Subscribe to Updates
Get the latest creative news from FooBar about art, design and business.
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
- ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
- ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
- ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
- ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
- ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
- ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
- ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
Author: admin
ಬಾಗಲಕೋಟೆ: ಆರೋಗ್ಯವು ಅಮೂಲ್ಯ ಸಂಪತ್ತಾಗಿದ್ದು ಪೌಷ್ಟಿಕ ಆಹಾರ, ಮಿತ ವ್ಯಾಯಾಮದ ಮೂಲಕ ಕಾಪಾಡಿಕೊಳ್ಳಬೇಕು. ಹಣದಿಂದ ಅವಶ್ಯಕ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಆದರೆ ಆರೋಗ್ಯವನ್ನು ಪಡೆದುಕೊಳ್ಳುವುದು ಕಷ್ಟಕರ ಎಂದು ಮನೋವೈದ್ಯರಾದ ಡಾ.ಸಿ.ಆರ್. ಚಂದ್ರಶೇಖರ ಹೇಳಿದರು. ನಗರದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ದೇಹ ಮನಸ್ಸು ಮತ್ತು ಆರೋಗ್ಯದರಿವಿನ ಅಭಿಯಾನ ಕಾರ್ಯಕ್ರಮದಲ್ಲಿ ಮನೋವಿಜ್ಞಾನಕ್ಕೆ ಸಂಬಂಧಿಸಿ, 9 ಕಿರು ಪುಸ್ತಕಗಳನ್ನು ಬಿಡುಗಡೆಗೊಳಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು. ಪ್ರಸ್ತುತ ದಿನಮಾನಗಳಲ್ಲಿ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ. ಆರೋಗ್ಯವಂತ ವ್ಯಕ್ತಿ ಏನನ್ನಾದರೂ ಸಾಧಿಸಬಲ್ಲ. ಪ್ರತಿಯೊಬ್ಬರಲ್ಲಿಯೂ ಸಾಧರಣ ಬುದ್ಧಿ ಸಾಮರ್ಥ್ಯವಿದ್ದು ಅದನ್ನು ಉಪಯೋಗಿಸಿಕೊಳ್ಳಬೇಕು. ಆಲೋಚನೆ, ಕಲಿಕೆ, ಸಂವಹಣ, ಸೃಜನಶೀಲತೆ ಮತ್ತು ಕೌಶಲ್ಯ ಬೆಳವಣಿಗೆಯಿಂದ ಬುದ್ಧಿಶಕ್ತಿ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದರು. ಪ್ರತಿಯೊಬ್ಬರಿಗೂ ಐದು ಭಾಷೆಗಳನ್ನು ಕಲಿಯುವ ಸಾಮರ್ಥ್ಯವಿದೆ. ಒಂದೇ ಭಾಷೆಗೆ ಸೀಮಿತವಾಗದೆ, ಬಹು ಬಾಷೆಗಳನ್ನು ಕಲಿತು ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಿ. ದುಡುಕು ನಿರ್ಧಾರಗಳಿಗೆ ಬಲಿಯಾಗದೇ ಭಾವನೆಗಳನ್ನು ನಿಯಂತ್ರಿಕೊಳ್ಳುವ ಸಾಮರ್ಥ್ಯ ಬೆಳೆಸಿಕೊಳ್ಳಿ. ಕೋಪ, ಭಯ, ಉದ್ವಿಗ್ನತೆಯನ್ನು ಹತೋಟಿಗೆ ತೆಗೆದುಕೊಂಡರೆ…
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಜನವರಿ 21 ರಂದು ಬೆಳಗ್ಗೆ 9 ಗಂಟೆಯಿಂದ ಕಲಾವಿದರಿಗಾಗಿ ‘ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ’ವನ್ನು ವಿಧಾನಸೌಧ ಪೂರ್ವದಿಕ್ಕಿನ ಬಸವಣ್ಣನ ಪ್ರತಿಮೆ ಎದುರುಗಡೆಯಲ್ಲಿ ಏರ್ಪಡಿಸಲಾಗಿದೆ. ವೃತ್ತಿಪರ ಮತ್ತು ಹವ್ಯಾಸಿ ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು, ಕಲಾ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ. ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು ಭಾಗವಹಿಸುವುದನ್ನು ಪ್ರೋತ್ಸಾಹಿಸುವಂತಹ ವ್ಯಂಗ್ಯಚಿತ್ರಗಳನ್ನು ರಚಿಸಬೇಕು. ಆಯ್ಕೆಯಾದ 100 ವ್ಯಂಗ್ಯಚಿತ್ರಗಳನ್ನು ಜ.21ರಂದು ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅತ್ಯುತ್ತಮ 25 ಚಿತ್ರಗಳನ್ನು ಮತದಾನ ಜಾಗೃತಿ, ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ ಹಾಗೂ ಆ ವ್ಯಂಗ್ಯಚಿತ್ರಗಳಿಗೆ ಗೌರವಧನವನ್ನು ಸಹ ನೀಡಲಾಗುತ್ತದೆ. ಷರತ್ತು ಹಾಗು ನಿಬಂಧನೆಗಳು: • ಚಿತ್ರಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಪ್ರಚಾರ ಮತ್ತು ವ್ಯಂಗ್ಯ ಇರಬಾರದು • ಚಿತ್ರಗಳು ಹೊಸದಾಗಿದ್ದು, ಈ ಹಿಂದೆ ಯಾವುದೇ ಪ್ರಚಾರದಲ್ಲಿ ಬಳಸಿಕೊಂಡಿರಬಾರದು. • ಚಿತ್ರಗಳು ಸ್ವಂತ ರಚನೆಯಲ್ಲಿರಬೇಕು. (ಗ್ರಾಫಿಕ್ಸ್, ಕುಂಚ,…
ಬೆಂಗಳೂರು: ಸೈಬರ್ ಅಪರಾಧಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ತುಮಕೂರು ಜಿಲ್ಲೆಯ ಗುಬ್ಬಿ ಮತ್ತು ಕೊರಟಗೆರೆ ತಾಲ್ಲೂಕಿನ 7,500 ಕ್ಕೂ ಹೆಚ್ಚು ಮಕ್ಕಳನ್ನು ಒಳಗೊಂಡಿರುವ 44 ಸರ್ಕಾರಿ ಶಾಲೆಗಳಲ್ಲಿ ಅಭಿಯಾನ ಆರಂಭವಾಗಿದೆ. ಜನವರಿ 17 ರಂದು ಈ ಅಭಿಯಾನ ಆರಂಭಗೊಂಡಿದ್ದು, ಶುಕ್ರವಾರ ಮುಕ್ತಾಯವಾಗಲಿದೆ. ಬೆಂಗಳೂರು ಮೂಲದ ಇಂಟರ್ನ್ಯಾಶನಲ್ ಸ್ಕೂಲ್ ಆಫ್ ಬ್ಯುಸಿನೆಸ್ & ರಿಸರ್ಚ್ನ 350 ಕ್ಕೂ ಹೆಚ್ಚು ವಿದ್ಯಾರ್ಥಿ ಸ್ವಯಂಸೇವಕರು, ಫೌಂಡೇಶನ್ ಮತ್ತು ಇಂಡಿಯಾ ಲಿಟರಸಿ ಪ್ರಾಜೆಕ್ಟ್ನ ಸಹಯೋಗದೊಂದಿಗೆ ಈ ಅಭಿಯಾನ ಕೈಗೊಂಡಿದ್ದಾರೆ. ಇದಕ್ಕೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಕೂಡಾ ಬೆಂಬಲ ವ್ಯಕ್ತಪಡಿಸಿದೆ. 8, 9 ಮತ್ತು 10 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಚಟುವಟಿಕೆ ಆಧಾರಿತ ಅವಧಿಗಳ ಮೂಲಕ ಶಿಕ್ಷಣ ನೀಡುವ ಗುರಿಯನ್ನು ಅಭಿಯಾನ ಹೊಂದಿದೆ. ಉಪನ್ಯಾಸಗಳು, ವೈಯಕ್ತಿಕ ಸುರಕ್ಷತೆ ಮತ್ತು ಸುರಕ್ಷತಾ ಅಪಾಯಗಳಿಗೆ ಸಂಭವನೀಯ ಬೆದರಿಕೆಗಳ ಮಾಹಿತಿಯನ್ನು ಒಳಗೊಂಡಿರುತ್ತದೆ. ಜೊತೆಗೆ ಅವುಗಳನ್ನು ತಡೆ ಮತ್ತು ಎದುರಿಸುವ ಕ್ರಮಗಳನ್ನು ಒಳಗೊಂಡಿರುತ್ತದೆ ಎಂದು ವರದಿಯಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ದ ಏಕವಚನ ಬಳಕೆ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಕಾಂಗ್ರೆಸ್ ನಾಯಕರಲ್ಲದೇ ಬಿಜೆಪಿ ಕೆಲ ಮುಖಂಡರು ಸಹ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಶಿವರಾಜ್ ತಂಗಡಗಿ, ಅನಂತ್ ಕುಮಾರ್ ಹೆಗಡೆ ಹುಚ್ಚ ಎಂದು ಬಿಜೆಪಿಯವರೇ ತಿಳಿದುಕೊಂಡಿದ್ದಾರೆ ಎಂದು ಈಗ ಸಾಬೀತಾಯಿತು. ಹೆಗಡೆ ಅವರ ಮಾತಿಗೆ ಬೆಲೆ ಕೊಡಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷರೇ ಹೇಳಿದ್ದಾರೆ. ಅನಂತ್ ಕುಮಾರ್ ಹೆಗಡೆ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದಿದ್ದಾರೆ. ಆತ ಬಿಜೆಪಿಯಲ್ಲಿ ಹುಚ್ಚ. ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಲೇವಡಿ ಮಾಡಿದರು. ಅನಂತ್ ಕುಮಾರ್ ಹೆಗಡೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಚಿಕಿತ್ಸೆ ಕೊಡಿಸುವ ಕೆಲಸ ಮಾಡಲಿ ಇಲ್ಲದಿದ್ದರೇ ನಾವು ಕೊಡಿಸುತ್ತೇವೆ. ಹೆಗಡೆ ವಿರುದ್ದ ಕ್ರಮ ಕೈಗೊಳ್ಳಲು ಸಿಎಂ, ಡಿಸಿಎಂ ನಿರ್ಧರಿಸಿದ್ದಾರೆ ಎಂದು ತಿಳಿಸಿದರು.
ಗೌರಿಬಿದನೂರಿನ ಮಂಚೇನಹಳ್ಳಿ ಸಮೀಪದ ಟ್ರಾನ್ಸ್ ಫಾರ್ಮರ್ ಬಳಿ ಹಾಕಿರುವ ಗೈ ವೈರ್ ಎಳೆಯಲು ಹೋಗಿ ಆಕಸ್ಮಿಕ ವಿದ್ಯುತ್ ತಗಲಿ ಚಿಂದಿ ಆಯುವ ಬಾಲಕ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ನಾಗೇಂದ್ರ (8) ಮೃತಪಟ್ಟ ಬಾಲಕ. ಆತ ಇಂದು ಬೆಳಗ್ಗೆ ಚಿಂದಿ ಆಯುವ ಸಂದರ್ಭದಲ್ಲಿ ಟ್ರಾನ್ಸ್ ಫಾರ್ಮರ್ ಗೆ ಹೊಂದಿಕೊಂಡಿರುವ ಚರಂಡಿ ಬಳಿ ಇರುವ ಗೈ ವೈರ್ ಅನ್ನು ಬಲವಾಗಿ ಎಳೆದಿದ್ದರಿಂದ ಗೈ ವೈರ್ ಎಲ್ ಟಿ ಕಿಟ್ ಗೆ ತಾಕಿ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಬಾಲಕ ನಾಗೇಂದ್ರ ಮೃತ ಪಟ್ಟಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದು, ಎಲೆಕ್ಟ್ರಿಕಲ್ ಇನ್ಸ್ ಪೆಕ್ಟರ್ ಅವರ ವರದಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ. ಚಿಕ್ಕಾಬಳ್ಳಾಪುರ- ಗೌರಿಬಿದನೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಜೊತೆಗೆ ಟ್ರಾನ್ಸ್ ಫಾರ್ಮರ್ ಬಳಿವಿರುವ ಚರಂಡಿ ದುರಸ್ಥಿ ಕಾರ್ಯ ಕೂಡ ನಡೆಯುತ್ತಿದೆ. ಬಾಲಕ, ಚರಂಡಿ ಆಚೆ ಇರುವ ಗೈ ವೈರ್ ಅನ್ನು ಎಳೆದ ಪರಿಣಾಮ ಈ ಘಟನೆ ಸಂಭವಿಸಿದೆ. ಈ…
ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಜನವರಿ 22 ರಂದು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಅಂದು ಅರ್ಧ ದಿನ ಸರ್ಕಾರಿ ರಜೆಯನ್ನ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ಕುರಿತು ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ. ಜನವರಿ 22 ರಂದು ಕೇಂದ್ರಸರ್ಕಾರದ ಕಚೇರಿಗಳಿಗೆ ಕೇಂದ್ರದ ಶಿಕ್ಷಣ ಸಂಸ್ಥೆಗಳು ಕೇಂದ್ರ ಕಾರ್ಖಾನೆಗಳಿಗೆ ಮಧ್ಯಾಹ್ನ 2.30ರವರೆಗೆ ರಜೆ ಘೋಷಣೆ ಮಾಡಲಾಗಿದೆ.
ಡಿಎಂಕೆ ಶಾಸಕ ಐ ಕರುಣಾನಿಧಿ ಅವರ ಪುತ್ರನ ಮನೆಯಲ್ಲಿ ಮನೆಕೆಲಸ ಮಾಡುತ್ತಿದ್ದ ದಲಿತ ಬಾಲಕಿಯಗೆ ಸಂಬಳ ನೀಡದೆ ದೈಹಿಕ ಹಲ್ಲೆ
ಚೆನ್ನೈ: ಚೆನ್ನೈನಲ್ಲಿರುವ ಡಿಎಂಕೆ ಶಾಸಕ ಐ ಕರುಣಾನಿಧಿ ಅವರ ಪುತ್ರನ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದ ದಲಿತ ಬಾಲಕಿಯನ್ನು ಶಾಸಕ ಐ ಕರುಣಾನಿಧಿ ಅವರ ಪುತ್ರನ ಮನೆಯವರು ಹಲವಾರು ತಿಂಗಳುಗಳಿಂದ ಸಂಬಳ ನೀಡದೆ ದೈಹಿಕ ಹಿಂಸೆ ನೀಡಲಾಗುತಿದೆ ಎನ್ನಲಾಗಿದೆ. ತಿರುವನ್ಮಿಯೂರಿನ ಗ್ರೀನ್ ಮೆಡೋಸ್ ಅಪಾರ್ಟ್ಮೆಂಟ್ನ ಮನೆ ಮಾಲೀಕರಾದ (ಡಿಎಂಕೆ ಶಾಸಕ) ಆಂಡ್ರೊ ಮತಿವನನ್ ಪುತ್ರ ಮತ್ತು ಮರ್ಲಿನಾ (ಡಿಎಂಕೆ ಶಾಸಕರ ಸೊಸೆ) ಪದೇ ಪದೇ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಮತ್ತು ವೈದ್ಯಕೀಯ ಸಹಾಯವನ್ನು ನಿರಾಕರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ. . ಸಂತ್ರಸ್ತೆ ತನ್ನ ಪಿ.ಯುತರಗತಿಯನ್ನು ಪೂರ್ಣಗೊಳಿಸಿದ ನಂತರ, ಮರ್ಲಿನಾ ಮತ್ತು ಆಂಟೊ ಮತಿವನನ್ ಅವರ ಮನೆಯಲ್ಲಿ ಏಜೆಂಟ್ ಮೂಲಕ ಮನೆಕೆಲಸಕ್ಕೆ ಸೇರಿಕೊಂಡಳು. ತನ್ನ ಕುಟುಂಬದೊಂದಿಗೆ ಮಾತನಾಡುವುದನ್ನು ಕೂಡ ಕುಂಟುಂಬ ನೀರಾಕರಿಸಿತ್ತು. ಸಂತ್ರಸ್ತೆ ಪೊಂಗಲ್ಗೆಂದು ತನ್ನ ಮನೆಗೆ ಬಂದ ನಂತರ ತನ್ನ ಸ್ವಂತ ಊರಾದ ಕಲ್ಲಕುರುಚಿ ಜಿಲ್ಲೆಯ ಉಲುಂದೂರುಪೇಟೆ ಪೊಲೀಸರಿಗೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ…
ಮಧ್ಯಪ್ರದೇಶ: ವಿದ್ಯಾರ್ಥಿಯೊಬ್ಬ ಗುರುವಾರ ಬೆಳಗ್ಗೆ ಕೋಚಿಂಗ್ ಕ್ಲಾಸ್ನಲ್ಲಿ ಪಾಠ ಕೇಳುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ರಾಜಾ (18) ಮೃತ ವಿದ್ಯಾರ್ಥಿ, ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ನಿವಾಸಿಯಾಗಿದ್ದಾನೆ.ವಿದ್ಯಾರ್ಥಿ ಉನ್ನತ ವ್ಯಾಸಂಗಕ್ಕಾಗಿ ಇಂದೋರ್ನಲ್ಲಿ ನೆಲೆಸಿದ್ದಾನೆ.ರಾಜಾ ಮಧ್ಯಪ್ರದೇಶ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಗಳಿಗೆ ಅದೇ ಜಿಲ್ಲೆಯ ಭಾವರ್ಕುವಾದಲ್ಲಿ ಕೋಚಿಂಗ್ ಇನ್ಸ್ಟಿಟ್ಯೂಟ್ ಸೇರಿದ್ದನು. ರಾಜಾ ತರಗತಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದ. ಆದರೆ ಏಕಾಏಕಿ ತರಗತಿಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಇದನ್ನು ಗಮನಿಸಿದ ಸಹ ವಿದ್ಯಾರ್ಥಿಗಳು ರಾಜಾ ಅವರನ್ನು ಎತ್ತಿ ಬೆಂಚಿನ ಮೇಲೆ ಕೂರಿಸಿದರು.ಆದರೆ ರಾಜ ಅದಾಗಲೇ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ. ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ರಾಜಾ ಆದಾಗಲೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಬಿಗ್ ಬಾಸ್ ಸೀಸನ್ 10 ರಿಯಾಲಿಟಿ ಶೋ ವಾರದಿಂದ ವಾರಕ್ಕೆ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಈ ನಡುವೆ ಬಿಗ್ ಬಾಸ್ ನಿಂದ ಔಟ್ ಆಗಿದ್ದ ಸ್ಪರ್ಧಿಗಳು ಬಿಗ್ ಬಾಸ್ ಮನೆಯೊಳಗೆ ಅತಿಥಿಗಳಾಗಿ ಬಂದ ಬಳಿಕ ಮನೆಯೊಳಗೆ ಅಲ್ಲೋಲಕಲ್ಲೋಲ ಸೃಷ್ಠಿಯಾಗಿದೆ. ಬಿಗ್ ಬಾಸ್ ಸ್ಪರ್ಧಿ ನಮೃತಾ ಹಾಗೂ ಕಾರ್ತಿಕ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನೆಗೆಟಿವ್ ಟ್ರೋಲ್ ಗಳು ಸಾಕಷ್ಟು ಹರಿದಾಡುತ್ತಿವೆ. ಕಾರ್ತಿಕ್ ನ ಸ್ವಲ್ಪ ಅತಿಯಾಯ್ತು ಅನ್ನೋ ಮಟ್ಟದ ವರ್ತನೆ ನಮ್ರತಾಳಿಗೆ ನೆಗೆಟಿವ್ ಆಗಿ ಪರಿಣಮಿಸಿದೆ. ಈ ವಿಚಾರವನ್ನು ಮನೆಯೊಳಗೆ ಎಂಟ್ರಿಕೊಟ್ಟಿದ್ದ ಸ್ನೇಹಿತ್ ಪರೋಕ್ಷವಾಗಿ ನಮೃತಾಗೆ ತಿಳಿಸಿದ್ದು, ಇದರಿಂದಾಗಿ ನಮೃತಾ ಕಣ್ಣೀರು ಹಾಕಿ, ಗಳಗಳನೇ ಅತ್ತಿದ್ದಾರೆ. ಇಶಾನಿ ಹಾಗೂ ಮೈಕಲ್ ಕೂಡ ಕಾರ್ತಿಕ್ ಜೊತೆಗೆ ಹೆಚ್ಚು ಸಮಯ ಕಳೆಯ ಬೇಡ, ಅದು ಹೊರಗಡೆ ನೆಗೆಟಿವ್ ಆಗಿ ಕಾಣಿಸ್ತಾ ಇದೆ ಅಂತ ನಮೃತಾಗೆ ಹೇಳಿದ್ದಾರೆ. ನಮೃತಾ ಹಾಗೂ ಕಾರ್ತಿಕ್ ನ ಸಲುಗೆ ಸ್ನೇಹಿತ್ ಗೆ ತೀವ್ರ ಆಕ್ರೋಶ ಉಂಟು ಮಾಡಿದ್ದರೂ, ನಾನು ಈಗ ನಿಮಗೆ…
ಧಾರವಾಡ: ಯುವ ಕಲಾವಿದನೊಬ್ಬ ತನ್ನದೇ ಕಲ್ಪನೆಯಲ್ಲಿ ರಾಮಲಲ್ಲಾನ ವಿಗ್ರಹವನ್ನು ಮಣ್ಣಿಯಲ್ಲಿ ತಯಾರಿಸಿ, ಎಲ್ಲರ ಗಮನ ಸೆಳೆದಿದ್ದಾನೆ. ಇದೀಗ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆಯೂ ಆಗಲಿದೆ. ಈ ಸಂದರ್ಭದಲ್ಲಿ ಧಾರವಾಡದ ಯುವ ಕಲಾವಿದ ರೋಹಿತ್ ಹಿರೇಮಠ ತನ್ನದೇ ಕಲ್ಪನೆಯಲ್ಲಿ 15 ಇಂಚು ಎತ್ತರದ ರಾಮಲಲ್ಲಾ ವಿಗ್ರಹವನ್ನು ನಿರ್ಮಿಸಿದ್ದಾರೆ. ಧಾರವಾಡ ನಗರದ ಕೆಲಗೇರಿ ಬಡಾವಣೆಯ ಯುವ ಕಲಾವಿದ ರೋಹಿತ್ ಹಿರೇಮಠ, ಸರಕಾರಿ ಕಲಾ ಗ್ಯಾಲರಿಯಲ್ಲಿ ಬ್ಯಾಚುಲರ್ ಆಫ್ ವಿಶುವಲ್ ಆರ್ಟ್ಸ್ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದಾರೆ. ರೋಹಿತ್ ತಂದೆ ಮಂಜುನಾಥ ಹಿರೇಮಠ ಪರಿಸರ ಸ್ನೇಹಿ ಗಣೇಶ ವಿಗ್ರಹ ತಯಾರಕರು. ತಂದೆಯಂತೆಯೇ ಮಗನು ಕೂಡ ಕಲಾವಿದನೇ. ಈಗಾಗಲೇ ಅನೇಕ ಕಲಾಕೃತಿ ಮಾಡಿರೋ ರೋಹಿತ್ ಗೆ ರಾಮನೆಂದರೆ ತುಂಬಾನೇ ಭಕ್ತಿ. ಇದೇ ಕಾರಣಕ್ಕೆ ಐವತ್ತೊಂದು ಗಂಟೆಗಳ ಕಾಲ ಕೆಲಸ ಮಾಡಿ, 15 ಇಂಚಿನ ರಾಮಲಲ್ಲಾ ವಿಗ್ರಹವನ್ನು ತಯಾರಿಸಿ, ಎಲ್ಲರನ್ನೂ ಚಕಿತಗೊಳಿಸಿದ್ದಾನೆ.