Subscribe to Updates
Get the latest creative news from FooBar about art, design and business.
- ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
- ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
- ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ: ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
- ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ ಪರಮೇಶ್ವರ್ ಸೂಚನೆ
- ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
- ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
Author: admin
ತುಮಕೂರು: ವಿಶ್ವ ಪರಿಸರ ದಿನಾಚರಣೆಯ ವಿಶೇಷ ಅಂಗವಾಗಿ ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ಜೂನ್ 5 ರಂದು ನಗರದಲ್ಲಿ ಭರ್ಜರಿ ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 5ರಂದು ಬೆಳಗ್ಗೆ 11 ಗಂಟೆಗೆ ತುಮಕೂರು ನಗರದ ಬಾಲಭವನದಲ್ಲಿ ಈ ಸ್ಪರ್ಧೆ ಜರುಗಲಿದ್ದು, ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸಲಾಗುತ್ತಿದೆ. ಯಾರೆಲ್ಲಾ ಭಾಗವಹಿಸಬಹುದು? ವಯೋಮಿತಿ: 5 ರಿಂದ 16 ವರ್ಷದೊಳಗಿನ ಎಲ್ಲಾ ಆಸಕ್ತ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಹೆಸರು ನೋಂದಾಯಿಸುವುದು ಹೇಗೆ? ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಮಕ್ಕಳ ಪೋಷಕರು ಜೂನ್ 3ರ ಸಂಜೆ 5 ಗಂಟೆಯೊಳಗೆ ತುಮಕೂರಿನ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ (MG Road) ‘ಜಿಲ್ಲಾ ಬಾಲಭವನ ಕಚೇರಿ’ಗೆ ಭೇಟಿ ನೀಡಿ ಮಕ್ಕಳ ಹೆಸರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ಸ್ಪರ್ಧೆಯ ನಿಯಮಗಳು ಹಾಗೂ ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ 9901890079 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ…
ಪಾವಗಡ: ತಾಲೂಕಿನ ಹಿರಿಯ ರಾಜಕೀಯ ಮುತ್ಸದಿ, ನಾಲ್ಕು ಬಾರಿ ಶಾಸಕ ಹಾಗೂ ಎರಡು ಬಾರಿ ಸಚಿವರಾಗಿ ಪಾವಗಡ ತಾಲೂಕಿನ ಜನರ ಸೇವೆ ಮಾಡಿದ್ದ ವೆಂಕಟರಮಣಪ್ಪ (80) ಅವರು ಶುಕ್ರವಾರ ಬೆಳಗಿನ ಜಾವ 5 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಪಾವಗಡ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದವರಲ್ಲಿ ವೆಂಕಟರಮಣಪ್ಪ ಅವರು ಮುಂಚೂಣಿಯಲ್ಲಿದ್ದರು. ಸದಾ ಸಾರ್ವಜನಿಕರ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದ ಅವರು ತಾಲೂಕಿನ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು. ಪ್ರಮುಖ ರಾಜಕೀಯ ಹಾದಿ: 2008ರ ಸರ್ಕಾರ: ಸಣ್ಣ ಕೈಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸಚಿವರಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿದ್ದರು. 2018ರ ಸಮ್ಮಿಶ್ರ ಸರ್ಕಾರ: ಕಾರ್ಮಿಕ ಇಲಾಖೆಯ ಸಚಿವರಾಗಿ ಜವಾಬ್ದಾರಿ ನಿಭಾಯಿಸಿದ್ದರು. ಶಾಸಕರಾಗಿ ಸೇವೆ: ಪಾವಗಡ ಕ್ಷೇತ್ರದಿಂದ ಒಟ್ಟು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿ ಕ್ಷೇತ್ರದ ಪ್ರಗತಿಗೆ ಧ್ವನಿಯಾಗಿದ್ದರು. ಮೃತ ವೆಂಕಟರಮಣಪ್ಪ ಅವರಿಗೆ ಮೂರು ಜನ ಮಕ್ಕಳಿದ್ದು, ಇವರ ಕಿರಿಯ ಪುತ್ರರಾದ ಎಚ್. ವಿ. ವೆಂಕಟೇಶ್ ಅವರು ಸದ್ಯ ಪಾವಗಡ ತಾಲೂಕಿನ ಶಾಸಕರಾಗಿ ಅಧಿಕಾರ…
ಸಿರಾ: ದೇವಸ್ಥಾನಗಳು ಕೇವಲ ಪೂಜಾ ಸ್ಥಳಗಳಷ್ಟೇ ಅಲ್ಲದೆ ಅವು ಧರ್ಮ ಸಂಸ್ಥೃತಿಯ ಹೆಸರಿನಲ್ಲಿ ಜನರನ್ನು ಒಂದು ಗೂಡಿಸುವ ಮಹತ್ತದ ಶಕ್ತಿಯನ್ನು ಹೊಂದಿವೆ ಎಂದು ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ ಬಾಬು ಹೇಳಿದರು. ಅವರು ಬುಕ್ಕಾಪಟ್ಟಣ ಹೋಬಳಿ ಕೆಂಚಪ್ಪನಹಳ್ಳಿ ವಡ್ಡರಹಟ್ಟಿಯ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಕಳಶ ಪ್ರತಿಷ್ಠಾಪನೆಯಲ್ಲಿ ಮಾತನಾಡಿದರು. ಜನತೆಯನ್ನು ಏಕತೆಯತ್ತ ಒಂದುಗೂಡಿಸುವ ಹಾಗೂ ಎಲ್ಲರಲ್ಲಿಯೂ ಭ್ರಾತೃತ್ವ ಜಾಗೃತಗೊಳಿಸುವ, ನಾವೆಲ್ಲ ಒಂದೇ ಎಂಬ ಮನೋಭಾವನೆ ಉಂಟು ಮಾಡುವ ಏಕೈಕ ಸಾಧನವೆಂದರೆ ಅದು ದೇವಸ್ಥಾನಗಳು ಮಾತ್ರ. ದೇವಸ್ಥಾನಗಳಲ್ಲಿ ಭಜನೆ ಪೂಜೆ ಪುರಸ್ಕಾರ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆ ಮೂಲಕ ಎಲ್ಲರನ್ನು ಒಂದುಗೂಡಿಸುವ ಕೆಲಸವಾಗುತ್ತಿತ್ತು, ಆದರೆ ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಭಕ್ತಿ ಶ್ರದ್ಧೆಗಳು ಕಡಿಮೆಯಾಗಿವೆ ಎಂದರು. ಕೆಂಚಪ್ಪನಹಳ್ಳಿ ವಡ್ಡರಹಟ್ಟಿ ಗ್ರಾಮದ ಭಕ್ತ ಜನರು ಅಪಾರ ಭಕ್ತಿ ಹಾಗೂ ಸಹಕಾರದಿಂದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನ ಕಳಶ ಪ್ರತಿಷ್ಠಾಪನೆ ಧಾರ್ಮಿಕ ಕಾರ್ಯಗಳನ್ನು ನೆರವೇರಿಸುತ್ತಿದ್ದು, ಆಂಜನೇಯಸ್ವಾಮಿ ದಯೆಯಿಂದ ನಾಡಿನ ಎಲ್ಲಾ ಜನ ಜೀವನ ಸುಖ ಶಾಂತಿ ಸಮೃದ್ಧಿಯಿಂದ ಕೂಡಿರಲಿ…
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ಈಗ ಅಂತ್ಯ ದೊರೆತಿದೆ. ಆದರೆ, ಈ ಎಲ್ಲ ಬೆಳವಣಿಗೆಗಳಿಂದ ಕನ್ನಡಿಗರಿಗೆ ನಯಾಪೈಸೆ ಪ್ರಯೋಜನವಿಲ್ಲ ಎಂದು ರಾಜ್ಯ ಬಿಜೆಪಿ ತೀವ್ರವಾಗಿ ಟೀಕಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಮೂಲಕ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಘಟಕ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. “ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಸ್ತಬ್ಧಗೊಳಿಸಿ, ಕಲೆಕ್ಷನ್—ಕರಪ್ಷನ್–ಕಮಿಷನ್ ನಲ್ಲಿಯೇ ಮೂರು ವರ್ಷಗಳನ್ನು ದೂಡಿ, ಈಗ ರಾಜೀನಾಮೆ ಎಂಬ ಅಲ್ಪ ವಿರಾಮ ಇಟ್ಟಿದ್ದಾರೆ” ಎಂದು ಬಿಜೆಪಿ ಟೀಕಾ ಪ್ರಹಾರ ನಡೆಸಿದೆ. ಟ್ವೀಟ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿರುವ ಬಿಜೆಪಿ, “ಕಾಂಗ್ರೆಸ್ ಸರ್ಕಾರದ ಮೂರು ವರ್ಷಗಳ ಸಾಧನೆ ಎಂದರೆ ಅದು ದಲಿತರ ಹಣ ದುರ್ಬಳಕೆ, ವಾಲ್ಮೀಕಿ ನಿಗಮದ ಹಣ ಲೂಟಿ, ಯುವಕರಿಗೆ ಟೋಪಿ, ರೈತರಿಗೆ ನೇಣು ಕುಣಿಕೆ, ಜನಸಾಮಾನ್ಯರಿಗೆ ಬೆಲೆ ಏರಿಕೆ ಹಾಗೂ ಕರ್ನಾಟಕಕ್ಕೆ ಸಾಲದ ಶೂಲ…
ಬೆಂಗಳೂರು: ರಾಜ್ಯವನ್ನು ದೀರ್ಘಾವಧಿ ಆಳಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ಅವರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದು, ಈ ಮೂಲಕ ದಕ್ಷಿಣ ಭಾರತದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಸಿದ್ದರಾಮಯ್ಯ ಅವರ ಆಡಳಿತದ ಸುವರ್ಣ ಯುಗವೊಂದು ಅಂತ್ಯವಾದಂತಾಗಿದೆ. ತಳಮಟ್ಟದ ಹೋರಾಟದಿಂದ ಬಂದು ರಾಜಕೀಯದ ಪ್ರತಿಯೊಂದು ಮೆಟ್ಟಿಲನ್ನು ಯಶಸ್ವಿಯಾಗಿ ಏರಿದ್ದ ಸಿದ್ದರಾಮಯ್ಯ ಈಗ ಪದತ್ಯಾಗದ ಹಾದಿ ಹಿಡಿದಿದ್ದಾರೆ. ಸಿದ್ದರಾಮಯ್ಯ ಅವರ ತಾಯಿ ಬೋರಮ್ಮ ಅವರಿಗೆ ತಮ್ಮ ಐದನೇ ಮಗ ಎಂದಾದರೂ ಒಂದು ದಿನ ‘ರಾಜ’ನಾಗುತ್ತಾನೆ ಎಂಬ ಅಪರೂಪದ ಕನಸು ಬಿದ್ದಿತ್ತಂತೆ. ತಾಯಿಯ ಆ ಕನಸನ್ನು ಸಿದ್ದರಾಮಯ್ಯ ಅವರು ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗುವ ಮೂಲಕ ನನಸಾಗಿಸಿದ್ದರು. 2013 ರಲ್ಲಿ ಮೊದಲ ಬಾರಿಗೆ ಪೂರ್ಣಾವಧಿ (5 ವರ್ಷ) ಸಿಎಂ ಆಗಿ ಹಾಗೂ 2023 ರಿಂದ ಎರಡನೇ ಅವಧಿಗೆ ಮೂರು ವರ್ಷಗಳ ಕಾಲ ಅವರು ರಾಜ್ಯದ ಚುಕ್ಕಾಣಿ…
ಬೆಂಗಳೂರು: “ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ನಾನು ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ತಮಗೆ ನೀಡಿದ್ದ ಆಫರ್ ಒಂದನ್ನು ನಿರಾಕರಿಸಿರುವ ಬಗ್ಗೆ ಬಹಿರಂಗಪಡಿಸಿದರು. “ಕಾಂಗ್ರೆಸ್ ಹೈಕಮಾಂಡ್ ನಾಯಕರು ನನಗೆ ದೆಹಲಿಗೆ ಬಂದು ರಾಜ್ಯಸಭೆಗೆ ಹೋಗುವಂತೆ ಸೂಚಿಸಿದ್ದರು. ಆದರೆ ನಾನು ಅತ್ಯಂತ ವಿನಮ್ರವಾಗಿ ಅದಕ್ಕೆ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದೆ. ನನಗೆ ರಾಷ್ಟ್ರೀಯ ರಾಜಕಾರಣಕ್ಕೆ ಹೋಗಲು ಆಸಕ್ತಿ ಇಲ್ಲ, ಕರ್ನಾಟಕದ ರಾಜಕೀಯದಲ್ಲೇ ಮುಂದುವರಿಯುವುದಾಗಿ ಹೈಕಮಾಂಡ್ಗೆ ತಿಳಿಸಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದರು. ಮುಂದುವರಿದು ಮಾತನಾಡಿದ ಅವರು, “ರಾಜ್ಯದ ಜನತೆ ನನ್ನನ್ನು ಐದು ವರ್ಷಗಳ ಕಾಲ ಶಾಸಕನನ್ನಾಗಿ ಆಯ್ಕೆ ಮಾಡಿ ಕಳುಹಿಸಿದ್ದಾರೆ. ಶಾಸಕನ ಅವಧಿ ಇನ್ನೂ ಎರಡು ವರ್ಷ ಬಾಕಿ ಉಳಿದಿದೆ. ಅಲ್ಲಿಯವರೆಗೆ ಕರ್ನಾಟಕದ ಜನತೆ ಹಾಗೂ ನನ್ನ ಕ್ಷೇತ್ರದ ಜನರ ಪರವಾಗಿ ಶಾಸಕನಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ” ಎಂದು…
ತುಮಕೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆಗಳು ತೀವ್ರಗೊಂಡಿವೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮುಂದಿನ ಸಿಎಂ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಅವರಿಗೆ ಅವರ ಪರಮ ದೈವವಾಗಿರುವ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿಬಸವೇಶ್ವರ ಸ್ವಾಮೀಜಿ (ಅಜ್ಜಯ್ಯ) ಅತ್ಯಂತ ಗಂಭೀರ ಮತ್ತು ನಿಗೂಢ ಎಚ್ಚರಿಕೆಯೊಂದನ್ನು ನೀಡಿದ್ದಾರೆ. “ಮಾತು ಆಡಿದರೆ ಮುತ್ತು ಒಡೆದು ಹೋದಂತೆ! ಸದ್ಯಕ್ಕೆ ಮಾಧ್ಯಮಗಳ ಮುಂದೆ ಯಾವುದೇ ಆತುರದ ಹೇಳಿಕೆಗಳನ್ನು ನೀಡಬೇಡಿ. ಅಧಿಕೃತವಾಗಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವವರೆಗೂ ಸಂಪೂರ್ಣ ಮೌನವಾಗಿರಿ” ಎಂದು ಅಜ್ಜಯ್ಯನವರು ಡಿ.ಕೆ.ಶಿವಕುಮಾರ್ ಅವರಿಗೆ ಕಟ್ಟುನಿಟ್ಟಾಗಿ ತಾಕೀತು ಮಾಡಿದ್ದಾರೆ. ಈಗ ಆಡುವ ಒಂದು ಸಣ್ಣ ಮಾತು ಕೂಡ ಕೈಗೆ ಬಂದ ತುತ್ತು ಬಾಯಿಗೆ ಬರದೇ ಹೋಗುವಂತೆ ಮಾಡಬಹುದು ಎಂದು ಶ್ರೀಗಳು ಎಚ್ಚರಿಸಿದ್ದಾರೆ. ‘ಸಾಡೇ ಸಾತಿ’ ಶನಿ ದೆಸೆಯ ಗಂಡಾಂತರ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಡಿ.ಕೆ. ಶಿವಕುಮಾರ್ ಅವರಿಗೆ ಸದ್ಯದಲ್ಲೇ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದ್ದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಈಗ ಬಹುತೇಕ ಖಚಿತವಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೌಟುಂಬಿಕ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ನಗರದಲ್ಲಿ ಇಲ್ಲದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಹಿರಿಯ ಸಚಿವರಾದ ಬೈರತಿ ಸುರೇಶ್ ಸೇರಿದಂತೆ ಹಲವು ನಾಯಕರು ಈ ವೇಳೆ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಿದರು. ನನ್ನ ಜೀವನ ತೆರೆದ ಪುಸ್ತಕ; ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, “ಹೈಕಮಾಂಡ್ ಎರಡು…
ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ (Pre-Metric) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ (State Hostel Portal) ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 15 ಅಧಿಕೃತ ವೆಬ್ ಸೈಟ್: https://shp.karnataka.gov.in ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವರ್ಗದ ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಸ್ಥಾನಗಳು ಮೀಸಲಿವೆ. ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಇತರೆ ಹಿಂದುಳಿದ ವರ್ಗಗಳ (OBC) ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಸ್ಥಾನಗಳನ್ನು ಕಾಯ್ದಿರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು-572102. ದೂರವಾಣಿ ಸಂಖ್ಯೆ: 0816–2273724 ಇಲಾಖೆಯ ನಿಯಮಾವಳಿಗಳ ಪ್ರಕಾರ…
ತುಮಕೂರು: ಕೊರಟಗೆರೆ ತಾಲ್ಲೂಕಿನ ಸುಕ್ಷೇತ್ರ ಸಿದ್ದರಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿರುವ ಉಚಿತ ಸಾಮೂಹಿಕ ವಿವಾಹ ಮಹೋತ್ಸವಕ್ಕೆ ನೋಂದಣಿ ಪ್ರಕ್ರಿಯೆ ಚಾಲನೆ ಪಡೆದುಕೊಂಡಿದೆ. ಮದುವೆಯಾಗಲು ಬಯಸುವ ಅರ್ಹ ವಧು–ವರರು ಶ್ರೀಮಠದಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂನ್ 21 ರ ಭಾನುವಾರದಂದು ಶ್ರೀಮಠದಲ್ಲಿ 20ನೇ ವಾರ್ಷಿಕೋತ್ಸವ, ಜಗದ್ಗುರು ರೇಣುಕಾಚಾರ್ಯ ಹಾಗೂ ಜಗಜ್ಯೋತಿ ಬಸವೇಶ್ವರರ ಜಯಂತಿ ಆಚರಣೆ ನಡೆಯಲಿದೆ. ಈ ಪವಿತ್ರ ದಿನದಂದೇ ವೀರಶೈವ ವಟುಗಳಿಗೆ ಉಚಿತ ದೀಕ್ಷಾ ಸಂಸ್ಕಾರದೊಂದಿಗೆ, ಮಧ್ಯಾಹ್ನ 12.30ಕ್ಕೆ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಲಿದೆ. ವಯೋಮಿತಿ: ವಿವಾಹವಾಗಲಿರುವ ವಧುವಿಗೆ ಕನಿಷ್ಠ 18 ವರ್ಷ ಹಾಗೂ ವರನಿಗೆ 21 ವರ್ಷ ತುಂಬಿರಬೇಕು. ದಾಖಲಾತಿಗಳು: ವಧು–ವರರ ಪೋಷಕರು ಅಥವಾ ಸಂಬಂಧಿಕರು ಅಗತ್ಯ ದಾಖಲೆಗಳೊಂದಿಗೆ ಶ್ರೀಮಠಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕ: ಮೇ 31ರ ಒಳಗಾಗಿ ಅಗತ್ಯ ದಾಖಲೆಗಳೊಂದಿಗೆ ನೋಂದಣಿ ಮಾಡಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ…