Subscribe to Updates
Get the latest creative news from FooBar about art, design and business.
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
- ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
- ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
- ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
- ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
Author: admin
ಬೆಂಗಳೂರು: ಸ್ಕೂಟರ್ ಹಾಗೂ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಾವಿಗೀಡಾದ ಘಟನೆ ಮಲ್ಲೇಶ್ವರಂನ ಹರಿಶ್ಚಂದ್ರ ಘಾಟ್ ಬಳಿ ನಡೆದಿದೆ. ಡಿಗ್ರಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕುಸುಮಿತ (22) ಮೃತ ವಿದ್ಯಾರ್ಥಿನಿಯಾಗಿದ್ದಾರೆ. ಕುಸುಮಿತ ಸ್ಕೂಟರ್ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ. ಕೂಡಲೇ ಆಕೆಯನ್ನು ಸ್ಥಳೀಯ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾರೆ.
ಜಾರ್ಖಂಡ್: ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ ಚಂಪೈ ಸೊರೆನ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಂಚಿಯ ರಾಜಭವನದ ದರ್ಬಾರ್ ಹಾಲ್ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆದಿದ್ದು, ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಚಂಪೈ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮೇಲೆ ಭೂಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪವಿದ್ದು, ಅವರು ಈಗಾಗಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕಾರಣದಿಂದ ಚಂಪೈ ಸೊರೆನ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಗುರುವಾರ ಚಂಪೈ ಸೊರೇನ್ ಅವರನ್ನು ಭೇಟಿ ಮಾಡಿದ ಕೆಲವೇ ಗಂಟೆಗಳ ನಂತರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಮಾಣವಚನ ಸ್ವೀಕರಿಸಲು ಆಹ್ವಾನ ಕೊಟ್ಟಿದ್ದರು. ಜಾರ್ಖಂಡ್ನ ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್ಜೆಡಿ ಮೈತ್ರಿಕೂಟವು 81 ಸದಸ್ಯರ ವಿಧಾನಸಭೆಯಲ್ಲಿ 47 ಶಾಸಕರನ್ನು ಹೊಂದಿದೆ. ಬಹುಮತಕ್ಕೆ 41 ಸ್ಥಾನಗಳ ಅಗತ್ಯವಿದೆ. ಪ್ರಸ್ತುತ 43 ಶಾಸಕರು ಚಂಪೈ ಸೊರೇನ್ ಅವರನ್ನು ಬೆಂಬಲ ಸೂಚಿಸಿದರು.
ಬೆಂಗಳೂರಿನಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿರುವುದರ ಮಧ್ಯೆಯೇ 18 ವರ್ಷ ವಯಸ್ಸಾಗದ, ಚಾಲನಾ ಪರವಾನಗಿ ಹೊಂದಿಲ್ಲದ ಶಾಲೆ, ಕಾಲೇಜು ವಿದ್ಯಾರ್ಥಿಗಳು ಬೈಕ್ ರೈಡ್ ಮಾಡುವ ಪ್ರಕರಣಗಳೂ ಹೆಚ್ಚಾಗಿವೆ. ಡಿಎಲ್ ಇಲ್ಲದೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಬೈಕ್ ರೈಡ್ ಮಾಡಿದ ವಿಚಾರವಾಗಿ ಒಂದೇ ದಿನದಲ್ಲಿ ನಗರದಲ್ಲಿ 1800 ಮಕ್ಕಳ ಪೋಷಕರಿಗೆ ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ. 17 ರಿಂದ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಇಲ್ಲ ಅಂದರೆ ದಂಡ ಫಿಕ್ಸ್ ಈಗಾಗಲೇ ರಾಜ್ಯ ಸಾರಿಗೆ ಇಲಾಖೆ ಹೆಚ್ಎಸ್ಆರ್ಪಿ ನೇಮ್ ಬೋರ್ಡ್ ಹಾಕಿಸಿಕೊಳ್ಳಲು ವಾಹನ ಸವಾರರಿಗೆ ಡೆಡೈನ್ ನೀಡಲಾಗಿದೆ. ಅದರೆ ಜನರು ಯಾರು ಕೂಡ ಹೊಸ ನಂಬರ್ ಪ್ಲೇಟ್ ಗಳನ್ನು ಹಾಕಿಸಿಕೊಳ್ಳಲು ಮುಂದಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ದಂಡ ಪ್ರಯೋಗಕ್ಕೆ ಮುಂದಾಗಿದೆ. ಫೆ. 17 ರಿಂದ ನಂಬರ್ ಪ್ಲೇಟ್ ಇಲ್ಲ ಅಂದರೆ ದಂಡ ಖಚಿತವಾಗಿದೆ. ಮೊದಲನೆ ಬಾರಿ ಸಿಕ್ಕಿಬಿದ್ದರೆ 1 ಸಾವಿರ, 2ನೇ ಬಾರಿ ಸಿಕ್ಕಿಬಿದ್ದರೆ 2 ಸಾವಿರ ದಂಡ ಹಾಕಲಾಗುತ್ತದೆ.
ಕರ್ನಾಟಕ ಸಿವಿಲ್ ಸೇವಾ(ಸಾಮಾನ್ಯ ನೇಮಕಾತಿ)(ತಿದ್ದುಪಡಿ)ನಿಯಮಗಳು, 2024ಕ್ಕೆ ಸಮಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಿದ ನಂತರ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ.2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ನಿರ್ಧರಿಸಿತು. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತ ರೂ.142.47 ಕೋಟಿ ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ 455 ಕೋಟಿ ರೂ.ಗಳಿಗೆ ಅಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಗೊಂಡಿರುವ 110 ಹಳ್ಳಿಗಳಲ್ಲಿ ಬಿಟ್ಟುಹೋಗಿರುವ ಪ್ರದೇಶಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 2ನೇ ಹಂದಲ್ಲಿ 208.45 ಕೋಟಿ ಅಂದಾಜು ಮೊತ್ತದ ಕುಡಿಯು ನೀರಿನ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಾಜ್ಯದ ಸಹಕಾರ ಸಂಘಗಳ ಮೂಲಕ ರೈತರು ಸಾಲ ಪಡೆದು 31-12-2023 ಕ್ಕೆ…
ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್ ಗಳ ಪ್ರವೇಶಾತಿಗೆ 2024ರ ಮಾರ್ಚ್ 31 ಕಡೆಯ ದಿನಾಂಕವಾಗಿರುತ್ತದೆ. (ಬಿ.ಇಡಿ ಕೋರ್ಸ್ ಗೆ ಸಿ.ಇ.ಟಿ ಮುಖಾಂತರ ಪ್ರವೇಶಾತಿ ಇದ್ದು (ವಿದ್ಯಾರ್ಹತೆ: ಪದವಿ ವಿದ್ಯಾರ್ಹತೆ ಜೊತೆಗೆ ಶಿಕ್ಷಕ ವೃತ್ತಿಯಲ್ಲಿರಬೇಕು ಮತ್ತು TCH/D.ED/D.El.Ed/B.El.Ed and Equivalent ಶಿಕ್ಷಣ ಪಡೆದಿರಬೇಕು.) ಸಿ.ಇ.ಟಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:03/03/2024 ಮತ್ತು ಸಿ.ಇ.ಟಿ ಪರೀಕ್ಷಾ ದಿನಾಂಕ:10/03/2024). “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ…
ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕೆಲ ಬಿಜೆಪಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಸ್.ಎ ರಾಮದಾಸ್ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಎಸ್ ಎ ರಾಮದಾಸ್, ಎನ್ ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಗುರಿ ಹೊಂದಿದೆ. ಟಿಕೆಟ್ ನೀಡುವ ವೇಳೆ ಎಲ್ಲಾ ಅಂಶವನ್ನ ಪಕ್ಷ ಗಮನಿಸುತ್ತದೆ. ಗೆಲುವು ಒಂದೇ ಮಾನದಂಡ. ಮಾಧ್ಯಮಗಳಿಗೆ ಇರುವ ಮಾಹಿತಿ ಪ್ರಕಾರ ನೀವು ಚರ್ಚೆ ಮಾಡುತ್ತೀರಾ ಟಿಕೆಟ್ ನೀಡುವ ಕುರಿತು ಯಾವುದೇ ಸಭೆ ನಡೆದಿಲ್ಲ. ನಮ್ಮ ಬಳಿ ಯಾವುದೇ ಮಾಹಿತಿ ಕೇಳಿಲ್ಲ ಎಂದರು. ಫೆಬ್ರವರಿ 5ರ ಬಳಿಕ ನಾಲ್ಕು ಕ್ಷೇತ್ರಗಳಿಗೂ ತೆರಳುತ್ತೇನೆ. ಕಾರ್ಯಕರ್ತರು, ಮುಖಂಡರು ನೀಡುವ ಅಭಿಪ್ರಾಯವನ್ನ ಹೈಕಮಾಂಡ್ ಗೆ ತಿಳಿಸುತ್ತೇವೆ. ಟಿಕೆಟ್ ನೀಡೋದು ಬಿಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಎಸ್.ಎ. ರಾಮದಾಸ್ ತಿಳಿಸಿದರು.
ಪ್ರತ್ಯೇಕ ದೇಶ ಕೂಗು ಕುರಿತು ಸಂಸದ ಡಿ.ಕೆ ಸುರೇಶ್ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಡಾ.ಜಿ.ಪರಮೇಶ್ವರ್, ದೇಶ ಒಗ್ಗೂಡಿಸಬೇಕೆ ವಿನಃ ಒಡೆಯಬಾರದು ದೇಶಕ್ಕಾಗಿ ಹಲವರು ಜೀವ ಕಳೆದುಕೊಂಡಿದ್ದಾರೆ. ಡಿ.ಕೆ ಸುರೇಶ್ ಯಾಕೆ ಹೀಗೆ ಹೇಳಿದರು ಗೊತ್ತಿಲ್ಲ ಪಾಕ್ ವಿಭಜನೆಯಾದಾಗ ನಾವು ಹುಟ್ಟಿರಲಿಲ್ಲ. ಚರಿತ್ರೆ ನೋಡಿದಾಗ ನೋವಾಗುತ್ತದೆ. ನಾವು ಒಂದು ರಾಷ್ಟ್ರ ಎಂಬ ನಂಬಿಕೆ ಇಟ್ಟವರು. ಗಾಂಧಿ ಸೇರಿ ಹಲವರು ದೇಶಕ್ಕಾಗಿ ಹೋರಾಡಿದ್ದಾರೆ ಎಂದು ತಿಳಿಸಿದರು. ಲೋಕಸಭೆ ಚುನಾವಣೆ ವಿಚಾರವಾಗಿ ಚರ್ಚೆ ಮಾಡಿದ್ದೇವೆ. ಚುನಾವಣೆ ದೃಷ್ಠಿಯಿಂದ ಚರ್ಚೆ ಮಾಡಿದ್ದೇವೆ. ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆಯಾಗಿದೆ ಎಂದು ಪರಮೇಶ್ವರ್ ತಿಳಿಸಿದರು.
ಶಿವಮೊಗ್ಗ : ಸುಮಾರು 3 ಸಾವಿರ ಹಾಫ್ ಹೆಲ್ಮೆಟ್ ಗಳು, 70 ಸೈಲೆನ್ಸರ್ಗಳನ್ನು ಸಂಚಾರ ಪೊಲೀಸರು ನಾಶಪಡಿಸಿದ್ದಾರೆ. ಸರ್ಕಲ್ ನಲ್ಲಿ ಎಲ್ಲವನ್ನು ಸಾಲಾಗಿ ಜೋಡಿಸಿ ಅವುಗಳ ಮೇಲೆ ರೋಡ್ ರೋಲರ್ ಹತ್ತಿಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಸಂಚಾರ ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಕುಮಾರ್ ಸೇರಿದಂತೆ ಪೂರ್ವ ಮತ್ತು ಪಶ್ಚಿಮ ಸಂಚಾರ ಠಾಣೆಯ ಸಿಬ್ಬಂದಿ ಇದ್ದರು. ಕಾರ್ಯಾಚರಣೆಯನ್ನು ವೀಕ್ಷಿಸಲು ಗೋಪಿ ಸರ್ಕಲ್ ನಲ್ಲಿ ದೊಡ್ಡ ಸಂಖ್ಯೆಯ ಜನ ಜಮಾಯಿಸಿದ್ದರು. ಹಾಫ್ ಹೆಲ್ಮೆಟ್ ಗಳ ವಿರುದ್ಧ ಸಂಚಾರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿರುವುದು ಇದೆ ಮೊದಲಲ್ಲ. ಕೆಲವು ತಿಂಗಳ ಹಿಂದೆ ಸಾವಿರಾರು ಹಾಫ್ ಹೆಲ್ಮೆಟ್ಗಳನ್ನು ದ್ವಿಚಕ್ರ ವಾಹನ ಸವಾರರಿಂದ ವಶಕ್ಕೆ ಪಡೆದು ನಾಶ ಪಡಿಸಿದ್ದರು. ಇನ್ನು ಹಾಫ್ ಹೆಲ್ಮೆಟ್ ಮಾರಾಟ ಮಾಡುತ್ತಿದ್ದ ಅಂಡಿಗಳ ಮೇಲು ದಾಳಿ ನಡೆಸಿದ್ದರು. ಹಾಫ್ ಹೆಲ್ಮೆಟ್ನಿಂದ ವಾಹನ ಸವಾರರಿಗೆ ರಕ್ಷಣೆ ಸಿಗುವುದಿಲ್ಲ. ಐಎಸ್ ಐ ಗುರುತಿನ ಹೆಲ್ಮೆಟ್ ಧರಿಸುವಂತೆ ಪೊಲೀಸರು ಜಾಗೃತಿ ಮೂಡಿಸಿದ್ದರು. ಇನ್ನು, ಬೈಕುಗಳಿಗೆ ಕರ್ಕಶ ಶಬ್ದ…
ಬ್ಯಾಂಕಿಂಗ್ ನಿಯಮಗಳ ಉಲ್ಲಂಘನೆ ಹಿನ್ನೆಲೆ ಪೇಟಿಎಂಗೆ (Paytm) ಆರ್ಬಿಐ (RBI) ನೋಟಿಸ್ ನೀಡಿದ್ದು, ಪೇಟಿಎಂ ಹೊಸ ಡೆಪಾಸಿಟ್ ಪಡೆಯುವಂತಿಲ್ಲ ಎಂದು ಎಚ್ಚರಿಕೆ ನೀಡಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಗೆ ಆರ್ ಬಿಐ ನಿರ್ಬಂಧ ಹೇರಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಯಾವುದೇ ಹೊಸ ಖಾತೆ ರಚಿಸಲು ಮತ್ತು ಡೆಪಾಸಿಟ್ ಪಡೆಯುವಂತಿಲ್ಲ. ವಿವಿಧ ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಗೆ ನೋಟಿಸ್ (Notice) ನೀಡಲಾಗಿದೆ. ಇನ್ನು ಫೆಬ್ರವರಿ 29ರ ನಂತರ ಪೇಮೆಂಟ್ಸ್ ಬ್ಯಾಂಕ್ ಖಾತೆಗೆ ವ್ಯಾಲಟ್, ಫಾಸ್ಟ್ಟ್ಯಾಗ್ ಇತ್ಯಾದಿ ಪ್ರೀಪೇಯ್ಡ್ ಯಂತ್ರಗಳಿಗೆ ಟಾಪ್ಅಪ್ ಹಾಕಿಸುವಂತಿಲ್ಲ ಎಂದು ಆರ್ ಬಿಐ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ ಎನ್ನಲಾಗಿದೆ.
ಬಿಗ್ ಬಾಸ್ ಕನ್ನಡ ಸೀಸನ್ -10 ಇತ್ತೀಚೆಗೆ ಮುಕ್ತಾಯ ಕಂಡಿದೆ. ಡ್ರೋನ್ ಪ್ರತಾಪ್ ಅವರು ರನ್ನರ್ ಅಪ್ ಆಗಿ ಹೊರ ಬಂದಿದ್ದಾರೆ. ಸದ್ಯ ಮೀಡಿಯಾಗಳಲ್ಲಿ ಸಂದರ್ಶನದಲ್ಲಿ ಬ್ಯುಸಿಯಾಗಿದ್ದರೂ ಕೆಲವೊಂದು ಕಡೆಯಿಂದ ಆಫರ್ ಗಳು ಕೂಡ ಇವರನ್ನರಸಿ ಬರುತ್ತಿವೆ. ಹೌದು, ಮಾಹಿತಿ ಪ್ರಕಾರ ಬಿಗ್ ಬಾಸ್ ನಲ್ಲಿ ರನ್ನರ್ ಅಪ್ ಆಗಿ ಮಿಂಚಿದ ಡ್ರೋನ್ ಪ್ರತಾಪ್ ಅವರು ಮತ್ತೊಂದು ರಿಯಾಲಿಟೀ ಶೋ ಮೂಲಕ ಜನರೆದುರು ಬರೋದಕ್ಕೆ ರೆಡಿಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಿಮ್ಗೆಲ್ಲಾ ʼಗಿಚ್ಚಿ ಗಿಲಿ ಗಿಲಿʼ ಕಾರ್ಯಕ್ರಮದ ಬಗ್ಗೆ ಗೊತ್ತಿದೆ. ಕಳೆದೆರೆಡು ಸೀಸನ್ ಬಳಿಕ ಇದೀಗ ಮೂರನೇ ಸೀಸನ್ ಆರಂಭಕ್ಕೆ ದಿನಗಣನೆ ಆರಂಭಗೊಂಡಿದೆ. ಹೀಗಾಗಿ ಈ ಕಾರ್ಯಕ್ರಮದಲ್ಲಿ ಈ ಬಾರಿ ಹೊಸ ಸ್ಪರ್ಧಿಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಇದರಲ್ಲಿ ಈಗಷ್ಟೇ ಬಿಗ್ ಬಾಸ್ ಕಾರ್ಯಕ್ರಮ ಮುಗಿಸಿರುವ ಸ್ಪರ್ಧಿಗಳು ಕೂಡ ಇರಲಿದ್ದಾರೆ ಎನ್ನುವ ಬಗೆಗಿನ ಸುದ್ದಿ ಹರಿದಾಡುತ್ತಿದೆ. ಸದ್ಯ ಬಂದಿರೋ ಮಾಹಿತಿ ಪ್ರಕಾರ ಬಿಗ್ ಬಾಸ್ ರನ್ನರ್ ಅಪ್ ಡ್ರೋನ್ ಪ್ರತಾಪ್ ಅವರು ʼಗಿಚ್ಚಿ…