ಹಾಕಿದ್ದರು. ಶಾಲೆ ಮುಂದೆ ಗಲಾಟೆ ನಡೆಯುತ್ತಿದ್ದ ಹಿನ್ನಲೆ ಶಾಲಾ ಆಡಳಿತ ಮಂಡಳಿ ಶಿಕ್ಷಕನನ್ನು ಟರ್ಮಿನೇಟ್ ಮಾಡಿದೆ. ಶಿಕ್ಷಕಿಯರ ಪೋಷಕರು ಶಾಲೆಯಿಂದ ವಾಪಸ್ಸು ತೆರಳಿದ್ದಾರೆ.
ಹಿಂದೂ ಧರ್ಮದ ಪವಿತ್ರ ಗ್ರಂಥ ಭಗವದ್ಗೀತೆ ಹೆಸರಿನಲ್ಲಿ ಆಸ್ಟ್ರೇಲಿಯಾದ ಸೆನೇಟರ್ (ಸಂಸದ) ವರುಣ್ ಘೋಷ್(38) ಪ್ರಮಾಣವಚನ ಸ್ವೀಕರಿಸಿದ್ದಾರೆ ಎಂದು ವರದಿ ತಿಳಿಸಿದೆ. ಭಗವದ್ಗೀತೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಮೊದಲ ಆಸೀಸ್ ಸಂಸದ ಎಂಬ ಬಿರುದು ಪಡೆದಿದ್ದು, ಹೆಚ್ಚಿನ ಭಾರತಿಯರು ಸಂಸದನಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅನಾರೋಗ್ಯದ ಕಾರಣದಿಂದ ಮಾಜಿ ಸಂಸದ ಪ್ಯಾಟ್ರಿಕ್ ಡಾಡ್ಸನ್ ತನ್ನ ಸ್ಥಾನದಿಂದ ನಿವೃತ್ತರಾಗಿದ್ದರು. ಹೀಗಾಗಿ ತೆರವಾಗಿದ್ದ ಸೆನೇಟ್ ಸ್ಥಾನವನ್ನು ಲೇಬರ್ ಪಾರ್ಟಿಯ ಘೋಷ್ ತುಂಬಿದ್ದಾರೆ ಎನ್ನಲಾಗಿದೆ.
ತುಮಕೂರು: ಶಿಕ್ಷರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ ಮಾಡಿರೋ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹೇರೂರು ಗ್ರಾಮದಲ್ಲಿ ನಡೆದಿದೆ. ಮರಿಯಪ್ಪ (47) ಕೊಲೆಯಾದ ಶಿಕ್ಷಕರಾಗಿದ್ದಾರೆ. ಕುಣಿಗಲ್ ತಾಲ್ಲೂಕಿನ ಕಸಬಾ ಹೋಬಳಿಯ ಕುಳ್ಳಿನಂಜಯ್ಯಪಾಳ್ಯದ ನಿವಾಸಿಯಾಗಿದ್ದ ಮರಿಯಪ್ಪ, ಮೋದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಬೆಳಗ್ಗಿನಜಾವ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೈ ಕತ್ತರಿಸಿ, ತಲೆಭಾಗಕ್ಕೆ ಬಲವಾಗಿ ಹೊಡೆದು ಭೀಕರ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಎಎಸ್ ಪಿ ಮರಿಯಪ್ಪ, ಕುಣಿಗಲ್ ಡಿವೈಎಸ್ ಪಿ ಓಂಪ್ರಕಾಶ್ ಹಾಗೂ ಇನ್ಸ್ ಪೆಕ್ಟರ್ ನವೀನ್ ಗೌಡ ಭೇಟಿ ಪರಿಶೀಲನೆ ನಡೆಸಿದರು. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣದ ವಿಚಾರದಲ್ಲಿ ಚೀನಾದ ಈ ಯುವತಿ ಎಲ್ಲರಿಗಿಂತ ಒಂದು ಹೆಜ್ಜೆ ಮುಂದಿದ್ದಾಳೆ ಎಂದರೆ ತಪ್ಪಿಲ್ಲ. ಯಾಕೆಂದರೆ ಇವರು ಸೋಷಿಯಲ್ ಮೀಡಿಯಾ ಮೂಲಕ ಬರೋಬ್ಬರಿ 120 ಕೋಟಿ ರೂ. ಗಳಿಸುತ್ತಾರೆ ಎಂದು ವರದಿ ತಿಳಿಸಿದೆ. ಚೀನಾದ ಸೋಷಿಯಲ್ ಮೀಡಿಯಾ ಇನ್ ಫ್ಲ್ಯುಯೆನ್ಸರ್ (Social media influencers) ಜೆಂಗ್ ಕ್ಸಿಯಾಂಗ್ ಕ್ಸಿಯಾಂಗ್ (Zheng Xiang Xiang) ಸೋಷಿಯಲ್ ಮೀಡಿಯಾ ಮೂಲಕ ಕೋಟಿ ಕೋಟಿ ಆದಾಯ ಗಳಿಸುತ್ತಿರುವವರು ಎನ್ನಲಾಗಿದೆ. ಚೀನಾದಲ್ಲಿ ಉತ್ಪಾದನಾ ಕಂಪನಿಗಳ ಸಂಖ್ಯೆಯೇ ಹೆಚ್ಚು, ಈಕೆ ಅವರನ್ನೇ ಟಾರ್ಗೆಟ್ ಮಾಡಿದ್ದಾಳೆ ಎನ್ನಲಾಗಿದೆ. ಅವರು ಆನ್ ಲೈನ್ ಮೂಲಕ ವಿವಿಧ ಉತ್ಪನ್ನಗಳ ಪ್ರಚಾರ ಕ್ರಾಂತಿಯನ್ನೇ ಉಂಟು ಮಾಡಿದ್ದು, ಆ ಮೂಲಕ ಅಪಾರ ಆದಾಯ ಗಳಿಸುತ್ತಿದ್ದಾರೆ ಎನ್ನಲಾಗಿದೆ. ಈಕೆ ಟಿಕ್ ಟಾಕ್ ಆ್ಯಪ್ ನ ಚೀನಾದ ಅವತರಿಣಿಕೆ ಡೌಯಿನ್ ಲ್ಲಿ ಜೆಂಗ್ ಕ್ಸಿಯಾಂಗ್ 50 ಲಕ್ಷಕ್ಕಿಂತ ಅಧಿಕ ಫಾಲೋವರ್ಸ್ಗಳನ್ನು ಹೊಂದಿದ್ದಾರೆ. ಉತ್ಪನ್ನಗಳನ್ನು ಪರಿಚಯಿಸುವ ವಿಧಾನ ಬಹು ಜನಪ್ರಿಯವಾಗಿದೆ. ಬಹುತೇಕ ಸೋಷಿಯಲ್ ಮೀಡಿಯಾ ಇನ್ ಫ್ಲ್ಯುಯೆನ್ಸರ್ ಗಳು…
ಯುವ ಜನತೆಗೆ ದೇಶ ಸೇವೆ ಮಾಡುವ ಅವಕಾಶ ಕಲ್ಪಿಸುವ ಉದ್ದೇಶದಿಂದ ರಕ್ಷಣಾ ಇಲಾಖೆ ‘ಅಗ್ನಿಪಥ್’ ಎಂಬ ವಿಶೇಷ ಯೋಜನೆ ಜಾರಿಗೆ ತಂದಿದೆ. ಇದರ ಮೂಲಕ ವಾಯುಪಡೆಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಗ್ನಿಪಥ್ ಮೂಲಕ ಈಗಾಗಲೇ ಸಾವಿರಾರು ಯುವಜನತೆ ರಾಷ್ಟ್ರ ರಕ್ಷಣೆಗಾಗಿ ನಾಲ್ಕು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಹುದ್ದೆಗಳ ವಿವರ: ಅವಿವಾಹಿತ ಯುವಕ/ಯುವತಿಯರು ಅಗ್ನಿವೀರ್ ಹುದ್ದೆಯ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದು. ಎಷ್ಟು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂಬ ನಿರ್ದಿಷ್ಟ ಸಂಖ್ಯೆಯನ್ನು ಅಧಿಸೂಚನೆಯಲ್ಲಿ ತಿಳಿಸಿಲ್ಲ. ವಿದ್ಯಾರ್ಹತೆ: ಪಿಯುಸಿ (ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್)/ ಮೂರು ವರ್ಷಗಳ ಡಿಪ್ಲೊಮಾ ಪದವಿ ಪಡೆದಿರಬೇಕು. ವಯೋಮಿತಿ: ಜನವರಿ 2, 2004ರಿಂದ ಜುಲೈ 2, 2007ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ವೇತನ: ಈ ಹುದ್ದೆಗಳಿಗೆ ಮೊದಲ ವರ್ಷ 30,000, ಎರಡನೇ ವರ್ಷದಲ್ಲಿ 33,000, ಮೂರನೇ ವರ್ಷದಲ್ಲಿ 36,500 ನಾಲ್ಕನೇ ವರ್ಷ 40,000 ರೂ. ವೇತನವಿದೆ. ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು…
ಮಂಗಳೂರು ಬೆಡಗಿ , ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ವಯಸ್ಸಾಗೋದೇ ಇಲ್ಲ ಅನ್ಸುತ್ತೆ. ಏಕೆಂದರೆ ಅವರ ಫಿಟ್ ನೆಸ್ ಅಂಥದ್ದು. ಮಾತ್ರವಲ್ಲ ಅವರೊಬ್ಬರು ಅದ್ಭುತ ನಟಿ. ಸ್ಯಾಂಡಲ್ ವುಡ್ ನಲ್ಲಿಯೂ ನಟಿಸಿದ ಈ ಚೆಲ್ವೆ ಬಾಲಿವುಡ್ ಚಿತ್ರಗಳಲ್ಲಿಯೇ ನಟಿಸಿ ಮನೆಮಾತಾಗಿದ್ದರು. ನಟಿ ಶಿಲ್ಪಾ ಶೆಟ್ಟಿ ಈಗ ಆ ಒಂದು ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಶಿಲ್ಪಾ ಶೆಟ್ಟಿ ತಮ್ಮ 22ನೇ ವಯಸ್ಸಿನಲ್ಲಿ ಕನ್ಯತ್ವವನ್ನು ಕಳೆದುಕೊಂಡಿದ್ದರು ಎಂದು ಈ ಹಿಂದೆ ಸುದ್ದಿಯಾಗಿತ್ತು. ಅಲ್ಲದೇ ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಜತೆಗಿನ ಕಿಸ್ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದರು. ಇದೀಗ ಈ ಸುದ್ದಿ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಚಿತ್ರರಂಗ ಪ್ರವೇಶಿಸುವ ಮುನ್ನ ಶಿಲ್ಪಾ ಶೆಟ್ಟಿ ತಮ್ಮ 22ನೇ ವಯಸ್ಸಿನವರೆಗೂ ಕಿಸ್ ಮಾಡಿರಲಿಲ್ಲ. ಆದರೆ ಮೊದಲ ಬಾರಿಗೆ ಅಕ್ಷಯ್ ಕುಮಾರ್ ಜೊತೆಗೆ ಕಿಸ್ ಮಾಡಲಾಗಿದೆ ಎಂಬ ಸುದ್ದಿ ಇತ್ತು. ಈ ಸುಂದರಿಯೊಂದಿಗೆ ಡೇಟ್ ಮಾಡಿದ ಮೊದಲ ನಟ ಅಕ್ಷಯ್…
ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಹಲವರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ. ಅಭಿಷೇಕ್ ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ. ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯನ್ನೇ ವೆಡ್ಡಿಂಗ್ ಶೂಟ್ ಲೋಕೇಶನ್ ಮಾಡಿಕೊಂಡಿರುವ ಅಭಿಷೇಕ್, ರೋಗಿಯೊಬ್ಬರನ್ನು ಬೆಡ್ ಮೇಲೆ ಮಲಗಿಸಿ, ಆಪರೇಷನ್ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿಯು, ಅಭಿಷೇಕ್ ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದಾರೆ. ಅಂತಿಮವಾಗಿ ಆಪರೇಷನ್ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುತ್ತಾನೆ. ಈ ಎಲ್ಲಾ ದೃಶ್ಯಗಳನ್ನು ವೀಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಡಾ. ಅಭಿಷೇಕ್ ಜೋಡಿಯ ಪ್ರಿ-ವೆಡ್ಡಿಂಗ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನದಿಯಲ್ಲಿ ರುಂಡ-ಮುಂಡ ಬೇರ್ಪಟ್ಟ ಕುರಿ-ಮೇಕೆ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಭದ್ರಾ ನದಿಯ ಹೆಬ್ಬಾಳೆ ಸೇತುವೆ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹೊರನಾಡಿಗೆ ಹೋಗುವ ಮುಖ್ಯರಸ್ತೆ ಬಳಿಯೇ ಈ ಕೃತ್ಯ ನಡೆದಿದ್ದು, ವಾಮಾಚಾರಕ್ಕೆ ಬಳಸಿದ್ದ ಕೂದಲು, ಉಗುರು, ಮಣ್ಣಿನ ಬೊಂಬೆಗಳು, ರಕ್ತ ನದಿ ದಡದಲ್ಲಿ ಪತ್ತೆಯಾಗಿವೆ ಹಾಗೂ ಭದ್ರಾ ನದಿಯಲ್ಲಿ 5-6 ಕುರಿ-ಮೇಕೆಗಳ ಶವ ಕೂಡಾ ಪತ್ತೆಯಾಗಿದೆ. ರಾತ್ರಿ ವೇಳೆ ನಡೆದಿರುವ ವಾಮಾಚಾರದಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ವಾಮಾಚಾರದ ರಹಸ್ಯ ಭೇದಿಸಲು ಪೊಲೀಸರು ಮುಂದಾಗಿದ್ದು, ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ನದಿಯಿಂದ ಮೇಕೆ-ಕುರಿಗಳ ಶವ ಹೊರಕ್ಕೆ ತೆಗೆದಿದ್ದಾರೆ ಎಂದು ತಿಳಿದು ಬಂದಿದೆ.
ಕೊಡಗಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದೆ. ಅದರಲ್ಲೂ ಕಾಡಾನೆಗಳು ರಾಜಾರೋಷವಾಗಿ ನಾಡಿನತ್ತ ಹೆಜ್ಜೆ ಹಾಕುತ್ತಿದ್ದು, ಕೃಷಿ ತೋಟಗಳಿಗೆ ಹಾನಿ ಮಾಡುತ್ತಿದೆ. ಈ ಹಿಂದೆಯೂ ಕಾಡಾನೆಗಳು ಉಪಟಳದ ಬಗ್ಗೆ ವರದಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಅಂತಹುದ್ದೇ ಘಟನೆ ಬಗ್ಗೆ ವರದಿಯಾಗಿದೆ. ಕೊಡಗಿನ ಕುಶಾಲನಗರ ತಾಲೂಕಿನ ಕಣಿವೆ ಸಮೀಪದ ಚಿನ್ನೇನಹಳ್ಳಿಯಲ್ಲಿ ಕಾಡಾನೆ ದಾಳಿಗೆ ವೃದ್ಧೆಯೊಬ್ಬರು ಕಾಲು ಮುರಿದುಕೊಂಡಿದ್ದಾರೆ. ಚಿನ್ನೇನಹಳ್ಳಿಯ ವೆಂಕಟಮ್ಮ ಆನೆ ದಾಳಿಗೆ ಒಳಗಾದವರು ಎಂದು ತಿಳಿದು ಬಂದಿದೆ. ಪರಿಣಾಮ ಅವರ ಕಾಲು ಸಂಪೂರ್ಣ ಜಖಂ ಗೊಂಡ ಸ್ಥಿತಿಯಲ್ಲಿದೆ. ವೆಂಕಟಮ್ಮ ಬಹಿರ್ದೆಸೆಗೆಂದು ತೆರಳಿದಾಗ ಸಲಗವೊಂದು ದಿಢೀರ್ ದಾಳಿ ನಡೆಸಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳು ವೆಂಕಟಮ್ಮರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.