Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ಬೆಂಗಳೂರು: ದೇಶಾದ್ಯಂತ ಇಂದು 77ನೇ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನ ಮಾಣೆಕ್ಶಾ ಪರೇಡ್ ಮೈದಾನದಲ್ಲಿ ಅದ್ಧೂರಿ ಆಚರಣೆ ನಡೆಯಿತು. ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಿದರು. ಧ್ವಜಾರೋಹಣ ಮತ್ತು ಪಥಸಂಚಲನ: ಬೆಳಿಗ್ಗೆ ಸರಿಯಾಗಿ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಿದರು. ನಂತರ ತೆರೆದ ಜೀಪಿನಲ್ಲಿ ಸಾಗಿ ಪರೇಡ್ ವೀಕ್ಷಣೆ ಮಾಡಿ ಗೌರವ ವಂದನೆ ಸ್ವೀಕರಿಸಿದರು. ಈ ಬಾರಿಯ ಪಥಸಂಚಲನದಲ್ಲಿ ಸೇನೆ, ವಾಯುಪಡೆ, ಸಿಆರ್ಪಿಎಫ್ ಮಹಿಳಾ ತುಕಡಿ ಹಾಗೂ ವಿಶೇಷವಾಗಿ ತಮಿಳುನಾಡು ರಾಜ್ಯ ಮೀಸಲು ಪೊಲೀಸ್ ಪಡೆ ಸೇರಿದಂತೆ ಒಟ್ಟು 37 ತುಕಡಿಗಳು ಭಾಗವಹಿಸಿದ್ದವು. ಸುಮಾರು 1,100 ಮಂದಿ ಶಿಸ್ತುಬದ್ಧ ಪಥಸಂಚಲನದ ಮೂಲಕ ದೇಶಪ್ರೇಮದ ಕಿಚ್ಚು ಹಚ್ಚಿದರು. ರಾಜ್ಯಪಾಲರ ಭಾಷಣದ ಮುಖ್ಯಾಂಶಗಳು: ತಮ್ಮ ಭಾಷಣದಲ್ಲಿ ರಾಜ್ಯಪಾಲರು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿದರು. “ಸಂವಿಧಾನವು ನಮಗೆ ಸಮಾನತೆ ಮತ್ತು ನ್ಯಾಯದ ಹಾದಿಯನ್ನು ತೋರಿಸಿಕೊಟ್ಟಿದೆ. ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ,”…
ರಾಮನಗರ: ರಾಜಕೀಯ ನಿವೃತ್ತಿಯ ವದಂತಿಗಳಿಗೆ ತೆರೆ ಎಳೆದಿರುವ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು, ಮತ್ತೆ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗುವುದಾಗಿ ಸ್ಪಷ್ಟಪಡಿಸಿದ್ದಾರೆ. ರಾಮನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ನನಗೆ ರಾಜಕೀಯ ಜನ್ಮ ನೀಡಿದ ರಾಮನಗರವೇ ನನ್ನ ಅಂತಿಮ ರಾಜಕೀಯ ನೆಲೆ” ಎಂದು ಘೋಷಿಸಿದ್ದಾರೆ. ರಾಮನಗರದತ್ತ ಚಿತ್ತ: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಒತ್ತಡದಿಂದ ಮಂಡ್ಯಕ್ಕೆ ಹೋಗಬೇಕಾಯಿತು. ಆದರೆ, ನನ್ನ ರಾಜಕೀಯ ಜೀವನದ ಉಳಿದ ಭಾಗವನ್ನು ರಾಮನಗರದಲ್ಲೇ ಕಳೆಯುತ್ತೇನೆ ಎಂದು ಅವರು ತಿಳಿಸಿದರು. 2028ರಲ್ಲಿ ಮೈತ್ರಿ ಸರ್ಕಾರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ (2028) ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಪ್ರಸ್ತುತ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಈ ಸರ್ಕಾರದಲ್ಲಿ ದುಡ್ಡಿಲ್ಲ, ಜನರ ನಂಬಿಕೆಯೂ ಇಲ್ಲ” ಎಂದು ಟೀಕಿಸಿದರು. ಭೂ ವಿವಾದ ಮತ್ತು ಸರ್ಕಾರದ ವಿರುದ್ಧ ಆರೋಪ: ರಾಮನಗರದಲ್ಲಿ ತಾವು ಹೊಂದಿರುವ 46 ಎಕರೆ ಜಮೀನಿನ ಪೈಕಿ,…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಮುಂದಿನ ಚುನಾವಣೆಯ ಕುರಿತು ಈಗಲೇ ಚರ್ಚೆಗಳು ಆರಂಭವಾಗಿದ್ದು, ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಭಾನುವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಜೆಡಿಎಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಅಧಿಕಾರ ಮರೀಚಿಕೆ: ಜೆಡಿಎಸ್ ನವರು ಕೇವಲ ರಾಜಕೀಯ ಭಾಷಣಕ್ಕಾಗಿ ಅಧಿಕಾರಕ್ಕೆ ಬರುವುದಾಗಿ ಹೇಳುತ್ತಿದ್ದಾರೆ. ಬಿಜೆಪಿ ಜೊತೆ ಸೇರಿರುವುದರಿಂದ ಅಧಿಕಾರ ಸಿಗಬಹುದು ಎಂಬ ಭ್ರಮೆಯಲ್ಲಿದ್ದಾರೆ. ಆದರೆ, ಒಂದು ವೇಳೆ ಮೈತ್ರಿಗೆ ಬಹುಮತ ಬಂದರೂ ಬಿಜೆಪಿ ಅವರು ಜೆಡಿಎಸ್ಗೆ ಅಧಿಕಾರ ಬಿಟ್ಟುಕೊಡುವುದಿಲ್ಲ ಎಂದು ಸಿಎಂ ಲೇವಡಿ ಮಾಡಿದರು. 2028ರ ಚುನಾವಣೆ: ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ. ಆಗ ನಾಯಕತ್ವ ಯಾರದ್ದು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರೇವಣ್ಣ ಪ್ರಕರಣ: ಹೆಚ್.ಡಿ. ರೇವಣ್ಣ ಅವರ ಬಂಧನದ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ನಾವು ಯಾರ ವಿರುದ್ಧವೂ ದ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನಿನ ಪ್ರಕಾರ ಪೊಲೀಸರು…
ಬಳ್ಳಾರಿ: ನಗರದಲ್ಲಿರುವ ಮಾಡೆಲ್ ಹೌಸ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿಲ್ಲ, ಬದಲಾಗಿ ಭಯದ ವಾತಾವರಣ ಸೃಷ್ಟಿಸಲು ಉದ್ದೇಶಪೂರ್ವಕವಾಗಿಯೇ ಬೆಂಕಿ ಹಚ್ಚಲಾಗಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಬಳ್ಳಾರಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆಯ ಬಗ್ಗೆ ಪೊಲೀಸರು ನೀಡುತ್ತಿರುವ ವಿವರಣೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಮುಖ ಅಂಶಗಳು ಇಲ್ಲಿವೆ: ಪೊಲೀಸ್ ತನಿಖೆಗೆ ಆಕ್ಷೇಪ: ಎಸ್ಪಿ ಅವರು ಕೆಳಹಂತದ ಅಧಿಕಾರಿಗಳು ನೀಡಿದ ತಪ್ಪು ಮಾಹಿತಿಯ ಆಧಾರದ ಮೇಲೆ ತರಾತುರಿಯಲ್ಲಿ ಹೇಳಿಕೆ ನೀಡಿದ್ದಾರೆ. ಬೆಂಕಿ ಹಚ್ಚಿದ್ದನ್ನು ಇಬ್ಬರು ಸೆಕ್ಯುರಿಟಿ ಗಾರ್ಡ್ಗಳು ಕಣ್ಣಾರೆ ನೋಡಿದ್ದಾರೆ. ಆದರೆ ಪೊಲೀಸರು ಇದು ‘ರೀಲ್ಸ್’ ಮಾಡುವಾಗ ನಡೆದ ಅವಘಡ ಎನ್ನುತ್ತಿರುವುದು ಹಾಸ್ಯಾಸ್ಪದ ಎಂದು ರೆಡ್ಡಿ ಟೀಕಿಸಿದರು. ಸಿಬಿಐ ತನಿಖೆಗೆ ಒತ್ತಾಯ: ಈ ಪ್ರಕರಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬಳಸಿ ಬೆಂಕಿ ಹಚ್ಚಲಾಗಿದೆ. ಸಿಗರೇಟ್ನಿಂದ ಬೆಂಕಿ ಹತ್ತಿಕೊಂಡಿದೆ ಎಂಬುದು ಸುಳ್ಳು. ಈ ಪ್ರಕರಣವನ್ನು ಮಂಗಳವಾರ ಸದನದಲ್ಲಿ ಪ್ರಸ್ತಾಪಿಸಿ ಸಿಬಿಐ ತನಿಖೆಗೆ ಒತ್ತಾಯಿಸುವುದಾಗಿ ಅವರು ತಿಳಿಸಿದರು. ಶಾಸಕ ಭರತ್…
ಹುಬ್ಬಳ್ಳಿ: ನಗರದಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ಕಾರ್ಯಕ್ರಮದ ವೇಳೆ ಬೃಹತ್ ಕಟೌಟ್ (ಹೋರ್ಡಿಂಗ್) ಕುಸಿದು ಬಿದ್ದು ಮೂವರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. ಗಾಯಾಳುಗಳನ್ನು ಇಲ್ಲಿನ ಸುಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಘಟನೆಯ ವಿವರ: ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ವಸತಿ ಇಲಾಖೆ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನೂತನ ಮನೆಗಳ ಹಂಚಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕಾಗಿ ಅಳವಡಿಸಲಾಗಿದ್ದ ಬೃಹತ್ ಕಟೌಟ್ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಬ್ಯಾಹಟ್ಟಿಯ ಶಂಕರ ಹಡಪದ (28), ಹುಬ್ಬಳ್ಳಿಯ ಶಾಂತಾ ಕ್ಯಾರಕಟ್ಟಿ (60) ಮತ್ತು ಧಾರವಾಡದ ಲಕ್ಷ್ಮಿನಗರದ ಮಂಜುನಾಥ (33) ಎಂಬವರು ಗಾಯಗೊಂಡಿದ್ದಾರೆ. ಸರ್ಕಾರದಿಂದ ಸಂಪೂರ್ಣ ನೆರವು: ಮನೆ ವಿತರಣೆ ಕಾರ್ಯಕ್ರಮದ ನಂತರ ನೇರವಾಗಿ ಆಸ್ಪತ್ರೆಗೆ ತೆರಳಿದ ಸಿಎಂ ಸಿದ್ದರಾಮಯ್ಯ, ಗಾಯಾಳುಗಳಿಗೆ ಧೈರ್ಯ ತುಂಬಿದರು. ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿದ ಅವರು, “ಗಾಯಾಳುಗಳಿಗೆ ಬೇಕಾದ ಸಂಪೂರ್ಣ ಚಿಕಿತ್ಸೆ ಮತ್ತು ಔಷಧಿಯನ್ನು ಸರ್ಕಾರದಿಂದಲೇ…
ಹುಬ್ಬಳ್ಳಿ: ಜಾತಿ, ಧರ್ಮಗಳನ್ನು ಬದಿಗಿಟ್ಟು ಬಡವರು ಮತ್ತು ಹಿಂದುಳಿದವರು ತಮ್ಮ ಹಕ್ಕುಗಳು, ಸಂವಿಧಾನ ಹಾಗೂ ದೇಶದ ಸ್ವಾತಂತ್ರ್ಯವನ್ನು ರಕ್ಷಿಸಲು ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹೋರಾಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಬಡವರಿಗೆ ಮನೆ ಹಂಚಿಕೆ ಮತ್ತು ಕೊಳೆಗೇರಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸುವ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಒಗ್ಗಟ್ಟಿನ ಕರೆ: “ಮೂರ್ಖ ಸರ್ಕಾರಕ್ಕೆ ಪಾಠ ಕಲಿಸಲು ಬಡವರೆಲ್ಲರೂ ಒಂದಾಗಬೇಕು. ನಾವು ಹೋರಾಡದಿದ್ದರೆ ನಮ್ಮ ಸಂವಿಧಾನ ಮತ್ತು ಸ್ವಾತಂತ್ರ್ಯ ಕೈತಪ್ಪಿ ಹೋಗುತ್ತದೆ. ನಾವು ಮತ್ತೆ ಗುಲಾಮರಂತೆ ಬದುಕಬೇಕಾದ ಸ್ಥಿತಿ ಬರುತ್ತದೆ” ಎಂದು ಖರ್ಗೆ ಎಚ್ಚರಿಸಿದರು. ಸರ್ವಾಧಿಕಾರದ ಭೀತಿ: ಮುಂಬರುವ ಚುನಾವಣೆಗಳಲ್ಲಿ ಜನರು ಬಿಜೆಪಿ ವಿರುದ್ಧ ಒಗ್ಗಟ್ಟಾಗದಿದ್ದರೆ ದೇಶದಲ್ಲಿ ಹಿಟ್ಲರ್, ಮುಸೊಲಿನಿ ಅಥವಾ ಸದ್ದಾಂ ಹುಸೇನ್ ಅಂತಹ ಸರ್ವಾಧಿಕಾರಿಗಳು ಆಡಳಿತ ನಡೆಸುವ ಅಪಾಯವಿದೆ ಎಂದು ಅವರು ಆತಂಕ…
ತುಮಕೂರು: ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆ, ಕಾರ್ಪೊರೇಷನ್ ವ್ಯಾಪ್ತಿಯ ಎಲ್ಲಾ ಇ–ಖಾತಾ ಪ್ರಕ್ರಿಯೆ ಕಳೆದ 45 ದಿನಗಳಿಂದ ಸ್ಥಗಿತಗೊಳಿಸಿರುವುದು ಗಂಭೀರ ಸಮಸ್ಯೆಯಾಗಿದೆ. ಈ ಬಗ್ಗೆ ಸರ್ಕಾರ ಹೆಚ್ಚೆತ್ತುಕೊಂಡು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾ ಲ್ಯಾಂಡ್ ಡೆವಲಪರ್ಸ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಸ್ಫೂರ್ತಿ ಡೆವಲಪರ್ಸ್ ಮಾಲೀಕ ಎಸ್.ಪಿ. ಚಿದಾನಂದ್ ಒತ್ತಾಯಿಸಿದ್ದಾರೆ. ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಇ–ಪೌತಿ ಸಾಫ್ಟ್ವೇರ್ ಅಳವಡಿಕೆಯ ಕಾರಣದಿಂದ ಈ ಸ್ಥಗಿತ ಉಂಟಾಗಿದೆ. ಸರ್ಕಾರ ಯಾವುದೇ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳುವಾಗ ಹಾಲಿಯಿರುವ ಪ್ರಕ್ರಿಯೆಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಬೇಕು ಅಥವಾ ಒಂದು ಹಳ್ಳಿ ಅಥವಾ ಪಟ್ಟಣವನ್ನು ಪೈಲೆಟ್ ಪ್ರಾಜೆಕ್ಟ್ ಆಗಿ ಮಾಡಿಕೊಂಡು ಹೊಸ ವ್ಯವಸ್ಥೆ ಅಲ್ಲಿ ಜಾರಿ ಮಾಡಿ, ಅದರ ಸಾಧಕಬಾಧಕಗಳನ್ನು ಪರಿಶೀಲಿಸಿದ ನಂತರ ರಾಜ್ಯಾದ್ಯಂತ ಜಾರಿ ಮಾಡಬೇಕು ಎಂದರು. ಇ–ಖಾತಾ ಸ್ಥಗಿತದಿಂದ ಹೊಸ ನಿವೇಶನ, ವಸತಿಕೊಳ್ಳುವವರಿಗೆ ಮಾರಾಟ ಮಾಡುವವರಿಗೆ, ಬ್ಯಾಂಕುಗಳಿಂದ ಸಾಲಸೌಲಭ್ಯಗಳು ದೊರೆಯದೆ ತೊಂದರೆಯಾಗಿದೆ. ಸಿ.ಸಿ ಮತ್ತು ಓ.ಸಿ. ಪಡೆಯುವ ಪ್ರಕ್ರಿಯೆ ಸುಮಾರು ಎರಡು…
ಅರಸೀಕೆರೆ: ಸರ್ಕಾರಿ ಪ್ರೌಢಶಾಲೆ ಅರಸೀಕೆರೆ ಶಾಲೆಯ ಸಾಧನೆಯ ಕಿರೀಟಕ್ಕೆ ಇನ್ನೊಂದು ಗರಿ ಸೇರ್ಪಡೆಯಾಗಿದ್ದು, ಇಡೀ ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮವಾಗಿ ಈ ಸಾಧನೆ ಮಾಡಿದಂತಾಗಿದೆ. ಇಲ್ಲಿನ 10 ತರಗತಿಯ ವಿದ್ಯಾರ್ಥಿ ಹೃತಿಕ್.ಹೆಚ್ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ತನ್ನ ವಿಜ್ಞಾನ ಮಾದರಿಯಾದ ಶಾಲೆ ಮತ್ತು ಆಸ್ಪತ್ರೆಯ ಸೂಚನಾ ವ್ಯವಸ್ಥೆ ಮತ್ತು ಅಗ್ನಿನಂದಕ ರೋಬೋ ಕಾರ್ ವೈಯಕ್ತಿಕ ವಿಭಾಗದಲ್ಲಿ ಐದನೇ ಸ್ಥಾನಗಳಿಸಿದ ಹೆಗ್ಗಳಿಕೆ ಸಾಧಿಸಿದ್ದಾನೆ. 10ನೇ ತರಗತಿಯ ಹೃತಿಕ್ ಹೆಚ್. ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಬಹುಮಾನಗಳಿಸಿ ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆ ಆಗಿದ್ದರು. ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕೊಲ್ಲೂರಿನಲ್ಲಿರುವ ಅಂತರಾಷ್ಟ್ರೀಯ ಮಟ್ಟದ ಗಾಡಿಯಂ ಶಾಲೆಯಲ್ಲಿ ದಿನಾಂಕ : 19—01–2026 ರಿಂದ 23—01–2026 ರವರೆಗೆ ಸುಮಾರು ಐದು ದಿನಗಳ ಕಾಲ ನಡೆದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನವು ಶುಕ್ರವಾರ ಮುಕ್ತಾಯವಾಗಿದ್ದು, ಈ ವಿಜ್ಞಾನ ಮೇಳದಲ್ಲಿ ಅವರು ಪ್ರದರ್ಶಿಸಿದ ಮಾದರಿ ವೈಯಕ್ತಿಕ ವಿಭಾಗದಲ್ಲಿ ಐದನೇ ಸ್ಥಾನ…
ತಿಪಟೂರು: ರಾಜ್ಯಪಾಲರು ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ನಿರಾಕರಿಸಿರುವುದು ಪ್ರಜಾಪ್ರಭುತ್ವದ ಮೇಲೆ ನಡೆದಿರುವ ಗಂಭೀರ ದಾಳಿ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಬಿ.ಶಶಿಧರ್ ಟೂಡಾ ಅವರು ತೀವ್ರವಾಗಿ ಖಂಡಿಸಿದರು. ತಿಪಟೂರು ನಗರಸಭೆ ವೃತ್ತದ ಎದುರು ಯಾವುದೇ ಪಕ್ಷದ ಧ್ವಜ, ವೇದಿಕೆ ಅಥವಾ ಮೈಕ್ ಇಲ್ಲದೆ, ಒಬ್ಬರೇ ಭಿತ್ತಿ ಪತ್ರ ಹಿಡಿದು ನಡೆಸಿದ ಏಕವ್ಯಕ್ತಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು“ನಾನು ಇಂದು ಇಲ್ಲಿ ಒಬ್ಬನೇ ನಿಂತಿದ್ದೇನೆ. ಆದರೆ ನನ್ನ ಹಿಂದೆ ಕರ್ನಾಟಕದ ಜನತೆಯ ಧ್ವನಿ ಇದೆ. ಇದು ಯಾವುದೇ ವ್ಯಕ್ತಿಯ ವಿರುದ್ಧದ ಹೋರಾಟವಲ್ಲ, ಯಾವುದೇ ಹುದ್ದೆಯ ವಿರುದ್ಧದ ಆಕ್ರೋಶವಲ್ಲ. ಇದು ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಆಕ್ರಮಣದ ವಿರುದ್ಧದ ಹೋರಾಟ” ಎಂದು ಹೇಳಿದರು. ರಾಜ್ಯಪಾಲರು ವಿಧಾನಸಭೆಯಲ್ಲಿ ಮಾತನಾಡಲು ನಿರಾಕರಿಸಿರುವುದು ಸಣ್ಣ ಅಥವಾ ತಾಂತ್ರಿಕ ವಿಚಾರವಲ್ಲ. ಅದು ಜನರಿಂದ ಆಯ್ಕೆಯಾದ ಸರ್ಕಾರದ ಧ್ವನಿಯನ್ನು ಮೌನಗೊಳಿಸುವ ಪ್ರಯತ್ನವಾಗಿದೆ. ಇದು ವಿಧಾನಸಭೆಯ ಗೌರವವನ್ನು ತುಳಿಯುವ ನಡೆ ಮತ್ತು ಪ್ರಜಾಪ್ರಭುತ್ವದ ಮೇಲೆ ನೇರ ದಾಳಿ…
ತುರುವೇಕೆರೆ: ಕರ್ನಾಟಕ ಪ್ರದೇಶ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟ ತುರುವೇಕೆರೆ ಘಟಕದ ವತಿಯಿಂದ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ಹಾಗೂ ಫಲಾನುಭವಿಗಳ ಸಭೆಯನ್ನು ಪಟ್ಟಣದ ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಕೆಪಿಸಿಸಿ ಬೀದಿ ಬದಿ ವ್ಯಾಪಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸಿ, ಸದಸ್ಯರುಗಳಿಗೆ ಸಾರ್ವಜನಿಕರೊಂದಿಗೆ ಗೌರವಯುತವಾಗಿ ನಡೆದುಕೊಳ್ಳುವಂತೆ ಮನವಿ ಮಾಡಿದರು. ಹಲವು ಗಣ್ಯರನ್ನು ತಾಲೂಕು ಘಟಕದ ವತಿಯಿಂದ ಗೌರವಿಸಲಾಯಿತು. ತಾಲೂಕು ಘಟಕದ ಅಧ್ಯಕ್ಷ ಎಚ್. ಎಂ. ನವೀನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಅಭಿವೃದ್ಧಿಗೆ ಕೈ ಜೋಡಿಸದ ಸ್ವಾರ್ಥಿಗಳನ್ನು ವಜಾಗೊಳಿಸಿ: ಜಿಲ್ಲಾ ಉಪಾಧ್ಯಕ್ಷ ರಂಗನಾಥ್ ಮಾತನಾಡಿ, ನಮ್ಮ ಸಂಘದ ಕೆಲವು ಸದಸ್ಯರು ಕೇವಲ ಗುರುತಿನ ಚೀಟಿ ಪಡೆದು ತಮ್ಮ ಅನುಕೂಲಕ್ಕೆ ಬಳಸುತ್ತಿದ್ದಾರೆ. ಸಂಘದ ಅಭಿವೃದ್ಧಿಗೆ ಕೈಜೋಡಿಸದ ಅಂತಹ ಸದಸ್ಯರುಗಳನ್ನು ವಜಾ ಮಾಡಬೇಕು. ಸಂಘದ ಬೆಳವಣಿಗೆಗೆ ನೂತನ ಸದಸ್ಯರನ್ನು ನೋಂದಾಯಿಸಿಕೊಳ್ಳಬೇಕು ಎಂದರು. ಜಿಲ್ಲಾ ಕಾರ್ಯದರ್ಶಿ ಸಂಜು, ತಿಪಟೂರು ತಾ. ಅಧ್ಯಕ್ಷ ಸತೀಶ್, ಚಿ.ನಾ.ಹಳ್ಳಿ ಅಧ್ಯಕ್ಷ ಮಂಜುನಾಥ್,…