Author: admin

ಅಯೋಧ್ಯೆ ರಾಮಮಂದಿರ ವಿಚಾರವಾಗಿ ಬಿಜೆಪಿ ನಡೆಯನ್ನು ಟೀಕಿಸುವ ಭರದಲ್ಲಿ ಭಗವಾನ್ ಶ್ರೀರಾಮನನ್ನು ಕಾಂಗ್ರೆಸ್ ಸಚಿವ ಕೆ.ಎನ್.ರಾಜಣ್ಣ ಅವಮಾನಿಸಿದ್ದಾರೆ. ಸಮಾವೇಶವೊಂದರಲ್ಲಿ ಮಾತನಾಡುತ್ತಾ, ನಾನು ಬಾಬ್ರಿ ಮಸೀದಿ ಬೀಳಿಸಿದ್ದಾಗ ಅಲ್ಲಿಗೆ ಹೋಗಿದ್ದೆ. ಒಂದು ಟೆಂಟ್ ಅಲ್ಲಿ ಎರಡು ಗೊಂಬೆ ಇಟ್ಟು ಇದೇ ಶ್ರೀರಾಮ ಅಂತಾ ಹೇಳ್ತಿದ್ರು. ಟೂರಿಂಗ್ ಟಾಕೀಸ್ ಅಲ್ಲಿ ಗೊಂಬೆ ಇಟ್ಟಿದ್ದಾರೆ ಅನಿಸ್ತು ಎಂದು ಹೇಳಿಕೆ ನೀಡಿದ್ದಾರೆ. ಈಗೆಲ್ಲಾ ಶ್ರೀರಾಮನ ದೇವಸ್ಥಾನ ಕಟ್ಟಿಸ್ತಿದ್ದಾರೆ ಅಲ್ಲಿ. ಇನ್ನೊಂದು ಐದಾರು ತಿಂಗಳು ಕಳೀಲಿ ಏನೇನ್ ಬರ್ತವೆ, ಏನೇನು ಅಂತೇಳಿ. ಯಾವತ್ತೂ ಕೂಡ ಶ್ರೀರಾಮ ಎಲ್ಲಾ ಜನರನ್ನ ಆಶೀರ್ವದಿಸುವ ದೇವರು. ಅದಕ್ಕೋಸ್ಕರ ರಾಮರಾಜ್ಯದ ಕಲ್ಪನೆ ಬಂದಿದ್ದು ಎಂದು ತಿಳಿಸಿದ್ದಾರೆ. ಈಗ ಅದು ಬಿಜೆಪಿ ಶ್ರೀರಾಮನೋ, ಮೋದಿ ಶ್ರೀರಾಮನೋ ನೋಡೋಣ. ಅದು ಏನಾಗುತ್ತೆ ಅಂತಾ. ನಮ್ಮೂರಲ್ಲಿ ನೂರಾರು ವರ್ಷ ಇತಿಹಾಸ ಇರುವಂತಹ  ಶ್ರೀರಾಮನ ದೇವಸ್ಥಾನಗಳಿವೆ. ಈಗ ಅದನ್ನ ಬಿಟ್ಟು ಇವರು ಚುನಾವಣೆಗೋಸ್ಕರ ದೇವಸ್ಥಾನಗಳನ್ನ ಕಟ್ಟಿ, ಜನರಿಗೆ ಮೋಸ ಮಾಡೋ ಕೆಲಸ ಮಾಡ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

Read More

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಇನ್ನಷ್ಟು ಬಿಆರ್ಎಸ್ ನಾಯಕಿ ಕೆ ಕವಿತಾಗೆ ಸಮನ್ಸ್ ಮಾಡಬಹುದು. ಇಡಿ ನೋಟೀಸ್ ವಿರುದ್ಧ ಕವಿತಾ ಈ ಹಿಂದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಬಿಆರ್‌ಎಸ್ ನಾಯಕನನ್ನು ವಿಚಾರಣೆಗೆ ಒಳಪಡಿಸಲು ನ್ಯಾಯಾಲಯದ ಆದೇಶವಿಲ್ಲದ ಪರಿಸ್ಥಿತಿಯಲ್ಲಿ ಇಡಿ ನಡೆ. ಈ ಪ್ರಕರಣದಲ್ಲಿ ಕವಿತಾ ಅವರನ್ನು ಕಳೆದ ವರ್ಷ ಮೂರು ಬಾರಿ ವಿಚಾರಣೆ ನಡೆಸಲಾಗಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕೇಂದ್ರೀಯ ಸಂಸ್ಥೆ ಹೇಳಿಕೆ ದಾಖಲಿಸಿಕೊಂಡಿದೆ. ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಈ ಹಿಂದೆ ಹೇಳಿದ್ದರು. ಕೇಸರಿ ಪಕ್ಷವು ತೆಲಂಗಾಣದಲ್ಲಿ ಹಿಂಬಾಗಿಲು ಪ್ರವೇಶಿಸಲು ಸಾಧ್ಯವಾಗದ ಕಾರಣ ಕೇಂದ್ರವು ಇಡಿಯನ್ನು ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಡಿ ನಾಲ್ಕನೇ ಸಮನ್ಸ್ ಜಾರಿ ಮಾಡಿದೆ. ಜನವರಿ 18ರಂದು ಹಾಜರಾಗುವಂತೆ ಸೂಚನೆ ನೀಡಿದೆ.

Read More

ಅಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದ ವೇಳೆ ಮೈದಾನಕ್ಕೆ ಅತಿಕ್ರಮ ಪ್ರವೇಶ ಮಾಡಿ ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡ ಆರೋಪದ ಮೇಲೆ ಪೊಲೀಸ್ ಕಸ್ಟಡಿಗೆ ಪಡೆದು ಬಿಡುಗಡೆಗೊಂಡ ಯುವಕನಿಗೆ  ಹೂವಿನ ಹಾರ ಹಾಕಿ ಸ್ವಾಗತಿಸಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೌಂಡರಿ ಗೆರೆ ಬಳಿ ನಿಂತಿದ್ದ ಕೊಹ್ಲಿ ಬಳಿ ಅಭಿಮಾನಿ ಓಡಿ ಬಂದು ವಿರಾಟ್ ರನ್ನು ಅಪ್ಪಿಕೊಂಡರು. ಆಗ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕನನ್ನು ತುಕೋಗಂಜ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಆತನನ್ನು ವಿವರವಾಗಿ ಪ್ರಶ್ನಿಸಲಾಯಿತು. ನಂತರ ಮಂಗಳವಾರ ಸಂಜೆ ಪೊಲೀಸರು ಅವರನ್ನು ಬಿಡುಗಡೆಗೊಳಿಸಿದರು. ಪೊಲೀಸ್ ಠಾಣೆಯಿಂದ ಹೊರಬಂದ ಅವರನ್ನು ಕುಟುಂಬಸ್ಥರು ಹಾಗೂ ಸ್ನೇಹಿತರು ಸ್ವಾಗತಿಸಿದರು. ಈ ಆರತಕ್ಷತೆ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Read More

ಜಾರ್ಖಂಡ್: ಪೋಷಕರೇ ಹೆತ್ತ ಮಗಳನ್ನೇ ಹತ್ಯೆ ಮಾಡಿದ್ದಾರೆ. ರಾಮಗಢ ಜಿಲ್ಲೆಯಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ ನಿಶ್ಚಿತ ಠೇವಣಿ ಹಣ ನೀಡಲು ನಿರಾಕರಿಸಿದ ತಮ್ಮ ಹದಿಹರೆಯದ ಮಗಳನ್ನು ಹತ್ಯೆ ಮಾಡಿದ ಆರೋಪದ ಮೇಲೆ ದಂಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಲಕಿ ಖುಷಿ ಕುಮಾರಿ(17)ಜನವರಿ 13 ರಂದು ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ನಿಶ್ಚಿತ ಠೇವಣಿ ಹಣ ಕೊಡಲು ನಿರಾಕರಿಸಿದ ಕಾರಣ ತಂದೆ ಮತ್ತು ಮಲತಾಯಿ ತನ್ನ ಸಹೋದರಿಯನ್ನು ಕೊಂದು ಮೃತದೇಹ ನೇಣು ಹಾಕಿದ್ದಾರೆ ಎಂದು ಆರೋಪಿಸಿ ಖುಷಿ ಕುಮಾರಿಯ ಸಹೋದರ, ಭದಾನಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೆಚ್ಯೂರ್ ಆಗಲಿದ್ದ 6 ಲಕ್ಷ ರೂಪಾಯಿ ನಿಶ್ಚಿತ ಠೇವಣಿ ಹಣವನ್ನು ಪೋಷಕರಿಗೆ ನೀಡಲು ಖುಷಿ ನಿರಾಕರಿಸಿದ್ದರು ಎಂದು ಆಕೆಯ ಸಹೋದರ ಹೇಳಿದ್ದಾರೆ. ಸಂತ್ರಸ್ತೆಯ ಸಹೋದರ ಸೋಮವಾರ ದೂರು ನೀಡಿದ ನಂತರ, ಸುನೀಲ್ ಮಹತೋ ಮತ್ತು…

Read More

ಜನವರಿ 22 ರಂದು ನಡೆಯಲಿರುವ  ಅಯೋಧ್ಯೆ ಶ್ರೀರಾಮ ಮಂದಿರ ಪ್ರಾಣ-ಪ್ರತಿಷ್ಠಾ ಸಮಾರಂಭಕ್ಕೆ,  ತಮಿಳುನಾಡಿನಿಂದ  ಪಟಾಕಿಗಳನ್ನು ಸಾಗಿಸುತ್ತಿದ್ದ ಟ್ರಕ್ ಗೆ  ಬೆಂಕಿ ಹೊತ್ತಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಮಂಗಳವಾರ ರಾತ್ರಿ  ಸಂಭವಿಸಿದೆ. ಈ ದುರ್ಘಟನೆಯು ಉನ್ನಾವೋ ಜಿಲ್ಲೆಯ ಪೂರ್ವಾ ಖಾರ್ಗಿ ಖೇಡಾ ಗ್ರಾಮದ ಬಳಿ ನಡೆದಿದೆ. ಈ ಘಟನೆಯ ವಿಡಿಯೋವನ್ನು ಸ್ಥಳೀಯರು ರೆಕಾರ್ಡ್ ಮಾಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Read More

ನವದೆಹಲಿ: ದೆಹಲಿಯ ಏರೋಸಿಟಿಯಲ್ಲಿರುವ ಪಂಚತಾರಾ ಹೋಟೆಲ್ ಗೆ ನಕಲಿ ಯುಪಿಐ ಪಾವತಿ ಮಾಡುವ ಮೂಲಕ, 5 ಲಕ್ಷಕ್ಕೂ ಹೆಚ್ಚು ಹಣವನ್ನು ವಂಚಿಸಲು ಯತ್ನಿಸಿದ  ಆರೋಪಿ ಮಹಿಳೆಯನ್ನು ದೆಹಲಿ ಪೋಲಿಸರು ಬಂಧಿಸಿದ್ದಾರೆ. ಮಹಿಳೆಯು ಡಿಸೆಂಬರ್ 30 ರಂದು ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದ ಬಳಿಇರುವ  ಹೋಟೆಲ್ ಗೆ ಭೇಟಿ ನೀಡಿ 15 ದಿನಗಳ ಕಾಲ ಅಲ್ಲಿಯೇ ತಂಗಿ ಹೋಟೆಲ್ ಗೆ ನಕಲಿ ಪಾವತಿ ಮಾಡಿದ್ದರು. ಇದರಿಂದ ಸಂಶಯಗೊಂಡ ಹೋಟೆಲ್  ಸಿಬ್ಬಂದಿಯು ಮಹಿಳೆಯನ್ನು ನಕಲಿ ಪಾವತಿ ಬಗ್ಗೆ ವಿಚಾರಿಸಿದಾಗ ಆಕೆ ಗಲಾಟೆ ಮಾಡಿದ್ದಾಳೆ ಎನ್ನಲಾಗಿದೆ. ಪಂಚತಾರಾ ಹೋಟೆಲ್ ನಲ್ಲಿ 15 ದಿನಗಳ ವಾಸ್ತವ್ಯದ ವೇಳೆ ಮಹಿಳೆ 2.11 ಲಕ್ಷ ರೂ. ಸ್ಪಾ ಬಿಲ್ ಮತ್ತು ರೂ. 5.80 ಲಕ್ಷ ಹೋಟೆಲ್ ಬಿಲ್ ಸೇರಿದಂತೆ 7 ಲಕ್ಷಕ್ಕೂ ಹೆಚ್ಚು ಖರ್ಚು ಮಾಡಿದ್ದಾರೆ. ಮಹಿಳೆ ಯುಪಿಐ ಬಳಸಿ ಬಿಲ್ ಪಾವತಿಸಿದ್ದಾಳೆ ಆದರೆ ಹೋಟೆಲ್ ನ ಖಾತೆಯು ಹಣವನ್ನು   ಸ್ವೀಕರಿಸಿರುವುದಿಲ್ಲ. ಇದರಿಂದಾಗಿ  ಅನುಮಾನಗೊಂಡ ಹೋಟೆಲ್ ಮಾಲಿಕ ಮಹಿಳೆ…

Read More

ಪಾವಗಡ: ಕರ್ನಾಟಕ ರಾಜ್ಯದ ಸುಪ್ರಸಿದ್ಧ ಅಂತ್ಯ ಸುಬ್ರಮಣ್ಯೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಮಂಗಳವಾರ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗಿದೆ, ಪಾವಗಡ ತಾಲೂಕಿನ ನಾಗಲಮಡಿಕೆ ಗ್ರಾಮದಲ್ಲಿ ನಡೆಯುವ ಈ ಜಾತ್ರೆಗೆ ಆಂಧ್ರ ಕರ್ನಾಟಕ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಸ್ವಾಮಿಗೆ ನಮಿಸುತ್ತಾರೆ. ಬೆಳಗಿನ ಜಾವದಿಂದಲೇ ಸುಬ್ರಮಣ್ಯೇಶ್ವರ ಸ್ವಾಮಿಗೆ ಶಾಸ್ತ್ರೋಕ್ತವಾಗಿ ವಿವಿಧ ಪೂಜಾ ಕೈಂಕರಿಗಳನ್ನು ನೆರವೇರಿಸಿದ್ದು, ಸ್ವಾಮಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿತ್ತು. ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ದೇವಸ್ಥಾನದ ಬ್ರಹ್ಮ ರಥೋತ್ಸವಕ್ಕೆ ವಿಶೇಷ ಹೋಮ ಹವನಗಳನ್ನು ನಡೆಸಿ ಶಾಸಕರಾದ ಎಚ್ ವಿ ವೆಂಕಟೇಶ್ ಹಾಗೂ ಪಾವಗಡ ತಹಸಿಲ್ದಾರ್ ಡಿಎನ್ ವರದರಾಜ ಅವರು ರಥ ಎಳೆಯುವ ಮೂಲಕ ಚಾಲನೆ ನೀಡಿದ್ದರು. ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಎಚ್ ವಿ ವೆಂಕಟೇಶ್, ಕೆಲ ಕಾರಣಾಂತರಗಳಿಂದಾಗಿ ಅಂತ್ಯ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದ ಅಭಿವೃದ್ಧಿ ಕುಂಠಿತವಾಗಿದೆ, ದೇವಸ್ಥಾನದಲ್ಲಿ ಪಾರುಪತ್ತೆ ನಡೆಸುವವರ ಮತ್ತು ಪ್ರಧಾನ ಅರ್ಚಕರ ನಡುವಿನ ಗುದ್ದಾಟ ಒಂದು ಕಾರಣವಾಗಿದೆ,…

Read More

ಬೀದರ್: ಜಿಲ್ಲೆಯ ನೂತನ ನಗರ ಪೊಲೀಸರು ಒಂದು ಕೋಟಿಗೂ ಅಧಿಕ ಮೌಲ್ಯದ ವಿವಿಧ ನಮೂನೆಯ ಅಕ್ರಮ ಪಾನ್ ಮಸಾಲ ಇತರೆ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ. ಮೇಲಾಧಿಕಾರಿಗಳ ಮಾರ್ಗದರ್ಶನದಂತೆ ನೂತನ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕೊಳ್ಳಾರ-ಕೆ ಕೈಗಾರಿಕಾ ಪ್ರದೇಶದ ಗೋದಾಮಿನಲ್ಲಿ, ಸರ್ಕಾರದ ಅಥವಾ ಸಂಬಂಧಿಸಿದ ಕಂಪೆನಿಯವರ ಪರವಾನಿಗೆ ಇಲ್ಲದೇ, ಮೂಲ ಕಂಪನಿಯವರ ಹೆಸರನ್ನು ಬಳಸಿಕೊಂಡು ಅಕ್ರಮವಾಗಿ ಪಾನ್ ಮಸಾಲಾ, ಜರ್ದಾಗಳಲ್ಲಿ (ಗುಟಕಾ) ವಿಷಪೂರಿತ ಪದಾರ್ಥಗಳಿಂದ ಕಲಬೆರಕೆ ಮಾಡಿ ತಯಾರಿಸಿ, ಪ್ಯಾಕ್ ಮಾಡಿ ಸಂಗ್ರಹಿಸಿಟ್ಟಿರುವ ಬಗ್ಗೆ ನಿಖರ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರ ತಂಡ, ಪಾನ್ ಮಸಾಲಾ ಇತರೆ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ. ಬೀದರ ಉಪ-ವಿಭಾಗ ಡಿ.ಎಸ್ಪಿ ಶಿವನಗೌಡ ಪಾಟೀಲ್ ರವರ ಮಾರ್ಗದರ್ಶದಲ್ಲಿ ನೂತನ ನಗರ ಪೊಲೀಸ್ ಠಾಣೆಯ ಪ್ರಭಾರಿ ಪಿ.ಐ. ವಿಜಯಕುಮಾರ, ತಸ್ಮೀಮ್ ಸುಲ್ತಾನಾ, ಪಿ.ಎಸ್.ಐ. ಬಸವರಾಜ, ಎ.ಎಸ್.ಐ. ವಿಜಯಕುಮಾರ, ಧನರಾಜ, ರಾಮಣ್ಣಾ, ಪ್ರವೀಣಕುಮಾರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ದಾಳಿ ವೇಳೆ ಪಾನ್ ಮಸಾಲಾ ಪ್ಯಾಕಿಂಗ್ ಮಾಡುವ ಯಂತ್ರಗಳು, ವಿವಿಧ…

Read More

ತಿಪಟೂರು: ಸಾಮಾಜಿಕ ಕೆಳಸ್ತರದ ವರ್ಗದಿಂದ ಉನ್ನತ ವರ್ಗದವರಿಗೂ ಸರ್ವ ರೀತಿಯ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಿಕೊಟ್ಟು, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿಯೂ ತನ್ನದೇ ಆದ ವಿಶಿಷ್ಟ ಸೇವೆಗಳ ಮೂಲಕ ಸಾಮರಸ್ಯವನ್ನು ಮೂಡಿಸಿದ ಬಾಲಗಂಗಾಧರನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕಿದೆ ಎಂದು ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಚೌಡೇಶ್ವರಿ ದೇವಿಯ ದೇವಾಲಯದಲ್ಲಿ, ಆದಿಚುಂಚನಗಿರಿಯ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ 11ನೇ ಪುಣ್ಯಾರಾಧನಾ ಸಮಾರಂಭ ಹಾಗೂ 50ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ಬಾಲಗಂಗಾಧರನಾಥ ಸ್ವಾಮೀಜಿಯವರ ಸಾಮಾಜಿಕ ಕಾಳಕಳಿ ಕಾರಣದಿಂದಲೇ, ಜಗತ್ತಿನಾದ್ಯಂತ ಚಿರಸ್ಮರಣಿಯಾಗಿದ್ದು, ಸಮಾಜಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಶೈಕ್ಷಣಿಕ, ಸಾಮಾಜಿಕ, ಸಾಂಸ್ಕøತಿಕ ಪ್ರಗತಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ ಎಲ್ಲಾ ವರ್ಗದ ಜನಸಾಮಾನ್ಯರಿಗೆ ದಾರಿ ದೀಪವಾಗಿ ಪ್ರಜ್ವಲಿಸುತ್ತಿದ್ದಾರೆ. ಸ್ವಾಮೀಜಿಯವರು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಿದ್ದಕ್ಕೆ ಸಾಕ್ಷಿಯಾಗಿ “ಕರ್ನಾಟಕ ವನಸಂವರ್ಧನ ಟ್ರಸ್ಟ್” ಪ್ರಾರಂಭಿಸಿ ರಾಜ್ಯದಾದ್ಯಂತ ಕೋಟ್ಯಾಂತರ ಸಸಿ ನಡೆಸುವ ಕಾರ್ಯಕ್ರಮವನ್ನು…

Read More

ತಿಪಟೂರು: ಮನುಷ್ಯನು ರಾಗ, ದ್ವೇಷಗಳನ್ನು ಮರೆತು ಪರಸ್ಪರರ ಜೊತೆ ಪ್ರೀತಿ, ವಿಶ್ವಾಸದಿಂದ ಬೆರೆಯುತ್ತಾ ಜೀವನ ನಡೆಸಿದಾಗ ಮಾತ್ರ ಮಾನಸಿಕ ಹಾಗೂ ಆತ್ಮತೃಪ್ತಿಯು ದೊರಕುತ್ತದೆ ಎಂದು ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯ ಆವರಣದಲ್ಲಿ ಮಕರಸಂಕ್ರಾಂತಿಯ ಅಂಗವಾಗಿ ಶ್ರೀಮಠ ಮತ್ತು ದಸರೀಘಟ್ಟ ಗ್ರಾಮಸ್ಥರು ಸಹಯೋಗದಲ್ಲಿ ರಾಶಿಪೂಜೆ ಹಾಗೂ ಗೋವುಗಳಿಗೆ ಕಿಚ್ಚು ಹಾಯಿಸುವ ಕಾರ್ಯಕ್ರಮಕ್ಕೆ ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಆಶೀರ್ವಚನ ನೀಡಿದರು. ಮಾನವ ತನ್ನ ಜೀವನದಲ್ಲಿ ಹಣ, ಐಶ್ವರ್ಯದ ಸಂಪಾದನೆಗಾಗಿ ಹೆಚ್ಚು ಶ್ರಮಿಸುತ್ತಾನೆ. ಮಾನವೀಯ ಮೌಲ್ಯಗಳನ್ನು ಮರೆತು ತನ್ನ ಸುಖವೇ ಪರಮಸುಖವೆಂದು ಭಾವಿಸುತ್ತಾ ಪರಮಾತ್ಮನನ್ನು ಕಾಣುವ ಗೋಜಿಗೆ ಹೋಗದೇ ಸ್ವಾರ್ಥದಿಂದ ತನ್ನಪಾಡಿಗೆ ತಾನಿರುತ್ತಾನೆ. ಜೀವನದಲ್ಲಿ ಅಂತರಂಗದಲ್ಲಿರುವ ಪರಮಾತ್ಮನನ್ನು ಹುಡುಕದೇ ಎಲ್ಲೆಲ್ಲಿಗೋ ಹೋಗುತ್ತೇವೆ. ಆದರೆ ಪರಮಾತ್ಮ ನಮ್ಮಲ್ಲಿಯೇ ನೆಲೆಸಿರುತ್ತಾನೆ ಎಂಬುದು ತಿಳಿದೇ ಇರುವುದಿಲ್ಲ. ಮಾನವನ ಮನಸ್ಸಿನಲ್ಲಿ ಎಲ್ಲಾರೀತಿಯ ವಿಚಾರಗಳು ನೆಲೆಸಿದ್ದು ಉತ್ತಮ ವಿಚಾರಗಳನ್ನು…

Read More