Author: admin

ಕಾಡಿನಲ್ಲಿ ಆನೆಗಳಿಗೆ ಮೇವು ಹಾಗೂ ನೀರು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಕಾಡಿನಿಂದ ಊರಿನ ಕಡೆಗೆ ಬರುವುದು ಕಡಿಮೆಯಾಗುತ್ತದೆ ಎಂದು ಹೇಳಿದರು. ಈ ಬಾರಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ 600 ಕೋಟಿ ಮೀಸಲಿಡಲಾಗಿದೆ. ಪೂರ್ಣವಾಗಿ ತಡೆಗೋಡೆ ನಿರ್ಮಾಣವಾದರೆ ಆನೆ – ಮಾನವ ಸಂಘರ್ಷ ನಿಲ್ಲಲಿದೆ ಎಂದರು.

Read More

ಮೊದಲ ಜನಸ್ಪಂದನಾ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿನ ತರುವಾಯ ಮತ್ತೊಮ್ಮೆ ಜನರ ಬಳಿಗೆ ಸರ್ಕಾರವನ್ನು ತರುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಮ್ಮ ನೇತೃತ್ವದಲ್ಲಿ ಫೆಬ್ರವರಿ 8ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯ ಮಟ್ಟದ ಎರಡನೇ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ನಿಮ್ಮ ಅಹವಾಲುಗಳೊಂದಿಗೆ ಬನ್ನಿ, ನಾವು ಅವುಗಳನ್ನು ಆಲಿಸಿ, ಪರಿಹರಿಸುತ್ತೇವೆ ಎಂದಿದ್ದಾರೆ.

Read More

ಅಸ್ಸಾಂ: ಅಸ್ಸಾಂನ ಗೋಲಾಘಾಟ್ ಮತ್ತು ನಾಗಾನ್ ಜಿಲ್ಲೆಗಳ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಅಪರೂಪದ ಚಿನ್ನದ ಬಣ್ಣದ ಹುಲಿ ಕಾಣಿಸಿಕೊಂಡಿದೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನ ದಲ್ಲಿ ಚಿನ್ನದ ಬಣ್ಣದ ನಾಲ್ಕು ಹುಲಿಗಳಿವೆ. ಆದರೆ, ಇವು ಕಾಣಸಿಗುವುದು ಭಾರೀ ಅಪರೂಪ ಎನ್ನಲಾಗಿದೆ. ಈ ಹುಲಿಯ ಮೊದಲ ಫೋಟೋ 2020 ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಇತ್ತೀಚೆಗೆ ಚಿನ್ನದ ಬಣ್ಣದ ಹುಲಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಅವುಗಳನ್ನು ಅಳಿವಿನಂಚಿನಲ್ಲಿರುವ ಹುಲಿಗಳ ಜಾತಿಯೆಂದು ಪರಿಗಣಿಸಲಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ‘X’ಖಾತೆಯಲ್ಲಿ ಅಪರೂಪದ ಚಿನ್ನದ ಬಣ್ಣದ ಫೋಟೋ ಹಂಚಿಕೊಂಡಿದ್ದಾರೆ. ಸದ್ಯ ಫೋಟೋಗಳು ಎಲ್ಲೆಡೆ ವೈರಲ್ ಆಗುತ್ತಿದ್ದು, ಈ ಫೋಟೋಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್​​. ವಡ್ಡಹಳ್ಳಿಯ ಹೆದ್ದಾರಿಯಲ್ಲೇ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಕಾರಿ​​ನಲ್ಲಿದ್ದ ಒಂದು ಮಗು ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಮಹೇಶ್ ಎಂಬುವವರಿಗೆ ಸೇರಿದ ಕಾರು, ತಾಂತ್ರಿಕ ದೋಷದಿಂದ ಹೊತ್ತಿ ಉರಿದಿದೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ನಂಗಲಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಜಗದೀಶ ಶೆಟ್ಟ‌ರ್ ಬಿಜೆಪಿಗೆ ಬಂದಿರುವುದೇನೂ ಆಪರೇಷನ್‌ ಕಮಲ ಅಲ್ಲ. ಕಾಂಗ್ರೆಸ್ ಪಕ್ಷದೊಳಗಿನ ಉಸಿರುಗಟ್ಟುವ ವಾತಾವರಣವನ್ನು ತಡೆದುಕೊಳ್ಳಲಾರದೆ ಮರಳಿ ತಮ್ಮ ಗೂಡು ಸೇರಿದ್ದಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆ‌ರ್. ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಅವರು ಸಂಘ ಪರಿವಾರದ ಹಿನ್ನೆಲೆಯಿಂದ ಬೆಳೆದು ಬಂದಿದ್ದಾರೆ. ಮುಸ್ಲಿಮರ ಓಲೈಕೆ ಹಾಗೂ ಹಿಂದೂಗಳ ಕಡೆಗಣನೆಯನ್ನು ನೋಡಿ ಅವರಿಗೆ ಉಸಿರುಗಟ್ಟುವ ವಾತಾವರಣ ಉಂಟಾಗಿತ್ತು ಎಂದರು. ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ, ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮೊದಲಾದ ಕಾರಣಗಳಿಂದ ಇನ್ನಷ್ಟು ನಾಯಕರು ಬಿಜೆಪಿ ಕಡೆ ಬರಲಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನೇನಿದ್ದರೂ ‘ಕಾಂಗ್ರೆಸ್‌ ಚೋಡೊ’ ಎಂಬ ಘೋಷಣೆ ಕೇಳಿ ಬರಲಿದೆ. ಆಮ್ ಆದ್ಮಿ ಪಕ್ಷ, ಮಮತಾ ಬ್ಯಾನರ್ಜಿಯವರ ಪಕ್ಷ ಕಾಂಗ್ರೆಸ್‌ ನಾಲಾಯಕ್ ಎಂದು ಓಡಿಸಿದೆ. ಕಾಂಗ್ರೆಸ್ ಪಕ್ಷವನ್ನು ದೆಹಲಿಯಿಂದಲೂ ಹೊರಗೆ ಹಾಕಲಾಗುತ್ತದೆ ಎಂದರು.

Read More

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈಗಾಗಲೇ ತುಮಕೂರು ಕ್ಷೇತ್ರದಿಂದ ನನ್ನ ಹೆಸರು ಅಂತಿಮವಾಗಿದೆ ಎಂಬ ಮಾಹಿತಿ ನನಗೆ ಸಿಕ್ಕಿದೆ. ಒಂದು ಹೈಕಮಾಂಡ್ ನಾಯಕರು ನನಗೆ ತುಮಕೂರು ಕ್ಷೇತ್ರದಿಂದ ಕಣಕ್ಕಿಳಿಯಲು ಸೂಚನೆ ಕೊಟ್ಟರೇ, ನಾನು ಸ್ಪರ್ಧೆಗೆ ರೆಡಿ ಎಂದು ಮಾಜಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಮಾಧ್ಯಮದವರು ಚುನಾವಣೆಯಲ್ಲಿನ ಸ್ಪರ್ಧೆ ಬಗ್ಗೆ ಕೇಳುತ್ತಿದ್ರು. ತುಮಕೂರಿಗೆ ನನ್ನ ಹೆಸರು ಅಂತಿಮವಾಗಿದೆ. ನಾಯಕರು ಸೂಚನೆ ಕೊಟ್ರೆ ಸ್ಪರ್ಧೆ ಎಂದಿದ್ದಾರೆ. ಜಗದೀಶ್ ಶೆಟ್ಟ‌ರ್ ಬಿಜೆಪಿಗೆ ಮರಳಿದ್ದು ನನಗೆ ಅತೀವ ಸಂತಸ ತಂದಿದೆ ಎಂದು ವಿ. ಸೋಮಣ್ಣ ತಿಳಿಸಿದ್ದಾರೆ. ಜಗದೀಶ್ ಶೆಟ್ಟ‌ರ್ ರಾಜಕಾರಣಿ ಎನ್ನುವುದಕ್ಕಿಂತ ನನಗೆ ಒಳ್ಳೆಯ ಸ್ನೇಹಿತ. ಅವರು ಪಕ್ಷಕ್ಕೆ ಬಂದಿರುವುದು ಆನೆ ಬಲ ಬಂದಂತಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಮುಂದೆ ಎದುರಾಗಲಿರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಆಯ್ಕೆಯಾಗಿ ಬಂದು ಮೂರನೇ ಬಾರಿಗೆ ದೇಶದ ಪ್ರಧಾನಿ ಆಗಬೇಕೆಂದು ಸೋಮಣ್ಣ ಆಶಿಸಿದ್ದಾರೆ.

Read More

ದಾವಣಗೆರೆ: ಪ್ರಿಯತಮೆಗಾಗಿ ಪತ್ನಿಯನ್ನೇ ಕೊಂದು ಕೆರೆಗೆಸೆದ ಘಟನೆ ದಾವಣಗೆರೆ ತಾಲ್ಲೂಕಿನ ಕೊಡಗನೂರು ಕೆರೆಯಲ್ಲಿ ನಡೆದಿದೆ. ಕಾವ್ಯ ಕೊಲೆಯಾಗಿರುವ ಗೃಹಿಣಿಯಾಗಿದ್ದು, ಪತಿ ಸಚಿನ್ ಆರೋಪಿಯಾಗಿದ್ದಾನೆ. ಕಳೆದ ಐದು ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗೆ, ಮುದ್ದಾದ ಒಂದು ಮಗು ಕೂಡ ಇತ್ತು. ಆದರೆ, ಬೇರೆ ಮಹಿಳೆಯರ ಚಟ ಹೊಂದಿದ್ದ ಸಚಿನ್ ದಾವಣಗೆರೆ ತಾಲ್ಲೂಕಿನ ಕಡ್ಲೆಬಾಳು ಗ್ರಾಮದ ನಿವಾಸಿ ಚೈತ್ರ ಎಂಬಾಕೆಯನ್ನು ಪ್ರೀತಿಸಿ, ಆಕೆಯನ್ನು ಕೂಡ ಎರಡನೇ ಮದುವೆಯಾಗಿದ್ದ ಎಂದು ಹೇಳಲಾಗುತ್ತಿದೆ. ಇನ್ನು ಇವರಿಬ್ಬರ ಸಂಬಂಧಕ್ಕೆ ಮೊದಲನೇ ಪತ್ನಿಯಾದ ಕಾವ್ಯ ಅಡ್ಡಿಯಾದ ಕಾರಣದಿಂದಾಗಿ, ಆಕೆಯನ್ನು ಕತ್ತು ಹಿಸುಕಿ ಕೊಂದು ಗೋಣಿಚೀಲದಲ್ಲಿ ತುಂಬಿಕೊಂಡು ದಾವಣಗೆರೆ ತಾಲ್ಲೂಕಿನ ಕೊಡಗನೂರು ಕೆರೆಗೆ ತಂದು ಹಾಕಿದ್ದಾರೆ ಎನ್ನಲಾಗಿದೆ. ಇತ್ತ ಕಾವ್ಯ ಕಾಣದೇ ಇರುವುದರಿಂದ ಅವರ ತವರು ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಅನುಮಾನಗೊಂಡ ಪೊಲೀಸರು ಗಂಡ ಸಚಿನ್ ನನ್ನು ಪೊಲೀಸ್ ಭಾಷೆಯಲ್ಲಿ ವಿಚಾರಿಸಿದಾಗ ಗಂಡ ಬಾಯ್ಬಿಟ್ಟಿದ್ದಾರೆ. ಸಚಿನ್ ಹಾಗೂ ಚೈತ್ರ ಸೇರಿಕೊಂಡು ಕಾವ್ಯಾಳ ಕತೆ ಮುಗಿಸಿ ಮೃತದೇಹ ಕೆರೆಗೆ ಎಸೆದಿದ್ದಾರೆ.

Read More

ಬೆಂಗಳೂರು: ಡೇ ಕೇರ್ ಸೆಂಟರ್ ನ 3ನೇ ಮಹಡಿಯಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಕೇರಳ ಮೂಲದ ಟೆಕ್ಕಿ ದಂಪತಿಯ ಪುತ್ರಿ ಜಿನಾ ಮೃತ ಮಗು. ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ಜನವರಿ 22 ರ ಮಧ್ಯಾಹ್ನ ಖಾಸಗಿ ಫ್ರೀ ಸ್ಕೂಲ್ ಮೂರನೇ ಮಹಡಿಯಿಂದ ಬಿದ್ದು ತಲೆಗೆ ತೀವ್ರ ಗಾಯಗೊಂಡಿದ್ದ ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ‘ವಾಸ್ತವಾಂಶ ಮರೆಮಾಡಿ, ಸರಿಯಾದ ಮಾಹಿತಿ ನೀಡದೆ, ನಿರ್ಲಕ್ಷ್ಯ ವಹಿಸಿರುವ ಫ್ರೀ ಸ್ಕೂಲ್ ವಿರುದ್ದ ಮಗುವಿನ ತಂದೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Read More

ಬೀದರ್: ಸ್ಕಾರ್ಪಿಯೋ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಬೀದರ್ – ಔರಾದ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಧರಿ ಹನುಮಾನ್ ದೇವಾಸ್ಥಾನದ ಬಳಿ ಗುರುವಾರ ಸಂಜೆ ನಡೆದಿದೆ. ಔರಾದ ತಾಲೂಕಿನ ಧುಪತಮಹಾಗಾಂವ ಗ್ರಾಮದ ಸುಖದೇವ್ (38) ಹಾಗೂ ಲಾಧಾ ಗ್ರಾಮದ ಸಿದ್ದು ಮುಚಳಂಬೆ (40) ಮೃತಪಟ್ಟವರು. ಸಾವನ್ನಪ್ಪಿದ ಇಬ್ಬರೂ ಜೆಸ್ಕಾಂ ಇಲಾಖೆಯಲ್ಲಿ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ತವ್ಯ ನಿರ್ವಹಿಸಿ ಗ್ರಾಮದಿಂದ ಸಂತಪೂರ ಜೆಸ್ಕಾಂ ಇಲಾಖೆ ಕಛೇರಿಗೆ ತೆರಳುವ ವೇಳೆ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಕಾರ್ಪಿಯೋ ಹಾಗೂ ಇಂಡಿಕಾ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರರು ಇಬ್ಬರು ಈ ಅಪಘಾತದಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ, ಸ್ಥಳಕ್ಕೆ ಔರಾದ ಸಿಪಿಐ ರಘುವೀರ್ ಸಿಂಗ್ ಠಾಕೂರ್ ಹಾಗೂ ಪಿಇಎಸ್ ಮೆಹಬೂಬ್ ಅಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ:…

Read More

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮಹೋಬಾದಲ್ಲಿ ದುಷ್ಕರ್ಮಿಗಳು ಜ್ಯುವೆಲರಿ ಮಾಲೀಕನ ಮೇಲೆ ಗುಂಡು ಹಾರಿಸಿ, ಚಿನ್ನಾಭರಣ ದೋಚಿ ಹಣ ತುಂಬಿದ್ದ ಬ್ಯಾಗ್ ನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ. ರಕ್ತಸಿಕ್ತವಾಗಿದ್ದ ವ್ಯಾಪಾರಿಯನ್ನು ಕುಟುಂಬದವರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಮಾಹಿತಿ ಪಡೆದು ತಕ್ಷಣ ಸ್ಥಳಕ್ಕೆ ಆಗಮಿಸಿದ ಎಸ್ಪಿ ಅಪರ್ಣಾ ಗುಪ್ತ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದ್ದಾರೆ. ಅಪರಿಚಿತ ದುಷ್ಕರ್ಮಿಗಳು ಜ್ಯುವೆಲರಿ ಮಾಲೀಕನಿಗಾಗಿ ಹೊಂಚು ಹಾಕಿ ಕುಳಿತಿದ್ದರು. ಈ ಘಟನೆಯಲ್ಲಿ ಅಲಿಪುರ ನಿವಾಸಿ ದೂಳಿಚಂದ್ರ ಎಂಬುವವರ ಪುತ್ರ ಅಜಯ್ ಕಾಂತ್ ಗೆ ಗಂಭೀರ ಗಾಯಗಳಾಗಿವೆ.

Read More