Subscribe to Updates
Get the latest creative news from FooBar about art, design and business.
- ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
- ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
- ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
- ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
- ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
- ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
- ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
Author: admin
ಚಿತ್ರದುರ್ಗ: ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಕತ್ತು ಕೊಯ್ದು ಪ್ರಿಯತಮೆ ಹತ್ಯೆಗೆ ಪ್ರಿಯಕರ ಯತ್ನಿಸಿದ ಘಟನೆ ನಡೆದಿದೆ. ಸಮೀನಾ(25) ಅವರ ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಸಮೀನಾಳನ್ನ ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ದಾದಾಪೀರ್ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಸುಲ್ತಾನಪುರದಲ್ಲಿ ವಾಸವಾಗಿದ್ದ ದಾದಾಪೀರ್-ಸಮೀನಾ ಇಬ್ಬರ ನಡುವೆ ಕಳೆದ ಒಂದು ತಿಂಗಳಿಂದ ಆಗಾಗ ಗಲಾಟೆ ನಡೆಯುತ್ತಿತ್ತು. ನಿನ್ನೆ ರಾತ್ರಿ ಕೂಡ ಗಲಾಟೆ ನಡೆದಿದ್ದು ಸಮೀನಾಳ ಕತ್ತು ಕೊಯ್ದು ಹತ್ಯೆಗೆ ದಾದಾಪೀರ್ ಯತ್ನಿಸಿದ್ದಾನೆ. ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಸ್ಥಳೀಯರು ಸಮೀನಾಳನ್ನು ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸಮೀನಾ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವರದಿ: ಶಿವಕುಮಾರ್ ಮೇಷ್ಟ್ರುಮನೆ ತುಮಕೂರು: ಮೂರು ವರ್ಷ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗ್ರಂಥಾಲಯದ ಮೇಲ್ವಿಚಾರಕನಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ತುಮಕೂರು ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ(ಪೋಕ್ಸೋ) ನ್ಯಾಯಾಲಯವು ತೀರ್ಪು ನೀಡಿದೆ. ಬಾಲಕಿಯು ಅಂಗನವಾಡಿ ಕೇಂದ್ರದಲ್ಲಿ ಓದುತ್ತಿದ್ದಳು. ದಿನಾಂಕ 29—07—2022ರಂದು ಅಂಗನವಾಡಿಗೆ ಕರೆದೊಯ್ಯಲು ಬಾಲಕಿಯ ತಾಯಿ ಮುಂದಾದಾಗ ನಾನು ಅಂಗನವಾಡಿಗೆ ಹೋಗುವುದಿಲ್ಲ ಎಂದು ಬಾಲಕಿ ಹಠ ಮಾಡಿದ್ದಾಳೆ. ಸಂಜೆ ಮನೆಗೆ ಹೋದಾಗ ಮೂತ್ರ ಮಾಡುವ ಜಾಗ ನೋವೆಂದು ಬಾಲಕಿ ತಾಯಿಗೆ ಹೇಳಿಕೊಂಡಿದ್ದಾಳೆ. ತಾಯಿ ಇದರ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ 28—07—2022ರಂದು ಅಂಗನವಾಡಿಯಲ್ಲಿ ಆಟವಾಡುತ್ತಿದ್ದಾಗ ಅಂಗನವಾಡಿಯ ಮುಂಭಾಗದಲ್ಲಿರುವ ಗ್ರಂಥಾಲಯದ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿರುವ ಸೋಮಶೇಖರ್ ಅಲಿಯಾಸ್ ಶೇಖರಣ್ಣ(45) ಎಂಬಾತ ಅಂಗನವಾಡಿ ಕೇಂದ್ರದ ಪಕ್ಕದಲ್ಲಿರುವ ಹೊಲ(ತೋಟ)ಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿರುವ ವಿಚಾರವನ್ನು ತಿಳಿಸಿದ್ದಾಳೆ. ಈ ಪ್ರಕರಣ ಬಗ್ಗೆ ಘನ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳಾದ ನವೀನ್ ಕುಮಾರ್ ಅವರು ದೋಷಾರೋಪಣಾಪಟ್ಟಿ ಸಲ್ಲಿಸಿದರು.…
ಜೈಪುರ: ಜೆಇಇ ಪರೀಕ್ಷಾರ್ಥಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ನಿಹಾರಿಕ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಜನವರಿ 31 ರಂದು ಜೆಇಇ ಮುಖ್ಯಪರೀಕ್ಷೆ ಇದ್ದರಿಂದ ನಿಹಾರಿಕಾ ತಯಾರಿ ನಡೆಸುತ್ತಿದ್ದಳು. ಆದರೆ ಆಕೆ ಪರೀಕ್ಷೆಗೆ ಇನ್ನೆರಡು ದಿನಗಳಿರುವಾಗಲೇ ತನ್ನ ಮನೆಯ ಕೊಠಡಿಯಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡೆತ್ ನೋಟ್: ಮಮ್ಮಿ-ಪಪ್ಪಾ ನಾನು ಜೆಇಇ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನಾನು ಸೋತಿದ್ದೇನೆ, ಇದಕ್ಕೆ ನಾನೇ ಕಾರಣ. ನಾನು ಕೆಟ್ಟ ಮಗಳು. ನನ್ನನ್ನು ಕ್ಷಮಿಸಿ, ಮಮ್ಮಿ-ಪಪ್ಪಾ ಇದು ನನ್ನ ಕೊನೆಯ ಆಯ್ಕೆಯಾಗಿದೆ ಎಂದು ಬರೆದಿಟ್ಟಿದ್ದಾಳೆ.
ನವದೆಹಲಿ: ಭಾರತೀಯ ನೌಕಾಪಡೆಯ ಗಸ್ತು ನೌಕೆ ಐಎನ್ ಎಸ್ ಸುಮಿತ್ರಾ, ಸೋಮಾಲಿಯಾದ ಪೂರ್ವ ಕರಾವಳಿ ಮತ್ತು ಏಡೆನ್ ಕೊಲ್ಲಿಯಲ್ಲಿ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆಗೆ ನಿಯೋಜಿಸಲಾಗಿದ್ದು, ಇರಾನ್ ಮೀನುಗಾರಿಕೆ ಹಡಗು ಇಮಾನ್ನ ಅಪಹರಿಸಲಾಗಿತ್ತು. ನಂತರ ಕಡಲ್ಗಳ್ಳರು ಸಿಬ್ಬಂದಿಗಳನ್ನು ಒತ್ತೆಯಾಳುಗಳಾಗಿ ಮಾಡಿಕೊಂಡಿದ್ದರು. ಈ ಪೈಕಿ ಹಡಗಿನಲ್ಲಿ 17 ಮಂದಿ ಭಾರತೀಯ ಮೀನುಗಾರಿದ್ದರು ಎಂದು ಭಾರತೀಯ ನೌಕಾಪಡೆ ತಿಳಿಸಿದೆ. ಐಎನ್ ಎಸ್ ಸುಮಿತ್ರಾ ಇರಾನ್ ಹಡಗನ್ನು ಅಪಹರಣ ಮಾಡಿದ್ದ ಸೊಮಾಲಿ ಕಡಲ್ಗಳ್ಳರಿಗೆ ಎಚ್ಚರಿಕೆ ಸಂದೇಶ ಕಳುಹಿಸಿತ್ತು. ಕೂಡಲೇ ಹಗಡನ್ನು ಬಿಟ್ಟು ಹೋಗುವಂತೆ ಸೂಚಿಸಿತ್ತು. ನಂತರ ಕಡಲ್ಗಳ್ಳರು ಹಗಡನ್ನು ಬಿಟ್ಟು ದೋಣಿಯಲ್ಲಿ ಪರಾರಿಯಾದರು. ಅರಬ್ಬೀ ಸಮುದ್ರದಲ್ಲಿ ಸೊಮಾಲಿ ಕಡಲ್ಗಳ್ಳರು ತಮ್ಮ ಹಡಗನ್ನು ಅಪಹರಿಸಿದ್ದಾರೆ ಎಂಬ ಸಂಕಷ್ಟದ ಕರೆ ಇರಾನ್ ಹಡಗಿನಿಂದ ಬಂದ ಹಿನ್ನೆಲೆಯಲ್ಲಿ ಕೂಡಲೇ ಕಾರ್ಯಪ್ರವೃತ್ತರಾದ ಭಾರತೀಯ ನೌಕಾಪಡೆಯು ಅಪಹರಣಕ್ಕೊಳಗಾಗಿದ್ದ ಹಡಗು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಆರೋಗ್ಯಕ್ಕೆ ಏಲಕ್ಕಿ ತುಂಬಾನೇ ಉಪಯುಕ್ತ: ಹೃದಯದ ಆರೋಗ್ಯವನ್ನು ಸುಧಾರಿಸುವಲ್ಲಿ ಏಲಕ್ಕಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಲಿನಲ್ಲಿ ಒಂದು ಚಿಟಿಕೆ ಏಲಕ್ಕಿ ಪುಡಿ ಮತ್ತು ಶುಂಠಿ ಹಾಕಿ ಕುಡಿದರೆ, ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ಸ್ಥಿರವಾಗಿರುತ್ತದೆ. ಮಧುಮೇಹದಿಂದ ಬಳಲುತ್ತಿರುವವರಿಗೆ ಏಲಕ್ಕಿ ಉಪಯುಕ್ತವಾಗಿದೆ. ಬಾಯಿ ದುರ್ವಾಸನೆ ಸಮಸ್ಯೆಗೆ ಏಲಕ್ಕಿ ರಾಮಬಾಣ. ಮೊಸರನ್ನ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು: ಮೊಸರನ್ನ ತಿನ್ನುವುದರಿಂದ ಆರೋಗ್ಯಕ್ಕೆ ಯಾವುದೇ ತೊಂದರೆ ಇಲ್ಲ. ಮೊಸರನ್ನ ತಿನ್ನುವುದರಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ. ಮೊಸರನ್ನದಲ್ಲಿ ಪೌಷ್ಠಿಕಾಂಶ ಸಮೃದ್ಧವಾಗಿದೆ. ಮೊಸರನ್ನವು ದೇಹವನ್ನು ತಂಪಾಗಿಸುತ್ತದೆ. ತೂಕವನ್ನು ಇಳಿಸಿಕೊಳ್ಳಲು ಸಹಾಯಕ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಲು ಮತ್ತು ಮೀನು ಮಾತ್ರವಲ್ಲ: ಈ ತರಕಾರಿಗಳಲ್ಲಿಯೂ ಇದೆ ಕ್ಯಾಲ್ಸಿಯಂ: ಕ್ಯಾಲ್ಸಿಯಂ ದೇಹಕ್ಕೆ ಬೇಕಾದ ಮುಖ್ಯ ಅಂಶಗಳಲ್ಲಿ ಒಂದಾಗಿದೆ. ಆದರೆ ನಮ್ಮಲ್ಲಿ ಹೆಚ್ಚಿನವರು ಕ್ಯಾಲ್ಸಿಯಂ ಎಂದಾಕ್ಷಣ ಹಾಲು ಅಥವಾ ಮೀನಿನ ಬಗ್ಗೆ ಯೋಚಿಸುತ್ತಾರೆ. ಕ್ಯಾಲ್ಸಿಯಂ ಅನ್ನು ಹಾಲು ಮತ್ತು ಮೀನಿನಿಂದ ಮಾತ್ರವಲ್ಲದೆ ಕೆಲವು ರೀತಿಯ…
ಬೆಂಗಳೂರು: 14 ವರ್ಷದ ಬಾಲಕಿಗೆ ಬಿಬಿಎಂಪಿ ಕಸದ ಟ್ರಕ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ ಘಟನೆ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಮಸೀದಿ ರಸ್ತೆ ಬಳಿ ನಡೆದಿದೆ. ಈಕೆ ನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿಧ್ಯಾರ್ಥಿನಿಯಾಗಿದ್ದಳು. ಪುಲಕೇಶಿನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತೆಲಂಗಾಣ: ಕಾರಿಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎರಡು ಕುಟುಂಬಗಳಿಗೆ ಸೇರಿದ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದರೆ, ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ನಾಲ್ಗೊಂಡ ಜಿಲ್ಲೆಯ ಮಿರ್ಯಾಲಗುಡಾದ ಚೆರುಪಳ್ಳಿ ಮಹೇಶ್ (32), ಅವರ ಪತ್ನಿ ಜ್ಯೋತಿ (30), ಪುತ್ರಿ ರಿಷಿತಾ (6), ಯಾದಾದ್ರಿ ಭುವನಗಿರಿ ಜಿಲ್ಲೆಯ ಗೊಳ್ನೆಪಲ್ಲಿಯ ಭೂಮಾ ಮಹೇಂದರ್ (32) ಮತ್ತು ಅವರ ಮಗ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ಸಮಯದಲ್ಲಿ ಸಂತ್ರಸ್ತರು ದೇವಸ್ಥಾನದಿಂದ ಮನೆಗೆ ಹಿಂದಿರುಗುತ್ತಿದ್ದರು ಎಂದು ವರದಿಯಾಗಿದೆ. ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದು, ಮಿರ್ಯಾಲಗುಡ ಪ್ರಾದೇಶಿಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ನಂತರ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಲಾಗಿದೆ. ಅಪಘಾತ ನಡೆಸಿ ಪರಾರಿಯಾಗಿದ್ದ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರಿಗೆ ಡಿಕ್ಕಿ…
ನಿತೀಶ್ ಕುಮಾರ್ ಅವರು ಒಂಬತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿಯ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಉಪಮುಖ್ಯಮಂತ್ರಿಗಳಾಗಿದ್ದಾರೆ. ಒಂಬತ್ತು ಸದಸ್ಯರ ಸಚಿವ ಸಂಪುಟ ಇಂದು ಪ್ರಮಾಣ ವಚನ ಸ್ವೀಕರಿಸಿದೆ. ಜೆಡಿಯು ಮತ್ತು ಬಿಜೆಪಿ ತಲಾ ಮೂವರು ಸಚಿವರನ್ನು ಹೊಂದಿವೆ. ಒಬ್ಬರು ಸ್ವತಂತ್ರರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಧಿಕೃತ ನಿವಾಸದಲ್ಲಿ ಶಾಸಕರೊಂದಿಗಿನ ಸಭೆಯ ನಂತರ ನಿತೀಶ್ ಕುಮಾರ್ ಅವರು ನೆನ್ನೆ ಬೆಳಿಗ್ಗೆ 11 ಗಂಟೆಗೆ ರಾಜಭವನಕ್ಕೆ ಆಗಮಿಸಿ ರಾಜೀನಾಮೆ ಸಲ್ಲಿಸಿದರು. ಬಿಹಾರದ ಎಲ್ಲಾ ಬಿಜೆಪಿ ಶಾಸಕರು ನಿತೀಶ್ ಅವರನ್ನು ಬೆಂಬಲಿಸಿ ಪತ್ರ ನೀಡಿದ್ದಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿರುವ ಪಾಟ್ನಾ ತಲುಪಿದರು. ಮಹಾಮೈತ್ರಿಕೂಟವನ್ನು ಏಕೆ ತೊರೆದರು ಎಂಬ ಪ್ರಶ್ನೆಗೆ ನಿತೀಶ್ ಉತ್ತರಿಸಲಿಲ್ಲ. ಭಾರತ ಒಕ್ಕೂಟದ ಸಭೆ ನಡೆದಾಗ ಸಿಪಿಐಎಂ ಸಂಚಾಲಕ ಸ್ಥಾನಕ್ಕೆ ನಿತೀಶ್ ಅವರ ಹೆಸರನ್ನು ಸೂಚಿಸಿತ್ತು. ಆದರೆ ಮಮತಾ ಬ್ಯಾನರ್ಜಿ ವಿರೋಧ…
ಉತ್ತರ ಪ್ರದೇಶದ ಕಾನ್ಪುರದಲ್ಲಿರುವ ರಾಮ ಜಾನಕಿ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ. ದೇವಸ್ಥಾನದ ಗೋಡೆಗಳ ಮೇಲೆ ಅಪರಿಚಿತರು ಬೆದರಿಕೆ ಪೋಸ್ಟರ್ ಗಳನ್ನು ಹಾಕಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಒಂದು ವಾರದ ನಂತರ ಈ ಘಟನೆ ನಡೆದಿದೆ. ಬೆಳಗ್ಗೆ ದೇವಸ್ಥಾನಕ್ಕೆ ಬಂದವರಿಗೆ ಬೆದರಿಕೆ ಸಂದೇಶಗಳಿರುವ ಪೋಸ್ಟರ್ ಗಳು ಕಂಡು ಬಂದವು. ಕೆಲವು ಪೋಸ್ಟರ್ ಗಳನ್ನು ದೇವಾಲಯದ ಗೋಡೆಗಳ ಮೇಲೆ ಅಂಟಿಸಲಾಗಿದೆ, ಉಳಿದವು ದೇವಾಲಯದ ಆವರಣದ ಸುತ್ತಲೂ ಅಂಟಿಸಿದ್ದಾರೆ. ‘ರಾಮ ಜಾನಕಿ’ ದೇವಸ್ಥಾನದ ಟ್ರಸ್ಟಿಯೂ ಆಗಿರುವ ಬಿಜೆಪಿ ನಾಯಕ ರೋಹಿತ್ ಸಾಹು ಅವರಿಗೂ ಬೆದರಿಕೆ ಪತ್ರ ಬಂದಿದೆ. ದೇವಸ್ಥಾನದ ಅಧಿಕಾರಿಗಳು ಮಾಹಿತಿ ನೀಡಿದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪೋಸ್ಟರ್ ಗಳನ್ನು ತೆಗೆದಿದ್ದಾರೆ. ದೇವಸ್ಥಾನದ ಸುತ್ತ ಭದ್ರತೆ ಏರ್ಪಡಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಸಿಸಿಟಿವಿ ಆಧರಿಸಿ ತನಿಖೆ ನಡೆಯುತ್ತಿದೆ. ಆರೋಪಿಯನ್ನು ಪೊಲೀಸರು ಶೀಘ್ರ ಪತ್ತೆ ಹಚ್ಚಲಿದ್ದಾರೆ ಎಂದು ವರದಿಯಾಗಿದೆ.
ಫ್ರೆಂಚ್ ಬಿಲಿಯನೇರ್ ಬರ್ನಾರ್ಡ್ ಅರ್ನಾಲ್ಡ್(74) ಮತ್ತೊಮ್ಮೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಇದನ್ನು ಬ್ಯುಸಿನೆಸ್ ನಿಯತಕಾಲಿಕೆ ಫೋರ್ಲ್ಸ್ ಬಹಿರಂಗಪಡಿಸಿದೆ. ಐಷಾರಾಮಿ ಸರಕುಗಳ ಉದ್ಯಮ LVMH ನ ಅಧ್ಯಕ್ಷ ಮತ್ತು ಸಿಇಒ ಆಗಿ ಮುಂದುವರಿದಿರುವ ಅರ್ನಾಲ್ಡ್ 17,20,616 ಕೋಟಿ ರೂ. ಆಸ್ತಿ ಮೌಲ್ಯದ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ಟೆಸ್ಲಾ ಸಿಇಒ ಮಸ್ಕ್ (16 ಲಕ್ಷ ಕೋಟಿ ರೂ.) ಎರಡನೇ ಸ್ಥಾನದಲ್ಲಿದ್ದಾರೆ. ಕಳೆದ ವಾರ ಷೇರು ವಿನಿಮಯ ಕೇಂದ್ರದಲ್ಲಿ ಮಸ್ಕ್ ಸುಮಾರು 6 ಲಕ್ಷ ಕೋಟಿ ರೂ. ಕಳೆದುಕೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.