Subscribe to Updates
Get the latest creative news from FooBar about art, design and business.
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
Author: admin
ಹೊಸದಿಲ್ಲಿ: ಸ್ಟಾಲ್ ಗಳು ಮತ್ತು ಔತಣಗಳಲ್ಲಿ ಸಿಂಥೆಟಿಕ್ ಬಣ್ಣಗಳು ಮತ್ತು ನೈರ್ಮಲ್ಯದ ಸಮಸ್ಯೆಗಳನ್ನು ಉಲ್ಲೇಖಿಸಿ ಗೋವಾದ ಮಪುಸಾ ಎಂಬ ಪಟ್ಟಣವು ಇತ್ತೀಚೆಗೆ ಜನಪ್ರಿಯ ಫ್ಯೂಷನ್ ಡಿಶ್ ಗೋಬಿ ಮಂಚೂರಿಯನ್ ಮೇಲೆ ನಿಷೇಧ ಹೇರಿದೆ. ಮಾಪುಸಾ ಮುನ್ಸಿಪಲ್ ಕೌನ್ಸಿಲ್ ನ ನಿರ್ಧಾರವು 2022 ರಲ್ಲಿ ಶ್ರೀ ದಾಮೋದರ್ ದೇವಸ್ಥಾನದಲ್ಲಿ ವಾಸ್ಕೋ ಸಪ್ತಾ ಜಾತ್ರೆಯ ಸಮಯದಲ್ಲಿ ಇದೇ ರೀತಿಯ ಕ್ರಮವನ್ನು ಅನುಸರಿಸುತ್ತದೆ, ಅಲ್ಲಿ ಆಹಾರ ಮತ್ತು ಔಷಧಗಳ ಆಡಳಿತವು (ಎಫ್ ಡಿಎ) ಗೋಬಿ ಮಂಚೂರಿಯನ್ ಮಳಿಗೆಗಳನ್ನು ನಿರ್ಬಂಧಿಸಲು ಮೊರ್ಮುಗಾವೊ ಮುನ್ಸಿಪಲ್ ಕೌನ್ಸಿಲ್ ಗೆ ನಿರ್ದೇಶನ ನೀಡಿದೆ. ಕೆಲವು ಭಾರತೀಯ ಆಹಾರ ಪದಾರ್ಥಗಳನ್ನು ಜಾಗತಿಕವಾಗಿ ನಿಷೇಧಿಸಲಾಗಿದೆ: ಕೆಲವು ಭಾರತೀಯ ಆಹಾರ ಪದಾರ್ಥಗಳು ಅಂತಾರಾಷ್ಟ್ರೀಯ ನಿಷೇಧವನ್ನು ಎದುರಿಸುತ್ತಿವೆ. ಆರೋಗ್ಯದ ಅಪಾಯಗಳ ಬಗ್ಗೆ ಕಾಳಜಿ ವಹಿಸುವ ಕಾರಣ, ಅಡುಗೆಮನೆಯಲ್ಲಿ ಮುಖ್ಯವಾದ ತುಪ್ಪವನ್ನು US ನಲ್ಲಿ ನಿಷೇಧಿಸಲಾಗಿದೆ. ಸೊಮಾಲಿಯಾ 2011 ರಲ್ಲಿ ಸಮೋಸಾಗಳನ್ನು ನಿಷೇಧಿಸಿತು, ಫ್ರಾನ್ಸ್ ಕೆಚಪ್ ಅನ್ನು ನಿಷೇಧಿಸಿದೆ.
ತುಮಕೂರು: ಟಾಟಾ ಏಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಣಿಗಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಬೇಗೂರು ಬಳಿ ನಡೆದಿದೆ. ಕಾರಿನಲ್ಲಿದ್ದ ಚನ್ನರಾಯಪಟ್ಟಣ ಮೂಲದ ಅಣ್ಣೇಗೌಡ(38), ನಿರಂಜನ್(37) ಮೃತ ದುರ್ದೈವಿಗಳಾಗಿದ್ದಾರೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಟಾಟಾ ಏಸ್ ಚಾಲಕನನ್ನು ವಶಕ್ಕೆ ಪಡೆದಿರುವ ಕುಣಿಗಲ್ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಕೊಡಗು: ಯುವಕನೊಬ್ಬ ಎನರ್ಜಿ ಡ್ರಿಂಕ್ ರೆಡ್ ಬುಲ್ ಕುಡಿದು ಅಸ್ವಸ್ಥಗೊಂಡ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ. ವಿನೋದ್ (27)ಅಸ್ವಸ್ಥಗೊಂಡ ಯುವಕನಾಗಿದ್ದಾನೆ. ಅಸ್ವಸ್ಥಗೊಂಡ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿನೋದ್ ಎಂಬ ಯುವಕ ಮಡಿಕೇರಿಯ ಶಾಪ್ ಒಂದರಿಂದ ಎನರ್ಜಿ ಡ್ರಿಂಕ್ ಖರೀದಿಸಿ ಕುಡಿದಿದ್ದ ಎನ್ನಲಾಗಿದ್ದು, ರೆಡ್ ಬುಲ್ ಟಿನ್ ಒಳಗೆ ಲೋಳೆಯಂತ ವಸ್ತು ಪತ್ತೆಯಾಗಿದೆ. ಘಟನೆ ಸಂಬಂಧ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎನರ್ಜಿ ಡ್ರಿಂಕ್ ಮಾದರಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಹೀಗಾಗಿ ಪ್ರತಿನಿತ್ಯ 26 ಲಕ್ಷ ರೈತರಿಂದ 85 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ 716 ಕೋಟಿ ಬಾಕಿ ಹಣ ಉಳಿಸಿಕೊಂಡಿದೆ. ಇದರಿಂದ ರಾಜ್ಯದಲ್ಲಿ 10 ಲಕ್ಷ ಲೀಟರ್ ಹಾಲು ಸಂಗ್ರಹ ಕಡಿಮೆಯಾಗಿದೆ. ಜನ ಅಷ್ಟೇ ಅಲ್ಲ, ಜಾನುವಾರುಗಳು ಕೂಡ ಸರ್ಕಾರದ ಮೇಲೆ ಶಾಪ ಹಾಕುತ್ತಿವೆ. ರಾಜ್ಯ ಸರ್ಕಾರ ಜಾನುವಾರುಗಳ ಕೋಪಕ್ಕೂ ಬಲಿಯಾಗಿದೆ ಎಂದು ಕಿಡಿಕಾರಿದರು. ರಾಜ್ಯ ಸರ್ಕಾರ ತನ್ನ ಹೊಣೆ ಮರೆತು ಕೇಂದ್ರದ ಕಡೆ ಕೈ ತೋರಿಸುತ್ತದೆ. ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಜನ ಮತ್ತು ಜಾನುವಾರುಗಳ ಜೊತೆ ಹೋರಾಟ ಮಾಡಬೇಕಾಗುತ್ತದೆ ಪದೇ ಪದೇ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲವೆಂದು ಟೀಕಿಸುತ್ತಾರೆ. ನಾನು ಆ ಪದ ಬಳಸಲ್ಲ ಸರ್ಕಾರ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರ…
ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿ ಸಂಚರಿಸುತ್ತಿದ್ದ ತಾಯಿ ಮೃತಪಟ್ಟಿದ್ದು ಮಗ ಗಂಬೀರ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಗ್ರಾಮದ ಬಳಿ ನಡೆದಿದೆ. ಬೈಕ್ಗೆ ಹಿಂಬದಿಯಿಂದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದ್ದು ಬೈಕ್ ಹಿಂಬದಿ ಕುಳಿತಿದ್ದ ತಾಯಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಮೃತರನ್ನು ನೇತ್ರಾವತಿ ಎಂದು ಗುರುತಿಸಲಾಗಿದೆ. ಮಗ ರಾಜುಗೆ ಗಂಭೀರ ಗಾಯಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲಬುರಗಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಚಾವರಂನಲ್ಲಿ ಕುಡಿದ ನಶೆಯಲ್ಲಿದ್ದ ಮಗ ಕ್ಷುಲ್ಲಕ ಕಾರಣಕ್ಕೆ ಕಟ್ಟಿಗೆಯಿಂದ ಹೆತ್ತ ತಾಯಿಯನ್ನೇ ಹೊಡೆದು ಕೊಂದ ಘಟನೆ ನಡೆದಿದ್ದು, ಶೋಭಾ(45) ಕೊಲೆಯಾದ ತಾಯಿ. ಅನೀಲ್ ಹೆತ್ತ ತಾಯಿಯನ್ನೇ ಕೊಂದ ಕ್ರೂರಿ ಮಗ. ಕೊಲೆ ಮಾಡಿದ ಅನಿಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಕೊಂಚಾವರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿ ಮಗನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಕರ್ನಾಟಕ ರಾಜ್ಯದ ಪಾಲಿನ ಹಣವನ್ನು ಕೇಂದ್ರ ಸರ್ಕಾರ ನೀಡಬಹುದು ಎಂಬ ವಿಶ್ವಾಸವಿತ್ತು. ಆದರೆ, ಕೇಂದ್ರ ಸರ್ಕಾರವು ಅದರ ಮಾನದಂಡದಂತೆ ಕೂಡ ರಾಜ್ಯಕ್ಕೆ ಹಣ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಈವರೆಗೆ ರಾಜ್ಯ ಸರ್ಕಾರ ಧರಣಿ ನಡೆಸಿರಲಿಲ್ಲ. ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ನಾಳೆ ಸಂಜೆಯೇ ದೆಹಲಿಗೆ ಹೋಗುತ್ತೇವೆ, ನಾಡಿದ್ದು ಪ್ರತಿಭಟನೆ ಮಾಡುತ್ತೇವೆ. ಸಂವಿಧಾನ ಅಳವಡಿಸಿಕೊಂಡ ಬಳಿಕ ಒಕ್ಕೂಟ ವ್ಯವಸ್ಥೆ ಒಪ್ಪಿಕೊಂಡಿದ್ದೇವೆ. ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ಈ ಹಣ ರಾಜ್ಯಗಳಿಗೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು. 14ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 42ರಷ್ಟು ಹಣ ನೀಡಬೇಕು. 15ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 41ರಷ್ಟು…
ಸ್ಪೀಕರ್ ಯು.ಟಿ ಖಾದರ್, ಫೆಬ್ರವರಿ 12 ರಂದು ಬಜೆಟ್ ಅಧಿವೇಶನವು ಪ್ರಾರಂಭವಾಗಲಿದ್ದು, ಉದ್ಘಾಟನಾ ದಿನ ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಲಾಪಕ್ಕೆ ಶಾಸಕರು ಗೈರಾಗಬಾರದು. ದಿನಕ್ಕೊಂದು ಹೋಟೆಲ್ ನಿಂದ ಸವಿಯಾದ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಫೆಬ್ರವರಿ 16 ರಂದು ಬಜೆಟ್ ಮಂಡನೆಯೊಂದಿಗೆ ಫೆಬ್ರವರಿ 23 ರವರೆಗೆ ಅಧಿವೇಶನವನ್ನು ವಿಸ್ತರಿಸಲಾಗುವುದು. ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣಕ್ಕೆ ಧನ್ಯವಾದ ಸಲ್ಲಿಸುವ ನಿರ್ಣಯವು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗಳನ್ನು ಒಳಗೊಂಡಿರುತ್ತದೆ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದರು.
ಒಂದು ಸುಳ್ಳನ್ನ ನೂರು ಬಾರಿ ಹೇಳಿದರೆ ಅದು ಸತ್ಯವಾಗುವುದಿಲ್ಲ ಸಿಎಂ ಸಿದ್ದರಾಮಯ್ಯ ಅವರೇ. ಯುಪಿಎ ಅವಧಿಗೆ ಹೋಲಿಸಿದರೆ ಎನ್ ಡಿಎ ಅವಧಿಯಲ್ಲಿ ಕರ್ನಾಟಕಕ್ಕೆ 3 ಪಟ್ಟು ಹೆಚ್ಚು ಹಣ ದೊರೆತಿದೆ ಎನ್ನುವ ಸತ್ಯ ನಿಮಗೂ ಗೊತ್ತು. 14 ಬಜೆಟ್ ಮಂಡಿಸಿರುವ ಸ್ವಯಂ ಘೋಷಿತ ಆರ್ಥಿಕ ತಜ್ಞರಾದ ಸಿಎಂ ಸಿದ್ದರಾಮಯ್ಯ ಅವರು ಪದೇ ಪದೇ ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುವುದು ಬಿಟ್ಟು ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ, ಕಳೆದ 20 ವರ್ಷಗಳಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬಂದಿರುವ ಒಟ್ಟು ಅನುದಾನ, ತೆರಿಗೆ ಹಂಚಿಕೆ ಬಗ್ಗೆ ಶ್ವೇತ ಪತ್ರ ಹೊರಡಿಸಲಿ ಎಂದು ಬಿಜೆಪಿ ಆಗ್ರಹಿಸಿದೆ. ಮತ್ತೊಂದು ಟ್ವೀಟ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿರುವ ಬಿಜೆಪಿ, ಸಿದ್ದರಾಮಯ್ಯ ಅವರ “ಸ್ಲೀಪಿಂಗ್ ಸರ್ಕಾರ” ಕಳೆದ 9 ತಿಂಗಳಿಂದಲೂ ನಿದ್ದೆ ಮಾಡುತ್ತಲೇ ಇದೆ. ಎಚ್ಚರಿಸುವ ಕೆಲಸ ಮಾಡಿದರೆ ಸಿಎಂ ಸಿದ್ದರಾಮಯ್ಯ ಅವರಿಗೆ ಇರಿಸು ಮುರಿಸಾಗುತ್ತದೆ. ಸ್ವಾಮಿ ಸಿದ್ದರಾಮಯ್ಯರವರೇ, ನಿಮ್ಮ ಸಾಧನೆ ಏನು ಹೇಳಿ ಎಂದು…
ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನದ ಹಂಚಿಕೆಯಲ್ಲಿ ತಾರತಮ್ಯ ತೋರುತ್ತಿದೆ ಎಂಬ ಆರೋಪ ಕೇಳಿಬಂದಿದ್ದು ಕೇಂದ್ರದ ನಡೆ ವಿರುದ್ದ ಫೆಬ್ರವರಿ 7 ರಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ರಾಜ್ಯದ ಜಿಎಸ್ ಟಿ ಪಾಲು ಇನ್ನೂ ಬಂದಿಲ್ಲ. ಕೊರೋನಾ ಸಮಯದಲ್ಲಿ ಜಿಎಸ್ ಟಿ ಪಾಲಿನಲ್ಲೂ ಅನ್ಯಾಯ ಮಾಡಿದೆ. ಬರಗಾಲ ಸಮಯದಲ್ಲೂ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ನುಡಿದಂತೆ ನಡೆದಿಲ್ಲ. ಮಾನದಂಡದಂತೆ ಕೇಂದ್ರದಿಂದ ಅನುದಾನ ಬಿಡುಗಡೆಯಾಗುತ್ತಿಲ್ಲ ಎಂದು ಕಿಡಿಕಾರಿದರು. ಸಿಎಂ ಸಿದ್ದರಾಮಯ್ಯ ಪತ್ರ ಬರೆದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ನಾವು ಎಷ್ಟು ದಿನ ಧಮ್ ತಡೆದು ಕೂರಬೇಕು. ಜನರ ಪರವಾಗಿ ನಾವು ಧ್ವನಿ ಎತ್ತುತ್ತೇವೆ. ಪ್ರತಿಭಟನೆಯಲ್ಲಿ ಎಲ್ಲರೂ ಭಾಗವಹಿಸುವಂತೆ ಮನವಿ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.