Author: admin

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ‌ ಇಟಗಾ ಗ್ರಾಮದಲ್ಲಿ ಸಿಲಿಂಡರ್​ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯ‌ಗಳಾಗಿರುವಂತಹ ಘಟನೆ ನಡೆದಿದೆ. ತಾಯಿ ಅಂಜನಾ ಹಾಗೂ ಮಕ್ಕಳಾದ ಕಾರ್ತಿಕ್, ಖುಷಿ ಹಾಗೂ ಕೀರ್ತನಾಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ತಾಯಿ‌ ಮಕ್ಕಳನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೇವಸ್ಥಾನದಲ್ಲಿ ಹಚ್ಚಿದ ದೀಪದಿಂದ ಸಿಲಿಂಡರ್ ಸ್ಫೋಟಗೊಂಡಿದ್ದು, ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ದುರಂತ ಹಿನ್ನೆಲೆ ಕಲಬುರಗಿ ಖಾಸಗಿ ಆಸ್ಪತ್ರೆಗೆ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್​ ಭೇಟಿ ನೀಡಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿ, ಅಲ್ಲದೇ ಗಾಯಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಆಸ್ಪತ್ರೆ ಆಡಳಿತ ಮಂಡಳಿಗೆ ಅಜಯ್ ಸಿಂಗ್ ಹೇಳಿದ್ದಾರೆ.

Read More

ಬಿಹಾರದಲ್ಲಿ ಮಹಾಮೈತ್ರಿಕೂಟವನ್ನು ಒಡೆದು ಸರ್ಕಾರ ರಚಿಸಲು ಬಿಜೆಪಿ ಮುಂದಾಗಿದೆ. ರಾಜ್ಯದಲ್ಲಿ ಇಂದು ಮತ್ತು ನಾಳೆ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸರ್ಕಾರ ರಚನೆಗೆ ಹಲವು ಯೋಜನೆಗಳು ಗುರಿಯಾಗಿವೆ. ಮೈತ್ರಿಕೂಟದಲ್ಲಿ ಜೆಡಿಯು ಮತ್ತು ಕಾಂಗ್ರೆಸ್ ಅನ್ನು ಒಡೆದು ಮತ್ತೊಂದು ಪಾಳೆಯಕ್ಕೆ ತರುವ ಪ್ರಯತ್ನವಾಗಿದೆ. ಭಾನುವಾರ ನಡೆಯಲಿರುವ ಜೆಡಿಯು ಸಭೆಯ ನಂತರ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸುವ ಸೂಚನೆಗಳಿವೆ. ಮಹಾಮೈತ್ರಿಕೂಟದಲ್ಲಿ ನಿತೀಶ್ ಕುಮಾರ್ ಅವರಿಗೆ ಸಾಕಷ್ಟು ಪರಿಗಣನೆ ಸಿಗುತ್ತಿಲ್ಲ ಎಂಬ ವದಂತಿಗಳಿಗೆ ಜೆಡಿಯು ಶಾಸಕ ಗೋಪಾಲ್ ಮಂಡಲ್ ಪ್ರತಿಕ್ರಿಯೆ ನೀಡಿದ್ದಾರೆ. ನಿತೀಶ್ ಕುಮಾರ್ ಅವರ ಅಸ್ತಿತ್ವ ಅಪಾಯದಲ್ಲಿದೆ ಮತ್ತು ಅವರ ನಿರ್ಧಾರಗಳಿಗೆ ನಾವು ನಿಲ್ಲುತ್ತೇವೆ ಎಂದು ಗೋಪಾಲ್ ಮಂಡಲ್ ಹೇಳಿದರು. ಜೆಡಿಯುನ ಒಂದು ವಿಭಾಗವು ನಿತೀಶ್ ಕುಮಾರ್ ಅವರ ನಡೆಯನ್ನು ವಿರೋಧಿಸಿದೆ. ಇವರ ವಿರುದ್ಧ ಆರ್ ಜೆಡಿ ಕೂಡ ಪ್ರಚಾರ ಆರಂಭಿಸಿದೆ ಎಂದು ವರದಿಯಾಗಿದೆ.

Read More

ಪ್ರಾಣ ಪ್ರತಿಷ್ಠೆಯ ನಂತರ ಅಯೋಧ್ಯೆಯಲ್ಲಿ ಭಕ್ತರ ದಂಡು ಹರಿದಿದೆ. 23ರಿಂದ ದರ್ಶನಕ್ಕೆ ಜನರಿಗೆ ಪ್ರವೇಶ ಕಲ್ಪಿಸಲಾಗಿತ್ತು. ಅಯೋಧ್ಯೆ ರಾಮ ಮಂದಿರದಲ್ಲಿ ಭಕ್ತರ ನಿರಂತರ ಹರಿವನ್ನು ಗಮನದಲ್ಲಿಟ್ಟುಕೊಂಡು ಶ್ರೀ ರಾಮ ಜನ್ಮಭೂಮಿ ತೀರ್ಥ ದೇವಸ್ಥಾನ ಟ್ರಸ್ಟ್ ದರ್ಶನ ಮತ್ತು ಆರತಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರಿಷ್ಕೃತ ವೇಳಾಪಟ್ಟಿಯಂತೆ ಬೆಳಗ್ಗೆ 4.30ಕ್ಕೆ ಶೃಂಗಾರ ಆರತಿ, 6.30ಕ್ಕೆ ಮಂಗಳ ಆರತಿ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದಲೇ ಭಕ್ತರು ದರ್ಶನಕ್ಕಾಗಿ ದೇವಸ್ಥಾನವನ್ನು ಪ್ರವೇಶಿಸಬಹುದು. ಲೈವ್ ಮಿಂಟ್ ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳು ಈ ಸುದ್ದಿಯನ್ನು ವರದಿ ಮಾಡಿದೆ. ಮಧ್ಯಾಹ್ನ ಭೋಗ್ ಆರತಿ ಹಾಗೂ ರಾತ್ರಿ 7.30ಕ್ಕೆ ಸಂಜೆ ಆರತಿ ನಡೆಯಲಿದೆ. ರಾತ್ರಿ 8 ಗಂಟೆಗೆ ಎರಡನೇ ಹಂತದ ಭೋಗ್ ಆರತಿ ನಡೆಯಲಿದೆ. ರಾತ್ರಿ 10 ಗಂಟೆಗೆ ಸಾಯನ ಆರತಿಯೊಂದಿಗೆ ಒಂದು ದಿನದ ಪೂಜೆಗಳು ಮುಕ್ತಾಯಗೊಳ್ಳಲಿವೆ. ಪ್ರಧಾನಿ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭಗಳು ನಡೆದವು.

Read More

ಮಾಗಡಿ: ಬೈಕ್ ‌ಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಯುವಕ ಸಾವನ್ನಪ್ಪಿದ್ದರೆ, ಮತ್ತಿಬ್ಬರಿಗೆ ಗಂಭೀರ ಗಾಯವಾದ ಘಟನೆ ಮಾಗಡಿ ತಾಲೂಕಿನ ವಡ್ಡರಪಾಳ್ಯ ಬಳಿ ನಡೆದಿದೆ. ಪ್ರದೀಪ್ (18) ಯುವಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತಿಬ್ಬರು ಗಾಯಾಳುಗಳನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ ಓವರ್ ಟೇಕ್ ಮಾಡಲು ಹೋದಾಗ ಬೈಕ್ ಗಳೆರಡು ಡಿಕ್ಕಿ ಹೊಡೆದುಕೊಂಡು ಈ ಅಪಘಾತ ಸಂಭವಿಸಿದೆ. ಮಾಗಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು: ಕಲೆ ಯಾರೊಬ್ಬರ ಸೊತ್ತಲ್ಲ ಹಾಗೆಯೇ ಕಲೆಯು ಸುಖಾಸುಮ್ಮನೆ ಒಲಿಯುವಂತದ್ದಲ್ಲ ಅದು ಶ್ರಮದಿಂದ ಮೈಮನಸ್ಸಿನಲ್ಲಿ ಪಡೆದುಕೊಳ್ಳುವಂತಹದ್ದು ಎಂದು ನಾಡಿನ ಹಿರಿಯ ಚಿತ್ರಕಲಾವಿದರು ಹಾಗೂ ನಿವೃತ್ತ ಶಿಕ್ಷಕರಾದ ಪಿ.ಎಸ್.ಗ್ರಾಮ್ ಪುರೋಹಿತ್ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ವಿದ್ಯಾರ್ಥಿಗಳ ಸಮೂಹ ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಮೊದಲು ನಾಡು, ನುಡಿ, ಭಾಷೆ, ಸಂಸ್ಕೃತಿಯ ಬಗ್ಗೆ ತಿಳಿದುಕೊಳ್ಳಬೇಕು ಹಾಗೂ ವಿನಯ, ತಾಳ್ಮೆ ಮೈಗೂಡಿಸಿಕೊಂಡು ನಡೆಯುವ ದಾರಿಯಲ್ಲಿ ಸಾಗಿದರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ. ದೇಶದಲ್ಲಿ ಹೋರಾಟದ ಕಿಚ್ಚಿನಿಂದ ಹಲವು ಸಾವು-ನೋವುಗಳ ಸಂದರ್ಭಗಳು ಬಂದು ಹೋಗಿವೆ. ಇದರ ಮಧ್ಯೆಯೂ ಬಡತನದಿಂದ ಬಂದ ಹಲವರು ಇಂದು ಜ್ಞಾನಿಗಳಾಗಿ ನಮ್ಮ ಮುಂದೆ ಬಂದು ನಿಂತಿದ್ದಾರೆ. ಅಂತಹ ಮಹಾನ್ ನಾಯಕರ ಇತಿಹಾಸವನ್ನು ಅರಿತು ನಡೆದರೆ ಬದುಕಿಗೊಂದು ಅರ್ಥ ಬರುತ್ತದೆ ಎಂದು ಹೇಳಿದರು. ಕಲೆ ಎಲ್ಲಾರಿಗೂ ಒಲಿಯುವುದಿಲ್ಲ. ಅದು ಒಮ್ಮೆ ಒಲಿದರೆ ಅಷ್ಟು ಸುಲಭವಾಗಿ ಬಿಟ್ಟು ಹೋಗುವುದಿಲ್ಲ ಕಲೆ,…

Read More

ಧಾರವಾಡ: ಧಾರವಾಡ ಹೊರವಲಯದ ಮುಮ್ಮಿಗಟ್ಟಿ ಗ್ರಾಮದ ಬಳಿ ಕಾರೊಂದು ಪಲ್ಟಿಯಾಗಿ ವೈದ್ಯಕೀಯ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿದ್ದಾರೆ. ದೀಪಕ್ (30) ಮೃತ ವೈದ್ಯಕೀಯ ವಿದ್ಯಾರ್ಥಿ. ಮುಮ್ಮಿಗಟ್ಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದುರಸ್ತಿ ಹಿನ್ನೆಲೆಯಲ್ಲಿ ತಿರುವು ಕೊಡಲಾಗಿತ್ತು. ಆದರೆ, ತಿರುವು ನೀಡಿದ್ದು ಗೊತ್ತಾಗದೆ ಕಾರು ಹಿಂದಿನ ರಸ್ತೆಯಲ್ಲೇ ಚಲಿಸಿ ಪಲ್ಟಿಯಾಗಿದೆ. ಅಡ್ಡಾದಿಡ್ಡಿ ಚಲಿಸಿದ ಕಾರನ್ನು ಸರಿ ದಾರಿಗೆ ತರಲು ಪ್ರಯತ್ನಿಸುವ ವೇಳೆ ರಸ್ತೆಯ ಅಂಚಿಗೆ ಸಿಲುಕಿ ಪಲ್ಟಿಯಾಗಿದೆ. ಈ ವೇಳೆ ಗಂಭೀರ ಗಾಯಗೊಂಡಿದ್ದ ಎಂಬಿಬಿಎಸ್ ವಿದ್ಯಾರ್ಥಿ ದೀಪಕ್ (30) ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತೋರ್ವ ವಿದ್ಯಾರ್ಥಿ ವಿನಯ ಎಂಬವರಿಗೆ‌ ಸಹ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಎಲೆಕ್ಟ್ರಾನಿಕ್ ಸಿಟಿ ಸಮೀಪ ಚಲಿಸುತ್ತಿದ್ದ ಬೈಕ್‌ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಘಟನೆ ನಡೆದಿದೆ. ಬೈಕ್ ಚಲಿಸುತ್ತಿರುವಾಗಲೇ ಏಕಾಏಕಿ ಹೊಗೆ ಬಂದಿದ್ದು, ಇದನ್ನು ಗಮನಿಸಿದ ಸವಾರ ಕೂಡಲೇ ರಸ್ತೆ ಬದಿಗೆ ಸ್ಕೂಟರ್‌ ನಿಲ್ಲಿಸಿದ್ದಾನೆ. ಬಳಿಕ ಕ್ಷಣ ಮಾತ್ರದಲ್ಲಿ ಬೆಂಕಿ ಕಾಣಿಸಿಕೋಂಡು ಸುಟ್ಟು ಕರಕಲಾಗಿದೆ. ಎಂಜಿನ್ ‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ, ಬೆಂಕಿಯನ್ನು ನಂದಿಸಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರು: ಅಡ್ಡ ಬಂದ ಬೈಕ್ ಸವಾರನ ತಪ್ಪಿಸಲು ಹೋಗಿ ಸರ್ಕಾರಿ ಬಸ್ ಪಲ್ಟಿ ಹೊಡೆದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹಲಗಣಿ ಕ್ರಾಸ್ ಬಳಿ ನಡೆದಿದೆ. ಬಸ್ ನ ವೊಳಗೆ ಸಿಲುಕಿಕೊಂಡಿದ್ದವರನ್ನು ಸ್ಥಳೀಯರು ಕೂಡಲೇ ರಕ್ಷಿಸಿದ್ದಾರೆ. ಬಸ್ ನಲ್ಲಿದ್ದ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಂಬ್ಯುಲೆನ್ಸ್‌ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಬಸ್‌ ಜಮಖಂಡಿಯಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Read More

ಗದಗ: ನಗರದ ಹೊರವಲಯ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಬೈಕ್ ​ಗೆ ಸರ್ಕಾರಿ ಜೀಪ್ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ  ಸಾವನ್ನಪ್ಪಿದ ಘಟನೆ ನಡೆದಿದೆ. ಶಿವಪ್ಪ ಮಾದರ(55) ಮೃತ ರ್ದುದೈವಿ. ಧಾರವಾಡ ಕೆಸಿಸಿ ಬ್ಯಾಂಕ್‌ ಗೆ ಸೇರಿದ ಜೀಪ್ ಇದಾಗಿದ್ದು, ಜೀಪ್‌ ಡಿಕ್ಕಿ ರಭಸಕ್ಕೆ ಸವಾರ ನೂರು ಅಡಿ ದೂರ ಬಿದ್ದಿದ್ದಾನೆ. ಅಪಘಾತ ಬಳಿಕ ಚಾಲಕ ಸ್ಥಳದಲ್ಲೇ ಜೀಪ್ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಈ ಘಟನೆ ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More

ಹಾವೇರಿ: ಪ್ರಿಯಕರನೊಬ್ಬ ಮೆಡಿಕಲ್ ಶಾಪ್​ ನಲ್ಲಿ ಕೆಲಸ ಮಾಡುತ್ತಿದ್ದ ಪ್ರೇಯಸಿಗೆ ಚಾಕು ಇರಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೀ(20) ಚಾಕು ಇರಿತಕ್ಕೋಳಗಾದ ಯುವತಿಯಾಗಿದ್ದಾಳೆ. ಇನ್ನು ಪ್ರಿಯಕರ ಮಹೇಶ್ ಮೈಸೂರು ಹಾಗೂ ಲಕ್ಷ್ಮೀ 2 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ತನ್ನ ಪ್ರಿಯತಮೆಯು ಬೇರೆ ಯುವಕನ ಜೊತೆ ಆಕೆ ಸಂಪರ್ಕದಲ್ಲಿದ್ದಾಳೆಂಬ ಅನುಮಾನದಿಂದ ಚಾಕು ಇರಿದಿದ್ದಾನೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಕೂಡಲೇ ಲಕ್ಷ್ಮೀಯನ್ನು ಶಿಗ್ಗಾಂವಿ ತಾಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಇದೀಗ ಡಿಸ್ ಚಾರ್ಜ್ ಮಾಡಲಾಗಿದೆ. ಲಕ್ಷ್ಮೀಗೆ ಚಾಕು ಇರಿದ ಮಹೇಶ್ ​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Read More