Subscribe to Updates
Get the latest creative news from FooBar about art, design and business.
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
Author: admin
ಕೊರಟಗೆರೆ: 250 ವರ್ಷಗಳ ಇತಿಹಾಸ ಇರುವ ಕೊರಟಗೆರೆಯ ಧರ್ಮಸಾಗರ ಕೆರೆಗೆ 426 ಎಕರೆ ಭೂ ವಿಸ್ತೀರ್ಣವಿದೆ. ಕೆರೆಯ ಪುನಶ್ಚೇತನ ಮತ್ತು ಅಭಿವೃದ್ದಿ ಮಾಡಬೇಕಾದ ಸಣ್ಣ ನೀರಾವರಿ ಇಲಾಖೆಯೇ ಕೊರಟಗೆರೆಯಲ್ಲಿ ಇಲ್ಲ, ಸ್ಥಳೀಯ ಕ್ಯಾಮೇನಹಳ್ಳಿ ಗ್ರಾಪಂಗೆ ಕೆರೆಯ ರಕ್ಷಣೆ ಮತ್ತು ಅಭಿವೃದ್ದಿಯ ಕಾಳಜಿಯು ಇಲ್ಲದೇ ಭೂಗಳ್ಳರ ಹಾವಳಿಗೆ ಕೆರೆಯು ಬಲಿಯಾಗಿ ಅಂತರ್ಜಲ ಮಟ್ಟವು ಮತ್ತೇ ಪಾತಾಳಕ್ಕೆ ಕುಸಿದಿದೆ. ಜಯಮಂಗಲಿ ನದಿಪಾತ್ರದ ತೀತಾ ಜಲಾಶಯವು ಕಳೆದ ವರ್ಷ ಕೋಡಿಬಿದ್ದು ಧರ್ಮಸಾಗರ ಕೆರೆಯು ತುಂಬಿದ ವರ್ಷವೇ ಖಾಲಿಯಾಗಿದೆ. ಕೆರೆಯ ಹಿಂಭಾಗದ 95 ಗ್ರಾಮದ ಅಂತರ್ಜಲ ಮಟ್ಟ ಸುಧಾರಣೆಗೆ ಮತ್ತೆ ಪೆಟ್ಟುಬಿದ್ದಿದೆ. ತೀತಾ ಜಲಾಶಯದ ಬಲದಂಡೆ ನಾಲೆಯಿಂದ ವೆಂಕಟಾಪುರ, ಕಂಬದಹಳ್ಳಿ, ಕೋಡ್ಲಹಳ್ಳಿ ಮಾರ್ಗದ ಕಾಲುವೆಗೆ ಕಲ್ಲು-ಮಣ್ಣು ಹಾಕಿ ಮುಚ್ಚಿರುವ ಹಿನ್ನಲೆ ನೂರಾರು ರೈತರಿಗೆ ಸಂಕಷ್ಟ. ಮೀನುಗಾರಿಕೆ ಇಲಾಖೆಯು ಲಾಭಕ್ಕೆ ಮಾತ್ರ ಸೀಮಿತವಾಗಿದ್ದು ಕೆರೆಯ ಪುನಶ್ಚೇತನ ಮತ್ತು ಅಭಿವೃದ್ದಿಗೆ ಸರಕಾರ ಪ್ರಮುಖ ಆದ್ಯತೆ ನೀಡಬೇಕಿದೆ. 138 ಎಕರೆಯ ದಾಖಲೆಯೇ ಇಲ್ಲ: ಧರ್ಮಸಾಗರ ಕೆರೆಯು ಮಾಳೇನಹಳ್ಳಿ ಸರ್ವೆ.15ರಲ್ಲಿ 31 ಎಕರೆ,…
ತುರುವೇಕೆರೆ: ತಾಲೂಕಿನಾದ್ಯಂತ ಫೆಬ್ರವರಿ 13 ರಿಂದ 18 ರವರೆಗೆ ‘ಸಂವಿಧಾನ ಜಾಗೃತಿ ಜಾಥಾ’ ಬಗ್ಗೆ ಹಾಗೂ ಸಂವಿಧಾನದ ಮಹತ್ವ ಜೊತೆಗೆ ಮುಂದಾಗುವ ಪರಿಣಾಮಗಳ ಬಗ್ಗೆ ಜಾಗ್ರತೆ ಮೂಡಿಸುವ ಕಾರ್ಯಕ್ರಮದ ಹಿನ್ನೆಲೆ ಇಂದು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕಿನ ದಂಡಾಧಿಕಾರಿ ವೈ.ಎಂ. ರೇಣುಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಇದೆ ವೇಳೆ ತಹಶೀಲ್ದಾರ್ ವೈ.ಎಂ. ರೇಣುಕುಮಾರ್ ಮಾತನಾಡಿ, ಇದೇ ತಿಂಗಳು 12ನೇ ತಾರೀಕು ಸಂಜೆ ಸಂವಿಧಾನ ಜಾಗೃತಿ ಜಾಥ ರಥ ನಮ್ಮ ತಾಲೂಕಿಗೆ ಆಗಮಿಸಲಿದ್ದು, ಪ್ರತಿ ಹಳ್ಳಿಗಳ ಜನರಲ್ಲಿ ಕಾನೂನಿನ ಸುವ್ಯವಸ್ಥೆ ಬಗ್ಗೆ ಹಾಗೂ ಸರ್ಕಾರದಿಂದ ಬಂದಂತಹ ಅನುದಾನದ ಉಪಯೋಗ ಬಗ್ಗೆ ಜನರಲ್ಲಿ ಮತ್ತು ಮಕ್ಕಳಿಗೆ ಜಾಗೃತಿ ಮೂಡಿಸುವ ಜಾಥಾ ಇದಾಗಿದ್ದು, ಜನವರಿ 26 ರಂದು ಪ್ರಾರಂಭವಾದ ಈ ಸಂವಿಧಾನ ಜಾಗ್ರತಾ ಜಾಥಾ ಫೆ.26ರಂದು ಬೆಂಗಳೂರು ತಲುಪಲಿದೆ ಎಂದರು. ನಮ್ಮ ತಾಲೂಕಿಗೆ ಆಗಮಿಸಲಿರುವ ಸಂವಿಧಾನ ಜಾಗೃತಿ ಜಾಥಾ ರಥವನ್ನು ಬಹಳ ವಿಜೃಂಭಣೆಯಿಂದ ಸ್ವಾಗತಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಇದೇ ವೇಳೆ ಅವರು…
ಬೀದರ್: ದ್ವಿಚಕ್ರ ವಾಹನ ಕಳ್ಳನೋರ್ವನನ್ನು ಬೀದರ ಜಿಲ್ಲೆಯ ನೂತನ ನಗರ ಪೊಲೀಸರು ಬಂಧಿಸಿದ್ದು, ಬಂಧಿತನಿಂದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೀದರ್ ಜಿಲ್ಲೆಯ ನೂತನ ನಗರ ಪೊಲೀಸ್ ಠಾಣೆಯ ಪಿ.ಐ.ವಿಜಯಕುಮಾರ ನೇತೃತ್ವದ ತಂಡ, ಪಿ.ಎಸ್.ಐ.ತಸ್ಲಿಂ ಸುಲ್ತಾನಾ ಹಾಗೂ ಠಾಣೆಯ ಅಪರಾಧ ಸಿಬ್ಬಂದಿಯಾದ ಶೇಕ ಮೊದಿನ, ಮಲ್ಲಿಕಾರ್ಜುನ, ಭರತ, ಪ್ರವೀಣಕುಮಾರ ಪೆಟ್ರೋಲಿಂಗ್ ನಡೆಸುತ್ತಿದ್ದರು. ಈ ವೇಳೆ ಪೊಲೀಸರನ್ನು ಕಂಡ ವ್ಯಕ್ತಿಯೋರ್ವ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಆತನನ್ನು ಹಿಡಿದು ಪೊಲೀಸರು ವಿಚಾರಿಸಿದಾಗ, ಆತ ಸರಿಯಾಗಿ ಉತ್ತರ ನೀಡಿಲ್ಲ, ಬಳಿಕ ತಾನು ಒಂದು ವರ್ಷದ ಹಿಂದೆ ಹೊಟೇಲ್ ಮಯೂರಾ ಬಳಿ ಈ ವಾಹನವನ್ನು ಕದ್ದಿದ್ದು, ಅದನ್ನೇ ಬಳಸುತ್ತಿರುವುದಾಗಿ ಹೇಳಿದ್ದಾನೆ. ಈ ವೇಳೆ ಪೊಲೀಸರು ಆರೋಪಿಯನ್ನ ಇನ್ನೂ ಕೂಲಂಕುಶವಾಗಿ ವಿಚಾರಣೆ ನಡೆಸಿದಾಗ ಇನ್ನೂ 7 ಕದ್ದ ದ್ವಿಚಕ್ರ ವಾಹನಗಳನ್ನು ಪೊದೆಯಲ್ಲಿ ಬಚ್ಚಿಟ್ಟಿರುವ ಬಗ್ಗೆ ತಿಳಿಸಿದ್ದಾನೆ. ಹೀಗಾಗಿ ಸ್ಥಳಕ್ಕೆ ತೆರಳಿದ ಪೊಲೀಸರು ಸುಮಾರು 3.45 ಲಕ್ಷ ರೂಪಾಯಿ ಬೆಲೆ ಬಾಳುವ 7 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.…
ಬೀದರ್: ಕೌಟುಂಬಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಶನೂರ ಪೊಲೀಸರು ಮಹಾರಾಷ್ಟ್ರದ ಲಾತೂರದಲ್ಲಿ ಬಂಧಿಸಿದ್ದಾರೆ. ಪಂಡಿತ್ ಲೋಹರ ಎಂಬವರ ಪುತ್ರ ಅರುಣ ಬಂಧಿತ ಆರೋಪಿಯಾಗಿದ್ದಾನೆ. ಕೌಟುಂಬಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಈತ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತ ಮಹಾರಾಷ್ಟ್ರದ ಲಾತೂರದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಎ.ಎಸ್.ಐ. ಅನಿಲ್, ಸಿಪಿಸಿ ಬಾಲಾಜಿ, ಸಿಪಿಸಿ ಸಂಜೀವ ಅವರನ್ನೊಳಗೊಂಡ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2014ರಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್
ಮುಂಬೈ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ ಪವಿತ್ರ ಇಟ್ಟಿಗೆಯನ್ನು ತರಲಾಗಿದೆ. ರಾಮಜನ್ಮಭೂಮಿ ವಿವಾದದಲ್ಲಿ ಸುಪ್ರೀಂ ಕೋರ್ಟ್ ಆದೇಶದ ನಂತರ ಮುಸ್ಲಿಮರಿಗೆ ಪರಿಹಾರವಾಗಿ ನೀಡಿದ ಅಯೋಧ್ಯೆಯ ಭೂಮಿಯಲ್ಲಿ ಹೊಸ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಲ್ಲಿ ಪವಿತ್ರಗೊಳಿಸಲ್ಪಟ್ಟಿರುವ ಇಟ್ಟಿಗೆಯನ್ನು ಬಳಸಲಾಗುತ್ತದೆ. ಈ ಪವಿತ್ರ ಇಟ್ಟಿಗೆಯನ್ನು ಕಪ್ಪು ಮಣ್ಣಿನಿಂದ ಮಾಡಿದ್ದು, ಅದನ್ನು ಚಿನ್ನದಲ್ಲಿ ಕೆತ್ತಿ ಪವಿತ್ರ ಕುರಾನ್ ನ ಕೆಲವು ಉಪದೇಶಗಳನ್ನು ಹೊಂದಿದೆ ಎಂದು ಇಂಡೋ-ಇಸ್ಲಾಮಿಕ್ ಸಾಂಸ್ಕೃತಿಕ ಫೌಂಡೇಶನ್ (ಐಐಸಿಎಫ್) ಪದಾಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಈ ಇಟ್ಟಿಗೆಯನ್ನು ಮಾರ್ಚ್ 12 ರಂದು ರಂಜಾನ್ ಈದ್ ನಂತರ ಅಯೋಧ್ಯೆಯ ಮಸೀದಿ ಸ್ಥಳವಿರುವ ಧನ್ನಿಪುರ ಗ್ರಾಮಕ್ಕೆ ಕೊಂಡೊಯ್ಯಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಹೆಚ್.ಡಿ. ಕೋಟೆ: 7 ವರ್ಷದ ಬಾಲಕಿಗೆ ಶಿಕ್ಷಕಿಯೊಬ್ಬರು ಮನಬಂದಂತೆ ಥಳಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದು, ಕಲಿಕೆಯಲ್ಲಿ ಹಿಂದುಳಿದಿದ್ದಾಳೆ ಎನ್ನುವ ಕಾರಣಕ್ಕೆ ಶಿಕ್ಷಕಿ ಥಳಿಸಿದ್ದಾರೆ ಎಂದು ತಿಳಿದು ಬಂದಿದೆ. ಶಿಕ್ಷಕಿ ರತ್ನಾಕುಮಾರಿ, 2ನೇ ತರಗತಿಯಲ್ಲಿ ಕಲಿಯುತ್ತಿರುವ ನಿಕ್ಷಿತಾ ಎಂಬ ಬಾಲಕಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಶಿಕ್ಷಕಿಯ ಹಲ್ಲೆಯ ಹಿನ್ನೆಲೆ ಬಾಲಕಿಯ ಪೋಷಕರು ಹೆಚ್.ಡಿ. ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ಕೊಡಿಸಿದ್ದಾರೆ. ಇನ್ನೂ ಈ ಬಗ್ಗೆ ಶಿಕ್ಷಕಿಯನ್ನು ಪೋಷಕರು ಪ್ರಶ್ನಿಸಿದಾಗ ಉಡಾಫೆಯಿಂದ ಉತ್ತರಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಘಟನೆಯ ಮರುದಿನ ಶಾಲೆಗೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ, ನಮ್ಮ ಮೇಲಾಧಿಕಾರಿಗಳಿಗೆ ಈ ಘಟನೆಯ ಬಗ್ಗೆ ಮಾಹಿತಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಶಿಕ್ಷಕಿ ರತ್ನಾಕುಮಾರಿಯನ್ನು ಅಮಾನತು ಗೊಳಿಸುವಂತೆ ಪೋಷಕರು ಪಟ್ಟು ಹಿಡಿದಿದ್ದು, ಶಿಕ್ಷಕಿ ಗ್ರಾಮದಲ್ಲಿ ಜಾತಿ ಭೇದ ಮಾಡುತ್ತಾರೆ, ಸರಿಯಾದ ಸಮಯಕ್ಕೂ ಶಿಕ್ಷಕಿ ಶಾಲೆಗೆ ಬರುತ್ತಿಲ್ಲ ಎಂದ ಪೋಷಕರು ದೂರಿದ್ದಾರೆ. ವರದಿ: ಮಲಾರ ಮಹದೇವಸ್ವಾಮಿ
ಸರಗೂರು: ಹಾಡಿಯ ಜನರು ಅನಕ್ಷರತೆ,ಅಪೌಷ್ಟಿಕತೆ ಇನ್ನಿತರ ಸಮಸ್ಯೆಗಳಿಂದ ತೀವ್ರ ಹಿಂದುಳಿದಿದ್ದಾರೆ. ಪ್ರತ್ಯೇಕ ತಾಲೂಕು ಮಾಡಿ ಆರು ವರ್ಷ ಕಳೆದರು ಸಹ ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದೇ ಇಲ್ಲಿನ ಬಡ ಜನತೆ ನೆರಳುವಂತಾಗಿದೆ. ಇಲ್ಲಿ ಪರಿಶಿಷ್ಟ ಜಾತಿ ,ಪಂಗಡದ ಬಡಜನರೇ ಹೆಚ್ಚಾಗಿ ವಾಸಿಸುತ್ತಿದ್ದು, ಭೌಗೋಳಿಕವಾಗಿ ಬಂಡೀಪುರ ಅಭಯಾರಣ್ಯ , ನುಗು ಹಾಗೂ ಕಪಿಲಾ ನದಿಗಳು ಹರಿಯುವ ಪ್ರಾಕೃತಿಕವಾಗಿ ಸುಂದರವಾಗಿರುವ ಪ್ರದೇಶದ ಜನರ ಬದುಕು ದುಸ್ತರವಾಗಿದೆ ಎಂದು ಎಸ್ ಯುಸಿಐಸಿ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಟಿ.ಆರ್. ಸುನೀಲ್ ಹೇಳಿದರು. ತಾಲ್ಲೂಕಿನ ಪಟ್ಟಣದಲ್ಲಿ ಎಸ್ ಯುಸಿಐಸಿ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರದಂದು ಹಮ್ಮಿಕೊಂಡಿದ್ದ, ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ದೇಶ ವ್ಯಾಪಿ ಸಹಿ ಸಂಗ್ರಹ, ಬೆಂಗಳೂರು ಚಲೋ ಪ್ರಚಾರಾಂದೋಲದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಅರಣ್ಯ ಸಂಪತ್ತು ಹಾಗೂ ಭೂಮಿಯ ಒಡೆತನ ಎಂಬುದು ಆಗರ್ಭ ಶ್ರೀಮಂತರ ಪಾಲಾಗುತ್ತಿದೆ. ಈ ಭಾಗದ ಜನರ ಮುಗ್ದತೆಯನ್ನು ಬಳಸಿಕೊಂಡು ಅನ್ಯಾಯ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು. ಅಚ್ಚೆ ದಿನ್, ಭಾಗ್ಯಗಳು,…
ಊಟಿ: ನಿರ್ಮಾಣ ಹಂತದ ಮನೆ ಕುಸಿದು ಬಿದ್ದು ಆರು ಮಂದಿ ಕಟ್ಟಡ ಕಾರ್ಮಿಕರು ಮೃತಪಟ್ಟ ಧಾರುಣ ಘಟನೆ ತಮಿಳುನಾಡಿನ ಊಟಿ ಸಮೀಪದ ಲವ್ ಡೇಲ್ ನಲ್ಲಿ ನಡೆದಿದೆ. ಮೃತರನ್ನು ಸಕಿಲಾ (30), ಸಂಗೀತಾ (35), ಭಾಗ್ಯ (36), ಉಮಾ (35), ಮುತ್ತುಲಕ್ಷ್ಮಿ (36) ಮತ್ತು ರಾಧಾ (38) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಇಬ್ಬರು ಕಾರ್ಮಿಕರನ್ನು ಊಟಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಬ್ಬ ಕಾರ್ಮಿಕ ಅವಶೇಷಗಳ ಅಡಿಯಲ್ಲಿ ಸಿಕ್ಕಿಬಿದ್ದಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಸಲಾಗುತ್ತಿದೆ ಎಂದು ಊಟಿ ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಾರ್ವಜನಿಕರು ತಕ್ಷಣ ಕಾರ್ಯಪ್ರವೃತ್ತರಾಗಿ, ಸಿಲುಕಿದವರನ್ನು ಹೊರಕ್ಕೆ ತೆಗೆಯುವ ಪ್ರಕ್ರಿಯೆ ನಡೆಸಿದರು. ಗಾಯಾಳುಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಲೂಚಿಸ್ತಾನ: ಪಾಕಿಸ್ತಾನದ ಬಲೂಚಿಸ್ತಾನ ಪಿಶಿನ್ ನಲ್ಲಿರುವ ಸ್ವತಂತ್ರ ಅಭ್ಯರ್ಥಿಯ ಪಕ್ಷದ ಕಚೇರಿಯ ಹೊರಗೆ ಇಂದು ಬಾಂಬ್ ಸ್ಫೋಟಗೊಂಡಿದ್ದು, ಹನ್ನೆರಡು ಜನ ಸಾವನ್ನಪ್ಪಿದ್ದರೆ, 30 ಜನ ಗಾಯಗೊಂಡಿದ್ದಾರೆ ಎಂದು ವರದಿ ಮಾಡಿದೆ. ಪಾಕಿಸ್ತಾನದ ಪಿಶಿನ್ ನ ಖನೋಜೈ ಪ್ರದೇಶದಲ್ಲಿ ಸ್ವತಂತ್ರ ಅಭ್ಯರ್ಥಿ ಅಸ್ಫಂಡ್ ಯಾರ್ ಖಾನ್ ಕಾಕರ್ ಅವರ ಕಚೇರಿಯ ಹೊರಗೆ ಬಾಂಬ್ ಸ್ಫೋಟ ಮಾಡಲಾಗಿದೆ. ಇನ್ನು ಸ್ಫೋಟದ ಸಂದರ್ಭದಲ್ಲಿ ಸ್ವತಂತ್ರ ಅಭ್ಯರ್ಥಿ ಅಸ್ಫಂಡ್ ಯಾರ್ ಖಾನ್ ಕಾಕರ್ ಅವರು ತಮ್ಮ ಕಚೇರಿಯಲ್ಲಿ ಇರಲಿಲ್ಲ. ಈ ಘಟನೆಯ ಕುರಿತು ಪಾಕಿಸ್ತಾನದ ಚುನಾವಣಾ ಆಯೋಗವು ಪ್ರಾಂತೀಯ ಮುಖ್ಯ ಕಾರ್ಯದರ್ಶಿ ಮತ್ತು ಪ್ರಾಂತೀಯ ಪೊಲೀಸ್ ಮುಖ್ಯಸ್ಥರಿಂದ ತಕ್ಷಣದ ವರದಿಗಳನ್ನು ಕೇಳಿದೆ. ಈ ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶವನ್ನು ನೀಡಲಾಗಿದೆ ಎಂದು ಹೇಳಲಾಗಿದೆ. ಅಸ್ಫಂಡ್ ಯಾರ್ ಖಾನ್ ಕಾಕರ್ ಅವರ ಮೋಟಾರ್ ಬೈಕ್ ನಲ್ಲಿ ಬಾಂಬ್ ಇಡಲಾಗಿತ್ತು ಎಂದು ಜಿಲ್ಲಾಧಿಕಾರಿ ಜುಮಾ ದಾದ್ ತಿಳಿಸಿದ್ದಾರೆ. ಸ್ಫೋಟದಲ್ಲಿ ಗಾಯಗೊಂಡಿರುವ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕೆರದುಕೊಂಡು ಹೋಗಲಾಗಿದೆ.…
ಮೈಸೂರು: ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನವೀದಾ ಮೃತ ದುರ್ದೈವಿಯಾಗಿದ್ದು, ಅಕ್ಬರ್ ಅಲಿ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಆರೋಪಿ ಪತಿ ಅಕ್ಬರ್ ಅಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಡ್ಯ ಮೂಲದ ಅಕ್ಬರ್ ಅಲಿ ಆಟೋ ಚಾಲಕನಾಗಿದ್ದು, ನವೀದಾ-ಅಕ್ಬರ್ ಅಲಿ ಮದುವೆ ಆಗಿ 13 ವರ್ಷಗಳ ದಾಂಪತ್ಯದಲ್ಲಿ, ದಂಪತಿಗೆ ಮೂವರು ಮಕ್ಕಳಿದ್ದು, ಮೈಸೂರಿನ ರಾಜೀವ್ ನಗರದಲ್ಲಿ ನೆಲೆಸಿದ್ದರು. ಈ ಹಿಂದೆ ಪತಿಯಾದ ಅಕ್ಬರ್ ಅಲಿ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗ, ಪತ್ನಿ ನವೀದಾ ತನ್ನ ತವರು ಮನೆಯವರ ನೆರವಿನಿಂದ ಪತಿಗೆ ಚಿಕಿತ್ಸೆ ಕೊಡಿಸಿದ್ದಳು. ಅಕ್ಬರ್ ಅಲಿ ಗುಣಮುಖನಾಗಿ ಬಂದ ಮೇಲೆ, ಗೂಡ್ಸ್ ಆಟೋ, ಪ್ರಾವಿಷನ್ ಸ್ಟಾಲ್, ಆಟೋ ಮೊಬೈಲ್ಸ್ ಅಂಗಡಿ ಹೀಗೆ ಹಲವು ವ್ಯಾಪಾರ ಮಾಡಲು ಆರಂಭಿಸಿದನು. ಇದಕ್ಕಾಗಿ ಹಲವೆಡೆ ಸಾಲ ಮಾಡಿದ್ದನು. ಮತ್ತು ನವೀದಾ ತವರು ಮನೆಯವರು ಕೂಡ ಅಕ್ಬರ್ ಅಲಿಗೆ ಆರ್ಥಿಕ ಸಹಾಯ ಮಾಡುತ್ತಿದ್ದರು. ಪತ್ನಿ ನವೀದಾ ಸಣ್ಣ…