Author: admin

ಬೆಂಗಳೂರು: ಬೆಂಗಳೂರಿನಲ್ಲಿ ಸರಣಿ ಬಾಂಬ್‌ ಸ್ಫೋಟ ಮಾಡಲು ಸಂಚು ರೂಪಿಸಿದ್ದ 6 ಜನ ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ  ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಕಳೆದ ಜುಲೈನಲ್ಲಿ ಆರ್‌ ಟಿ ನಗರದ ಮನೆ ಮೇಲೆ ದಾಳಿ ಮಾಡಿದ ಬೆಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಜೀವಂತ ಗ್ರೆನೇಡ್‌ ಪತ್ತೆಯಾಗಿತ್ತು. ನಂತರ ಈ ಪ್ರಕರಣ ಎನ್ ‌ಐಎಗೆ ವರ್ಗಾವಣೆಯಾಗಿತ್ತು. ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಪತ್ತೆಯಾಗಿದ್ದವು. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಬಯಲಾಗಿತ್ತು. ಈ ಎಲ್ಲಾ ಅಂಶಗಳನ್ನು ಒಳಗೊಂಡು ಎನ್ ‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ.

Read More

ಮನುಷ್ಯ ಜೋರಾಗಿ ಹಸಿವಾದಾಗ ಊಟ ಮಾಡ್ತಾನೆ. ತಪ್ಪಿದ್ರೆ ಜಂಕ್ ಫುಡ್ಡೋ ಅಥವಾ ಫ್ರೂಟ್ರ್ಸ್ ಇಲ್ಲವೇ ಏನಾದರೂ ತಿಂಡಿ ತಿನಿಸುಗಳನ್ನು ತಿನ್ನಬಹುದು. ಆದರೆ ಹಸಿ ಬೆಕ್ಕನ್ನು ತಿಂದ ಉದಾಹರಣೆ ಬಗ್ಗೆ ನೀವೇನಾದ್ರೂ ಕೇಳಿದ್ದೀರಾ.. ಇಲ್ಲ ಅಲ್ವ.. ಹೌದು, ಇಂತಹ ಅಪರೂಪದ ಘಟನೆಯೊಂದು ನೆರೆಯ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಕುಟ್ಟಿಪ್ಪುರಂನಲ್ಲಿ ಕಳೆದ ಐದು ದಿನಗಳಿಂದ ತಿನ್ನಲು ಏನೂ ಸಿಗದೇ ಹಸಿವಿನಿಂದ ಕಂಗೆಟ್ಟಿದ್ದ ಅಸ್ಸಾಂ ಮೂಲದ ವ್ಯಕ್ತಿಯೊಬ್ಬ ಬೆಕ್ಕಿನ ಮಾಂಸವನ್ನು ಸೇವಿಸಿದ ಆಘಾತಕಾರಿ ಘಟನೆ ಶನಿವಾರ ನಡೆದಿದೆ. ಇಲ್ಲಿನ ಜನನಿಬಿಡ ಬಸ್ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಅಸ್ಸಾಂನ ಧುಬ್ರಿ ಜಿಲ್ಲೆಯ 27 ವರ್ಷದ ವ್ಯಕ್ತಿ ಬೆಕ್ಕಿನ ಹಸಿ ಮಾಂಸ ತಿನ್ನುತ್ತಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯರು ಈ ದೃಶ್ಯವನ್ನು ಗಮನಿಸಿದ್ದು, ಪೊಲೀಸರು ಇದನ್ನು ದೃಢ ಪಡಿಸಿದ್ದಾರೆ.” ಮಾಹಿತಿ ಸಿಕ್ಕ ನಂತರ ನಾವು ಸ್ಥಳಕ್ಕೆ ಭೇಟಿ ನೀಡಿದ್ದೇವೆ. ಆ ವ್ಯಕ್ತಿಯನ್ನು ವಿಚಾರಿಸಿದಾಗ, ಕಳೆದ ಐದು ದಿನಗಳಿಂದ…

Read More

ಬೆಂಗಳೂರು: ಗೃಹಿಣಿ ನೇಣು ಬಿಗಿದುಕೊಂಡು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಹಾಲಕ್ಷ್ಮಿ ಲೇಔಟ್‌ ನ  ಶ್ರೀ ಕಂಠೇಶ್ವರ ನಗರದಲ್ಲಿ ನಡೆದಿದೆ. ಪ್ರೇಮಲತಾ(35) ಮೃತ ಮಹಿಳೆಯಾಗಿದ್ದಾಳೆ. ಮಹಿಳೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಪತಿ ಶಿವಶಂಕರ್ ಕೊಲೆ ಮಾಡಿರಬಹುದು ಎಂಬ ಆನುಮಾನವಿದೆ. ಮಹಿಳೆಯನ್ನು ಕೊಲೆ ಮಾಡಿದ ಬಳಿಕ ನೇಣು ಬಿಗಿಯಲಾಗಿದೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಆಕೆಯ ಗಂಡನೇ ಕೊಲೆ ಮಾಡಿ ನೇಣು ಬಿಗಿದಿರಬಹುದು ಎಂಬ ಶಂಕೆಯನ್ನು ಪ್ರೇಮಲತಾ ಸಂಬಂಧಿಕರು ವ್ಯಕ್ತಪಡಿಸಿದ್ದಾರೆ.

Read More

ಕೊಡಗಿನ ಪ್ರವಾಸಿತಾಣಗಳ ವೀಕ್ಷಣೆಗೆ ಬಂದಿದ್ದ ಯುವಕನೊಬ್ಬ ಜಲಪಾತದ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಡಿಕೇರಿಯ ಚೆಯ್ಯಂಡಾಣೆ ಸಮೀಪದ ಚೇಲಾವರ ಫಾಲ್ಸ್ ‌ನಲ್ಲಿ ಸಂಭವಿಸಿದೆ. ಮೃತನನ್ನು ಕೇರಳದ ಮಟ್ಟನ್ನೂರು ನಿವಾಸಿಯೆಂದು ತಿಳಿದು ಬಂದಿದೆ. ಮಹಮ್ಮದ್‌ ಅಶ್ರಫ್ ಅವರ ಪುತ್ರ ರಾಶೀದ್‌(25) ಮೃತ ದುರ್ದೈವಿ. ಈತ ತನ್ನ ಮೂವರು ಸ್ನೇಹಿತರೊಂದಿಗೆ ಕೊಡಗಿನ ಪ್ರವಾಸಿತಾಣಗಳ ವೀಕ್ಷಣೆಗೆ ಬಂದಿದ್ದ ಎಂದು ತಿಳಿದು ಬಂದಿದೆ. ಈ ವೇಳೆ ಚೇಲಾವರ ಜಲಪಾತಕ್ಕೆಂದು ತೆರಳಿ ಸ್ನಾನಕ್ಕೆಂದು ಇಳಿದಾಗ ನೀರಿನಲ್ಲಿ ಮುಳುಗಿ ಸಾವಿಗೀಡಾದರು ಎಂದು ಹೇಳಲಾಗಿದೆ. ಜಲಪಾತದಿಂದ ಮೃತದೇಹವನ್ನು ಮೇಲೆತ್ತುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದು, ನಾಪೋಕ್ಲು ಠಾಣೆಯ ಅಪರಾಧ ವಿಭಾಗದ ಠಾಣಾಧಿಕಾರಿ ಶ್ರೀಧರ್‌ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಿಳಿ ಕೂದಲುಗಳನ್ನು ನಿಯಂತ್ರಿಸುತ್ತೆ ಈರುಳ್ಳಿ ರಸ: ಈರುಳ್ಳಿ ರಸವು ತಲೆಯಲ್ಲಿ ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುವ ಗುಣಗಳನ್ನು ಹೊಂದಿದೆ. ಇದು ಕೂದಲು ಬಿಳಿಯಾಗುವುದನ್ನು ತಡೆಯಲು ಸಹ ಸಹಾಯ ಮಾಡುತ್ತದೆ. ಸುಧಾರಿತ ರಕ್ತ ಪರಿಚಲನೆಯು ಕೂದಲುಗಳಿಗೆ ಪ್ರಮುಖ ಪೋಷಕಾಂಶಗಳು ಮತ್ತು ಆಮ್ಲಜನಕವನ್ನು ತಲುಪಿಸಲು ಸಹಾಯ ಮಾಡುತ್ತದೆ. ಕೂದಲಿನ ಬೆಳವಣಿಗೆ ಮತ್ತು ಒಟ್ಟಾರೆ ಕೂದಲಿನ ಆರೋಗ್ಯದಲ್ಲಿ ಈರುಳ್ಳಿ ರಸವು ತನ್ನದೆಯಾದ ಪ್ರಭಾವವನ್ನು ಬೀರುತ್ತದೆ. ಹೃದಯ ಕಾಯಿಲೆಗಳಿಗೆ ರಾಮಬಾಣ ಕುಂಬಳಕಾಯಿ ಬೀಜ: ಕುಂಬಳಕಾಯಿ ಬೀಜಗಳು ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಮೆಗ್ನೀಸಿಯಮ್, ಸತು, ಕಬ್ಬಿಣ ಮತ್ತು ರಂಜಕದ ಮೂಲವಾಗಿದೆ. ಈ ಪೋಷಕಾಂಶಗಳು ಮೂಳೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಮತ್ತು ಪ್ರತಿರಕ್ಷಣಾ ವ್ಯವಸ್ಥೆಯನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಜೊತೆಗೆ ಪ್ರತಿದಿನ ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಅನೇಕ ಹೃದಯ ಕಾಯಿಲೆಗಳಿಗೆ ಸಹಾಯ ಮಾಡುತ್ತದೆ. ಈ ಬೀಜಗಳು ಉತ್ಕರ್ಷಣ ನಿರೋಧಕಗಳು ಮತ್ತು ಫೈಬರ್ ಗಳಲ್ಲಿ ಸಮೃದ್ಧವಾಗಿವೆ. ಮೊಸರಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?: ದೇಹಕ್ಕೆ ಬೇಕಾದ ಅನೇಕ…

Read More

ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಧೋರಣೆ ವಿರೋಧಿಸಿ ನಾಳೆ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಫೆಬ್ರವರಿ 7(ನಾಳೆ) ಪ್ರತಿಭಟನೆಗೆ ಮುಂದಾಗಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದ ಸಂಸದರಿಗೆ  ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಸಂಬಂಧ ರಾಜ್ಯದ ಸಂಸದರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಎಲ್ಲರೂ ನಾಳಿನ ಪ್ರತಿಭಟನೆಯಲ್ಲಿ ಎಲ್ಲರೂ ಭಾಗಿಯಾಗುವಂತೆ ರಾಜ್ಯದ ಸಂಸದರಿಗೆ  ಮನವಿ ಮಾಡಿದ್ದಾರೆ. ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ, ನಮ್ಮ ಸ್ವಾಭಿಮಾನಿ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಉತ್ತರದ ರಾಜ್ಯಗಳಿಗೆ ಅನುದಾನ ಕೊಡಬೇಡಿ ಎಂದು ಹೇಳುವುದಿಲ್ಲ. ಆದರೆ ದಕ್ಷಿಣ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಿ. ಚಿನ್ನದ ಮೊಟ್ಟೆ ಇಡುವ ಕೋಳಿ ಎಂದು ಕತ್ತು ಕುಯ್ಯಬಾರದು, ಹಾಲು ಕೊಡುವ ಕೆಚ್ಚಲನ್ನೇ ಕತ್ತರಿಸಬಾರದು ಎನ್ನುವುದು ನಮ್ಮ ಮನವಿ. ನಮ್ಮ ನಿರಂತರ ಬೇಡಿಕೆ, ಮನವಿಗಳಿಗೂ ಕೇಂದ್ರ ಬೆಲೆ ಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

Read More

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ವಿರುದ್ಧ ಜಾರಿ ನಿರ್ದೇಶನಾಲಯ ಕ್ರಮ. ವೈಯಕ್ತಿಕ ಕಾರ್ಯದರ್ಶಿ ಬಿಭವ್ ಕುಮಾರ್ ಅವರ ನಿವಾಸ ಮತ್ತು ಸಂಸ್ಥೆಗಳ ಮೇಲೆ ಇಡಿ ದಾಳಿ. ದೆಹಲಿ ಜಲ ಮಂಡಳಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆದಿದೆ. ಕುಮಾರ್ ಅವರಲ್ಲದೆ, ಕೆಲವು ಎಎಪಿ ನಾಯಕರ ಮೇಲೂ ದಾಳಿ ನಡೆಸಲಾಗುತ್ತಿದೆ. ದೆಹಲಿಯ 12 ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್, ರಾಜ್ಯಸಭಾ ಸದಸ್ಯ ಎನ್‌ ಡಿ ಗುಪ್ತಾ ಮತ್ತು ದೆಹಲಿ ಜಲ ಮಂಡಳಿಯ ಮಾಜಿ ಸದಸ್ಯ ಶಲಭ್ ಕುಮಾರ್ ಅವರಿಗೆ ಸಂಬಂಧಿಸಿದ ಸ್ಥಳಗಳನ್ನು ಸಂಸ್ಥೆ ತನಿಖೆ ನಡೆಸುತ್ತಿದೆ. ಸಿಬಿಐ ದಾಖಲಿಸಿರುವ ಎಫ್ ‌ಐಆರ್ ಆಧರಿಸಿ ಇಡಿ ತನಿಖೆ ಆರಂಭಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಸ್ಥೆಯು ಕಳೆದ ತಿಂಗಳು ಪಿಎಂಎಲ್ ‌ಎ ಕಾಯ್ದೆಯಡಿಯಲ್ಲಿ ಜಲ ಮಂಡಳಿಯ ಮಾಜಿ ಮುಖ್ಯ ಎಂಜಿನಿಯರ್ ಜಗದೀಶ್ ಕುಮಾರ್ ಅರೋರಾ ಅವರನ್ನು ಬಂಧಿಸಿತ್ತು. ಒಬ್ಬ ಉದ್ಯಮಿಯನ್ನೂ ಬಂಧಿಸಲಾಗಿದೆ.…

Read More

ಹಳೆಯ ಮತ್ತು ಬಳಸಲಾಗದ ರೈಲು ಕೋಚ್‌ ಗಳನ್ನು ರೆಸ್ಟೋರೆಂಟ್‌ ಗಳಾಗಿ ಪರಿವರ್ತಿಸಲಾಗಿದೆ. ಈ ಕ್ರಮವು ಆದಾಯವನ್ನು ಹೆಚ್ಚಿಸುವ ಭಾಗವಾಗಿದೆ. ಹಳೆಯ ಕೋಚ್ ‌ಗಳನ್ನು ಐಷಾರಾಮಿ ಸಮಾನವಾದ ರೆಸ್ಟೋರೆಂಟ್ ‌ಗಳಾಗಿ ಪರಿವರ್ತಿಸಲು ರೈಲ್ವೆ ಹೊಸ ಯೋಜನೆಯೊಂದಿಗೆ ಬರುತ್ತಿದೆ. ಇದರೊಂದಿಗೆ, ಹಳೆಯ ತರಬೇತುದಾರರು ಹೊಸ ರೂಪ ಮತ್ತು ಭಾವನೆಯನ್ನು ಪಡೆದುಕೊಳ್ಳುತ್ತಾರೆ. ರೈಲ್ವೆಯ ಹೊಸ ಉಪಕ್ರಮವು ಶೀಘ್ರದಲ್ಲೇ ಕೇರಳ ಸೇರಿದಂತೆ ರಾಜ್ಯಗಳನ್ನು ತಲುಪಬಹುದು ಎಂದು ಸೂಚಿಸಲಾಗಿದೆ. ಕೋಚ್ ‌ಗಳಲ್ಲಿರುವ ರೆಸ್ಟೋರೆಂಟ್ ‌ಗಳು ರೈಲು ನಿಲ್ದಾಣಗಳ ಬಳಿ ಕಾರ್ಯನಿರ್ವಹಿಸುತ್ತವೆ. ರೈಲಿನಲ್ಲಿ ಒಂದು ಬಾರಿಗೆ 48 ಮಂದಿ ಆಹಾರ ಸೇವಿಸಬಹುದು. ಉತ್ತರ ಮತ್ತು ದಕ್ಷಿಣ ಭಾರತದ ರುಚಿಕರವಾದ ಆಹಾರ ಲಭ್ಯವಿದೆ. ಇವುಗಳನ್ನು ಪ್ರಾಯೋಗಿಕವಾಗಿ ಅಂಧೇರಿ ರೈಲು ನಿಲ್ದಾಣದಲ್ಲಿ ಅಳವಡಿಸಲಾಗಿದೆ. ಇವುಗಳನ್ನು ಪಶ್ಚಿಮ ರೈಲ್ವೆ ಪರಿಚಯಿಸಿತು.

Read More

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೊಂಡಿದೆ. ಶ್ರೀರಾಮ ವಿರಾಜಮಾನನಾಗಿ ಕೆಲವು ದಿನಗಳಷ್ಟೇ ಕಳೆದಿದೆ. ಇನ್ನು ಈ ಬಾಲಕ ರಾಮನ ಮೂರ್ತಿ ನಿರ್ಮಿಸಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಇಡೀ ವಿಶ್ವದಾದ್ಯಂತ ವೈರಲಾದರು. ಆ ಮುದ್ದು ಬಾಲಕ ರಾಮನ ಮೂರ್ತಿಯು ಎಲ್ಲರನ್ನು ಆಕರ್ಷಿಸಿತ್ತು ಮಾತ್ರವಲ್ಲ ಆ ಮೂರ್ತಿಯ ಕಣ್ಣುಗಳು ಹೊಳೆಯುವಂತಿದೆ. ಇದೀಗ ಅದೇ ಶ್ರೀರಾಮನನ್ನು ಹೋಲುವ ಪುರಾತನ ವಿಷ್ಣು ಮೂರ್ತಿಯೊಂದು ಪತ್ತೆಯಾಗಿದೆ..! ಅಂದ್ರೆ ನಿಮ್ಗೆ ಅಚ್ಚರಿಯಾಗದಿರದು. ಹೌದು, ಖಂಡಿತವಾಗಲೂ, ಕಾಕತಾಳಿಯವೋ ಏನೋ.. ರಾಯಚೂರು ಜಿಲ್ಲೆಯ ದೇವಸೂಗುರು ಬಳಿಯ ಕೃಷ್ಣಾ ನದಿಯಲ್ಲಿ ಪುರಾತನ ಮೂರ್ತಿಗಳು ಪತ್ತೆಯಾಗಿ ಎಲ್ಲರನ್ನು ಆಶ್ಚರ್ಯಚಕಿತರನ್ನಾಗಿಸಿದೆ. ಸೇತುವೆ ಕಾಮಗಾರಿ ನಡೆಯುತ್ತಿದ್ದಾಗ ಈ ವಿಸ್ಮಯ ಕಂಡು ಜನ ಸಾಗರೋಪಾದಿಯಲ್ಲಿ ಬಂದು ಈ ದೃಶ್ಯ ನೋಡಿ ಪುಳಕಿತರಾಗುತ್ತಿದ್ದಾರೆ. ಇದೀಗ ಸದ್ಯ ಆ ವ್ಯಾಪ್ತಿಯಲ್ಲಿ ಈ ಬಗ್ಗೆ ಚರ್ಚೆಗಳು ಶುರುವಾಗಲಾರಂಭಿಸಿವೆ. ವಿಷ್ಣುವಿನ ಮೂರ್ತಿ ಕಂಡು ಭಕ್ತರು ಪುಳಕಿತರಾದರೂ ಕೂಡ ಇದು ಇತ್ತೀಚಿಗೆ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾದ ಶ್ರೀರಾಮನ ಮೂರ್ತಿಯನ್ನು ಹೋಲುತ್ತದೆ ಅನ್ನೋದು ಭಕ್ತರ ನಂಬಿಕೆ. ಆದರೆ ಇದು ಪ್ರಾಚೀನ…

Read More

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಬರ್ಕಜೆ ಎಂಬ ಸ್ಥಳ ಈ ಅಪರೂಪದ ದೈವ ಕೋಲಕ್ಕೆ ಪ್ರತ್ಯಕ್ಷ ಸಾಕ್ಷಿಯಾಯಿತು. ಒಂದೇ ದಿನ, ಒಂದೇ ದೈವದ 18 ಅಬ್ಬರ ಕಂಡು ದೈವಾರಾಧಕರು ಭಕ್ತಿಯಲ್ಲಿ ತೇಲಾಡಿದರು. ಈ ದೃಶ್ಯ ಕಣ್ತುಂಬಿಕೊಳ್ಳಲೆಂದೇ ಹಲವಾರು ಮಂದಿ ನೆರೆದಿದ್ದರು. ಮಾತ್ರವಲ್ಲ ಈ ವಿಶೇಷ ಕ್ಷಣದ ಸುದ್ದಿ ಕೇಳಿ ಇನ್ನೂ ಹಲವಾರು ಭಕ್ತರು ಆಗಮಿಸಿ ದೈವಗಳ ಕೃಪೆಗೆ ಪಾತ್ರರಾದರು. ಬರ್ಕಜೆ ದುರ್ಗಾಪರಮೇಶ್ವರಿ ಮತ್ತು ನವ ಗುಳಿಗ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಒಂಭತ್ತು ಗುಳಿಗ ದೈವದ ನರ್ತನ ಸೇವೆ ನಡೆಯುತ್ತಿತ್ತು.‌ ಆದ್ರೆ ಈ ಬಾರಿ ಸಂಪ್ರದಾಯದಂತೆ ಒಂಭತ್ತು ಹಾಗೂ ಹರಕೆಯ ರೂಪದಲ್ಲಿ ಒಂಭತ್ತು, ಹೀಗೆ ಒಟ್ಟು 18 ಗುಳಿಗ ದೈವದ ನರ್ತನ ಸೇವೆ ನಡೆದು ತುಳುನಾಡಿನ ದೈವಾರಾದನೆಯ ಇತಿಹಾಸದಲ್ಲೇ ಮೊದಲು ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. 18 ಗುಳಿಗ ದೈವದ ವಿಶೇಷ ಗಗ್ಗರ ಸೇವೆಯನ್ನು ಕಣ್ತುಂಬಿಕೊಳ್ಳುದಕ್ಕೆ ಮುಂಬೈ, ಬೆಂಗಳೂರು ಸೇರಿದಂತೆ ಪರವೂರಿನಲ್ಲಿ ನೆಲೆಸಿರುವ ಕರಾವಳಿಯ ಸಾವಿರಾರು ದೈವಾರಾಧಕರು ಸೇರಿದ್ದರು.…

Read More