Subscribe to Updates
Get the latest creative news from FooBar about art, design and business.
- ಅಂತರಸನಹಳ್ಳಿಯಲ್ಲಿ ಜರ್ಮನಿಯ ಮ್ಯಾನ್–ಹುಮ್ಮೆಲ್ ಪರಿಸರಸ್ನೇಹಿ ಘಟಕ ಆರಂಭ
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
- ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
- ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
- ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
- ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
Author: admin
ಮೈಸೂರು: ಸಾಲಗಾರರ ಕಿರುಕುಳಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಆಲನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಶ್ವ (34), ಸುಷ್ಮ (28) ಆತ್ಮಹತ್ಯೆಗೆ ಶರಣಾದ ದಂಪತಿಯಾಗಿದ್ದಾರೆ. ದಂಪತಿ ತಮಗೆ ಪರಿಚಯಸ್ಥನಾಗಿದ್ದ ಶಿವು ಎಂಬಾತನಿಗೆ ಬೇರೊಬ್ಬರಿಂದ 5 ಲಕ್ಷ ರೂ. ಸಾಲ ಕೊಡಿಸಿದ್ದರು. ಈ ಸಾಲವನ್ನು ಶಿವು ತೀರಿಸಿರಲಿಲ್ಲ. ಸಾಲಕೊಟ್ಟವರು ಹಣ ಕೊಡುವಂತೆ ವಿಶ್ವನನ್ನು ಕೇಳುತ್ತಿದ್ದರು ಎಂದು ತಿಳಿದು ಬಂದಿದೆ. ಇದರಿಂದ ನೊಂದ ದಂಪತಿ ಸಾಲ ನೀಡಿದ್ದ ರಾಜಣ್ಣನ ವಿರುದ್ಧ ಕಿರುಕುಳ ಆರೋಪ ಮಾಡಿ, ವಿಡಿಯೋ ಮಾಡಿ ಸಾಮಾಜಿಕ ಜಲತಾಣದಲ್ಲಿ ವಿಡಿಯೋ ಅಪ್ ಲೋಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಧ್ಯಪ್ರದೇಶ: ಪೋಷಕರ ಹಣೆಗೆ ಗನ್ ಇಟ್ಟು, ಪೋಷಕರ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ರಾತ್ರಿ ಭನ್ವಾರ್ ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಎರಡು ದಿನಗಳ ನಂತರ ದೂರು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ರಿಷಿಕೇಶ್ ಮೀನಾ ತಿಳಿಸಿದ್ದಾರೆ. ಒಬ್ಬ ಶಂಕಿತನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಬಾಲಕಿಯ ಕುಟುಂಬವು ಒಂದು ತಿಂಗಳ ಹಿಂದೆಯಷ್ಟೇ ಆ ಪ್ರದೇಶಕ್ಕೆ ತೆರಳಿತ್ತು, ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಕಲಬುರಗಿ: ಚಾಲಕನ ನಿರ್ಲಕ್ಷ್ಯದಿಂದ ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಶಾಲಾ ವಾಹನ ಹರಿದು ಮಗು ಸಾವನ್ನಪ್ಪಿರುವಂತಹ ಘಟನೆ ನಗರದ ಸಂಗಮೇಶ್ವರ ಕಾಲೋನಿಯಲ್ಲಿ ನಡೆದಿದೆ. ಮನೋಜ್(2) ಮೃತ ಮಗು. ನ್ಯಾಷನಲ್ ಪಬ್ಲಿಕ್ ಶಾಲೆಗೆ ಸೇರಿದ ವಾಹನ ಹರಿದು ಮಗು ಮೃತಪಟ್ಟಿದೆ. ವಿದ್ಯಾರ್ಥಿಗಳನ್ನು ಶಾಲೆಯಿಂದ ಮನೆಗೆ ಬಿಟ್ಟು ವಾಹನ ತೆರಳುತ್ತಿರುವಾಗ ಈ ಘಟನೆ ನಡೆದಿದೆ.
ಆನೇಕಲ್: ಬಿಬಿಎ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಿನ್ನೆ ಬೆಂಗಳೂರಿನ ಹೊಸ ರೋಡ್ ಬಳಿಯ ಪಿಇಎಸ್ ಕಾಲೇಜಿನಲ್ಲಿ ನಡೆದಿದೆ. ಇಂಜಿನಿಯರಿಂಗ್ ವಿಭಾಗದ ಆರನೇ ಮಹಡಿಯಿಂದ ಹಾರಿ ವಿಘ್ನೇಶ್.ಕೆ(19) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ದುರ್ದೈವಿ ಹೊಂಗಸಂದ್ರದ ರಾಘವೇಂದ್ರ ಲೇಔಟ್ ನಿವಾಸಿಯಾಗಿದ್ದು, ಬಿಬಿಎ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿದ್ದ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಎಚ್.ಡಿ.ಕೋಟೆ: ಪತ್ನಿಯ ಶೀಲ ಶಂಕಿಸಿದ ಪತಿಯೋರ್ವ 12 ವರ್ಷಗಳಿಂದ ಮನೆ ಬಾಗಿಲಿಗೆ ಮೂರು ಬೀಗ ಜಡಿದು ಪತ್ನಿಯನ್ನು ದಿಗ್ಬಂಧನಲ್ಲಿರಿಸಿದ ಅಮಾನವೀಯ ಕೃತ್ಯ ಎಚ್.ಡಿ.ಕೋಟೆ ತಾಲೂಕಿನ ಎಚ್.ಮಟಕೆರೆಯಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲೂಕಿನ ಹೈರಿಗೆ ಗ್ರಾಮದ ಸುಮಾ ಮನೆಯಲ್ಲಿ ದಿಗ್ಬಂಧನದ ಜೀವನ ನಡೆಸುತ್ತಿರುವ ಮಹಿಳೆಯಾಗಿದ್ದಾರೆ. ಇವರ ಪತಿ ಸಣ್ಣಾಲಯ್ಯನ ವಿಪರೀತ ಅನುಮಾನದ ಪ್ರವೃತ್ತಿಯಿಂದಾಗಿ 12 ವರ್ಷಗಳ ಕಾಲ ಪತ್ನಿ ಅಜ್ಞಾತ ವಾಸ ಅನುಭವಿಸಿದ್ದಾಳೆ. 12 ವರ್ಷದ ಹಿಂದೆ ಸಣ್ಣಾಲಯ್ಯನನ್ನು ವಿವಾಹವಾಗಿದ್ದ 3ನೇ ಪತ್ನಿ ಸುಮಾಗೆ ಇಬ್ಬರು ಮಕ್ಕಳಿದ್ದಾರೆ. ಸಣ್ಣಾಲಯ್ಯ ಸುಮಾ ಅವರನ್ನು ವಿವಾಹವಾಗುವುದಕ್ಕೂ ಮೊದಲು ಎರಡು ವಿವಾಹವಾಗಿದ್ದ. ಈತನ ಕಾಟ ಸಹಿಸಲಾಗದೇ ಅವರು ದೂರವಾಗಿದ್ದರು. ವಿವಾಹವಾದಂದಿನಿಂದ ಪತ್ನಿಯ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ ಸಣ್ಣಾಲಯ್ಯ ಮನೆಯ ಬಾಗಿಲಿಗೆ ಮೂರು ಬೀಗ ಜಡಿದು ಆಕೆಯನ್ನು ದಿಗ್ಬಂಧನದಲ್ಲಿ ಜೀವನ ಕಳೆಯುವಂತೆ ಮಾಡಿದ್ದ. ಮನೆಯ ಕಿಟಕಿಗಳನ್ನೂ ಬಿಡದೇ ಮುಚ್ಚಿ, ಭದ್ರಪಡಿಸಿ ಪತ್ನಿ ಯಾರೊಂದಿಗೂ ಮಾತನಾಡದಂತೆ ಎಚ್ಚರವಹಿಸಿದ್ದ. ಮನೆಯೊಳಗೆ ಶೌಚಾಲಯ ಕೂಡ ಇಲ್ಲದೇ ಪತ್ನಿ ಇಡೀ ದಿನ ಮನೆಯೊಳಗೆ ಕೂರಬೇಕಿತ್ತು. ಬಕೆಟ್…
ಇಂದು ಕೇಂದ್ರವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದು ಇದಕ್ಕೂ ಮುನ್ನವೇ ಬೆಲೆ ಏರಿಕೆ ಬಿಸಿ ತಟ್ಟಿದೆ. ಹೌದು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 14 ರೂ. ಹೆಚ್ಚಳವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1769 ರೂ, ಕೋಲ್ಕತ್ತಾದಲ್ಲಿ 19 ಕೆಜಿ ಸಿಲಿಂಡರ್ ಬೆಲ 1887 ರೂ. ಮುಂಬೈನಲ್ಲಿ 1723 ರೂ. ಚೆನ್ನೈನಲ್ಲಿ 1937 ರೂ. ಆಗಿದೆ.
ನಮ್ಮ ಸರ್ಕಾರ ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರೋತ್ಸಾಹ ನೀಡುವುದರಲ್ಲಿ ಹಿಂದೆ ಬೀಳುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಶಸ್ತಿಗಳ ಆಯ್ಕೆ ವಿಚಾರದಲ್ಲಿ ನಾನು ಬಹಳ ನಿಷ್ಠುರವಾಗಿ ವರ್ತಿಸುತ್ತೇನೆ. ನನ್ನ ಮೇಲೆ ಒತ್ತಡ ಹಾಕುವ ಎಲ್ಲರಿಗೂ ನಾನು ಅಷ್ಟೆ ನಿಷ್ಠುರವಾಗಿ ಹೇಳಿ ಬಿಡುತ್ತೇನೆ. ಸರ್ಕಾರ ಜನರ ನಂಬಿಕೆಗಳನ್ನು ಗೌರವಿಸುತ್ತದೆ ಎಂದರು. ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರ ರವೀಂದ್ರ ಕಲಾಕ್ಷೇತ್ರಕ್ಕೆ ಆಧುನಿಕ ಸ್ಪರ್ಶ ಒದಗಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕ್ರಮಕ್ಕೆ ಸಾಂಸ್ಕೃತಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ವಜ್ರ ಮಹೋತ್ಸವದ ಸಂಭ್ರಮದಲ್ಲಿರುವ ರವೀಂದ್ರ ಕಲಾಕ್ಷೇತ್ರಕ್ಕೆ ಕೇಂದ್ರೀಕೃತ ಹವಾನಿಯಂತ್ರಣ ವ್ಯವಸ್ಥೆ ಸೇರಿ ವಿವಿಧ ಅತ್ಯಾಧುನಿಕ ಸೌಲಭ್ಯಗಳ ಅಳವಡಿಕೆಗೆ ಇಲಾಖೆ ಮುಂದಾಗಿದ್ದು, ಈ ನವೀಕರಣಕ್ಕೆ ₹24 ಕೋಟಿ ವೆಚ್ಚವಾಗಲಿದೆಯೆಂದು ಲೋಕೋಪಯೋಗಿ ಇಲಾಖೆ ಅಂದಾಜಿಸಿದೆ.
ಜೀರಿಗೆ ಮೆಣಸು ಹೆಚ್ಚು ಆರೈಕೆ ಇಲ್ಲದೇ ಅಧಿಕ ಖಾರ ಹೊಂದಿರುವ ಚಿಕ್ಕ ಚಿಕ್ಕ ಮೆಣಸು. ಇದಕ್ಕೆ ಇದೀಗ ಬಾರಿ ಬೇಡಿಕೆ ಬಂದಿದ್ದು, ಇದನ್ನು ನಾನಾ ಹೆಸರುಗಳಿಂದ ಜೀರಿಗೆ ಮೆಣಸು, ಸೂಜಿ ಮೆಣಸು, ಕಾಗೆ ಗಾಂಧಾರಿ, ಕಾಗೆ ಮೆಣಸು, ಪರ್ ಡೇ ಚಿಲ್ಲಿ ಎಂದೆಲ್ಲ ಕರೆಯುತ್ತಾರೆ. ಅಡಿಕೆ ತೋಟದಲ್ಲಿ ಮನೆ ಹತ್ತಿರ ಇದನ್ನು ಕಾಣಬಹುದು, ಮಾತ್ರವಲ್ಲ ಅತೀ ಸುಲಭವಾಗಿ ಬೆಳೆಯುವ ಬೆಳೆಯೂ ಕೂಡ. ಆದರೆ ವಿಪರ್ಯಾಸವೆಂದ್ರೆ ಕಳೆನಾಶಕ ಯಂತ್ರಗಳ ಮುಖಾಂತರ ಕಳೆ ತೆಗೆಯುವಾಗ ಇದೀಗ ಈ ಗಿಡಗಳು ನಾಶವಾಗುತ್ತಿದ್ದು, ತೀರಾ ಅಪರೂಪವಾಗಿ ಬಿಟ್ಟಿದೆ. ಮನೆ ಹಿತ್ತಲಲ್ಲಿ ಬೆಳೆಯುವ ಈ ಮೆಣಸು ಗರಿಷ್ಠ ಔಷಧೀಯ ಗುಣ ಹೊಂದಿದೆ. ಗಾಂಧಾರಿ ಮೆಣಸಿನ ಜ್ಯೂಸ್ ಆರೋಗ್ಯಕ್ಕೂ ಉತ್ತಮ. ಇದರ ಜೊತೆಗೆ ಹೊಟ್ಟೆ ಉಬ್ಬರಿಸುವುದು, ಅಜೀರ್ಣ, ಸಂಧಿವಾತ ನಿವಾರಿಸುವ ಗಾಂಧಾರಿಯು ಕೊಲೆಸ್ಟ್ರಾಲ್, ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಿಸುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗಾಂಧಾರಿ ಮೆಣಸಿನ ರಸವು ಕ್ಷಾರಯುಕ್ತವಾಗಿದೆ. ಇದು ಜಠರ ಮತ್ತು ಕರುಳುಗಳ ಕಾರ್ಯವನ್ನು ವೃದ್ದಿಸುತ್ತದೆ. ಜೊತೆಗೆ ಆಗಾಗ ಕಂಡು ಬರುವಂತಹ…
ಟೋಲ್ ಕಟ್ಟಲು ನಗದು ಪಾವತಿ ಬದಲು ಕೇಂದ್ರ ಸರ್ಕಾರ ಡಿಜಿಟಲ್ ವ್ಯವಸ್ಥೆಯಾದ ಫಾಸ್ಟಾಗ್ ಜಾರಿ ಮಾಡಿದೆ. ಇದೀಗ ಎಲ್ಲೆಡೆ ಫಾಸ್ಟಾಗ್ ಮೂಲಕವೇ ಟೋಲ್ ಹಣ ಸಂಗ್ರಹ ಮಾಡಲಾಗುತ್ತಿದೆ. ಇತ್ತೀಚಿಗೆ ಒಂದೇ ವಾಹನದ ಫಾಸ್ಟಾಗ್ ನ್ನು ಬದಲಿ ವಾಹನಗಳಿಗೆ ಬಳಸುತ್ತಿರುವ ಆರೋಪ ಕೇಳಿ ಬಂದಿತ್ತು. ಹೀಗಾಗಿ ಸರ್ಕಾರ ಹೊಸ ನೀತಿಯಡಿ ಕೆವೈಸಿ ಕಡ್ಡಾಯ ಮಾಡಿತ್ತು. ಇಂದಿನಿಂದ ಅಂದರೆ ಫೆಬ್ರವರಿ 1 ರಿಂದ ಕೆವೈಸಿ ಆಗದ ಫಾಸ್ಟಾಗ್ ನಿಷ್ಕ್ರಿಯಗೊಳ್ಳಲಿದೆ. KYC ಪೂರ್ಣಗೊಂಡಾಗ ಮಾತ್ರ ಫಾಸ್ಟಾಗ್ ಮೂಲಕ ಟೋಲ್ ಪಾವತಿ ಮಾಡಲು ಸಾಧ್ಯವಾಗುತ್ತದೆ. KYC ಮಾಡಿಸಲು ನಿನ್ನೆ ಕೊನೆಯ ದಿನವಾಗಿತ್ತು.
ಆಲ್ಕೋಹಾಲ್ ತ್ಯಜಿಸುವುದರಿಂದ ಇವೆ ಹಲವು ಆರೋಗ್ಯ ಪ್ರಯೋಜನಗಳು: ಆಲ್ಕೋಹಾಲ್ ಸೇವನೆ ಹೆಚ್ಚಾದಾಗ ಫ್ಯಾಟಿ ಲಿವರ್ ಸಮಸ್ಯೆ ಉಂಟಾಗುತ್ತದೆ. ಮದ್ಯಪಾನದಿಂದ ದೂರವಿರುವುದು ನಿದ್ರೆ, ಮೆದುಳಿನ ಕಾರ್ಯ ಮತ್ತು ರಕ್ತದೊತ್ತಡದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೀರ್ಘಕಾಲದ ಮದ್ಯಪಾನದಿಂದ ದೂರವಿರುವುದು ಅನೇಕ ವಿಧದ ಕ್ಯಾನ್ಸರ್, ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ. ಅಲ್ಲದೇ ಮದ್ಯಪಾನವನ್ನು ಹಠಾತ್ ನಿಲ್ಲಿಸುವುದರಿಂದಲೂ ಅನೇಕ ವ್ಯತಿರಿಕ್ತ ಪರಿಣಾಮಗಳಿವೆ. ಹೀಗಾಗಿ, ತೀವ್ರ ವ್ಯಸನ ಹೊಂದಿರುವ ಜನರು ಇದ್ದಕ್ಕಿದ್ದಂತೆ ಮದ್ಯವನ್ನು ನಿಲ್ಲಿಸಬಾರದು. ನೆಲದ ಮೇಲೆ ಮಲಗಿದರೆ ಎಷ್ಟು ಲಾಭ ನೋಡಿ: ಹಾಸಿಗೆಯ ಮೇಲೆ ಮಲಗುವುದಕ್ಕಿಂತ ನೆಲದ ಮೇಲೆ ಮಲಗುವುದರಿಂದ ಆರೋಗ್ಯ ಸಮಸ್ಯೆಗಳು ಕಡಿಮೆಯಾಗುತ್ತವೆ. ಈ ಕಾರಣಕ್ಕಾಗಿಯೇ ತಜ್ಞರು ನೆಲದ ಮೇಲೆ ನಿದ್ರಿಸಲು ಸಲಹೆ ನೀಡುತ್ತಾರೆ. ನೆಲದಂತಹ ಗಟ್ಟಿಯಾದ ಮೇಲ್ಕೆಗಳು ನೈಸರ್ಗಿಕವಾಗಿ ದೇಹಕ್ಕೆ ವ್ಯಾಯಾಮ ನೀಡುತ್ತವೆ. ನೆಲದ ಮೇಲೆ ಮಲಗಿದಾಗ ಬೆನ್ನು ಮೂಳೆ ನೇರವಾಗಿರುತ್ತದೆ. ಮತ್ತು ಬೆನ್ನು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನೀವು ನೆಲದ ಮೇಲೆ ಮಲಗಿದರೆ ಉತ್ತಮ ರಕ್ತ…