Author: admin

ತುಮಕೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ  ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ.(ಪೋಕ್ಸೋ) 2 ವರ್ಷ  4 ತಿಂಗಳ ಜೈಲು ಶಿಕ್ಷೆ ಹಾಗೂ 15,000 ದಂಡ ವಿಧಿಸಿದೆ. 9 ವರ್ಷ ವಯಸ್ಸಿನ ನೊಂದ ಬಾಲಕಿಗೆ  10—11—2021ರಂದು ಶಾಲೆ ಮುಗಿಸಿ ಮನೆಗೆ ನಡೆದುಕೊಂಡು ಬರುತ್ತಿದ್ದ ವೇಳೆ 45 ವರ್ಷ ವಯಸ್ಸಿನ  ಸಯದ್ ನೂರುಲ್ಲಾ ಎಂಬಾತ  ಗಾಂಧಿನಗರ ರೈಲ್ವೇ ಟ್ರಾಕ್ ಬಳಿಯಲ್ಲಿ ತಡೆದಿದ್ದು, ಏಕಾಏಕಿ ಬಾಲಕಿಯನ್ನು ಪೊದೆಯೊಳಗೆ ಎಳೆದೊಯ್ದು, ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದು, ನೊಂದ ಬಾಲಕಿ ಕೂಗಿಕೊಂಡಾಗ ಆಕೆಯನ್ನು ಸ್ಥಳೀಯರು ರಕ್ಷಿಸಿದ್ದರು. ಈ ಪ್ರಕರಣದ ತನಿಖಾಧಿಕಾರಿಗಳಾದ ಮಂಗಳಮ್ಮನವರು ಘನ ನ್ಯಾಯಾಲಯಕ್ಕೆ  ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ.(ಪೋಕ್ಸೋ) ಈ ಪ್ರಕರಣವನ್ನು ವಿಚಾರಣೆ ನಡೆಸಿದ ವೇಳೆ, ವಿಚಾರಣೆ ಮಾಡಿದ ಸಾಕ್ಷಿಗಳಿಂದ ಸೈಯದ್ ನೂರುಲ್ಲ ವಿರುದ್ಧ ಇದ್ದ ಪೋಕ್ಸೋ ಕಾಯ್ದೆಯಡಿಯ ಆರೋಪ ಸಾಬೀತಾಗಿದೆ. ಈ  ಹಿನ್ನೆಲೆಯಲ್ಲಿ ನ್ಯಾಯಾಲಯವು ಅಪರಾಧಿಗೆ 2 ವರ್ಷ 4 ತಿಂಗಳು ಜೈಲು…

Read More

ಗುಜರಾತ್: ಗುಜರಾತ್‌ ನ ಅಮ್ರೇಲಿ ಜಿಲ್ಲೆಯ ಕಾಡಿನಲ್ಲಿ ರೈಲಿಗೆ ಸಿಲುಕಿದ ಸಿಂಹಿಣಿ ಗಂಭೀರವಾಗಿ ಗಾಯಗೊಂಡು ಇಂದು ಚಿಕಿತ್ಸೆ ವೇಳೆ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜನವರಿ 20 ರಂದು ಗುಜರಾತ್ ‌ನ ಅಮ್ರೇಲಿ ಜಿಲ್ಲೆಯ ರಾಜುಲಾ ತಾಲೂಕಿನಲ್ಲಿ ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದು ಸಿಂಹಿಣಿ ಗಂಭೀರ ಗಾಯಗೊಂಡಿತ್ತು. ಇದನ್ನು ಹೆಚ್ಚಿನ ಚಿಕಿತ್ಸೆಗಾಗಿ ಜುನಾಗಢ್ ಜಿಲ್ಲೆಯ ಶಕ್ಕರ್‌ ಬಾಗ್ ಮೃಗಾಲಯಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದೆ.

Read More

ಶೀಘ್ರದಲ್ಲೇ ಪ್ರಧಾನಿ ಮೋದಿಯವರ ಬಯೋಪಿಕ್ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಈ ಚಿತ್ರವು ‘ವಿಶ್ವನೇತ’ ಶೀರ್ಷಿಕೆಯೊಂದಿಗೆ ಎಲ್ಲಾ ಭಾರತೀಯ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ಯುವ ಪ್ರತಿಭಾವಂತ ಸಿಎಚ್‌ ಕ್ರಾಂತಿ ಕುಮಾರ್ ನಿರ್ದೇಶಿಸಲಿದ್ದಾರೆ. ವಂದೇ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಬ್ಯಾನ‌ರ್ ಅಡಿಯಲ್ಲಿ ಕಾಶಿರೆಡ್ಡಿ ಶರತ್ ರೆಡ್ಡಿ ಈ ಚಿತ್ರವನ್ನು ನಿರ್ಮಿಸಲಿದ್ದಾರೆ. ಚಾಯ್ ವಾಲಾ ಮಟ್ಟದಿಂದ  ‘ವಿಶ್ವ ನಾಯಕ’ನಾಗಿ ಬೆಳೆದಿರುವ ಅವರ ಮಹಾಪ್ರಸ್ಥಾನಕ್ಕೆ ದೃಶ್ಯ ರೂಪ ನೀಡಲಿದ್ದಾರೆ ಎಂದು ಚಿತ್ರತಂಡ ಹೇಳಿದೆ.

Read More

ಕಾಂಗ್ರೆಸ್‌ ನ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಗರ ನಿದ್ದೆಗೆಡಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಶದ ಜನರನ್ನು ಒಗ್ಗೂಡಿಸಲು ನಮ್ಮ ಹಮ್ಮೆಯ ನಾಯಕ ರಾಹುಲ್ ಗಾಂಧಿ ಅವರು ಕೈಗೊಂಡಿರುವ ಭಾರತ ಐಕ್ಯತಾ ನ್ಯಾಯ ಯಾತ್ರೆಗೆ ವ್ಯಕ್ತವಾಗುತ್ತಿರುವ ಅಭೂತಪೂರ್ವ ಬೆಂಬಲವು ಬಿಜೆಪಿಗರ ನಿದ್ದೆಗೆಡಿಸಿದೆ. ಈ ಕಾರಣದಿಂದಲೇ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ನ್ಯಾಯಯಾತ್ರೆಗೆ ಅಡ್ಡಿಪಡಿಸಲಾಗುತ್ತಿದೆ ಎಂದು ಕಿಡಿ ಕಾರಿದರು. ಕಾಂಗ್ರೆಸ್ ಯಾತ್ರೆಯಲ್ಲಿ ಭಾಗಿಯಾಗದಂತೆ ಅಸ್ಸಾಂ ಸರ್ಕಾರ ಜನರಿಗೆ ಬೆದರಿಕೆ ಒಡ್ಡುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿದ್ದೇವೋ ಅಥವಾ ಸರ್ವಾಧಿಕಾರಿ ರಾಷ್ಟ್ರದಲ್ಲಿದ್ದೇವೆಯೋ ಎಂಬ ಭಾವನೆ ಜನಸಾಮಾನ್ಯರಲ್ಲಿ ಮೂಡುತ್ತಿದೆ. ರಾಜಕೀಯ ಸ್ವಾರ್ಥಕ್ಕಾಗಿ ದೇವರ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಕಿಡಿ ಕಾರಿದರು.

Read More

ಮೊಟ್ಟೆ ಸೇವಿಸುವುದರಿಂದ ನಿಮಗೆ ಸಿಗಲಿದೆ ಉತ್ತಮ ಆರೋಗ್ಯ: ಮೊಟ್ಟೆಯಲ್ಲಿ ಸಮೃದ್ಧ ಪೋಷಕಾಂಶಗಳಿವೆ. ಇವುಗಳು ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಇದು ಮೆದುಳಿನ ಕಾರ್ಯವನ್ನು ಬೆಂಬಲಿಸುತ್ತವೆ. ಮೊಟ್ಟೆಯು ಪ್ರೊಟೀನ್‌ನ ಉತ್ತಮ ಮೂಲವಾಗಿದೆ. ಇದು ಸ್ನಾಯುಗಳ ಬೆಳವಣಿಗೆಗೆ ಸಹಕಾರಿಯಾಗಿದೆ. ಚಳಿಗಾಲದಲ್ಲಿ ಮೊಟ್ಟೆ ಸೇವಿಸಿದರೆ ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ನೆರವಾಗುತ್ತದೆ. ಹೃದಯದ ಆರೋಗ್ಯಕ್ಕೆ ಮೊಟ್ಟೆ ಸೇವನೆ ಬಹಳ ಉಪಯುಕ್ತವಾಗಿದೆ. ಮೊಟ್ಟೆ ಸೇವನೆಯು ಕಣ್ಣಿನ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಸೋಯಾದಲ್ಲಿವೆ ಹಲವಾರು ಆರೋಗ್ಯ ಪ್ರಯೋಜನಗಳು: ಸೋಯಾ ಹೆಚ್ಚಿನ ಪ್ರೋಟೀನ್ ಸಸ್ಯ ಆಧಾರಿತ ಆಹಾರವಾಗಿದೆ. ಇದನ್ನು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಇದು ಹೃದಯದ ಆರೋಗ್ಯಕ್ಕೆ ಉತ್ತಮವಾಗಿದೆ. ಬಲವಾದ ಮತ್ತು ಆರೋಗ್ಯಕರ ಮೂಳೆಗಳನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ. ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ. ರಕ್ತಹೀನತೆಯನ್ನು ತಡೆಗಟ್ಟುವಲ್ಲಿ ಸಹಾಯಕ. ದೇಹಕ್ಕೆ ಅಪಾಯಕಾರಿ ಈ ಆಹಾರಗಳು: ಸಕ್ಕರೆಯನ್ನು ಸೇರಿಸಿದ ಅನೇಕ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಪಾನೀಯಗಳು, ಮಿಠಾಯಿಗಳು, ಕೇಕ್‌ ಗಳು ಮತ್ತು ಚಾಕೆಲೆಟ್ಸ್ ಅಧಿಕ ಪ್ರಮಾಣದ ಸಕ್ಕರೆಯನ್ನು ಹೊಂದಿರುತ್ತವೆ. ಹೆಚ್ಚು ಸಕ್ಕರೆ…

Read More

ಬೆಂಗಳೂರು: ‌ನಾಲ್ಕು ವರ್ಷದ ಬಾಲಕಿ ಮೇಲೆ ಅಪಾಯಕಾರಿ ಮತ್ತು ಆಕ್ರಮಣಕಾರಿ ಎಂದೇ ಹೇಳಲಾದ ಅಮೇರಿಕನ್ ಪಿಟ್ ಬುಲ್ ಜಾತಿಗೆ ಸೇರಿದ ಸಾಕು ನಾಯಿಯೊಂದು ದಾಳಿ  ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ಜನವರಿ 13ರಂದು ಬೆಂಗಳೂರಿನ ಸಂಜಯ ನಗರದಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಗಂಭೀರವಾಗಿ ಗಾಯಗೊಂಡರೂ ಅಪಾಯದಿಂದ ಪಾರಾಗಿದ್ದಾಳೆ. ವ್ಯಕ್ತಿಯೊಬ್ಬರು ಆಕ್ರಮಣಕಾರಿ ಪ್ರವೃತ್ತಿ ಹೊಂದಿರುವ ಪಿಟ್ ಬುಲ್ ತಳಿಯ ನಾಯಿಯನ್ನು ಸಾಕಿದ್ದರು. ಆ ಮನೆಗೆ ನೇಪಾಳ ಮೂಲದ ಸುನಿಲ್‌ ಎಂಬಾತ ಕೆಲಸಕ್ಕೆ ಹೋಗುತ್ತಿದ್ದ. ಅದೊಂದು ದಿನ ಆತ ತನ್ನ ನಾಲ್ಕು ವರ್ಷದ ಮಗಳು ಸಾನಿಯಾಳನ್ನು ಕೂಡಾ ಜತೆಗೆ ಕರೆದುಕೊಂಡು ಹೋಗಿದ್ದ. ಹಾಗೆ ಮನೆಗೆ ಹೋಗಿದ್ದ ವೇಳೆ ಡೇಂಜರಸ್‌ ಪಿಟ್‌ಬುಲ್‌ ಆ ಪುಟ್ಟ ಬಾಲಕಿಯ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ. ಸುಮ್ಮನೆ ಇದ್ದ ಮಗುವಿನ ಮೇಲೆ ಎರಗಿದ ಆಕೆಯ ದೇಹದಲ್ಲಿ ಹಲವು ಕಡೆ ಈ ನಾಯಿ ಗಾಯ ಮಾಡಿದೆ. ಸುನಿಲ್‌ ಮತ್ತು ಮನೆಯವರು ಸೇರಿ ಕೂಡಲೇ ಸಾನಿಯಾಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರಾದರೂ ಈ…

Read More

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಕೋಟನೂರ್‌ ಲುಂಬಿಣಿ ಉದ್ಯಾನದಲ್ಲಿರುವ ಅಂಬೇಡ್ಕರ್‌ ಪುತ್ಥಳಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ್ದರು. ನಗರದಲ್ಲಿ ಡಾ. ಬಿಆರ್‌ ಅಂಬೇಡ್ಕರ್‌ ಅವರ ಪುತ್ಥಳಿಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಘಟನೆಯನ್ನು ಖಂಡಿಸಿ ವಿವಿಧ ದಲಿತಪರ ಸಂಘಟನೆಯ ಕಾರ್ಯಕರ್ತರು ಬೀದಿಗಳಿದು ಭಾರೀ ಪ್ರತಿಭಟನೆ ನಡೆಸಿದ್ದರು. ಘಟನೆ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಸದ್ಯ ಆರೋಪಿಗಳ ಯಾವುದೇ ಮಾಹಿತಿಗಳನ್ನು ಹಂಚಿಕೊಂಡಿಲ್ಲ. ಸೂಕ್ತ ತನಿಖೆಯ ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಕಲಂ 295 ಐಪಿಸಿ ಹಾಗೂ 3(1)(ಯು)(ವಿ)(ಟಿ) ಎಸ್‌ಸಿ/ಎಸ್‌ ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Read More

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ‌ ಬೆಟ್ಟದ ತಪ್ಪಲಿನಲ್ಲಿ ಶಿಕ್ಷಕಿ ದೀಪಿಕಾ ಅವರನ್ನು ಕೊಲೆ ಮಾಡಲಾಗಿದ್ದ ಪ್ರಕರಣ ಸಂಬಂಧ ತನಿಖೆ ಆರಂಭಿಸಿದ್ದ ಪೊಲೀಸರು, ಪ್ರಕರಣ ನಡೆದ 30 ಗಂಟೆಗಳ ಒಳಗಾಗಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿತೀಶ್ ​​(21) ಬಂಧಿತ ಆರೋಪಿಯಾಗಿದ್ದಾನೆ. ಡಿವೈಎಸ್​​ ಪಿ ಮುರಳಿ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ವಿಚಾರಣೆ ವೇಳೆ ದೀಪಿಕಾರನ್ನು ಪ್ಲ್ಯಾನ್​ ಮಾಡಿಯೇ ಕೊಲೆ ಮಾಡಿರುವುದು ತಿಳಿದು ಬಂದಿದೆ. ಕೊಲೆಗೂ ಮುನ್ನ ನಿತೀಶ್ ಗುಂಡಿ ತೆಗೆದಿದ್ದನು. ನಂತರ ದೀಪಿಕಾರನ್ನು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಅಡ್ಡಗಟ್ಟಿ ಕೊಲೆ ಮಾಡಿ ಹೂತು ಹಾಕಿದ್ದನು ಎಂದು ತಿಳಿದುಬಂದಿದೆ.  ದೀಪಿಕಾರನ್ನು ಕೊಲೆಗೈದ ನಂತರ ಎರಡು ದಿನಗಳ ಕಾಲ ನಿತೇಶ್ ಗ್ರಾಮದಲ್ಲೇ ಇದ್ದನು. ಬಳಿಕ ಯಾವಾಗ ದೀಪಿಕಾಳ ಶವ ಪತ್ತೆಯಾಯ್ತೋ ಅಂದಿನಿಂದ ನಾಪತ್ತೆಯಾಗಿದ್ದನು. ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿ ನಿತೇಶ್​ ನನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಂಧಿಸಿದ್ದಾರೆ. ಸದ್ಯ, ಆರೋಪಿಯನ್ನು ಮೇಲುಕೋಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದ್ದು, ಕೊಲೆ ಮಾಡಿರುವುದು ತಾನೇ ಎಂದು ಒಪ್ಪಿಕೊಂಡಿದ್ದಾನೆ.…

Read More

29ನೇ ಮಹಡಿಯಿಂದ ಜಿಗಿದು 12ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬೇಗೂರು ಬಳಿಯ ಅಪಾರ್ಟ್‍ಮೆಂಟ್ ಒಂದರಲ್ಲಿ ನಡೆದಿದೆ. ಬಾಲಕಿ ಅಪಾರ್ಟ್‍ಮೆಂಟ್‍ ನಲ್ಲಿ ತಂದೆ – ತಾಯಿ ಜೊತೆ ವಾಸವಾಗಿದ್ದಳು ಎನ್ನಲಾಗಿದ್ದು. ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು ಎನ್ನಲಾಗಿದೆ. ಬಾಲಕಿಯ ತಂದೆ ಸಾಫ್ಟ್‌ ವೇರ್‌ ಎಂಜಿನಿಯರ್, ತಾಯಿ ಗೃಹಿಣಿ ಎಂದು ಮಾಹಿತಿ ದೊರಕಿದೆ. ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ. ಬಾಲಕಿ ಮಂಗಳವಾರ(ಜ.೨೩) ರಾತ್ರಿ ಮಲಗಿದ್ದವಳು, ಇದ್ದಕ್ಕಿದ್ದಂತೆ ಮುಂಜಾನೆ 4:30ಕ್ಕೆ ಎದ್ದು ಹಾಲ್‍ ಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನು ಆಕೆಯ ತಾಯಿ ವಿಚಾರಿಸಿದಾಗ, ಸರಿಯಾಗಿ ಉತ್ತರಿಸದೆ ಮತ್ತೆ ಮಲಗುವುದಾಗಿ ರೂಮಿಗೆ ತೆರಳಿದ್ದಳು. ಸುಮಾರು 5 ಗಂಟೆ ವೇಳೆಗೆ ಬಾಲಕಿ ಅಪಾರ್ಟ್‍ಮೆಂಟ್ ಮೇಲಿನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಜೋರಾದ ಶಬ್ದ ಕೇಳಿ ಸೆಕ್ಯೂರಿಟಿ ಹೊರಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಪೋಷಕರಿಗೆ ಹಾಗೂ ಅಪಾರ್ಟ್‍ಮೆಂಟ್ ಅಸೋಸಿಯೇಷನ್‍ ಗೆ ಸೆಕ್ಯೂರಿಟಿ ಮಾಹಿತಿ ನೀಡಿದ್ದರು.…

Read More

ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ರೌಡಿ ಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ವಿವೇಕ್ ನಗರದ ಮಾಯಾ ಬಜಾರ್ ಸ್ಲಂನಲ್ಲಿ ನಡೆದ ಘಟನೆ ಇದಾಗಿದ್ದು, ಕೊಲೆಯಾದ ರೌಡಿ ಶೀಟರ್ ನನ್ನು ಸತೀಶ್ ಅಲಿಯಾಸ್ ಮಿಲ್ಟ್ರಿ ಸತೀಶ್ ಎಂದು ಗುರುತಿಸಲಾಗಿದೆ. ಮಿಲಿಟ್ರಿ ಸತೀಶ್ ಮಾಯಾ ಬಜಾರ್ ಸ್ಲಂನಲ್ಲಿ ವಾಸಿಸುತ್ತಿದ್ದು, ರಾತ್ರಿ ಮನೆಯ ಹೊರಗಡೆ ಮಲಗಿದ್ದಾಗ, ಬೆಳಗ್ಗಿನ ಜಾವ ಮೂರು ಗಂಟೆಯ ಹೊತ್ತಿಗೆ ಆತನ ಮನೆಯ ವಠಾರಕ್ಕೆ ಬಂದ ದುಷ್ಕರ್ಮಿಗಳು ಆತನನ್ನು ಕೊಚ್ಚಿ ಪರಾರಿಯಾಗಿದ್ದಾರೆ. ಹಳೇ ವೈಷಮ್ಯ ಅಥವಾ ವೈಯಕ್ತಿಕ ಕಾರಣಕ್ಕೆ ಕೊಲೆ ಅನುಮಾನ ವ್ಯಕ್ತಪಡಿಸಲಾಗಿದ್ದು, ಪರಾರಿಯಾಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಕೊಲೆಗಾರರು ಮಿಲಿಟ್ರಿ ಸತೀಶ್ ಗೆ ಪರಿಚಿತರೇ ಆಗಿರುವುದರಿಂದ ಪೊಲೀಸರಿಗೆ ಕೆಲವು ಸಂಶಯಗಳಿವೆ. ಜತೆಗೆ ಸ್ಥಳದ ಸಿಸಿ ಟಿವಿ ದೃಶ್ಯಾವಳಿಗಳ ಫೊಟೇಜ್ ಪಡೆದು ತಪಾಸಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ವಿವೇಕನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More