Subscribe to Updates
Get the latest creative news from FooBar about art, design and business.
- ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ
- ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ತುಮಕೂರು: ಮೆಮು ರೈಲು ಸಮಯ ಬದಲಾವಣೆ ಸಾಧ್ಯತೆ
- ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
Author: admin
ಬೆಂಗಳೂರು: ಬೆಂಗಳೂರಿನಲ್ಲೂ ಅಂಥಹುದೇ ಒಂದು ಘಟನೆ ನಡೆದಿದೆ. ನನ್ನ ಗಂಡನೊಂದಿಗೆ ಅಕ್ರಮ ಸಂಬಂದ ಇಟ್ಟುಕೊಂಡಿದ್ದಿಯಾ ಎಂಬ ಆಕ್ರೋಶದಿಂದ ಮಹಿಳೆಯೊಬ್ಬರು ಗುಂಪು ಕಟ್ಟಿಕೊಂಡು ಹೋಗಿ ಯುವತಿ ಮನೆ ಮೇಲೆ ದಾಳಿ ಮಾಡಿದ್ದಾರೆ. ಶರಣ್ ಎಂಬಾತ ಪ್ರತಿಮಾ ಎಂಬಾಕೆಯ ಜತೆಗೆ ಕಳೆದ ಮೂರು ವರ್ಷಗಳಿಂದ ಆತ್ಮೀಯವಾಗಿದ್ದ ಎನ್ನಲಾಗಿದೆ. ಇದರ ಬಗ್ಗೆ ಹಲವು ಬಾರಿ ಎಚ್ಚರಿಕೆ ನೀಡಿದ ಹೊರತಾಗಿಯೂ ಸಂಬಂಧವನ್ನು ಮುಂದುವರಿಸಿದ್ದರಿಂದ ಆಕ್ರೋಶಗೊಂಡ ಶರಣ್ ಪತ್ನಿ ಸಮಂತಾ ಗ್ಯಾಂಗ್ ಕಟ್ಟಿಕೊಂಡು ಹೋಗಿ ಪ್ರತಿಮಾಳ ಮನೆ ಮೇಲೆ ದಾಳಿ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ. ಕೆಂಪರಾಜು, ಶರತ್ ಮತ್ತು ಶರಣ್ ಪತ್ನಿ ಸಮಂತಾ ಅವರು ರಾತ್ರಿ 11.30ರ ಹೊತ್ತಿಗೆ ನಮ್ಮ ಮನೆಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ಮಾಡಿದ್ದಾರೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಯುವತಿ ಕೊತ್ತನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಧಾರವಾಡ: ಯುವಕರಿಬ್ಬರು ಬೈಕ್ ನಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿದ ಘಟನೆ ಧಾರವಾಡದ ಡೈರಿ ರಸ್ತೆಯಲ್ಲಿ ತಡರಾತ್ರಿ ನಡೆದಿದೆ. ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ. ಅರವಟಗಿ ಗ್ರಾಮದ ಕಲ್ಲನಗೌಡ ಪಾಟೀಲ್ ಹತ್ಯೆಯಾದವರು. ಸುನಿಲ್ ಜಕ್ಕನ್ನವರ ಎಂಬಾತ ಗಂಭೀರ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಸುನೀಲ್, ಕಲ್ಲನಗೌಡ ಬೈಕ್ನಲ್ಲಿ ಬರುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಯುವಕರ ಗ್ಯಾಂಗ್ ಏಕಾಏಕಿ ಅಡ್ಡಗಟ್ಟಿದೆ. ನಂತರ ರಾಡ್ ತೆಗೆದು ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ತಲೆಗೆ ಗಂಭೀರ ಗಾಯವಾಗಿದ್ದರಿಂದ ರಕ್ತಸ್ರಾವವಾಗಿ ಕಲ್ಲನಗೌಡ ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾದ ಗಾಯಗೊಂಡಿರುವ ಸುನಿಲ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ದಾಳಿಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ.
ಬಾರ್ಲಿ ನೀರನ್ನು ಸೇವಿಸುವುದರಿಂದ ಈ ಸಮಸ್ಯೆಗಳನ್ನು ನಿಯಂತ್ರಣದಲ್ಲಿಡಬಹುದು: ಬಾರ್ಲಿ ನೀರನ್ನು ಆಯುರ್ವೇದದಲ್ಲಿ ಬಹಳ ದಿನಗಳಿಂದ ಬಳಸಲಾಗುತ್ತಿದೆ. ಇದು ಹಲವು ಸಮಸ್ಯೆಗಳಿಗೆ ರಾಮಬಾಣ. ಸಕ್ಕರೆಯನ್ನು ನಿಯಂತ್ರಿಸಲು ಬಾರ್ಲಿ ಸಹಾಯ ಮಾಡುತ್ತದೆ. ಇದನ್ನು ಸೇವಿಸುವುದರಿಂದ ಕಿಡ್ನಿ ಸಮಸ್ಯೆಗಳು, ಜೀರ್ಣಕ್ರಿಯೆ ಸಮಸ್ಯೆಗಳು, ಕೊಲೆಸ್ಟ್ರಾಲ್ ಮತ್ತು ಹೃದಯದ ಸಮಸ್ಯೆಗಳು ನಿಯಂತ್ರಣದಲ್ಲಿರುತ್ತವೆ. ಬಾರ್ಲಿ ನೀರಿನಲ್ಲಿ ಫೈಬರ್ ಸಮೃದ್ಧವಾಗಿದೆ. ಹಾಗಾಗಿ ಸಕ್ಕರೆ ಇರುವವರಿಗೆ ತುಂಬಾ ಒಳ್ಳೆಯದು. ಈ ಪೌಷ್ಟಿಕ ಪಾನೀಯವನ್ನು ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಬರುವುದಿಲ್ಲ & ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ನುಗ್ಗೆ ಸೊಪ್ಪು ಹಲವು ಆರೋಗ್ಯ ಸಮಸ್ಯೆಗಳಿಗೆ ಔಷಧಿ: ಹೇಗೆ ಗೊತ್ತೇ? ಆಯುರ್ವೇದದಲ್ಲಿ ಔಷಧಿಗಳ ತಯಾರಿಕೆಯಲ್ಲಿ ನುಗ್ಗೆ ಮರದ ಪ್ರತಿಯೊಂದು ಭಾಗವನ್ನು ಬಳಸಲಾಗುತ್ತದೆ. ಹಾಗೆಯೇ ನುಗ್ಗೆ ಸೊಪ್ಪಿನಲ್ಲಿ ಹಲವಾರು ಆರೋಗ್ಯ ಗುಣಗಳಿವೆ. ಆಹಾರದ ಭಾಗವಾಗಿ ಇದನ್ನು ಬಳಸಿದರೆ, ಜ್ವರ ಕಡಿಮೆಯಾಗುತ್ತದೆ. ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ. ತಲೆನೋವು ಕಡಿಮೆಯಾಗೋಕೆ ಇದು ರಾಮಬಾಣ. ರಕ್ತವು ಶುದ್ಧಿಯಾಗುತ್ತದೆ. ರಕ್ತಹೀನತೆ ಸಮಸ್ಯೆ ನಿವಾರಣೆಯಾಗುತ್ತದೆ. ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಬೆಟ್ಟದ ನೆಲ್ಲಿಕಾಯಿ: ಬೆಟ್ಟದ…
ಒಂದಿಲ್ಲೊಂದು ವಂಚನೆ ಆರೋಪಗಳನ್ನು ಎದುರಿಸುತ್ತಿರುವ ಬಿಗ್ ಬಾಸ್ ರನ್ನರ್ ಅಪ್ ಡ್ರೋನ್ ಪ್ರತಾಪ್ ಜೆಡಿಎಸ್ (JDS) ನಿಂದ ಟಿಕೆಟ್ ಕೊಡಿಸೋದಾಗಿ ಹಣ ಪಡೆದು ವಂಚನೆ ಮಾಡಿರೊ ಆರೋಪ ಎದುರಿಸುತ್ತಿದ್ದು, ಆತನ ವಿರುದ್ಧ ದೂರು ನೀಡಲು ಜೆಡಿಎಸ್ ಮುಂದಾಗಿದೆ ಎಂದು ವರದಿ ತಿಳಿಸಿದೆ. 2 ಲಕ್ಷ ಹಣ ಪಡೆದು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಜೆಡಿಎಸ್ ಟಿಕೆಟ್ ಕೊಡಿಸೋದಾಗಿ ವಂಚನೆ ಮಾಡಿರೋ ಬಗ್ಗೆ ಚಂದನ್ ಎಂಬುವರಿಂದ ಕಮೀಷನರ್ ಗೆ ದೂರು (Complainant) ನೀಡಲಾಗಿತ್ತು. ದೂರಿನ ಜೊತೆಗೆ ಚಂದನ್ ಗೆ ಡ್ರೋನ್ ಪ್ರತಾಪ್ ಟಿಕೆಟ್ ಕೊಡಿಸುವ ಬಗ್ಗೆ ಮಾತನಾಡಿರೋ ಆಡಿಯೋ ಬಿಡುಗಡೆ ಮಾಡಿದ್ದಾರೆ. ಆಡಿಯೋದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ (H.D. Kumaraswamy) ಹಾಗೂ ಡಿಕೆಶಿ, ಅನ್ನದಾನಿಯ ಹೆಸರು ಪ್ರಸ್ತಾಪ ಮಾಡಿ ಡ್ರೋನ್ ಮಾತನಾಡಿದ್ದಾರೆ. ಹಾಗಾಗಿ ಹೆಚ್.ಡಿ.ಕೆ ಹೆಸರು ಹೇಳಿಕೊಂಡು ವಂಚನೆ ಮಾಡಿರೋ ಆರೋಪದ ಮೇಲೆ ಡ್ರೋನ್ ಪ್ರತಾಪ್ ವಿರುದ್ಧ ದೂರು ಕೊಡಲು ಜೆಡಿಎಸ್ ಮುಂದಾಗಿದೆ. ಈ ಹಿಂದೆಯು ಡ್ರೋನ್ ಪ್ರತಾಪ್ (Drone Pratap) ಬಿಗ್…
ಮೂರು ದಶಕಗಳ ಹಿಂದೆ ರಮನಾಂದ ಸಾಗರ್ ನಿರ್ದೇಶನದಲ್ಲಿ ಮೂಡಿಬಂದಿದ್ದ ಮತ್ತು ದೇಶದೆಲ್ಲೆಡೆ ಸಂಚಲನ ಸೃಷ್ಠಿಸಿದ್ದ ಪೌರಾಣಿಕ ಧಾರಾವಾಹಿ ‘ರಾಮಾಯಣ’ವನ್ನು ಡಿಡಿ ನ್ಯಾಷನಲ್ ವಾಹಿನಿಯಲ್ಲಿ ಫೆಬ್ರವರಿ 5ರಿಂದ ಮತ್ತೆ ಪ್ರಸಾರ ಮಾಡುತ್ತಿದೆ. ಪ್ರತಿದಿನ ಸಂಜೆ 6 ಗಂಟೆಗೆ ಹಾಗೂ ಮರುದಿನ ಮಧ್ಯಾಹ್ನ 12 ಗಂಟೆಗೆ ಪ್ರಸಾರ ಮಾಡುವುದಾಗಿ ಹೇಳಿದೆ. ಧರ್ಮ, ಪ್ರೀತಿ ಮತ್ತು ಸಮರ್ಪಣಾ ಭಾವದ ಅನನ್ಯ ಸಾಹಸಗಾಥೆ. ಮತ್ತೊಮ್ಮೆ ಇಡೀ ಭಾರತದ ಅತ್ಯಂತ ಜನಪ್ರಿಯ ಕಾರ್ಯಕ್ರಮ ‘ರಾಮಾಯಣ’ ಬರಲಿದೆ ಎಂದು ಡಿಡಿ ನ್ಯಾಷನಲ್ ಎಕ್ಸ್ ನಲ್ಲಿ ತಿಳಿಸಿದೆ. 80 ಮತ್ತು 90 ರ ದಶಕದಲ್ಲಿ ಪ್ರಸಾರವಾಗಿದ್ದ ಈ ಧಾರಾವಾಹಿಯಲ್ಲಿ, ಶ್ರೀರಾಮನಾಗಿ ಅರುಣ್ ಗೋವಿಲ್, ಸೀತೆಯಾಗಿ ದೀಪಿಕಾ ಚಿಖಾಲಿಯಾ ಮತ್ತು ಸಹೋದರ ಲಕ್ಷ್ಮಣನಾಗಿ ಸುನಿಲ್ ಲಹ್ರಿ ಕಾಣಿಸಿಕೊಂಡಿದ್ದಾರೆ. ದೇಶದಾದ್ಯಂತ ಜನಮನ್ನಣೆಯನ್ನೂ ಈ ಧಾರಾವಾಹಿ ಗಳಿಸಿತ್ತು. ಕೊರೊನಾ ಲಾಕ್ ಡೌನ್ ವೇಳೆಯೂ ರಾಮಾಯಣ ಧಾರಾವಾಹಿಯನ್ನು ಪ್ರಸಾರ ಮಾಡಲಾಗಿತ್ತು. ಆಗಲೂ ಲಕ್ಷಾಂತರ ಜನರು ವೀಕ್ಷಿಸಿ ಜನಪ್ರಿಯತೆ ಪಡೆದುಕೊಂಡಿತ್ತು.
ಫೆ.14 ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ಬೆಂಗಳೂರಿನಲ್ಲಿ ನಿಷೇಧಿಸಲಾಗಿದೆ. ಪ್ರೇಮಿಗಳ ದಿನಾಚರಣೆ ಕಾರಣಕ್ಕೆ ಅಲ್ಲ ಎನ್ನಲಾಗಿದ್ದು, ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ನಿಷೇಧಿಸಲಾಗಿದೆ ಎಂದು ವರದಿ ತಿಳಿಸಿದೆ. ಫೆ.14 ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಫೆ. 14 ಸಂಜೆ 5 ಗಂಟೆಯಿಂದ ಫೆ.17 ಬೆಳಗ್ಗೆ 6 ಗಂಟೆಯವರಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 7 ವಿಧಾನಸಭಾ ಕ್ಷೇತ್ರಗಳಾದ ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರುದಕ್ಷಿಣ ಮತ್ತು ಆನೇಕಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಿಕ್ಷಕರು ಮತ ಚಲಾಯಿಸಲಿದ್ದಾರೆ. ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈಗಾಗಲೇ ಜ.16 ರಿಂದ ಫೆ.23ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.
ಸಾಮಾಜಿಕ ಜಾಲತಾಣದಲ್ಲಿ ಹೆಸರು ಗಳಿಸಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಕಾರು ಅಪಘಾತವಾಗಿ ಭಾನುವಾರ(ಫೆ.4) ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಾರ್ಟ್ ಮೆಂಟ್ ನಲ್ಲಿ ಪಾರ್ಕಿಂಗ್ ಮಾಡಿದ್ದ ಕಾರನ್ನು ತೆಗೆಯಲು ಹೋಗಿ ಪಿಲ್ಲರ್ ಗೆ ಕಾರು ಗುದ್ದಿದ್ದು, ಬ್ರೇಕ್ ತುಳಿಯಲು ಹೋಗಿ ಎಕ್ಸಿಲೇಟರ್ ತುಳಿದದ್ದು ಅಪಘಾತಕ್ಕೆ ಕಾರಣ ಎಂದು ವರದಿ ತಿಳಿಸಿದೆ. ಸೋನು ಇತ್ತೀಚೆಗಷ್ಟೇ ಕಾರು ಕಲಿಯಲು ಆರಂಭಿಸಿದ್ದಾರೆ ಎನ್ನಲಾಗಿದ್ದು, ಹಾಗಾಗಿ ಎಕ್ಸಿಲೇಟರ್ ಮತ್ತು ಬ್ರೇಕ್ ನಡುವಿನ ಗೊಂದಲದಿಂದಾಗಿ ಅಪಾರ್ಟ್ ಮೆಂಟ್ ನ ಪಿಲ್ಲರ್ ಗೆ ಕಾರು ಗುದ್ದಿಸಿದ್ದಾರೆ. ಕೈ, ಕಾಲುಗಳಿಗೆ ಸಣ್ಣ ಪುಟ್ಟ ಏಟಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಗುದ್ದಿದ ರಭಸಕ್ಕೆ ಕಾರಿನ ಮುಂಬಾಗ ನುಜ್ಜುಗುಜ್ಜಾಗಿದೆ.
ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಸಿದ್ಧವಾಗಿದೆ. ಯುಸಿಸಿ ಕರಡು ಮಸೂದೆಯನ್ನು ಉತ್ತರಾಖಂಡ ಕ್ಯಾಬಿನೆಟ್ ಅಂಗೀಕರಿಸಿದೆ. ಮಂಗಳವಾರ ಈ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗುವುದು. ವಿಧೇಯಕವನ್ನು ಸದನದಲ್ಲಿ ಚರ್ಚಿಸಿ ಬಹುಮತದೊಂದಿಗೆ ಅಂಗೀಕರಿಸಲು ಮುಂದಾಗಿದ್ದು, ಫೆ.2ರಂದು ನ್ಯಾಯಮೂರ್ತಿ ರಂಜನಾ ದೇಸಾಯಿ ನೇತೃತ್ವದ ಸಮಿತಿ ಕರಡು ವರದಿಯನ್ನು ಸರಕಾರಕ್ಕೆ ರವಾನಿಸಿತ್ತು. ಈ ವರದಿಯನ್ನು ಕೂಲಂಕುಷವಾಗಿ ಪರಿಶೀಲಿಸಿ ಸಂಪುಟ ಅಂಗೀಕರಿಸಿದೆ. ಉತ್ತರಾಖಂಡ ಯುಸಿಸಿಯ ಅನುಷ್ಠಾನವನ್ನು ಘೋಷಿಸಿದ ಮೊದಲ ರಾಜ್ಯವಾಗಿದೆ.
ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಸಿದ್ಧವಾಗಿದೆ. ಯುಸಿಸಿ ಕರಡು ಮಸೂದೆಯನ್ನು ಉತ್ತರಾಖಂಡ ಕ್ಯಾಬಿನೆಟ್ ಅಂಗೀಕರಿಸಿದೆ. ಮಂಗಳವಾರ ಈ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗುವುದು. ವಿಧೇಯಕವನ್ನು ಸದನದಲ್ಲಿ ಚರ್ಚಿಸಿ ಬಹುಮತದೊಂದಿಗೆ ಅಂಗೀಕರಿಸಲು ಮುಂದಾಗಿದ್ದು, ಫೆ.2ರಂದು ನ್ಯಾಯಮೂರ್ತಿ ರಂಜನಾ ದೇಸಾಯಿ ನೇತೃತ್ವದ ಸಮಿತಿ ಕರಡು ವರದಿಯನ್ನು ಸರಕಾರಕ್ಕೆ ರವಾನಿಸಿತ್ತು. ಈ ವರದಿಯನ್ನು ಕೂಲಂಕುಷವಾಗಿ ಪರಿಶೀಲಿಸಿ ಸಂಪುಟ ಅಂಗೀಕರಿಸಿದೆ. ಉತ್ತರಾಖಂಡ ಯುಸಿಸಿಯ ಅನುಷ್ಠಾನವನ್ನು ಘೋಷಿಸಿದ ಮೊದಲ ರಾಜ್ಯವಾಗಿದೆ.
ಕಾಡಾನೆಯು ಬಂಡೀಪುರ ಅಭಯಾರಣ್ಯದ ರಾಂಪುರ ಆನೆ ಶಿಬಿರದಲ್ಲಿ ಹೃದಯಾಘಾತದಿಂದ ಮೃತಪಟ್ಟಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ. ಕೇರಳದ ಮಾನಂದವಾಡಿಯಿಂದ ಸೆರೆ ಹಿಡಿದು ತಂದ ‘ತನ್ನೀರು’ ಎಂಬ ಈ ಆನೆಯನ್ನು ತರಲಾಗಿತ್ತು. ಹಾಸನದ ಬೇಲೂರು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಹಾವಳಿ ನೀಡುತ್ತಿದ್ದ ತನ್ನೀರು ಎಂಬ ಕಾಡಾನೆಯನ್ನು ಜನವರಿ 16ರಂದು ಸೆರೆ ಹಿಡಿದು ರೇಡೀಯೋ ಕಾಲರ್ ಅಳವಡಿಸಿ ಬಂಡೀಪುರ ಹುಲಿ ಯೋಜನೆಯ ಮೂಲೆಹೊಳೆ ವಲಯಕ್ಕೆ ಬಿಡಲಾಗಿತ್ತು. ನಂತರ ಆನೆ ಕಬಿನಿ ನದಿ ದಾಟಿ ಕೇರಳದ ಮಾನಂದವಾಡಿ ಅರಣ್ಯ ಪ್ರದೇಶದ ಮಾರ್ಗವಾಗಿ ಫೆಬ್ರವರಿ 1ರಂದು ಜನವಸತಿ ಪ್ರದೇಶ ಮಾನಂದವಾಡಿ ನಗರದ ತಾಲೂಕು ಕಚೇರಿಯ ಕಾಂಪೌಂಡ್ನಲ್ಲಿ ಸೇರಿಕೊಂಡು, ಜನಸಾಮಾನ್ಯರಿಗೆ ತೊಂದರೆ ನೀಡುತ್ತಿದ್ದ ಕುರಿತು ಕೇರಳ ಅರಣ್ಯಾಧಿಕಾರಿಗಳು ಬಂಡೀಪುರ ಅರಣ್ಯಾಧಿಕಾರಿಗೆ ಮಾಹಿತಿ ನೀಡಿದ್ದರು. ಕಾಡಾನೆಯನ್ನು ಪುನಃ ಕಾಡಿಗೆ ಹಿಮ್ಮೆಟ್ಟಿಸಲು ಯಾವುದೇ ಸಾಧ್ಯತೆ ಇಲ್ಲದೆ ಹಾಗೂ ಆನೆಯು ಮತ್ತೆ ಜನವಸತಿ ಪ್ರದೇಶಕ್ಕೆ ಹಿಂತಿರುಗುವ ಸಾಧ್ಯತೆ ಹೆಚ್ಚಾಗಿತ್ತು. ಆದ್ದರಿಂದ ಕೇರಳ ಹಾಗೂ ಕರ್ನಾಟಕ ಎರಡು ರಾಜ್ಯಗಳ ಅಧಿಕಾರಿಗಳು ಚರ್ಚಿಸಿ ಕಾಡಾನೆಯನ್ನು ಸೆರೆ…