Subscribe to Updates
Get the latest creative news from FooBar about art, design and business.
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
Author: admin
ಮಹಿಳೆಯನ್ನು ಹತ್ಯೆ ಮಾಡಿ ಮೃತದೇಹದೊಂದಿಗೆ ಸಂಬೋಗ ನಡೆಸಿದ ಆರೋಪದ ಮೇಲೆ ಛತ್ತೀಸ್ ಗಢದ ಬಲರಾಮ್ಪು ರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಪುರ ಠಾಣೆ ವ್ಯಾಪ್ತಿಯ ಪರಸಗುಡಿ ಹರಿತ್ಮಾ ಗ್ರಾಮದ ಕಾಡಿನಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತ ವಯಸ್ಕ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. 17 ವರ್ಷ ವಯಸ್ಸಿನ ಅಪ್ರಾಪ್ತ ವಯಸ್ಕ ಹತ್ಯೆಯಾದ ಮಹಿಳೆಯ ಪತಿಯ ಕಿರಿಯ ಸಹೋದರನಾಗಿದ್ದು,ಸಂಬಂಧಿಕ ಎಂದು ವರದಿ ತಿಳಿಸಿದೆ. ಮಹಿಳೆ ಮತ್ತು ಆಕೆಯ ಪತಿ ಕೆಲಸದ ನಿಮಿತ್ತ ಪರ್ಸಗುಡಿ ಎಂಬಲ್ಲಿಂದ ಕೆಲವು ಕಿಲೋಮೀಟರ್ ದೂರದಲ್ಲಿರುವ ಸುರ್ಗುಜಾ ಜಿಲ್ಲೆಯ ಅಕೋಲಾಕ್ಕೆ ಸ್ಥಳಾಂತರಗೊಂಡಿದ್ದರು. ಘಟನೆಯ ದಿನ ಆರೋಪಿಗಳು ತಮ್ಮ ಕೃಷಿ ಭೂಮಿಗೆ ನೀರುಣಿಸಲು ಹರಿತ್ಮಾ ಅರಣ್ಯಕ್ಕೆ ಬರುವಂತೆ ಫೋನ್ ಮೂಲಕ ಕರೆದಿದ್ದರು. ಕಾಡಿಗೆ ಬಂದ ಮಹಿಳೆಯೊಂದಿಗೆ ಮದ್ಯ ಸೇವಿಸಿದ ನಂತರ ಅಪ್ರಾಪ್ತ ಬಾಲಕ ನೈಲಾನ್ ಹಗ್ಗದಿಂದ ಆಕೆಯ ಕತ್ತು ಹಿಸುಕಿ ಕೊಂದು ನಂತರ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮರುದಿನ ಬೆಳಗ್ಗೆ ದಾರಿಹೋಕರು ಆಕೆಯ ಶವವನ್ನು…
ಸರಗೂರು: ನಾವೆಲ್ಲರೂ ಸಂಘಟಿತರಾಗುವ ಮೂಲಕ ಆರ್ಥಿಕವಾಗಿ ಹಿಂದುಳಿದಿರುವ ಭೋವಿ ಜನಾಂಗವನ್ನು ಮೇಲೇತ್ತುವ ಕೆಲಸ ಮಾಡಬೇಕಿದೆ ಎಂದರು. ಮಹಾ ಸಂಸ್ಥಾನ ಭೋವಿ ಗುರುಪೀಠ ಇಮ್ಮಡಿ ಸಿದ್ದರಾಮೇಶ್ವರಸ್ವಾಮಿ ಆಶೀರ್ವಚನ ನೀಡಿದರು. ತಾಲ್ಲೂಕಿನ ಪಟ್ಟಣದ ಶಿವಯೋಗಿ ಸಿದ್ಧರಾಮೇಶ್ವರ ಭೋವಿ ಸಮಾಜ ಸೇವೆ ಸಮಿತಿ ವತಿಯಿಂದ ಶಿವಯೋಗಿ ಸಿದ್ಧರಾಮೇಶ್ವರರ 852 ನೇ ಜಯಂತೋತ್ಸವ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಂಡಿದ್ದು ಗಣ್ಯರು ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದರು. ಒಬ್ಬ ನೇಯ್ಗೆ ಕಾಯಕದವ, ಇನ್ನೊಬ್ಬ ಕನ್ನಡಿ (ಕ್ಷೌರದ) ಕಾಯಕದವ. ಇವರಿಬ್ಬರಲ್ಲದೆ ಅಮುಗೇಶ್ವರಲಿಂಗ ಎಂಬ ಅಂಕಿತದ ಒಬ್ಬ ವಚನಕಾರನನ್ನು ಕವಿಚರಿತೆಕಾರರು ಹೇಳಿ ಒಂದು ವಚನವನ್ನು ಉದಾಹರಿಸಿ ಆತ ಇನ್ನೊಬ್ಬ ಆಮುಗಿದೇವಯ್ಯನೆಂದು ಅಭಿಪ್ರಾಯಪಟ್ಟಿದ್ದಾರೆ. ಸಿದ್ದರಾಮೇಶ್ವರರು ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಮಾಡಿದ್ದಾರೆ. ಇವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶಾಸಕ ಹಾಗೂ ಜಂಗಲ್ ಲಾಡ್ಜ್ ಹಾಗೂ ರೆಸಾರ್ಟ್ ಗಳ ನಿಗಮದ ಅಧ್ಯಕ್ಷ ಅನಿಲ್ ಚಿಕ್ಕಮಾದು ಮಾತನಾಡಿ, ನದಿ,…
ಅಡವಿ ಚಿತ್ರಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ, ಆಂಧ್ರಪ್ರದೇಶದ ತಿರುಪತಿಯಲ್ಲಿ ಇಂಡಿಯನ್ ಫಿಲಂ ಮೇಕರ್ಸ್ ಅಸೋಸಿಯೇಷನ್ (ಐ ಎಫ್ ಎಂ. ಎ ) ಆಯೋಜಿಸಿದ್ದ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಆಫ್ ತಿರುಪತಿ ಇಲ್ಲಿ ಅತ್ಯುತ್ತಮ ಕಥೆ. ಅತ್ಯುತ್ತಮ ಗೀತರಚನೆ ಅತ್ಯುತ್ತಮ ಖಳನಟ ಹೀಗೆ ಮೂರು ವಿಭಾಗಗಳಲ್ಲಿ ಅಡವಿ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಅಡವಿ ಚಿತ್ರವು ವಿಭಿನ್ನ ಕಥಾಹಂದರವನ್ನು ಹೊಂದಿದ್ದು ಪರಿಸರ ರಕ್ಷಣೆ ಹಾಗೂ ಆದಿವಾಸಿಗಳ ಬದುಕಿನ ಮೂಲ ಭೂತ ಸಮಸ್ಯೆ ಹಾಗೂ ಸಂವಿಧಾನದ ಹರಿವು ಮೂಡಿಸುವುದರ ಬಗ್ಗೆ ದ್ವನಿ ಎತ್ತಿದ್ದು ಚಿತ್ರದ ಹಾಡುಗಳು ಹಾಗೂ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ 90 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ಚಿತ್ರ ರಸಿಕರು. ಪರಿಸರ ಪ್ರೇಮಿಗಳು ಚಿಂತಕರು ಸಾಹಿತಿಗಳು ಪ್ರಗತಿಪರ ರನ್ನು ದಿನದಿಂದ ದಿನಕ್ಕೆ ಸೆಳೆಯುತ್ತಿದೆ. ಇದೀಗ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಕಥೆ ಪ್ರಶಸ್ತಿಯನ್ನೂ ತನ್ನದಾಗಿಸಿಕೊಂಡಿದೆ. ಟೈಗರ್ ನಾಗ್ ಅವರು ಅಡವಿ ಕಾದಂಬರಿ ಬರೆದು ಕರ್ನಾಟಕ ರಾಜ್ಯದ ಗೃಹ ಮಂತ್ರಿಗಳು ಹಾಗೂ ಕೊರಟಗೆರೆ ಕ್ಷೇತ್ರದ…
ಬೆಂಗಳೂರು: ಭಾರತೀಯ ಹಾಕಿ ತಂಡದ ಸದಸ್ಯನೊಬ್ಬನ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಆರೋಪಿಯು ಭಾರತೀಯ ಹಾಕಿ ತಂಡದ ಡಿಫೆಂಡರ್ ವರುಣ್ ಕುಮಾರ್ ಎಂದು ತಿಳಿದು ಬಂದಿದೆ. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿರುವ ಆರೋಪ ಕೇಳಿ ಬಂದಿದೆ. ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದಾಗ ಯುವತಿಯೊಬ್ಬಳು ವರುಣ್ ಕುಮಾರ್ ಗೆ ಪರಿಚಯವಾಗಿದ್ದಳು. ಯುವತಿಗೆ 16 ವರ್ಷವಿದ್ದಾಗ ಪ್ರೀತಿ ಮಾಡಿದ್ದ. ಜೊತೆಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಕೂಡ ಮಾಡಿದ್ದ ಎಂದು ತಿಳಿದು ಬಂದಿದೆ. ಇದಲ್ಲದೇ 2019ರಿಂದ ಯುವತಿ ಜೊತೆಗೆ ಸಂಪರ್ಕದಲ್ಲಿದ್ದ. ಈಗ ಮದುವೆಯಾಗದೇ ವಂಚಿಸಿರುವ ಹಿನ್ನೆಲೆ, ಆರೋಪಿಯ ಮೇಲೆ ಎಫ್ ಐಆರ್ ದಾಖಲಾಗಿದೆ. ಮೂಲತಃ ಹಿಮಾಚಲ ಪ್ರದೇಶದವನಾಗಿದ್ದು, 2017ರಲ್ಲಿ ಭಾರತ ತಂಡದ ಪರ ಹಾಕಿ ಆಟಕ್ಕೆ ಪಾದಾರ್ಪಣೆ ಮಾಡಿದ್ದ ವರುಣ್ ಕುಮಾರ್ ಹಾಕಿ ಇಂಡಿಯಾ ಲೀಗ್ ಪಂಜಾಬ್ ವಾರಿಯರ್ ತಂಡವನ್ನು…
ಧಾರವಾಡ: ಆಸ್ತಿಗಾಗಿ ವೃದ್ಧೆಯನ್ನು ಕೊಲೆ ಮಾಡಿದ ಪರಾರಿಯಾಗಿರುವ ಘಟನೆ ಧಾರವಾಡ ಹೊರವಲಯದ ನವಲೂರ ಗ್ರಾಮದಲ್ಲಿ ನಡೆದಿದೆ. ಕರೆವ್ವ ಈರಪ್ಪಗೆರಿ ಕೊಲೆಯಾದ ವೃದ್ಧೆ. ದುಷ್ಕರ್ಮಿಗಳು ಆಸ್ತಿ ವಿಚಾರವಾಗಿ ವೃದ್ಧೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾರವಾಡ ವಿದ್ಯಾಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ವೃದ್ಧೆಯ ಶವವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬೆಂಗಳೂರು: ಕೇಂದ್ರ ಸರ್ಕಾರದ ಭಾರತ್ ಬ್ರ್ಯಾಂಡ್ ಅಕ್ಕಿ ಯೋಜನೆಗೆ ಇಂದು(ಫೆಬ್ರವರಿ 06) ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಚಾಲನೆ ನೀಡಿದರು. ಮತ್ತೊಂದೆಡೆ ವಸಂತ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ನೆಫೆಡ್ ಕಚೇರಿ ಮುಂಭಾಗದಲ್ಲಿ ಭಾರತ್ ಅಕ್ಕಿ ಮಾರಟ ವಾಹನಗಳಿಗೆ ಚಾಲನೆ ನೀಡಲಾಗಿದೆ. ಎಫ್ ಸಿ ಐ ಚೆರ್ಮನ್ ಭೂಪೇಂದ್ರ ಸಿಂಗ್ ಬಾಟಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಒಟ್ಟು 7 ವಾಹನಗಳಿಗೆ ಚಾಲನೆ ನೀಡಿದರು. ಭಾರತ್ ಅಕ್ಕಿ ಯೋಜನೆಗೆ ಚಾಲನೆ ನೀಡದ ಬಳಿಕ ಮಾತನಾಡಿದ ಬಿಎಸ್ವೈ, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ. 29 ರೂಪಾಯಿಗೆ ಕೆಜಿ ಅಕ್ಕಿ, ಗೋದಿ 50 ರೂ., ಹೆಸರು ಕಾಳು 90 ರೂ., ತೊಗರಿ ಬೇಳೆ 60 ರೂ. ಕೆಜಿಗೆ ಮಾರಾಟ ಮಾಡಲಾಗುತ್ತಿದೆ. ಇಂತಹ ಒಳ್ಳೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಹೆಮ್ಮೆ ಇದೆ. ದೇಶದ ಇತಿಹಾಸದಲ್ಲಿ ಬಡವರು ಮತ್ತು ಮಧ್ಯಮ ವರ್ಗಕ್ಕೆ ಯೋಜನೆ ತಲುಪಲಿದೆ. ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಹತ್ತು…
ಚಿತ್ರದುರ್ಗ: ಕಾರಿನ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾದ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮುತ್ತುಸ್ವಾಮಿ(69) ಹಾಗೂ ಪಾಂಡುರಂಗ(32) ಮೃತ ದುರ್ದೈವಿಗಳಾಗಿದ್ದಾರೆ. ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರು ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಈ ಕುರಿತು ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು: ಟಿಪ್ಪರ್ ಲಾರಿಯೊಂದು ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಘಟನೆ ಬೆಂಗಳೂರಿನ ಚಾಲುಕ್ಯ ಸರ್ಕಲ್ ನಲ್ಲಿ ನಡೆದಿದೆ. ಬನಶಂಕರಿಯಿಂದ ಹೆಬ್ಬಾಳದ ಕಡೆ ಹೊರಟಿದ್ದಾಗ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಏಕಾಏಕಿ ರಸ್ತೆಯಿಂದ ಡಿವೈಡರ್ಗೆ ಹತ್ತಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಇಲ್ಲ. ಟಿಪ್ಪರ್ ಚಾಲಕ ಮನೋಹರ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಲಾರಿಯನ್ನು ಮೇಲಕ್ಕೆ ಎತ್ತಿದ್ದಾರೆ.
ಕಾರವಾರ: ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ಸೀಬರ್ಡ್ ಬಸ್ ಪಲ್ಟಿಯಾದ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 63ರ ವಜ್ರಳ್ಳಿ ಬಳಿ ನಡೆದಿದೆ. ಬೆಳಗಿನ ಜಾವ 3:15ಕ್ಕೆ ಸಂಭವಿಸಿದ ಅಪಘಾತದಲ್ಲಿ 8ಕ್ಕೂ ಅಧಿಕ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ. ಗಾಯಾಳುಗಳನ್ನು ಅಂಕೋಲಾ ತಾಲ್ಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಮಲ್ಲಸಂದ್ರ ಬಾಬಣ್ಣ ಲೇಔಟ್ ನಲ್ಲಿ ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೇಮಂತ್ ಮೃತ ದುರ್ದೈವಿ. ಕಿರಣ್, ಅಕ್ಷಯ್ ಆರೋಪಿಗಳಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಆರೋಪಿಗಳು, ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಗಾಯಗೊಂಡಿದ್ದ ಹೇಮಂತ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹೇಮಂತ್ ಮೃತಪಟ್ಟಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.