Author: admin

ಹರಿಯಾಣ: ದೆಹಲಿಯ ಖ್ಯಾತ ಎಸಿಪಿ ಪುತ್ರನನ್ನು ಮದುವೆಗೆಂದು ಕೆರೆದುಕೊಂಡು ಹೋಗಿ ಆತನ ಸ್ನೇಹಿತರೇ ಕೊಲೆ ಮಾಡಿರುವ ಘಟನೆ ಸೋನೆಪತ್‌ ನಲ್ಲಿ ನಡೆದಿದೆ. ಲಕ್ಷ್ಯ ಚೌಹಾಣ್(24) ಮೃತ ವ್ಯಕ್ತಿ. ದೆಹಲಿಯ ಸಹಾಯಕ ಪೊಲೀಸ್ ಆಯುಕ್ತ ಯಶ್‌ ಪಾಲ್ ಸಿಂಗ್ ಅವರ ಪುತ್ರನಾದ ಚೌಹಾಣ್ ತೀಸ್ ಹಜಾರಿ ನ್ಯಾಯಾಲಯದ ವಕೀಲರಾಗಿದ್ದರು. ಲಕ್ಷ್ಯ ಸ್ನೇಹಿತರಾದ, ವಿಕಾಸ್ ಭಾರದ್ವಾಜ್ ಮತ್ತು ಸಹಚರ ಅಭಿಷೇಕ್ ಕಾಲುವೆಗೆ ತಳ್ಳಿ ಕೊಲೆ ಮಾಡಿ ಪರಾರಿಯಾಗಿದ್ದರು. ಸ್ನೇಹಿತರ ಜೊತೆ ಮದುವೆಗೆ ಹೋದ ಮಗ ಮರಳಿ ಬರದ ಕಾರಣ ತಂದೆ ಯಶ್‌ ಪಾಲ್ ಸಿಂಗ್ ಅವರು ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದಾರೆ. ನಂತರ ಪೊಲೀಸರು ದೂರು ದಾಖಲಿಸಿಕೊಂಡು ಶೋಧ ಕಾರ್ಯ ನಡೆಸಿದಾಗ ಚೌಹನ್ ಅವರ ಸ್ನೇಹಿತರೇ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಚೌಹಣ್ ಅವರು ಭಾರದ್ವಾಜ್ ಬಳಿ ಸಾಲ ಪಡೆದಿದ್ದು, ಹಣವನ್ನು ಮರುಪಾವತಿಸಿರಲಿಲ್ಲ. ಇದನ್ನು ಭಾರದ್ವಾಜ್, ಅಭಿಷೇಕ್ ಬಳಿ ಹೇಳಿದ್ದಾನೆ. ಹೀಗಾಗಿ ಇಬ್ಬರು ಸೇರಿ ಚೌಹಣ್ ಕೊಲೆಗೆ ಸಂಚು ರೂಪಿಸಿ ಮದುವೆಗೆ…

Read More

ದಾವಣಗೆರೆ: ಜಿಲ್ಲೆಯ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಡಿಸಿಆರ್ ಬಿ‌ ಪೊಲೀಸರ ಕಾರ್ಯಾಚಣೆ ನಡೆಸಿದಾಗ ಸಿಕ್ಕ ಖೋಟಾ ನೋಟುಗಳು. ಖೋಟಾ ನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದ ಓರ್ವ ಇಂಜಿನಿಯರ್ ಸೇರಿ ಆರು ಜನರ ಗ್ಯಾಂಗ್ ವೊಂದನ್ನ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಬರೋಬರಿ 7.70 ಲಕ್ಷ ರೂಪಾಯಿ ಮೌಲ್ಯದ ಐದು ನೂರು ಹಾಗೂ ಎರಡು ನೂರು ಮುಖಬೆಲೆಯ ಖೋಟಾ ನೋಟು ವಶಪಡಿಸಿಕೊಂಡಿದ್ದಾರೆ. ಖೋಟಾ ನೋಟು ತಯಾರು‌ ಮಾಡಲು ಬಳಸುತ್ತಿದ್ದ ‌ಲ್ಯಾಪ್ ಟಾಪ್ ಸೇರಿ‌ ಮೂರು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳ ವಶ ಪಡಿಸಿಕೊಂಡಿದ್ದಾರೆ. ದಾವಣಗೆರೆ ಮೂಲದ ಕುಬೇರಪ್ಪ ತಳವಾರ್, ಹರೀಶ್ ಗೌಡ, ಶಿವಮೊಗ್ಗದ ಭದ್ರಾವತಿ ಮೂಲದ ಇಂಜಿನಿಯರ್ ಜೆ. ರುದ್ರೇಶ್, ಮೈಸೂರಿನ ಮನೋಜ್ ಗೌಡ, ಮಂಡ್ಯದ ಸಂದೀಪ್ ಹಾಗೂ ಚಿತ್ರದುರ್ಗ ಮೂಲದ ಕೃಷ್ಣ ನಾಯ್ಕ ಬಂಧಿತ ಆರೋಪಿಗಳು. ಇಂಜಿನಿಯರ್ ರುದ್ರೇಶ್ ಕೊರೊನಾ ದಲ್ಲಿ ಕೆಲಸ ಕಳೆದುಕೊಂಡು ಕೆಲ ತಿಂಗಳು ಕೋಳಿ ಫಾರ್ಮ್​​ ಇಟ್ಟುಕೊಂಡಿದ್ದ. ವಿಶೇಷವಾಗಿ ಮೈಸೂರಿನಲ್ಲಿ ರಿಸರ್ವ್​​ ಬ್ಯಾಂಕಿನ ನೋಟು ಮುದ್ರಣ…

Read More

ಬಾಗಲಕೋಟೆ: ಆಸ್ತಿಗಾಗಿ ಸುಪಾರಿ ಕೊಟ್ಟು ಅಪ್ಪನನ್ನೇ ಮಗ ಕೊಲೆ ಮಾಡಿಸಿದ್ದಾನೆ. ಚೆನ್ನಪ್ಪ (66) ಕೊಲೆಯಾದ ತಂದೆ. ಚನ್ನಬಸಪ್ಪ ಕೊಲೆ ಮಾಡಿಸಿದ ಮಗ. ಮಾಂತೇಶ್ ಮರಡಿಮಠ ಕೊಲೆ ಮಾಡಿದ ಆರೋಪಿ. ಚೆನ್ನಪ್ಪನ ಕುಟುಂಬ 37 ಎಕರೆ ಜಮೀನನ್ನು ಹೊಂದಿದ್ದರು. ಜಮೀನನ್ನು ಭಾಗ ಮಾಡುವ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ದಿನಾಲೂ ಗಲಾಟೆ ನಡೆಯುತ್ತಿತ್ತು. ಹೀಗಾಗಿ ಚನ್ನಬಸಪ್ಪನನ್ನು ಕೊಲೆ ಮಾಡಲು ಯೋಚನೆ ರೂಪಿಸಿ, ವಿಜಯಪುರ ಜಿಲ್ಲೆಯ ನಿಡಗುಂದಿ ಮೂಲದ ಮಾಂತೇಶ್ ಮರಡಿಮಠ ಎಂಬುವನಿಗೆ 3 ಲಕ್ಷ ರೂ. ನೀಡಿ ಚೆನ್ನಪ್ಪನನ್ನು ಕೊಲೆ ಮಾಡುವಂತೆ ಸುಫಾರಿ ನೀಡಿದ್ದಾರೆ. ಸುಫಾರಿ ಪಡೆದ ಮಾಂತೇಶ್ ಮರಡಿಮಠ ಜನವರಿ 25ರ ರಾತ್ರಿ ರಾಂಪುರ ಗ್ರಾಮದ ಬಳಿ ಚೆನ್ನಪ್ಪನನ್ನು ಮಚ್ಚಿನಿಂದ ಕೊಚ್ಚಿ, ಕಲ್ಲಿನಿಂದ ತಲೆ ಜಜ್ಜಿ ಕೊಲೆ ಮಾಡಿದ್ದಾನೆ. ವಿಚಾರ ತಿಳಿದು ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತ್ತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ತನಿಖೆ ನಡೆಸಿ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಪ್ರಕರಣದ…

Read More

ಮೈಸೂರು: ಗೃಹಿಣಿ  ಒಬ್ಬರು ಪತಿ, ಅತ್ತೆ-ಮಾವನ ಕಿರುಕುಳದಿಂದ ಬೇಸತ್ತು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ. 35 ವರ್ಷದ ವಿಜಯಲಕ್ಷ್ಮೀ ಮೃತ ದುರ್ದೈವಿಯಾಗಿದ್ದಾರೆ. ವಿಜಯಲಕ್ಷ್ಮೀ ದಾಂಪತ್ಯ ಜೀವನಕ್ಕೆ ಕಾಲಿಟ್ಟು 12 ವರ್ಷಗಳಾಗಿದ್ದು, ಎರಡು ಮುದ್ದಾದ ಮಕ್ಕಳಿದ್ದಾರೆ. ಆದರೆ ವರದಕ್ಷಿಣೆಗಾಗಿ ಅತ್ತೆ, ಮಾವ, ಮೈದುನ ಮತ್ತು ಪತಿ ಯಾವಗಲೂ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೀದರ್: ಜಿಲ್ಲೆಯ ವಿವಿಧೆಡೆ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದ ಸಕಾ೯ರಿ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ ವಿಜ್ರಂಭಣೆಯಿಂದ ಆಚರಿಸಲಾಯಿತು. ಇದೇ ವೇಳೆ ಬಾಲ್ಯ ವಿವಾಹದ ಬಗ್ಗೆ ಅರಿವು ರೈತರ ಕುರಿತಂತೆ ನಾಟಕ ಪ್ರದರ್ಶಿಸಲಾಯಿತು. ಈ ಸಮಯದಲ್ಲಿ ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕರು ನವನಾಥ ವಡಗಾವೆ, ರೆಡ್ಡಿ ರವೀಂದ್ರ, ರಂಜನಾ ಗಾಯಕವಾಡ, ಜೀವನ ಬೇದ್ರೆ ಉಪಸ್ಥಿತರಿದ್ದರು. ಇನ್ನೂ ಬೀದರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಗೌರವ ನಮನ ಸಲ್ಲಿಸುವ ಮೂಲಕ ಗಣರಾಜ್ಯೋತ್ಸವ ಆಚರಿಸಲಾಯಿತು. ವರದಿ: ಅರವಿಂದ ಮಲ್ಲಿಗೆ, ಬೀದರ್

Read More

ಜನಸಾಮಾನ್ಯರು ಮತ್ತು ಮಹಿಳೆಯರಿಗಾಗಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮತ್ತು ನಿರ್ವಹಣೆ ಮಾಡಲು ಬಿಬಿಎಂಪಿ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ನಗರದ 172 ಇಂದಿರಾ ಕ್ಯಾಂಟೀನ್‌ ಗಳಲ್ಲಿರುವ ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಸಮಿತಿ ಅಧ್ಯಕ್ಷರು ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಿಗೆ ಸೂಚಿಸಿದ್ದಾರೆ. ತಮ್ಮ ವಲಯದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಪ್ರದೇಶಗಳನ್ನು ಗುರುತಿಸುವಂತೆ ವಲಯಗಳ ಆಯುಕ್ತರಿಗೆ ನಿರ್ದೇಶಿಸಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ 100 ಶೌಚಾಲಯ ನಿರ್ಮಿಸಲು ಶೀಘ್ರ ಟೆಂಡ‌ರ್ ಆಹ್ವಾನಿಸಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ. ಅದಕ್ಕಾಗಿ 25 ಕೋಟಿ ರೂಪಾಯಿ ಅನುದಾನವನ್ನು 2024-25ನೇ ಬಜೆಟ್‌ನಲ್ಲಿ ಮೀಸಲಿಡಲು ಪ್ರಸ್ತಾವಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ 246 ಸಾರ್ವಜನಿಕ ಶೌಚಾಲಯ ನಿರ್ಮಿಸಲು ಈಗಾಗಲೇ ಟೆಂಡರ್ ಅಧಿಸೂಚನೆ ಹೊರಡಿಸಲಾಗಿದೆ. 46 ಒಡಿಎಫ್ ನಿರ್ಮಾಣಕ್ಕೆ ಖಾಸಗಿ ಕಂಪನಿಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಸಾರ್ವಜನಿಕ ಶೌಚಾಲಯ ಕೊರತೆಯಿರುವ ವಿಚಾರವಾಗಿ ಲೆಟ್ಸ್ ಕಿಟ್ ಫೌಂಡೇಷನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು, ಮುಖ್ಯ ನ್ಯಾಯಮೂರ್ತಿ ಪ್ರಸನ್ನ…

Read More

ತಿಪಟೂರು: ಕರ್ನಾಟಕ ಸೇರಿದಂತೆ ದೇಶದಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಅದರಂತೆ ತಿಪಟೂರಿನ ಕಲ್ಪತರು ಕ್ರೀಡಾಂಗಣದಲ್ಲಿ ವಿವಿಧ ಶಾಲಾ-ಕಾಲೇಜುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಇತರೆ ಚಟುವಟಿಕೆಗಳು ನಡೆದವು. ಈ ಬಾರಿಯ 75ನೇ ಗಣರಾಜ್ಯೋತ್ಸವ ಪರೇಡ್ ನಲ್ಲಿ ಠಾಗೂರ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಬಹುಮಾನ ಮತ್ತು ಠಾಗೂರ್ ಪ್ರೌಢಶಾಲಾ ವಿದ್ಯಾರ್ಥಿನಿಯರಿಂದ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ. “75ನೇ ಗಣರಾಜ್ಯೋತ್ಸವ ದಿನವನ್ನು ಅತ್ಯಂತ ಉತ್ಸಾಹ ಮತ್ತು ದೇಶಭಕ್ತಿಯ ಭಾವನೆಗಳಿಂದ ಆಚರಿಸಲಾಗುತ್ತದೆ. ಈ  ಬಾರಿಯ ಪರೇಡ್ ನಲ್ಲಿ ನಮ್ಮ ಶಾಲೆಯ ಮಕ್ಕಳು ಭಾಗವಹಿಸಿ ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದಿರುವುದು ಇಡೀ ಶಾಲೆಗೆ ಹೆಮ್ಮೆ ಪಡುವ ವಿಷಯ. ಎಂದು  ಠಾಗೂರ್ ವಿದ್ಯಾ ಸಂಸ್ಥೆಯ ಆಡಳಿತ ಕಾರ್ಯದರ್ಶಿಯಾದ ಶಶಿಕಲಾ ಆರ್ ಅನಿಲ್ ರವರು ತಿಳಿಸಿದರು.” “ನಮ್ಮ ಶಾಲೆಯ ಮಕ್ಕಳು ಪರೇಡ್ ಗೆ ಒಂದು ವಾರದ ಮುಂಚೆ ಅಭ್ಯಾಸದ ತಾಲಿಮು ನಡೆಸುತ್ತಿದ್ದರು. ಶಿಸ್ತಿನಿಂದ ಅಭ್ಯಾಸ ಮಾಡಿ ಇಂದು ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದಿರುವುದು ಶಾಲೆಗೆ ಹೆಮ್ಮೆಯ…

Read More

ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ರಾಮಮಂದಿರದ ಮಾದರಿಯನ್ನು ಉಡುಗೊರೆಯಾಗಿ ನೀಡಿದರು. ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಬಂದಿದ್ದ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ರಾಜಸ್ಥಾನದ ರಸ್ತೆ ಬದಿಯ ಅಂಗಡಿಯಿಂದ ಚಹಾ ಸೇವಿಸಿದ್ದಾರೆ. ನಂತರ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಫೇಸ್ ಬುಕ್ ನಲ್ಲಿ ಯುಪಿಎ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ. ನರೇಂದ್ರ ಮೋದಿಜಿಯವರ ನಾಯಕತ್ವದಲ್ಲಿ ಭಾರತವು ವಿಶ್ವಗುರು ಎಂಬುದನ್ನು ಪ್ರತಿದಿನ ಸಾಬೀತುಪಡಿಸುತ್ತಿದೆ ಎಂದು ಕೆ ಸುರೇಂದ್ರನ್ ತಿಳಿಸಿದರು. ಹವಾ ಮಹಲ್‌ ಗೆ ಭೇಟಿ ನೀಡಿದ ಪ್ರಧಾನಿಯವರು ಫ್ರೆಂಚ್ ಅಧ್ಯಕ್ಷರಿಗೆ ರಾಮಮಂದಿರದ ಮಾದರಿಯನ್ನು ನೀಡಿದರು. ಕರಕುಶಲ ಮಾರುಕಟ್ಟೆಯಲ್ಲಿ ಪ್ರಧಾನ ಮಂತ್ರಿ ಮ್ಯಾಕ್ರನ್ ಯುಪಿಐ ವಹಿವಾಟುಗಳನ್ನು ವಿವರಿಸುವ ಮತ್ತು ಒಟ್ಟಿಗೆ ಚಹಾ ಸೇವಿಸುವ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಮ್ಯಾಕ್ರನ್ ಯುಪಿಐ ವಹಿವಾಟು ನಡೆಸುತ್ತಿರುವುದನ್ನು ತುಣುಕಿನಲ್ಲಿ ಕಾಣಬಹುದು. ನಿನ್ನೆ ಸಂಜೆ ಜೈಪುರಕ್ಕೆ ಆಗಮಿಸಿದ…

Read More

ಮುಂಬಯಿ: ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಅಶ್ಲೀಲ ವಿಡಿಯೋ ಕ್ಲಿಪ್ ಗಳನ್ನು ಹಂಚಿಕೊಂಡ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಮುಂಬಯಿ ಪೊಲೀಸರು. ಮಕ್ಕಳ ಅಶ್ಲೀಲತೆಯ ಮೂರು ಪ್ರಕರಣಗಳಲ್ಲಿ ಫಿರೋಜ್ ಹವಾರಿಯಾ, ವಿಕ್ಕಿ ಡಿಜೆ, ನನ್ಹಕ್ ಕುಮಾರ್ ಸೇರಿ ಒಟ್ಟು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಮಕ್ಕಳ ಅಶ್ಲೀಲ ವೀಡಿಯೊ ಕ್ಲಿಪ್ ಗಳನ್ನು ಸಾಮಾಜಿಕ ಜಾಲತಾಣಗಳಾದ ಫೇಸ್‌ ಬುಕ್, ಇನ್‌ ಸ್ಟಾಗ್ರಾಂನಲ್ಲಿ ಅಪ್‌ ಲೋಡ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಐಪಿ ವಿಳಾಸ, ಫೇಸ್‌ ಬುಕ್ ಮತ್ತು ಇನ್‌ ಸ್ಟಾಗ್ರಾಮ್ ಖಾತೆ ಪ್ರೊಫೈಲ್‌, ಫೋನ್ ನಂಬರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿಸಿದ್ದಾರೆ.

Read More

ಭಾರತವು ಬ್ರಹ್ಮೋಸ್ ಕ್ಷಿಪಣಿಗಳನ್ನು ರಫ್ತು ಮಾಡಲಿದೆ ಮಾರ್ಚ್ ವೇಳೆಗೆ ಕ್ಷಿಪಣಿಗಳ ರಫ್ತು ಆರಂಭವಾಗಲಿದೆ ಎಂದು ಡಿಆರ್‌ ಡಿಒ ಅಧ್ಯಕ್ಷ ಸಮೀರ್ ಹೇಳಿದ್ದಾರೆ. ವಿ. ಬ್ರಹ್ಮೋಸ್ ಸೂಪರ್‌  ಸಾನಿಕ್ ಕ್ರೂಸ್ ಕ್ಷಿಪಣಿಗಳಿಗಾಗಿ ವಿನ್ಯಾಸಗೊಳಿಸಲಾದ ಉಡಾವಣಾ ಸಾಮಗ್ರಿಗಳ ಸಾಗಣೆ ಹತ್ತು ದಿನಗಳಲ್ಲಿ ಪ್ರಾರಂಭವಾಗಲಿದೆ ಎಂದು ಕಾಮತ್ ಮಾಹಿತಿ ನೀಡಿದರು. ಸುಮಾರು 4.94 ಲಕ್ಷ ಕೋಟಿ ಮೌಲ್ಯದ ಡಿಆರ್‌ ಡಿಒ ಉತ್ಪನ್ನಗಳಿಗೆ ಜಾಗತಿಕ ಆರ್ಡರ್‌ ಗಳನ್ನು ಪಡೆದುಕೊಂಡಿದೆ ಎಂದು ಸಮೀರ್ ವಿ ಕಾಮತ್ ಹೇಳಿದರು.ದೇಶೀಯವಾಗಿ ಅಭಿವೃದ್ಧಿಪಡಿಸಿದ ಆಕಾಶ್ ಕ್ಷಿಪಣಿಗಳು ಮತ್ತು ಅರ್ಜುನ್ ಟ್ಯಾಂಕ್‌ಗಳು ಸೇರಿದಂತೆ ವಿವಿಧ ರಕ್ಷಣಾ ಸಾಧನಗಳ ರಫ್ತು ಎರಡು ವರ್ಷಗಳಲ್ಲಿ ಪ್ರಾರಂಭವಾಗಲಿದೆ. ಬ್ರಹ್ಮೋಸ್ ಮಧ್ಯಮ-ಶ್ರೇಣಿಯ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯಾಗಿದ್ದು, ಇದನ್ನು ಜಲಾಂತರ್ಗಾಮಿ ನೌಕೆಗಳು, ಹಡಗುಗಳು ಮತ್ತು ಯುದ್ಧ ವಿಮಾನಗಳಿಂದ ಉಡಾವಣೆ ಮಾಡಬಹುದಾಗಿದೆ. ಹಲವು ದೇಶಗಳು ಇದನ್ನು ಖರೀದಿಸಲು ಆಸಕ್ತಿಯನ್ನು ವ್ಯಕ್ತಪಡಿಸಿವೆ. ತನ್ನ ಸ್ವಂತ ಅಗತ್ಯಗಳಿಗಾಗಿಯೂ ಆಮದು ಮಾಡಿಕೊಳ್ಳುತ್ತಿದ್ದ ಭಾರತದ ರಕ್ಷಣಾ ವಲಯಕ್ಕೆ ಇದು ದೊಡ್ಡ ಜಿಗಿತವಾಗಿದೆ ಎಂದು ಅವರು ತಿಳಿಸಿದರು.

Read More