Subscribe to Updates
Get the latest creative news from FooBar about art, design and business.
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
- ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
- ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
- ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
- ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
- ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
- ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
- ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
Author: admin
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸೇತುವೆಗೆ ಕಾರು ಡಿಕ್ಕಿಯಾದ ಪರಿಣಾಮ ಮೂರು ಸಣ್ಣ ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಸಿಂಧುಶ್ರೀ(2 ವರ್ಷ), ಹಯ್ಯಾಳಪ್ಪ (5 ತಿಂಗಳ), ರಕ್ಷಾ (3 ತಿಂಗಳ ) ಹಾಗೂ ಲಿಂಗಪ್ಪ (26) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಇನ್ನುಳಿದ ಯಲ್ಲಮ್ಮ (30), ಮಲ್ಲಮ್ಮ (20), ನಾಗಪ್ಪ(35) ಅವರಿಗೆ ಗಂಭೀರ ಗಾಯಗಳಾಗಿದ್ದು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸಂಕ್ರಾಂತಿ ಹಬ್ಬಕ್ಕೆಂದು ಬೆಂಗಳೂರಿನಿಂದ ಊರಿಗೆ ಹೋಗಿದ್ದ ಕುಟುಂಬವು ಕಳೆದ ರಾತ್ರಿ ನಗರಕ್ಕೆ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ. ನಿದ್ದೆ ಮಂಪರಿನಲ್ಲಿದ್ದ ಕಾರು ಓಡಿಸುತ್ತಿದ್ದ ಲಿಂಗಪ್ಪ ಸಾಣೆಕೆರೆ ಬಳಿ ನಿಯಂತ್ರಣ ಕಳೆದುಕೊಂಡ ಕಾರಣ ವಾಹನ ಸೇತುವೆಗೆ ಭಾರೀ ವೇಗದಲ್ಲಿ ಅಪ್ಪಳಿಸಿದೆ. ಸಂಕ್ರಾಂತಿ ಹಬ್ಬಕ್ಕೆಂದು ಬೆಂಗಳೂರಿನಿಂದ ಊರಿಗೆ ಹೋಗಿದ್ದ ಕುಟುಂಬವು ಕಳೆದ ರಾತ್ರಿ ನಗರಕ್ಕೆ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ. ನಿದ್ದೆ ಮಂಪರಿನಲ್ಲಿದ್ದ ಕಾರು ಓಡಿಸುತ್ತಿದ್ದ ಲಿಂಗಪ್ಪ ಸಾಣೆಕೆರೆ ಬಳಿ ನಿಯಂತ್ರಣ ಕಳೆದುಕೊಂಡ ಕಾರಣ ವಾಹನ ಸೇತುವೆಗೆ…
ಹೈದರಾಬಾದ್: ಅನ್ಯಕೋಮಿನ ವ್ಯಕ್ತಿಯೊಬ್ಬ ಕೇಸರಿ ಧ್ವಜವನ್ನು ಅವಮಾನಿಸುವ ರೀಲ್ ಅಪ್ ಲೋಡ್ ಮಾಡಿದ ಘಟನೆ ನಡೆದಿದೆ. ರೀಲ್ ನಲ್ಲಿ ಯುವಕ ಕೇಸರಿ ಧ್ವಜವನ್ನು ಹಿಡಿದಿದ್ದು ಅದರ ಮೇಲೆ ಹಿಂದೂ ಧಾರ್ಮಿಕ ಚಿಹ್ನೆ ‘ಓಂ’ ಎಂದು ಬರೆಯಲಾಗಿದೆ. ರೀಲ್ಸ್ ಕಂಡು ಕೋಪಗೊಂಡ ಜನರು ಮೇದಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಅವರನ್ನು ಕಂಡು ಥಳಿಸಿ ವೀಡಿಯೊ ಮಾಡಿದ್ದಾರೆ. ವೀಡಿಯೋದಲ್ಲಿ ಗುಂಪು ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗುತ್ತಾ ಮುಸ್ಲಿಂ ಯುವಕನನ್ನು ಥಳಿಸಿ, ಆತನನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ. ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಯ ವಿರುದ್ಧ ಗ್ರಾಮಸ್ಥರು ದೂರು ದಾಖಲಿಸಿದ್ದರೆ, ಇತ್ತ ಹಲ್ಲೆಗೊಳಗಾದ ಯುವಕನೂ ಹಲ್ಲೆ ನಡೆಸಿದ ಗ್ರಾಮಸ್ಥರ ವಿರುದ್ಧ ಪ್ರತಿ ದೂರು ದಾಖಲಿಸಿದ್ದಾನೆ.
ಮಂಡ್ಯ: ಮೇಲುಕೋಟೆ ಶಿಕ್ಷಕಿ ‘ದೀಪಿಕಾ’ ಹತ್ಯೆ ಬೆನ್ನಲ್ಲೇ ಮಂಡ್ಯದಲ್ಲಿ ಮತ್ತೊಂದು ಭೀಕರ ಕೃತ್ಯ ನಡೆದಿದ್ದು, ಮಂಡ್ಯದ ಕಲ್ಲಹಳ್ಳಿ ಸಮೀಪದ ರೈಲ್ವೇ ಗೇಟ್ ಬಳಿಯ ಮೋರಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಲೈಂಗಿಕ ದೌರ್ಜನ್ಯ ಎಸಗಿ ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಮಂಡ್ಯದ ಸೆಂಟ್ರಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇವಲ 2 ದಿನದ ಅಂತರದಲ್ಲಿ ಇಬ್ಬರು ಮಹಿಳೆಯರ ಕೊಲೆಯಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ.
ಉತ್ತರಾಖಂಡ: ಹರಿದ್ವಾರದ ಹರ್ ಕಿ ಪೌರಿಯಲ್ಲಿ ಮೂಢನಂಬಿಕೆಗೆ ಅಪ್ರಾಪ್ತ ಏಳು ವರ್ಷದ ಬಾಲಕ ಬಲಿಯಾದ ಘಟನೆ ನಡೆದಿದೆ. ಗಂಗಾ ನದಿಯಲ್ಲಿ ಮುಳುಗಿಸುವುದರಿಂದ ಮಗು ರಕ್ತದ ಕ್ಯಾನ್ಸರ್ ನಿಂದ ಗುಣಮುಖವಾಗಲಿದ್ದಾನೆ ಎಂದು ಪವಾಡದ ನಿರೀಕ್ಷೆಯಲ್ಲಿ ಆತನ ಚಿಕ್ಕಮ್ಮ ಸುಧಾ ಸುಮಾರು ಐದು ನಿಮಿಷಗಳ ಕಾಲ ಗಂಗಾ ನದಿಯಲ್ಲಿ ಮುಳುಗಿಸಿದ್ದಾರೆ. ಅವರು ಮಗುವನ್ನು ಗಂಗಾ ನದಿಯಲ್ಲಿ ಮುಳುಗಿಸಿದಾಗ, ಸುತ್ತಮುತ್ತಲಿನ ಸ್ಥಳೀಯರಿಗೆ ಅನುಮಾನವಾಯಿತು. ಗಲಾಟೆ ಮಾಡಿ ಮಗುವನ್ನು ರಕ್ಷಿಸಲು ಯತ್ನಿಸಿದರು. ಆದರೆ, ಅಷ್ಟರಲ್ಲೇ ಮಗುವಿನ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಮಗುವಿನ ಶವದ ಎದುರು ಕುಳಿತ ಮಹಿಳೆಯೋರ್ವಳು ವಿಕಾರವಾಗಿ ನಗುತ್ತ, ಮಗು ಜೀವಂತವಾಗಿ ಬರುತ್ತದೆ ಎಂದು ಜನರಿಗೆ ಹೇಳುತ್ತಿರುವುದು ವಿಡಿಯೋದಲ್ಲಿದೆ. ಇವಳು ಮಾನಸಿಕ ಅಸ್ವಸ್ಥಳಿರಬಹುದು ಎಂದು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು- ಸೇಲಂ ರಾಷ್ಟ್ರೀಯ ಹೆದ್ದಾರಿಯ ಧರ್ಮಪುರಿ ಜಿಲ್ಲೆಯ ತೊಕ್ಕೂರು ಕಣಿವೆಯ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಧಾರುಣ ಸಾವನ್ನಪ್ಪಿದ ಘಟನೆ ನಡೆದಿದೆ. ಎರಡು ಲಾರಿಗಳ ನಡುವೆ ಭೀಕರ ಅಪಘಾತವಾಗಿದ್ದು, ಬಳಿಕ ನಾಲ್ಕೈದು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಒಂದು ಲಾರಿಗೆ ಹೆದ್ದಾರಿಯಲ್ಲಿಯೇ ಬೆಂಕಿ ಹೊತ್ತಿಕೊಂಡರೆ, ಇನ್ನೊಂದು ಲಾರಿ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದಿದೆ. ಇನ್ನು ಹಲವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಗೆ ದಾಖಲಿಸಲಾಗಿದೆ.
ಬೆಂಗಳೂರು: ಡಿವೈಡರ್ ಮೇಲೆ ಹಾರಿ ಮುಂದೆ ಬರುತ್ತಿದ್ದ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಅಪಘಾತಕ್ಕೊಳಗಾದ ಬೈಕ್ ಚಾಲಕನ ಮುಖ ಹಾಗೂ ದೇಹದ ಕೆಲ ಭಾಗಗಳಲ್ಲಿ ರಕ್ತಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಡಿದು ಲಾರಿ ಚಲಾಯಿಸಿ ಅಪಘಾತ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಅಪಘಾತವಾದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಲಾರಿಯ ವೇಗದ ಚಾಲನೆ ನಡುವೆ ಮುಂದೆ ಬರುತಿದ್ದ ಎರಡು ಕಾರುಗಳು ಅಪಘಾತದಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿವೆ. ಕುಡಿದು ಲಾರಿ ಚಲಾಯಿಸಿ ಅಪಘಾತ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಅಪಘಾತವಾದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಯಶವಂತಪುರ ಸಂಚಾರಿ ಠಾಣಾ ಪೊಲೀಸರು, ಲಾರಿ ವಶಕ್ಕೆ ಪಡೆದು ಚಾಲಕನ ಮಾಹಿತಿ ಕಲೆಹಾಕುತ್ತಿದ್ದಾರೆ.
ಬೆಂಗಳೂರು: ಬೆಂಗಳೂರಿನ ಉದ್ಯಾನವೊಂದರ ಬಳಿ ಕಾರಿನಲ್ಲೇ ಬೆತ್ತಲಾಗಿ ಕಾಮತೃಷೆ ತೀರಿಸಿಕೊಳ್ಳಲು ಮುಂದಾಗಿ ಜೋಡಿಯೊಂದು ಎಡವಟ್ಟು ಮಾಡಿಕೊಂಡ ಘಟನೆ ನಡೆದಿದೆ. ಪಾರ್ಕ್ ನಲ್ಲಿ ಅನೇಕ ಮಂದಿ ಇದ್ದರೂ, ಅವರಿಗೆಲ್ಲ ತಾವು ಕಾಣಿಸುತ್ತಿದ್ದರೂ ಅದನ್ನು ಲೆಕ್ಕಿಸದೆ ಜೋಡಿ ಸರಸದಲ್ಲಿ ತಲ್ಲೀನರಾಗಿದ್ದಾರೆ. ಇದೇ ವೇಳೆ ಅಲ್ಲಿ ಕರ್ತವ್ಯ ನಿರತರಾಗಿದ್ದ ಸಬ್ ಇನ್ಸ್ ಪೆಕ್ಟರ್ ಮಹೇಶ್ ಆ ಜೋಡಿಯನ್ನು ಗಮನಿಸಿ, ಬುದ್ಧಿಹೇಳಲು ಕಾರಿನ ಬಳಿ ತೆರಳಿದ್ದಾರೆ. ಕಾರಿನ ಬಳಿ ಹೋಗಿ ನಂಬರ್ ಪ್ಲೇಟ್ ಪರಿಶೀಲನೆ ನಡೆಸಿದ ಸಬ್ ಇನ್ಸ್ ಪೆಕ್ಟರ್ ನನ್ನು ಕಂಡ ಜೋಡಿಯು ತಕ್ಷಣ ಎಚ್ಚೆತ್ತುಕೊಂಡು, ಯುವಕ ಏಕಾಏಕಿ ಕಾರು ಚಲಾಯಿಸಿದ್ದಾನೆ. ದಿಢೀರ್ ಕಾರು ಚಲಿಸಲು ಆರಂಭಿಸಿದ ಕಾರಣ ಸಬ್ ಇನ್ಸ್ ಪೆಕ್ಟರ್ ಮಹೇಶ್ ಬಾನೆಟ್ ಮೇಲೆ ಬಿದ್ದಿದ್ದಾರೆ. ಅವರು ಕಾರಿನ ಬಾನೆಟ್ ಹಿಡಿದುಕೊಂಡು ಒದ್ದಾಡುತ್ತಿದ್ದರೂ ಲೆಕ್ಕಿಸದ ಯುವಕ ಕಾರು ಚಲಾಯಿಸಿ, ಏಕಾಏಕಿ ಕಾರನ್ನು ರಿವರ್ಸ್ ತೆಗೆದು ಮತ್ತೆ ಮುಂದಕ್ಕೆ ಚಲಾಯಿಸಿದ್ದಾನೆ. ಪರಿಣಾಮವಾಗಿ ಕೆಳಬಿದ್ದ ಸಬ್ ಇನ್ಸ್ ಪೆಕ್ಟರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಘಟನೆಯಲ್ಲಿ ಗಂಭೀರವಾಗಿ…
ಬೆಂಗಳೂರು: ಪೌರ ಕಾರ್ಮಿಕರಿಗೆ ನೆರವಾಗುವುದಕ್ಕಾಗಿ ಬಿಬಿಎಂಪಿ ಹ್ಯಾಂಡ್ ಹೆಲ್ಡ್ ಮೆಕ್ಯಾನಿಕಲ್ ಸ್ವೀಪರ್ ಗಳನ್ನು ಅಥವಾ ಕಸ ಗುಡಿಸುವ ಯಂತ್ರಗಳನ್ನು ಖರೀದಿಸಲು ನಿರ್ಧರಿಸಿದೆ. ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ಈ ಯಂತ್ರಗಳನ್ನು ಖರೀದಿಸಲಾಗುತ್ತದೆ. ಹ್ಯಾಂಡ್ ಹೆಲ್ಡ್ ಮೆಕ್ಯಾನಿಕಲ್ ಸ್ವೀಪರ್ ಗಳನ್ನು ಖರೀದಿಸಲು ಈ ಹಿಂದೆಯೂ ಎರಡು ಬಾರಿ ಯತ್ನಿಸಲಾಗಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ವಿಫಲ ಪ್ರಯತ್ನ ನಂತರ ಇದೀಗ ಹ್ಯಾಂಡ್ ಹೆಲ್ಡ್ ಮೆಕ್ಯಾನಿಕಲ್ ಸ್ವೀಪರ್ ಗಳ ಖರೀದಿಗೆ ಕ್ರಮ ಕೈಗೊಳ್ಳುತ್ತಿದೆ.
ಅಯೋಧ್ಯೆ ರಾಮ ಮಂದಿರ ವಿಚಾರವಾಗಿ ನಟ ಅಲ್ಲು ಅರ್ಜುನ್ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀರಾಮನ ಆಗಮನದಿಂದ ಭಾರತದಲ್ಲಿ ಹೊಸ ಯುಗ ಆರಂಭವಾಗಿದೆ ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ. ಮುಂಬರುವ ವರ್ಷಗಳಲ್ಲಿ ಅಯೋಧ್ಯೆ ವಿಶ್ವದ ಅತಿದೊಡ್ಡ ಯಾತ್ರಾ ಸ್ಥಳವಾಗಲಿದೆ ಎಂದು ಅಲ್ಲು ಅರ್ಜುನ್ ಇನ್ಸ್ಟಾಗ್ರಾಮ್ನಲ್ಲಿ ಬರೆದಿದ್ದಾರೆ. ಭಾರತಕ್ಕೆ ಎಂತಹ ದಿನ. ರಾಮ ಮಂದಿರ ಉದ್ಘಾಟನೆಯ ಬಗ್ಗೆ ನಾನು ತುಂಬಾ ಭಾವುಕನಾಗಿದ್ದೇನೆ. ಅವರ ಆಗಮನದೊಂದಿಗೆ ಭಾರತದಲ್ಲಿ ಹೊಸ ಯುಗ ಪ್ರಾರಂಭವಾಯಿತು. ಮುಂಬರುವ ವರ್ಷಗಳಲ್ಲಿ ನಾನು ಅಯೋಧ್ಯೆಯನ್ನು ವಿಶ್ವದ ಅತಿದೊಡ್ಡ ತೀರ್ಥಯಾತ್ರೆಯಾಗಿ ನೋಡಲು ಬಯಸುತ್ತೇನೆ. ಜೈ ಶ್ರೀರಾಮ್ ಜೈ ಹಿಂದ್” ಎಂದು ಅಲ್ಲು ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ. ಪ್ರತಿ ವರ್ಷ ಅಯೋಧ್ಯೆಗೆ ಖಂಡಿತ ಬರುತ್ತೇನೆ. ನನಗೆ ಅದು ಆಧ್ಯಾತ್ಮಿಕತೆ, ನಂಬಿಕೆ ರಾಜಕೀಯವಲ್ಲ. ಪ್ರತಿಯೊಬ್ಬರೂ ವಿಭಿನ್ನ ಅಭಿಪ್ರಾಯಗಳನ್ನು ಹೊಂದಬಹುದು ಮತ್ತು ಅವರು ಎಲ್ಲಾ ಸಮಯದಲ್ಲೂ ಹೊಂದಿಕೆಯಾಗುವುದಿಲ್ಲ ಎಂದು ಅವರು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ವಿಪಕ್ಷ ನಾಯಕ ಆರ್. ಅಶೋಕ್, ಮೈತ್ರಿಕೂಟ ಒಂದಾಗುವ ಗ್ಯಾರಂಟಿ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾತನಾಡಿದ ಆರ್. ಅಶೋಕ್, ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಎಷ್ಟು ಸ್ಥಾನಗಳನ್ನು ಗೆಲ್ಲುತ್ತದೆಯೋ ಅಷ್ಟು ಸ್ಥಾನ ನಾನು ಪಶ್ಚಿಮ ಬಂಗಾಳದಲ್ಲಿ ಗೆಲ್ಲುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಿಜ ಸ್ಥಿತಿಯೂ ಹಾಗೆ ಇದೆ. ಸಂಸತ್ ನಲ್ಲಿ ವಿಪಕ್ಷ ನಾಯಕನಾಗುವ ಯೋಗ್ಯತೆ ಕಾಂಗ್ರೆಸ್ ಪಕ್ಷಕ್ಕಿಲ್ಲ ಎಂದು ಟೀಕಿಸಿದರು. ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಪಸ್ ಆಗುತ್ತಾರೆಯೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಆರ್. ಅಶೋಕ್, ಶೆಟ್ಟರ್ ಮತ್ತೆ ಬಿಜೆಪಿಗೆ ಬರುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ಪಾಪ ಶೆಟ್ಟರ್ ಕಾಂಗ್ರೆಸ್ ಪಕ್ಷದಲ್ಲಿ ಮೂಲೆಗುಂಪಾಗಿದ್ದಾರೆ. ಸರ್ಕಾರ ಬಂದು 8 ತಿಂಗಳಾದ್ರೂ ಅಧಿಕಾರವನ್ನ ಕೊಟ್ಟಿಲ್ಲ. ಅಲ್ಲಿಗೆ ಹೋಗಿ ನಮ್ಮ…