Author: admin

ಹಿಟ್ ಆ್ಯಂಡ್ ರನ್ ಕಾಯ್ದೆ ವಾಪಸು ಆಗುವವರೆಗೂ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಿಂತಲ್ಲೇ ಕೆಲ ಲಾರಿಗಳು ನಿಂತಿದೆ. ರಾಜ್ಯದಲ್ಲಿ ಚನ್ನಾರೆಡ್ಡಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಚನ್ನಾರೆಡ್ಡಿ ಕರ್ನಾಟಕ ರಾಜ್ಯದ ಲಾರಿ ಮಾಲೀಕರ ಸಂಘದ ಅಧ್ಯಕ್ಷರಾಗಿದ್ದು, ರಾಜ್ಯದಲ್ಲಿ ಲಾರಿ ಮಾಲೀಕರ ಹೋರಾಟಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿನ್ನೆಯಿಂದ ಲಾರಿ ಸಂಚಾರ ಯಥಾಸ್ಥಿತಿ ಇದೆ. ಕೇಂದ್ರ ಸರ್ಕಾರದ ಹಿಟ್ ಆ್ಯಂಡ್ ರನ್ ಕಾಯ್ದೆ ಭಾರೀ ವಿರೋಧ ವ್ಯಕ್ತವಾಗಿದ್ದು, ನಿನ್ನೆ ಮಧ್ಯರಾತ್ರಿ ಯಿಂದ ಲಾರಿ ಸಂಚಾರ ಸ್ಥಗಿತಗೊಳಿಸಿ ಲಾರಿ ಮಾಲೀಕರು ಹೋರಾಟ ಮಾಡ್ತಿದ್ದಾರೆ. ಅಗತ್ಯ ಸೇವೆ ಹೊರತುಪಡಿಸಿ ವಾಣಿಜ್ಯ ಸೇವೆಯ ಲಾರಿಗಳ ಸಂಚಾರ ಸ್ಥಗಿತವಾಗಿದೆ. ಹಿಟ್ ಆ್ಯಂಡ್ ರನ್ ಕಾಯ್ದೆ ವಾಪಸು ಆಗುವವರೆಗೂ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

Read More

ಪಾಕಿಸ್ತಾನವು ಇರಾನ್ ಮೇಲೆ ದಾಳಿ ಮಾಡಿತು. ಇರಾನ್ ‌ನಲ್ಲಿರುವ ಬಲೂಚಿಸ್ತಾನ್ ಲಿಬರೇಶನ್ ಫ್ರಂಟ್ ಮತ್ತು ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ ಪೋಸ್ಟ್ ‌ಗಳ ವಿರುದ್ಧ ಪಾಕಿಸ್ತಾನದ ಪ್ರತಿದಾಳಿಯಾಗಿದೆ. ಭಯೋತ್ಪಾದಕ ಸಂಘಟನೆ ಜೈಶ್ ಅಲ್-ಅಡ್ಲಿನ್ ಕೇಂದ್ರಗಳ ಮೇಲೆ ಇರಾನ್ ದಾಳಿ ನಡೆಸಿದ ನಂತರ ಪ್ರತೀಕಾರ ಮಾಡಲಾಗಿದೆ. ಇರಾನ್ ದಾಳಿಯನ್ನು ಖಂಡಿಸಿರುವ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು. ಮಂಗಳವಾರ, ಇರಾನ್ ಗಡಿಯಲ್ಲಿರುವ ಬಲೂಚಿಸ್ತಾನದ ನೈಋತ್ಯ ಪ್ರಾಂತ್ಯದ ಹಳ್ಳಿಯ ಮೇಲೆ ಇರಾನ್ ದಾಳಿ ನಡೆಸಿತು. ಇರಾನ್‌ ನ ಕ್ಷಿಪಣಿ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಇರಾಕ್ ಮತ್ತು ಸಿರಿಯಾ ನಂತರ ಇರಾನ್ ದಾಳಿಗೆ ಒಳಗಾದ ಮೂರನೇ ದೇಶ ಪಾಕಿಸ್ತಾನ. ಇಸ್ರೇಲಿ ಬೇಹುಗಾರಿಕಾ ಸಂಸ್ಥೆಯಾದ ಮೊಸ್ಸಾದ್ ‌ನ ಇರಾಕಿನ ಪ್ರಧಾನ ಕಛೇರಿಯ ಮೇಲೆ ಕಳೆದ ದಿನ ಇರಾನ್ ದಾಳಿ ನಡೆಸಿತ್ತು. ಇರಾನ್ ಉತ್ತರ ಸಿರಿಯಾದಲ್ಲಿರುವ ಇಸ್ಲಾಮಿಕ್ ಸ್ಟೇಟ್ ನೆಲೆಗಳನ್ನೂ ಗುರಿಯಾಗಿಸಿಕೊಂಡಿದೆ. ಇದಾದ ಬಳಿಕ ಪಾಕಿಸ್ತಾನದ ಮೇಲೂ ದಾಳಿ ನಡೆದಿದೆ.

Read More

ತಮಿಳುನಾಡಿನ ಜಲ್ಲಿಕಟ್ಟು ವೇಳೆ ಗೂಳಿ ದಾಳಿಗೆ ಬಾಲಕ ಸೇರಿದಂತೆ ಇಬ್ಬರು ಬಲಿಯಾಗಿದ್ದಾರೆ. ಮಧುರೈ ಸಮೀಪದ ಸಿರವಯಲ್ ಎಂಬಲ್ಲಿ ಈ ದಾರುಣ ಘಟನೆ ನಡೆದಿದೆ. ಜೆಲ್ಲಿಕಟ್ಟು ಮತ್ತು ಮಂಚುವಿರಟ್ಟಲ್ ದೊಡ್ಡ ಮೈದಾನದಲ್ಲಿ ಗೂಳಿಗಳನ್ನು ಬಿಡಿಸಿ ಅವುಗಳಿಗೆ ಕಟ್ಟಿಹಾಕುವ ಅಪಾಯಕಾರಿ ಆಟಗಳಾಗಿವೆ. ಶಿವಗಂಗಾ ತಿರುಪ್ಪತ್ತೂರು ಚಿರವಾಯಲ್‌ ನಲ್ಲಿ ಅಪಘಾತ ಸಂಭವಿಸಿದ್ದು, ಓರ್ವ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಮಂಗಳವಾರ ಮಧುರೈ ಮತ್ತು ಮಂಚುವಿರಟ್ಟಲ್‌ ನಲ್ಲಿ ಇದೇ ರೀತಿಯ ಅಪಘಾತ ಸಂಭವಿಸಿದೆ. ಇತ್ತೀಚಿನ ದಿನಗಳಲ್ಲಿ ಅವ್ನಿಯಪ್ಪುರಂನಲ್ಲಿ ಜಲ್ಲಿಕಟ್ಟು ವೇಳೆ 45 ಮಂದಿ ಗಾಯಗೊಂಡಿದ್ದು, ಪಾಲಮೇಡೆಯಲ್ಲಿ 42 ಮಂದಿ ಗಾಯಗೊಂಡಿದ್ದಾರೆ. ಆದರೆ ದಾಳಿ ನಡೆದಿರುವುದು ಜಲ್ಲಿಕಟ್ಟು ವೇಳೆ ಅಲ್ಲ, ಓಟದ ನಂತರ ಪ್ರಾಣಿಗಳನ್ನು ಸಂಗ್ರಹಿಸಲು ಗೂಳಿ ಮಾಲೀಕರು ಜಮಾಯಿಸಿದಾಗ ದಾಳಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಸಮಯದಲ್ಲಿ ಗೂಳಿಗಳು ಧಾವಿಸಿ ಇಬ್ಬರ ಮೇಲೆ ದಾಳಿ ನಡೆಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. 186 ಗೂಳಿಗಳು ಈ ಜಲ್ಲಿಕಟ್ಟು ಭಾಗವಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಗೂಳಿ ಪಳಗಿಸುವ ಕ್ರೀಡೆಗೆ ವಿಧಿಸಲಾಗಿದ್ದ…

Read More

ಉತ್ತರ ದೆಹಲಿ: 14 ವರ್ಷದ ಬಾಲಕಿಯ ಮೇಲೆ ಆಕೆಯ ತಾಯಿಯ ಲಿವ್-ಇನ್ ಸಂಗಾತಿ ಅತ್ಯಾಚಾರವೆಸಗಿರುವ ಸಂಗತಿ ಬೆಳಕಿಗೆ ಬಂದಿದೆ. ಆರೋಪಿ ಅಂಕಿತ್ ಯಾದವ್ (29) ಗಾಜಿಯಾಬಾದ್ ನ ಲೋನಿ ನಿವಾಸಿಯಾಗಿದ್ದು, ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು. ಪೊಲೀಸರ ಪ್ರಕಾರ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376, ಮತ್ತು 506 ಕ್ರಿಮಿನಲ್ ಬೆದರಿಕೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಬುರಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಗೆ ಮದುವೆಯಾಗಿ ಮೂವರು ಮಕ್ಕಳಿದ್ದಾರೆ, ಎಂಟು ವರ್ಷಗಳ ಹಿಂದೆ ತನ್ನ ಪತಿಯನ್ನು ತೊರೆದಿದ್ದ ಆಕೆ, ನಂತರ ಬಸ್ ಚಾಲಕ ಯಾದವ್ ಜೊತೆ ಲಿವ್-ಇನ್ ಸಂಬಂಧದಲ್ಲಿದ್ದಳು ಎಂದು ಎಫ್ ಐಆರ್ ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ. ಜುಲೈ 23 ರಂದು ಮಹಿಳೆ ಆಸ್ಪತ್ರೆಯಲ್ಲಿದ್ದು ಮಕ್ಕಳನ್ನು ಮನೆಯಲ್ಲಿ ಬಿಟ್ಟು ಹೋಗಿದ್ದಳು, ಅಂದು ಯಾದವ್ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಮಹಿಳೆ ಪೊಲೀಸರಿಗೆ ವಿಷಯ ತಿಳಿಸಿದ್ದು, ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು…

Read More

ಬೆಂಗಳೂರು: ‘ಆನ್‌ ಲೈನ್ ಡೇಟಿಂಗ್’ ಆ್ಯಪ್ ಮೂಲಕ ಪರಿಚಯವಾದ ಯುವಕನಿಗೆ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಬಾಲಿವುಡ್‌ ನಿರ್ದೇಶಕಿ ದೀಪಿಕಾ ನಾರಾಯಣ ಭಾರದ್ವಾಜ್ ಅವರು ‘ಎಕ್ಸ್’ ಖಾತೆಯಲ್ಲಿ ಬರಹ ಪ್ರಕಟಿಸಿ, ಅದನ್ನು ನಗರ ಪೊಲೀಸ್ ಕಮಿಷನರ್‌ ಗೆ ಟ್ಯಾಗ್ ಮಾಡಿದ್ದಾರೆ. ಮಹಿಳೆ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇದಕ್ಕೆ ನಗರ ಪೊಲೀಸರು ಪ್ರತಿಕ್ರಿಯಿಸಿ, ಹತ್ತಿರದ ಪೊಲೀಸ್‌ ಠಾಣೆಗೆ ದೂರು ನೀಡಿ. ಜತೆಗೆ ತಮ್ಮ ಮೊಬೈಲ್ ನಂಬ‌ರ್ ನೀಡುವಂತೆ ಸೂಚಿಸಿದ್ದಾರೆ.

Read More

ಬೆಂಗಳೂರು: ಆಧಾರ್ ಕಾರ್ಡ್ ಹಾಗೂ ಬೆರಳಚ್ಚು ಬಳಸಿ ಬ್ಯಾಂಕ್ ‌ನಲ್ಲಿದ್ದ ಸಾರ್ವಜನಿಕರ ಹಣ ಡ್ರಾ ಮಾಡಿ ವಂಚಿಸುತ್ತಿದ್ದ ಬಿಹಾರದ ನಾಲ್ವರು ಆರೋಪಿಗಳನ್ನು ವಿಶೇಷ ತನಿಖಾ ದಳದ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ರೆಹಮಾನ್, ಅಬುಜರ್, ಆರೀಫ್‌, ನಾಶೀ‌ರ್ ಅಹಮದ್ ಬಂಧಿತರು. ಈ ವಂಚನೆ ಸಂಬಂಧ 120ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಈ ಸಂಬಂಧ ನಗರ ಪೊಲೀಸ್‌ ಕಮಿಷನರ್ ಬಿ. ದಯಾನಂದ್ ಅವರು ಎಸ್‌ ಐಟಿ ರಚಿಸಿ, ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀ ಪ್ರಸಾದ್ ಅವರಿಗೆ ಜವಾಬ್ದಾರಿ ನೀಡಲಾಗಿತ್ತು.

Read More

ನಿರ್ವಹಣೆ ಕೊರತೆಯಿಂದ ಕಳೆಗುಂದಿದ್ದ ಕಸ್ತೂರ ಬಾ ರಸ್ತೆಯಲ್ಲಿರುವ ವೆಂಕಟಪ್ಪ ಕಲಾ ಗ್ಯಾಲರಿ, ಮುಂದಿನ ಒಂಬತ್ತು ತಿಂಗಳಲ್ಲಿ ಆಧುನಿಕ ಸ್ಪರ್ಶದೊಂದಿಗೆ ಕಲಾ ಪ್ರಪಂಚಕ್ಕೆ ತೆರೆದುಕೊಳ್ಳಲಿದೆ. ‘ಸ್ಮಾರಕ ದತ್ತು’ ಯೋಜನೆಯಡಿ ಬ್ರಿಗೇಡ್ ಫೌಂಡೇಷನ್ ಈ ಕಟ್ಟಡದ ನವೀಕರಣ ಕಾಮಗಾರಿ ಕೈಗೆತ್ತಿಕೊಂಡಿದೆ. ಗ್ಯಾಲರಿಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಅವರು ನವೀಕರಣ ಕಾಮಗಾರಿಯ ಗುದ್ದಲಿ ಪೂಜೆಯನ್ನು ನೆರವೇರಿಸಿದರು.

Read More

ಉತ್ತರಪ್ರದೇಶ: ಯುವಕನೊಬ್ಬ ರಾಮಮಂದಿರದ ಪ್ರತಿಕೃತಿಯನ್ನು ಪಾರ್ಲೆ ಜಿ ಬಿಸ್ಕಿಟ್ ಗಳನ್ನು ಬಳಸಿ ನಿರ್ಮಿಸುವ ಮೂಲಕ ತನ್ನ ವಿಶಿಷ್ಟ ಪ್ರತಿಭೆ ಪ್ರದರ್ಶಿಸಿದ್ದಾನೆ. ಯುವಕನನ್ನು ದುರ್ಗಾಪುರ ಮೂಲದ ಛೋತನ್ ಘೋಷ್ ಎಂದು ಗುರುತಿಸಲಾಗಿದೆ. 4*4 ಅಡಿ ಆಯತದಲ್ಲಿ ನಿರ್ಮಿಸಲಾಗಿರುವ ಈ ಪ್ರತಿಕೃತಿಗೆ 20 ಕೆಜಿ ಬಿಸ್ಕೆಟ್ ಬಳಸಲಾಗಿದೆ. ತನ್ನ ಸ್ನೇಹಿತರ ಸಹಾಯದಿಂದ ಛೋತನ್ ಘೋಷ್ ಐದು ದಿನದಲ್ಲಿ ನಿರ್ಮಿಸಿದ್ದಾರೆ. ಛೋತನ್ ಘೋಷ್ ನ ಕಲೆ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Read More

ಉಡುಪಿ: ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ. ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ. ಒಂದಲ್ಲ ಒಂದು ದಿನ ಅಯೋಧ್ಯೆಗೆ ಹೋಗ್ತೀನಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ. ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ. ನಾನು ನಮ್ಮ ಸಂಸ್ಕೃತಿ, ಭಕ್ತಿಯನ್ನು ಆಚರಿಸುತ್ತೇನೆ ಎಂದು ಹೇಳಿದ್ದಾರೆ. ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ. ಆದ್ರೆ ನಾನಂತೂ ದೈವಿ ಭಕ್ತಳು ಎಂದು ಪದೇ ಪದೇ ಹೇಳುತ್ತೇನೆ. ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗೇ ಹೋಗ್ತೀನಿ. ರಾಮ ಮಂದಿರ ಅವರದ್ದೂ ಅಲ್ಲ ನಮ್ಮದೂ ಅಲ್ಲ, ಅಯೋಧ್ಯೆ ರಾಮಮಂದಿರ 140 ಕೋಟಿ ಜನರದ್ದು ಎಂದು ತಿಳಿಸಿದ್ದಾರೆ.

Read More

ಶ್ರೀರಾಮನ ಕಟೌಟ್ ಹಾಗೂ ಪ್ಲೆಕ್ಸ್​ ಅನ್ನು ಬ್ಲೇಡ್​​ನಿಂದ ಹರಿದಿದ್ದ ಇಬ್ಬರು ಆರೋಪಿಗಳನ್ನ ಮುಳಬಾಗಿಲು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮುಳಬಾಗಿಲು ನಗರದ ಗುಣಗಂಟೆಪಾಳ್ಯದಲ್ಲಿ ಶ್ರೀರಾಮನ ಫ್ಲೆಕ್ಸ್ ಹರಿದ ಪ್ರಕರಣ ನಡೆದಿತ್ತು. ನಿನ್ನೆ ರಾತ್ರಿ 10.44ರ ಸುಮಾರಿಗೆ ದುಷ್ಕರ್ಮಿಗಳು ಬ್ಲೇಡ್​ನಿಂದ ಹರಿದು ಹಾಕಿದ್ದರು. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಇದೀಗ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಶ್ರೀರಾಮನ ಕಟೌಟ್ ​ನ್ನು ಹರಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಜನವರಿ 22 ರಂದು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಲವಕುಶ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​​​ ಮತ್ತು ಪುತ್ರ ಅಯೋಧ್ಯೆ ಧ್ರುವ ಚಾರಿಟಬಲ್​​ ಟ್ರಸ್ಟ್​​ ವತಿಯಿಂದ ನಗರದಲ್ಲಿ ರಾಮನ ಶೋಭಾಯಾತ್ರೆ, ಸೀತರಾಮ ಕಲ್ಯಾಣೋತ್ಸವ ಮತ್ತು ಮಹಾಸಾಮ್ರಾಜ್ಯ ಪಟ್ಟಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ದಿನಾಂಕ 21 ಮತ್ತು 22 ರಂದು ಎರಡು ದಿನ ಈ ಕಾರ್ಯಕ್ರಮಗಳು ನಡೆಯಲಿದ್ದವು.ಹೀಗಾಗಿ ನಗರದಲ್ಲಿ ಬ್ಯಾನರ್​ ಮತ್ತು ಶ್ರೀರಾಮ ಕಟೌಟ್​ ನಿಲ್ಲಿಸಲಾಗಿತ್ತು.

Read More