Author: admin

ತಿಪಟೂರು: ನಗರದ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಇರುವ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಿಸಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಲೋಕೇಶ್ವರ್ ತಿಳಿಸಿದರು. 1968 ಮತ್ತು 69ನೇ ಇಸ್ವಿಯಿಂದಲೂ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ಆವರಣದಒಳಭಾಗದ ಒಂದು ಕೊಠಡಿಯಲ್ಲಿ ಅಯ್ಯಪ್ಪ ಸ್ವಾಮಿ ದೇವಸ್ಥಾನವಿತ್ತು. ಅಯ್ಯಪ್ಪ ಸ್ವಾಮಿ ಭಕ್ತರು ಇಲ್ಲಿಯೇ ಭಜನೆ, ಪ್ರತಿದಿನ ಪೂಜೆ ಮಾಡುತ್ತಾರೆ. ಅಲ್ಲದೇ ಅಯ್ಯಪ್ಪ ಸ್ವಾಮಿಗೆ ತೆರಳುವಾಗ ಇಲ್ಲೇ ಇರುಮುಡಿ ಕಟ್ಟಿಕೊಂಡು ಹೊರಡುತ್ತಿದ್ದರು ಎಂದರು. ಕಲ್ಲೇಶ್ವರ ಸ್ವಾಮಿಗೆ ಸೇರಿದ ಆರುಎಕರೆ ಜಾಗದಲ್ಲಿ ನಾವು ನಾಲ್ಕು ಕುಂಟೆ ಮಾತ್ರ ಕೇಳುತ್ತಿದ್ದೇವೆ. ಆದರೆ ಈ ಜಾಗವನ್ನು ತೆರವುಗೊಳಿಸಲು ಬಿಡುವುದಿಲ್ಲ ಎಂದು ಅನೇಕ ಅಯ್ಯಪ್ಪಸ್ವಾಮಿ ಭಕ್ತರು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಅಯ್ಯಪ್ಪ ಸ್ವಾಮಿ ಜಾಗವನ್ನು ಸ್ಥಳಾಂತರ ಮಾಡಲು ಬಿಡುವುದಿಲ್ಲವೆಂದು ತಿಳಿಸಿದರು. ಈ ಸುದ್ದಿಗೋಷ್ಠಿಯಲ್ಲಿ ನಗರಸಭಾ ಮಾಜಿ ಉಪಾಧ್ಯಕ್ಷ ಸೊಪ್ಪು ಗಣೇಶ್, ನಗರ ಸಭಾ ಸದಸ್ಯ ಭಾರತಿ ಅಯ್ಯಪ್ಪ ಸ್ವಾಮಿ, ಸೇವಾ ಭಕ್ತರ ಅಧ್ಯಕ್ಷ ನಾರಾಯಣ ಮೂರ್ತಿ, ಅಯ್ಯಪ್ಪ ಸ್ವಾಮಿ ಹೋರಾಟ ಸಮಿತಿ…

Read More

ಇಂದು ರೈತರೊಂದಿಗೆ ನಾಲ್ಕನೇ ಹಂತದ ಚರ್ಚೆ. ಸಂಜೆ 6 ಗಂಟೆಗೆ ಚಂಡೀಗಢದಲ್ಲಿ ಕಿಸಾನ್ ಮೋರ್ಚಾದ ಸಿದ್ಧಾಪುರ ಶಾಖೆಯೊಂದಿಗೆ ಸಭೆ ನಡೆಯಲಿದೆ. ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಷ್ ಗೋಯಲ್ ಮತ್ತು ನಿತ್ಯಾನಂದ ರೈ ರೈತ ಸಮೂಹದೊಂದಿಗೆ ಮಾತುಕತೆ ನಡೆಸಲಿದ್ದಾರೆ. ಕಳೆದ ಮೂರು ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಕೇಂದ್ರ ಹೊಸ ಪ್ರಸ್ತಾವನೆಗಳನ್ನು ಮುಂದಿಡಬಹುದು. ಯಾವುದೇ ನಿರ್ಧಾರಕ್ಕೆ ಬರದಿದ್ದರೆ ರೈತರು ಧರಣಿ ನಡೆಸಲಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ ಪಿ) ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಡಿನ ರೈತರು ಕಳೆದ ಐದು ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಕೇಂದ್ರವು ಇಂದು ರೈತರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಲಿದೆ. ಇಲ್ಲಿಯವರೆಗೆ ಮೂರು ಸುತ್ತಿನ ಮಾತುಕತೆ ನಡೆದಿದೆ. ಫೆ.8, 12 ಮತ್ತು 15ರಂದು ನಡೆದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಇಂದಿನ ಸಭೆ ನಿರ್ಣಾಯಕವಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಹೊಂದಾಣಿಕೆಗೆ ಸರ್ಕಾರ ಸಿದ್ಧವಾಗಲಿದೆ ಎಂದು ಸೂಚಿಸಲಾಗಿದೆ. ಇದೇ ವೇಳೆ ಹೆಚ್ಚಿನ ರೈತರು ಪಂಜಾಬ್-ಹರಿಯಾಣ ಗಡಿ ತಲುಪುತ್ತಿದ್ದಾರೆ.…

Read More

ಕಕ್ಷೆಯಲ್ಲಿ ಭಾರತದ ಹವಾಮಾನ ವೀಕ್ಷಣಾ ಉಪಗ್ರಹ INSAT-3DS. GSLV F14 ರಾಕೆಟ್ ಎಲ್ಲಾ ಮೂರು ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಪ್ರತಿಕ್ರಿಯಿಸಿದರು. ಈ ಕಾರ್ಯಾಚರಣೆಯ ಹಿಂದಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಮಿಷನ್ 18.7 ನಿಮಿಷಗಳಲ್ಲಿ ಪೂರ್ಣಗೊಂಡಿತು. INSAT-3DS ಹವಾಮಾನ ಮುನ್ಸೂಚನೆಯ ನಿಖರತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಭಾರತವು ಪ್ರಸ್ತುತ ಹವಾಮಾನ ಮೇಲ್ವಿಚಾರಣೆಗಾಗಿ INSAT 3D, INSAT 3DR ಮತ್ತು Oceansat ಉಪಗ್ರಹಗಳನ್ನು ಬಳಸುತ್ತದೆ. ಹವಾಮಾನ ಮುನ್ಸೂಚನೆ, ನೈಸರ್ಗಿಕ ವಿಕೋಪಗಳ ಎಚ್ಚರಿಕೆ, ಕಾಡ್ಗಿಚ್ಚು, ಮೋಡದ ಚಲನೆ, ಸಾಗರ ಬದಲಾವಣೆಗಳು ಇತ್ಯಾದಿಗಳನ್ನು ಇನ್ಸಾಟ್ 3DS ಒದಗಿಸುವ ಮಾಹಿತಿಯ ಮೂಲಕ ಅರ್ಥಮಾಡಿಕೊಳ್ಳಬಹುದು. ಇದು ದೇಶೀಯವಾಗಿ ಅಭಿವೃದ್ಧಿಪಡಿಸಿದ ಕ್ರಯೋಜೆನಿಕ್ ಎಂಜಿನ್ ಬಳಸಿ ರಾಕೆಟ್‌ ನ 16 ನೇ ಮಿಷನ್ ಆಗಿದೆ. ಇನ್ನು ಮುಂದೆ ಸಾಗರ ಮತ್ತು ಮೇಲ್ಮೈ ಹವಾಮಾನ ವೀಕ್ಷಣೆ ಸುಲಭವಾಗಲಿದೆ. ಕಾಡ್ಗಿಚ್ಚು, ಹೊಗೆ, ಹಿಮದ ಹೊದಿಕೆ ಮತ್ತು ಮಿಂಚು ಮುಂತಾದ ಹವಾಮಾನ ವೈಪರೀತ್ಯಗಳ ಅಲ್ಪಾವಧಿಯ ಮುನ್ಸೂಚನೆ ಮತ್ತು ಹವಾಮಾನ ಅಧ್ಯಯನಗಳಿಗೆ ಉಪಗ್ರಹವು…

Read More

ಪ್ರತಿದಿನ ಬೆಳಗ್ಗೆ ಮೆಂತ್ಯೆ ನೀರನ್ನು ಕುಡಿದರೆ ಇಷ್ಟೆಲ್ಲಾ ಸಮಸ್ಯೆ ದೂರವಿಡಬಹುದು: ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಗಂಟೆಗಟ್ಟಲೆ ಕುಳಿತು ಕೆಲಸ ಮಾಡುವುದರಿಂದ ಅಧಿಕ ತೂಕ ಮತ್ತು ಬೊಜ್ಜು ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹಾಗಾಗಿ ಮ್ಯಾಜಿಕ್ ಡ್ರಿಂಕ್ ಎಂದು ಕರೆಯಲ್ಪಡುವ ಮೆಂತ್ಯೆ ನೀರನ್ನು ಬೆಳಿಗ್ಗೆ ಕುಡಿಯುವುದರಿಂದ ಬೊಜ್ಜು ತ್ವರಿತವಾಗಿ ಕಡಿಮೆಯಾಗುತ್ತದೆ. ಇಂಗು ಫೈಬರ್, ಕಾರ್ಬೋಹೈಡ್ರೆಟ್, ಪ್ರೋಟೀನ್, ಕಬ್ಬಿಣ & ಕ್ಯಾಲ್ಸಿಯಂ ಅಂಶ ಒಳಗೊಂಡಿದ್ದು ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ & ತೂಕ ಇಳಿಸಲು ಈ ನೀರು ಸಹಕಾರಿ. ಕೊಲೆಸ್ಟ್ರಾಲ್‌ ಕಡಿಮೆ ಮಾಡಲು ಬಾರ್ಲಿ ನೀರು: ರಾತ್ರಿ ನೀರಿಗೆ ಹಾಕಿದ ಬಾರ್ಲಿಯನ್ನು ಸೋಸಿ, ನೀರನ್ನು ಬೆಳಗಿನ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಆರೋಗ್ಯಕ್ಕೆ ಹಲವು ರೀತಿಯ ಲಾಭಗಳುಂಟು. ಬಾರ್ಲಿ ನೀರು ದೇಹದಲ್ಲಿ ಜಮೆಯಾಗಿರುವ ಕೊಲೆಸ್ಟ್ರಾಲ್ ಕಡಿಮೆ ಮಾಡುವುದಕ್ಕೆ ಮಾತ್ರವಲ್ಲ, ಇನ್ನೂ ಹಲವು ಅನುಕೂಲಗಳನ್ನು ಕಲ್ಪಿಸಿಕೊಡುತ್ತದೆ. ಬಾರ್ಲಿ ನೀರಲ್ಲಿರುವುದು ಹೇರಳವಾದ ಕರಗಬಲ್ಲ ನಾರಿನಂಶ. ಹಾಗಾಗಿ ಬೆಳಗಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರನ್ನು ಸೇವಿಸುವುದರಿಂದ ಬೇಡದ್ದನ್ನು…

Read More

ಸಿಂಹಗಳಿಗೆ ನಾಮಕರಣ ಮಾಡಿ ವಿವಾದಕ್ಕೆ ಕಾರಣವಾದ ಘಟನೆ ಪಶ್ಚಿಮ ಬಂಗಾಳದ ಸಿಲಿಗುರಿಯ ಸಫಾರಿ ಪಾರ್ಕ್‌ ನಲ್ಲಿ ನಡೆದಿದೆ. ಇತ್ತೀಚೆಗೆ ಸಫಾರಿ ಪಾರ್ಕ್‌ ಗೆ ಒಡಿಶಾದಿಂದ ಒಂದು ಗಂಡು ಹಾಗೂ ಮತ್ತೊಂದು ಹೆಣ್ಣು ಸಿಂಹಗಳನ್ನು ತರಲಾಗಿತ್ತು. ಅವುಗಳಲ್ಲಿ ಹೆಣ್ಣು ಸಿಂಹಕ್ಕೆ ʼಸೀತಾʼ  ಮತ್ತು ಗಂಡು ಸಿಂಹಕ್ಕೆ ʼಅಕ್ಬರ್‌ʼ  ಎಂದು ನಾಮಕರಣ ಮಾಡಿರುವುದು ಬಯಲಾಗಿದೆ. ಈ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ವಿಶ್ವ ಹಿಂದೂ ಪರಿಷದ್‌ (VHP) ಮುಖಂಡರು ಭಾರಿ ವಿರೊಧ ವ್ಯಕ್ತಪಡಿಸಿದ್ದಾರೆ. ಅರಣ್ಯಾಧಿಕಾರಿಗಳು ಹೆಣ್ಣು ಸಿಂಹಕ್ಕೆ ‘ಸೀತಾ’ ಹಾಗೂ ಗಂಡು ಸಿಂಹಕ್ಕೆ ‘ಅಕ್ಬರ್’ ಎಂದು ನಾಮಕರಣ ಮಾಡಿದ್ದಾರೆ. ಜೊತೆಗೆ ಅದನ್ನು ಸಫಾರಿ ವಲಯದಲ್ಲಿ ಒಂದೇ ಪ್ರದೇಶದೊಳಗೆ ಇರಿಸಿದ್ದಾರೆ. ಇದರಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಕೂಡಲೇ ಪ್ರಾಣಿಗಳ ಹೆಸರು ಬದಲಿಸಬೇಕು. ಸಿಂಹಗಳನ್ನು ಬೇರೆ ಬೇರೆ ಕಡೆ ಇಡಬೇಕು ಎಂದು ಆಗ್ರಹಿಸಿ ವಿಹೆಚ್‌ ಪಿ ನಾಯಕರು ಕೋಲ್ಕತ್ತಾ ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಅರ್ಜಿ ಫೆ.20ರಂದು ವಿಚಾರಣೆಗೆ ಬರಲಿದೆ. ಸಿಂಹಗಳನ್ನು ಇತ್ತೀಚೆಗೆ ತ್ರಿಪುರಾದ ಸೆಪಹಿಜಾಲಾ ಝೂಲಾಜಿಕಲ್ ಪಾರ್ಕ್‌ನಿಂದ  ಸ್ಥಳಾಂತರಿಸಲಾಗಿದೆ…

Read More

ರೈತರ ಆಂದೋಲನದ ನಂತರ ಹರಿಯಾಣ ಸರ್ಕಾರ ಇಂಟರ್ನೆಟ್ ನಿಷೇಧವನ್ನು ವಿಸ್ತರಿಸಿತು. ಫೆಬ್ರವರಿ 19 ರವರೆಗೆ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ SMS ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಅವಲೋಕಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹರಿಯಾಣ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿವಿಎಸ್ಎನ್ ಪ್ರಸಾದ್ ಹೇಳಿದ್ದಾರೆ. ಅಂತರ್ಜಾಲ ಸೇವೆಗಳ ದುರ್ಬಳಕೆಯಾಗುವ ಸಾಧ್ಯತೆ ಹೆಚ್ಚಿದ್ದು, ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯಾಗುವ ಅಪಾಯವಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಮಧ್ಯೆ, ಪಂಜಾಬ್-ಹರಿಯಾಣ ಗಡಿಯಲ್ಲಿ ರೈತರ ಮುಷ್ಕರ ಆರನೇ ದಿನಕ್ಕೆ ಕಾಲಿಟ್ಟಿದೆ. ಇಂದು ರೈತಸಂಘದ ಮುಖಂಡರೊಂದಿಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಿ ಧರಣಿ ಅಂತ್ಯಗೊಳಿಸಲಿದೆ. ಚಂಡೀಗಢದಲ್ಲಿ ಸಂಜೆ 6 ಗಂಟೆಗೆ ಚರ್ಚೆ ನಿಗದಿಯಾಗಿದೆ. ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಷ್ ಗೋಯಲ್ ಮತ್ತು ನಿತ್ಯಾನಂದ ರೈ ಅವರು ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಚರ್ಚೆಯಲ್ಲಿ…

Read More

ಮಣಿಪುರದಲ್ಲಿ ಮತ್ತೆ ಸಂಘರ್ಷ. ಕಾಕ್ಚಿಂಗ್ ಜಿಲ್ಲೆಯಲ್ಲಿ ಬಿಎಸ್‌ ಎಫ್ ಯೋಧರ ಮೇಲೆ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿಕೋರರು ಅನಿರೀಕ್ಷಿತವಾಗಿ ಬಿಎಸ್‌ ಎಫ್ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಮೂರು ದಿನಗಳಿಂದ ಈ ಪ್ರದೇಶದಲ್ಲಿ ದಾಳಿ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚುರಾಚಂದ್‌ ಪುರ ಮತ್ತು ಚಂದೇಲ್‌ ನ ಗಡಿಭಾಗದಲ್ಲಿರುವ ಪ್ರಕ್ಷುಬ್ಧ ಪ್ರದೇಶವಾದ ಸುಗ್ನು ಎಂಬಲ್ಲಿ ಶನಿವಾರ ಈ ಘಟನೆ ನಡೆದಿದೆ. ಹಿಮಾಚಲ ಮೂಲದ ಹೆಡ್ ಕಾನ್‌ ಸ್ಟೆಬಲ್ ಸೋಮ್ ದತ್ (45) ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ. ದತ್ ಅವರ ಎಡ ಭುಜಕ್ಕೆ ಗುಂಡು ತಗುಲಿದ್ದು, ಇಂಫಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾಯದಿಂದ ಪಾರಾಗುವ ಸೂಚನೆ ಸಿಕ್ಕಿದೆ.

Read More

ಪ್ರಾಣಾಪಾಯದಿಂದ ಸ್ಪಲ್ಪದರಲ್ಲಿ ಪಾರಾದ ನಟಿ ರಶ್ಮಿಕಾ ಮಂದಣ್ಣ. ರಶ್ಮಿಕಾ ಮಂದಣ್ಣ ಹಾಗೂ ಶ್ರದ್ಧಾದಾಸ್ ಅವರುಗಳು ಮುಂಬೈ ವಿಮಾನ ನಿಲ್ದಾಣದಿಂದ ಹೈದರಾಬಾದ್ ಗೆ ಪ್ರಯಾಣ ಬೆಳೆಸಿದ್ದರು. ವಿಮಾನ ಟೇಕ್ ಆಫ್ ಆದ ಬಳಿಕ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ವಿಮಾನ ನಿಲ್ದಾಣವನ್ನು ತುರ್ತು ಭೂಸ್ಪರ್ಷ ಮಾಡಲಾಗಿದೆ. ತಮ್ಮ ಹಾಗೂ ಶ್ರದ್ಧಾದಾಸ್ ರ ಕೆಲವು ಚಿತ್ರಗಳನ್ನು ರಶ್ಮಿಕಾ ಮಂದಣ್ಣ ಹಂಚಿಕೊಂಡಿದ್ದು, ‘ಇಂದು ಹೀಗೆ ಮಾಡಿ ನಾವು ಪ್ರಾಣಾಪಾಯದಿಂದ ಪಾರಾದೆವು’ ಎಂದಿದ್ದಾರೆ ರಶ್ಮಿಕಾ. ತುರ್ತು ಭೂಸ್ಪರ್ಷದ ವೇಳೆ ವಿಮಾನ ಸಿಬ್ಬಂದಿ ನೀಡಿದ ಸೂಚನೆಯಂತೆ, ರಶ್ಮಿಕಾ ಹಾಗೂ ಶ್ರದ್ಧಾ ತಮ್ಮ ಕಾಲುಗಳಿಂದ ಎದುರಿನ ಸೀಟ್ ನ ಹಿಂಬದಿಯನ್ನು ಜೋರಾಗಿ ಒತ್ತಿ ಹಿಡಿದುಕೊಂಡಿದ್ದಾರೆ. ಈ ಚಿತ್ರವನ್ನು ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಫ್ರೀಕ್ವೆಂಟ್ ಟ್ರಾವೆಲರ್ ಆಗಿದ್ದಾರೆ. ಹೈದರಾಬಾದ್, ಮುಂಬೈ, ಚೆನ್ನೈ ಹಾಗೂ ಬೆಂಗಳೂರಿಗೆ ಪದೇ ಪದೇ ಓಡಾಡುತ್ತಲೇ ಇರುತ್ತಾರೆ. ಹೈದರಾಬಾದ್ನಲ್ಲಿ ಮನೆ ಹೊಂದಿರುವ ರಶ್ಮಿಕಾ, ಬಾಲಿವುಡ್, ಕಾಲಿವುಡ್ಗಳಲ್ಲಿಯೂ ಕೆಲಸ ಮಾಡುತ್ತಿರುವ ಕಾರಣ ಮುಂಬೈ, ಚೆನ್ನೈಗಳಿಗೆ…

Read More

ಉತ್ತರ ಪ್ರದೇಶ:  ಉತ್ತರ ಪ್ರದೇಶದ ಬಹ್ರೈಚ್​ ನಲ್ಲಿ 50 ವರ್ಷದ ವ್ಯಕ್ತಿಯೊಬ್ಬ ಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಮಗುವನ್ನು ಮೊದಲು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಅದರ ಸ್ಥಿತಿ ಸ್ಥಿರವಾಗಿದ್ದರೂ, ಮಕ್ಕಳ ವೈದ್ಯರಿಂದ ಸಂಪೂರ್ಣ ಪರೀಕ್ಷೆಗಾಗಿ ಲಕ್ನೋಗೆ ಕಳುಹಿಸಲಾಗಿದೆ ಎಂದು ಶುಕ್ಲಾ ಹೇಳಿದರು. ಘಟನೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Read More

ಅನೇಕ ಜನರಿಗೆ ಮಾಂಸ ಅಂದ್ರೆ ಬಹಳ ಇಷ್ಟ. ಇದರಲ್ಲಿ ಪ್ರೊಟೀನ್, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಸತುವಿನಂತಹ ಅನೇಕ ಪೋಷಕಾಂಶಗಳು ಹೇರಳವಾಗಿರುತ್ತದೆ. ಇದೀಗ ವಿಜ್ಞಾನಿಗಳು ಪೂರ್ತಿಯಾಗಿ ಮಾಂಸದ್ದೇ ರುಚಿಯನ್ನು ಹೊಂದಿರುವ ಅಕ್ಕಿಯನ್ನು ತಯಾರಿಸಿದ್ದಾರೆ. ನೀವು ಇದನ್ನು ಬಿರಿಯಾನಿಯಂತೆ ತಿನ್ನಬಹುದು. ಇದು ಇದ್ದರೆ ಮಟನ್, ಚಿಕನ್‌ ನ ಅಗತ್ಯನೇ ಇಲ್ಲ. ಇದರ ರುಚಿಯೂ ಅದ್ಭುತವಾಗಿದೆ. ಇದರಲ್ಲಿ ಪ್ರೋಟಿನ್ ಮತ್ತು ಕೊಬ್ಬು ಕೂಡ ಅಧಿಕವಾಗಿದೆ ಎಂದು ಹೇಳಲಾಗಿದೆ. ದಕ್ಷಿಣ ಕೊರಿಯಾದ ಯೋನ್ಸೆ ವಿಶ್ವವಿದ್ಯಾಲಯದ ವಿಜ್ಞಾನಿಗಳು ಈ ಹೈಬ್ರಿಡ್ ಅಕ್ಕಿಯನ್ನು ಪ್ರಯೋಗಾಲಯದಲ್ಲಿ ಸಿದ್ಧಪಡಿಸಿದ್ದಾರೆ. ಇದಕ್ಕೆ ಅನೇಕ ರೀತಿಯ ಮಾಂಸವನ್ನು ಸೇರಿಸಲಾಗಿದೆ. ಇದು ನೋಡಲು ಸಾಮಾನ್ಯ ಅಕ್ಕಿಯಂತೆ ಇದ್ದರೂ ರುಚಿ ಮಾತ್ರ ಸಾಮಾನ್ಯ ಮಾಂಸಕ್ಕಿಂತಲು ಹೆಚ್ಚಾಗಿರುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಇದು 11 ದಿನಗಳ ದಿನಗಳವರೆಗೆ ಸಂಗ್ರಹಿಸಲು ಯೋಗ್ಯವಾಗಿದ್ದು, ಮಾಂಸದ ಅಕ್ಕಿಯ ಉತ್ಪಾದನಾ ವಿಧಾನವು ಸರಳವಾಗಿದೆ ಎಂದು ತಿಳಿಸಿದ್ದಾರೆ. ಆದಷ್ಟು ಬೇಗ ಮಾಂಸದ ಅಕ್ಕಿ ಮಾರುಕಟ್ಟೆಗೆ ಬರಲೆಂದು ಮಾಂಸಪ್ರಿಯರು ಆಶಿಸುತ್ತಿದ್ದಾರೆ.

Read More