Subscribe to Updates
Get the latest creative news from FooBar about art, design and business.
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
- ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
- ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
- ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
- ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
- ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
- ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
- ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
Author: admin
ಉತ್ತರ ಪ್ರದೇಶ: ಟೆಂಪೋ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ನಡೆದ ಪರಿಣಾಮ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದದಲ್ಲಿ ಸಂಭವಿಸಿದೆ. ವೇಗವಾಗಿ ಬಂದ ಡಂಪರ್ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ದಟ್ಟವಾದ ಮಂಜಿನಿಂದ ಉಂಟಾದ ಕಡಿಮೆ ಗೋಚರತೆಯು ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಅಲ್ಲಾಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಫರೂಕಾಬಾದ್ ರಸ್ತೆಯಲ್ಲಿ ಘರ್ಷಣೆ ಸಂಭವಿಸಿದ್ದು, ಘಟನೆಯ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ದುಃಖತಪ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳ ತಕ್ಷಣದ ಚಿಕಿತ್ಸೆಗೆ ಆದ್ಯತೆ ನೀಡಬೇಕು ಮತ್ತು ಮೃತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ತುಮಕೂರು: ತುಮಕೂರು ನಗರದ ಬಾಲಕಿಯರ ಬಾಲ ಮಂದಿರದಲ್ಲಿ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಾಲಕಿಯು ಮೈಸೂರು ಮೂಲದವರಾಗಿದ್ದು, ಅಪ್ರಾಪ್ತ ಬಾಲಕಿಗೆ ಬಾಲ ಮಂದಿರದಲ್ಲಿ ಆಶ್ರಯ ನೀಡಲಾಗಿತ್ತು. ಇದೀಗ ಬೆಳ್ಳಂ ಬೆಳಗ್ಗೆ ಬಾಲ ಮಂದಿರದಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಇನ್ನು ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮುಸ್ಲಿಂ ಸಮುದಾಯಕ್ಕೆ ಸೇರಿದ ಐವರನ್ನು ಸಾರ್ವಜನಿಕವಾಗಿ ಥಳಿಸಿದ್ದ ಕೃತ್ಯದಲ್ಲಿ ಭಾಗಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರಿಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಇನ್ ಸ್ಪೆಕ್ಟರ್ ಎ.ವಿ. ಪರ್ಮಾರ್, ಸಬ್ ಇನ್ ಸ್ಪೆಕ್ಟರ್ ಡಿ.ಬಿ. ಕುಮಾವತ್ ಮತ್ತು ಇಬ್ಬರು ಕಾನ್ ಸ್ಟೆಬಲ್ಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಗಳಾದ ಬಿ.ಆರ್. ಗವಾಯಿ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ಪೀಠ ನಡೆಸಿತು. ‘ಜನರನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಲು ನಿಮಗೆ ಅಧಿಕಾರ ಕೊಟ್ಟವರು ಯಾರು’ ಎಂದು ಈ ವೇಳೆ ನ್ಯಾಯಪೀಠ ಖಾರವಾಗಿ ಪ್ರಶ್ನಿಸಿದೆ. ಆರೋಪಿಗಳನ್ನು ಬಂಧಿಸುವ ಮತ್ತು ವಿಚಾರಣೆಗೆ ಒಳಪಡಿಸುವ ಕುರಿತ ಸುಪ್ರೀಂ ಕೋರ್ಟ್ ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಗುಜರಾತ್ ಹೈಕೋರ್ಟ್, 2023ರ ಅಕ್ಟೋಬರ್ 19ರಂದು ಈ ನಾಲ್ವರಿಗೆ 14 ದಿನಗಳ ಜೈಲು ಶಿಕ್ಷೆ ವಿಧಿಸಿತ್ತು. ಆದೇಶವನ್ನು ಪ್ರಶ್ನಿಸಲು ಪೊಲೀಸರಿಗೆ ಅವಕಾಶ ನೀಡುವ ಉದ್ದೇಶದಿಂದ ಹೈಕೋರ್ಟ್, ತನ್ನ ಆದೇಶದ ಅನುಷ್ಠಾನಕ್ಕೆ ಮೂರು ತಿಂಗಳ ತಡೆಯಾಜ್ಞೆ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಪೊಲೀಸರು ಸುಪ್ರಿಂ ಕೋರ್ಟ್…
ರಾಮ ದೇವರಲ್ಲ, ಡಾ.ಬಿ.ಆರ್. ಅಂಬೇಡ್ಕರ್ ದೇವರು ಎಂದು ವಾಟ್ಸಪ್ ಸ್ಟೇಟಸ್ ಹಾಕಿದ್ದ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಯನ್ನು, ಬಲವಂತವಾಗಿ ಹನುಮಾನ್ ದೇವಸ್ಥಾನಕ್ಕೆ ಕರೆದೊಯ್ದು ಒತ್ತಾಯಪೂರ್ವಕವಾಗಿ ‘ಜೈ ಶ್ರೀರಾಮ್’ ಎಂದು ಹೇಳಿಸಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿರುವ ಆರೋಪದ ಮೇಲೆ ಹುಮನಾಬಾದ್ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಹುಮನಾಬಾದ್ ಪಟ್ಟಣದ ಅಭಿಷೇಕ್, ರಿತೇಶ ರೆಡ್ಡಿ. ಸುನೀಲ ರೆಡ್ಡಿ ಹಾಗೂ ಅಭಿಷೇಕ ತೆಲಂಗ ಬಂಧಿತರು. ಹುಮನಾಬಾದ್ ತಾಲ್ಲೂಕಿನ ಹುಣಸಗೇರಾ ಗ್ರಾಮದ ದರ್ಶನ್ ಲಕ್ಷ್ಮಣ ಕಟ್ಟಿಮನಿ ಹಲ್ಲೆಗೊಳಗಾದ ದ್ವಿತೀಯ ಪಿಯು ವಿದ್ಯಾರ್ಥಿ. ದರ್ಶನ್ ಎಂಬ ವಿದ್ಯಾರ್ಥಿ ಜನವರಿ 22 ರಂದು ‘ರಾಮ ದೇವರಲ್ಲ, ಡಾ.ಬಿ.ಆರ್. ಅಂಬೇಡ್ಕರ್ ದೇವರು’ ಎಂದು ವಾಟ್ಸಪ್ ನಲ್ಲಿ ಸ್ಟೇಟಸ್ ಇಟ್ಟುಕೊಂಡಿದ್ದ. ಇದನ್ನು ನೋಡಿದ ಅಭಿಷೇಕ್, ರಿತೇಶ ರೆಡ್ಡಿ, ಸುನೀಲ ರೆಡ್ಡಿ ಹಾಗೂ ಅಭಿಷೇಕ ತೆಲಂಗ ಅವರು ದರ್ಶನ್ ನನ್ನು ವಾಹನದಲ್ಲಿ ಹನುಮಾನ್ ದೇವಸ್ಥಾನಕ್ಕೆ ಕರೆದೊಯ್ದು ಜೈ ಶ್ರೀರಾಮ್ ಎಂದು ಹೇಳಿಸಿ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಎಸ್ ಪಿ ತಿಳಿಸಿದ್ದಾರೆ.
ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಏರ್ ಇಂಡಿಯಾಗೆ 1.10 ಕೋಟಿ ರೂ. ಕೆಲವು ದೀರ್ಘ-ಪ್ರಯಾಣದ ಮಾರ್ಗಗಳಲ್ಲಿ ಕಾರ್ಯನಿರ್ವಹಿಸುವ ವಿಮಾನಗಳಲ್ಲಿ ಸುರಕ್ಷತಾ ನಿಯಮಗಳ ಉಲ್ಲಂಘನೆಯ ಆವಿಷ್ಕಾರವನ್ನು ಈ ಕ್ರಮ ಅನುಸರಿಸುತ್ತದೆ. DGCA ಹೊರಡಿಸಿದ ಹೇಳಿಕೆಯ ಪ್ರಕಾರ, ಏರ್ ಇಂಡಿಯಾ ಉದ್ಯೋಗಿ ಸ್ವತಃ ವಿವಿಧ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿಮಾನಯಾನ ಸಂಸ್ಥೆಯ ವಿರುದ್ಧ ವರದಿಯನ್ನು ಸಲ್ಲಿಸಿದ್ದಾರೆ. ವಿಮಾನಯಾನ ನಿಯಂತ್ರಕರು ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಿದ್ದು, ಆರೋಪಗಳು ನಿಜವೆಂದು ಕಂಡುಬಂದಿದೆ ಎಂದು ಹೇಳಿದ್ದಾರೆ. ಕೆಲವು ಪ್ರಮುಖ ದೀರ್ಘಾವಧಿಯ ಮಾರ್ಗಗಳಲ್ಲಿ ಏರ್ ಇಂಡಿಯಾ ನಿರ್ವಹಿಸುವ ವಿಮಾನಗಳಲ್ಲಿ ಭದ್ರತಾ ಉಲ್ಲಂಘನೆಯ ಆರೋಪಗಳಿವೆ. ಏರ್ ಇಂಡಿಯಾ ಲಿಮಿಟೆಡ್ ವ್ಯವಸ್ಥಾಪಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ಬೆಂಗಳೂರು: ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಜ. 26ರಂದು ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಎರಡು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 1,500 ಮಕ್ಕಳು ಭಾಗವಹಿಸಲಿದ್ದಾರೆ. ಮೈದಾನದಲ್ಲಿ ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಹೆಗ್ಗನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ 700 ಮಕ್ಕಳು, ಪಿಳ್ಳಣ್ಣಗಾರ್ಡನ್ ಬಿಬಿಎಂಪಿ ಸಂಯುಕ್ತ ಪದವಿಪೂರ್ವ ಕಾಲೇಜಿನ 700 ಮಕ್ಕಳು ನೃತ್ಯ ಮಾಡಲಿದ್ದಾರೆ ಎಂದು ತಿಳಿಸಿದರು. ಕೇರಳ ಪೊಲೀಸ್, ಸ್ಕೌಟ್ಸ್-ಗೈಡ್ಸ್, ಎನ್ ಸಿಸಿ, ಸೇವಾದಳ ಮತ್ತು ವಿವಿಧ ಶಾಲೆಗಳ ಮಕ್ಕಳು ಕವಾಯತು ಮತ್ತು ಬ್ಯಾಂಡ್ ಗಳನ್ನು 38 ತುಕಡಿಗಳಲ್ಲಿ 1,150 ಮಂದಿ ನಡೆಸಿಕೊಡಲಿದ್ದಾರೆ. ಎಂಇಜಿ ತಂಡ ‘ಕಳರಿಪಯಟ್ಟು’, ಎಎಸ್ ಸಿ ಸೆಂಟರ್ ನ ಅನೀಶ್ ಥಾಮಸ್ ತಂಡದವರು ‘ದ್ವಿಚಕ್ರ ವಾಹನ ಸಾಹಸ’ ಪ್ರದರ್ಶನ ನೀಡಲಿದ್ದಾರೆ. ಎಸ್ ಎಫ್ ವಿಶೇಷ ತಂಡದ ಜೇಮ್ಸ್ ಅವರು ‘ಅಡಗು ತಾಣಗಳಲ್ಲಿ ಹೊಕ್ಕು ದಾಳಿ ಮಾಡುವ ನಿರೂಪಣೆ’ಯನ್ನು ನಡೆಸಿ ಕೊಡಲಿದ್ದಾರೆ ಎಂದು ಹೇಳಿದರು. ನಗರ ಪೊಲೀಸ್ ಕಮಿಷನರ್ ದಯಾನಂದ್,…
ಬಿಟ್ ಕಾಯಿನ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಅರೆಸ್ಟ್ ಮಾಡಲಾಗಿದ್ದು, ಎಸ್ ಐಟಿ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಇನ್ಸ್ ಪೆಕ್ಟರ್ ಪ್ರಶಾಂತ್ ಬಾಬು ಮತ್ತು ಸಂತೋಷ್ ನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದು, ಸಾಕ್ಷ್ಯ ನಾಶ ಮಾಡಿದ ಹಿನ್ನೆಲೆ ಈ ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ಐವರನ್ನು ವಶಕ್ಕೆ ಪಡೆದಿದ್ದರು. ಬಂಧಿತರಲ್ಲಿ ಪ್ರಶಾಂತ್ ಬಾಬು ಸೈಬರ್ ಇನ್ಸ್ ಪೆಕ್ಟರ್ ಆಗಿದ್ದು, ಸಂತೋಷ್ ಸೈಬರ್ ಸೆಂಟರ್ ವ್ಯಕ್ತಿ ಆಗಿದ್ದ. ಲಕ್ಷ್ಮೀಕಾಂತ್ ಇನ್ಸ್ ಪೆಕ್ಟರ್, ಶ್ರೀಧರ್ ಪೂಜಾರಿ ಡಿವೈಎಸ್ ಪಿ, ಚಂದ್ರಾದರ ಇನ್ಸ್ ಪೆಕ್ಟರ್ ಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರ್ ಆಗುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು: ನಾಳೆ 75 ನೇ ಗಣರಾಜ್ಯೋತ್ಸವಕ್ಕೆ ಬೆಂಗಳೂರು ಸಿದ್ಧವಾಗಿದೆ. ಇನ್ನೂ ಗಣರಾಜ್ಯೋತ್ಸವ ಕಾರ್ಯಕ್ರಮದ ಹಿನ್ನೆಲೆ ಹಲವು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಸೆಂಟ್ರಲ್ ಸ್ಟ್ರೀಟ್ -ಅನಿಲ್ ಕುಂಬ್ಳೆ ರಸ್ತೆಯಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೂ, ಕಬ್ಬನ್ ರಸ್ತೆ-ಸಿಟಿ ಓ ವೃತ್ತದಿಂದ ಕೆ. ಆರ್. ರಸ್ತೆ ಮತ್ತು ಕಬ್ಬನ್ ಜಂಕ್ಷನ್ವರೆಗೆ, ಎಂಜಿ ರೋಡ್ -ಅನಿಲ್ ಕುಂಬ್ಳೆ ವೃತ್ತದಿಂದ ಕ್ಲೀನ್ಸ್ ವೃತ್ತದವರೆಗೆ ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಈ ಬಗ್ಗೆ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರ ಸಂಚಾರಿ ಪೊಲೀಸರು ಕೆಲವೊಂದು ರಸ್ತೆಯಲ್ಲಿ ವಾಹನಗಳ ಮಾರ್ಗ ಬದಲಾವಣೆ ಮಾಡಿದ್ದಾರೆ. ಇನ್ ಫಾಂಟ್ರಿ ರಸ್ತೆಯಲ್ಲಿ ವಾಹನಗಳ ಮಾರ್ಗ ಬದಲಾವಣೆ ಆಗಿದೆ. ಮಣಿಪಾಲ್ ಸೆಂಟರ್ ಗೆ ತೆರಳುವ ವಾಹನಗಳು ಕಬ್ಬನ್ ರಸ್ತೆ ಮೂಲಕ ತೆರಳಬೇಕು. ಕಬ್ಬನ್ ರಸ್ತೆ, ಮಣಿಪಾಲ್ ಸೆಂಟರ್ ಜಂಕ್ಷನ್ನಿಂದ ಬಿಆರ್ ವಿ ಜಂಕ್ಷನ್ ಕಡೆ ಸಂಚಾರವನ್ನ ನಿರ್ಬಂಧ ಮಾಡಲಾಗಿದೆ. ಅನಿಲ್ ಕುಂಬ್ಳೆ ವೃತ್ತದಿಂದ ಕಬ್ಬನ್ ರಸ್ತೆಗೆ ಬರುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 25 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ 139 ಚಾಲಕರಿಗೆ ಪದೋನ್ನತಿ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, 25 ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿದ 139 ಚಾಲಕರು ಹಿರಿಯ ಚಾಲಕ ಹುದ್ದೆಗೆ ಪದೋನ್ನತಿ ಹೊಂದಿದ್ದು ಸಾಂಕೇತಿಕವಾಗಿ 13 ಚಾಲಕರಿಗೆ ಪದೋನ್ನತಿ ಆದೇಶವನ್ನು ವಿತರಿಸಲಾಯಿತು ಎಂದರು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ 1122 ಅರ್ಹ ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕವನ್ನು ವಿತರಿಸಲಾಯಿತು. ಬೆಂಗಳೂರಿನಲ್ಲಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿದ 1122 ಅರ್ಹ ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಿತರಿಸಿದರು. ಇದೇ ಸಂದರ್ಭದಲ್ಲಿ ಬಿಎಂಟಿಸಿ ಸಿಬ್ಬಂದಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ದಾವಣಗೆರೆ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿಯನ್ನೇ ಪತಿ ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿ ಕೆರೆಗೆ ಎಸೆದ ಘಟನೆ ದಾವಣಗೆರೆ ತಾಲೂಕಿನ ಕೊಡಗನೂರು ಗ್ರಾಮದ ಬಳಿ ನಡೆದಿದೆ. ಕಾವ್ಯ(21) ಕೊಲೆಯಾದ ಮಹಿಳೆಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಾಗಳಗೆರೆ ಗ್ರಾಮದ ನಿವಾಸಿ ಸಚಿನ್ (24) ಕೊಲೆ ಮಾಡಿದ ಪತಿಯಾಗಿದ್ದಾನೆ. ದಾವಣಗೆರೆ ತಾಲೂಕಿನ ಕಡ್ಲೆಬಾಳು ಗ್ರಾಮದ ಚೈತ್ರ (21) ಎನ್ನುವ ಯುವತಿ ಜೊತೆ ಸಂಬಂಧ ಇಟ್ಟುಕೊಂಡು ಕಾವ್ಯಾಳನ್ನು ಮದುವೆಯಾಗಿದ್ದನು. ಅಕ್ರಮ ಸಂಬಂಧಕ್ಕೆ ಕಾವ್ಯಾ ಅಡ್ಡಿಯಾಗುತ್ತಿದ್ದಾಳೆ ಎಂದು ಸಚಿನ್ ಮತ್ತು ಚೈತ್ರಾ ಸೇರಿಕೊಂಡು ಕಾವ್ಯಾಳನ್ನು ಕೊಲೆ ಮಾಡಿದ್ದಾರೆ. ಬಳಿಕ ಗೋಣಿ ಚೀಲದಲ್ಲಿ ಕಾವ್ಯಾಳ ಮೃತದೇಹವನ್ನು ತುಂಬಿಸಿ ಕೊಡಗನೂರು ಕೆರೆಗೆ ಹಾಕಿದ್ದರು. 10 ದಿನಗಳ ಹಿಂದೆ ನಡೆದ ಈ ಕೊಲೆ ಪ್ರಕರಣ ಇದೀಗ ಬಯಲಿಗೆ ಬಂದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತದೇಹವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ.