Author: admin

ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 12ರ ವಿನ್ನರ್ ಪಟ್ಟ ಗಿಲ್ಲಿ ನಟ ಪಾಲಾಗಿದ್ದರೂ, ವಿಧಾನಸಭೆಯಲ್ಲಿ ಈ ವಿಷಯವು ಒಂದು ವಿಭಿನ್ನ ರಾಜಕೀಯ ತಿರುವು ಪಡೆದುಕೊಂಡಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಅವರು ಕೇಂದ್ರ ಸರ್ಕಾರದ ತೆರಿಗೆ ನೀತಿಯನ್ನು ಟೀಕಿಸುವ ಭರದಲ್ಲಿ, ಈ ಬಾರಿಯ ನಿಜವಾದ ಬಿಗ್ ಬಾಸ್ ವಿನ್ನರ್ ನಿರ್ಮಲಾ ಸೀತಾರಾಮನ್ ಎಂದು ಲೇವಡಿ ಮಾಡಿದ್ದಾರೆ. ಪ್ರದೀಪ್ ಈಶ್ವರ್ ಹೇಳಿದ್ದೇನು? ನಿನ್ನೆ ಸದನದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ವಾಗ್ದಾಳಿ ನಡೆಸಿದರು. “ಈ ಬಾರಿಯ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಅಲ್ಲ, ಬದಲಾಗಿ ನಿರ್ಮಲಾ ಸೀತಾರಾಮನ್. ಏಕೆಂದರೆ ಬಿಗ್ ಬಾಸ್ ಗೆದ್ದವರಿಗೆ ಸಿಗುವ 50 ಲಕ್ಷ ರೂಪಾಯಿ ಬಹುಮಾನ ಮೊತ್ತದಲ್ಲಿ ಶೇ. 18ರಷ್ಟು ಜಿಎಸ್‌ಟಿ, ಶೇ. 13ರಷ್ಟು ಇನ್ಕಮ್ ಟ್ಯಾಕ್ಸ್ ಹಾಗೂ ಶೇ. 4ರಷ್ಟು ಸೆಸ್ ಸೇರಿ ಸುಮಾರು 52% ರಷ್ಟು ತೆರಿಗೆ ರೂಪದಲ್ಲಿ ಕೇಂದ್ರದ ಪಾಲಾಗುತ್ತದೆ. ಕೊನೆಗೆ…

Read More

ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಸುದ್ದಿ ವರದಿಯಾಗಿದೆ. ಇಂದು ಬೆಳಿಗ್ಗೆ ಸುಮಾರು 8:45ಕ್ಕೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ಚಾರ್ಟರ್ಡ್ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ಸಮಯದಲ್ಲಿ ತಾಂತ್ರಿಕ ದೋಷದಿಂದಾಗಿ ಪತನಗೊಂಡಿದೆ. ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ತೆರಳುತ್ತಿದ್ದ ಅಜಿತ್ ಪವಾರ್ ಅವರಿದ್ದ ವಿಮಾನವು ರನ್‌ವೇ ಮೇಲೆ ಅಪ್ಪಳಿಸಿದ ತಕ್ಷಣ ಬೆಂಕಿ ಹೊತ್ತಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿವೆ. ಈ ಭೀಕರ ಅಪಘಾತದಲ್ಲಿ ವಿಮಾನದಲ್ಲಿದ್ದ ಅಜಿತ್ ಪವಾರ್ ಹಾಗೂ ಇತರ ಐವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ದೃಢಪಡಿಸಿದೆ. ಮಹಾರಾಷ್ಟ್ರದ ರಾಜಕೀಯದ ಪ್ರಭಾವಿ ನಾಯಕರಲ್ಲಿ ಒಬ್ಬರಾದ ಅಜಿತ್ ಪವಾರ್ ಅವರ ಅಗಲಿಕೆ ಇಡೀ ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಆಘಾತ ಮತ್ತು ಶೋಕವನ್ನುಂಟು ಮಾಡಿದೆ. ಮುಖ್ಯಮಂತ್ರಿ ಏಕನಾಥ್…

Read More

ಸರಗೂರು: ತಾಲ್ಲೂಕಿನ ಬಿ. ಮಟಕೆರೆ ಕರ್ನಾಟಕ ಪಬ್ಲಿಕ್ ಶಾಲೆಯ ಅಭಿವೃದ್ಧಿ ಸಮಿತಿ (ಸಿಡಿಸಿ) ಅಧ್ಯಕ್ಷರ ನೇಮಕಾತಿ ವಿಚಾರ ಈಗ ವಿವಾದಕ್ಕೆ ಈಡಾಗಿದ್ದು, ಶಾಸಕರ ನಡೆಗೆ ಪೋಷಕರು ಮತ್ತು ಸಮಿತಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಶಾಸಕರ ವಿರುದ್ಧ ನಿರ್ಲಕ್ಷ್ಯದ ಆರೋಪ: ಸೋಮವಾರ ಶಾಲೆಯಲ್ಲಿ ನಡೆದ ಸಿಡಿಸಿ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸದಸ್ಯ ಕೂಡಗಿ ಗೋವಿಂದರಾಜು, “2018-19ರಲ್ಲಿ ಅಂದಿನ ಸಂಸದರಾಗಿದ್ದ ದಿವಂಗತ ಆರ್.ಧ್ರುವನಾರಾಯಣ್ ಅವರು ಗ್ರಾಮೀಣ ಭಾಗದ ಹಿಂದುಳಿದ ವರ್ಗಗಳ ಮಕ್ಕಳಿಗೆ ಗುಣಮಟ್ಟದ ಇಂಗ್ಲಿಷ್ ಶಿಕ್ಷಣ ಸಿಗಲಿ ಎಂಬ ಉದ್ದೇಶದಿಂದ ಈ ಶಾಲೆಯನ್ನು ಮಂಜೂರು ಮಾಡಿಸಿದ್ದರು. ಆದರೆ ಶಾಲೆ ಆರಂಭವಾಗಿ 7 ವರ್ಷಗಳಾದರೂ, ಸ್ಥಳೀಯ ಶಾಸಕರು ಒಮ್ಮೆಯೂ ಶಾಲೆಗೆ ಭೇಟಿ ನೀಡಿ ಇಲ್ಲಿನ ಕುಂದುಕೊರತೆ ಆಲಿಸಿಲ್ಲ” ಎಂದು ಕಿಡಿಕಾರಿದರು. ನೇಮಕಾತಿ ವಿಚಾರದಲ್ಲಿ ಅಸಮಾಧಾನ: ಹಿಂದಿನ ಅಧ್ಯಕ್ಷ ಭೀಮರಾಜ್ ಅವರ ನಿಧನದ ನಂತರ ತೆರವಾಗಿದ್ದ ಸ್ಥಾನಕ್ಕೆ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಪೋಷಕರನ್ನೇ ಅಧ್ಯಕ್ಷರನ್ನಾಗಿ ನೇಮಿಸಬೇಕೆಂದು ಸದಸ್ಯರು ಮನವಿ ಮಾಡಿದ್ದರು. ಆದರೆ, ಸದಸ್ಯರ ಗಮನಕ್ಕೆ ತರದೆ…

Read More

ಪಾವಗಡ:  77ನೇ ಗಣರಾಜ್ಯೋತ್ಸವದ ಅಂಗವಾಗಿ ಪಟ್ಟಣದ ಹೆಲ್ಪ್ ಸೊಸೈಟಿ , ಸೇವಾ ಟ್ರಸ್ಟ್ ಮತ್ತು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ, ಶ್ರೀಶಾಲಾ ಕಾನ್ವೆಂಟ್, ಅಕ್ಷಯ ಬ್ಲೂಜಂ ಶಾಲೆ, ಸಹಯೋಗದಲ್ಲಿ 1,750 ಅಡಿಗಳ ಉದ್ದದ ತಿರಂಗಾ ಯಾತ್ರೆ ಅತ್ಯಂತ ವೈಭವದಿಂದ ನೆರವೇರಿತು. ಪಟ್ಟಣದ ಸ್ವಾಮಿ ವಿವೇಕಾನಂದ ಕಾಲೇಜಿನ ಮುಂಭಾಗದಲ್ಲಿ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಡಾ.ಶಶಿಕಿರಣ್ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ದೇಶಪ್ರೇಮ ಮೂಡಿಸಿಕೊಳ್ಳಬೇಕು, ನಮ್ಮ ದೇಶವನ್ನು ಕಾವಲು ಕಾಯುವ ಸೈನಿಕರ ಬಗ್ಗೆ ಅಭಿಮಾನ ಇಟ್ಟುಕೊಳ್ಳಬೇಕು, ಚಿತ್ರ ನಟರ ಫೋಟೋಗಳನ್ನು ಸ್ಟೇಟಸ್ ನಲ್ಲಿ ಹಾಕಿಕೊಳ್ಳದೆ ದೇಶಕ್ಕಾಗಿ ಹೋರಾಡಿದ ವೀರ ನಾಯಕರ ಫೋಟೋಗಳನ್ನು ಸ್ಟೇಟಸ್ ನಲ್ಲಿ ಹಾಕಿಕೊಂಡು ದೇಶ ಪ್ರೇಮವನ್ನು ಮೆರೆಯ ಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಂತರ ತಿರಂಗ ಯಾತ್ರೆ   ಶಿರಾ ರಸ್ತೆ,ಬಳ್ಳಾರಿ ರಸ್ತೆ, ಶನಿಮಹಾತ್ಮ ಸರ್ಕಲ್ ಮುಖಾಂತರ ಪಟ್ಟಣದ ತಾಲೂಕು ಕ್ರೀಡಾಂಗಣಕ್ಕೆ ತಿರಂಗಾ ಯಾತ್ರೆ ಆಗಮಿಸಿದಾಗ, ಶಾಸಕರಾದ ಎಚ್.ವಿ.ವೆಂಕಟೇಶ್ ಮತ್ತು ತಹಶೀಲ್ದಾರ್ ವೈ.ರವಿ, ಇ.ಓ. ಮಧುಸೂದನ್ ಮತ್ತು ಬಿ.ಇ.ಓ. ರೇಣುಕಮ್ಮ ಮತ್ತಿತರ ಅಧಿಕಾರಿಗಳು ಬರಮಾಡಿಕೊಂಡು,…

Read More

ತುಮಕೂರು: “ದಾಸ್ಯದಲ್ಲಿ ಹುಟ್ಟಿ ದಾಸ್ಯದಲ್ಲಿ ಜನ ಸಾಯುತ್ತಿದ್ದ ಕಾಲ ಹಿಂದಿತ್ತು. ನಾವೆಲ್ಲರೂ ಭಾಗ್ಯವಂತರು ಇಂದು ಪ್ರಜಾತಂತ್ರ, ಗಣರಾಜ್ಯ, ಜನಗಳಿಂದ, ಜನಗಳಿಗಾಗಿ, ಜನಗಳಿಗೋಸ್ಕರ ನಡೆಯುವ ಒಂದು ಆಡಳಿತ. ನಾವೇ ಆಯ್ಕೆ ಮಾಡಿರುವ ಪ್ರತಿನಿಧಿಗಳು. ಹಾಗಾಗಿ ಬಹಳ ಹೆಮ್ಮೆಯಿಂದ ಗಣರಾಜ್ಯೋತ್ಸವವನ್ನು ಆಚರಿಸಬೇಕು ಎಂದು ಸರ್ವೋದಯ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ  ಪ್ರೊ. ರವಿವರ್ಮ ಕುಮಾರ್ ಹೇಳಿದರು. ಸರ್ವೋದಯ ಶಿಕ್ಷಣ ಸಂಸ್ಥೆಯ ಶಾಲಾ ಕಾಲೇಜುಗಳ ವತಿಯಿಂದ ಆಚರಿಸಲಾದ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ, ಗೌರವ ವಂದನೆಯನ್ನು ಸ್ವೀಕರಿಸಿ ಮಾತನಾಡಿದ ಅವರು, ದಾಸ್ಯದಲ್ಲಿ ಹುಟ್ಟಿ ದಾಸ್ಯದಲ್ಲಿ ಜನ ಸಾಯುತ್ತಿದ್ದ ಕಾಲ ಹಿಂದಿತ್ತು. ನಾವೆಲ್ಲರೂ ಭಾಗ್ಯವಂತರು ಇಂದು ಪ್ರಜಾತಂತ್ರ, ಗಣರಾಜ್ಯ, ಜನಗಳಿಂದ, ಜನಗಳಿಗಾಗಿ, ಜನಗಳಿಗೋಸ್ಕರ ನಡೆಯುವ ಒಂದು ಆಡಳಿತ. ನಾವೇ ಆಯ್ಕೆ ಮಾಡಿರುವ ಪ್ರತಿನಿಧಿಗಳು. ಹಾಗಾಗಿ ಬಹಳ ಹೆಮ್ಮೆಯಿಂದ ಗಣರಾಜ್ಯೋತ್ಸವವನ್ನು ಆಚರಿಸಬೇಕು. ಹಾಗೆಯೇ ನೀವು ಮುಂದೆ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವಾಗ ಹಣಕ್ಕೆ, ಜಾತಿಗೆ, ಧರ್ಮಕ್ಕೆ ನಿಮ್ಮ ಮೌಲ್ಯಯುತವಾದ ಮತಗಳನ್ನು ಮಾರಿಕೊಳ್ಳಬೇಡಿ. ಕೈ ಬಾಯಿ ಶುದ್ಧವಾಗಿರಿಸಿಕೊಂಡು, ಆತ್ಮ ಸಾಕ್ಷಿಗೆ ಅನುಗುಣವಾಗಿ, ಭ್ರಷ್ಟಾನಿಗಿರದ…

Read More

ತುಮಕೂರು: ಭಾರತ ಸಂವಿಧಾನ ಜಗತ್ತಿನಲ್ಲಿಯೇ ದೊಡ್ಡದಾದ, ವಿಸ್ತಾರವಾದ ಭಾರತೀಯರಿಗೆ ತಮ್ಮ ಹಕ್ಕುಗಳನ್ನು ಕೊಟ್ಟ ಸಂವಿಧಾನವಾಗಿದೆ. ಏಕೆಂದರೆ ಭಾರತದಲ್ಲಿ ಬಹಳಷ್ಟು ಧರ್ಮಗಳಿವೆ, ಭಾಷೆಗಳಿವೆ, ಜಾತಿಗಳಿವೆ. ಭೌಗೋಳಿಕವಾಗಿಯೂ ವೈವಿಧ್ಯತೆಯಿಂದ ಕೂಡಿದೆ. ಇವೆಲ್ಲವನ್ನೂ ಗೌರವಿಸಿ, ಅವುಗಳಿಗೆ ಬೇಕಾದ ಹಕ್ಕು ಮತ್ತು ಕರ್ತವ್ಯಗಳನ್ನು ಕೊಟ್ಟಂತದ್ದು ಸಂವಿಧಾನ. ಹಾಗಾಗಿ ಭಾರತೀಯ ಸಂವಿಧಾನ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದುದು ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣದ ಕಾರ್ಯದರ್ಶಿಗಳಾದ ಎನ್.ಬಿ.ಪ್ರದೀಪ್ ಕುಮಾರ್ ರವರು ಅಭಿಪ್ರಾಯಪಟ್ಟರು. ಅವರು ನಗರದ ವಿದ್ಯಾವಾಹಿನಿ, ವಿದ್ಯಾನಿಧಿ ಪದವಿ ಪೂರ್ವ ಕಾಲೇಜು, ವಿದ್ಯಾವಾಹಿನಿ ಐಟಿಐ ಕಾಲೇಜುಗಳ ವತಿಯಿಂದ ಜ.26 ರಂದು ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ರವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನವನ್ನು 1950 ಜನವರಿ 26 ರಂದು ಅಧಿಕೃತವಾಗಿ ಜಾರಿಗೆ ತಂದು, ಸರ್ವತಂತ್ರ ಸ್ವತಂತ್ರ ಗಣರಾಜ್ಯವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಳವಡಿಸಿಕೊಂಡು ಬದುಕುತ್ತಿರುವುದರಿಂದ ಭಾರತ ಪ್ರಗತಿಯತ್ತ ಸಾಗುತ್ತಿದೆ. ವಿಶೇಷವಾಗಿ ಕಳೆದ 30 ವರ್ಷಗಳಲ್ಲಿ ಇಂಟರ್ನೆಟ್ ಬಂದ ಮೇಲೆ ಇನ್ನಷ್ಟು ವೇಗವಾಗಿ ಪ್ರಗತಿಯತ್ತ ಸಾಗುತ್ತಿರುವುದು ಸಂತೋಷಕರವಾದುದು. ಭಾರತದಲ್ಲಿ ನೈಸರ್ಗಿಕ…

Read More

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಹಂದಿಕೇರಾ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಶಾಲೆಯ ಎಸ್‌ಡಿಎಂಸಿ (SDMC) ಅಧ್ಯಕ್ಷರಾದ ಉಮಾಕಾಂತ ಬೋಸ್ಲೆ ಹಾಗೂ ಜ್ಞಾನೋಬಾ ವಾಗ್ಮಾರೆ ಅವರು ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯಗುರುಗಳಾದ ರೋಹಿದಾಸ್ ಮೆತ್ರೆ ಹಾಗೂ ಆರ್.ಆರ್. ಪಾಟೀಲ್ ಅವರು ಗಣರಾಜ್ಯೋತ್ಸವದ ಮಹತ್ವದ ಕುರಿತು ಪ್ರಾಸ್ತವಿಕ ನುಡಿಗಳನ್ನಾಡಿ, ಆಗಮಿಸಿದ ಗಣ್ಯರನ್ನು ಸ್ವಾಗತಿಸಿದರು. ಗಣರಾಜ್ಯೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಕ್ಕಳ ಭಾಷಣ ಸ್ಪರ್ಧೆ ಹಾಗೂ ಕ್ರೀಡಾಕೂಟಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿಶೇಷವಾಗಿ, 2025ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಗ್ರಾಮದ ಹಿರಿಯರ ಸಮ್ಮುಖದಲ್ಲಿ ಗೌರವಿಸಲಾಯಿತು. ಉಮಕಾಂತ್ ನಾಗಮಾರಪಳ್ಳಿ ಅಭಿಮಾನಿ ಬಳಗದ ವತಿಯಿಂದ ಅಮೂಲ್ ಬಿರಾದಾರ್ ಅವರು ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಲ್ಲರಿಗೂ ಶಂಕರ ಭೋಸಲೆ ಅವರು ಭೋಜನದ ವ್ಯವಸ್ಥೆ ಮಾಡಿದ್ದರು. ಇಡೀ…

Read More

ಕೋಲಾರ: ಜಿಲ್ಲೆಯಲ್ಲಿ ರೈತ ಸಂಘದ ನಾಯಕನೊಬ್ಬನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪ ಕೇಳಿ ಬಂದಿದ್ದುಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷ ರಾಮೇಗೌಡ ಎಂಬಾತನನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: ಆರೋಪಿ ರಾಮೇಗೌಡ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ದೌರ್ಜನ್ಯದ ಪರಿಣಾಮ ಬಾಲಕಿ ಇದೀಗ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಬಾಲಕಿಯ ಕುಟುಂಬಸ್ಥರಿಗೆ ಈ ವಿಷಯ ತಿಳಿದ ತಕ್ಷಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸ್ ಕ್ರಮ: ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಬಂಗಾರಪೇಟೆ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ರಾಮೇಗೌಡನನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ರೈತರ ಹಕ್ಕುಗಳಿಗಾಗಿ ಹೋರಾಡಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೇ ಇಂತಹ ನೀಚ ಕೃತ್ಯದಲ್ಲಿ ಭಾಗಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ…

Read More

ತುಮಕೂರು: ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚೆಗೆ ಅಪಘಾತಗಳ ಸರಣಿ ಮುಂದುವರಿದಿದ್ದು, ಪ್ರಯಾಣಿಕರಲ್ಲಿ ಭೀತಿ ಮೂಡಿಸಿದೆ. ಕಳೆದ ಕೇವಲ ಒಂದು ತಿಂಗಳ ಅವಧಿಯಲ್ಲಿ (ಡಿಸೆಂಬರ್ 25 ರಿಂದ ಜನವರಿ 26 ರವರೆಗೆ) ಸಂಭವಿಸಿದ ವಿವಿಧ ರಸ್ತೆ ಅಪಘಾತಗಳಲ್ಲಿ ಬರೋಬ್ಬರಿ 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತಗಳ ಸರಣಿ: ಡಿಸೆಂಬರ್ 25: ಹಿರಿಯೂರು ಬಳಿ ಖಾಸಗಿ ಬಸ್ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಮಗು ಸೇರಿದಂತೆ 7 ಮಂದಿ ದುರ್ಮರಣಕ್ಕೀಡಾಗಿದ್ದರು. ಜನವರಿ 1: ತುಮಕೂರು ಹೊರವಲಯದ ಕೋರಾ ಬಳಿ ಬೈಕ್ ಸವಾರನ ಸಾವು. ಜನವರಿ 9: ವಸಂತನರಸಾಪುರ ಬಳಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಮಗು ಸೇರಿದಂತೆ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದರು. ಜನವರಿ 26: ನೆಲಹಾಳ್ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸಾಫ್ಟ್‌ವೇರ್ ಎಂಜಿನಿಯರ್‌ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರಮುಖ ಕಾರಣಗಳು: ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಹೆಚ್ಚಿನ ಅಪಘಾತಗಳಿಗೆ ರಸ್ತೆ ಬದಿಯಲ್ಲಿ ಅಸಮರ್ಪಕವಾಗಿ ನಿಲ್ಲಿಸುವ ಲಾರಿಗಳೇ ಕಾರಣ ಎಂಬ…

Read More

ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧೀಜಿಯವರ ಹೆಸರನ್ನು ಇಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮಹಾತ್ಮ ಗಾಂಧೀಜಿಯವರ ಹೆಸರನ್ನು ಗ್ರಾಮೀಣ ಮಟ್ಟದಲ್ಲಿ ಶಾಶ್ವತಗೊಳಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಡಿ.ಕೆ.ಶಿವಕುಮಾರ್ ಈ ಘೋಷಣೆ ಮಾಡಿದರು. ಕೇಂದ್ರದ ವಿರುದ್ಧ ವಾಗ್ದಾಳಿ: ಕೇಂದ್ರ ಸರ್ಕಾರವು ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದೆ ಮತ್ತು ಬಡವರ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು. ಮನ್ರೇಗಾ (MNREGA) ಯೋಜನೆಗಾಗಿ ಆಗ್ರಹ: ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಸಿಎಂ ಸಿದ್ದರಾಮಯ್ಯ ಕಿಡಿ: ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರದ ಹೊಸ ಯೋಜನೆಗಳು ಬಡವರ ಹಿತದೃಷ್ಟಿಯಿಂದ ಇಲ್ಲ. ಬಡವರ ಪರವಾಗಿ ಹೋರಾಡುವ ಏಕೈಕ ಪಕ್ಷ ಕಾಂಗ್ರೆಸ್ ಎಂದು ಹೇಳಿದರು.…

Read More