Author: admin

ಛತ್ತೀಸ್‌ಗಢ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ನಕ್ಸಲರು ಹತರಾಗಿದ್ದಾರೆ. ರಾಜ್ಯ ರಾಜಧಾನಿ ರಾಯ ಪುರದಿಂದ 400 ಕಿಮೀ ದೂರದಲ್ಲಿರುವ ಬಸಗುಡ ಪೊಲೀಸ್ ಠಾಣೆ ವ್ಯಾಪ್ತಿಯ ಬೆಲಂ ಗುಟ್ಟಾ ಬೆಟ್ಟಗಳಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಎನ್ ಕೌಂಟರ್ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐಟಿಬಿಪಿ ಯೋಧ ಹುತಾತ್ಮಬಲಂ ನೇದ್ರಾ ಅರಣ್ಯದಲ್ಲಿ ನಕ್ಸಲ್ ಹಿರಿಯ ನಾಯಕರಾದ ವಿನೋದ್ ವರ್ಮಾ, ರಾಜು ಪುಣೆಂ, ವಿಶ್ವನಾಥ್ ಮತ್ತು ಗುಡ್ಡು ತೇಲಂ ಸೇರಿದಂತೆ ಮದ್ದೇಡ್ ಪ್ರದೇಶ ಸಮಿತಿಯ ನಕ್ಸಲ್ ಕಾರ್ಯಕರ್ತರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಗುಪ್ತಚರ ಮಾಹಿತಿ ಸಿಕ್ಕಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗುಂಡಿನ ಚಕಮಕಿ ನಿಂತ ನಂತರ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ನಕ್ಸಲರ ಮೃತದೇಹಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಎನ್ಕೌಂಟರ್ ಸ್ಥಳದಿಂದ ಸ್ಫೋಟಕಗಳು, ಶಸ್ತ್ರಾಸ್ತ್ರಗಳು, ನಕ್ಸಲ್ ಸಮವಸ್ತ್ರ, ಸಾಹಿತ್ಯ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಯಾದ ನಕ್ಸಲರ…

Read More

ತುಮಕೂರು: ಗ್ರಾಮ ಪಂಚಾಯಿತಿ ಸದಸ್ಯೆ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತಳನ್ನು ಭಾಗ್ಯ (30) ಎಂದು ಗುರುತಿಸಲಾಗಿದೆ. ಭಾಗ್ಯ ಹಿರೇಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆಯಾಗಿದ್ದರು. ಶುಕ್ರವಾರ ನೇಣು ಬಿಗಿದ ಸ್ಥಿತಿಯಲ್ಲಿ ಭಾಗ್ಯ ಮೃತದೇಹ ಪತ್ತೆಯಾಗಿದೆ. ಸಂಬಂಧಿಕದರಿಂದ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ತುಮಕೂರಿನ ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Read More

ಜೋಧಪುರ: ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡುತ್ತಿದ್ದ ಸಮಯದಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಶಾಲಾ ಮಕ್ಕಳು ಮೃತಪಟ್ಟಿರುವ ಘಟನೆ ಇಲ್ಲಿನ ಬನಾರ್‌ ಪ್ರದೇಶದಲ್ಲಿ ನಡೆದಿದೆ. ಮೃತ ಮಕ್ಕಳು ಬನಾರ್ ಪ್ರದೇಶದ ಗಣೇಶಪುರ ನಿವಾಸಿಗಳಾಗಿದ್ದುಇವರನ್ನು ಅನನ್ಯ ಕನ್ವರ್ (9) ಮತ್ತು ಯುವರಾಜ್ ಸಿಂಗ್ (11) ಎಂದು ಗುರುತಿಸಲಾಗಿದೆ.ಸೋದರ ಸಂಬಂಧಿಗಳಾದ ಇಬ್ಬರು ಮಕ್ಕಳು ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ದಾರಿ ಮಧ್ಯೆ ನಾಯಿಗಳು ಮಕ್ಕಳನ್ನು ಅಟ್ಟಿಸಿಕೊಂಡು ಬಂದಿದ್ದವು.ಇದರಿಂದ ಭಯಭೀತರಾದ ಮಕ್ಕಳು ನಾಯಿಗಳಿಂದ ತಪ್ಪಿಸಿ ಓಡಲು ಪ್ರಾರಂಭಿಸಿದ್ದರು. ನಾಯಿಯಿಂದ ತಪ್ಪಿಸುವ ಭರದಲ್ಲಿ ಮಕ್ಕಳು ರೈಲು ಬರುವುದನ್ನು ಗಮನಿಸದೆ ರೈಲ್ವೆ ಹಳಿಗಳ ಮೇಲೆ ಪ್ರವೇಶಿಸಿದ್ದಾರೆ,ಇದಾದ ಕೆಲವೇ ಕ್ಷಣಗಳಲ್ಲಿ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಮೃತರ ಪೋಷಕರು ಮತ್ತು ಸ್ಥಳೀಯರು ಪ್ರತಿಭಟಿಸಿದ್ದು ನಾಯಿಗಳನ್ನು ಹಿಡಿಯುವವರೆಗೂ ಮೃತದೇಹ ಪಡೆಯುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಕೆಲ ಸಮಯದಲ್ಲೇ ಜೋಧಪುರ ನಗರಸಭೆಯ ಶ್ವಾನದಳದ ಸಿಬ್ಬಂದಿ ನಾಯಿಗಳನ್ನು ಹಿಡಿದಿದ್ದಾರೆ. ನಾಯಿ ಮಾಲೀಕರ…

Read More

ಹೊಸದಿಲ್ಲಿ: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಪ್ರಕರಣದ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 2023ರ ನವೆಂಬರ್ ನಲ್ಲಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ನಕಲಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಬಳಿಕ ಆ ವೀಡಿಯೊ ಬ್ರಿಟಿಷ್ ನಟಿ ಜಾರಾ ಪಟೇಲ್ ಅವರದ್ದು ಎಂದು ಗುರುತಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿರುವ ನಾಲ್ಕು ಶಂಕಿತರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಆದರೆ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದ. ಈಗ ಆತನನ್ನೂ ಬಂಧಿಸಲಾಗಿದೆ.

Read More

ಚಿತ್ರದುರ್ಗ: ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ಮೂವರು ಮೃತಪಟ್ಟಿದ್ದಾರೆ ಹಾಗೂ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿತ್ರದುರ್ಗದ ಮೊಳಕಾಲ್ಕೂರು ತಾಲೂಕಿನ ರಾಂಪುರ ಬಳಿ ಸಂಭವಿಸಿದೆ. ಮೃತರೆಲ್ಲರೂ ಬಳ್ಳಾರಿಯ ಸಿರುಗುಪ್ಪ ಮೂಲದವರೆಂದು ತಿಳಿದು ಬಂದಿದೆ. ಮೃತ ಸುರೇಶನ ಅಜ್ಜಿ ಹುಲಿಗಮ್ಮ (66) ಎಂಬುವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಅಸುನೀಗಿದ್ದರು. ಬೆಂಗಳೂರಿನಿಂದ ಮೃತ ಅಜ್ಜಿಯ ಶವವನ್ನು ಕಾರಿನಲ್ಲಿ ಸಿರುಗುಪ್ಪಗೆ ಕರೆತರಲಾಗುತ್ತಿತ್ತು. ಆದರೆ, ರಾಂಪುರ ಬಳಿಯ ಗ್ಯಾಂಡ್ ಪೋರ್ಡ್ ಹೋಟೆಲ್ ಬಳಿ ಕಾರಿನ ಟೈರ್ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿ ಕಾರು ಪಲ್ಟಿಯಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪಿಎಸ್‌ಐ ಪರಶುರಾಮ್ ಲಮಾಣಿ ಪರಿಶೀಲನೆ ನಡೆಸಿದರು. ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಹೈದರಾಬಾದ್: ವಿಜಯವಾಡದ ಸ್ವರಾಜ್ ಮೈದಾನದಲ್ಲಿ 125 ಅಡಿ ಎತ್ತರದ ಡಾ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ಅನಾವರಣಗೊಳಿಸಿದರು. ಪ್ರತಿಮೆಯನ್ನು ಅನಾವರಣಗೊಳಿಸುವ ಮೊದಲು ಸಾಮಾಜಿಕ ಸಮತಾ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು, ಅಮೆರಿಕದ ನ್ಯೂಯಾರ್ಕ್ ಲಿಬರ್ಟಿ ಪ್ರತಿಮೆಗೆ ಹೆಸರುವಾಸಿಯಾಗಿದ್ದರೆ, ಆಂಧ್ರಪ್ರದೇಶದ ವಿಜಯವಾಡ ನಗರವನ್ನು ಮುಂದೆ ‘ಸಾಮಾಜಿಕ ನ್ಯಾಯದ ಪ್ರತಿಮೆ’ ಎಂದು ಕರೆಯಲಾಗುವುದು ಎಂದರು. ಈ ಪ್ರತಿಮೆಯು ದಲಿತರು ಮತ್ತು ದೇಶದ ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಸೇರಿದಂತೆ ಸಮಾಜದ ಇತರ ದೀನದಲಿತ ವರ್ಗಗಳ ಆತ್ಮವನ್ನು ಪ್ರತಿಬಿಂಬಿಸುತ್ತದೆ ಎಂದರು. ಈ ಪ್ರತಿಮೆಯು ಅಸ್ಪೃಶ್ಯತೆ ವಿರುದ್ಧದ ಹೋರಾಟದ ಆಧಾರ ಸ್ತಂಭವಾಗಿದೆ. ನಾವು ಇಂದಿಗೂ ಇತರ ರೂಪಗಳಲ್ಲಿ ಅಸ್ಪೃಶ್ಯತೆ ವಿರುದ್ಧ ಹೋರಾಡುತ್ತಿದ್ದೇವೆ. ಅಂಬೇಡ್ಕರ್ ಅವರು ದಲಿತರು ಮತ್ತು ಸಮಾಜದ ಇತರ ಅಂಚಿನಲ್ಲಿರುವ ವರ್ಗಗಳನ್ನು ತಮ್ಮ ತಾರತಮ್ಯದ ವಿರುದ್ಧ ಹೋರಾಡಲು ಪ್ರೇರೇಪಿಸಿದರು, ಶಿಕ್ಷಣ ಪಡೆಯಲು ಸಾಧ್ಯವಾಗದ ಶೋಷಿತ ವರ್ಗಗಳ ನಡುವೆ ಶಿಕ್ಷಣದ ಕ್ರಾಂತಿಗೆ ಅಂಬೇಡ್ಕರ್ ನಾಂದಿ ಹಾಡಿದ್ದಾರೆ ಎಂದರು. ದಲಿತರು ಮತ್ತು ಇತರ…

Read More

ಒಡಿಶಾ: ಕೇಂದ್ರಪಾರಾ ಜಿಲ್ಲೆಯಲ್ಲಿ ಖಾಸಗಿ ಶಾಲೆಯೊಂದರ 45 ವರ್ಷದ ಮುಖ್ಯೋಪಾಧ್ಯಾಯರನ್ನು, ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಹೆಡ್ ಮಾಸ್ಟರ್, ಜನವರಿ 16 ರಂದು ಶಾಲೆಯಲ್ಲಿ 13 ವರ್ಷದ 7ನೇ ತರಗತಿಯ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಾಲಕಿಯರು ಶಾಲೆಗೆ ಹೋಗಲು ನಿರಾಕರಿಸಿದ್ದು, ಏಕೆ ಶಾಲೆಗೆ ಹೋಗುತ್ತಿಲ್ಲ ಎಂದು ಅವರ ಪೋಷಕರು ಕೇಳಿದಾಗ ಈ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಶಿಕ್ಷಕನ ವಿರುದ್ಧ ಐಪಿಸಿ ಸೆಕ್ಷನ್ 376, 354, 506 ಮತ್ತು ಪೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ರಾಜನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಜಯ ಕುಮಾರ್ ಜೆನಾ ಅವರು ಹೇಳಿದ್ದಾರೆ.

Read More

ಅಯೋಧ್ಯೆ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಸಂಬಂಧಿಸಿದಂತೆ ರಿಸರ್ವ್ ಬ್ಯಾಂಕ್ ಜನವರಿ 22 ರಂದು ರಜೆ ಘೋಷಿಸಿದೆ. ಮಧ್ಯಾಹ್ನ 2.30ರವರೆಗೆ ರಜೆ. ಷೇರು ಮಾರುಕಟ್ಟೆ ಕೂಡ ಮುಚ್ಚಲಿದೆ. ಬೆಳಗ್ಗೆ 9 ಗಂಟೆಗೆ ಆರಂಭವಾಗುವ ಮಾರುಕಟ್ಟೆ ಅಂದು ಮಧ್ಯಾಹ್ನ 2.30ರಿಂದ ಮಾತ್ರ ಆರಂಭವಾಗಲಿದೆ. ಸೆಂಟ್ರಲ್ ಬ್ಯಾಂಕ್ ನಿಯಂತ್ರಿಸುವ ಮಾರುಕಟ್ಟೆಗಳು ಮಧ್ಯಾಹ್ನ 2.30 ರಿಂದ ಸಂಜೆ 5 ರವರೆಗೆ ತೆರೆದಿರುತ್ತವೆ. ಕೇಂದ್ರ ಬ್ಯಾಂಕ್‌ ನಿಂದ ನಿಯಂತ್ರಿಸಲ್ಪಡುವ ಮಾರುಕಟ್ಟೆಗಳಲ್ಲಿ ಕರೆ/ನೋಟಿಸ್/ಅವಧಿಯ ಹಣ, ಸರ್ಕಾರಿ ಭದ್ರತೆಗಳಲ್ಲಿ ಮಾರುಕಟ್ಟೆ ರೆಪೊ, ಸರ್ಕಾರಿ ಭದ್ರತೆಗಳಲ್ಲಿ ತ್ರಿಪಕ್ಷೀಯ ರೆಪೊ, ವಾಣಿಜ್ಯ ಕಾಗದ ಮತ್ತು ಠೇವಣಿ ಪ್ರಮಾಣಪತ್ರಗಳು, ಕಾರ್ಪೊರೇಟ್ ಬಾಂಡ್‌ಗಳಲ್ಲಿನ ರೆಪೊ, ಸರ್ಕಾರಿ ಭದ್ರತೆಗಳು ಮತ್ತು ವಿದೇಶಿ ವಿನಿಮಯ ಸೇರಿವೆ. ಸಾರ್ವಜನಿಕ ವಲಯದ ಬ್ಯಾಂಕುಗಳು, ವಿಮಾ ಕಂಪನಿಗಳು, ಹಣಕಾಸು ಸಂಸ್ಥೆಗಳು ಮತ್ತು ಸ್ಥಳೀಯ ಗ್ರಾಮೀಣ ಬ್ಯಾಂಕುಗಳು ಜನವರಿ 22 ರಂದು ಮಧ್ಯಾಹ್ನದವರೆಗೆ ಮುಚ್ಚಲ್ಪಡುತ್ತವೆ.

Read More

ಮಾಜಿ ಕ್ರಿಕೆಟಿಗ ಮತ್ತು ಎಎಪಿ ಸಂಸದ ಹರ್ಭಜನ್ ಸಿಂಗ್ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಿರ್ಧಾರ ವೈಯಕ್ತಿಕವಾಗಿದೆ. ರಾಮ ಮಂದಿರಕ್ಕೆ ಹೋಗುವುದರಿಂದ ಯಾರಿಗಾದರೂ ತೊಂದರೆಯಾದರೆ ಅವರು ಏನು ಬೇಕಾದರೂ ಮಾಡಬಹುದು ಎಂದು ಹರ್ಭಜನ್ ಹೇಳಿದ್ದಾರೆ. ಕಾರ್ಯಕ್ರಮಕ್ಕೆ ಯಾರೇ ಬರಲಿ, ಇಲ್ಲದಿರಲಿ, ಕಾಂಗ್ರೆಸ್ ಇರಲಿ, ಇಲ್ಲದಿರಲಿ, ಬೇರೆ ಪಕ್ಷಗಳು ಬರಲಿ, ಬರದಿರಲಿ, ಖಂಡಿತ ಹೋಗುತ್ತೇನೆ. ದೇವರಲ್ಲಿ ನಂಬಿಕೆಯುಳ್ಳವನಾಗಿ ಇದು ನನ್ನ ವೈಯಕ್ತಿಕ ನಿರ್ಧಾರ. ಈ ಸಮಯದಲ್ಲಿ ದೇವಾಲಯಕ್ಕೆ ಹೋಗುವುದು ನಮ್ಮ ಅದೃಷ್ಟ, ನಾವೆಲ್ಲರೂ ಇಲ್ಲಿಗೆ ಬಂದು ಶ್ರೀರಾಮನ ಆಶೀರ್ವಾದವನ್ನು ಪಡೆಯಬೇಕು. ರಾಮನ ಆಶೀರ್ವಾದ ಪಡೆಯಲು ರಾಮಮಂದಿರ ಉದ್ಘಾಟನೆಗೆ ಖಂಡಿತ ಹೋಗುತ್ತೇನೆ ಎಂದು ಹರ್ಭಜನ್ ಹೇಳಿದ್ದಾರೆ. ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಯನ್ನು ವಿರೋಧ ಪಕ್ಷಗಳು ಬಹಿಷ್ಕರಿಸಿದ ನಡುವೆಯೇ ಅವರ ಈ ಹೇಳಿಕೆ ಹೊರಬಿದ್ದಿದೆ. 2024ರ ಲೋಕಸಭಾ ಚುನಾವಣೆಯ ಪ್ರಚಾರದ ಸಾಧನವಾಗಿ ದೇವಸ್ಥಾನವನ್ನು ತೆರೆಯುವ ಪಕ್ಷದ ಕಾರ್ಯಸೂಚಿಗೆ ಉತ್ತೇಜನ ನೀಡುವುದಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸಿದ್ದು, ‘ಪ್ರಾಣ ಪ್ರತಿಷ್ಠಾ’ಸಮಾರಂಭದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ…

Read More

ರಾಮಮಂದಿರದಲ್ಲಿ ಪ್ರಸಾದದ ಹೆಸರಿನಲ್ಲಿ ಸಿಹಿತಿಂಡಿ ಮಾರಾಟ ಮಾಡುತ್ತಿರುವ ಬಗ್ಗೆ ಕೇಂದ್ರ ಸರ್ಕಾರ ಅಮೆಜಾನ್‌ ಗೆ ನೋಟಿಸ್ ಕಳುಹಿಸಿದೆ. ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರದಿಂದ ನೋಟಿಸ್ ಕಳುಹಿಸಲಾಗಿದೆ. ಜನರನ್ನು ದಾರಿ ತಪ್ಪಿಸುವ ಮೂಲಕ ಉತ್ಪನ್ನವನ್ನು ಮಾರಾಟ ಮಾಡಲು ಪ್ರಯತ್ನಿಸಿದ್ದಕ್ಕಾಗಿ ಕ್ರಮವಾಗಿದೆ. ಈ ಸಂಬಂಧ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ದೂರು ದಾಖಲಿಸಿದೆ. ಜನರನ್ನು ದಾರಿ ತಪ್ಪಿಸುವ ಮೂಲಕ ಅಮೆಜಾನ್ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ದೂರಿನಲ್ಲಿ ತಿಳಿಸಿದೆ. ಅನೇಕ ಜನರು ಅಮೆಜಾನ್‌ ನಿಂದ ಸಿಹಿತಿಂಡಿಗಳನ್ನು ಖರೀದಿಸಿದರು. ಆದರೆ, ತಾಂತ್ರಿಕವಾಗಿ ದೇವಸ್ಥಾನದ ಟ್ರಸ್ಟಿ ಈ ರೀತಿ ಪ್ರಸಾದ ಮಾರಾಟ ಮಾಡುವುದಿಲ್ಲ. ದೇವಸ್ಥಾನದ ಹೆಸರಿನಲ್ಲಿ ಸುಳ್ಳು ಹಕ್ಕು ನೀಡಿ ಉತ್ಪನ್ನ ಮಾರಾಟ ಮಾಡಲಾಗುತ್ತಿದೆ ಎಂಬುದು ದೂರು. ಆ ಬಳಿಕ ನೋಟಿಸ್ ಕಳುಹಿಸಲಾಗಿತ್ತು.

Read More