Subscribe to Updates
Get the latest creative news from FooBar about art, design and business.
- ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
- ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
- ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
- ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
- ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
- ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
Author: admin
ಪಾವಗಡ: “ಮೊಬೈಲ್ ದೂರ ಇಡಿ, ಪುಸ್ತಕದ ಕಡೆ ಹೆಚ್ಚಿನ ಗಮನ ನೀಡಿ” ಎಂದು ವಿದ್ಯಾರ್ಥಿಗಳಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಟ್ಟಾ ನರಸಿಂಹಮೂರ್ತಿ ಕಿವಿಮಾತು ತಿಳಿಸಿದರು. ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆ ಗ್ರಾಮದ ಮಾಧವ ವಿದ್ಯಾ ಸಂಸ್ಥೆಯ ಎಸ್.ಎಂ. ಆಂಗ್ಲ ಮಾಧ್ಯಮ ಶಾಲೆಯ 25ನೇ ಶಾಲಾ ವಾರ್ಷಿಕೋತ್ಸವ ಹಾಗೂ ಬೆಳ್ಳಿ ಉತ್ಸವ ಸಮಾರಂಭವನ್ನು ಕೆ.ಇ.ಬಿ. ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಲವಾರು ವಿದ್ಯಾರ್ಥಿಗಳು ಕೇವಲ ಮೊಬೈಲ್, ಟಿವಿಗೆ ಅಂಟಿಕೊಂಡಿರುತ್ತಾರೆ. ಅದನ್ನು ಬಿಟ್ಟು ಓದಿನ ಕಡೆ ಗಮನಹರಿಸಬೇಕು. ಹೆಚ್ಚಿನ ಪುಸ್ತಕಗಳನ್ನು ಓದಲು ಸಮಯ ನೀಡಬೇಕು. ಶಿಕ್ಷಕರು ಬೋಧಿಸುವ ಪಾಠ ಗಮನವಿಟ್ಟು ಕೇಳಿಸಿಕೊಂಡು ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆಯಬೇಕು, ಆ ಮೂಲಕ ಉನ್ನತ ಅಧಿಕಾರಿಗಳಾಗಿ ಸಮಾಜಕ್ಕೆ ಸೇವೆ ಸಲ್ಲಿಸಬೇಕು ಎಂದರು. ಗಡಿಭಾಗದಲ್ಲಿ ಶಿಕ್ಷಣ ಸಂಸ್ಥೆಯನ್ನು ರೂಪಿಸಿ ಕಳೆದ 25 ವರ್ಷಗಳಿಂದ ಉತ್ತಮ ಗುಣಮಟ್ಟ ಶಿಕ್ಷಣವನ್ನುಮಾಧವ ವಿದ್ಯಾ ಸಂಸ್ಥೆಯ ನೀಡುತ್ತಾ ಬರುತ್ತಿದೆ ಎಂದು ಇದೇ ವೇಳೆ ಅವರು ತಿಳಿಸಿದರು. ಇದೇ ವೇಳೆ…
ಬೀದರ್: ಬಿಜೆಪಿ ರಾಜ್ಯಾಧ್ಯಕ್ಷರ ಎದುರೇ ಭಗವಂತ್ ಖೂಬಾ ಹಾಗೂ ಔರಾದ ಶಾಸಕರಾದ ಪ್ರಭು ಚವ್ಹಾಣ್ ಅವರ ನಡುವಿನ ಭಿನ್ನಮತ ಬಹಿರಂಗವಾಗಿದ್ದು. ಈ ಬಾರಿ ಖೂಬಾಗೆ ಟಿಕೆಟ್ ಕೊಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಕಾಲಿಗೆ ಬಿದ್ದು ಪ್ರಭು ಚವ್ಹಾಣ್ ಹೈಡ್ರಾಮ ನಡೆಸಿದರು. ಬೀದರ್ ನಗರದ ಗಣೇಶ ಮೈದಾನದಲ್ಲಿ ಜರುಗಿದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದ ವೇದಿಕೆಯಲ್ಲಿ ವಿಜಯೇಂದ್ರ ಅವರ ಕಾಲಿಗೆ ಬಿದ್ದ ಪ್ರಭು ಚವ್ಹಾಣ್ ಖೂಬಾಗೆ ಟಿಕೆಟ್ ಕೊಡಬೇಡಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಒಳ್ಳೆಯ ವ್ಯಕ್ತಿಗೆ ಟಿಕೆಟ್ ಕೊಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕುಡಚಿ ಶಾಸಕ ರಾಜೀವ್, ರಾಜ್ಯ ಕಾರ್ಯದರ್ಶಿಗಳು ಶರಣು ತಳ್ಳಿಕೇರಿ ಸೇರಿದಂತೆ ಸಂಸದರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್
ಬೆಂಗಳೂರು: ನಗರದ ಆರ್ ಪಿಸಿ ಲೇಔಟ್ ನಲ್ಲಿರುವ ಹೊಟೇಲ್ ನಲ್ಲಿ ಮಹಿಳೆಯೊಬ್ಬರ ಜತೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಯುವಕನು ಸ್ನೇಹಿತರೊಂದಿಗೆ ಬೆಟ್ ಕಟ್ಟಿ ಯುವತಿಯೊಬ್ಬಳನ್ನು ಅನುಚಿತವಾಗಿ ಸ್ಪರ್ಶಿಸಿ ಮುಜುಗರಕ್ಕೀಡು ಮಾಡಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಂದನ್ ವಿಕೃತ ಕಾಮಿ ಯುವಕನಾಗಿದ್ದು ಸಧ್ಯಕ್ಕೆ ಪೊಲೀಸರ ವಶದಲ್ಲಿದ್ದಾನೆ. ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಚಂದನ್ ತನ್ನ ಸ್ನೇಹಿತರೊಂದಿಗೆ ಸಿನಿಮಾಗೆ ತೆರಳಿದ್ದ. ಬಳಿಕ ಅಲ್ಲಿನ ಹೋಟೆಲ್ ಒಂದರಲ್ಲಿ ಊಟಕ್ಕೆ ತೆರಳಿದ್ದಾಗ ಕೌಂಟರ್ ನಲ್ಲಿ ನಿಂತಿದ್ದ ಯುವತಿಯೊಬ್ಬಳನು ಸ್ಪರ್ಷಿಸುವುದಾಗಿ ಸ್ನೇಹಿತರೊಂದಿಗೆ ಪಂದ್ಯ ಕಟ್ಟಿದ್ದ. ಆದರೆ ಯುವತಿ ಈತನ ವಿಕೃತ ವರ್ತನೆಯಿಂದ ಕುಪಿತಳಾಗಿ ಪೊಲೀಸರಲ್ಲಿ ದೂರು ನೀಡಿದ್ದಳು. ಹೋಟೆಲ್ ನಲ್ಲಿದ್ದ ಸಿಸಿಟಿವಿ ಕೆಮೆರಾ ದೃಶ್ಯದಲ್ಲಿ ಚಂದನ್ ವಿಕೃತಿ ಬಯಲಾಗಿತ್ತು. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಾಗಿ ಶೋಧ ನಡೆಸುತ್ತಿದ್ದ ಪೊಲೀಸರು, ಬುಧವಾರ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ವೇಳೆ ಚಂದನ್ ತನ್ನ ಸ್ನೇಹಿತರೊಬ್ಬರು ಮಹಿಳೆಯನ್ನು ಮುಟ್ಟುವಂತೆ ಸವಾಲು…
ಬೆಳಗಾವಿ: ಮದುವೆಯಾದ ಒಂದು ತಿಂಗಳಿಗೇ ಪ್ರಿಯಕರನೊಡನೆ ಓಡಿ ಹೋದ ಪತ್ನಿಯನ್ನು ಅವಳ ಸಂಗಾತಿಯೊಡನೇ ಪತಿ ಕೊಚ್ಚಿ ಕೊಲೆಗೈದಿರುವ ಘಟನೆ ಅಥಣಿಯ ಕೋಕಟನೂರ ಗ್ರಾಮದ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಯಾಸಿನ್ ಬಾಗೊಡೆ (21) ಮತ್ತು ಹೀನಾ ಕೌಸರ್ ಸುದಾರಾಣೆ (19) ಮೃತ ಜೋಡಿಗಳಾಗಿದ್ದು, ತೌಫಿಕ್ ಕ್ಯಾಡಿ ಕೊಲೆ ಆರೋಪಿಯಾಗಿದ್ದಾನೆ. ನಾಲ್ಕು ತಿಂಗಳ ಹಿಂದೆ ಮದುವೆ ಆಗಿದ್ದ ನವ ವಿವಾಹಿತ ಜೋಡಿಯಾದ ಹೀನಾ ಮೆಹಬೂಬ್ ಹಾಗೂ ತೌಫಿಕ್ ಶೌಕತ್ ಅವರು ವಿವಾಹದ ಬಳಿಕ ಇಬ್ಬರೂ ಬಾಡಿಗೆ ಕಾರಿನಲ್ಲಿ ದರ್ಗಾಕ್ಕೆ ಹೋಗಿದ್ದರು. ಈ ವೇಳೆ ಕಾರು ಚಾಲಕ ಯಾಸಿನ್ ಅದಮ್(21) ಮೇಲೆ ಹೀನಾಗೆ ಪ್ರೀತಿಯಾಗಿದೆ. ದರ್ಗಾಕ್ಕೆ ಹೋಗಿ ಬಂದ ಒಂದೇ ತಿಂಗಳಲ್ಲಿ ಪ್ರಿಯಕರ ಯಾಸಿನ್ ಜೊತೆ ಹೀನಾ ಗಂಡನನ್ನು ಬಿಟ್ಟು ಓಡಿ ಹೋಗಿದ್ದಳು. ಇದರಿಂದ ಕೋಪಗೊಂಡ ಪತಿ ತೌಫಿಕ್ ಶೌಕತ್ ಹತ್ಯೆಗೆ ಸಂಚು ಹೂಡಿದ್ದ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ತೋಟದ ಮನೆಯಲ್ಲಿ ವಾಸವಿದ್ದ ಯಾಸಿನ್, ಹೀನಾ ಜೋಡಿ…
ರಾಜಸ್ಥಾನ: ರಾಜ್ಯದ ಎಲ್ಲ ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಸರಸ್ವತಿ ಮೂರ್ತಿಯನ್ನು ಕಡ್ಡಾಯವಾಗಿ ಪ್ರತಿಷ್ಠಾಪಿಸುವಂತೆ ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ ಆದೇಶ ಹೊರಡಿಸಿದ್ದಾರೆ ಎಂದು ವರದಿ ತಿಳಿಸಿದೆ. ಶಾಲೆಯ ಮುಖ್ಯದ್ವಾರದಲ್ಲಿ ಈ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಸರಸ್ವತಿಯ ಭಾವಚಿತ್ರ ಅಥವಾ ಮೂರ್ತಿ ಇಲ್ಲದ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹಾಗೆ ಶಾಲೆಗಳಲ್ಲಿ ವಸ್ತ್ರ ಸಂಹಿತೆಯನ್ನು ಕೂಡ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳ ವಯಸ್ಸು ಮತ್ತು ಲಿಂಗವನ್ನು ಆಧರಿಸಿ ವಸ್ತ್ರ ಸಂಹಿತೆ ನಿರ್ಧರಿಸಲಾಗುತ್ತದೆ. ಇನ್ನು ಶಾಲೆಗಳಲ್ಲಿ ಮತಾಂತರಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಚಿವರು ಹೇಳಿಕೆ ನೀಡಿದ್ದಾರೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಲೂ ಹಿಜಾಬ್ ವಿವಾದ ಭುಗಿಲೆತ್ತು, ರಾಜಸ್ಥಾನದಲ್ಲಿ ಬಿಜೆಪಿಯ ಭಜನ್ ಲಾಲ್ ಶರ್ಮಾ ಅಧಿಕಾರಕ್ಕೇರಿದ ಬಳಿಕ ಮುಸ್ಲಿಂ ವಿರೋಧಿ ನೀತಿಗಳನ್ನು ಜಾರಿಗೆ ಮುಂದಾಗಿದ್ದಾರೆ ಎಂಬ ಆರೋಪ ಮಾಡಲಾಗಿತ್ತು. ರಾಜಸ್ಥಾನದ ಸರ್ಕಾರಿ ಶಾಲೆಗಳಲ್ಲಿ ಮಾತ್ರವಲ್ಲದೆ ಖಾಸಗಿ ಶಾಲೆಗಳು ಮತ್ತು ಮದರಸಾಗಳಲ್ಲಿಯೂ ಹಿಜಾಬ್ ನ್ನು ನಿಷೇಧಿಸಬೇಕು ಎಂದು ರಾಜಸ್ಥಾನದ ಹಿರಿಯ…
ಮಂಡ್ಯ ತಾಲ್ಲೂಕಿನ ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಂಸದೆ ಸುಮಲತಾ ಅಂಬರೀಶ್, ಹನುಮ ಧ್ವಜ ಹಾರಿಸಿದ್ದು ಒಂದು ಸಾರ್ವಜನಿಕ ಸ್ಥಳದಲ್ಲೇ ಹೊರತು ಬೇರೆ ಧರ್ಮದ ಪ್ರಾರ್ಥನಾ ಮಂದಿರದ ಮೇಲಲ್ಲ. ಹಾಗಾಗಿ, ಗ್ರಾಮದ ಜನರೊಂದಿಗೆ ಮಾತಾಡಿ ವಿಷಯವನ್ನು ಸುಲಭವಾಗಿ, ಶಾಂತಿಯುತವಾಗಿ ಬಗೆಹರಿಸಬಹುದಿತ್ತು. ಜನರನ್ನ ಸಮಾಧಾನ ಮಾಡಿದ್ದರೇ ಇಷ್ಟಲ್ಲಾ ಮಾಡುವ ಅವಶ್ಯಕತೆ ಇರಲಿಲ್ಲ. ಬಲವಂತವಾಗಿ ಜನರ ಭಾವನೆಗಳಿಗೆ ಧಕ್ಕೆ ತಂದಿದ್ದೀರಿ. ರಾಮಮಂದಿರ ವಿಚಾರದಲ್ಲಿ ಅನೇಕ ಜನರು ಭಾವುಕರಾದ್ರು. ವಿರೋಧವನ್ನ ಕೇವಲ ಪಕ್ಷದ ಕಾರ್ಯಕರ್ತರು ಮಾಡಿಲ್ಲ. ಮಂಡ್ಯದ ಜನ ಕೂಡ ಧ್ವಜ ತೆರವನ್ನ ವಿರೋಧಿಸಿದ್ದಾರೆ. ತುಂಬಾ ತಪ್ಪಾಗಿದೆ. ಕಾರಣ ಯಾರು ಅಂತ ನಿಮಗೆ ಗೊತ್ತಿದೆ. ನಿಮ್ಮಿಂದ ಅನವಶ್ಯಕ ತಪ್ಪು ನಡೆದಿದೆ ನೀವೇ ಸರಿಪಡಿಸಿ ಎಂದರು. ಸರ್ಕಾರ ಕಟ್ಟುನಿಟ್ಟಾಗಿ ಕಾನೂನನ್ನು ಜಾರಿಗೊಳಿಸುತ್ತಿರುವ ಬಗ್ಗೆ ಹೇಳಿಕೊಳ್ಳುತ್ತಿರುವುದಾದರೆ, ಯಾರ ಭಾವನೆಗಗಳಿಗೂ ಧಕ್ಕೆ ಉಂಟು ಮಾಡದ ಹನುಮ ಧ್ವಜ ಮಾತ್ರ ಅದರ…
ಸಂಪಾಜೆ ಸುತ್ತಮುತ್ತಲಿನ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಜನ ನೆಮ್ಮದಿಯಿಂದ ನಿದ್ರೆ ಮಾಡಲಾಗದ ಪರಿಸ್ಥಿತಿಗೆ ಬಂದು ತಲುಪಿದೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಸಂಪಾಜೆ ಗ್ರಾಮದ ಕಾಂಗ್ರೆಸ್ ನಿಯೋಗ ನೇರವಾಗಿ ಅರಣ್ಯ ಸಚಿವರನ್ನೇ ಭೇಟಿಯಾಗಿ ತಕ್ಷಣ ಸ್ಪಂದಿಸುವಂತೆ ಮನವಿ ಮಾಡಿದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅರಣ್ಯ ಸಚಿವರು ಶೀಘ್ರದಲ್ಲೇ ಸಂಪಾಜೆಗೆ ಆಗಮಿಸಿ ಪರಿಶೀಲನೆ ನಡೆಸುವ ಭರವಸೆಯನ್ನು ನೀಡಿದ್ದಾರೆ. ಸಂಪಾಜೆ ಗ್ರಾಮದಲ್ಲಿ ಸೋಲಾರ್ ಬೇಲಿ ಅಳವಡಿಕೆ, ಕಸ ವಿಲೇವಾರಿ ಸಮಸ್ಯೆ ಸೇರಿದಂತೆ ಹಲವು ಮಹತ್ವದ ವಿಚಾರವನ್ನು ಕೂಡ ಇದೇ ವೇಳೆ ಸಚಿವರ ಗಮನಕ್ಕೆ ತರಲಾಯಿತು. ಕೆಪಿಸಿಸಿ ವಕ್ತಾರ ಟಿ. ಎಂ. ಶಾಹಿದ್ ತೆಕ್ಕಿಲ್, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ. ಹಮೀದ್ ಗೂನಡ್ಕ, ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದಿಕ್ ಕೊಕ್ಕೋ, ಯುವ ಕಾಂಗ್ರೆಸ್ ಮುಖಂಡ ರಂಜಿತ್ ರೈ ಮೇನಾಲ, ಸಲೀಂ ಪೆರುಂಗೋಡಿ, ಉನೈಸ್ ಗೂನಡ್ಕ, ಸೌಕತ್ ಮೇನಾಲ ಮತ್ತಿತರರು ಉಪಸ್ಥಿತರಿದ್ದರು.
ರಾಮಮಂದಿರದ ಲೋಕಾರ್ಪಣೆಯ ನಂತರ ಅಯೋಧ್ಯೆಯಲ್ಲಿ ಭಕ್ತರ ದಂಡು ಹರಿದು ಬರುತ್ತದೆ. ಸಂದರ್ಶಕರ ವಿಪರೀತವನ್ನು ಪರಿಗಣಿಸಿ, ಸ್ಪೈಸ್ ಜೆಟ್ ಅಯೋಧ್ಯೆಗೆ 8 ಹೊಸ ವಿಮಾನಗಳನ್ನು ಘೋಷಿಸಿದೆ. ವಿಮಾನ ಸೇವೆ ಫೆಬ್ರವರಿ 1 ರಿಂದ ಪ್ರಾರಂಭವಾಗಲಿದೆ. ದೆಹಲಿ, ಚೆನ್ನೈ, ಅಹಮದಾಬಾದ್, ಜೈಪುರ, ಪಾಟ್ನಾ, ದರ್ಬಂಗಾ, ಮುಂಬೈ ಮತ್ತು ಬೆಂಗಳೂರಿನಿಂದ ವಿಮಾನಗಳ ಸಂಚಾರ ಪ್ರಾರಂಭವಾಗಲಿದೆ. ಟ್ರಿಪ್ ಅಡ್ವೈಸರ್ ಸೇರಿದಂತೆ ಅಂತರಾಷ್ಟ್ರೀಯ ಪ್ರಯಾಣ ಸೇವಾ ಪೂರೈಕೆದಾರರು ಅಯೋಧ್ಯೆಗೆ ಭೇಟಿ ನೀಡಲು ವಿವಿಧ ಪ್ಯಾಕೇಜ್ ದಗಳನ್ನು ಘೋಷಿಸಿದ್ದಾರೆ. ಇದಾದ ನಂತರ, ದೇವಾಲಯದ ಟ್ರಸ್ಟ್ ದರ್ಶನದ ಸಮಯವನ್ನು ವಿಸ್ತರಿಸಿದೆ ಮತ್ತು ಆರತಿ ಮತ್ತು ದರ್ಶನದ ಸಮಯದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ವಾರದಲ್ಲಿಯೇ 19 ಲಕ್ಷ ಜನರು ಭೇಟಿ ನೀಡಿದ್ದಾರೆ ಎಂದು ಅಧಿಕೃತ ಅಂಕಿ ಅಂಶಗಳು ಹೇಳುತ್ತವೆ. ಪ್ರಾಣ ಪ್ರತಿಷ್ಠೆಯ ದಿನದಂದು 5 ಲಕ್ಷ ಜನರು ದೇವಾಲಯಕ್ಕೆ ಭೇಟಿ ನೀಡಿದರೆ, ನಂತರದ ದಿನಗಳಲ್ಲಿ ಸರಾಸರಿ 2 ಲಕ್ಷ ಯಾತ್ರಿಕರು ದೇವಾಲಯವನ್ನು ತಲುಪುತ್ತಿದ್ದಾರೆ.
ಪ್ರಪಂಚದಲ್ಲಿ ಅತಿ ಹೆಚ್ಚು ಡೈನೋಸರ್ ಗಳನ್ನು ಹೊಂದಿರುವ ರಾಜ್ಯ ಮಧ್ಯಪ್ರದೇಶವೇ? ಭಾರತೀಯರನ್ನು ಬೆಚ್ಚಿಬೀಳಿಸುವ ಬಹಿರಂಗಪಡಿಸುತ್ತಿದೆ ಪ್ರಾಗ್ಜೀವಶಾಸ್ತ್ರಜ್ಞರ ಹೇಳಿಕೆ. ಪಳೆಯುಳಿಕೆಗಳನ್ನು ಅಧ್ಯಯನ ಮಾಡುವ ವಿಜ್ಞಾನಿಗಳು ನಿರ್ಣಾಯಕ ಆವಿಷ್ಕಾರವನ್ನು ಮಾಡಿದ್ದಾರೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯ 92 ಸ್ಥಳಗಳಿಂದ ಡೈನೋಸರ್ ಆವಾಸ ಸ್ಥಾನಗಳ ಪಳೆಯುಳಿಕೆಗಳು ಮತ್ತು 256 ಮೊಟ್ಟೆಗಳು ಕಂಡುಬಂದಿವೆ. ಮೊಟ್ಟೆಯ ಅವಶೇಷಗಳು ಪತ್ತೆಯಾದ ಸ್ಥಳಗಳಲ್ಲಿ ಒಂದರಿಂದ 20 ಮೊಟ್ಟೆಗಳು ಎಲ್ಲಾದರೂ ಇವೆ ಎಂದು ಸಂಶೋಧಕರು ಬಹಿರಂಗಪಡಿಸಿದ್ದಾರೆ. ಈ ಪಳೆಯುಳಿಕೆಗಳು 66 ಮಿಲಿಯನ್(6.6 ಕೋಟಿ) ವರ್ಷಗಳಷ್ಟು ಹಳೆಯವು ಎಂದು ವಿಜ್ಞಾನಿಗಳು ಹೇಳುತ್ತಾರೆ. ಪ್ರತಿ ಮೊಟ್ಟೆಯ ವ್ಯಾಸವು 15 ರಿಂದ 17 ಸೆಂ.ಮೀ. ಡೈನೋಸರ್ ಗಳು ಪ್ರತಿ ಪಂಜರದಲ್ಲಿ 20 ಮೊಟ್ಟೆಗಳನ್ನು ಇಡುತ್ತವೆ. ಕೆಲವು ಮೊಟ್ಟೆಗಳು ಮೊಟ್ಟೆಯೊಡೆದ ಅವಶೇಷಗಳನ್ನು ಹೊಂದಿದ್ದವು ಎಂದೂ ಸಂಶೋಧಕರು ಸ್ಪಷ್ಟಪಡಿಸಿದ್ದಾರೆ. ಜಗತ್ತಿನಲ್ಲಿ ಡೈನೋಸರ್ ಗಳು ಅಳಿವಿನಂಚಿನಲ್ಲಿದ್ದು, ಅವುಗಳ ವಿಕಾಸದ ಕೊನೆಯ ವಂಶಾವಳಿಗಳು ಭಾರತದಲ್ಲಿವೆ ಎಂದು ವೈಜ್ಞಾನಿಕ ಸಮುದಾಯ ತೀರ್ಮಾನಿಸಿದೆ.
ಇಂದಿನಿಂದ ಸಂಸತ್ ಅಧಿವೇಶನ ಆರಂಭವಾಗಿದ್ದು ಜಂಟಿ ಸದನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಇದು ನನ್ನ ಮೊದಲ ಬಜೆಟ್ ಅಧಿವೇಶನ. ಆರ್ಥಿಕತೆಯಲ್ಲಿ ಭಾರತ ಇಂದು ಮುನ್ನುಗ್ಗುತ್ತಿದೆ ವಿಶ್ವದ ಆರ್ಥಿಕತೆಯಲ್ಲಿ ಉನ್ನತ ಸ್ಥಾನದತ್ತ ಮುನ್ನುಗ್ಗುತ್ತಿದೆ ಚಂದ್ರನ ದಕ್ಷಿಣ ದ್ರುವದಲ್ಲಿ ನೌಕೆ ಇಳಿಸಿ ಭಾರತ ಸಾಧನೆ ಮಾಡಿದೆ. ಯಾರೂ ನೌಕೆ ಇಳಿಸದ ಜಾಗದಲ್ಲಿ ಭಾರತ ಸಾಧನೆ ಮಾಡಿದೆ ಎಂದು ಇಸ್ರೋ ವಿಜ್ಞಾನಿಗಳ ಸಾಧನೆ ಕೊಂಡಾಡಿದರು. ಜಮ್ಮುಕಾಶ್ಮೀರದ 370ನೇ ವಿಧಿ ತೆಗೆದು ಹಾಕಲಾಗಿದೆ. ಪಕ್ಕದ ದೇಶದ ಪೀಡಿತ ಜನರಿಗೆ ಆಶ್ರಯ ನೀಡಲಾಗಿದೆ. ರಾಮಮಂದಿರ ನಿರ್ಮಾಣದ ಮೂಲಕ ಶತಮಾನದ ಬಯಕೆ ಈಡೇರಿದೆ. ಹೊಸ ಸಂಸತ್ ಭವನ ಏಕ ಭಾರತ ಉತ್ತಮ ಭಾರತದ ಸಂಕಲ್ಪ ಹೊಂದಿದೆ. ಈಗ ನಮ್ಮ ಆಧ್ಯತೆ ನ್ಯಾಯಕ್ಕೆ ನೀಡಲಾಗಿದೆ ಶಿಕ್ಷೆಗೆ ಅಲ್ಲ. ಬ್ರಿಟಿಷರ ಕಾಲದ ಕಾನೂನು ಬದಲಾಗಿದೆ. ಡಿಜಿಟಲ್ ಕ್ಷೇತ್ರದಲ್ಲೂ ಭಾರತ ಸಾಧನೆ ಮಾಡಿದೆ ಎಂದು ಹೇಳಿದರು.