Subscribe to Updates
Get the latest creative news from FooBar about art, design and business.
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
Author: admin
ತುಮಕೂರು: ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುಳ್ಳು ಹೇಳುವುದನ್ನೇ ಕರ್ತವ್ಯ ಮಾಡಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಒಂದು ಸಮುದಾಯದ ಮತ ಗಟ್ಟಿಮಾಡಿಕೊಳ್ಳಲು ನೀತಿ ರೂಪಿಸುತ್ತಿದ್ದಾರೆ ಎಂದು ಮಾಜಿ ಶಿಕ್ಷಣ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟೀಕಿಸಿದರು. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ದುರಾದೃಷ್ಟಕ್ಕೆ ಮಧು ಬಂಗಾರಪ್ಪ ರಾಜ್ಯದ ಶಿಕ್ಷಣ ಸಚಿವರಾಗಿದ್ದು ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ ಎಂದರು. ರಾಜ್ಯ ಸರ್ಕಾರ ಹೊರಡಿಸಿರುವ ಪರೀಕ್ಷಾ ವೇಳಾಪಟ್ಟಿಯಲ್ಲಿ ವಾರದ ಎಲ್ಲಾ ದಿನ ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾದರೆ ಶುಕ್ರವಾರ ಮಾತ್ರ ಮಧ್ಯಾಹ್ನ 2ಕ್ಕೆ ಆರಂಭವಾಗುತ್ತಿರುವುದು ಒಂದು ಸಮುದಾಯದ ఓట్టికగి మితేవాగిటి ఎందరు. ವಿದ್ಯಾರ್ಥಿಗಳಿಗೆ ನಮಾಜ್ಗೆ ಅವಕಾಶ ಮಾಡಿಕೊಟ್ಟಿರುವ ಸರ್ಕಾರ ತಾರತಮ್ಯ ಮಾಡುತ್ತಿದೆ. ಒಂದು ಸಮುದಾಯಕ್ಕೆ ಸೀಮಿತವಾಗಿರುವ ರಾಜ್ಯ ಸರ್ಕಾರ ಒಡೆದು ಆಳುವ ನೀತಿಯನ್ನು ಮುಂದುವರಿಸಿದೆ ಎಂದರು. ಈಗ ಒಂದು ಸಮುದಾಯದ ಸರ್ಕಾರವಾಗಿದ್ದು ಹಿಂದೂ ವಿರೋಧಿ ನಿರ್ಣಯ ತೆಗೆದುಕೊಳ್ಳುವ ಮೂಲಕ ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದಾರೆ. ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದರು.
ದಿನಬೆಳಗಾದರೆ ಚಿತ್ರ ವಿಚಿತ್ರ ಸುದ್ದಿಗಳನ್ನು, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡುತ್ತಿರುತ್ತೇವೆ. ಅಂತಹುದ್ದೇ ಒಂದು ವಿಚಿತ್ರ ಘಟನೆಯೊಂದು ಸದ್ಯ ವೈರಲ್ ಆಗಿದೆ. ಕಾಡಿನ ಮಧ್ಯೆ ಹಾದುಹೋಗುವ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿಕೊಂಡು ಸೆಲ್ಫಿ ತೆಗೆಯುತ್ತಿದ್ದಾಗ ಕಾಡಾನೆಯೊಂದು ಅಟ್ಟಿಸಿಕೊಂಡು ಬರುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಲ್ಲಿ ಆನೆ ಜೊತೆ ಹುಚ್ಚಾಟ ಮಾಡುತ್ತಿದ್ದಾತನಿಗೆ ಆನೆ ಸರಿಯಾಗಿ ಬುದ್ಧಿ ಕಲಿಸಿದೆ. ಅದರಲ್ಲೂ ಕಾಡಾನೆಗಳನ್ನು ಕಂಡ್ರೆ ಭಯ ಪಡುವವರೇ ಹೆಚ್ಚು ಮಂದಿ. ಅದರ ಜೊತೆ ಸಾಹಸ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಆನೆ ಅಟ್ಟಾಡಿಸಿಕೊಂಡು ಬರುತ್ತಿರುವಾಗಲೇ ಇಬ್ಬರು ಓಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ, ಒಬ್ಬ ತಪ್ಪಿಸಿಕೊಳ್ಳಲಾಗದೇ ಸ್ಥಳದಲ್ಲಿಯೆ ನೆಲಕ್ಕುರುಳಿದ್ದಾನೆ. ಇನ್ನೇನು ಆನೆ ಆತನ ಮೇಲೆ ದಾಳಿ ಮಾಡಬೇಕು ಅನ್ನುವಷ್ಟರಲ್ಲಿ, ರಸ್ತೆಯಲ್ಲಿ ಲಾರಿ ಬರುತ್ತಿರುವ ಸದ್ದಿಗೆ ಆನೆ ಆತನನ್ನು ಬಿಟ್ಟು ಅಲ್ಲಿಂದ ತೆರಳಿದೆ. ಸದ್ಯ ಬದುಕಿದೆವು ಎಂದು ಇಬ್ಬರೂ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ.
ತುಮಕೂರು: ಶುಕ್ರವಾರ ನಮಾಜ್ ಬಳಿಕ ಎಸ್ ಎಸ್ ಎಲ್ ಸಿ ಪೂರ್ವ ತಯಾರಿ ಪರೀಕ್ಷೆಗೆ ಹಾಜರಾಗಲು ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂರು ಅಷ್ಟೇ ಅಲ್ಲಾ ಓಟ್ ಹಾಕಿರೋದು, ಹಿಂದೂಗಳು ಕೂಡ ಓಟ್ ಹಾಕಿದ್ದಾರೆ. ಅವರ ಅನುಕೂಲಕ್ಕೆ ಯಾವ ಕಾರ್ಯಕ್ರಮ ಬೇಕಾದರೂ ರೂಪಿಸ್ತಾರೆ ಎಂದು ಮಾಜಿ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಹಾಗಾದ್ರೇ ಕರ್ನಾಟಕ ರಾಜ್ಯದಲ್ಲಿ ಹಿಂದೂಗಳು ಇಲ್ಲಾ ಅನ್ನೋದು ಅವರ ಭಾವನೆ ಉಂಟಾಗಿದೆ. ಈ ಚುನಾವಣೆಯಲ್ಲಿ ಗೊತ್ತಾಗುತ್ತೆ ಹಿಂದೂಗಳು ಯಾವ ತೀರ್ಮಾನ ತೆಗೆದುಕೊಳ್ತಾರೆ ಅಂತ ಎಂದು ಹೇಳಿದರು. ಮುಸ್ಲಿಂನ್ನ ಓಲೈಸಿ,ಹಿಂದೂಗಳನ್ನ ಕಾಲಕಸಕ್ಕಿಂತ ಕೀಳಾಗಿ ನೋಡ್ತಿದ್ದಾರೆ. ಈ ಚುನಾವಣೆಯಲ್ಲಿ ಹಿಂದೂಗಳು ಕಾಂಗ್ರೆಸ್ ಗೆ ಬುದ್ದಿಯನ್ನ ಕಲಿಸ್ತಾರೆ ಎಂದರು. ಕಾಂಗ್ರೆಸ್ ಪ್ರಧಾನಿ ಇದ್ದಾಗ ರಾಜ್ಯಕ್ಕೆ ಏನು ಆನುದಾನ ಕೊಟ್ಟಿದ್ದಾರೆ. ಮೋದಿ ಅವರು ಪ್ರಧಾನಿಯಾದ ಬಳಿಕ ಯಾವ ರೀತಿ ನಡೆದುಕೊಂಡಿದ್ದಾರೆ ಎಲ್ಲಾ ದಾಖಲೆಗಳು ಇದೆ. ಇಡೀ ರಾಜ್ಯದಲ್ಲಿ ಬರಗಾಲ ಆದರೂ ರೈತರಿಗೆ ಸಹಾಯ ಮಾಡುವಂತಾ ಔದಾರ್ಯತೆ ಸಿಎಂ ತೋರುತ್ತಿಲ್ಲ ಎಂದು…
ಕೇರಳ ಮೂಲದ ಯುವಕ ಮತ್ತು ಬೆಂಗಳೂರು ಮೂಲದ ಯುವತಿ ಪರಸ್ಪರ ಪರಿಚಿತರಾಗಿದ್ದರು. ಜತೆಯಾಗಿ ಪಣಂಬೂರು ಬೀಚ್ ನಲ್ಲಿ ತಿರುಗಾಡಲು ಬಂದಿದ್ದರು. ಆದರೆ, ಹೀಗೆ ಬಂದಿದ್ದ ಯುವಕ ಮುಸ್ಲಿಂ ಎಂಬ ಸಂಶಯ ಅಲ್ಲಿದ್ದ ಕೆಲವರಿಗೆ ಬಂದಿತ್ತು. ಹಾಗಾಗಿ ಅವರು ಸ್ಥಳೀಯ ಶ್ರೀರಾಮ ಸೇನೆಯ ಯುವಕರಿಗೆ ವಿಷಯ ತಿಳಿಸಿದ್ದರು. ಶ್ರೀ ರಾಮ ಸೇನೆಯ ಯುವಕರು ಬೀಚ್ ಗೆ ಆಗಮಿಸಿ ಯುವಕ-ಯುವತಿ ಜೋಡಿಯನ್ನು ಅಡ್ಡಗಟ್ಟಿದರು. ಇಬ್ಬರೂ ಬೇರೆ ಬೇರೆ ಧರ್ಮಗಳಿಗೆ ಸೇರಿದವರಾಗಿದ್ದು ಏಕೆ ಒಟ್ಟಿಗೆ ಇದ್ದೀರಿ ಎಂದು ಪ್ರಶ್ನಿಸಿದರು. ನಿಮ್ಮ ಮನೆಗಳಿಗೆ ವಿಷಯ ತಿಳಿಸುವುದಾಗಿ ಬೆದರಿಸಿದರು. ಅವರ ಮೇಲೆ ಹಲ್ಲೆ ನಡೆಸಲು ಮುಂದಾದರು. ಆಗ ಅವರು ಕೂಡಾ ನಮ್ಮನ್ನು ಪ್ರಶ್ನೆ ಮಾಡಲು ನೀವು ಯಾರು ಎಂದು ತಿರುಗಿ ಪ್ರಶ್ನಿಸಿದರು. ಒಂದು ಹಂತದಲ್ಲಿ ಗಲಾಟೆಯಾಗುವ ಸನ್ನಿವೇಶ ನಿರ್ಮಾಣವಾದಾಗ ಪಣಂಬೂರು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆರೋಪಿಗಳನ್ನು ವಶಕ್ಕೆ ಪಡೆದರು. ಅವರ ವಿಚಾರಣೆ ನಡೆಸಿ ಬಂಧಿಸಲಾಗಿದೆ. ಇವರೆಲ್ಲರೂ ಶ್ರೀರಾಮ ಸೇನೆಗೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.
ಸರಗೂರು: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಮತದಾನದ ಹಕ್ಕಿನ ಮಹತ್ವ ಕುರಿತು ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಪಟ್ಟಣ ಪಂಚಾಯಿತಿ ವತಿಯಿಂದ ಮಹಾವೀರ ಸರ್ಕಲ್ ಬಳಿ ಸೋಮವಾರ ಬೀದಿನಾಟಕ ಮೂಲಕ ಮತದಾರರ ಜಾಗೃತಿ ಅಭಿಯಾನ ನಡೆಯಿತು. ಚುನಾವಣಾ ಆಯೋಗದ ಸಂದೇಶ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಅಗತ್ಯ ಎಂಬ ಹಾಡಿನ ಜೊತೆಗೆ ನಾಟಕ ಮಾಡುವ ಮೂಲಕ ಮೈಸೂರು ಕಲಾವೇದಿಕೆಯ ತಂಡದವರು ಮತದಾರರಲ್ಲಿ ಅರಿವು ಮೂಡಿಸಿದರು. ಮತದಾನ ಸಂವಿಧಾನಾತ್ಮಕ ಹಕ್ಕಾಗಿದ್ದು, ತಪ್ಪದೇ ಮತ ಚಲಾಯಿಸಿ ಪ್ರಜಾಪ್ರಭುತ್ವದ ಬಲವರ್ಧನೆಗೆ ಕಡ್ಡಾಯವಾಗಿ ಮತದಾನ ಮಾಡಿ, ನಿಮ್ಮ ಮತ ನಿಮ್ಮ ಹಕ್ಕು, ಜಾಗೃತ ಮತದಾರ- ಸದೃಢ ಪ್ರಜಾಪ್ರಭುತ್ವ, ಮತದಾನ ಮಾಡುವುದು ಪ್ರತಿ ಮತದಾರರ ಹಕ್ಕು ಮತ್ತು ಆದ್ಯ ಕರ್ತವ್ಯ, ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸಿ, ಚುನಾವಣೆ ಪ್ರಜಾಪ್ರಭುತ್ವದ ಭದ್ರ ಬುನಾದಿ, ಯಾವುದೇ ಆಸೆ ಆಮಿಷಗಳಿಗೆ ತುತ್ತಾಗದೆ ನಿರ್ಭೀತಿಯಿಂದ ಮತ ಚಲಾಯಿಸಿ, ಮತದಾರರ ಪಟ್ಟಿಯಲ್ಲಿ ಹೆಸರಿರುವುದನ್ನು ಖಚಿತ ಪಡಿಸಿಕೊಳ್ಳಿ ಎಂಬ ಸಂದೇಶ ನೀಡಲಾಯಿತು. ಜನವರಿ…
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸಾರಿಗೆ ಬಸ್ ಗಳಲ್ಲಿ ಮಹಿಳೆಯರ ಓಡಾಟ ಹೆಚ್ಚಾಗಿದೆ. ಕೆಲವು ಕಡೆ ಸೀಟು ಸಿಗದೆ ಜನ ಪರದಾಡಿದ ಪರಿಸ್ಥಿತಿಯೂ ನಿರ್ಮಾಣಗೊಂಡಿತ್ತು. ಇದೀಗ ಈ ಸಮಸ್ಯೆಯನ್ನು ಬಗೆ ಹರಿಸುವುದಕ್ಕಾಗಿ ಕೆಎಸ್ ಆರ್ ಟಿಸಿ ಹೊಸದಾಗಿ 800 ಬಸ್ ಸೇರ್ಪಡೆಗೊಳಿಸಿದೆ. ಸೋಮವಾರ ಮೊದಲ ಹಂತದಲ್ಲಿ ಹೊಸ ವಿನ್ಯಾಸದ 100 ಅಶ್ವಮೇಧ ಕ್ಲಾಸಿಕ್ ಬಸ್ಗಳ ಸಂಚಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಿದ್ದಾರೆ. ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಆರಂಭವಾದ ದಿನದಿಂದ ಸಾರಿಗೆ ಬಸ್ ಗಳು ತುಂಬಿ ತುಳುಕುತ್ತಿವೆ. ನಿತ್ಯ ಪ್ರಯಾಣಿಕರ ಗೋಳಾಟ, ನಿರ್ವಾಹಕರ ಪರದಾಟ, ಗೊಂದಲ-ಗಲಾಟೆಗಳು ಸಾರಿಗೆ ಸಂಸ್ಥೆಗೆ ತಲೆನೋವು ತರಿಸಿದೆ. ಈ ಸಮಸ್ಯೆಗೆ ಪರಿಹಾರವಾಗಿ ರಾಜ್ಯ ಸರ್ಕಾರ ʼಅಶ್ವಮೇಧ ಯಾಗʼ ಶುರುಮಾಡಿದ್ದು, ಇದರಿಂದ ಶಕ್ತಿ ಯೋಜನೆಯ ಒತ್ತಡಕ್ಕೆ ಪರಿಹಾರ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ. ಶಕ್ತಿ ಯೋಜನೆಯಡಿ ಐರಾವತ ಕ್ಲಬ್ ಕ್ಲಾಸ್, ಅಂಬಾರಿಯಂತಹ ವಿಶೇಷ ಸ್ಲೀಪರ್ ಎಸಿ ಬಸ್ಗಳನ್ನು ಹೊರತುಪಡಿಸಿ ಇತರ…
ಸರಗೂರು: ಮಕ್ಕಳ ಶಿಕ್ಷಣದ ಅನುಕೂಲಕ್ಕಾಗಿ ವಿವೇಕಾನಂದ ಯೂತ್ ಮೊಮೆಂಟ್ ಶಿಕ್ಷಣ ಸಂಸ್ಥೆ ವತಿಯಿಂದ ಹಾದನೂರು ಗ್ರಾ.ಪಂ. ವ್ಯಾಪ್ತಿಯ ಹಾದನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಲ್ಯಾಪ್ ಟಾಪ್ ಹಾಗೂ ಪ್ರೊಜೆಕ್ಟರ್ ಸೋಮವಾರ ವಿತರಿಸಲಾಯಿತು. ಈ ವೇಳೆ ಶಾಲೆಯ ಮುಖ್ಯ ಶಿಕ್ಷಕಿ ಶಾಂತಮ್ಮ ಮಾತನಾಡಿ, ಸಮಾಜ ಸೇವೆ ಮತ್ತು ವಿವೇಕಾನಂದ ಯೂತ್ ಮೊಮೆಂಟ್ ಸಂಸ್ಥೆ ಸಮಾಜ ಸೇವೆ ರಾಜ್ಯಕ್ಕೆ ಮಾದರಿಯಾಗಿದೆ. ಇಂದು ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿ,ಶಾಲೆಯ ಫಲಿತಾಂಶ ಇನ್ನಷ್ಟು ಹೆಚ್ಚುಗೊಳ್ಳಲಿ ಎಂಬ ಉದ್ದೇಶದಿಂದ ಲ್ಯಾಪ್ಟಾಪ್ ಹಾಗೂ ಪ್ರೊಜೆಕ್ಟರ್ ವಿತರಣೆ ಮಾಡುತ್ತಿರುವುದು ಸಂತಸದ ವಿಷಯ ಎಂದರು. ಸ್ವಾಮಿ ವಿವೇಕಾನಂದ ಯೂತ್ ಮೊಮೆಂಟ್ ನ ಶಾಲಾ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಉಚಿತವಾಗಿ 15 ಲ್ಯಾಪ್ಟಾಪ್ ಗಳು ಮತ್ತು ಪ್ರೊಜೆಕ್ಟರ್ ಅನ್ನು ಪಡೆಯಲಾಯಿತು. ಶಾಲಾ ಶಿಕ್ಷಣ ಕಾರ್ಯಕ್ರಮವು ನಮ್ಮ ಶಾಲೆಯಲ್ಲಿ 2 ವರ್ಷಗಳಿಂದ ನಡೆಯುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಿದೆ ಮತ್ತು ಗಣಿತ ಮತ್ತು ವಿಜ್ಞಾನ ಪ್ರಯೋಗಗಳನ್ನು ಮಕ್ಕಳು ‘ ವಿಧಾನದ ಮೂಲಕ ಕಲಿಯುವುದರಿಂದ ಗುಣಮಟ್ಟದ…
ಬೀದರ್: ಬೈಕ್ ಸವಾರ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ರಸ್ತೆಯಲ್ಲಿ ಯುಟರ್ನ್ ಮಾಡುತ್ತಿದ್ದ ವೇಳೆ ಹಿಂದಿನಿಂದ ಬಂದ ವಾಹನವೊಂದು ಬೈಕ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಮನ್ನಳ್ಳಿ ಬಾರ್ಡರ್ ರಾಷ್ಟ್ರೀಯ ಹೆದ್ದಾರಿ—65ರಲ್ಲಿ ನಡೆದಿತ್ತು. ಈ ಘಟನೆಯ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳು ಗ್ರಾಮಸ್ಥರಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಿದ್ದು, ಡಿವೈಡರ್ ಗಳ ಮೇಲಿನಿಂದ ಅಥವಾ ವಿರುದ್ಧ ದಿಕ್ಕಿನಿಂದ ವಾಹನ ಯೂಟರ್ನ್ ಮಾಡದಂತೆ, ಎಲ್ಲಿ ಯುಟರ್ನ್ ಗೆ ಅವಕಾಶ ನೀಡಲಾಗಿದೆಯೋ ಅಲ್ಲಿಂದ ಯೂಟರ್ನ್ ಮಾಡುವಂತೆ ಜಾಗೃತಿ ಮೂಡಿಸಿದರು. ಇನ್ನೂ ಅನಧಿಕೃತವಾಗಿ ಡಿವೈಡರ್ ಗಳಲ್ಲಿ ಒಡೆದಿರುವ ಸ್ಥಳಲ್ಲಿ ಕಾಂಕ್ರೀಟ್ ಬ್ಯಾರಿಕೇಡ್ ಗಳನ್ನು ಹಾಕಿಸಿ, ಯುಟರ್ನ್ ಇರುವ ಸ್ಥಳಗಳಲ್ಲಿ ನಿಧಾನವಾಗಿ ಚಲಿಸುವಂತೆ ಸೂಚನಾ ಫಲಕಗಳನ್ನು ಅಳವಡಿಸಲಾಯಿತು. ರಸ್ತೆ ಸುರಕ್ಷತಾ ನಿಯಮಗಳನ್ನು ವಾಹನ ಸವಾರರು ಪಾಲಿಸಿ, ವೇಗದ ಮಿತಿಯಲ್ಲಿ ಪ್ರಯಾಣಿಸಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ಎಂದು ಜಿಲ್ಲೆಯ ನಾಗರಿಕರಿಗೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ವರದಿ: ಅರವಿಂದ…
ಉಡುಪಿ: ಅಯೋಧ್ಯೆ ಬಾಲರಾಮ ಪ್ರತಿಷ್ಠಾಪನೆಯ ಮಂಡಲೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಉಡುಪಿಯ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ 48 ದಿನಗಳ ಕಾಲದ ಮಂಡಲ ಉತ್ಸವದ ನೇತೃತ್ವ ವಹಿಸಿದ್ದಾರೆ. ಪ್ರತಿದಿನ ಅಭಿಷೇಕ ಹೋಮ ಹವನ ನಡೆಯುತ್ತಿದೆ. ಫೆಬ್ರವರಿ 7ರ ನಂತರ ಬಾಲರಾಮನಿಗೆ ತೊಟ್ಟಿಲು ಸೇವೆ ನಡೆಯಲಿದೆ. ಅಯೋಧ್ಯೆ ಶ್ರೀರಾಮಮಂದಿರದಲ್ಲಿ ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಮಂಡಲೋತ್ಸವ ನಡೆಯುತ್ತಿದೆ. ಪ್ರತಿದಿನ ಅಭಿಷೇಕ, ಹೋಮ ಹವನ, ಪಲ್ಲಕ್ಕಿ ಸೇವೆಗಳನ್ನು ಬಾಲರಾಮನಿಗೆ ಸಮರ್ಪಿಸಲಾಗುತ್ತಿದೆ. ಈ ನಡುವೆ ಅಯೋಧ್ಯೆಯ ಶ್ರೀರಾಮನ ತೊಟ್ಟಿಲು ಸೇವೆಗೆ ಕಾಷ್ಠಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಸಮರ್ಪಿಸಲಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಬೀಟೆ ಮರದಿಂದ ನಿರ್ಮಿಸಲಾದ ಕೆತ್ತನೆಗಳುಳ್ಳ ತೊಟ್ಟಿಲನ್ನು ಫೆಬ್ರವರಿ 7ರಂದು ಸಂಜೆ ನಡೆಯುವ ಉತ್ಸವದಲ್ಲಿ ಅರ್ಪಣೆ ಮಾಡುವುದಾಗಿ ರಘುಪತಿ ಭಟ್ ಮಾಹಿತಿ ನೀಡಿದ್ದಾರೆ. ನೂತನ ತೊಟ್ಟಿಲಿನಲ್ಲಿ ಬಾಲರಾಮ ದೇವರಿಗೆ ಪೇಜಾವರ ಸ್ವಾಮೀಜಿ ತೊಟ್ಟಿಲು ಸೇವೆ ನಡೆಸಲಿದ್ದಾರೆ.
ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ತೋರುತ್ತಿರುವ ಧೋರಣೆಯನ್ನು ಖಂಡಿಸಿ ಫೆಬ್ರವರಿ 7ರಂದು ಪ್ರತಿಭಟನೆಗೆ ಮುಂದಾಗಿರುವ ಕಾಂಗ್ರೆಸ್ ವಿರುದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಕೆ.ಎಸ್. ಈಶ್ವರಪ್ಪ, ಸಿಎಂ ಮತ್ತು ಡಿಸಿಎಂ ಕರ್ನಾಟಕದ ಮಾನವನ್ನ ಹರಾಜು ಹಾಕುತ್ತಿದ್ದಾರೆ. ಯಾರಾದ್ರೂ ಸಿಎಂ, ಡಿಸಿಎಂ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಾರೆಯೇ. ಕಳೆದ ಯುಪಿಎ ಸರ್ಕಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ ಎಷ್ಟು ಅನುದಾನ ಬಂದಿತ್ತು, ಈಗ ನರೇಂದ್ರ ಮೋದಿ ನೇತೃತ್ವದಲ್ಲಿರುವ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದರು. ರಾಜ್ಯಕ್ಕೆ ಏನು ಬಂದಿದೆ ಎಂದು ಪ್ರತಿಭಟನೆ ಮಾಡುವುದಕ್ಕೂ ಮುನ್ನ ಶ್ವೇತಪತ್ರ ಹೊರಡಿಸಲಿ. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಶ್ವೇತಪತ್ರ ಹೊರಡಿಸುವುದಿಲ್ಲ. ಒಂದು ವೇಳೆ ಶ್ವೇತ ಪತ್ರ ಹೊರಡಿಸಿದರೆ ಕೇಂದ್ರದ ವಿತ್ತ ಸಚಿವೆ ಆಗಿರುವಂತಹ ನಿರ್ಮಲ ಸೀತಾರಾಮನ್ ಅವರು…