Author: admin

ರಾಜಸ್ಥಾನ: 17 ವರ್ಷದ ಶಾಲಾ ವಿದ್ಯಾರ್ಥಿನಿ ಮೇಲೆ ಆಕೆಯ ಶಿಕ್ಷಕನೇ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಭೀಕರ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಆರೋಪಿಯನ್ನು ಪ್ರಹ್ಲಾದ್ ಅಂಬರಂ ಮೇಘವಾಲ್ ಎಂದು ಗುರುತಿಸಲಾಗಿದೆ. ಆತನನ್ನು ಜೈಪುರದಲ್ಲಿ ಬಂಧಿಸಿರುವ ಪೊಲೀಸರು ಬಾರ್ಮರ್‌ ಗೆ ಕರೆತಂದಿದ್ದಾರೆ. ಹಳ್ಳಿಯೊಂದರ ಬಾವಿಯೊಳಗೆ ಬಾಲಕಿಯ ಶವ ಪತ್ತೆಯಾಗಿರುವ ಬಗ್ಗೆ ಬಾರ್ಮರ್‌ನ ಪೊಲೀಸರಿಗೆ ಭಾನುವಾರ ಮಾಹಿತಿ ಸಿಕ್ಕಿತ್ತು. ನಂತರ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿದಾಗ ಬಾಲಕಿಯ ತಂದೆ, ಮಗಳ ಶವವನ್ನು ಗುರ್ತಿಸಿದ್ದರು. ನಂತರ ಮೃತಳ ಶಿಕ್ಷಕ ಪ್ರಹ್ಲಾದ್ ವಿರುದ್ದ ಬಾಲಕಿ ತಂದೆ ದೂರು ನೀಡಿದ್ದರು. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿತ್ತು. ಬಾಲಕಿ ಮೇಲೆ ಹಲ್ಲೆ ಅಥವಾ ಕತ್ತು ಹಿಸುಕಿದ ಯಾವುದೇ ಲಕ್ಷಣಗಳಿಲ್ಲದ ಕಾರಣ ಬಾಲಕಿ ಹೇಗೆ ಸಾವನ್ನಪ್ಪಿದ್ದಾಳೆ ಎಂಬುದನ್ನು ಇನ್ನೂ ತೀರ್ಮಾನಿಸಿಲ್ಲ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. IPC ಸೆಕ್ಷನ್ 302 (ಕೊಲೆ),  376 (ಅತ್ಯಾಚಾರ) ಮತ್ತು ಪೋಕ್ಸೊ ಕಾಯಿದೆ ಅಡಿಯಲ್ಲಿ ಶಿಕ್ಷಕನ ವಿರುದ್ಧ ಎಫ್‌ ಐಆರ್…

Read More

ಪ್ರತಿನಿತ್ಯ ಆಹಾರದಲ್ಲಿ ಬೆಲ್ಲ ಸೇವಿಸಿ: ಆರೋಗ್ಯವಾಗಿರಿ ಪ್ರತಿನಿತ್ಯ ನಾವು ಆಹಾರದಲ್ಲಿ ಬಳಸುವ ಬೆಲ್ಲ, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಹೌದು, ಬೆಲ್ಲವು ಶ್ವಾಸಕೋಶದ ಆರೋಗ್ಯಕ್ಕೆ ರಾಮಬಾಣ. ಬೆಲ್ಲದ ಉತ್ತಮ ಗುಣಗಳು ಉಸಿರಾಟದ ಸಮಸ್ಯೆಗೆ ಪರಿಹಾರ ನೀಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಬೆಲ್ಲ ಪ್ರಮುಖ ಪಾತ್ರ ವಹಿಸುತ್ತದೆ. ಜೀರ್ಣಕ್ರಿಯೆ ಸುಗಮವಾಗಲು ಪ್ರತಿದಿನ ಬೆಲ್ಲವನ್ನು ನಿಯಮಿತವಾಗಿ ಸೇವಿಸುವುದು ಉತ್ತಮ ಎನ್ನುತ್ತಾರೆ ತಜ್ಞರು. ನಿಮ್ಮ ಆಹಾರದಲ್ಲಿ ಸಕ್ಕರೆ ಬಳಕೆ ಕಡಿಮೆ ಮಾಡಿ: ಆರೋಗ್ಯವಾಗಿರಿ ಸಕ್ಕರೆ ಬಳಕೆಯಿಂದ ಆರೋಗ್ಯದ ಮೇಲೆ ಆಗುವ ಕೆಟ್ಟ ಪರಿಣಾಮಗಳ ಕುರಿತು ಜನರಲ್ಲಿ ಈಗ ಜಾಗೃತಿ ಹೆಚ್ಚಾಗುತ್ತಿದೆ. ಹಾಗಾದ್ರೆ, ಸಕ್ಕರೆಯ ಬಳಕೆಯನ್ನು ನಿಯಂತ್ರಿಸಿದರೆ ನಮ್ಮ ದೇಹದಲ್ಲಿ ಯಾವೆಲ್ಲ ಬದಲಾವಣೆಗಳು ಆಗುತ್ತೆ ಗೊತ್ತೇ? ತೂಕ ಇಳಿಕೆಗೆ ಸಹಕಾರಿಯಾಗಿದೆ. ಟೈಪ್ 2 ಡಯಾಬಿಟಿಸ್‌ ನಿಯಂತ್ರಣ ಆಗುತ್ತೆ. ಹೃದಯದ ಆರೋಗ್ಯಕ್ಕೆ ಸಹಕಾರಿ. ಮಾನಸಿಕ ಆರೋಗ್ಯ ಸುಧಾರಣೆ. ಚರ್ಮದ ಆರೋಗ್ಯ ಸುಧಾರಣೆ ಆಗುತ್ತದೆ.

Read More

ಮಹಾರಾಷ್ಟ್ರ: ದೋಣಿಯೊಂದು ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು ಐವರು ನಾಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಚಮೋರ್ಶಿಯ ಘನಪುರ ಘಾಟ್ ಬಳಿ ವನಗಂಗಾ ನದಿಯಲ್ಲಿ ಮೆಣಸಿನಕಾಯಿ ಕತ್ತರಿಸಲು ಏಳು ಮಹಿಳೆಯರು ದೋಣಿಯಲ್ಲಿ ಪ್ರಯಾಣಿಸುತ್ತಿದ್ದಾಗ ದೋಣಿ ಮಗುಚಿ ಬಿದ್ದಿದ್ದು, ದೋಣಿ ನಿರ್ವಾಹಕ ಈಜಿ ದಡಕ್ಕೆ ಬಂದರೆ, ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರು ನೀರಿನಲ್ಲಿ ಮುಳುಗಿದರು. ಏಳು ಮಹಿಳೆಯರ ಪೈಕಿ ಒಬ್ಬರನ್ನು ರಕ್ಷಿಸಲಾಗಿದ್ದು, ಓರ್ವ ಮಹಿಳೆಯ ಮೃತಪಟ್ಟಿದ್ದಾರೆ. ಐವರು ನಾಪತ್ತೆಯಾಗಿದ್ದಾರೆ. ಸ್ಥಳೀಯ ಈಜುಗಾರರ ಸಹಾಯದಿಂದ ರಕ್ಷಣಾ ತಂಡವು ನಾಪತ್ತೆಯಾದ ಮಹಿಳೆಯರಿಗಾಗಿ ಹುಡುಕಾಟ ನಡೆಸುತ್ತಿದೆ. ಸ್ಥಳಕ್ಕೆ ಚಮೋರ್ಶಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಮ್ಯಾನ್ಮಾರ್ ಸೇನಾ ವಿಮಾನ ಮಿಜೋರಾಂನ ಲೆಂಗ್ ಪುಯಿ ವಿಮಾನ ನಿಲ್ದಾಣದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಿಜೋರಾಂ ಪೊಲೀಸ್ ಮಹಾನಿರ್ದೇಶಕ ಪ್ರಕಾರ, ಬರ್ಮಾ ಸೇನೆಯ ವಿಮಾನ ಅಪಘಾತದಲ್ಲಿ ಕನಿಷ್ಠ ಆರು ಜನರು ಗಾಯಗೊಂಡಿದ್ದಾರೆ. ಪೈಲಟ್ ನೊಂದಿಗೆ ಒಟ್ಟು 14 ಮಂದಿ ವಿಮಾನದಲ್ಲಿದ್ದು, ಆರು ಮಂದಿ ಗಾಯಗೊಂಡಿದ್ದಾರೆ, ಎಂಟು ಮಂದಿ ಸುರಕ್ಷಿತವಾಗಿದ್ದಾರೆ ಎಂದು ಮಿಜೋರಾಂ ಡಿಜಿಪಿ ತಿಳಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಲೆಂಗ್ಪುಯಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತಕ್ಕೆ ಪಲಾಯನಗೈದಿದ್ದ ಮ್ಯಾನ್ಮಾರ್ ಸೈನಿಕರನ್ನು ಕರೆದುಕೊಂಡು ಹೋಗಲು ವಿಮಾನ ಬಂದಿತ್ತು ಎನ್ನಲಾಗಿದೆ. ಮಿಜೋರಾಂನ ಲೆಂಗ್ಪುಯಿಯಲ್ಲಿ ಲ್ಯಾಂಡಿಂಗ್ ವೇಳೆ ವಿಮಾನವು ರನ್  ವೇಯಿಂದ ಜಾರಿ ಪತನಗೊಂಡಿದೆ.

Read More

ತುರುವೇಕೆರೆ: ತಾಲೂಕಿನ ಕೊಡುಗೆಹಳ್ಳಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕಲ್ಕೆರೆ ಸದಸ್ಯ ಗಂಗಾಮಣಿ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಅವಿರೋಧವಾಗಿ ಇವರು ಆಯ್ಕೆಗೊಂಡಿದ್ದು, ಹದಿನಾರು ಸದಸ್ಯರಿರುವ ಪಂಚಾಯತಿಯಲ್ಲಿ, ಹಿಂದಿನ ಅಧ್ಯಕ್ಷರಾದ ರೂಪ ರವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು. ಸೇವಂತಿ ಗಂಗಾಮಣಿ ಅವರನ್ನು ಹೊರತುಪಡಿಸಿ ಯಾವುದೇ ನಾಮಪತ್ರಗಳು ಸಲ್ಲಿಸದ ಕಾರಣ, ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ಹಾಗೂ ತಾಲ್ಲೂಕು ದಂಡಾಧಿಕಾರಿಗಳಾದ ವೈಯಂ ರೇಣು ಕುಮಾರ್ ಅವರು ಘೋಷಣೆ ಮಾಡಿದರು. ಘೋಷಣೆ ಆಗುತ್ತಿದ್ದಂತೆ, ನೂತನ ಅಧ್ಯಕ್ಷರರಿಗೆ ಆದಿ ಜಾಂಬವ ಕ್ಷೇಮಾಭಿವೃದ್ಧಿ ಸೇವಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಸಿ.ಎಸ್. ಮೂರ್ತಿ ನೆಮ್ಮದಿ ಗ್ರಾಮ ಇವರು ಅಧ್ಯಕ್ಷರನ್ನು ಅಭಿನಂದಿಸಿದರು. ಹಾಗೂ ಅಧ್ಯಕ್ಷರ ಬೆಂಬಲಿಗರು ಮತ್ತು ಹಿತೈಷಿಗಳು ಪಟಾಕಿ ಸಿಡಿಸಿ ಸಿಹಿ ಸಂಭ್ರಮಿಸಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ರಾಜ್ಯಲಕ್ಷ್ಮಿ ಸಿ.ಪಿ., ಪಿಡಿಒ ಗೋಪಿನಾಥ್ . ಕಾಂಗ್ರೆಸ್ ಮುಖಂಡರಾದ ಕಲ್ಕೆರೆ ರಾಘು, ದಿನೇಶ್, ರಮೇಶ್, ದೇವರಾಜ್, ಕಿರಣ್ ಕುಮಾರ್,…

Read More

ಬೀದರ್: ಜಿಲ್ಲೆಯಲ್ಲಿ ಸಮಾಜ ವಿರೋಧಿ ಹಾಗೂ ಅಕ್ರಮ ಕಾನೂನು ಬಾಹಿರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ತೊಡಕಾಗಿದ್ದ 5 ಜನ ರೌಡಿಗಳನ್ನು ಗಡಿಪಾರು ಮಾಡಲಾಗಿದೆ . ಬೀದರ ಜಿಲ್ಲೆಯ ಬೀದರ ನಗರ ಮತ್ತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ಮತ್ತು ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಹಾಗೂ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಧಕ್ಕೆ ತರುವ 5 ಜನ ಸಮಾಜಘಾತುಕರನ್ನು ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಿಗೆ 6 ತಿಂಗಳವರೆಗೆ ಪ್ರವೇಶಿಸಿದಂತೆ ಬೀದರ್ SP ರವರು ನೀಡಿದ ಪ್ರಸ್ತಾವನೆ ಮೇರೆಗೆ ಬೀದರ್ ಜಿಲ್ಲಾಧಿಕಾರಿ ರವರು ಗಡಿಪಾರು ಆದೇಶ ಮಾಡಿರುತ್ತಾರೆ. ಗಡಿಪಾರು ಆದ ವ್ಯಕ್ತಿಗಳಿಗೆ 6 ತಿಂಗಳ ವರೆಗೆ ಜಿಲ್ಲೆ ಪ್ರವೇಶ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿ ಹಾಗೂ ಗಡಿ ಪಾರಾದ ಜಿಲ್ಲೆಯಲ್ಲೂ ಇವರ ಮೇಲೆ ನಿಗಾ ವಹಿಸಲಾಗುವುದು. ಕಳುಹಿಸಿ ಕೊಟ್ಟ ಜಿಲ್ಲೆಯಲ್ಲಿ ಉತ್ತಮ ವರ್ತನೆ ತೋರಿದಲ್ಲಿ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ…

Read More

ಬೆಂಗಳೂರು: ಇಂದು ಬೆಂಗಳೂರಲ್ಲಿ ನಡೆದ 545 ಪಿಎಸ್ ಐ ನೇಮಕಾತಿ ಮರುಪರೀಕ್ಷೆಯಲ್ಲಿ ಕೆಲವರು ಉದ್ದತೋಳಿನ ಶರ್ಟ್ ಮತ್ತು ಮಹಿಳೆಯರು ಆಭರಣಗಳನ್ನು ಧರಿಸಿ ಬಂದಿದ್ದರು. ಪರೀಕ್ಷಾರ್ಥಿಗಳಿಗೆ ನೀಡಿದ ಸೂಚನೆಗಳಲ್ಲಿ ಪೂರ್ತಿ ತೋಳಿನ ಶರ್ಟ್ ಧರಿಸಿ ಬರಕೂಡದು ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಬಗೆಯ ಅಭರಣ ಧರಿಸಿ ಬರಬಾರದು ಅಂತ ಸ್ಪಷ್ಟವಾಗಿ ಹೇಳಲಾಗಿದ್ದರು ಎನ್ನಲಾಗಿದೆ. ಉದ್ದತೋಳಿನ ಶರ್ಟ್ ಧರಿಸಿ ಬಂದಿದ್ದ ಅಭ್ಯರ್ಥಿಗಳ ಶರ್ಟ್ ತೋಳುಗಳನ್ನು ಪ್ರಾಧಿಕಾರದ ಸಿಬ್ಬಂದಿ ಕತ್ತರಿಸಿ ಅರ್ಧತೋಳು ಮಾಡಿದ್ದಾರೆ. ನೌಕರಿಗಾಗಿ ನಿರೀಕ್ಷಿಸುತ್ತಿರುವ ಯುವಕರು ಅನಿವಾರ್ಯವಾಗಿ ತಮ್ಮ ಅಂಗಿಗಳ ತೋಳನ್ನು ಕತ್ತರಿಸಲು ಒಪ್ಪಲೇ ಬೇಕಾಯಿತು. ಹಾಗೆಯೇ, ಮಹಿಳಾ ಅಭ್ಯರ್ಥಿಗಳು ಆಭರಣಗಳನ್ನು ತೆಗೆದಿಟ್ಟು ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸಿದರು. ಕೆಲ ಮಹಿಳೆಯರು ಪರೀಕ್ಷೆ ಬರೆಯದೆ ವಾಪಸ್ಸು ಹೋದರೆಂಬ ಮಾಹಿತಿಯೂ ಇದೆ. ಇದರಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ್ದೇನೂ ತಪ್ಪಿಲ್ಲಅನ್ನಬಹುದು. ಪರೀಕ್ಷಾರ್ಥಿಗಳಿಗೆ ಮೊದಲೇ ಪರೀಕ್ಷಾ ನಿಬಂಧನೆಗಳನ್ನು ನೀಡಿದ್ದರೆನ್ನಲಾಗಿದೆ.

Read More

ಬೆಂಗಳೂರು: ಮಹಿಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಂಜಿತಾ (27) ಮೃತ ದುರ್ದೈವಿ. ಐದು ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗೆ ಮೂರು ವರ್ಷದ ಹೆಣ್ಣು ಮಗು ಇದೆ. ರಂಜಿತಾ ವೃತ್ತಿಯಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದರೆ, ಪತಿ ಮಧು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಮದುವೆಯಾದಗಿನಿಂದಲೂ ಮಧು ಮತ್ತು ಆತನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ವರದಕ್ಷಿಣೆ ನೀಡಿಲ್ಲವೆಂದು ನಮ್ಮ ಮಗಳನ್ನು ಕೊಲೆ ಮಾಡಿದ್ದಾರೆಂದು ರಂಜಿತಾ ಪೋಷಕರು ಆರೋಪ ಮಾಡಿದ್ದಾರೆ. ವರದಕ್ಷಿಣೆ ಕಿರುಕುಳದ ಬಗ್ಗೆ ರಂಜಿತಾ ಆಗಾಗ ತಾಯಿ ಬಳಿ ಹೇಳಿದ್ದರು. ಅಲ್ಲದೆ ರಂಜಿತಾ ಸಾವಿಗೂ ಮುನ್ನ ತಾಯಿಗೆ ವಿಡಿಯೋ ಕಾಲ್ ಮಾಡಿದ್ದರು. ಬಳಿಕ ರಂಜಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಜ್ಞಾನಭಾರತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಮಂಡ್ಯ: ಶಿಕ್ಷಕಿಯನ್ನು ಕೊಲೆ ಮಾಡಿ ಮಣ್ಣಲ್ಲಿ ಹೂತುಹಾಕಿರುವ ಪ್ರಕರಣಕ್ಕೆ ಇದೀಗ ತಿರುವು ಸಿಕ್ಕಿದ್ದು, ಪರಿಚಯಸ್ಥ ಯುವಕನಿಂದಲೇ ಶಿಕ್ಷಕಿಯ ಕೊಲೆ ನಡೆದಿದೆ ಎಂದು ಇದೀಗ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಯಾವಾಗ ಶಿಕ್ಷಕಿ ದೀಪಿಕಾ ಮೃತದೇಹ ಪತ್ತೆಯಾಯಿತು ಅಂದಿನಿಂದ ಯುವಕ ಗ್ರಾಮದಿಂದ ನಾಪತ್ತೆಯಾಗಿದ್ದಾನೆ. ಶಿಕ್ಷಕಿ ದೀಪಿಕಾ ಅವರ ಮೊಬೈಲ್ ಪರಿಶೀಲಿಸಿದಾಗ ಕೊನೆಯದಾಗಿ ಕರೆ ಬಂದಿದ್ದು ಇದೇ ಯುವಕನದ್ದಾಗಿದೆ. ಜನವರಿ 20ರಂದು ಮೃತ ಶಿಕ್ಷಕಿ ದೀಪಿಕಾಗೆ ಮಧ್ಯಾಹ್ನ 12 ಗಂಟೆಗೆ ಪರಿಚಯಸ್ಥ ಯುವಕನಿಂದ ಕರೆ ಬಂದಿದ್ದು, ಗ್ರಾಮದ ಯುವಕನ ಮೇಲೆ ಪೋಷಕರು ಸಾಕಷ್ಟು ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಶ್ರೀರಂಗಪಟ್ಟಣದ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಹಾಗೂ ಯುವಕ ಜಗಳವಾಡುತ್ತಿದ್ದನ್ನು ಪ್ರವಾಸಿಗರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. 13 ಸೆಕೆಂಡ್ ಗಳ ಈ ವಿಡಿಯೋವನ್ನು ಪ್ರವಾಸಿಗರು ಪೊಲೀಸರಿಗೆ ನೀಡಿದ್ದಾರೆ. ಜನವರಿ 20ರ ನಂತರ ದೀಪಿಕಾ ಶಾಲೆ ಮುಗಿಸಿಕೊಂಡು ಬರುವಾಗ ಅಡ್ಡಗಟ್ಟಿ ಹತ್ಯೆಗೈದು ಬೆಟ್ಟದ ತಪಲಿನಲ್ಲಿ ಗುಂಡಿ ತೆಗೆದು ಮೃತದೇಹವನ್ನು ಮುಚ್ಚಿದ್ದಾನೆ. ಇದೀಗ ನಾಪತ್ತೆಯಾಗಿರುವ ಯುವಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Read More

ಬೆಂಗಳೂರು:  ಬೆಂಗಳೂರಿನಲ್ಲಿ ಇಂದು ಬೆಳಗ್ಗೆ 7ರಿಂದ 9.30ರವರೆಗೆ ಶಾಲಾ ವಾಹನಗಳ ತಪಾಸಣೆ ನಡೆಸಿದ್ದು ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿ ಶಾಲಾ ವಾಹನ ಓಡಿಸುತ್ತಿದ್ದ ಚಾಲಕರು ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಸುಮಾರು 3,414 ಶಾಲಾ ವಾಹನಗಳನ್ನು ತಪಾಸಣೆ ಮಾಡಿದ್ದು ಈ ಪೈಕಿ 16 ಚಾಲಕರು ಮದ್ಯಸೇವಿಸಿ ಶಾಲಾ ವಾಹನ ಚಾಲನೆ ಮಾಡಿದ್ದು ಬೆಳಕಿಗೆ ಬಂದಿದೆ. 16 ಶಾಲಾ ಚಾಲಕರ ವಿರುದ್ಧ ಸಂಚಾರಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಕುಡಿದು ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ. 16 ಚಾಲಕರ ವಾಹನ ಪರವಾನಗಿ ಪತ್ರ ಆರ್​ ಟಿಒ ಕಚೇರಿಗೆ ರವಾನಿಸಲಾಗಿದೆ.

Read More