Author: admin

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರು ರಾಜ್ಯದಲ್ಲಿನ ಬರದ ಬಗ್ಗೆ ಕೇಂದ್ರದ ನಾಯಕರನ್ನು ಒಂದು ದಿನವೂ ಭೇಟಿ ಮಾಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋಹನ್ ಸಿಂಗ್ ಸರ್ಕಾರದಲ್ಲಿ ಆದ ತಾರತಮ್ಯದ ಬಗ್ಗೆ ಬಿಜೆಪಿ ದಾಖಲೆ ಬಿಡುಗಡೆ ಮಾಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮನಮೋಹನ್ ಸಿಂಗ್ ಸರ್ಕಾರ ಹೋಗಿ 10 ವರ್ಷ ಆಗಿದೆ. ಇದನ್ನೂ ಕೇಳುವವರಿಗೆ ಜ್ಞಾನ ಇರಬೇಕು. ಬುದ್ಧಿವಂತಿಕೆ ಇರಬೇಕು. ಈಗ ಅಧಿಕಾರ ನಿಮ್ಮ ಕೈಯಲ್ಲಿದೆ. ನೀವು ಮಾತೆತ್ತಿದರೆ ಡಬಲ್ ಎಂಜಿನ್ ಸರ್ಕಾರ ಅಂತಿದ್ರಿ. ಡಬಲ್ ಎಂಜಿನ್ ಸರ್ಕಾರ ಮಾಡಿದ್ರಿ. ಡಬಲ್ ಎಂಜಿನ್ ಸರ್ಕಾರ ರಾಜ್ಯಕ್ಕೆ ಏನು ತಂದಿತ್ತು. ಅದು ಬಹಳ ಮುಖ್ಯ ಎಂದು ಹೇಳಿದರು. 27 ಸಂಸದರನ್ನು ಇಟ್ಟುಕೊಂಡು ಬರಗಾಲದ ಮೀಟಿಂಗ್ ಮಾಡಿಸಲು ಸಾಧ್ಯವಾಗಿಲ್ಲ. ಸಭೆ ನಡೆಸಿ ಹಣ ಬಿಡುಗಡೆ ಮಾಡಿಸಿಲ್ಲ. ರಾಜ್ಯ ಸರ್ಕಾರ ಏನು ಕೊಟ್ಟಿಲ್ಲ ಅಂತಾರೆ, ಮೊದಲ ಬಾರಿಗೆ ನಮ್ಮ ರಾಜ್ಯ ಸರ್ಕಾರ ರೈತರ ಖಾತೆಗೆ ಬರ ಪರಿಹಾರಕ್ಕೆ ಸಂಬಂಧಿಸಿದಂತೆ 2,000 ಹಣ ಜಮೆ…

Read More

ಸಕಲೇಶಪುರ: ಕೆಎಸ್ ಆರ್ ಟಿಸಿ ಬಸ್ಸೊಂದು ಶಾಲಾ ಕಾಂಪೌಂಡ್‌ ಹಾಗೂ ಮನೆಗೆ ಬಸ್​ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಬಳಿ ನಡೆದಿದೆ. ಉದಯಪುರ ಗ್ರಾಮದ ಅಮೃತ್‌ರಾಜ್ (34) ಮೃತಪಟ್ಟವರಾಗಿದ್ದಾರೆ.. ಘಟನೆಯಲ್ಲಿ 10 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಬೆಂಗಳೂರಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಬಸ್  ಸಕಲೇಶಪುರದ ಬಾಗೆ ಗ್ರಾಮಕ್ಕೆ ತಲುಪುತ್ತಿದ್ದಂತೆ ಬ ಸ್‌ನ ಆಕ್ಸಲ್ ತುಂಡಾಗಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿ ಮನೆಗೆ ಡಿಕ್ಕಿಹೊಡೆದು, ಜೆಎಸ್ ಎಸ್ ಶಾಲೆಯ ಕಾಂಪೌಂಡ್ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಬಸ್ ಡಿಕ್ಕಿ ಹೊಡೆದ ತೀವ್ರತೆಗೆ ಶಾಲೆಯ ಗೋಡೆಯೇ ಕುಸಿದು ಬಿದ್ದಿದೆ. ಬಸ್‌ ನಲ್ಲಿದ್ದ ಪ್ರಯಾಣಿಕ ಅಮೃತ್‌ರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ತಿಪಟೂರು: ಗ್ರಾಮೀಣ ಸಮುದಾಯದ ಮಹಿಳೆಯರಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸುತ್ತಿರುವ ನಿಟ್ಟಿನಲ್ಲಿ ತನ್ನದೇ ಆದ ವಿಶಿಷ್ಟತೆ ಹೊಂದಿರುವ ನಮ್ಮ ಆರೋಗ್ಯ ಕೇಂದ್ರ ಫೆಬ್ರುವರಿ 4 2024 ರಂದು ತನ್ನ ಪ್ರಥಮ ವರ್ಷಾಚರಣೆ ಆಚರಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ವಿಶೇಷ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಕೆ.ಬಿ.ಕ್ರಾಸ್ ಮತ್ತು ಹಾಲ್ಕುರಿಕೆ ಗ್ರಾಮಗಳಲ್ಲಿ ಡಾ.ಹೇಮಾ ದಿವಾಕರ್ ಹಾಗೂ ನುರಿತ ವೈದ್ಯರುಗಳ ನೇತೃತ್ವದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನಡೆದ ಈ ಆರೋಗ್ಯ ಶಿಬಿರದಲ್ಲಿ ಹೆಚ್ಚಾಗಿ ಮಹಿಳೆಯರು ಅಗತ್ಯ ವೈದ್ಯಕೀಯ ಸೇವೆ ಮತ್ತು ಸಮಾಲೋಚನೆ ಪಡೆದರು. ನಮ್ಮ ಆರೋಗ್ಯ ಕೇಂದ್ರದ ವಾರ್ಷಿಕ ಸಂಭ್ರಮಾಚರಣೆ ಉದ್ದೇಶಿಸಿ ಮಾತನಾಡಿದ  ನಮ್ಮ ಆರೋಗ್ಯ ಕೇಂದ್ರದ ಸಂಸ್ಥಾಪಕರು ಹಾಗೂ ಕಾಂಗ್ರೆಸ್ ಮುಖಂಡರಾಗಿರುವ C B  ಶಶಿಧರ್ ರವರು ಗ್ರಾಮೀಣ ಸಮುದಾಯದ ಮೇಲೆ ಈ ಶಿಬಿರವು ಪರಿಣಾಮಕಾರಿಯಾಗಿ ಪ್ರಭಾವ ಬೀರಿದೆ, ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುತ್ತಿರುವುದು ನಮ್ಮ ಸಂಸ್ಥೆಯ ಸೇವಾಪರತೆ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ, ನಮ್ಮ ಆರೋಗ್ಯ ಕೇಂದ್ರದ ಪ್ರಥಮ ವರ್ಷಾಚರಣೆಗೆ ನನಗೆ…

Read More

ಚಿತ್ತಾಪುರ: ಲಾರಿ ಡಿಕ್ಕಿಯಾಗಿ ಬೈಕ್​ ಸವಾರ ದುರ್ಮರಣ ಹೊಂದಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಜಲಕರ್ಟಿ-ಲಡ್ಪಾಪುರ ಮಧ್ಯೆ ನಡೆದಿದೆ. ವಾಡಿ ಪಟ್ಟಣದ ಜಾಂಬವೀರ ಕಾಲೋನಿ ನಿವಾಸಿ ಸೂರ್ಯಕಾಂತ ಮುಂಡರಗಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಯಾದಗಿರಿದಿಂದ ವಾಡಿಗೆ ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿದೆ.

Read More

ಕೆ.ಆರ್.ಪೇಟೆ: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಕೆ.ಆರ್.ಪೇಟೆ ನಿವಾಸಿಗಳಾದ ಅನಿಕೇತನ್ (30), ಪವನ್ ಶೆಟ್ಟಿ (32) ಹಾಗೂ ಚಿರಂಜೀವಿ (32) ಮೃತಪಟ್ಟವರಾಗಿದ್ದಾರೆ. ಘಟನೆಯಲ್ಲಿ ಸಾಗರ್ ಎಂಬಾತನಿಗೆ ಗಂಭೀರ ಗಾಯಗಳಾಗಿವೆ.  ಕೆ.ಆರ್.ಪೇಟೆಯಿಂದ ಅಕ್ಕಿಹೆಬ್ಬಾಳು ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪಾಕಿಸ್ತಾನಕ್ಕೆ ಮಾಹಿತಿ ರವಾನೆ ಮಾಡುತ್ತಿದ್ದ ಮಾಸ್ಕೋದಲ್ಲಿದ್ದ ಭಾರತದ ವಿದೇಶಾಂಗ ಇಲಾಖೆ ಉದ್ಯೋಗಿಯನ್ನು ಬಂಧಿಸಲಾಗಿದೆ. ಈ ಉದ್ಯೋಗಿ ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಪರವಾಗಿ ಗೂಢಚಾರಿಕೆ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶ ಭಯೋತ್ಪಾದನೆ ನಿಗ್ರಹ (ಎಟಿಎಸ್) ತಂಡ ಈ  ಭಾರತೀಯ ನೌಕರನನ್ನು ಮಾಸ್ಕೋದ ರಾಯಭಾರ ಕಚೇರಿಯಿಂದ ಬಂಧಿಸಿದೆ. ಶಹಮಹಿಯುದ್ದೀನ್‌ ಪುರ ಗ್ರಾಮದ ನಿವಾಸಿ ಸತೇಂದ್ರ ಸಿವಾಲ್ ಅವರನ್ನು ಲಕ್ನೋದ ಎಟಿಎಸ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ ಎಂದು ಅದು ಹೇಳಿದೆ.

Read More

ತನ್ನ ಸಾವಿನ ವದಂತಿಯನ್ನು ತಾನೇ  ಹಬ್ಬಿಸಿಕೊಂಡಿರುವ  ಮಾಡೆಲ್, ನಟಿ  ಪೂನಂ ಪಾಂಡೆಗೆ ಇದೀಗ ಕಾನೂನಿನ ಸಂಕಷ್ಟ ಎದುರಾಗಿದ್ದು, ಮುಂಬೈನಲ್ಲಿ ಪತ್ರಕರ್ತರೊಬ್ಬರು ಪೂನಂ ಪಾಂಡೆ ವಿರುದ್ಧ ದೂರು ದಾಖಲಿಸಿದ್ದಾರೆ. ಪೂನಂ ಪಾಂಡೆ ಅವರ ಸಾವಿನ ಕುರಿತು ಸುಳ್ಳು ಸುದ್ದಿ ಹರಡಲು ಕಾರಣರಾದ ಎಲ್ಲರ ವಿರುದ್ಧವೂ ಎಫ್ ​ಐಆರ್​ ದಾಖಲಿಸಿ. ಇಂತಹ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಬೇಕು’ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗರ್ಭಕಂಠದ ಕ್ಯಾನ್ಸರ್​ನಿಂದ ಪೂನಂ ಪಾಂಡೆ ನಿಧನರಾದರು ಎಂಬ ಸುದ್ದಿ ದೇಶಾದ್ಯಂತ ವ್ಯಾಪಕವಾಗಿ ಹರಿದಾಡಿತ್ತು.  ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳ ತನಕ ಅನೇಕರು ಪೂನಂ ಪಾಂಡೆಗೆ ಶ್ರದ್ಧಾಂಜಲಿ ಅರ್ಪಿಸಿದ್ದರು. ಆದ್ರೆ ಕೇವಲ ಪ್ರಚಾರಕ್ಕಾಗಿ ನಟಿ  ತನ್ನ ಸಾವಿನ ಸುದ್ದಿಯನ್ನು ತಾನೇ ಹಬ್ಬಿಸಿರೋದಾಗಿ  ಆ ನಂತರ ತಿಳಿದು ಬಂದಿತ್ತು. ಪೂನಂ ಪಾಂಡೆ ಅವರು ಗರ್ಭಕಂಠದ ಕ್ಯಾನ್ಸರ್​ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ತಮ್ಮದೇ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರು. ಅವರ ಉದ್ದೇಶ ಒಳ್ಳೆಯದೇ ಆಗಿದ್ದರೂ ಕೂಡ ಮಾರ್ಗ ಸರಿಯಾಗಿಲ್ಲ ಎಂದು ತೀವ್ರ ಟೀಕೆ ವ್ಯಕ್ತವಾಗುತ್ತಿದೆ.

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಶಾಲೆಗೆ ಇ ಮೇಲ್ ಮೂಲಕ ಮತ್ತೆ ಹುಸಿ ಬಾಂಬ್ ಬೆದರಿಕೆ ಬಂದಿದೆ. ಬೆಂಗಳೂರಿನ ಯಶವಂತಪುರದಲ್ಲಿರುವ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಜನವರಿ 28ರಂದು ಬಾಂಬ್ ಬೆದರಿಕೆ ಬಂದಿದ್ದು ತಡವಾಗಿ ಬೆಳಕಿಗೆ ಬಂದಿದೆ. Sahukarisrinuvasarao65@gmail.com ಎಂಬ ಇ-ಮೇಲ್ ಮೂಲಕ  ಬೆದರಿಕೆ ಕರೆ ಬಂದಿದ್ದು,  ಪೊಲೀಸರು ಹಾಗೂ  ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಾಂಬ್ ಬೆದರಿಕೆ ಹಿನ್ನೆಲೆ ಶಾಲೆಗೆ ಬಂದ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದಾಗ ಹುಸಿ ಬಾಂಬ್ ಕರೆ ಎನ್ನುವುದು ತಿಳಿದು ಬಂದಿದೆ.

Read More

ಬೆಂಗಳೂರು: ಪ್ರತ್ಯೇಕ ರಾಷ್ಟ್ರದ ಕುರಿತು ಹೇಳಿಕೆ ನೀಡಿರುವ ಸಂಸದ ಡಿಕೆ ಸುರೇಶ್ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ ಘಟನೆ ಭಾನುವಾರ ನಡೆಯಿತು. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಸುರೇಶ್ ಅವರ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರು ನುಗ್ಗಿದ್ದರು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಹೈಡ್ರಾಮಾ ನಡೆಯಿತು. ಬಿಜೆಪಿ ಕಾರ್ಯಕರ್ತರು ಏಕಾಏಕಿ ಸುರೇಶ್ ಅವರ ನಿವಾಸಕ್ಕೆ ನುಗ್ಗಿತ್ತಿದ್ದಂತೆಯೇ ಪೊಲೀಸರು ತಡೆದರು. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಯಿತು.

Read More

ನನಗೆ ವಾಹನ ಖರೀದಿಸಿದ ಯಾವುದೇ ಅನುಭವವಿಲ್ಲ, ಸೈಕಲ್ ಕೂಡ ಖರೀದಿಸಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದೆಹಲಿಯಲ್ಲಿ ಆಯೋಜನೆಗೊಂಡಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ  ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದರು. ಭಾರತದ ಆಟೋ ಮೊಬಿಲಿಟಿ, ಸಪ್ಲೈ ಚೈನ್ ಸೇರಿದಂತೆ ಸಂಪೂರ್ಣ ಸಂಪರ್ಕಿತ ವ್ಯವಸ್ಥೆಯನ್ನು ಒಂದು ಮಂಟಪದೊಳಗೆ ತಂದು ಎಕ್ಸ್‌ಪೋ ಆಯೋಜಿಸಲಾಗಿದೆ. ಭಾರತ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಹಾಗೂ ಮಾರಾಟಕ್ಕೆ ಹೆಚ್ಚಿನ ಉತ್ತೇಜನ ನೀಡಿದೆ. ಪ್ರಮುಖವಾಗಿ ಬ್ಯಾಟರಿ ಉತ್ಪಾದನೆ ಸರಿಯಾದ ಪ್ರಮಾಣದಲ್ಲಿ ನಾವು ಮಾಡಬೇಕಿದೆ. ಈ ಕುರಿತು ಇತ್ತೀಚೆಗೆ ಗ್ಲೋಬಲ್ ಸಮ್ಮಿಟ್‌ನಲ್ಲಿ ನಾನು ಪಾಲ್ಗೊಂಡಿದ್ದೆ. ಹಲವು ವಿಚಾರಗಳ ಕುರಿತು ಚರ್ಚೆ ನಡೆದಿತ್ತು. ಈ ವಿಚಾರಗಳನ್ನು ಮೂರನೇ ಅವಧಿ ಸರ್ಕಾರದಲ್ಲಿ ಜಾರಿಗೆ ತರಲಾಗುತ್ತದೆ ಎಂದು ಮೋದಿ ಹೇಳಿದ್ದಾರೆ. ಮೋದಿಯ 3ನೇ ಬಾರಿಗೆ ಸರ್ಕಾರ ರಚನೆ ಮಾತು ಹೇಳುತ್ತಿದ್ದಂತೆ ಇಡೀ ಸಭಾಂಗಣದಲ್ಲಿದ್ದ ಉದ್ಯಮಿಗಳು, ತಜ್ಞರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದರು. ಹಲವು ವೇದಿಕೆಯಲ್ಲಿ ಹೇಳಿದಂತೆ ಇದು ಸರಿಯಾದ ಸಮಯ,…

Read More