Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ಗುಬ್ಬಿ: ಇತ್ತೀಚೆಗೆ ವಿದ್ಯಾರ್ಥಿಗಳು ಹೆಚ್ಚು ಮೊಬೈಲ್ ಬಳಕೆಯಿಂದ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಕಾನೂನು ಸೇವಾ ಪ್ರಾಧಿಕಾರದ ಸರ್ಕಾರಿ ಅಭಿಯೋಜಕಿ ಕೆ.ಶೋಭಾ ತಿಳಿಸಿದರು. ತಾಲೂಕಿನ ಕೆ.ಜಿ.ಟೆಂಪಲ್ ನಾಗಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸರ್ಕಾರಿ ಅಭಿಯೋಜಕರ ಇಲಾಖೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸೈಬರ್ ಕ್ರೈಂ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಸಾಕಷ್ಟು ದೊಡ್ಡ ಮಟ್ಟದಲ್ಲಿ ಎಲ್ಲೆಡೆ ಹಬ್ಬುತ್ತಿದೆ. ಸೈಬರ್ ವಂಚಕರ ಆಮಿಷಕ್ಕೆ ಒಳಗಾಗಿ ಮೋಸ ಹೋಗುತ್ತಿದ್ದಾರೆ. ಅದರೊಂದಿಗೆ ತಮ್ಮ ಜೀವನದಲ್ಲಿ ಹಲವಾರು ಸಮಸ್ಯೆಗಳಿಗೆ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ. ಅದರಿಂದ ಕಾನೂನು ತೊಡಕುಗಳಿಗೆ ಹಾಗೂ ಮುಂದಿನ ಪೀಳಿಗೆಗೆ ದೊಡ್ಡ ಹೊಡೆತ ಬೀಳುತ್ತಿದೆ ಎಂದು ಹೇಳಿದರು. ವಕೀಲರ ಸಂಘದ ಉಪಾಧ್ಯಕ್ಷ ಸಿ.ಕೆ.ರವೀಂದ್ರ ಮಾತನಾಡಿ, ಓದಿನ ಜೊತೆಯಲ್ಲಿ ಸಮಾಜದ ಆಗು ಹೋಗುಗಳ ಬಗ್ಗೆ ಮಾಹಿತಿ ಸಹ ಪಡೆಯುವಂತಹ ವಿದ್ಯಾರ್ಥಿಗಳು…
ತುಮಕೂರು: ಜಿಲ್ಲಾಡಳಿತದ ವತಿಯಿಂದ ಜನವರಿ 26ರಂದು ಬೆಳಿಗ್ಗೆ 7.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನವರು ಹುತಾತ್ಮರಾದ ದಿನದ ಸ್ಮರಣಾರ್ಥವಾಗಿ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ನೌಕರರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತುಮಕೂರು ಜಿಲ್ಲೆ, ತಾಲ್ಲೂಕು, ನಗರ ಸವಿತಾ ಸಮಾಜದ ವತಿಯಿಂದ ಜನವರಿ 27ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಗಾರ್ಡನ್ ರಸ್ತೆ ಸವಿತಾ ಸಮುದಾಯ ಭವನದಲ್ಲಿ ‘ಸವಿತಾ ಮಹರ್ಷಿ ಜಯಂತಿ’ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಚುನಾಯಿತ ಪ್ರತಿನಿಧಿಗಳು ಭಾಗವಹಿಸುವರು. ಕಾರ್ಯಕ್ರಮ ಕುರಿತು ಚಿಕ್ಕನಾಯಕನಹಳ್ಳಿ ಸಾದರಹಳ್ಳಿಯ ನಿವೃತ್ತ ಪದವೀಧರ ಮುಖ್ಯ ಶಿಕ್ಷಕ ಜಿ. ಗೋವಿಂದರಾಜು ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಸವಿತಾ ಸಮಾಜದಲ್ಲಿ ವಿಶೇಷ ಸೇವೆ ಸಲ್ಲಿಸಿರುವವರನ್ನು ಸನ್ಮಾನಿಸಲಾಗುವುದು. ಜಿಲ್ಲೆಯ ವಿವಿಧ ಇಲಾಖೆಗಳ ಮುಖ್ಯಸ್ಥರು/ಸಿಬ್ಬಂದಿ ವರ್ಗ, ವಿವಿಧ ಸಮುದಾಯದ ಮುಖಂಡರು, ಗಣ್ಯರು, ಕಲಾವಿದರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ತುಮಕೂರು: ನಗರದ ವರಿನ್ ಅಂತರಾಷ್ಟ್ರೀಯ ವಸತಿ ಶಾಲೆಯ 30 ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಸಾಮಾನ್ಯ ಜ್ಞಾನದ ಒಲಂಪಿಯಾಡ್ ಪರೀಕ್ಷೆಯಲ್ಲಿ ಚಿನ್ನದ ಪದಕಗಳಿಸಿದ್ದಾರೆ. ಇಂಟರ್ನ್ಯಾಷನಲ್ ಜನರಲ್ ನಾಲೆಡ್ಜ್ ಒಲಂಪಿಯಾಡ್ ಪರೀಕ್ಷೆಯು ವಿದ್ಯಾರ್ಥಿಗಳ ಪಠ್ಯೇತರ ಜ್ಞಾನ ಸಂಪನ್ನತೆ, ಜಾಗೃತ ಮನಸ್ಥಿತಿ, ತಾರ್ಕಿಕ ಆಲೋಚನೆ ಜೀವನ ಕೌಶಲ ಇತ್ಯಾದಿ ಅಂಶಗಳನ್ನು ಪರೀಕ್ಷಿಸುವ ಗುರಿ ಹೊಂದಿದೆ. ವರಿನ್ ವಿದ್ಯಾರ್ಥಿಗಳು ತಮ್ಮ ಬುದ್ಧಿಮತ್ತೆ, ಜ್ಞಾನಗಳಿಗೆ ಪ್ರಸ್ತುತ ವಿದ್ಯಮಾನಗಳ ಅರಿವು ಇತ್ಯಾದಿ ಜ್ಞಾನ ಸ್ಥಿರತೆಯನ್ನು ಸ್ಪಷ್ಟವಾಗಿ ದಾಖಲಿಸುವ ಮೂಲಕ ಚಿನ್ನದ ಪದಕ ಮತ್ತು ಅಭಿನಂದನಾ ಪತ್ರವನ್ನು ಗಳಿಸಿರುತ್ತಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಸಾಧನೆ ಪ್ರಶಂಸನೀಯವಾಗಿದೆ. ವಿಜೇತರೆಲ್ಲರನ್ನು ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವರ್ಗ ಪ್ರಶಂಸಿಸಿ ಹರ್ಷ ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಹಿರಿಯ ನಟ ದುನಿಯಾ ವಿಜಯ್ ಅವರು ನಾಯಕರಾಗಿ ಅಭಿನಯಿಸಿರುವ ‘ಲ್ಯಾಂಡ್ಲಾರ್ಡ್’ ಸಿನಿಮಾದ ಬಿಡುಗಡೆ ಅಂಗವಾಗಿ ಶುಕ್ರವಾರ ನಗರದ ಮಾರುತಿ ಚಿತ್ರಮಂದಿರದಲ್ಲಿ ದುನಿಯಾ ವಿಜಯ್ ಅಭಿಮಾನಿಗಳು ಸಿಹಿ ವಿತರಿಸಿ ಸಂಭ್ರಮಿಸಿದರು. ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿ ಅಭಿಮಾನ ಮೆರೆದರು. ವಿಜಯಸೇನೆ ರಾಜ್ಯಾದ್ಯಕ್ಷ ಹೆಚ್. ಎನ್.ದೀಪಕ್ ಈ ಸಂಭ್ರಮ ಸಮಾರಂಭದಲ್ಲಿ ಭಾಗಿಯಾಗಿ, ಲ್ಯಾಂಡ್ಲಾರ್ಡ್ ಸಿನಿಮಾ ತುಮಕೂರು ಜಿಲ್ಲೆಯ ವಿವಿಧೆಡೆ ಚಿತ್ರೀಕರಣವಾಗಿದೆ. ಇತಿಹಾಸ ಪ್ರಸಿದ್ಧ ಕೈದಾಳದ ಚನ್ನಕೇಶವಸ್ವಾಮಿ ದೇವಸ್ಥಾನ ಸುತ್ತಮುತ್ತ ಹಲವು ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಈ ಸಿನಿಮಾ ಯಶಸ್ವಿಯಾಗಲಿ, ದುನಿಯಾ ವಿಜಯ್ ಅವರು ಮುಂದೆ ಮತ್ತಷ್ಟು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡದ ಕೀರ್ತಿ ಬೆಳಗಲಿ ಎಂದು ಹೇಳಿದರು. ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಂಕರ್ ಮಾತನಾಡಿ, ದುನಿಯಾ ವಿಜಯ್ ಅಭಿಮಾನಿಗಳ ಸಂಘದವರು ಚಿತ್ರ ಬಿಡುಗಡೆಯನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಿ ಮಾದರಿಯಾಗಿದ್ದಾರೆ. ಜಿಲ್ಲೆಯ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಿನಿಮಾ ವೀಕ್ಷಣೆ ಮಾಡಿ ಚಿತ್ರವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು. ಚಿತ್ರ ಬಿಡುಗಡೆ…
ಗುಬ್ಬಿ: ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ (ಗುಬ್ಬಿಯಪ್ಪ) ಅವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಉಪವಿಭಾಗಾಧಿಕಾರಿಗಳು ಹಾಗೂ ದೇವಾಲಯದ ಆಡಳಿತಾಧಿಕಾರಿ ನಹೀದಾ ಜಮ್ ಜಮ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ದೇವಾಲಯದ ದಾಸೋಹ ಸಭಾಂಗಣದಲ್ಲಿ ಕರೆಯಲಾಗಿತ್ತು. ಸಭೆಯಲ್ಲಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ತಹಶೀಲ್ದಾರ್ ಆರತಿ ಬಿ. ಕಳೆದ ಬಾರಿ ನಡೆದ ಜಾತ್ರಾ ಮಹೋತ್ಸವದ ಸಾಧಕ ಬಾಧಕಗಳನ್ನು ಚರ್ಚಿಸಿ ಜಾತ್ರೆಯ ಸಂದರ್ಭದಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ 18 ಕೋಮಿನ ಮುಖಂಡರು, ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿ, ದಾಸೋಹ ಸಮಿತಿ ಸೇರಿದಂತೆ ಹಲವು ಮುಖಂಡರ ಚರ್ಚೆ ನಡೆಸಿ ಬೆಸ್ಕಾಂ, ಆರೋಗ್ಯ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪ್ರತಿಬಾರಿಯೂ ಜಾತ್ರೆಯ ಸಂದರ್ಭದಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು, ಜಾತ್ರೆಯ ಸಂದರ್ಭದಲ್ಲಿ ಜಿಲ್ಲೆಯ ಮೂಲೆ ಮೂಲೆಯಿಂದ ಹಾಗೂ ಹೊರ ಜಿಲ್ಲೆಗಳಿಂದ ಭಕ್ತರು ಬರುವುದರಿಂದ ಕೆಎಸ್ಆರ್ಟಿಸಿ ಅವರು ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಸೂಚಿಸಲಾಯಿತು, ಜೊತೆಗೆ ಸಾವಿರಾರು ಜನ ಭಾಗವಹಿಸುವುದರಿಂದ ಪೊಲೀಸ್ ಇಲಾಖೆಯು ಸಹ…
ವರದಿ: ಹಾದನೂರು ಚಂದ್ರ ಸರಗೂರು: ಪಟ್ಟಣದಲ್ಲಿ ನಾಯಕ ಸಮಾಜದ ವತಿಯಿಂದ ಶ್ರೀ ಚಿಕ್ಕದೇವಮ್ಮನವರ 49ನೇ ವರ್ಷದ ಅಂಗವಾಗಿ ಶುಕ್ರವಾರ ವಿಶೇಷ ಪೂಜಾ ಮಹೋತ್ಸವ ಹಾಗೂ ಪಲ್ಲಕ್ಕಿ ಉತ್ಸವದ ಮೆರವಣಿಗೆ ವಿಜೃಂಭಣೆಯಿಂದ ನಡೆಸಲಾಯಿತು. ಮಹೋತ್ಸವದ ಹಿನ್ನೆಲೆಯಲ್ಲಿ ಪಟ್ಟಣದ ನಾಯಕ ಸಮಾಜದ ಬೀದಿಗಳನ್ನು ವಿವಿಧ ಬಗೆಯ ತಳಿರು ತೋರಣಗಳಿಂದ ಅಲಂಕರಿಸಿ, ಪ್ರತಿ ಬೀದಿಗಳಲ್ಲಿ ರಂಗೋಲಿ ಬಿಡಿಸಿ ಬಣ್ಣ, ಬಣ್ಣದ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಚಿಕ್ಕದೇವಮ್ಮನವರ ದೇವಾಲಯದಲ್ಲಿ ಮುಂಜಾನೆಯಿಂದಲೇ ಹೋಮ, ಹವನ ನಡೆಸಿ, ಗಣಪತಿ ಹೋಮ ಪುಣ್ಯಾಹ, ಕಳಸ ಪ್ರತಿಷ್ಠಾಪಿಸಿ, ನವಗ್ರಹದ ಹೋಮ, ದುರ್ಗಹೋಮ ಸೇರಿದಂತೆ ವಿವಿಧ ಹೋಮಗಳು ಹಾಗೂ ವಿವಿಧ ಪೂಜಾ ಕೈಂಕರ್ಯಗಳು ವಿಶೇಷವಾಗಿ ಜರುಗಿದವು. ಇದಕ್ಕೂ ಮುನ್ನ ಕಪಿಲ ನದಿಗೆ ತೆರಳಿ ಗಂಗೆ ಪೂಜೆ ನಡೆಸಲಾಯಿತು. ಚಿಕ್ಕದೇವಮ್ಮನವರ ಉತ್ಸವ ಮೂರ್ತಿಯನ್ನು ವಿವಿಧ ಹೂವುಗಳಿಂದ ಅಲಂಕರಿಸಿ, ಪಲ್ಲಕ್ಕಿ ಮೇಲೆ ಅಮ್ಮನವರ ವಿಗ್ರಹ ಕೂರಿಸಿ ಪೂರ್ಣಕುಂಬ ಕಳಸದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮಂಗಳವಾದ್ಯ ಮೊಳಗಿದವು. ಸತ್ತಿಗೆ, ಬ್ಯಾಂಡ್ಸೆಟ್, ವೀರಗಾಸೆ ಕುಣಿತ ಮೆರವಣಿಗೆಗೆ ಮೆರಗು…
ಗದಗ: ಕಷ್ಟದ ಬದುಕಿನಲ್ಲೂ ಪ್ರಾಮಾಣಿಕತೆಯನ್ನು ಮರೆಯದ 14 ವರ್ಷದ ಬಾಲಕನೊಬ್ಬ ತನಗೆ ಸಿಕ್ಕ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸುವ ಮೂಲಕ ನಾಡಿನ ಗಮನ ಸೆಳೆದಿದ್ದಾನೆ. ಗದಗ ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಪ್ರಜ್ವಲ್ ರಿತ್ತಿ ಎಂಬಾತನೇ ಈ “ಹೀರೋ”. ಏನಿದು ಘಟನೆ? ಲಕ್ಕುಂಡಿ ಗ್ರಾಮದ ನಾಲ್ಕನೇ ವಾರ್ಡ್ನಲ್ಲಿರುವ ತಮ್ಮ ನಿವೇಶನದಲ್ಲಿ ಪ್ರಜ್ವಲ್ ಮತ್ತು ಆತನ ಮಾವ ಮನೆಗಾಗಿ ತಳಪಾಯ ಅಗೆಯುತ್ತಿದ್ದರು. ಈ ವೇಳೆ ಗುದ್ದಲಿ ಹಾರಿಸಿದಾಗ ತಾಮ್ರದ ಬಿಂದಿಗೆಯೊಂದು ಪತ್ತೆಯಾಗಿದೆ. ಅದನ್ನು ತೆಗೆದು ನೋಡಿದಾಗ ಅದರಲ್ಲಿ ವಿಜಯನಗರ ಕಾಲದ್ದಿರಬಹುದು ಎಂದು ಅಂದಾಜಿಸಲಾದ ಬಂಗಾರದ ನಾಣ್ಯಗಳು ಮತ್ತು ಆಭರಣಗಳಿದ್ದವು. ಪ್ರಾಮಾಣಿಕತೆಯ ಪರಾಕಾಷ್ಠೆ: ಬಡತನದಲ್ಲಿದ್ದರೂ ಪ್ರಜ್ವಲ್ ಅದಕ್ಕೆ ಆಸೆಪಡಲಿಲ್ಲ. ಕೂಡಲೇ ಆತ ಪಂಚಾಯಿತಿ ಸದಸ್ಯರಿಗೆ ಮತ್ತು ಗ್ರಾಮದ ಹಿರಿಯರಿಗೆ ವಿಷಯ ತಿಳಿಸಿದನು. ನಂತರ ಅಧಿಕಾರಿಗಳ ಸಮ್ಮುಖದಲ್ಲಿ ಆ ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಲಾಯಿತು. “ಚಿನ್ನ ನೋಡಿದಾಗ ಇದು ನನಗೆ ಬೇಡ ಅನ್ನಿಸಿತು. ಹಿಂದೆ ನಿಧಿ ತಿಂದವರ ಮನೆ ಉದ್ದಾರ ಆಗಿಲ್ಲ ಎಂಬ ಮಾತನ್ನು…
ಬಳ್ಳಾರಿಯಲ್ಲಿ ಬ್ಯಾನರ್ ವಿವಾದದ ಕಿಚ್ಚು ತಣ್ಣಗಾಗುವ ಮೊದಲೇ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರ ‘ಮಾಡೆಲ್ ಹೌಸ್’ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಕಂಟೋನೆಂಟ್ ಪ್ರದೇಶದ ಜಿ–ಸ್ಟಾರ್ ಲೇಔಟ್ನಲ್ಲಿ ಸುಮಾರು 73 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಈ ಸುಸಜ್ಜಿತ ಮಾದರಿ ಮನೆಯ ಬಾಗಿಲು, ಕಿಟಕಿಗಳನ್ನು ಮುರಿದ ದುಷ್ಕರ್ಮಿಗಳು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ಕೃತ್ಯದ ಹಿಂದೆ ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರ ಕೈವಾಡವಿದೆ ಎಂದು ಮಾಜಿ ಶಾಸಕ ಸೋಮಶೇಖರ ರೆಡ್ಡಿ ಗಂಭೀರವಾಗಿ ಆರೋಪಿಸಿದ್ದಾರೆ. “ಬಳ್ಳಾರಿಯ ಭಸ್ಮಾಸುರನೇ ಈ ಬೆಂಕಿ ಹಚ್ಚುವ ಕೆಲಸ ಮಾಡಿಸಿದ್ದಾರೆ” ಎಂದು ಅವರು ಕಿಡಿಕಾರಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರೂ, ಮನೆಯ ಬೆಲೆಬಾಳುವ ಪೀಠೋಪಕರಣಗಳು ಹಾಗೂ ಕಟ್ಟಿಗೆಯ ಕಂಬಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಘಟನೆಯಿಂದಾಗಿ ಬಳ್ಳಾರಿಯಲ್ಲಿ…
ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಸಹಯೋಗದಲ್ಲಿ ತುಮಕೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ ‘ಕರ್ನಾಟಕ ಕ್ರೀಡಾಕೂಟ 2025–26’ರ ಸಮಾರೋಪ ಸಮಾರಂಭದಲ್ಲಿ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಿ, ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ತುಮಕೂರಿನಲ್ಲಿ ಇಂತಹ ಮಹತ್ವದ ರಾಜ್ಯಮಟ್ಟದ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸುವ ಶಕ್ತಿ ಹಾಗೂ ಸಾಮರ್ಥ್ಯವಿದೆ ಎಂಬುದನ್ನು ಇಡೀ ರಾಜ್ಯಕ್ಕೆ ತಿಳಿಸಿರುವ ಹೆಮ್ಮೆ ನಮಗಿದೆ ಎಂದರು. ತುಮಕೂರಿನಲ್ಲಿ ಕ್ರೀಡಾಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ 60 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಈ ಕ್ರೀಡಾಂಗಣದಲ್ಲಿ ಅಭ್ಯಾಸ ಪಡೆದ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಸಾಧನೆ ಮಾಡಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಕ್ರೀಡಾಭಿವೃದ್ಧಿಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ, ಹಾಕಿ ಕ್ರೀಡಾಂಗಣ ಹಾಗೂ ಟೆನ್ನಿಸ್ ಅಕಾಡೆಮಿ…