Author: admin

ರೆಬೆಲ್‌ ಸ್ಟಾ‌ರ್ ಅಂಬರೀಶ್ ಇಂದು ಈ ಭೂಮಿಯ ಮೇಲೆ ಇಲ್ಲ. ಆದ್ರೆ, ಅಂಬರೀಶ್ ನನಗೂ ಕೆಲ ಜವಾಬ್ದಾರಿಗಳನ್ನು ಬಿಟ್ಟು ಹೋಗಿದ್ದಾರೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಅಂಬರೀಶ್ ಸಿನಿಮಾರಂಗ ಹಾಗೂ ರಾಜಕೀಯ ರಂಗ ಎರಡಲ್ಲೂ ಸಕ್ರಿಯರಾಗಿ ಸೇವೆ ಸಲ್ಲಿಸಿದವರು. ಅವರು ನನಗೂ ಕೆಲ ಜವಾಬ್ದಾರಿಗಳನ್ನು ಬಿಟ್ಟು ಹೋಗಿದ್ದಾರೆ. ಅದನ್ನು ನಿಭಾಯಿಸಲೇಬೇಕು. ನಾನು ಮಂಡ್ಯ ಬಿಡುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ನಾಲ್ಕು ಮುಕ್ಕಾಲು ವರ್ಷಗಳಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದೇ ರಾಜಕಾರಣ ಮಾಡಿಕೊಂಡ ಬಂದಿರುವ ಸಂಸದೆ ನಾನು ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಕಳೆದ ನಾಲ್ಕು ಮುಕ್ಕಾಲು ವರ್ಷಗಳ ನನ್ನ ಟ್ರ್ಯಾಕ್ ರೆಕಾರ್ಡ್ ತೆಗೆದು ನೋಡಿ. ಒಂದೇ ಒಂದು ಕಪ್ಪುಚುಕ್ಕೆ ಇಲ್ಲ. ಈ ನಿಟ್ಟಿನಲ್ಲಿ ನನಗೆ ಮಂಡ್ಯ ಕ್ಷೇತ್ರದ ಟಿಕೆಟ್ ಸಿಗುವ ನಿರೀಕ್ಷೆಯಿದೆ ಎಂದಿದ್ದಾರೆ. ಲೋಕಸಭೆ ಚುನಾವಣೆಗೆ ದಳ – ಕಮಲ ಪಕ್ಷಗಳು ಜಂಟಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದು,…

Read More

ಬೆಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ವೇಳೆ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯತ್ನಿಸಿರುವ ಘಟನೆ ನಡೆದಿದೆ. ಸಿಎಂಗೆ ತಮ್ಮ ಕೆ.ಪಿ.ಎಸ್.ಸಿ. ಆರ್ಡರ್ ವಿಳಂಬದ ಬಗ್ಗೆ ಮನವಿ ಸಲ್ಲಿಸಲು ಪರಶುರಾಮ್ ಬಂದಿದ್ದರು. ಆದರೆ ಪೊಲೀಸರು ಪರಶುರಾಮ್ ರನ್ನು ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗದಂತೆ ತಡೆದರು. ಇದರಿಂದಾಗಿ ಸಿಎಂ ಸಿದ್ದರಾಮಯ್ಯ ರನ್ನು ಭೇಟಿ ಮಾಡಲು, ಪರಶುರಾಮ್ ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲೇ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ. ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲಿ ಮನವಿ ಪತ್ರ ಪ್ರದರ್ಶಿಸಿದ್ದಾರೆ. ಪರಶುರಾಮ್ ಮನವಿ ಪತ್ರ ಪ್ರದರ್ಶಿಸುತ್ತಿದ್ದ ಹಾಗೇ ಪೊಲೀಸರು ಅವರನ್ನ ವಶಕ್ಕೆ ಪಡೆದು ವಿಚಾರಣೆಗೆ ಕರೆದುಕೊಂಡು ಹೋಗಲಾಗಿದೆ.

Read More

ಬೆಂಗಳೂರು: ಕುಡಿಯಲು ಹಣ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ತಂದೆಯೇ ಮಗನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕರೆಕಲ್ ನ ಮನೆಯೊಂದರಲ್ಲಿ ಸುರೇಶ್ ಎಂಬವರು ಮಗ ನರ್ತನ್ ಬೋಪಣ್ಣ(32) ಅವರನ್ನು ಕೊಲೆ ಮಾಡಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ಮನೆಗೆ ತೆರಳಿದಾಗ, ನರ್ತನ್ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಎನ್ನಲಾಗಿದೆ. ಜೀವನ್ಮರಣ ಸ್ಥಿತಿಯಲ್ಲಿದ್ದ ನರ್ತನ್ ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರಾದೃಷ್ಟವಶಾತ್, ಚಿಕಿತ್ಸೆಗೆ ಸ್ಪಂದಿಸದೇ ಖಾಸಗಿ ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾರೆ. ಸದ್ಯ, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸದಾ ಕಾಲ ಕುಡಿತದ ಗುಂಗಿನಲ್ಲೇ ಇರುತ್ತಿದ್ದ ಸುರೇಶ್ ಕುಡಿಯಲು ಹಣ ಬೇಕು ಎಂದು ಮಗನನ್ನು ಪೀಡಿಸುತ್ತಿದ್ದರು ಎನ್ನಲಾಗಿದೆ. ಕುಡಿಯಲು ಹಣ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ತಂದೆ ಮಗನನ್ನು ಕೊಂದಿದ್ದಾರೆ ಎನ್ನಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಇಂದು ದೇಶಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮವಾಗಿದ್ದು, ಹುತಾತ್ಮ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ನಮನ ಸಲ್ಲಿಸಿದರು. ದೆಹಲಿಯ ರಾಷ್ಟ್ರೀಯ ಸಮರ ಸ್ಮಾರಕಕ್ಕೆ  ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಪುಷ್ಪ ಗುಚ್ಛ ಇರಿಸಿ ಹುತಾತ್ಮ ವೀರ ಯೋಧರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾಧಿಕಾರಿಗಳು ಸಾಥ್ ನೀಡಿದರು.

Read More

ಸಂಗೀತ ಮಾಂತ್ರಿಕ ಎಂದೇ ಖ್ಯಾತವಾಗಿರುವ ಜನಪ್ರಿಯ ಸಂಗೀತ ನಿರ್ದೇಶಕ ಇಳಯರಾಜ ಅವರ ಪುತ್ರಿ ಭವತಾರಿಣಿ ಹಠಾತ್ ನಿಧನರಾಗಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಶ್ರೀಲಂಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಯೇ ಅವರು ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ. ಅವರ ಮೃತದೇಹವನ್ನು ಚೆನ್ನೈನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದೆಂದು ಹೇಳಲಾಗುತ್ತಿದೆ. ಅವರ ನಿಧನಕ್ಕೆ ತಮಿಳು ಚಿತ್ರರಂಗ ಹಾಗೂ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Read More

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಇಂದು 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಎಂಡಿ ವಿ ಅನ್ನುಕುಮಾರ್ ಧ್ವಜಾರೋಹಣವನ್ನು ನೆರವೇರಿಸಿದರು. ರಾಷ್ಟ್ರಪಿತ ಮಹಾತ್ಮಾ ಗಾಂಧಿ, ಬಾಬಾ ಸಾಹೇಬ್ ಡಾ.ಬಿ.ಆ‌ರ್. ಅಂಬೇಡ್ಕ‌ರ್ ಹಾಗೂ ಸಂಗೊಳ್ಳಿ ರಾಯಣ್ಣ ರವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ರಾಷ್ಟ್ರೀಯ ಹಬ್ಬಗಳಲ್ಲಿ ಸಿಬ್ಬಂದಿಗಳು ಪಾಲ್ಗೊಂಡು, ರಾಷ್ಟ್ರ ನಿರ್ಮಾಣದಲ್ಲಿ ತಮ್ಮೆಲ್ಲ ವನ್ನು ಸಮರ್ಪಿಸಿದ ಮಹಾನ್ ಚೇತನಗಳ ಕಾರ್ಯ, ತ್ಯಾಗ, ನಿಸ್ವಾರ್ಥಸೇವೆಯನ್ನು ಸ್ಮರಿಸಿ ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಏಳು ವರ್ಷಗಳ ಅಪಘಾತ ರಹಿತ ಸೇವೆ ಸಲ್ಲಿಸಿರುವ ಚಾಲಕರಿಗೆ ಬೆಳ್ಳಿ ಪದಕ ಪ್ರಧಾನ ಮಾಡಿ ರೂ 2,000 ಗಳ ನಗದು ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮದಲ್ಲಿ, ಡಾ.ಕೆ. ನಂದಿನಿ ದೇವಿ ಭಾ ಆ ಸೇ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ), ಆಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Read More

ಬಾಗಲಕೋಟೆ: ಜಿಲ್ಲೆಯ ತುಂಬರಮಟ್ಟಿ ಕ್ರಾಸ್​ ಬಳಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ​ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದ ಮಲ್ಲು ಪೂಜಾರಿ(24), ಕಲ್ಲಪ್ಪ ಕೌಟಗಿ(34), ಕಾಮಾಕ್ಷಿ ಬಡಿಗೇರ(35), ತುಕಾರಾಮ್ ತಳೇವಾಡ(30) ಮೃತಪಟ್ಟವರಾಗಿದ್ದಾರೆ. ಇವರು ಬಾದಾಮಿಯಿಂದ ಹೊನಗನಹಳ್ಳಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಬಾಗಲಕೋಟೆ ಎಸ್‌ ಪಿ ಅಮರನಾಥ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೆಸಿಬಿ ಮೂಲಕ ಕಬ್ಬು ತೆರವುಗೊಳಿಸಿ ಕಾರು ಹೊರತೆಗೆಯಲಾಯಿತು. ಮೃತದೇಹಗಳನ್ನು ಬೀಳಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

Read More

ಲೋಕಸಭೆ ಚುನಾವಣೆಗೆ ಬಿಜೆಪಿ ಅಧಿಕೃತ ಪ್ರಚಾರ ಆರಂಭಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪ್ರಧಾನಿಯವರ ವಾಸ್ತವ ಉಪಸ್ಥಿತಿಯಲ್ಲಿ ಪ್ರಚಾರ ಆರಂಭಿಸಿದರು. ವೀಡಿಯೊದಲ್ಲಿ ಅಯೋಧ್ಯೆ ಪ್ರತಿಷ್ಠಾ, ಜಿ20 ಮತ್ತು ಚಂದ್ರಯಾನ ಮಿಷನ್ ನ ದೃಶ್ಯಗಳಿವೆ. ವಂಶಾಡಳಿತ ಪಕ್ಷವನ್ನು ಸೋಲಿಸಲು ಯುವಕರು ಬಿಜೆಪಿಗೆ ಮತ ಹಾಕಬೇಕು ಎಂದು ಪ್ರಧಾನಿ ಹೇಳಿದರು. ಬಿಜೆಪಿಯ ಪ್ರಣಾಳಿಕೆಯನ್ನು ಯುವಕರು ನಿರ್ದೇಶಿಸಬೇಕು ಎಂದು ಮೋದಿ ಹೇಳಿದರು. ಜೆಪಿ ನಡ್ಡಾ ಅವರು ಸಪ್ನೆ ನಹೀ ಹಕೀಕತ್ ಬುಂದೇ ಹೈ, ‘ತಬಿ ತೋ ಸಾಬ್ ಮೋದಿ ಕೋ ಚುಮಂತೆ ಹೈ’ ಎಂಬ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದರು. ಭಾರತದಲ್ಲಿ ಪರಿಸ್ಥಿತಿ ಹದಗೆಟ್ಟಾಗ ದೇಶವು ಮೋದಿಯನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದೆ ಎಂದು ಹಾಡು ಹೇಳುತ್ತದೆ. ಅಭಿವೃದ್ಧಿ ಹೊಂದಿದ ದೇಶದ ಕನಸು ಕೇವಲ ಕನಸಾಗಿ ಉಳಿಯಲಿಲ್ಲ ಮತ್ತು ಮೋದಿ ಅದನ್ನು ನನಸಾಗಿಸಿದರು ಎಂದು ಹಾಡು ಹೇಳುತ್ತದೆ. ಪಕ್ಷದ ಎಲ್ಲಾ ಕಾರ್ಯಕರ್ತರು ಇದನ್ನು ಹೊರತೆಗೆಯಬೇಕು ಮತ್ತು ದೇಶದ ಮೂಲೆ ಮೂಲೆಗಳಲ್ಲಿ ಈ ಶಿಬಿರದ ಬಗ್ಗೆ…

Read More

ದೇಶವು ತನ್ನ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಗಣರಾಜ್ಯೋತ್ಸವವು 1950 ರಲ್ಲಿ ನಮ್ಮ ದೇಶದಲ್ಲಿ ಸಂವಿಧಾನವು ಜಾರಿಗೆ ಬಂದ ದಿನದ ಆಚರಣೆಯಾಗಿದೆ. ಈ ವರ್ಷದ ಗಣರಾಜ್ಯೋತ್ಸವ ಆಚರಣೆಗಳು ‘ವಿಕಸಿತ ಭಾರತ’ ಥೀಮ್ ಅನ್ನು ಆಧರಿಸಿವೆ. ಈ ಬಾರಿಯ ಮೆರವಣಿಗೆಯೂ ಮಹಿಳಾ ಶಕ್ತಿಯ ಘೋಷಣೆಯಾಗಿರುವುದು ಪ್ರಸ್ತುತವಾಗಿದೆ. ಸಾರ್ವಭೌಮತ್ವ ಜನರ ಮೇಲಿದೆ. ಇದು ಗಣರಾಜ್ಯ ಎಂಬ ಪದದ ಅರ್ಥ. ಪ್ರತಿ ಗಣರಾಜ್ಯೋತ್ಸವವು ದೇಶವು ಸಾರ್ವಭೌಮ ರಾಷ್ಟ್ರವಾಗುವುದನ್ನು ನೆನಪಿಸುತ್ತದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ ಆಚರಣೆಗಳು ಇಂಡಿಯಾ ಗೇಟ್‌ನಲ್ಲಿರುವ ಅಮರ್ ಜವಾನ್ ಜ್ಯೋತಿಗೆ ಪ್ರಧಾನಮಂತ್ರಿಯವರು ಮಾಲಾರ್ಪಣೆ ಮಾಡುವುದರೊಂದಿಗೆ ಪ್ರಾರಂಭವಾಗುತ್ತದೆ. ಭಾರತದ ಸೇನಾ ಸಾಮರ್ಥ್ಯ, ಸಾಂಸ್ಕೃತಿಕ ವೈವಿಧ್ಯತೆ ಮತ್ತು ತಾಂತ್ರಿಕ ಪ್ರಗತಿಯನ್ನು ಸಾರುವ ಭವ್ಯ ಮೆರವಣಿಗೆ, ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಧ್ವಜಾರೋಹಣದ ಸಂದರ್ಭದಲ್ಲಿ ಬಂದೂಕು ವಂದನೆ ಮತ್ತು ಸಶಸ್ತ್ರ ಪಡೆಗಳ ವಿವಿಧ ಶಾಖೆಗಳ ಅಧಿಕಾರಿಗಳಿಗೆ ವಿಶಿಷ್ಟ ಸೇವಾ ಪದಕಗಳನ್ನು ನೀಡಲಾಯಿತು. ದ್ವಿಪಕ್ಷೀಯ ಸಂಬಂಧಗಳನ್ನು ಉತ್ತೇಜಿಸಲು ವಿದೇಶಿ ರಾಷ್ಟ್ರಗಳ ಮುಖ್ಯಸ್ಥರು ಅತಿಥಿಗಳಾಗಿ ಬರುತ್ತಾರೆ. ಜನವರಿ 29 ರಂದು ನಡೆಯುವ…

Read More

ಇಂಡಿಯಾ ಮೈತ್ರಿಕೂಟದಲ್ಲಿ ಮಹಾ ಬಿರುಕು ಉಂಟಾಗಿದ್ದು, ಭಿನ್ನಮತ ಸ್ಪೋಟವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಟಿಎಂಸಿ(ತೃಣಮೂಲ ಕಾಂಗ್ರೆಸ್) ನಿರ್ಧರಿಸಿದೆ. ಈ ಮೂಲಕ ಇಂಡಿಯಾ ಮಿತ್ರಕೂಟಕ್ಕೆ ಭಾರೀ ದೊಡ್ದ ಹಿನ್ನಡೆಯಾಗಿದ್ದು, ಇಂಡಿಯಾ ಮಿತ್ರಕೂಟಕ್ಕೆ ಬೆಂಬಲ ನೀಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ ಲೋಕಸಭೆ ಚುನಾವಣೆಯಲ್ಲಿ ತಮ್ಮ ರಾಜ್ಯದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪಶ್ಚಿಮ ಬಂಗಾಳ ಸಿಎಂ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಲೋಕಸಭೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ಟಿಎಂಸಿ ನಿರ್ಧಾರ ಮಾಡಿದೆ.  ಪ.ಬಂಗಾಳದಲ್ಲಿ ಯಾವುದೇ ಹೊಂದಾಣಿಕೆ ಇಲ್ಲ. ಟಿಎಂಸಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ. ಟಿಎಂಸಿ ಯಾರ ಜತೆಗೂ ಕೈಜೋಡಿಸಲ್ಲ ಎಂದಿದ್ದಾರೆ. ಕಾಂಗ್ರೆಸ್ ಪಕ್ಷ ಬೇಕಿದ್ದರೇ ಬಿಜೆಪಿ ವಿರುದ್ದ 300 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿ. ಯಾವುದೇ ಮೈತ್ರಿ ಇಲ್ಲ ಎಂದು ಮಮತಾ ಬ್ಯಾನರ್ಜಿ ಸ್ಪಷ್ಟನೆ ನೀಡಿದ್ದಾರೆ.

Read More