Subscribe to Updates
Get the latest creative news from FooBar about art, design and business.
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
Author: admin
ಬೆಂಗಳೂರು: ಮದ್ಯದ ನಶೆಯಲ್ಲಿ ಕಾರು ಚಲಾಯಿಸಿ ಎಂಟು ಬೈಕ್ ಗಳು ಸಂಪೂರ್ಣ ಜಖಂಗೊಂಡಿರುವ ಘಟನೆ ಉಲ್ಲಾಳು ಬಳಿಯ ಕೆಎಲ್ ಇ ಲಾ ಕಾಲೇಜು ಬಳಿ ನಡೆದಿದೆ. ಭರತ್ ಎಂಬ ಯುವಕ ತನ್ನ ಕಾರಿನಲ್ಲಿ ನಾಲ್ವರು ಸ್ನೇಹಿತರನ್ನ ಕರೆದುಕೊಂಡು ಹೋಗಿ ಪಾರ್ಟಿ ಮಾಡಿದ್ದಾನೆ. ಸ್ನೇಹಿತ ಗುರುದೀಪ್ ಗೆ ಕಾರು ಚಲಾಯಿಸಲು ಕೊಟ್ಟು ಡ್ರೈವ್ ಹೋಗಿದ್ದಾರೆ. ಮದ್ಯದ ನಶೆಯಲ್ಲಿ ಕೆಎಲ್ ಇ ಲಾ ಕಾಲೇಜಿನ ಬಳಿ ವೇಗವಾಗಿ ಕಾರು ಚಲಾಯಿಸಿಕೊಂಡು ಗುರುದೀಪ್ ಬಂದಿದ್ದಾನೆ. ಬಳಿಕ ಕಾರು ನಿಯಂತ್ರಣ ತಪ್ಪಿ ಬೇಕರಿ ಬಳಿ ನಿಂತಿದ್ದ ಬೈಕ್ ಗಳ ಮೇಲೆ ಹರಿದಿದೆ. ಕಾರು ಗುದ್ದಿದ ರಭಸಕ್ಕೆ ಎಂಟು ಬೈಕುಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಆನೇಕಲ್: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್ ಬಿ ಐ ಹೆಸರು ಹೇಳಿಕೊಂಡು ವಂಚನೆ ಎಸಗಿ ಕೋಟಿ ಕೋಟಿ ಹಣ ಲೂಟಿ ಮಾಡಿದ್ದು, ಬೆಂಗಳೂರು ಹೊರವಲಯದ ಅನೇಕಲ್ ನಲ್ಲಿ ಈ ಘಟನೆ ನಡೆದಿದೆ. ತಮಿಳುನಾಡು ಹೊಸೂರು ಮೂಲದ ಪವಿತ್ರ ಎಂಬಾಕೆ ವಂಚಿಸಿದ ಆರೋಪಿಯಾಗಿದ್ದಾಳೆ. ನಿರ್ಮಲಾ ಸೀತಾರಾಮನ್ ಅವರ ನಕಲಿ ಸಹಿ ಇರುವ ಪತ್ರಗಳನ್ನು ಸೃಷ್ಟಿಸಿ ಸಬ್ಸಿಡಿ ಕೊಡುತ್ತೇನೆ, ಸಾಲ ಕೊಡುತ್ತೇನೆ ಎಂದು ಮೋಸ ಮಾಡಿದ್ದಾಳೆ. ಬ್ಲೂ ವಿಂಗ್ಸ್ ಎಂಬ ಹೆಸರಿನಲ್ಲಿ ಟ್ರಸ್ಟ್ ಮಾಡಿಕೊಂಡು ಜನರಿಗೆ ಮೋಸ ಮಾಡಿದ್ದಾಳೆ. ಒಬ್ಬರಿಗೆ 10 ಲಕ್ಷ ಲೋನ್ ನೀಡಿದ್ರೆ 5 ಲಕ್ಷ ಸಬ್ಸಿಡಿ ಎಂದು ಹೇಳಿ, ಹಣ ಡೆಪಾಸಿಟಿ ಮಾಡುವಂತೆ ಮಾಡಿ ಆರೋಪಿ ಯುವತಿ ವಂಚಿಸಿದ್ದಾಳೆ. ಅತ್ತಿಬೆಲೆ, ಧರ್ಮಾಪುರ, ಹೊಸೂರು ಸೇರಿದಂತೆ ಹಲವು ಕಡೆ ಈಕೆ ವಂಚಿಸಿದ್ದಾಳೆ ಎಂದು ತಿಳಿದು ಬಂದಿದ್ದು, ವಂಚಕಿ ಪವಿತ್ರ ಹಾಗೂ ಆಕೆಯ ಜೊತೆಗಾರರಾದ ಪ್ರವೀಣ್, ಯಲ್ಲಪ್ಪ, ಮಮತಾ ಸೇರಿ 14 ಮಂದಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು ಲವ್ ಜಿಹಾದ್ ವಿಚಾರವಾಗಿ ಡ್ಯಾನ್ಸ್ ಮಾಸ್ಟರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ 7 ಜನ ಭಜರಂಗದಳ ಕಾರ್ಯಕರ್ತರನ್ನು ಆಲ್ದೂರು ಪೊಲೀಸರು ಬಂಧಿಸಿದ್ದಾರೆ. ಮುಸ್ಲಿಂ ಯುವಕನಿಂದ ಲವ್ ಜಿಹಾದ್ ನಡೆಸಲಾಗುತ್ತಿದೆ ಎಂದು ರೊಚ್ಚಿಗೆದ್ದ ಹಿಂದೂ ಕಾರ್ಯಕರ್ತರು, ಯುವಕನನ್ನು ಕೂಡಿಹಾಕಿ ಮನಬಂದಂತೆ ಥಳಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣದಲ್ಲಿ ನಡೆದಿದೆ. ಅಪ್ರಾಪ್ತ ಹಿಂದೂ ಬಾಲಕಿಯ ಜತೆ ಆಲ್ದೂರು ಪಟ್ಟಣದ ಸಂತೆ ಮೈದಾನದ ನಿವಾಸಿ ರೂಮನ್ ಎಂಬಾತ ಸಲಿಗೆಯಿಂದ ಇದ್ದು, ರೂಮನ್ ಡಾನ್ಸ್ ಮಾಸ್ಟರ್ ಆಗಿದ್ದು, ಪ್ರೀತಿಯ ಹೆಸರಿನಲ್ಲಿ ಈತ ಲವ್ ಜಿಹಾದ್ ನಡೆಸುತ್ತಿದ್ದಾನೆ ಎಂಬುದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ. ಆಲ್ದೂರು ಸಮೀಪದ ಗಾಳಿಗಂಡಿಯ ಯುವಕ ರೂಮನ್, ತನ್ನನ್ನು ಭಜರಂಗ ದಳದ ಕಾರ್ಯಕರ್ತರು ಆಲ್ದೂರಿಗೆ ಕರೆಸಿ ಬಳಿಕ ಅಪಹರಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಿಸಿದ್ದ. ಚಿಕ್ಕಮಗಳೂರು ತಾಲೂಕಿನ ದೊಡ್ಡ ಮಾಗರವಳ್ಳಿ ಗ್ರಾಮದ ಹಿಂದೂ ಬಾಲಕಿಯನ್ನು ಪ್ರೀತಿಯ ಹೆಸರಲ್ಲಿ ಪುಸಲಾಯಿಸಿದ್ದಾನೆ ಎಂದು ಕಿಡಿಕಾರಿದ್ದಾರೆ. ಅಲ್ಲದೇ ಇದೀಗ ಡ್ಯಾನ್ಸ್ ಮಾಸ್ಟರ್ ರೂಮನ್ ವಿರುದ್ಧ…
ದೇವನಹಳ್ಳಿ: ದಲಿತ ಬಾಲಕಿಯೊಬ್ಬಳು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿತಿನ್ ಎಂಬಾತ ಕೊಲೆ ಆರೋಪಿಯಾಗಿದ್ದಾನೆ. ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ನಿತಿನ್ ಎಂಬಾತ ಚುಡಾಯಿಸಿದ್ದನು. ಬಾಲಕಿ ಇದನ್ನು ಪ್ರಶ್ನಿಸಿದ್ದಕ್ಕೆ ನಿತಿನ್ ಬಾಲಕಿ ಮೇಲೆ ಹಲ್ಲೆ ನಡೆಸಿದ್ದನು. ಬಾಲಕಿ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದಳು. ಅದರಂತೆ ಮಾಲೂರು ಠಾಣಾ ಪೊಲೀಸರಿಗೆ ದೂರು ನೀಡಲು ಹೋಗಿದ್ದರು. ಈ ವೇಳೆ ಎರಡು ಗ್ರಾಮದ ಹಿರಿಯರು ಸೇರಿ ಇಬ್ಬರ ನಡುವೆ ರಾಜಿ ಪಂಚಾಯಿತಿ ನಡೆಸಿದ್ದರು. ಇದಾದ ಮೂರು ದಿನಗಳ ಬಳಿಕ ಬಾಲಕಿ ನಾಪತ್ತೆಯಾಗಿದ್ದಳು. ನಿನ್ನೆ ಕುರಿ ಕಾಯಲು ಹೋಗಿದ್ದಾಗ ಬಾಲಕಿಯ ಮೃತದೇಹ ಕಂಡ ಕುರಿಹಾಗಿಗಳು ಪೋಷಕರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ವತ್ರೆಗೆ ರವಾನಿಸಿದ್ದಾರೆ.
ರಾಯಚೂರು: ಅಪ್ರಾಪ್ತೆಯೊಬ್ಬಳ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದರೆಂದು ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರಿನಲ್ಲಿ ನಡೆದಿದೆ. ಸಂಗೀತಾ(17) ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತೆ. ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಕಾರ್ ಡ್ರೈವರ್ ಕೃಷ್ಣ ಎಂಬಾತನ ಜೊತೆಗೆ ಪ್ರಣಯದಲ್ಲಿದ್ದ ಸಂಗೀತಾ, ಎರಡು ಬಾರಿ ಪ್ರಿಯಕರನಾದ ಕೃಷ್ಣನ ಜೊತೆಗೆ ಮನೆಬಿಟ್ಟು ಹೋಗಿದ್ದಳು. ಆಗ ಹೆತ್ತವರು ಬುದ್ದಿವಾದ ಹೇಳಿ ಮನೆಗೆ ಕರೆತಂದಿದ್ದರು. ಕೊನೆಗೆ ಮನನೊಂದು ಮನೆಯಲ್ಲಿಯೇ ಸಂಗೀತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿದ್ದ ಸೀರೆಯಿಂದ ನೇಣುಬಿಗಿದುಕೊಂಡು ಸಂಗೀತಾ ಸಾವಿಗೆ ಶರಣಾಗಿದ್ದಾಳೆ. ಈಕೆಯ ಮೃತದೇಹವನ್ನು ಮಾನ್ವಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪ್ರಾಪ್ತೆಯ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಆರೋಪಿ ಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಣ ಪಡೆದು ಕಾರ್ಯಕ್ರಮವೊಂದರಲ್ಲಿ ಭಾಗಿ ಆಗದೇ ಇರುವ ಕಾರಣಕ್ಕಾಗಿ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹ ಅವರ ಟೀಮ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿ ಆಗಲು ಸೋನಾಕ್ಷಿ ಹಣ ಪಡೆದಿದ್ದರು. ಹಣ ಪಡೆದುಕೊಂಡೂ ಅವರು ಈ ದೂರಿಗೆ ಸಂಬಂಧಿಸಿದಂತೆ ಮುರಾದಾಬಾದ್ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. 2018ರಲ್ಲಿ ಸೋನಾಕ್ಷಿ ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಂಡಿದ್ದರು. ಆಯೋಜಕ ಪ್ರಮೋದ್ ಶರ್ಮಾ ಬಳಿ ಹಣ ಪಡೆದಿದ್ದರು. ಕಾರ್ಯಕ್ರಮಕ್ಕೆ ಬಾರದೇ ಇರುವ ಕಾರಣಕ್ಕಾಗಿ 2019ರಂದು ಮುರಾದಾಬಾದ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು.
ಧಾರವಾಡ: ವಿಶೇಷಚೇತನ ಮಗಳು ಅನೈತಿಕ ಸಂಬಂಧಕ್ಕೆ ಅಡ್ಡಿಯಾದಳೆಂದು ಹೆತ್ತ ತಾಯಿಯೇ ಕೊಲೆ ಮಾಡಿರುವ ಘಟನೆ ಧಾರವಾಡದ ನಗರದ ಕಮಲಾಪುರ ಹೂಗಾರ ಓಣಿಯಲ್ಲಿ ಘಟನೆ ನಡೆದಿದೆ. ತಾಯಿ ಜ್ಯೋತಿ ಹಾಗೂ ಪ್ರಿಯಕರ ರಾಹುಲ್ ಸೇರಿಕೊಂಡು ಈ ಪಾಪಿ ಕೃತ್ಯ ಮಾಡಿದ್ದಾರೆ. ಹುಬ್ಬಳ್ಳಿಯ ನವನಗರ ಮೂಲದ ರಾಹುಲ್ ಜೊತೆ ಜ್ಯೋತಿ ಅನೈತಿಕ ಸಂಬಂಧ ಹೊಂದಿದ್ದಳು, ಇದಕ್ಕೆ ಮಗಳು ಅಡ್ಡಿಯಾಗಿದ್ದಾಳೆ ಎಂದು ಪ್ರಿಯಕರ ರಾಹುಲ್ ಜೊತೆ ಸೇರಿಕೊಂಡು ಮಗಳನ್ನೇ ಕತ್ತು ಕೊಯ್ದು ಕೊಲೆ ಮಾಡಿದ್ದಾಳೆ. ಘಟನೆ ಸಂಬಂಧ ಧಾರವಾಡ ಉಪನಗರ ಪೋಲಿಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.
ಪಾಪ್ ಕಾರ್ನ್ ಆರೋಗ್ಯಕ್ಕೆ ಒಳ್ಳೆಯದು..!: ಮೆಕ್ಕೆಜೋಳದಿಂದ ತಯಾರಿಸಿದ ಪಾಪ್ ಕಾರ್ನ್ ಅನೇಕ ಪೋಷಕಾಂಶಗಳಿಂದ ಕೂಡಿರುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎಂದು ವೈದ್ಯಕೀಯ ತಜ್ಞರು ಸಲಹೆ ನೀಡುತ್ತಾರೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವುದು ಸೇರಿದಂತೆ ಮಲಬದ್ಧತೆಯನ್ನು ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ. ಪಾಪ್ ಕಾರ್ನ್ನಲ್ಲಿರುವ ಫೀನಾಲಿಕ್ ಆಂಟಿಆಕ್ಸಿಡೆಂಟ್ ಗಳು ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುತ್ತದೆ. ಅಲ್ಲದೆ ತ್ವಚೆಯ ಮೇಲಿನ ಸುಕ್ಕುಗಳನ್ನು ತಡೆಯಲು ಮತ್ತು ಯೌವನವನ್ನು ಕಾಪಾಡಲು ಇದು ಸಹಾಯ ಮಾಡುತ್ತದೆ. ಕಪ್ಪು ಕಲೆಗಳಿಗೆ ರಾಮಬಾಣ ಅರಿಶಿನ: ಮೂಗು ಅಥವಾ ಕೆನ್ನೆಯ ಮೇಲೆ ಕಪ್ಪು ಕಲೆಗಳು ಸಾಮಾನ್ಯ. ಇದು ಯುವಜನತೆ ಹಾಗೂ ವಯಸ್ಸಾದವರಲ್ಲೂ ಕಂಡು ಬರುತ್ತದೆ. ಈ ಕಲೆಗಳನ್ನು ಹೋಗಲಾಡಿಸಲು ಮನೆಯಲ್ಲಿಯೆ ಮದ್ದು ಇದೆ. ಅರಿಶಿನವು ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ರೋಗ ನಿರೋಧಕ ಗುಣಗಳಿಂದ ಸಮೃದ್ಧವಾಗಿದೆ. ಮೂಗಿನ ಮೇಲಿನ ಕಪ್ಪು ಕಲೆಗಳನ್ನು ತೊಡೆದುಹಾಕಲು ಅರಿಶಿನದೊಂದಿಗೆ ಸ್ವಲ್ಪ ತೆಂಗಿನ ಎಣ್ಣೆಯನ್ನು ಮಿಕ್ಸ್ ಮಾಡಿ. 15 ನಿಮಿಷಗಳ ನಂತರ ಮುಖವನ್ನು ತೊಳೆಯಿರಿ. ವಾರಕ್ಕೆ…
ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮದಲ್ಲಿ ವೈರಲ್ ಫಿವರ್ ಮತ್ತು ಚಿಕನ್ ಗುನ್ಯಾ ಪ್ರಕರಣಗಳು ಹೆಚ್ಚಾಗುತ್ತಿವೆ. ಇಲ್ಲಿನ ಗ್ರಾಮದ ಜನರು ಜ್ವರ, ಮೈ ಕೈ ನೋವು ಮತ್ತು ಕೀಲು ನೋವಿನಿಂದ ಬಳಲುತ್ತಿದ್ದಾರೆ. ನೆರೆಬೆಂಚಿ ಗ್ರಾಮ ಮಾತ್ರವಲ್ಲದೇ, ಅನೇಕ ಗ್ರಾಮಗಳಲ್ಲಿ ಚಿಕನ್ ಗುನ್ಯಾ ಆತಂಕ ಹೆಚ್ಚಾಗಿದೆ. ಹೀಗಾಗಿ ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆ ಜಾಗೃತಿ ಮೂಡಿಸಲು ಮುಂದಾಗಿದೆ. ಯಾವೆಲ್ಲಾ ಕ್ರಮ ಕೈಗೊಳ್ಳಬೇಕು. ಜನರು ಮಾಡಬೇಕಾಗಿರುವುದು ಏನು ಎಂಬುವುದರ ಬಗ್ಗೆ ಮನೆ ಮನೆಗೆ ಹೋಗಿ ಜಾಗೃತಿ ಮೂಡಿಸಲು ಮುಂದಾಗಿದೆ.
ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಕಿಟಕಿ ಪಕ್ಕದ ಸೀಟ್ ಗಾಗಿ ಹೊಡೆದಾಡಿಕೊಂಡ ಘಟನೆಗಳು ಹಲವೆಡೆ ನಡೆದಿವೆ. ಹಾಗೆಯೇ ಇದೀಗ ಯುವತಿಯರಿಬ್ಬರು ಬಿಎಂಟಿಸಿ ಬಸ್ ನಲ್ಲಿ ಕಿಟಕಿ ತೆರೆಯುವ ವಿಚಾರಕ್ಕೆ ಚಪ್ಪಲಿ, ಶೂನಲ್ಲಿ ಬಡಿದಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮೆಜೆಸ್ಟಿಕ್ ಟು ಪೀಣ್ಯಾ ಬಸ್ ನಲ್ಲಿ ಯುವತಿಯರಿಬ್ಬರು ಚಪ್ಪಲಿಯಲ್ಲಿ ಬಡಿದಾಡಿಕೊಂಡ ಘಟನೆ ವರದಿಯಾಗಿದೆ. ಮೆಜೆಸ್ಟಿಕ್ ನಿಂದ ಪೀಣ್ಯ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಕಿಟಕಿ ತೆಗೆಯುವ ವಿಚಾರಕ್ಕೆ ಇಬ್ಬರು ಯುವತಿಯರು ಮಧ್ಯೆ ಕಿರಿಕ್ ಮಾಡಿಕೊಂಡಿದ್ದಾರೆ. ಈ ವೇಳೆ ಇಬ್ಬರೂ ಚಪ್ಪಲಿ, ಶೂ ನಿಂದ ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೋವನ್ನು ಅಲ್ಲಿದ್ದ ಇನ್ನಿತರ ಪ್ರಯಾಣಿಕರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿಯಲಾಗಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲಾತಣಗಳಲ್ಲಿ ವೈರಲ್ ಆಗುತ್ತಿದೆ.