Subscribe to Updates
Get the latest creative news from FooBar about art, design and business.
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
Author: admin
ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ರಾಜ್ಯಸಭೆಯಲ್ಲಿ ವಿದಾಯದ ಭಾಷಣದ ವೇಳೆ ಸದನದ ಎಲ್ಲಾ ಸದಸ್ಯರಲ್ಲಿ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಕ್ಷಮೆಯಾಚಿಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಸಂಸತ್ತಿನ ನಡೆಯತ್ತಿದ್ದ ಬಜೆಟ್ ಅಧಿವೇಶನದಲ್ಲಿ ರಾಜ್ಯಸಭಾ ಅಧ್ಯಕ್ಷರಾದ ಜಗದೀಪ್ ಧನಕರ್ ಅವರನ್ನು ವ್ಯಂಗ್ಯ ಮಾಡಿ ಮಾತನಾಡಿದ್ದರು. ಇದಕ್ಕೆ ಬಾರೀ ವಿರೋಧ ವ್ಯಕ್ತವಾಗಿತ್ತು. ಅದಕ್ಕೆ ಈಗ ರಾಜ್ಯಸಭೆಯಲ್ಲಿ ಎಲ್ಲರ ಸಮ್ಮುಖದಲ್ಲಿ ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ. ಜಯಾ ತಮ್ಮ ವಿದಾಯದ ಭಾಷಣದ ವೇಳೆ ಸದನದ ಎಲ್ಲ ಸದಸ್ಯರಲ್ಲಿ, ತಾನು ಮುಂಗೋಪಿ ಆದರೆ ಯಾರನ್ನು ನೋಯಿಸುವ ಉದ್ದೇಶ ಹೊಂದಿಲ್ಲ ಎಂದು ಹೇಳಿ ಕ್ಷಮೆ ಕೇಳಿದ್ದಾರೆ. ಜಯಾ ಅವರ ವಿದಾಯ ಭಾಷಣದಲ್ಲಿ ನಾನು ಏಕೆ ಕೋಪಗೂಳ್ಳುತ್ತೇನೆ ಎಂದು ಜನರು ನನ್ನನ್ನು ಪ್ರಶ್ನೆ ಮಾಡುತ್ತಾರೆ. ಅದು ನನ್ನ ಸ್ವಭಾವ. ನಾನು ನನ್ನನ್ನು ಬದಲಾಯಿಸಿಕೊಳ್ಳಲು ಸಾಧ್ಯವಿಲ್ಲ. ನಾನು ಏನನ್ನಾದರೂ ಇಷ್ಟಪಡದೇ ಇದ್ದಲ್ಲಿ ಅಥವಾ ಒಪ್ಪದೇ ಇದ್ದರೆ ತಾಳ್ಮೆಯನ್ನು ಕಳೆದುಕೊಳ್ಳುತ್ತೇನೆ. ನಾನು ನಿಮ್ಮಲ್ಲಿ ಯಾರೊಂದಿಗಾದರೂ ಅನುಚಿತವಾಗಿ ವರ್ತಿಸಿದ್ದರೆ…
2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸುಮಾರು 150 ಲೋಕಸಭಾ ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದ್ದು, ವಿಶೇಷವಾಗಿ ಅವುಗಳಲ್ಲಿ ಅತೀ ಹೆಚ್ಚು ಬಿಜೆಪಿ ಸೋತಿರುವ ಕ್ಷೇತ್ರಗಳೇ ಆಗಿರುತ್ತದೆ ಎನ್ನಲಾಗಿದೆ. ಸದ್ಯ ಚುನಾವಣೆ ಘೋಷಣೆಗೂ ಮುನ್ನವೇ ದೆಹಲಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಮಂಡಿ ಲೋಕಸಭಾ ಕ್ಷೇತ್ರವೂ ಇದರಲ್ಲಿ ಒಂದು. ಇಲ್ಲಿಯೂ ನಿಗದಿತ ಸಮಯಕ್ಕಿಂತ ಮೊದಲು ಅಭ್ಯರ್ಥಿಯ ಹೆಸರನ್ನು ಘೋಷಿಸುವ ಸಾಧ್ಯತೆ ಇದ್ದು, ಕಳೆದುಹೋದ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಸಮಯಕ್ಕಿಂತ ಮುಂಚಿತವಾಗಿ ಪ್ರಚಾರವನ್ನು ಪ್ರಾರಂಭಿಸುವುದು ಬಿಜೆಪಿಯ ತಂತ್ರಗಾರಿಕೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಹೊರಬೀಳುತ್ತಿದ್ದು, ಇದರಲ್ಲಿ ವಿಶೇಷವಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಹೆಸರು ಕೂಡ ಮುಂಚೂಣಿಯಲ್ಲಿದೆ. ಕಳೆದ ಕೆಲವು ಸಮಯದಿಂದ ಕಂಗನಾ ರಣಾವತ್ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಕಂಗನಾ ರಣಾವತ್ ಕೂಡ ಇದನ್ನು ಅಲ್ಲಗಳೆಯದೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ…
ನಮೋ ಭಾರತ ವತಿಯಿಂದ ಆಯೋಜನೆಗೊಂಡಿದ್ದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ್ದು, ಶರ್ಟ್ ಬಿಚ್ಚಿ ಕಪ್ಪು ಬಾವುಟ ಪ್ರದರ್ಶನ ಮಾಡಿದ ಘಟನೆ ನಡೆದಿದೆ. ಈ ಘಟನೆಯಿಂದ ಬಿಜೆಪಿ ಕಾರ್ಯಕರ್ತರು ಸಹ ತಿರುಗಿ ಬಿದ್ದು ಸ್ಥಳದಲ್ಲಿ ಕಲ್ಲು ತೂರಾಟದಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ವರದಿ ತಿಳಿಸಿದೆ. ಈ ಘಟನೆ ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿ ನಡೆದಿದೆ. ನಮೋ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ 20ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ತೆರಳಿದ್ದರು. ಕಾರ್ಯಕ್ರಮಕ್ಕೆ ಚಕ್ರವರ್ತಿ ಸೂಲಿಬೆಲೆ ಆಗಮಿಸಿದ್ದರು ಎನ್ನಲಾಗಿದೆ. ಈ ವೇಳೆ ಮಹಡಿ ಮೇಲೆ ನಿಂತು ಕಪ್ಪು ಬಾವುಟ ಪ್ರದರ್ಶನ ಮಾಡಿದ ಕಾಂಗ್ರೆಸ್ ಕಾರ್ಯಕರ್ತರ ನಡೆಗೆ ಬಿಜೆಪಿ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ. 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸಿಡಿದೆದ್ದರು. ಕಾಂಗ್ರೆಸ್ ಕಾರ್ಯಕರ್ತರು ಇದ್ದ ಬಿಲ್ಡಿಂಗ್ ಗೆ ಕಲ್ಲು ತೂರಿದ ಬಿಜೆಪಿ ಕಾರ್ಯಕರ್ತರು. ವಿಜಯಪುರ ರಸ್ತೆಯಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಬಿಜೆಪಿ ಕಾರ್ಯಕರು ಆಕ್ರೋಶಗೊಂಡು ಲೈಟ್ ಕಂಬ ಹತ್ತಿ ಹುಡುಕಾಡಲು…
ಸರ್ಕಾರ ಅಕ್ರಮ ಮರಳುಗಾರಿಕೆಯನ್ನು ತಡೆಯುವುದಕ್ಕೆ ಸಾಕಷ್ಟು ಕ್ರಮ ತೆಗೆದುಕೊಂಡಿದ್ದರೂ ಅಕ್ರಮ ಚಟುವಟಿಕೆಗಳಿಗೆ ಇನ್ನೂ ಬ್ರೇಕ್ ಬಿದ್ದಿಲ್ಲ. ಹಗಲೆಲ್ಲ ಸುಮ್ಮನಿರುವ ಅಕ್ರಮ ಮರಳು ಸಾಗಾಟದಾರರು ಕತ್ತಲಾಗುತ್ತಿದ್ದಂತೆ ಸದ್ದಿಲ್ಲದೆ ಕಾರ್ಯಪ್ರವೃತ್ತರಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಬಳಿಯ ವೈಎಂಕೆ ಬಳಿ ಪ್ರತಿ ನಿತ್ಯ ತಡರಾತ್ರಿ 12 ಗಂಟೆಯಿಂದ ಬೆಳ್ಳಂ ಬೆಳಗ್ಗೆ 5 ಗಂಟೆವರೆಗೆ ಅಪರಿಚಿತರು ವಿದ್ಯುತ್ ಲೈನ್ ಅನ್ನು ಸ್ಥಗಿತಗೊಳಿಸುತ್ತಿದ್ದಾರೆ. ಈ ಬಗ್ಗೆ ಕೆಲವು ದಿನಗಳಿಂದ ಅನುಮಾನಗಳು ಹೆಚ್ಚುತ್ತಿದ್ದರೂ ಇದೀಗ ಸುತ್ತಮುತ್ತಲಿನ ಜನರು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಸಿಸಿಟಿವಿಯಲ್ಲಿಯೂ ಗೋಚರಿಸದಂತೆ ಕಳ್ಳರು ತಮ್ಮ ಚಾಣಾಕ್ಷತನದಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಅರಂತೋಡು ಭಾಗದಿಂದ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎನ್ನಲಾಗುತ್ತಿದೆ. ಇತ್ತೀಚಿನ ಕೆಲವು ಸಮಯದಿಂದ ಪ್ರತಿ ನಿತ್ಯ ವಿದ್ಯುತ್ ಲೈನ್ ಆಫ್ ಆಗುತ್ತಿರುವುದರಿಂದ ಅರಂತೋಡು , ಗೂನಡ್ಕ ಸೇರಿದಂತೆ ಕೆಲವು ಭಾಗಗಳಲ್ಲಿ ವಿದ್ಯುತ್ ಕಡಿತಗೊಳ್ಳುತ್ತಿದೆ. ಇದನ್ನು ಮೆಸ್ಕಾಂನವರು ಕೂಡ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅಕ್ರಮ ಮರಳು ಸಂಪಾಜೆ ಮೂಲಕವಾಗಿ ಕೊಡಗು ಭಾಗಕ್ಕೆ…
ಗದಗ: ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಅಸುಂಡಿ ಬಳಿ ಗದಗದಿಂದ ಹೊರಟಿದ್ದ ಬಸ್ ಅನ್ನು ತಡೆದ ನಾಲ್ವರು ಯುವಕರು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಇದರಿಂದ ಬಸ್ ಚಾಲಕ ಸಂತೋಷ್ ಅಸೂಟಿ ಅವರಿಗೆ ಗಾಯವಾಗಿದ್ದು ಅವರನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಗೆ ಹೊರಟಿದ್ದ ಬಸ್ ನ ಚಾಲಕ ಎದುರಿದ್ದ ಕಾರಿಗೆ ಸೈಡ್ ಕೊಡುವಂತೆ ಹಾರ್ನ್ ಮಾಡಿದ್ದಾನೆ. ಆದರೆ ಕಾರು ಸವಾರರು ಕಾರಿನ ಸೈಡ್ ಮಿರರ್ ಅನ್ನು ಕ್ಲೋ ಸ್ ಮಾಡಿದರು. ಇದನ್ನು ಗಮನಿಸಿದ ಬಸ್ ಚಾಲಕ ಐದಾರು ಬಾರಿ ಹಾರ್ನ್ ಮಾಡಿದ್ದರು. ಇದರಿಂದ ಕೆರಳಿದ ಯುವಕರ ಗುಂಪು ಬಸ್ ಅನ್ನು ಅಡ್ಡಗಟ್ಟಿ ನಿಲ್ಲಿಸಿ ಚಾಲಕನೊಂದಿಗೆ ಜಗಳಕ್ಕೆ ಇಳಿದಿದ್ದು, ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
1976 ಫೆಬ್ರವರಿ 9ರಂದು ಜೀತ ಪದ್ಧತಿ ರದ್ದತಿ ಕಾನೂನು ಅಂಗೀಕಾರ ದಿನವಾಗಿದ್ದು ಇದನ್ನ ರಾಜ್ಯ ಸರ್ಕಾರ ಜೀತ ಪದ್ಧತಿ ನಿರ್ಮೂಲನಾ ದಿನವನ್ನಾಗಿ ಆಚರಿಸಲಾತ್ತಿದೆ. ಈ ಹಿನ್ನೆಲೆಯಲ್ಲಿ ಹೆಚ್.ಡಿ.ಕೋಟೆ ತಾಲೂಕು ಆಡಳಿತದ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ಕೃಷ್ಣರಾಜ್ ಮಾತಾನಾಡಿ, ಜೀತ ಪದ್ದತಿ ನಮ್ಮ ದೇಶದ ಅಭಿವೃದ್ಧಿ ಮಾರಕವಾದದ್ದು ಇದನ್ನ ಸಂಪೂರ್ಣವಾಗಿ ತಡೆಗಟ್ಟಲು ನಾವು ಪ್ರಾಮಾಣಿಕ ಕೆಲಸ ಮಾಡಬೇಕು ಈ ನಿಟ್ಟಿನಲ್ಲಿ ಬಿಡುಗಡೆ ಮತ್ತು ಪುನರ್ವಸತಿ ಕೆಲಸ ನಿರಂತರವಾಗಿ ನಡೆಯುತ್ತಿರಬೇಕು ಹಾಗೂ ಜೀತ ನಿರ್ಮಾಲನೆಯಲ್ಲಿ ಜೀವಿಕ ಸಂಘಟನೆಯ ಪಾತ್ರ ಅತ್ಯಂತ ಶ್ಲಾಘನೀಯ ಎಂದರು. ಜೀತ ಕಾನೂನು ಮತ್ತು ಜಾರಿ ಕುರಿತು ಮಾತಾಡಿದ ಜೀವಿಕ ರಾಜ್ಯ ಸಂ. ಸಂಚಾಲಕ ಉಮೇಶ್. ಬಿ. ನೂರಲಕುಪ್ಪೆ ಮಾತಾನಾಡಿ ಜೀತ ಪದ್ಧತಿ ಅತ್ಯಂತ ಘೋರ ವ್ಯವಸ್ಥೆಯಾಗಿದೆ ಮನುಷ್ಯ ಮನುಷ್ಯನನ್ನ ದುಡಿಸಿಕೊಳ್ಳುವ ಪ್ರಾಣಿಗಳಿಗಿಂತಲೂ ಹೀನಾಯವಾಗಿ ನೋಡಿಕೊಳ್ಳುವ ಅಮಾನವೀಯ ಪದ್ಧತಿಯನ್ನು 1976 ಜೀತ ಪದ್ಧತಿ ರದ್ದತಿ ಕಾನೂನಿನ ಮೂಲಕ ನಿರ್ಮಾಲನೆ…
ಬೆಂಗಳೂರು: ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ವರ್ಷದ ಬಾಲಕನೊರ್ವ ನಾಪತ್ತೆಯಾಗಿದ್ದು, ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ಸಿದ್ದರಾಮಪ್ಪ ಎಂಬ ಬಾಲಕ ತನ್ನ ಸ್ನೇಹಿತರೊಟ್ಟಿಗೆ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾನೆ. ತಾರಮ್ಮ ಹಾಗೂ ಭೀಮ್ಸಪ್ಪ ದಂಪತಿಯ ಪುತ್ರ ಸಿದ್ದರಾಮಪ್ಪ(10) ಕಾಣೆಯಾದ ಬಾಲಕನಾಗಿದ್ದಾನೆ. ರಾತ್ರಿ ಕಳೆದರೂ ಮನೆಗೆ ಬಾರದೇ ಇದ್ದಾಗ ಪೋಷಕರು ಹುಡುಕಾಡಿದ್ದಾರೆ. ಆದರೆ ಹುಡುಕಿ ಸುಸ್ತಾದರೆ ವಿನಃ, ಮಗನ ಸುಳಿವು ಮಾತ್ರ ಸಿಕ್ಕಿಲ್ಲ. ನಮ್ಮ ಮಗನನ್ನು ಹುಡುಕಿ ಕೊಡಿ ಎಂದು ಪರಿ ಪರಿಯಾಗಿ ಬೇಡಿಕೊಳ್ಳುತ್ತಿರುವ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ಕಳೆದ ಜನವರಿ 24ರ ಸಂಜೆ 6.30ಕ್ಕೆ ಮಕ್ಕಳ ಜತೆಗೆ ಆಟವಾಡುತ್ತಿದ್ದ ಸಿದ್ದರಾಮಪ್ಪ ಏಕಾಏಕಿ ಕಾಣೆಯಾಗಿದ್ದಾನೆ. ಎಲ್ಲಿ ಹೋಗಿದ್ದನೋ ಎಂದು ತಿಳಿಯದೇ ಪೋಷಕರು ಕಂಗಲಾಗಿದ್ದಾರೆ. ಘಟನೆಗೆ ಸಂಬಂಧ ಪಟ್ಟಂತೆ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ಕೂಡ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲಿಸಿದ್ದು, ನಿರಂತರ ಹುಡುಕಾಟ ನಡೆಸುತ್ತಿದ್ದಾರೆ.
ನವದೆಹಲಿ: ಈ ಬಾರಿ ಮಂಡ್ಯದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುಲು ಸುಮಲತಾ ಅಂಬರೀಶ್ ಕನಸು ಕಾಣುತ್ತಿದ್ದು, ಟಿಕೆಟ್ ಗಾಗಿ ಕಸರತ್ತು ನಡೆಸಿದ್ದಾರೆ. ಗುರುವಾರ ಅಷ್ಟೇ ಬಿಜೆಪಿ ವರಿಷ್ಠರಾದ ಜೆಪಿ ನಡ್ಡಾ ಹಾಗೂ ಬಿಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ಟಿಕೆಟ್ಗಾಗಿ ಮನವಿ ಮಾಡಿದ್ದರು. ಈಗ ಮತ್ತೊಂದೆಜ್ಜೆ ಮುಂದೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ ಎಂದು ಹೇಳಿದ್ದಾರಂತೆ. ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಸಂತಸಗೊಂಡಿದ್ದು, ಈ ಬಾರಿ ಮಂಡ್ಯ ಲೋಕಸಭಾ ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸುಮಲತಾ ಅಂಬರೀಶ್ ಗೆ ಹೇಳಿದ್ದಾರೆ. ಅಂದರೆ ಪರೋಕ್ಷವಾಗಿ ಮತ್ತೊಮ್ಮೆ ಗೆದ್ದು ಲೋಕಸಭೆಗೆ ಬನ್ನಿ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಹೀಗಾಗಿ ಸುಮಲತಾ ಅವರು ಈ ಬಾರಿ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ.
ಬಿಗ್ಬಾಸ್ ಸ್ಪರ್ಧಿ ತನಿಷಾಗೆ ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಅವರ ಮೇಲೆ ಅಟ್ರಾಸಿಟಿ ದೂರು ದಾಖಲಾಗಿತ್ತು. ಇದೀಗ ಅಟ್ರಾಸಿಟಿ ಕೇಸ್ ನಲ್ಲಿ ತನಿಷಾಗೆ ಬಿಗ್ ರಿಲೀಫ್ ಸಿಕ್ಕಿದೆ. ತನಿಷಾ ಬಿಗ್ ಬಾಸ್ ಶೋನಲ್ಲಿ ಪ್ರತಾಪ್ ಜೊತೆ ಸಂಭಾಷಣೆ ಮಾಡುವಾಗ ಭೋವಿ ಸಮಾಜದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಹಿನ್ನಲೆ ಭೋವಿ ಸಮಾಜದ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಪದ್ಮ ಕುಂಬಳುಗೋಡು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ವಿಡಿಯೋ ಕೊಟ್ಟಿದ್ದರು. ತನಿಷಾ ಕುಪ್ಪಂಡ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಜಾತಿನಿಂದನೆ ಕೇಸ್ ಆಗಿದ್ದರಿಂದ ಡಿವೈಎಸ್ಪಿ ಪ್ರಕರಣ ತನಿಖೆ ಮಾಡಿದ್ದರು. ತನಿಷಾ ಬಿಗ್ ಬಾಸ್ ಶೋನಲ್ಲಿ ಬಳಕೆ ಮಾಡಿರೋ ಆಕ್ಷೇಪಾರ್ಹ ಪದ ಇರುವ ವಿಡಿಯೋ ಆಡಿಯೋ ಒಂದನ್ನ ಪೊಲೀಸರು ಎಫ್ಎಸ್ಎಲ್ಗೆ ಕಳಿಸಿಕೊಟ್ಟಿದ್ದರು. ಎರಡು ತಿಂಗಳ ಬಳಿಕ ಎಫ್ಎಸ್ಎಲ್ವರದಿ ತನಿಖಾಧಿಕಾರಿ ಕೈ ಸೇರಿದೆ. ಈ ಪ್ರಕರಣದಲ್ಲಿ ತನಿಷಾ ಮೇಲೆ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಒತ್ತಡ ಹೇರಲಾಗಿತ್ತು. ಈ ಕುರಿತಂತೆ ತನಿಷಾ ತಾನು ಆ ರೀತಿ ಮಾತನಾಡಿಲ್ಲ ಎಂದು ಹೇಳಿಕೆ ಕೊಟ್ಟಿದ್ದರು.…