Subscribe to Updates
Get the latest creative news from FooBar about art, design and business.
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
- ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
- ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
- ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
- ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
- ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
- ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
- ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
Author: admin
ತಿಪಟೂರು: ತಾಲೂಕಿನ ಹಾಲ್ಕುರಿಕೆ ರಸ್ತೆಯ ಹರಿಸಮುದ್ರ ಗೇಟ್ ಬಳಿ ಡೀಸೆಲ್ ಒತ್ತೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿದ್ದು, ಇದೇ ವೇಳೆ ಡೀಸೆಲ್ ತುಂಬಿಕೊಳ್ಳಲು ಅಕ್ಕ ಪಕ್ಕದ ಗ್ರಾಮಸ್ಥರು ಮುಂದಾದ ಘಟನೆ ನಡೆದಿದೆ. ಹಾಸನದಿಂದ ಚಿತ್ರದುರ್ಗಕ್ಕೆ ಅತಿ ವೇಗದಲ್ಲಿ ಚಲಿಸುತ್ತಿದ್ದ ಡೀಸೆಲ್ ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬಳಿಕ ಟ್ರಾನ್ಸ್ ಫಾರ್ಮ್ ಕಂಬಕ್ಕೆ ಹೊಡೆದು ಮಗುಚಿ ಬಿದ್ದಿದೆ. ಬೈಕ್ ನಲ್ಲಿದ್ದ ಕುಳಿತಿದ್ದ ಭೈರನಾಯಕನಹಳ್ಳಿ ಮೂಲದ ಗೃಹಿಣಿ ಸರ್ವಮಂಗಳ(47) ಎಂಬವರಿಗೆ ಅಪಘಾತದಲ್ಲಿ ಗಂಭೀರವಾಗಿ ಗಾಯವಾಗಿದ್ದು, ಅವರು ಚಿಕತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸರ್ವಮಂಗಳ ಅವರು, ಗೃಹಲಕ್ಷ್ಮಿ ಯೋಜನೆಯ ಹಣ ಸಿಗದ ಕಾರಣ ಹೊನ್ನವಳ್ಳಿಯ ನಾಡಕಚೇರಿಯಲ್ಲಿ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿ ಹಿಂದಿರುಗುತ್ತಿದ್ದರು ಈ ವೇಳೆ ಹರಿಸಮುದ್ರ ಗೇಟ್ ನ ಬಳಿ ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಟ್ಯಾಂಕರ್ ಪಲ್ಟಿಯಾದ ಪರಿಣಾಮ ರಸ್ತೆಯ ತುಂಬೆಲ್ಲ ನೀರಿನಂತೆ ಇಂಧನ ಡೀಸೆಲ್ ಹರಿದಿದ್ದು, ಈ ವೇಳೆ ಸುತ್ತಮುತ್ತಲಿನ ಗ್ರಾಮಸ್ಥರು ಬಿಂದಿಗೆ, ಬಕೇಟು, ಡೀಸೆಲ್ ಕ್ಯಾನ್ ಗಳನ್ನು ಗಳನ್ನು ಹಿಡಿದು ಮನಸೋ…
ನೆಲಮಂಗಲ: ಕರ್ನಾಟಕ ರಣಧೀರರ ವೇದಿಕೆಯ ಕೇಂದ್ರ ಕಚೇರಿ ಆವರಣದಲ್ಲಿ ಇಂದು ನೂತನ ಪದಾಧಿಕಾರಿಗಳ ಸೇರ್ಪಡೆ ಕಾರ್ಯಕ್ರಮ ಹಾಗೂ 2024 ರ ಸಂಘಟನೆಯ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಿಂದ ನೆರವೇರಿಸಲಾಯಿತು. ಪದಾಧಿಕಾರಿಗಳ ಸೇರ್ಪಡೆ ಹಾಗೂ 2024 ರ ಸಂಘಟನೆಯ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಾಡು-ನುಡಿ, ನೆಲ-ಜಲ,ಗಡಿ-ಭಾಷೆಯ ವಿಚಾರದಲ್ಲಿ ನಮ್ಮ ಸಂಘಟನೆಯ ಸಕ್ರಿಯವಾಗಿ ಹೋರಾಟಗಳನ್ನು ಮಾಡುತ್ತಿದ್ದು ಸಂತೋಷಕರವಾದ ವಿಚಾರವಾಗಿರುತ್ತದೆ, ಆದರೆ ಇತ್ತೀಚಿನ ದಿನಗಳಲ್ಲಿ ಈ ಮಂಡು ಸರ್ಕಾರಗಳು ಇಲ್ಲಸಲ್ಲದ ಕೇಸುಗಳನ್ನಾಗಿ ಕನ್ನಡಪರ ಹೋರಾಟಗಾರರನ್ನ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಈ ಕೂಡಲೇ ಇಂತಹ ನೀಚ ಕೃತ್ಯಗಳನ್ನು ಕೈ ಬಿಡದಂತೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡುತ್ತಿದ್ದೇವೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದ್ಯಂತ ಬೃಹತ್ ಮಟ್ಟದ ಹೋರಾಟವನ್ನು ಮಾಡಬೇಕಾಗುತ್ತದೆ, ಏನು ಈಗ ನೂತನವಾಗಿ ಸೇರ್ಪಡೆಗೊಂಡಿರುವಂತಹ ಎಲ್ಲಾ ಕಾರ್ಯಕರ್ತರು ನಾಡು ನುಡಿ ವಿಚಾರಕ್ಕೆ ಕಾನೂನು ಬದ್ಧವಾಗಿ ಹೋರಾಟ ಮಾಡುವಲ್ಲಿ ಸೈನಿಕರಂತೆ ಸಿದ್ಧವಾಗಬೇಕು. ಅಂಬೇಡ್ಕರ್ ರವರು ನೀಡಿದಂತಹ ಸಂವಿಧಾನವನ್ನು ಅರ್ಥಗರ್ಭಿತವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ, ಸ್ವತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಕನ್ನಡದ ಕಲೆ…
ಅಯೋಧ್ಯೆಯನ್ನು ಮಾದರಿ ಸೌರ ನಗರವನ್ನಾಗಿ ಪರಿವರ್ತಿಸಲು ಯೋಗಿ ಆದಿತ್ಯನಾಥ್ ಸರ್ಕಾರ ಪ್ರಯತ್ನಿಸುತ್ತಿದೆ. ಭಾರತದಲ್ಲಿ ಪ್ರಥಮ ಬಾರಿಗೆ ಸೋಲಾರ್ ಬೋಟ್ ಮೂಲಕ ಸರಯು ಯಾತ್ರೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಸರಯೂ ನದಿಯಲ್ಲಿ ಸೌರ ಶಕ್ತಿಯ ಇ-ಬೋಟ್ ಅನ್ನು ಪ್ರಾರಂಭಿಸಲಾಗಿದೆ. ಉತ್ತರ ಪ್ರದೇಶ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಂಸ್ಥೆ ಅಯೋಧ್ಯೆಯ ಸರಯೂ ನದಿಯಲ್ಲಿ ಬೋಟ್ ಸೇವೆಯ ನಿಯಮಿತ ಕಾರ್ಯಾಚರಣೆಗೆ ರೂಪುರೇಷೆ ಸಿದ್ಧಪಡಿಸಿದೆ. ಸರಯೂ ಘಾಟ್ ನ ದಡದಲ್ಲಿ ದೋಣಿಯನ್ನು ಜೋಡಿಸಲು, ಪ್ರತಿ ಮೂಲೆಯಿಂದ ಬಿಡಿ ಭಾಗಗಳು ಮತ್ತು ಇತರ ಉಪಕರಣಗಳನ್ನು ತರಲಾಗಿದೆ. ಪ್ರಸ್ತುತ, ಒಂದು ಬೋಟ್ ಮುಗಿದ ನಂತರ, ಪರೀಕ್ಷಾ ಹಂತದ ಪ್ರಕ್ರಿಯೆ ನಡೆಯುತ್ತಿದೆ. ಜನವರಿ 22 ರಂದು ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಲಾರ್ ಬೋಟ್ ಉದ್ಘಾಟಿಸಬಹುದು ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಿಯಮಿತವಾಗಿ ಬೋಟ್ ಕಾರ್ಯಾಚರಣೆ ನಡೆಸಲಾಗುತ್ತದೆ. ಡ್ಯುಯಲ್ ಮೋಡ್ ಆಪರೇಟಿಂಗ್ ಬೋಟ್ ಆಗಿದ್ದು 100 ಪ್ರತಿಶತ ಸೌರ ವಿದ್ಯುತ್…
ಕೇರಳ: ಕೇರಳದ ಗುರುವಾಯೂರಿನಲ್ಲಿರುವ ಪ್ರಸಿದ್ಧ ಶ್ರೀಕೃಷ್ಣ ದೇಗುಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಬೆಳಗ್ಗೆ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಮೋದಿ ಸಾಂಪ್ರದಾಯಿಕ ಮಲಯಾಳಿ ಶೈಲಿಯಲ್ಲಿ ಬಿಳಿ ಮುಂಡು, ಶರ್ಟ್ ಮತ್ತು ಶಾಲು ಧರಿಸಿದ್ದರು. ಗುರುವಾಯೂರು ದೇವಾಲಯದಲ್ಲಿ ನಡೆದ ಬಿಜೆಪಿ ನಾಯಕ , ನಟ ಸುರೇಶ್ ಗೋಪಿ ಅವರ ಮಗಳು ಭಾಗ್ಯಾ ಸುರೇಶ್ ಅವರ ಮದುವೆಯಲ್ಲಿ ಮೋದಿ ಭಾಗಿಯಾಗಿದ್ದಾರೆ. ಮದುವೆಯಲ್ಲಿ ತಾಳಿ ಕಟ್ಟಿದ ನಂತರ ನವ ದಂಪತಿಗಳು ಪರಸ್ಪರ ಹಾರ ಬದಲಾಯಿಸುವಾಗ ಮೋದಿಯವರೇ ದಂಪತಿ ಕೈಗೆ ಹಾರ ಕೊಟ್ಟಿದ್ದಾರೆ. ಸುರೇಶ್ ಗೋಪಿ ಅವರ ಮಗಳ ಮದುವೆಗೂ ಮುನ್ನ ಬೆಳಗ್ಗೆ ದೇವಸ್ಥಾನದಲ್ಲಿ, ವಿವಾಹವಾದ ದಂಪತಿಗಳಿಗೆ ಪ್ರಧಾನಿ ಆಶೀರ್ವದಿಸಿ ಸಿಹಿತಿಂಡಿಗಳನ್ನು ನೀಡಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ದೇವಾಲಯಕ್ಕೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಬೆಳಗ್ಗೆ 7.35ರ ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಗುರುವಾಯೂರಿಗೆ ಆಗಮಿಸಿದ ಪ್ರಧಾನಿ ಮೋದಿ ಶ್ರೀಕೃಷ್ಣ ಕಾಲೇಜು ಮೈದಾನದಲ್ಲಿ ಬಂದಿಳಿದಿದ್ದು, ನೂರಾರು ಬಿಜೆಪಿ ಬೆಂಬಲಿಗರು ಮತ್ತು ಕಾರ್ಯಕರ್ತರು ಅವರನ್ನು ಸ್ವಾಗತಿಸಲು…
ಹೈದರಾಬಾದ್: ಆಟೋ ಚಾಲಕನೊಬ್ಬ ಪತ್ನಿಯ ತಲೆಯನ್ನು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 41 ವರ್ಷದ ಪತ್ನಿ ಪುಷ್ಪಲತಾ ಮೃತ ದುರ್ದೈವಿ. ಪತಿ ಪತ್ನಿಯನ್ನು ಹತ್ಯೆ ಮಾಡಿ ಹರಿತವಾದ ಚಾಕುವಿನಿಂದ ತಲೆಯನ್ನು ಕತ್ತರಿಸಿರುವ ಭಯಾನಕ ಘಟನೆ ವರದಿಯಾಗಿದೆ. ಸರ್ಕಾರಿ ವಸತಿ ಗೃಹದಲ್ಲಿ ವಾಸವಿದ್ದ ಹಂತಕ, ಪತ್ನಿ ಬೇರೊಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬುದನ್ನು ತಿಳಿದು, ಹೆಂಡತಿ ತಲೆಯನ್ನು ಕತ್ತರಿಸಿ ಮನೆಯಲ್ಲಿಯೇ ಇಟ್ಟುಕೊಂಡಿದ್ದ. 41 ವರ್ಷದ ಪತ್ನಿ ಪುಷ್ಪಲತಾಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ವಿಜಯ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆತ ಕೊಲೆಗೆ ಬಳಸಿದ್ದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಪತ್ನಿಗೆ ಬೇರೊಬ್ಬರ ಜತೆ ಸಂಬಂಧವಿದೆ ಎಂದು ಶಂಕಿಸಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ ವಿಜಯ್ ಹಾಗೂ ಪುಷ್ಪಲತಾ ತನ್ನ ಸಹೋದರಿಯ ಹೊಸ ಮನೆಗೆ ಹೋಗಿದ್ದರು. ಅಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ.
ಪಾವಗಡ ಶಾಸಕರಾದ ಹೆಚ್.ವಿ. ವೆಂಕಟೇಶ್ ರವರು ನಾಗಲಮಡಿಕೆ ಅಂತ್ಯ ಸುಬ್ರಮಣ್ಯ ದೇಗುಲಕ್ಕೆ ಭೇಟಿ ನೀಡಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ತಾಲ್ಲೂಕಿನ ಜನತೆಗೆ ಒಳಿತಾಗಲೆಂದು ದೇವರಲ್ಲಿ ಪ್ರಾರ್ಥಿಸಿದರು. ತದನಂತರ ತೇರು ಎಳೆಯುವ ಮೂಲಕ ಶ್ರೀ ಕ್ಷೇತ್ರ ನಾಗಲಮಡಿಕೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ನನ್ನ ಅವಧಿಯಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಲಾಗುವುದೆಂದು ಇದೇ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಈ ಭಾಗದ ಹಲವು ಪ್ರಮುಖ ಮುಖಂಡರು ಮತ್ತು ಗ್ರಾಮಸ್ಥರು ಶಾಸಕರ ಜೊತೆಯಲ್ಲಿದ್ದರು. ವರದಿ: ರಾಮಪ್ಪ ಸಿ.ಕೆ. ಪುರ, ಪಾವಗಡ
ಭೋಪಾಲ್: ಬೀದಿ ನಾಯಿಗಳ ಕಾಟ ಹೆಚ್ಚಾಗಿದೆ. ನಗರದಲ್ಲಿ ಸುಮಾರು 40 ಮಂದಿಗೆ ಬೀದಿ ನಾಯಿಗಳು ಕಚ್ಚಿವೆ. ಮಂಗಳವಾರ ಸಂಜೆ ವೇಳೆಗೆ ಬೀದಿನಾಯಿಗಳಿಂದ ಕಚ್ಚಿಸಿಕೊಂಡ 40ಕ್ಕೂ ಹೆಚ್ಚು ವ್ಯಕ್ತಿಗಳು ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಆಸ್ಪತ್ರೆಗೆ ಬಂದಿದ್ದರು. ಜನವರಿ 10 ರಂದು ಭೋಪಾಲ್ನಲ್ಲಿ ಏಳು ತಿಂಗಳ ಮಗುವನ್ನು ಬೀದಿ ನಾಯಿಗಳು ಕೊಂದು ಹಾಕಿದ್ದವು. ಅಂದಿನಿಂದ ಮುನ್ಸಿಪಲ್ ಕಾರ್ಪೊರೇಷನ್ ಬೀದಿ ನಾಯಿಗಳನ್ನು ಹಿಡಿಯುವ ಅಭಿಯಾನವನ್ನು ಪ್ರಾರಂಭಿಸಿದೆ. ಮೇಯರ್ ಮಾಲ್ತಿ ರೈ ಅವರು ಪಾಲಿಕೆ ಅಧಿಕಾರಿಗಳ ಸಭೆಯನ್ನು ಕರೆದರು. ಪಾಲಿಕೆ ಆಯುಕ್ತ ನೋಬಲ್ ಫ್ರಾಂಕ್ ಸಹ ಹಾಜರಿದ್ದರು. ಆದಷ್ಟು ಬೇಗ ಬೀದಿ ನಾಯಿಗಳನ್ನು ಹಿಡಿಯುವಂತೆ ಅಧಿಕಾರಿಗಳಿಗೆ ಮೇಯರ್ ಸೂಚಿಸಿದರು. ಸಾಕುಪ್ರಾಣಿಗಳ ಮಾಲೀಕರು ತಮ್ಮ ಸಾಕುಪ್ರಾಣಿಗಳನ್ನು ಮನೆಯಲ್ಲಿ ಅಥವಾ ಗೂಡಿನಲ್ಲಿ ಬಂಧಿಸುವಂತೆ ಅವರು ಒತ್ತಾಯಿಸಿದ್ದಾರೆ. ಮಹಾನಗರ ಪಾಲಿಕೆಯ ಕಾಮಗಾರಿಗೆ ಅಡ್ಡಿಪಡಿಸಿದರೆ ಅವರ ವಿರುದ್ಧ ಎಫ್ ಐಆರ್ ದಾಖಲಿಸಲಾಗುವುದು ಎಂದಿದ್ದಾರೆ.
ದಿನಾಲೂ ಪಪ್ಪಾಯಿ ಜ್ಯೂಸ್ ಕುಡಿದರೆ ಈ ಎಲ್ಲಾ ಸಮಸ್ಯೆಗಳು ದೂರವಾಗುತ್ತೆ..! ಪ್ರತಿದಿನ 30 ರಿಂದ 50 ಮಿಲಿಯಷ್ಟು ಈ ಪಪ್ಪಾಯಿ ರಸವನ್ನು ಸೇವಿಸಿದರೆ ಒಂದಿಷ್ಟು ಲಾಭಗಳಿರುತ್ತವೆ ಎನ್ನುತ್ತಾರೆ ತಜ್ಞರು. ಪಪ್ಪಾಯಿ ಹಣ್ಣಿನಲ್ಲಿ ನಾರಿನಂಶ ಅಧಿಕವಾಗಿದೆ. ಇದನ್ನು ಸೇವಿಸುವುದರಿಂದ ಹಸಿವನ್ನು ನಿಯಂತ್ರಿಸುತ್ತದೆ. ಇದರಿಂದ ತೂಕ ಕಡಿಮೆಯಾಗುತ್ತದೆ. ಇದು ಚಯಾಪಚಯವನ್ನು ಸಹ ಸುಧಾರಿಸುತ್ತದೆ. ಇದು ವಿಶೇಷವಾಗಿ ಮಕ್ಕಳಲ್ಲಿ ಹೊಟ್ಟೆಯ ಹುಳುಗಳನ್ನು ಕೊಲ್ಲುತ್ತದೆ. ಪಪ್ಪಾಯಿಯು ಗರ್ಭಾಶಯದಲ್ಲಿರುವ ತ್ಯಾಜ್ಯ ಮತ್ತು ವಿಷವನ್ನು ಹೊರಹಾಕುವ ಶಕ್ತಿ ಹೊಂದಿದೆ. ಇದು ಮುಟ್ಟಿನ ಸಮಯದಲ್ಲಿ ತ್ಯಾಜ್ಯವನ್ನು ಹೊರಹಾಕುತ್ತದೆ. ಪೋಷಕಾಂಶಗಳ ಆಗರ ಹುರಿದ ಕಡಲೆಯನ್ನು ತಿಂದರೆ ಇಷ್ಟೆಲ್ಲಾ ಉಪಯೋಗ..! ಹುರಿದ ಕಡಲೆ ಪೋಷಕಾಂಶಗಳ ಆಗರವೂ ಹೌದು. ಇದರಲ್ಲಿ ವಿಟಮಿನ್ ಎ, ಸಿ, ಬಿ6, ಫೋಲೇಟ್, ನಿಯಾಸಿನ್, ಥಯಾಮಿನ್, ರೈಬೋಫ್ಲಾವಿನ್, ಮ್ಯಾಂಗನೀಸ್, ಫಾಸ್ಪರಸ್, ಕಬ್ಬಿಣ, ತಾಮ್ರದಂತಹ ಖನಿಜಗಳಿವೆ. ಹುರಿದ ಕಡಲೆಯು ಫೈಬರ್ ಮತ್ತು ಪ್ರೋಟೀನ್ ನಲ್ಲಿ ಸಮೃದ್ಧವಾಗಿದೆ. ಈ ಕುರುಕಲು ಕಡಲೆಗಳಲ್ಲಿ, 100 ಗ್ರಾಂನಲ್ಲಿ ಸುಮಾರು 18 ಗ್ರಾಂ ಫೈಬರ್ ಮತ್ತು 20 ಗ್ರಾಂ…
ನಕಲಿ ಕೊರಿಯರ್ ಹಗರಣದಲ್ಲಿ ಹಿರಿಯ ಪತ್ರಕರ್ತ 1.2 ಕೋಟಿ ರೂ. ಹಣ ಕಳೆದುಕೊಂಡಿದ್ದಾರೆ. ಪೊಲೀಸರ ಪ್ರಕಾರ, ವಂಚಕರು ಕದ್ದ ಹಣವನ್ನು ಕೇರಳ ಸೇರಿದಂತೆ ವಿವಿಧ ರಾಜ್ಯಗಳ ಅನೇಕ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಕದ್ದ ಹಣದಿಂದ 37 ಲಕ್ಷ ರೂ.ಗಳನ್ನು ವಸೂಲಿ ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ. ನಿಷೇಧಿತ ಉತ್ಪನ್ನಗಳನ್ನು ಕಳ್ಳಸಾಗಣೆ ಮಾಡಲು ಫೆಡೆಕ್ಸ್ ಮೂಲಕ ಈ ಹಗರಣವನ್ನು ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಕೊರಿಯರ್ ಉದ್ಯೋಗಿ ಮತ್ತು ತನಿಖಾ ಅಧಿಕಾರಿಯಂತಹ ವಿವಿಧ ಪಾತ್ರಗಳಲ್ಲಿ ಈ ಹಗರಣವು ಪತ್ರಕರ್ತನಿಗೆ ಬೆದರಿಕೆ ಹಾಕುತ್ತಿತ್ತು. ಪಾರ್ಸೆಲ್ ನಲ್ಲಿ ಎಂಡಿಎಂಎ ಇದ್ದು, ಪ್ರಕರಣದಿಂದ ಪಾರಾಗಬೇಕಾದರೆ ರಿಸರ್ವ್ ಬ್ಯಾಂಕ್ ನಲ್ಲಿ ಭದ್ರತೆಯಾಗಿ ಹಣ ಪಾವತಿಸಬೇಕು ಎಂದು ಬೆದರಿಕೆ ಹಾಕಲಾಗಿತ್ತು. ಡಿಸೆಂಬರ್ 15 ರಂದು, ಅವರು ತನಿಖಾಧಿಕಾರಿಗಳಂತೆ ನಟಿಸುವ ವಾಟ್ಸಾಪ್ ನಲ್ಲಿ ಕರೆ ಸ್ವೀಕರಿಸಿದರು. ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದೆ. ನಿಮ್ಮ ಹೆಸರಿನಲ್ಲಿ ಬಂದಿದ್ದ ಪಾರ್ಸೆಲ್ ನಲ್ಲಿ 240 ಗ್ರಾಂ ಎಂಡಿಎಂಎ, ಪಾಸ್ ಪೋರ್ಟ್ ಮತ್ತು ಕ್ರೆಡಿಟ್ ಕಾರ್ಡ್ ಪತ್ತೆಯಾಗಿವೆ ಎಂದು…
ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಕರೆತಂದ ಚಿರತೆಗಳ ಪೈಕಿ ಒಂದು ಚಿರತೆ ಸಾವನ್ನಪ್ಪಿದೆ. ಇದರೊಂದಿಗೆ ಸತ್ತ ಚಿರತೆಗಳ ಸಂಖ್ಯೆ ಹತ್ತಕ್ಕೆ ಏರಿಕೆಯಾಗಿದೆ. 2022 ರಲ್ಲಿ, ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ 20 ಚಿರತೆಗಳನ್ನು ತರಲಾಯಿತು. ನಮೀಬಿಯಾದಿಂದ ತರಲಾದ ಶೌರ್ಯ ಎಂಬ ಚಿರತೆ ಇಂದು ಸಾವನ್ನಪ್ಪಿದೆ. ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ಕಾರಣ ತಿಳಿಯಬಹುದು ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಮಧ್ಯಾಹ್ನ 3.17ರ ಸುಮಾರಿಗೆ ಚಿರತೆ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆಯ ಹೆಚ್ಚುವರಿ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ. ಬೆಳಗ್ಗೆ ಚಿರತೆ ಶವವಾಗಿ ಪತ್ತೆಯಾಗಿದೆ. ಸಿಪಿಆರ್ ಗೆ ಪ್ರತಿಕ್ರಿಯಿಸಿಲ್ಲ ಎಂದು ಅವರು ಹೇಳಿದರು.