Author: admin

ಕೊರಟಗೆರೆ: ತಾಲೂಕಿನ ಮಲ್ಲೇಶ್ವರ ಗ್ರಾಮದ ಇತಿಹಾಸ ಪ್ರಸಿದ್ಧವುಳ್ಳ ಶ್ರೀ ಚೌಡೇಶ್ವರಿ ತಾಯಿಯ ದೇವಸ್ಥಾನವನ್ನ ಶ್ರೀ ಚೌಡೇಶ್ವರಿ ದೇವಿ ನೇಕಾರರ ತೊಗಟವೀರ ಸಂಘ ಹಾಗೂ ಸಹಸ್ರರು ಭಕ್ತಾದಿಗಳ ಸಹಕಾರದಿಂದ ಪುನರ್ ನಿರ್ಮಿಸಲ್ಪಟ್ಟ ಚೌಡೇಶ್ವರಿ ತಾಯಿಯ ದೇವಾಲಯವನ್ನು ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟನೆ ಮಾಡಿದರು. ಶ್ರೀ ವರಧಾತ್ರೈ ಚೌಡೇಶ್ವರಿ ಅಮ್ಮನವರ ಪುನರ್ ಪ್ರತಿಷ್ಠಾಪನೆ ಹಿನ್ನೆಲೆ ಮಲ್ಲೇಶ್ವರ ಗ್ರಾಮಸ್ಥರಲ್ಲಿ ಸಡಗರ ಸಂಭ್ರಮ ತುಂಬಿತ್ತು. ಇದೇ ವೇಳೆ ಮಾತನಾಡಿದ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ, ಪ್ರತಿ ಕುಲಕ್ಕೂ ಕುಲದೇವರು ಇದ್ದೇ ಇರುತ್ತದೆ. ನಮ್ಮ ಪೂರ್ವಿಕರು ಕುಲದೇವರ ಪೂಜೆಯನ್ನ ಸುಮ್ಮನೆ ಮಾಡಿಲ್ಲ, ಹಿಂದೂ ಧರ್ಮದಲ್ಲಿ ದೇವರ ಪ್ರಾರ್ಥನೆ ಪರಂಪರೆಯಾಗಿದೆ ಎಂದರು. ಶ್ರೀ ಶ್ರೀ ನೀಲಕಂಠಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ದೇವಸ್ಥಾನದ ಮೇಲ್ಭಾಗದ ವಿಮಾನ ಗೋಪುರದ ಕಳಶ ಪ್ರತಿಷ್ಠಾಪಿಸಿ ಸಕಲ ಮಂತ್ರಗಳ ವಿಧಿ ವಿಧಾನಗಳೊಂದಿಗೆ ಶ್ರೀ ಚೌಡೇಶ್ವರಿ ತಾಯಿಯ ಕಣ್ಣು ತೆರೆಸಲಾಯಿತು.. ನಂತರ ಗೋಮಾತೆಗೆ ಪೂಜೆಯನ್ನು ಸಲ್ಲಿಸಿ ದೇವಿಯ ದರ್ಶನವನ್ನು ಮಾಡಿಸಿ ಭಕ್ತಾದಿಗಳಿಗೆ ತಾಯಿಯ ದರ್ಶನಕ್ಕೆ ಅವಕಾಶ…

Read More

ಅಸ್ಸಾಂನ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ ರಾಹುಲ್ ಗಾಂಧಿ ಅವರನ್ನು ಪೊಲೀಸರು ತಡೆದರು. ಅಸ್ಸಾಂನ ಸಮಾಜ ಸುಧಾರಕ ಶ್ರೀಮಂತ ಶಂಕರದೇವ ಅವರ ಜನ್ಮಸ್ಥಳವಾದ ಬಟದ್ರವ ಸತ್ರ ದೇವಸ್ಥಾನಕ್ಕೆ ಭೇಟಿ ನೀಡಲು, ರಾಹುಲ್ ಮತ್ತು ಇತರ ಕಾಂಗ್ರೆಸ್ ನಾಯಕರು ಬಂದಾಗ ಪೊಲೀಸರು ತಡೆದರು. ಪೊಲೀಸರ ಕ್ರಮವನ್ನು ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಪ್ರತಿಭಟಿಸುತ್ತಿದ್ದಾರೆ. ನಾವು ದೇವಸ್ಥಾನಕ್ಕೆ ಭೇಟಿ ನೀಡಲು ಬಯಸುತ್ತೇವೆ. ನಾನು ದೇವಸ್ಥಾನಕ್ಕೆ ಭೇಟಿ ನೀಡಲು ಸಾಧ್ಯವಾಗದ ಅಪರಾಧವೇನು? ನಾನು ಸಮಸ್ಯೆಗಳನ್ನು ಸೃಷ್ಟಿಸಲು ಬಯಸುವುದಿಲ್ಲ, ನಾನು ಕೇವಲ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲು ಬಯಸುತ್ತೇನೆ ಎಂದು ರಾಹುಲ್ ಹೇಳಿದರು. ಇನ್ನು ದೇವಸ್ಥಾನಕ್ಕೆ ಯಾರು ಹೋಗಬೇಕು ಎಂಬುದನ್ನು ಮೋದಿಯವರು ನಿರ್ಧರಿಸುತ್ತಾರೆ ಎಂದ ರಾಹುಲ್, ಇಂದು ಒಬ್ಬರು ಮಾತ್ರ ದೇವಸ್ಥಾನಕ್ಕೆ ಪ್ರವೇಶಿಸಬಹುದು ಎಂದು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು. ಆಮಂತ್ರಣ ಸ್ವೀಕರಿಸಿ ಬಂದಿದ್ದೇನೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಪ್ರತಿಕ್ರಿಯಿಸಿದ್ದಾರೆ. ಜನವರಿ 11 ರಂದು, ಬ್ಯಾಡರವ ಇನ್‌ ನಿಂದ ಆಹ್ವಾನ ಬಂತು. ದೇವಸ್ಥಾನದ ಅಧಿಕಾರಿಗಳು ಬೆಳಿಗ್ಗೆ…

Read More

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ವೇಳೆಯೇ ನಟ ಧ್ರುವ ಸರ್ಜಾ ಅವರು ಮಕ್ಕಳ ನಾಮಕರಣ ಶಾಸ್ತ್ರ ನಡೆದಿದ್ದು,ಮಕ್ಕಳಿಗೆ ಅರ್ಥಪೂರ್ಣವಾದ ಹೆಸರನ್ನೇ ಇಟ್ಟಿರುವುದು ವಿಶೇಷವಾಗಿದೆ. ನಟ ಧ್ರುವ ಸರ್ಜಾ ಮಗಳಿಗೆ ರುದ್ರಾಕ್ಷಿ ಮತ್ತು ಮಗನಿಗೆ ಹಯಗ್ರೀವ ಎಂದು ನಾಮಕರಣ ಮಾಡಿದ್ದಾರೆ. ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ನಾಮಕರಣ ಶಾಸ್ತ್ರ ನಡೆದಿದೆ. ಇಂದು ಧ್ರುವ ಸರ್ಜಾ ಮಕ್ಕಳಿಗೆ ನಾಮಕರಣ ಮಾಡಿದ್ದ, ಅನೇಕ ಮಹಿಳೆಯರು ಇಂದೇ ಧ್ರುವ ಸರ್ಜಾ ಕುಟುಂಬಸ್ಥರು ಆಂಜನೇಯನ ಭಕ್ತರು. ಆಂಜನೇಯ ಗುಡಿಯನ್ನೇ ಈ ಕುಟುಂಬ ನಿರ್ಮಾಣ ಮಾಡಿದೆ. ರಾಮನ ಮಂದಿರ ಉದ್ಘಾಟನೆ ದಿನದಂದು ತಮ್ಮ ಪುತ್ರಿ ಹಾಗೂ ಪುತ್ರನಿಗೆ ನಾಮಕರಣ ಮಾಡಿದ್ದು ವಿಶೇಷವಾಗಿದೆ. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Read More

ಗದಗ:  ಯುವಕನೊಬ್ಬ ಅಯೋಧ್ಯೆ ಶ್ರೀರಾಮಮಂದಿರ ಚಿತ್ರವನ್ನು ಬೇರೆ ರೀತಿ ಬದಲಾಯಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಮಾಡಿ ಅಶಾಂತಿ ಉಂಟು ಮಾಡಿದ್ದ, ಗದಗ ಜಿಲ್ಲೆಯ ಗಜೇಂದ್ರಗಢದ ವ್ಯಕ್ತಿ ತಾಜುದ್ದೀನ್ ದಫೇದಾರನನ್ನು ಪೊಲೀಸರು ಬಂದಿಸಿದ್ದಾರೆ. ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾಕಿರುವ ಚಿತ್ರವನ್ನು ಸಾಮಾಜಿಕ ಜಾಲತಾಣ ಫೇಸ್‌ ಬುಕ್ ನಲ್ಲಿ ಹಂಚಿಕೊಳ್ಳಲಾಗಿತ್ತು. ಈ ವಿವಾದಾತ್ಮಕ ಪೋಸ್ಟ್ ನಿಂದ ಗಜೇಂದ್ರಗಡ ಪಟ್ಟಣದಲ್ಲಿ ದ್ವೇಷಮಯ ವಾತಾವರಣ ಉಂಟಾಗಿದ್ದು, ಸದ್ಯ ಅಶಾಂತಿ ಉಂಟುಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ.

Read More

ಲಕ್ನೋ: 5 ವರ್ಷದ ಮಗು ಮೊಬೈಲ್‌ ನಲ್ಲಿ ಕಾರ್ಟೂನ್‌ ನೋಡುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್‌ಪುರ ಕೊತ್ವಾಲಿಯದ ಹತೈಖೇಡಾದಲ್ಲಿ ನಡೆದಿದೆ. ಬಾಲಕ ತನ್ನ ಅಮ್ಮನ ಜೊತೆದಯ ಮಲಗಿಕೊಂಡು ಮೊಬೈಲ್‌ ನಲ್ಲಿ ಕಾರ್ಟೂನ್‌ ವೀಕ್ಷಿಸುತ್ತಿತ್ತು.ಇದೇ ವೇಳೆ ಮಗುವಿನ ಕೈಯಿಂದ ಫೋನ್ ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದ್ದು ಆ ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾದರೂ. ಅದಾಗಲೇ ಮಗು ಮೃತಪಟ್ಟಿದೆ ಎಂದು ವೈದ್ಯರು ಹೇಳಿದ್ದಾರೆ. “ಮಗು ಹೃದಯಾಘಾತದಿಂದ ಸಾವನ್ನಪ್ಪಿದೆಯೇ ಅಥವಾ ಬೇರೆ ಯಾವುದಾದರೂ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆಯೇ ಎಂಬುದು ತನಿಖೆಯ ವಿಷಯವಾಗಿದೆ” ಎಂದು ಅಮ್ರೋಹಾ ಮುಖ್ಯ ವೈದ್ಯಾಧಿಕಾರಿ ಸತ್ಯಪಾಲ್ ಸಿಂಗ್ ಹೇಳಿದ್ದಾರೆ.

Read More

ಚೀನಾ: ಚೀನಾದ ನೈಋತ್ಯ ಪರ್ವತದಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ಯುನ್ನಾನ್ ಪ್ರಾಂತ್ಯದಲ್ಲಿ 47 ಜನರು ಸಾವನ್ನಪ್ಪಿದ್ದಾರೆ. ಭೂಕುಸಿತಕ್ಕೆ ನಿಖರವಾದ ಕಾರಣವನ್ನು ತಿಳಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಭೂಕುಸಿತದಲ್ಲಿ ಸುಮಾರು 18 ಕ್ಕೂ ಹೆಚ್ಚು ಮನೆಗಳು ಕುಸಿದಿದೆ. 200 ಕ್ಕೂ ಹೆಚ್ಚು ಜನರನ್ನು ಘಟನಾ ಪ್ರದೇಶದಿಂದ ಸ್ಥಳಾಂತರಿಸಲಾಗಿದೆ. 200 ಕ್ಕೂ ಹೆಚ್ಚು ರಕ್ಷಣಾ ಕಾರ್ಯಕರ್ತರು ,33 ಅಗ್ನಿಶಾಮಕ ವಾಹನಗಳು ಹಾಗೂ ಅಧಿಕಾರಿಗಳು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಭೂಕುಸಿತದಲ್ಲಿ ಕಾಣೆಯಾದ ಜನರನ್ನು ಹುಡುಕಲು 10 ಲೋಡಿಂಗ್ ಯಂತ್ರಗಳನ್ನು ಸಜ್ಜುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

Read More

ಮುಂಬೈ: ರಾಮ ಧ್ವಜ ಕೊಂಡೊಯ್ಯುತ್ತಿದ್ದ ನಾಲ್ಕು ಜನರ ಮೇಲೆ ಗುಂಪೊಂದು ಅಚಾನಕ್ಕಾಗಿ ದಾಳಿ ಮಾಡಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮತ್ತೊಂದು ಧರ್ಮದ ಹಲ್ಲೆಕೋರರು ಅಲ್ಲಾ ಹೋ ಅಕ್ಬರ್‌ ಎಂದು ಘೋಷಣೆ ಕೂಗುತ್ತಾ ವಾಹನಗಳನ್ನು ಜಖಂಗೊಳಿಸಿ, ಹಿಂದೂ ಸಮುದಾಯದವರ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಪೂರ್ವ ಸಿದ್ದತೆ ನಡೆಸಿದ್ದರು ಎನ್ನಲಾಗಿದೆ. ಆಕ್ರಮಣಕಾರಿಗಳು ವಾಹನಗಳನ್ನು ಪುಡಿಗಟ್ಟುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿದೆ. ಹಲವರು ರಕ್ತಸಿಕ್ತರಾಗುವಂತೆ ಹಲ್ಲೆ ನಡೆಸಲಾಗಿದೆ. ವಾಹನಗಳ ಮೇಲೆ ಅಂಟಿಸಿದ್ದ ಹನುಮಂತನ ಸ್ಟಿಕರ್‌ ಗೆ ದುಷ್ಕರ್ಮಿಗಳು ಎಂಜಲು ಉಗಿದಿದ್ದಾರೆ. ಮುಂಬೈ ಡಿಸಿಪಿ ಜಯಂತ್‌ ಬಾಜ್ಬಲೆ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಭಾನುವಾರ ರಾತ್ರಿ 11 ರ ಸುಮಾರಿ ಗೆ ಈ ಘಟನೆ ನಡೆದಿದೆ. ಜೈಶ್ರೀರಾಮ ಎಂದು ಘೋಷಣೆ ಕೂಗುತ್ತಿದ್ದ ನಾಲ್ವರನ್ನು ನಯಾನಗರದಲ್ಲಿ ಮುಸ್ಲಿಂ ಸಮುದಾಯದ ಗುಂಪು ಅಡ್ಡಗಟ್ಟಿ ಹಲ್ಲೆ ನಡೆಸಿದೆ. ಘಟನೆ ಕುರಿತಂತೆ ಇದುವರೆಗೂ ಐವರನ್ನು ಬಂಧಿಸಲಾಗಿದೆ ಎಂದಿದ್ದಾರೆ.

Read More

ಮುಂಬಯಿ: ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಸೇತುವೆಯ ಡಿವೈಡರ್‌ ಗೆ ಡಿಕ್ಕಿಯಾದ ಘಟನೆಯು, ಒಂದು ವಾರದ ಹಿಂದೆಯಷ್ಟೇ ಉದ್ಘಾಟನೆಯಾದ ದೇಶದ ಅತೀ ದೊಡ್ಡ ಸೇತುವೆ ಮುಂಬಯಿ ಟ್ರಾನ್ಸ್ ಹಾರ್ಬರ್ ಲಿಂಕ್‌ ನಲ್ಲಿ ನಡೆದಿದೆ. ಅಪಘಾತದಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ. ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಸೇತುವೆಯ ಡಿವೈಡರ್‌ ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಕೆಮಿಕಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಮೃಪಟ್ಟ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ಮಧ್ಯಪ್ರದೇಶ ಮೂಲದ ಮೊಹಮ್ಮದ್ ಶಾಬಾದ್(21), ಇಂದ್ರಜೀತ್ (23) ಮೃತ ದುರ್ದೈವಿಗಳು. ಉಳಿದಂತೆ ವಿಷಾನಿಲದಿಂದ ಎಂಟು ಜನರು ಅಸ್ವಸ್ಥರಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಣಾಪಾದಿಂದ ಪಾರಾಗಿದ್ದಾರೆ. ರವಿವಾರ(ಜ.21) ರಾತ್ರಿ ಪ್ರಸನ್ನ ಪ್ರೀ ಪ್ರೊಸೆಸಿಂಗ್ ಲಿಮಿಟೆಡ್ ಎಂಬ ರಾಸಾಯನಿಕ ತಯಾರಿಕಾ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಹುಮ್ನಾಬಾದ್‌ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಅಯೋಧ್ಯೆಯಲ್ಲಿ ನಡೆಯುವ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ಈ ಮಹಾ ಸಮಾರಂಭದ ಮೂಲಕ ದೇಶ ರಾಮಮಯವಾಗುತ್ತಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದರು. ಇಡೀ ದೇಶವೇ ರಾಮಮಯವಾಗುತ್ತಿದೆ, ನಂಬಿಕೆ ಮತ್ತು ಭಕ್ತಿಯ ಸಾಗರದಲ್ಲಿ ಮುಳುಗಿದೆ. ತಲೆಮಾರುಗಳ ಹೋರಾಟ ಮತ್ತು ನಿರ್ಣಯವು ವಿಗ್ರಹಾರಾಧನೆಯಲ್ಲಿ ಪರಾಕಾಷ್ಠೆಯಾಗುತ್ತಿದೆ. ಈ ಸಂದರ್ಭದಲ್ಲಿ ತಮ್ಮ ಹಿಂದಿನವರಿಗೆ ಗೌರವ ಸಲ್ಲಿಸುತ್ತಿದ್ದೇನೆ ಎಂದು ಯೋಗಿ ಟ್ವಿಟರ್‌ ನಲ್ಲಿ ತಿಳಿಸಿದ್ದಾರೆ. ಒಂದು ಅದ್ಭುತ, ಮರೆಯಲಾಗದ ಮತ್ತು ಅದ್ಭುತ ಕ್ಷಣ ಬರುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನೆ ಕಾರ್ಯಕ್ರಮವು ಪೂರ್ಣಗೊಳ್ಳಲಿದೆ. ಲಕ್ಷಾಂತರ ರಾಮ ಭಕ್ತರು ವರ್ಷಗಳಿಂದ ಕಾಯುತ್ತಿದ್ದು, ಇಂದು ಪ್ರಧಾನಿ ನೇತೃತ್ವದಲ್ಲಿ ನೆರವೇರಲಿದೆ. ಇಡೀ ದೇಶವೇ ರಾಮಮಯವಾಗುತ್ತಿದೆ, ನಂಬಿಕೆ ಮತ್ತು ಭಕ್ತಿಯ ಸಾಗರದಲ್ಲಿ ಮುಳುಗಿದೆ. ತಲೆಮಾರುಗಳ ಹೋರಾಟ ಮತ್ತು ನಿರ್ಣಯವು ವಿಗ್ರಹಾರಾಧನೆಯಲ್ಲಿ ಪರಾಕಾಷ್ಠೆಯಾಗುತ್ತಿದೆ. ಈ ಸಂದರ್ಭದಲ್ಲಿ, ಯೋಗಿ ಆದಿತ್ಯನಾಥ್ ಅವರು ತಮ್ಮ…

Read More