Author: admin

ಮಂಡ್ಯ : ಸಕ್ಕರೆಯ ನಾಡು ಮಂಡ್ಯ ನಗರ ಪ್ರವೇಶಿಸುತ್ತಿದ್ದಂತೆಯೇ ಹಸಿರಿನಿಂದ ಕಂಗೊಳಿಸುವ ಸುಂದರವಾದ ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಉದ್ಯಾನವನವನ್ನು ದೇವವನವನ್ನಾಗಿಸಿದವರು ಕ್ರಿಯಾಶೀಲ ಪತ್ರಕರ್ತ ಎಂ.ಶಿವಕುಮಾರ್. ಪಾಳುಬಿದ್ದಿದ್ದ ಒಂದೂವರೆ ಎಕರೆಯಷ್ಟು ಭೂಮಿಯನ್ನು ಮಂಡ್ಯ ನಗರಸಭೆಯಿಂದ ದತ್ತು ಪಡೆದು ಕಳೆದ ಇಪ್ಪತ್ತು ವರ್ಷಗಳಿಂದ ಸಸ್ಯ ಸೇವೆಯನ್ನೇ ಶಿವಪೂಜೆಯಂತೆ ಮಾಡಿ, ವಿವಿಧ ಬಗೆಯ ನೂರಾರು ಔಷಧೀಯ ಸಸಿಗಳು, ಕಾಡುಜಾತಿಯ ಮರಗಳು, ಅಲಂಕಾರಿಕ ಸಸಿಗಳನ್ನು ನೆಟ್ಟು ಮಕ್ಕಳಂತೆ ಪೋಷಿಸಿ ಸದ್ದುಗದ್ದಲವಿಲ್ಲದೆ  ಸಸ್ಯಕಾಶಿಯನ್ನೇ ಸೃಷ್ಟಿಸಿದ ಕಾಯಕ ಯೋಗಿ ಪರಿಸರವಾದಿ ಪತ್ರಕರ್ತ ಎಂ.ಶಿವಕುಮಾರ್. ಪ್ರಧಾನಿ ಮೋದಿಯವರ ಜೂನ್.21ರ ವಿಶ್ವಯೋಗ ದಿನಾಚರಣೆಯಿಂದ ಪ್ರಭಾವಿತರಾಗಿ ಪ್ರತಿನಿತ್ಯ ವಾಯು ವಿಹಾರಕ್ಕೆ ಬರುವ ನೂರಾರು ಮಂದಿ ವಯೋವೃದ್ದರು, ಸಾರ್ವಜನಿಕರ ಅನುಕೂಲಕ್ಕಾಗಿ ಸಿದ್ದಗಂಗಾ ಶ್ರೀಗಳ ಉದ್ಯಾನವನದಲ್ಲಿ ಧ್ಯಾನಕೇಂದ್ರ ನಿರ್ಮಾಣ ಮಾಡಿದ್ದಾರೆ. ಶಾಲಾ ಮಕ್ಕಳಿಗೆ ಕರಾಟೆ, ಧ್ಯಾನ ಹಾಗೂ ಯೋಗಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟು ಆರೋಗ್ಯಕರ ಸಮಾಜಕ್ಕೆ ಸಹಕಾರಿಯಾಗಿದ್ದಾರೆ. ತಮ್ಮ ಜನ್ಮ ದಿನಾಚರಣೆಯನ್ನು ಸ್ಮಶಾನ, ಸರ್ಕಾರಿ ಶಾಲೆಯ ಆವರಣ ಹಾಗೂ ಸ್ಲಂಗಳಲ್ಲಿ ಸಸಿನೆಡುವ ಮೂಲಕ ಆಚರಿಸಿಕೊಂಡು ರೈತರಿಗೆ ತೆಂಗಿನ…

Read More

ಕೊರಟಗೆರೆ : ಭಾರತಾವು ಒಂದು ಬಲಿಷ್ಟ ರಾಷ್ಟ್ರ ಪ್ರಗತಿಪರ ರಾಷ್ಟ್ರ ಭವಿಷ್ಯದ ಭಾರತ ಕನಸನ್ನು ಹೊತ್ತಿರುವ ಪ್ರಧಾನ ಮಂತ್ರಿಗಳ ಸಂಕಲ್ಪವನ್ನು ವಿದ್ಯಾರ್ಥಿಗಳು ನನಸು ಮಾಡಬೇಕು, ಎನ್‌ ಡಿಎ ಮೈತ್ರಿಕೂಟದಿಂದ ವಿತರಿಸುತ್ತಿರುವ ನೋಟ್‌ ಬುಕ್‌ ನ್ನು ಸದ್ಭಳಕೆ ಮಾಡಿಕೊಂಡು ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ಶಿಕ್ಷಣದಲ್ಲಿ ಪ್ರಗತಿ ಸಾಧಿಸಬೇಕಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ತಿಳಿಸಿದರು. ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 75ನೇ ವರ್ಷದ ಜನ್ಮದಿನದ ಪ್ರಯುಕ್ತ ಕೇಂದ್ರ ಜಲಶಕ್ತಿ ಮತ್ತು ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣನವರ ಸಹಕಾರದಿಂದ ಎನ್‌ ಡಿಎ ಪಕ್ಷವು ಸರ್ಕಾರಿ ಮಾಧ್ಯಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ನೋಟ್‌ ಬುಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಿ.ಸೋಮಣ್ಣನವರು ತುಮಕೂರು ಜಿಲ್ಲೆಯ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಆಸಕ್ತಿ ವಹಿಸಿದ್ದಾರೆ. ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ ಬುಕ್ ವಿತರಣೆ…

Read More

ತುಮಕೂರು:  ಉದ್ಯೋಗದಾತರ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ಇದರ ಹಿಂದಿನ ಪಾವತಿಗಳನ್ನು ಕ್ರಮಬದ್ಧಗೊಳಿಸಲು ನವೆಂಬರ್ 1ರಿಂದ ಏಪ್ರಿಲ್ 30ರವರೆಗೆ 6 ತಿಂಗಳ ಅವಧಿಯಲ್ಲಿ “ನೌಕರರ ದಾಖಲಾತಿ ಅಭಿಯಾನ – 2025” (EEC – 2025) ನಡೆಸಲಾಗುತ್ತಿದ್ದು, ಈ ಸಂಬಂಧ ತುಮಕೂರಿನ ಕೈಗಾರಿಕಾ ಪ್ರದೇಶ ವಸಂತನರಸಾಪುರದ ಇಂಡಿಯನ್ ಫುಡ್ ಪಾರ್ಕ್(India Food Park) ನಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಈ ಕೆಳಗಿನ ಮಾಹಿತಿಯನ್ನು ಹಂಚಿಕೊಳ್ಳಲಾಯಿತು: ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್‌ ಗಾ‌ರ ಯೋಜನೆ (PMVBRY) ಭಾಗ : ಎ ಹೊಸ ಉದ್ಯೋಗಿಗಳಿಗೆ ಪ್ರೋತ್ಸಾಹಧನ » ತಿಂಗಳಿನ ವೇತನ (ಮೂಲ + DA ) ಕ 15,000 ವರೆಗೆ ಒಂದು ಬಾರಿ ಪ್ರೋತ್ಸಾಹಧನ, 2 ಕಂತುಗಳಲ್ಲಿ > 6 ತಿಂಗಳ ಸೇವೆಯ ನಂತರ ಪ್ರಥಮ ಕಂತಿನ ಪಾವತಿ 12 ತಿಂಗಳ ಸೇವೆಯ ನಂತರ ಮತ್ತು EPFO ಪೋರ್ಟಲ್‌ನಲ್ಲಿ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ಪೂರ್ಣಗೊಳಿಸಿದ ನಂತರ ದ್ವಿತೀಯ ಕಂತಿನ ಪಾವತಿ > ಅರ್ಹತೆಯ…

Read More

ಬೀದರ್: ಬೀದರ್  ಜಿಲ್ಲಾಧಿಕಾರಿ ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಬೀದರ್ ನಗರದ ಚಿಕ್ಕಪೇಠ್‌ನಲ್ಲಿರುವ ಡಿಸಿ ಕಚೇರಿಗೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸದ್ಯ ಡಿಸಿ ಕಚೇರಿಯಲ್ಲಿ ಪೋಲಿಸರು ಹೈಅಲರ್ಟ್ ಆಗಿದ್ದು, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಡಿಸಿ ಕಚೇರಿಯ ಸಿಬ್ಬಂದಿಯನ್ನು ಹೊರಗಡೆ ಕಳಿಸಿ, ಪೊಲೀಸರು ಕಚೇರಿಯನ್ನ ಸಂಪೂರ್ಣವಾಗಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಎಎಸ್ಪಿ ಚಂದ್ರಕಾಂತ್ ಪೂಜಾರಿ ಸೇರಿದಂತೆ ಹಲವು ಅಧಿಕಾರಿಗಳು ಆಗಮಿಸಿ, ಪರಿಶೀಲನೆ ಮಾಡುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಚಿಕ್ಕಬಳ್ಳಾಪುರ: ಚಿರತೆ ಮರಿಯೊಂದು ಗುಡಿಬಂಡೆ ಪೊಲೀಸ್ ಠಾಣೆಯ ಆವರಣದಲ್ಲಿದ್ದ ಹಳೆಯ ಕಾರಿನಲ್ಲಿ ಅವಿತುಕುಳಿತ ಘಟನೆ ನಡೆದಿದೆ. ಜಿಲ್ಲೆಯ ಗುಡಿಬಂಡೆ ಪೊಲೀಸ್ ಠಾಣೆಯ ಆವರಣದಲ್ಲಿ ಚಿರತೆ ಮರಿ  ಓಡಾಡಿದ್ದನ್ನು ಪೊಲೀಸರು ಕಂಡಿದ್ದರು.  ಜನರನ್ನ ಕಂಡ ಚಿರತೆ ಭಯದಿಂದ ಪೊಲೀಸ್ ಠಾಣೆಯ ಆವರಣದಲ್ಲೇ ಇದ್ದ ಹಳೆಯ ಕಾರಿನಲ್ಲಿ ಹತ್ತಿ ಅವಿತುಕೊಂಡಿತ್ತು. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಆಗಮಿಸಿದ್ದು, ಗುಡಿಬಂಡೆ ಪೊಲೀಸರ ಸಹಕಾರದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ,  ಬಲೆ ಹಾಕಿ ಚಿರತೆ ಮರಿಯ ಸೆರೆಗೆ ಯತ್ನ ನಡೆಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಜಿಲ್ಲೆಯಲ್ಲಿರುವ ಲಂಬಾಣಿ (ಬಂಜಾರ) ಸಮುದಾಯಕ್ಕೆ ದಶಕಗಳಿಂದಲೂ ಒಂದು ಸ್ವಂತ ಸಮುದಾಯ ಭವನದ ಅಗತ್ಯವಿತ್ತು.  ಅನೇಕ ವರ್ಷಗಳ ಹೋರಾಟದ ಫಲವಾಗಿ, ತುಮಕೂರು ನಗರದ ಸರಸ್ವತಿಪುರಂನಲ್ಲಿ ಬೃಹತ್ ಮತ್ತು ಭವ್ಯವಾದ ಜಿಲ್ಲಾ ಬಂಜಾರ ಭವನ ಶನಿವಾರ ಉದ್ಘಾಟನೆಗೆ ಸಿದ್ಧಗೊಂಡಿದೆ. ಜಿಲ್ಲೆಯಲ್ಲೇ ತಮ್ಮದೇಯಾದ ಆದ ಪ್ರಾಬಲ್ಯವನ್ನು ಹೊಂದಿರುವ ಬುಡಕಟ್ಟು ಲಂಬಾಣಿ ಸಮುದಾಯ,  ಸಂಸ್ಕೃತಿ, ಕಲೆ, ಪರಂಪರೆ ಮತ್ತು ಐತಿಹಾಸಿಕ ಹೆಗ್ಗಳಿಕೆಗಳನ್ನು ಗಮನಿಸಿದಾಗ, ಇಂತಹ ಭವನವು ಬಹುಕಾಲದಿಂದ ಬೇಕಾಗಿತ್ತು. ಭಾರತದ ಶ್ರೀಮಂತ ಸಂಸ್ಕೃತಿಯಲ್ಲಿ ಬಂಜಾರ ಸಮುದಾಯವು ವಿಶಿಷ್ಟ ಸ್ಥಾನವಹಿಸಿದೆ. ಅವರ ಉಡುಗೆ–ತೊಡುಗೆ, ಹಾಡು–ನೃತ್ಯ, ಕಸೂತಿ ಕಲೆ ಹಾಗೂ ಸಂಗೀತ ಎಲ್ಲವೂ ಅನನ್ಯತೆ ಹೊಂದಿವೆ. ಪರಂಪರೆಯ ಮೌಲ್ಯಗಳನ್ನು ಕಾಪಾಡಿಕೊಂಡು ಬದುಕುತ್ತಿರುವ ಈ ಜನಾಂಗ, ಸಾಮಾಜಿಕ ಮತ್ತು ಆರ್ಥಿಕ ಹಿನ್ನಡೆಯ ನಡುವೆಯೂ ತನ್ನ ಗುರುತನ್ನು ಉಳಿಸಿಕೊಂಡಿದೆ. ಜಿಲ್ಲೆಯ ಬಹುತೇಕ ತಾಂಡಗಳಲ್ಲಿ ವಾಸವಾಗಿರುವ ಜನರು ರಾಜಕೀಯ ಮತ್ತು ಶೈಕ್ಷಣಿಕವಾಗಿಯೂ ಹಿಂದುಳಿದ ಸ್ಥಿತಿಯಲ್ಲಿ ಇದ್ದರೂ ಸಹ ಇತ್ತೀಚಿನ ದಿನಗಳಲ್ಲಿ ಸಂಘಟನೆ ಮತ್ತು ಜಾಗೃತಿಯ ಚಟುವಟಿಕೆಗಳು ವೇಗ ಪಡೆದಿವೆ. ಸ್ವಾತಂತ್ರ್ಯ ನಂತರ 75…

Read More

ತುಮಕೂರು: ಸಣ್ಣ ಉದ್ದಿಮೆದಾರರೊಬ್ಬರಿಗೆ ಸಹಾಯ ಧನ ಮಂಜೂರು ಮಾಡಲು 1.15 ಲಕ್ಷ ಲಂಚದ ಹಣ ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜು, ಸಹಾಯಕ ಎನ್.ಎಸ್.ಪ್ರಸಾದ್ ಎಂಬುವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಒಟ್ಟು 1.25 ಲಕ್ಷ ಲಂಚಕ್ಕೆ ಒತ್ತಾಯಿಸಿದ್ದು. ಮುಂಗಡವಾಗಿ 10 ಸಾವಿರ ಹಣ ಪಡೆದುಕೊಂಡಿದ್ದರು. ಗುರುವಾರ ಮಧ್ಯಾಹ್ನ ಉಳಿದ 1.15 ಲಕ್ಷ ಹಣ ತೆಗೆದುಕೊಳ್ಳುವ ಸಮಯದಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ. ನಗರದ ವಿಜಯನಗರ ಬಡಾವಣೆಯ ಎಂ.ಎಸ್.ಚನ್ನಬಸವೇಶ್ವರ ಅವರು ತಾಲ್ಲೂಕಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಶಿವಲಿಂಗ ಇಂಡಸ್ಟ್ರೀಸ್ ಸ್ಥಾಪಿಸಿ ಸಣ್ಣ ಉದ್ದಿಮೆ ನಡೆಸುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ಎಲೆಕ್ಟ್ರಿಕಲ್ ಕಂಟ್ರೋಲ್ ಪ್ಯಾನಲ್ ತಯಾರಿಸುತ್ತಿದ್ದಾರೆ. ಮೊದಲ ಬಾರಿಗೆ ಸಣ್ಣ ಉದ್ದಿಮೆ ಆರಂಭಿಸಿದವರಿಗೆ ರಾಜ್ಯ ಸರ್ಕಾರದಿಂದ ಸಹಾಯ ಧನ ನೀಡಲಾಗುತ್ತಿದೆ. ಹಾಗಾಗಿ ಸಹಾಯ ಧನ ಮಂಜೂರು ಮಾಡುವಂತೆ ಕೋರಿ ಜಿಲ್ಲಾ ಕೈಗಾರಿಕಾ ಕೇಂದ್ರ (ಡಿಐಸಿ) ಜಂಟಿ ನಿರ್ದೇಶಕರಿಗೆ ಅರ್ಜಿ ಸಲ್ಲಿಸಿದ್ದರು. ಚನ್ನಬಸವೇಶ್ವರ ಅವರಿಗೆ 18.75 ಲಕ್ಷ ಸಹಾಯ ಧನ ಮಂಜೂರು ಮಾಡಬೇಕಿತ್ತು. ಈ…

Read More

ತುಮಕೂರು: ಬಯಲು ಸೀಮೆಯ ಏಳು ಜಿಲ್ಲೆಗಳ ಜನರ ದಾಹ ನೀಗಿಸುವ ಎತ್ತಿನಹೊಳೆ ನೀರಾವರಿ ಯೋಜನೆ ಕೊನೆಯ ಹಂತಕ್ಕೆ ಬಂದಿರುವ ಹೊತ್ತಿನಲ್ಲೇ ಕೇಂದ್ರ ಸರ್ಕಾರ ಅಡ್ಡಿಪಡಿಸುತ್ತಿದೆ. ರಾಜ್ಯದ ವಿರುದ್ಧ ಮಲತಾಯಿ ಧೋರಣೆ ಮುಂದುವರಿಸಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಇಲ್ಲಿ ಗುರುವಾರ ಆಕ್ರೋಶ ವ್ಯಕ್ತಪಡಿಸಿದರು. 2012ರಲ್ಲಿ ಆರಂಭವಾದ ಎತ್ತಿನಹೊಳೆ ಯೋಜನೆಯ ಶೇ. 90ರಷ್ಟು ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ಇಂತಹ ಸಮಯದಲ್ಲಿ ಕೇಂದ್ರ ಅಡ್ಡಿಪಡಿಸುತ್ತಿದ್ದು, ಈ ಬಗ್ಗೆ ಕೇಂದ್ರ ಜಲಸಂಪನ್ಮೂಲ ಸಚಿವರ ಜತೆಗೆ ಚರ್ಚಿಸಲು ಡಿ. 13– 14ರಂದು ರಾಜ್ಯ ಸರ್ಕಾರ ದೆಹಲಿಗೆ ನಿಯೋಗ ಕೊಂಡೊಯ್ಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಯೋಜನೆಗೆ ನಿಗದಿಗಿಂತ ಹೆಚ್ಚು ಭೂಮಿ ಬಳಕೆ ಮಾಡಲಾಗಿದೆ. ಹಸಿರು ನ್ಯಾಯ ಪೀಠದ ಅನುಮತಿ ಪಡೆದಿಲ್ಲ. ಅರಣ್ಯ ಪ್ರದೇಶ ಬಳಕೆ ಮಾಡಿಕೊಳ್ಳಲಾಗಿದೆ, ಇನ್ನಿತರ ಅನಗತ್ಯ ತಕರಾರು ತೆಗೆದು ಕಾಮಗಾರಿ ವಿಳಂಬವಾಗುವಂತೆ ಮಾಡುತ್ತಿದೆ. ಕುಡಿಯುವ ನೀರಿನ ಯೋಜನೆಗೆ ಸಹಕಾರ ನೀಡುವುದು ಬಿಟ್ಟು ಅಡ್ಡಿಪಡಿಸುತ್ತಿದೆ. ಈ ಬಗ್ಗೆ ರಾಜ್ಯದ ಸಂಸದರು ಪಕ್ಷಾತೀತವಾಗಿ ಧ್ವನಿಯೆತ್ತಿ ಕೇಂದ್ರದ…

Read More

ಬೆಳಗಾವಿ: ಚಿಕ್ಕನಾಯಕನಹಳ್ಳಿ ತಾಲ್ಲೂಕು ಒಂದರಲ್ಲೇ ಕಾವೇರಿ ನೀರಾವರಿ ನಿಗಮ ನಿಯಮಿತ, ವಿಜೆಎನ್ ಎಲ್, ಭದ್ರಾ ಮೇಲ್ದಂಡೆ ಯೋಜನೆಗಳನ್ನು ಪಡೆದುಕೊಂಡಿದ್ದಾರೆ. ಸುಮಾರು 2,800 ಕೋಟಿ ರೂ. ಮೊತ್ತದ ಕಾಮಗಾರಿಗಳು ಇದೊಂದೇ ತಾಲ್ಲೂಕಿನಲ್ಲಿ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಪರಿಷತ್ ನಲ್ಲಿ ಹೇಳಿದರು. ಪ್ರಶೋತ್ತರ ಕಲಾಪದ ವೇಳೆ ಕಾಂಗ್ರೆಸ್ ಪಕ್ಷದ ರಮೇಶ್ ಬಾಬು ಅವರು ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಕೈಗೊಂಡಿರುವ ನೀರಾವರಿ ಯೋಜನೆಗಳು ಯಾವುವು ಹಾಗೂ ಎಷ್ಟು ಯೋಜನೆಗಳು ಪ್ರಗತಿಯಲ್ಲಿವೆ ಎನ್ನುವ ಪ್ರಶ್ನೆಗೆ ಉತ್ತರಿಸಿದರು. ಚಿಕ್ಕನಾಯಕನಹಳ್ಳಿಯವರು ಇಷ್ಟೊಂದು ಬುದ್ದಿವಂತರು ಎಂದು ನಾನು ತಿಳಿದುಕೊಂಡಿರಲಿಲ್ಲ. ಆದರೂ ಈಗ ಸ್ಪೆಷಲ್ ಪ್ಯಾಕೇಜ್ ನೀಡಿ ಎಂದು ಹೇಳುತ್ತಿದ್ದಾರೆ. ಯಾರ ಕಾಲದಲ್ಲಿ ಇದೆಲ್ಲವೂ ಆಯಿತು ಎಂದು ನಾನು ಚರ್ಚಿಸಲು ಹೋಗುವುದಿಲ್ಲ. ಪಕ್ಷ, ವ್ಯಕ್ತಿ ಎಲ್ಲವನ್ನು ಬಿಟ್ಟು ಕೆಲಸವನ್ನು ಮಾಡಿಸಿ ಕೊಂಡಿದ್ದಾರೆ ಎಂದರು. ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ 5,300 ಕೋಟಿ ರೂ. ಹಣ ನೀಡಿದರೆ, ಸಾಕಷ್ಟು ಕೆಲಸಗಳನ್ನು ಮುಗಿಸಬಹುದು. ನಾನು ಪದೇ, ಪದೇ ಕೇಂದ್ರ ಸರ್ಕಾರ ಹಣ…

Read More

ತಿಪಟೂರು: ಪತ್ರ ಬರಹಗಾರರ ಉಳಿವಿನ ಬಗ್ಗೆ ಪತ್ರ ಬರಹಗಾರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಒಂದು ದಿನ ಲೇಖನ ಸಂದಿಗ್ಧತೆ ಚಳುವಳಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ ಪತ್ರ ಬರಹಗಾರರ ಒಕ್ಕೂಟದ ತಿಪಟೂರು ತಾಲೂಕು ಪತ್ರ ಬರಹಗಾರರ ಅಧ್ಯಕ್ಷ ಉಮೇಶ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಬೇಡಿಕೆಗಳನ್ನು ಈಡೇರಿಸಲು ಅಗ್ರಹಿಸಿ ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ ಸಂಘವು ಡಿಸೆಂಬರ್ 16ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಕಾವೇರಿ ತಂತ್ರಾಂಶ ಒಂದು ಮತ್ತು ಎರಡರಲ್ಲಿ ಬದಲಾವಣೆ ಮಾಡಲು ಸರ್ಕಾರ ಹೊರಟಿದೆ, ಹೆಚ್ಚಿನ ಆಸ್ತಿ ವಿವರ ಬರೆಯಲು ಆಗುತ್ತಿಲ್ಲ. ಬೇರೆ ರಾಜ್ಯದಲ್ಲಿ ಇರುವಂತೆ ಪತ್ರ ಬರಹಗಾರರಿಗೂ ಲಾಗಿ ನೀಡಬೇಕು,  ಈಗಾಗಲೇ ನಮಗೆ ಸಾಕಷ್ಟು ಅನುಭವವಿದ್ದು, ಪ್ರತಿ ವರ್ಷ ನವೀಕರಣ ಮಾಡಿಕೊಳ್ಳುತ್ತಿದ್ದೇವೆ. ಅನಧಿಕೃತ ಬರಹಗಾರರಿಗೆ ಕಡಿವಾಣ ಹಾಕಬೇಕು. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು…

Read More